Subscribe to Updates
Get the latest creative news from FooBar about art, design and business.
- ಕೋಡಿಗೇನಹಳ್ಳಿ: ಗ್ರಾಮೀಣ ಭಾಗದಲ್ಲೂ ಔಷಧ ಅಂಗಡಿಗಳು ಬಂದ್: ಬೇಡಿಕೆಗಳೇನು?
- ಸರ್ಕಾರಿ ಗೋಮಾಳ ತೆರವಿಗೆ ಗ್ರಾಮಸ್ಥರ ಆಗ್ರಹ: 4.28 ಎಕರೆ ಬದಲು 18.27 ಎಕರೆ ಗೋಮಾಳ ಅಕ್ರಮ ಖಾತೆ ಆರೋಪ
- ಕೊರಟಗೆರೆ: ದ್ವಿಚಕ್ರ ವಾಹನದ ಮೇಲೆ ಬಿದ್ದ ಗೂಡ್ಸ್ ವಾಹನ: ಸವಾರ ಸಾವು
- ತುಮಕೂರು ಜಿಲ್ಲೆಯ ಅಸ್ತಿತ್ವ ಕಳೆಯಬೇಡಿ: ಬೆಂಗಳೂರು ಉತ್ತರ ಜಿಲ್ಲೆ ಪ್ರಸ್ತಾಪಕ್ಕೆ ಬಿಜೆಪಿ ವಿರೋಧ
- ತುಮಕೂರು: ಅಕ್ರಮ ಶೆಡ್ ನಿರ್ಮಿಸಲು ಹೊರಟಿರುವವರನ್ನು ತೆರವುಗೊಳಿಸಲು ಮನವಿ
- ಕುಣಿಗಲ್: ಗ್ರಾಪಂ ಸ್ವತ್ತಿನಲ್ಲಿ ಅಕ್ರಮ ಮಳಿಗೆ: ಒತ್ತುವರಿ ಜಾಗದಲ್ಲಿ ಗ್ರಂಥಾಲಯಕ್ಕೆ ದಲಿತ ಸಂಘಟನೆ ಆಗ್ರಹ
- ತುಮಕೂರು: ಕಂಪ್ಯೂಟರ್ ಡಿಟಿಪಿ ತರಬೇತಿಗೆ ಅರ್ಜಿ ಆಹ್ವಾನ
- ಪ್ರಥಮ ಬಿ.ಸಿ.ಎ. ಪದವಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
Author: admin
ಬೆಂಗಳೂರು: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊಂದ ಪ್ರೇಮಿಗಳನ್ನು ಹೆಚ್ ಎಸ್ ಆರ್ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ನಂದಿನಿಬಾಯಿ ಮತ್ತು ನಿತೀಶ್ ಕುಮಾರ್ ಬಂಧಿತ ಆರೋಪಿಗಳು. ವೆಂಕಟ್ ನಾಯಕ್(30) ಕೊಲೆಯಾದ ವ್ಯಕ್ತಿ. ಇದೇ ತಿಂಗಳ 9ರಂದು ಹೆಚ್ಎಸ್ಆರ್ ಲೇಔಟ್ ನ ಮನೆಯಲ್ಲಿ ಆರೋಪಿ ನಂದಿನಿಬಾಯಿ ತನ್ನ ಪ್ರಿಯಕರ ನಿತೀಶ್ ಕುಮಾರ್ ಜೊತೆ ಸೇರಿ ತನ್ನ ಪತಿ ವೆಂಕಟ್ ನಾಯಕ್ ತಲೆ ಮೇಲೆ ರುಬ್ಬುವ ಗುಂಡು ಹಾಕಿ ಕೊಲೆ ಮಾಡಿದ್ದರು. ಸದ್ಯ ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ಗಂಡ ಮನೆಯಲ್ಲಿ ಇಲ್ಲ ಎಂದು ಹೇಳಿ ನಂದಿನಿ ಬಾಯಿ ಜನವರಿ 9 ರಂದು ಪ್ರಿಯಕರ ನಿತೇಶ್ನನ್ನು ಹೆಚ್ ಎಸ್ ಆರ್ ಲೇಔಟ್ ನ ತನ್ನ ಮನೆಗೆ ಕರೆಸಿಕೊಂಡಿದ್ದಳು. ಈ ವೇಳೆ ಗಂಡ ವೆಂಕಟನಾಯಕ್ ದಿಢೀರ್ ಮನೆಗೆ ಬಂದಿದ್ದ. ಮನೆಗೆ ಕಾಲಿಡುತ್ತಿದ್ದಂತೆ ರೂಮ್ ನಲ್ಲಿ ತನ್ನ ಪತ್ನಿ ಬೇರೊಬ್ಬನ ಜೊತೆ ಆತ್ಮೀಯ ಸಲುಗೆಯಲ್ಲಿದ್ದದನ್ನು ಕಂಡು ಕೋಪಗೊಂಡಿದ್ದ. ಬಳಿಕ ಪತಿ–ಪತ್ನಿ ನಡುವೆ ಗಲಾಟೆಯಾಗಿದ್ದು ,ಜಗಳ ತಾರಕ್ಕಕ್ಕೇರಿ ಕೊಲೆ ನಡೆದಿದೆ.…
ಮಂಡ್ಯ: ಲೋಕಸಭಾ ಚುನಾವಣೆಗೆ ಕೆಲವು ತಿಂಗಳು ಮಾತ್ರ ಬಾಕಿ ಇದೆ. ಸದ್ಯ ಮಂಡ್ಯ ಲೋಕಸಭಾ ಕ್ಷೇತ್ರ ತೀವ್ರ ಕುತೂಹಲ ಕೆರಳಿಸಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು ಮಂಡ್ಯ ಟಿಕೆಟ್ ಜೆಡಿಎಸ್ ಹೋಗಲಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಬಿಜೆಪಿಯಿಂದ ಟಿಕೆಟ್ ಸಿಗುವುದು ಡೌಟ್ ಆಗಿದೆ. ಹೀಗಾಗಿ ಅವರು ಪತ್ತೆ ಪಕ್ಷೇತರವಾಗಿ ಸ್ವರ್ಧೆ ಮಾಡಲು ಮುಂದಾಗಿದ್ದಾರೆ. ಸಂಸದೆಯಾದ ನಂತರ ಸುಮಲತಾ ಅವರು ಬಿಜೆಪಿಗೆ ಬೆಂಬಲ ವ್ಯಕ್ತಪಡಿಸಿದ್ದರು. ಆದರೆ ಈಗ ಟಿಕೆಟ್ ಸಿಗದಿರೋ ಹಿನ್ನೆಲೆ ಬಿಜೆಪಿ ಮೇಲೆ ಅಸಮಾಧಾನಗೊಂಡಿದ್ದಾರೆ. ಸಂಸದೆ ಸುಮಲತಾ ಅಂಬರೀಶ್ ರನ್ನ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿಯಾಗುವ ಸಾಧ್ಯತೆ ಇದೆ. ಎರಡು ಮೂರು ದಿನಗಳಲ್ಲಿ ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನು ವಿಜಯೇಂದ್ರ ಭೇಟಿ ವೇಳೆ ಮಂಡ್ಯ ಲೋಕಸಭೆ ಕ್ಷೇತ್ರ ಟಿಕೆಟ್ ನೀಡುವಂತೆ ಸುಮಲತಾ ಅವರು ಡಿಮ್ಯಾಂಡ್ ಮಾಡುವ ಸಾಧ್ಯತೆ ಇದೆ. ಈಗಾಗಲೇ ಬಿಜೆಪಿ ಜೆಡಿಎಸ್ ಮೈತ್ರಿಯಾಗಿದ್ದು ಬಹುತೇಕ ಜೆಡಿಎಸ್ ಗೆ ಮಂಡ್ಯ ಕ್ಷೇತ್ರ…
