Subscribe to Updates
Get the latest creative news from FooBar about art, design and business.
- ಕರ್ನಾಟಕ ರಾಜ್ಯ ರೈತ ಸಂಘ: ಕೊರಟಗೆರೆ ನಗರ ನೂತನ ಘಟಕ ಸ್ಥಾಪನೆ
- ಕೋಡಿಗೇನಹಳ್ಳಿ: ಗ್ರಾಮೀಣ ಭಾಗದಲ್ಲೂ ಔಷಧ ಅಂಗಡಿಗಳು ಬಂದ್: ಬೇಡಿಕೆಗಳೇನು?
- ಸರ್ಕಾರಿ ಗೋಮಾಳ ತೆರವಿಗೆ ಗ್ರಾಮಸ್ಥರ ಆಗ್ರಹ: 4.28 ಎಕರೆ ಬದಲು 18.27 ಎಕರೆ ಗೋಮಾಳ ಅಕ್ರಮ ಖಾತೆ ಆರೋಪ
- ಕೊರಟಗೆರೆ: ದ್ವಿಚಕ್ರ ವಾಹನದ ಮೇಲೆ ಬಿದ್ದ ಗೂಡ್ಸ್ ವಾಹನ: ಸವಾರ ಸಾವು
- ತುಮಕೂರು ಜಿಲ್ಲೆಯ ಅಸ್ತಿತ್ವ ಕಳೆಯಬೇಡಿ: ಬೆಂಗಳೂರು ಉತ್ತರ ಜಿಲ್ಲೆ ಪ್ರಸ್ತಾಪಕ್ಕೆ ಬಿಜೆಪಿ ವಿರೋಧ
- ತುಮಕೂರು: ಅಕ್ರಮ ಶೆಡ್ ನಿರ್ಮಿಸಲು ಹೊರಟಿರುವವರನ್ನು ತೆರವುಗೊಳಿಸಲು ಮನವಿ
- ಕುಣಿಗಲ್: ಗ್ರಾಪಂ ಸ್ವತ್ತಿನಲ್ಲಿ ಅಕ್ರಮ ಮಳಿಗೆ: ಒತ್ತುವರಿ ಜಾಗದಲ್ಲಿ ಗ್ರಂಥಾಲಯಕ್ಕೆ ದಲಿತ ಸಂಘಟನೆ ಆಗ್ರಹ
- ತುಮಕೂರು: ಕಂಪ್ಯೂಟರ್ ಡಿಟಿಪಿ ತರಬೇತಿಗೆ ಅರ್ಜಿ ಆಹ್ವಾನ
Author: admin
ಚಲಿಸುತ್ತಿರುವ ದ್ವಿಚಕ್ರ ವಾಹನದ ಮೇಲೆ ಯುವಕ ಮತ್ತು ಯುವತಿ ತಬ್ಬಿಕೊಂಡಿರುವ ವಿಡಿಯೋವೊಂದು ಅಂತರ್ಜಾಲದಲ್ಲಿ ವೈರಲ್ ಆಗಿದೆ. ಈ ವಿಡಿಯೋ ಮುಂಬೈನ ಬಾಂದ್ರಾ ರಿಕ್ಲಮೇಶನ್ ಏರಿಯಾದಲ್ಲಿ ನಡೆದಿದೆ. ಸ್ಕೂಟರ್ ನಲ್ಲಿ ಪ್ರೇಮಿಗಳು ಮುಖಾಮುಖಿ ಕುಳಿತು ಪರಸ್ಪರ ಅಪ್ಪಿಕೊಳ್ಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ವಿಡಿಯೋವನ್ನು ಪ್ರಯಾಣಿಕರೊಬ್ಬರು ಚಿತ್ರೀಕರಿಸಿದ್ದಾರೆ. ವಿಡಿಯೋದಲ್ಲಿ ಯುವತಿ ಮತ್ತು ಯುವಕ ಸ್ಕೂಟರ್ ನಲ್ಲಿ ಮುಖಾಮುಖಿಯಾಗಿ ಕುಳಿತು ಒಬ್ಬರನ್ನೊಬ್ಬರು ಬಿಗಿಯಾಗಿ ಅಪ್ಪಿಕೊಳ್ಳುತ್ತಿದ್ದಾರೆ. ಯುವತಿ ವಿಡಿಯೋಗ್ರಾಫರ್ ನತ್ತ ತಿರುಗಿ ಸ್ಮೈಲ್ ಕೊಡುತ್ತಿರುವುದು ಸಹ ವಿಡಿಯೋದಲ್ಲಿ ಕಾಣಬಹುದು. ಹೆಲ್ಮೆಟ್ ಕೂಡ ಧರಿಸದೇ ಈ ಪ್ರೀತಿಯ ಪ್ರದರ್ಶನ ಮಾಡಲಾಗಿದೆ. ವಿಡಿಯೋ ವೈರಲ್ ಆದ ನಂತರ ವಿಡಿಯೋದಲ್ಲಿದ್ದ ಯುವತಿ ಮತ್ತು ಯುವಕನನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. ಯುವಕ ಹಾಗೂ ಯುವತಿಯ ವರ್ತನೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: 2024ನೇ ಲೋಕಸಭೆ ಚುನಾವಣೆ ನೀತಿ ಸಂಹಿತೆ ಮಾರ್ಚ್ನಿಂದಲೇ ಜಾರಿಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ರಾಜ್ಯ ಬಜೆಟ್ ನ್ನು ಫೆಬ್ರವರಿಯಲ್ಲಿ ಮಂಡಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ರಾಜ್ಯದ ಜನತೆಗೆ ಮಧ್ಯಂತರ ಬರ ಪರಿಹಾರವಾಗಿ ಪ್ರತಿ ಹೆಕ್ಟೇರ್ ಗೆ 2,000 ರೂಪಾಯಿಗಳನ್ನು ರೈತರ ಬ್ಯಾಂಕ್ ಖಾತೆಗಳಿಗೆ ಸರ್ಕಾರ ವರ್ಗಾಯಿಸಲು ಪ್ರಾರಂಭಿಸಿದೆ ಎಂದು ಹೇಳಿದರು. ರಾಜ್ಯವು ಕೇಂದ್ರ ಸರ್ಕಾರದಿಂದ ನೆರವು ಪಡೆದ ನಂತರ, ಎನ್ ಡಿಆರ್ ಎಫ್ ಮಾನದಂಡಗಳ ಪ್ರಕಾರ ಸಂತ್ರಸ್ತ ರೈತರಿಗೆ ಪರಿಹಾರವನ್ನು ನೀಡಲಾಗುವುದು ಎಂದು ಇದೇ ವೇಳೆ ಸಿದ್ದರಾಮಯ್ಯ ತಿಳಿಸಿದರು. ಹಾನಗಲ್ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಆರೋಪಿಗಳನ್ನು ಬಂಧಿಸಲಾಗಿದೆ. ತನಿಖೆ ನಡೆಯುತ್ತಿದೆ. ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ಯಾವುದೇ ಧರ್ಮದವರಾಗಲಿ ಕಾನೂನು ಕೈಗೆತ್ತಿಕೊಳ್ಳಲು ಬಿಡುವುದಿಲ್ಲ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಲಾಗುವುದು ಎಂದರು
ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಮಿಲಿಂದ್ ದಿಯೋರಾ ಕಾಂಗ್ರೆಸ್ ತೊರೆದಿದ್ದಾರೆ. ಮಿಲಿಂದ್ ದಿಯೋರಾ ಅವರು ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆಯನ್ನು ಎಕ್ಸ್ ಮೂಲಕ ಘೋಷಿಸಿದರು. ಈ ಘೋಷಣೆಯು ರಾಜಕೀಯ ಪಯಣದಲ್ಲಿ ಮಹತ್ವದ ಅಧ್ಯಾಯವೊಂದರ ಅಂತ್ಯವನ್ನು ಸೂಚಿಸುತ್ತದೆ ಮತ್ತು 55 ವರ್ಷಗಳ ಕಾಂಗ್ರೆಸ್ ಜೀವನದ ಅಂತ್ಯವನ್ನು ಸೂಚಿಸುತ್ತದೆ. ಮಿಲಿಂದ್ ದಿಯೋರಾ ಶಿವಸೇನೆ ಶಿಂಧೆ ಬಣಕ್ಕೆ ಹೋಗಲಿದ್ದಾರೆ ಎಂಬ ವರದಿಗಳು ಬಂದಿವೆ. ಲೋಕಸಭೆ ಚುನಾವಣೆಗೆ ತಿಂಗಳುಗಳ ಮೊದಲು ದಕ್ಷಿಣ ಮುಂಬೈ ಸ್ಥಾನದ ವಿವಾದದಿಂದಾಗಿ ಪಕ್ಷದ ಮುಂಬೈ ಮಾಜಿ ಅಧ್ಯಕ್ಷರೂ ಆಗಿದ್ದ ಮಿಲಿಂದ್ ದಿಯೋರಾ ಮನಸ್ಸು ಬದಲಾಯಿಸಿದ್ದಾರೆ ಎಂದು ವರದಿಯಾಗಿದೆ. ದಿಯೋರಾ ಶಿವಸೇನೆಯ ಏಕನಾಥ್ ಶಿಂಧೆ ಪಕ್ಷಕ್ಕೆ ಬದಲಾಗುತ್ತಿದ್ದಾರೆ ಎಂದು ವರದಿಯಾಗಿದೆ. 47ರ ಮಿಲಿಂದ್ ದಿಯೋರಾ ಹಲವು ಬಾರಿ ಕೇಂದ್ರ ಸಚಿವರಾಗಿದ್ದ ಮುರಳಿ ದೇವ್ರಾ ಅವರ ಪುತ್ರ. ಭಾರತ ಸಂಗಮ್ ಸೀಟು ಹಂಚಿಕೆ ಮಾತುಕತೆಗೂ ಮುನ್ನ ಈ ಸ್ಥಾನವನ್ನು ಬಿಟ್ಟುಕೊಡುವುದಿಲ್ಲ ಎಂದು ಶಿವಸೇನೆ ಉದ್ಧವ್ ಪಕ್ಷ ಸ್ಪಷ್ಟಪಡಿಸಿತ್ತು. ಇದರ ವಿರುದ್ಧ ಮಿಲಿಂದ್ ದಿಯೋರಾ…
ತುಮಕೂರು: ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾಗಿದ್ದ ಡಾ.ಬಾಲಗಂಗಾಧರನಾಥ ಸ್ವಾಮೀಜಿ, ಸಿದ್ಧಗಂಗಾ ಮಠದ ಡಾ.ಶಿವಕುಮಾರಸ್ವಾಮೀಜಿಗಳು ನಾವು ಕಣ್ಣಾರೆ ಕಂಡ ದೇವರುಗಳು ಎಂದು ಕೆಪಿಸಿಸಿ ವಕ್ತಾರ ಹಾಗೂ ಕೌಶಲ್ಯಾಭಿವೃದ್ದಿ ನಿಗಮದ ಮಾಜಿ ಅಧ್ಯಕ್ಷ ಮುರುಳೀಧರ ಹಾಲಪ್ಪ ಅಭಿಪ್ರಾಯಪಟ್ಟಿದ್ದಾರೆ. ನಗರದ ಡಾ.ಶಿವಕುಮಾರಸ್ವಾಮೀಜಿಗಳ ವೃತ್ತದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರೇಮಠದ ಡಾ.ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಅವರು ಡಾ.ಬಾಲಗಂಗಾಧರ ಸ್ವಾಮೀಜಿಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿ ಮಾತನಾಡಿದ್ದ ಅವರು, ಬಡಜನರಿಗಾಗಿ ಶಿಕ್ಷಣ ಸಂಸ್ಥೆ, ಆಸ್ಪತ್ರೆಗಳನ್ನು ತೆರೆದು, ಅನ್ನ, ಅಕ್ಷರ, ಆಸರೆ ನೀಡಿ, ನಿಜ ಅರ್ಥದಲ್ಲಿ ಜನರ ಮನಸ್ಸಿನಲ್ಲಿ ನಡೆದಾಡುವ ದೇವರಾಗಿಯೇ ಅಜರಾಮರರಾಗಿದ್ದಾರೆ ಎಂದರು. ತುಮಕೂರು ವಿಶ್ವವಿದ್ಯಾಲಯದಲ್ಲಿ ಡಾ.ಬಾಲಗಂಗಾಧರನಾಥ ಸ್ವಾಮೀಜಿಗಳ ಅಧ್ಯಯನ ಪೀಠ ಆರಂಭಿಸಿ ವಿದ್ಯಾರ್ಥಿಗಳು, ಯುವ ಜನರಿಗೆ ಶ್ರೀಗಳ ತತ್ವಾದರ್ಶಗಳನ್ನು ತಿಳಿಸುವ ಕೆಲಸ ಆಗಬೇಕು ಎಂದ ಮುರುಳೀಧರ ಹಾಲಪ್ಪ, ಅವರ ಆದರ್ಶಗಳನ್ನು ನಾವು ಪಾಲಿಸುವ ಮೂಲಕ ಸಮಾಜಕ್ಕೆ ಒಳ್ಳೆಯದನ್ನು ಮಾಡುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗೋಣ ಎಂದು ನುಡಿದರು. ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಹಿರೇಮಠದ ಡಾ.ಶ್ರೀಶಿವಾನಂದಶಿವಾಚಾರ್ಯಸ್ವಾಮೀಜಿ ಮಾತನಾಡಿ, ಡಾ.ಬಾಲಗಂಗಾಧರನಾಥ ಸ್ವಾಮೀಜಿ…
ಸಮುದಾಯಗಳು ಸಮಾವೇಶಗಳ ಮೂಲಕ ಸಂಘಟಿಸಿ ಸಂವಿಧಾನದ ಹಕ್ಕುಗಳನ್ನು ಪಡೆಯಲು ಹೋರಾಡಬೇಕು. ಕುರುಬರು ಎಲ್ಲ ರಂಗಗಳಲ್ಲಿಯೂ ಮುಂದೆ ಬರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ವತಿಯಿಂದ ಆಯೋಜಿಸಿದ್ದ ಹಾಲುಮತ ಸಂಸ್ಕೃತಿ ವೈಭವ 2024 ಸಮಾವೇಶದಲ್ಲಿ ಮಾತನಾಡಿದರು. ಸಮಾಜವನ್ನು ವಿಂಗಡಿಸಿ ಸ್ವಾರ್ಥಕ್ಕಾಗಿ ಲಾಭಗಳಿಸುವ ಪ್ರಯತ್ನವನ್ನು ಒಂದು ವರ್ಗ ಮಾಡಿತ್ತು ಎಂದು ಮರೆಯಬಾರದು. ಸಮಾಜದಲ್ಲಿ ಅವಕಾಶ ದೊರೆತವರು ಮುಂದುವರೆದರು ಮೇಲ್ಜಾತಿಯವರಾದರು. ಅವಕಾಶ ವಂಚಿತರು ಹಿಂದುಳಿದು ಕೆಳಜಾತಿಯವರಾದರು. ಚಾತುರ್ವಣ ವ್ಯವಸ್ಥೆಯನ್ನು ದೇವರು ಮಾಡಲಿಲ್ಲ. ಮನುಷ್ಯನ ಸ್ವಾರ್ಥದಿಂದಾಗಿ ನಾವು ಮಾಡಿಕೊಂಡಿದ್ದೇವೆ. ಮಹಿಳೆಯರೂ ಅವಕಾಶ ವಂಚಿತರಾಗಿದ್ದರು. ಅಂಬೇಡ್ಕರ್ ಅವರು ಎಲ್ಲರಿಗೂ ಶಿಕ್ಷಣ ಕಡ್ಡಾಯ ಎಂದು ಸಂವಿಧಾನದಲ್ಲಿ ಹೇಳಿದ್ದಾರೆ. ಅಕ್ಷರ ಸಂಸ್ಕೃತಿಯಿಂದ ವಂಚಿತರಾದವರು ಶೂದ್ರರಾದರು. ಸಮಾಜವನ್ನು ವಿಂಗಡಿಸಿ ಸ್ವಾರ್ಥಕ್ಕಾಗಿ ಲಾಭ ಗಳಿಸುವ ಪ್ರಯತ್ನವನ್ನು ಒಂದು ವರ್ಗ ಮಾಡಿತ್ತು ಎಂದು ಮರೆಯಬಾರದು. ಇದರ ಲಾಭ ಪಡೆದವರು ಈಗಲೂ ಆ ಪ್ರಯತ್ನ ವನ್ನು ಮಾಡುತ್ತಿದ್ದಾರೆ. ಶೋಷಣೆಗೆ ಒಳಪಟ್ಟವರು ಈ ಬಗ್ಗೆ ಎಚ್ಚರಿಕೆಯಿಂದ ಇರಬೇಕು . ಕುರುಬರೂ ಇದರಲ್ಲಿ ಸೇರಿದ್ದಾರೆ…
ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿ ನಿರ್ನಾಮ ಆದಂತೆ ಭಟ್ಕಳದ ಚಿನ್ನದ ಪಳ್ಳಿಯೂ ಆಗಲಿದೆ. ಇದನ್ನು ಬೇಕಾದರೆ ಬೆದರಿಕೆ ಎಂದು ಬೇಕಾದರೂ ತಿಳಿಯಿರಿ. ಬಾಬ್ರಿ ಮಸೀದಿ ನಿರ್ನಾಮ ಮಾಡಿದಂತೆ ಭಟ್ಕಳದಲ್ಲಿ ಮಾಡುವುದು ಖಂಡಿತ. ಇದು ಹಿಂದೂ ಸಮಾಜದ ತೀರ್ಮಾನವೇ ವಿನಃ ಅನಂತಕುಮಾರ್ ಹೆಗಡೆ ತೀರ್ಮಾನ ಅಲ್ಲ ಎಂದು ಸಂಸದ ಅನಂತಕುಮಾರ್ ಹೆಗಡೆ ಹೇಳಿದ್ದಾರೆ. ಶಿರ್ಸಿಯ ಸಿಪಿ ಬಜಾರ್ ನಲ್ಲಿಯೂ ಮಸೀದಿ ಇದೆ. ಅದು ಈ ಹಿಂದೆ ವಿಜಯ ವಿಠ್ಠಲ ದೇವಸ್ಥಾನ ಆಗಿತ್ತು. ಶ್ರೀರಂಗಪಟ್ಟಣದಲ್ಲಿರುವ ದೊಡ್ಡ ಮಸೀದಿ ಮಾರುತಿ ದೇವಸ್ಥಾನವಾಗಿತ್ತು. ಇವತ್ತೂ ಅಲ್ಲಿಗೆ ಹೋದರೆ ಮಾರುತಿ ದೇವಸ್ಥಾನ ಕಾಣುತ್ತದೆ ಎಂದು ಕಿಡಿಕಾರಿದರು. ದೇಶದ ಹಳ್ಳಿಯ ಮೂಲೆ ಮೂಲೆಗಳಲ್ಲಿ ಅಪಮಾನಗೊಂಡಿರುವ ಅನೇಕ ಸಂಕೇತಗಳಿವೆ. ಅದನ್ನು ಕಿತ್ತುಹಾಕೋ ತನಕ ಈ ಹಿಂದೂ ಸಮಾಜ ಸುಮ್ಮನಿರಲ್ಲ. ಈಗ ರಣಭೈರವ ಎದ್ದಾಗಿದೆ, ಮತ್ತೆ ಕೂರುವ ಪ್ರಶ್ನೆಯೇ ಇಲ್ಲ. ಸಾವಿರ ವರ್ಷಗಳ ಸೇಡನ್ನು ತೀರಿಸಿಕೊಳ್ಳದೇ ಇದ್ರೆ ಇದು ಹಿಂದೂ ರಕ್ತವೇ ಅಲ್ಲ. ಹಿಂದೂ ಧರ್ಮ ಋಣ ಇಟ್ಟಿಕೊಳ್ಳುವ ಧರ್ಮ ಅಲ್ಲವೇ ಅಲ್ಲ ಎಂದು…
ಹೈಕಮಾಂಡ್ ಭೇಟಿಯಾಗಿ ಚರ್ಚೆ ನಡೆಸಿದ್ದೇನೆ. ರಾಜ್ಯಸಭಾ ಸ್ಥಾನಕ್ಕೆ ಅವಕಾಶ ನೀಡುವಂತೆ ಮನವಿ ಮಾಡಿದ್ದೇನೆ. ರಾಜ್ಯದಲ್ಲಿ 3 ಲೋಕಸಭಾ ಕ್ಷೇತ್ರ ಗೆಲ್ಲಿಸಿಕೊಡುವುದಾಗಿ ಹೇಳಿದ್ದೇನೆ ಎಂದು ಮಾಜಿ ಸಚಿವ ವಿ.ಸೋಮಣ್ಣ ತಿಳಿಸಿದರು. ಮಾಜಿ ಸಚಿವ, ಬಿಜೆಪಿ ಹಿರಿಯ ನಾಯಕ ವಿ.ಸೋಮಣ್ಣ ಅವರು ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದು, ಉಭಯ ನಾಯಕರ ನಡುವೆ ಸುಮಾರು 20 ನಿಮಿಷಗಳ ಕಾಲ ಮಾತುಕತೆ ನಡೆಯಿತು. ಭೇಟಿ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ವಿ.ಸೋಮಣ್ಣ, ಪಕ್ಷದ ಮುಖ್ಯವಾಹಿನಿಯಲ್ಲಿ ಇರುವಂತೆ ಹೈಕಮಾಂಡ್ ನಾಯಕರು ಸೂಚಿಸಿದ್ದಾರೆ. ಅಮಿತ್ ಶಾ, ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದೇನೆ. ಕೆಲವೊಂದು ಪ್ರಮುಖ ವಿಚಾರಗಳನ್ನು ನಾನು ಚರ್ಚೆ ಮಾಡಿದ್ದೇನೆ. ಮಾತುಕತೆಯ ಎಲ್ಲಾ ವಿವರಗಳನ್ನು ಈಗ ಬಹಿರಂಗವಾಗಿ ಹೇಳಲಾಗದು. ಅಮಿತ್ ಶಾ ಭೇಟಿ ಬಹಳ ಸಮಾಧಾನ ತಂದಿದೆ ಎಂದು ತಿಳಿಸಿದರು.
ಬೆಂಗಳೂರು : ವಾಟ್ಸಾಪ್ನಲ್ಲಿ ಹುಡುಗಿಯಂತೆ ಚಾಟ್ ಮಾಡಿ ಲೈಂಗಿಕ ಆಮಿಷವೊಡ್ಡಿ ಹಣ ವಸೂಲಿ ಮಾಡುತ್ತಿದ್ದ ವ್ಯಕ್ತಿಯನ್ನು ಬೆಂಗಳೂರು ಉತ್ತರ ವಿಭಾಗದ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಅನಿತಾ ಎಂಬ ಯುವತಿಯ ಹೆಸರಲ್ಲಿ ವ್ಯಕ್ತಿಯೋರ್ವನನ್ನು ಸಂಪರ್ಕಿಸಿದ್ದ ಆರೋಪಿ, ವಾಟ್ಸಾಪ್ ನಲ್ಲಿ ಚಾಟ್ ಮಾಡಿದ್ದಾನೆ. ಬಳಿಕ ಫೋಟೊ ಮಾರ್ಫ್ ಮಾಡಿ ಚಾಟ್ ಸಮೇತ ತೋರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಸಿ ಹಣ ವಸೂಲಿ ಮಾಡಿದ್ದಾನೆ. ದೂರಿನ ಮೇರೆಗೆ ತನಿಖೆ ನಡೆಸಿ ವ್ಯಕ್ತಿಯನ್ನು ಬಂಧಿಸಲಾಗಿದೆ.
ಇದೇ ತಿಂಗಳ 22ರಂದು ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ರಾಮಮಂದಿರದಲ್ಲಿ ಶ್ರೀರಾಮನ ಪ್ರತಿಷ್ಠಾಪನೆ ನಡೆಯಲಿದೆ. ಈ ಕಾರ್ಯಕ್ರಮವನ್ನು ಆಯೋಜಿಸಲು ವ್ಯವಸ್ಥೆ ಮಾಡಲಾಗುತ್ತಿದೆ. ಉತ್ತರಾಖಂಡ ಸರ್ಕಾರವೂ ಈ ಪ್ರಕ್ರಿಯೆಯಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದೆ. ಶ್ರೀರಾಮನ ಜನ್ಮದಿನವಾದ ಜನವರಿ 22 ರಂದು ರಾಜ್ಯದ ಮದ್ಯದಂಗಡಿಗಳು ಮತ್ತು ಬಾರ್ ಗಳು ಬಂದ್ ಮಾಡಲು ಆದೇಶಿಸಲಾಗಿದೆ. ಎಲ್ಲರೂ ಇದನ್ನು ಪಾಲಿಸಬೇಕು ಎಂದು ಉತ್ತರಾಖಂಡ ಅಬಕಾರಿ ಆಯುಕ್ತ ಹರಿಚಂದ್ರ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
ಹೈದರಾಬಾದ್ ನಲ್ಲಿ ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕಾ ಘಟಕ ಪತ್ತೆಯಾಗಿದ್ದು, 2 ಕೋಟಿ ರೂ. ಮೌಲ್ಯದ ಸಾಮಗ್ರಿ ವಶಕ್ಕೆ ಪಡೆಯಲಾಗಿದೆ. ಸರ್ಕಾರಿ ಸ್ವಾಮ್ಯದ ಮೈಸೂರು ಸ್ಯಾಂಡಲ್ ಸೋಪ್ ನಕಲಿ ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲ ಇದಾಗಿದ್ದು, ನಕಲಿ ಉತ್ಪನ್ನ, ಪ್ಯಾಕಿಂಗ್ ಗೆ ಬಳಸುತ್ತಿದ್ದ ಕಾರ್ಟನ್ ಬಾಕ್ಸ್ ಸೇರಿದಂತೆ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಹೈದರಾಬಾದಿನ ರಾಕೇಶ್ ಜೈನ್ ಮತ್ತು ಮಹಾವೀರ್ ಜೈನ್ ಎಂಬುವರ ಬಂಧಿಸಲಾಗಿದ್ದು, ಮಾಲಕಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.