ಬೆಂಗಳೂರು: ಬಿಬಿಎಂಪಿ ಬೀದಿ ಬದಿ ವ್ಯಾಪಾರಿಗಳನ್ನು ತೆರವು ಮಾಡಿರುವ ಹಿನ್ನೆಲೆ ಜಯನಗರ ಶಾಪಿಂಗ್ ಕಾಂಪ್ಲೆಕ್ಸ್ ಬಳಿ ಬೀದಿ ಬದಿ ವ್ಯಾಪಾರಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಸಂಕ್ರಾತಿ ಹಬ್ಬಕ್ಕೆ ನಮ್ಮ ಹೊಟ್ಟೆ ಮೇಲೆ ಹೊಡೆಯ ಬೇಡಿ ಎಂದು ನೂರಾರು ಸಂಖ್ಯೆಯಲ್ಲಿ ವ್ಯಾಪಾರಿಗಳು ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದ್ದಾರೆ. ಇನ್ನು ಈ ಬಗ್ಗೆ ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್, ಫುಟ್ ಪಾತ್ ವ್ಯಾಪಾರಿಗಳು ಲೈಸೆನ್ಸ್ ಪಡೆದು ಜನರ ಓಡಾಟಕ್ಕೆ ತೊಂದರೆ ಆಗದ ರೀತಿಯಲ್ಲಿ ತಳ್ಳುಗಾಡಿ ಹಾಕಿಕೊಂಡು ವ್ಯಾಪಾರ ಮಾಡಿದರೆ ತೊಂದರೆ ಇಲ್ಲ ಎಂದಿದ್ದಾರೆ. ಬೀದಿಬದಿ ವ್ಯಪಾರಿಗಳ ಪ್ರತಿಭಟನೆ ಸಂಬಂಧ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಡಿಕೆ ಶಿವಕುಮಾರ್, ಫುಟ್ ಪಾತ್ ವ್ಯಾಪಾರಿಗಳ ಸಮಸ್ಯೆ ನನ್ನ ಗಮನದಲ್ಲೂ ಇದೆ. ಅವರು ಎರಡು ಮೂರು ಬಾರಿ ನನ್ನನ್ನೂ ಭೇಟಿ ಮಾಡಿದ್ದರು. ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ಸರಿಪಡಿಸಬೇಕು. ಫುಟ್ ಪಾತ್ಗಳು ಜನರ ಓಡಾಟಕ್ಕೆ ಮುಕ್ತವಾಗಿರಬೇಕು. ಹೈ ಕೋರ್ಟ್ ಆರ್ಡರ್ ಇದೆ. ಅದನ್ನ ಪಾಲಿಸಬೇಕು. ಫುಟ್ ಪಾತ್ ವ್ಯಾಪಾರಿಗಳು ಲೈಸೆನ್ಸ್ ಪಡೆದು…
ರಾಮನಗರ: ರಾಮಮಂದಿರ ಇನ್ನೂ ಪೂರ್ಣ ಪ್ರಮಾಣದಲ್ಲಿ ನಿರ್ಮಾಣವಾಗಿಲ್ಲ. ಆದರೂ ರಾಜಕೀಯ ಉದ್ದೇಶದಿಂದ ಉದ್ಘಾಟನೆ ಮಾಡುತ್ತಿದ್ದಾರೆ. ಇಂತಹ ರಾಜಕೀಯ ಕಾರ್ಯಕ್ರಮಕ್ಕೆ ನಾವು ಹೋಗಬೇಕಾ? ಅವರು (ಬಿಜೆಪಿ) ಮನೆಮನೆಗೆ ಮಂತ್ರಾಕ್ಷತೆ ಕೊಡುತ್ತಿದ್ದಾರೆ. ನಾವು ಗೃಹಲಕ್ಷ್ಮೀ ಯೋಜನೆಯಡಿ ಎರಡು ಸಾವಿರ ಕೊಡುತ್ತಿದ್ದೇವೆ. ಯಾರಿಗೆ ಮತ ಹಾಕಬೇಕೆಂದು ಜನ ತೀರ್ಮಾನಿಸುತ್ತಾರೆ. ಮಂತ್ರಾಕ್ಷತೆ ಕೊಟ್ಟವರಿಗಾ ಅಥವಾ ಎರಡು ಸಾವಿರ ರೂ. ಕೊಟ್ಟವರಿಗಾ? ಎಂಬುವುದನ್ನು ಜನ ನಿರ್ಧರಿಸುತ್ತಾರೆ ಎಂದು ಮಾಗಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಹೆಚ್.ಸಿ.ಬಾಲಕೃಷ್ಣ ಹೇಳಿದರು. ರಾಮನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಮಮಂದಿರ ಕಟ್ಟಲು ನಾವೂ ಜಾಗ ಹುಡುಕುತ್ತಿದ್ದೇವೆ. 20 ಎಕರೆ ಜಾಗದಲ್ಲಿ ಮಂದಿರ ಕಟ್ಟುತ್ತೇವೆ. ರಾಮಮಂದಿರ ಅದ್ಧೂರಿಯಾಗಿ ನಿರ್ಮಾಣ ಮಾಡುತ್ತೇವೆ. ರಾಮಮಂದಿರ ಬಿಜೆಪಿ, ಕಾಂಗ್ರೆಸ್ ಸ್ವತ್ತಲ್ಲ. ರಾಮಮಂದಿರ ಈ ಸಮಾಜದ ಸ್ವತ್ತು. ನಾವು ರಾಮಮಂದಿರ ಬಗ್ಗೆ ನಾವು ಚರ್ಚೆ ಮಾಡಲ್ಲ. ಮಂದಿರ ಕಟ್ಟಲು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇವೆ. ಜಿಲ್ಲಾಧಿಕಾರಿ, ಸಂಸದರು ಇದರ ಬಗ್ಗೆ ಚರ್ಚಿಸುತ್ತಿದ್ದಾರೆ. ಹೆಚ್ಚು ಚರ್ಚೆ ಮಾಡದೇ ರಾಮಮಂದಿರ ನಿರ್ಮಿಸುತ್ತೇವೆ. ಇಲ್ಲದಿದ್ದರೇ ಮಂದಿರ ಕಟ್ಟಿದ್ದೇವೆಂದು…
ಬೆಂಗಳೂರು: ಹಾವೇರಿ ಜಿಲ್ಲೆಯ ಹಾನಗಲ್ ಪಟ್ಟಣದ ಖಾಸಗಿ ಹೊಟೇಲ್ ನಲ್ಲಿ ನಡೆದ ಅನೈತಿಕ ಪೊಲೀಸ್ ಗಿರಿ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ಸರಿಯಾದ ಸೆಕ್ಷನ್ ಹಾಕಿ. ಪೋಕ್ಸೋ ಕಾಯ್ದೆಯಡಿ ದೋಷಾರೋಪ ಪಟ್ಟಿ (ಚಾರ್ಜ್ ಶೀಟ್) ಸಲ್ಲಿಕೆಯಾಗಬೇಕು. ಸಾಮೂಹಿಕ ಅತ್ಯಾಚಾರ ನಡೆದಿರುವ ಎಲ್ಲಾ ಪ್ರಕರಣಗಳೂ ಎಸ್ ಐಟಿ ತನಿಖೆಗೆ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒತ್ತಾಯಿಸಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಉಪಮುಖ್ಯಂತ್ರಿಗಳಾದ ಗೋವಿಂದ ಕಾರಜೋಳ ಮತ್ತು ಡಾ.ಅಶ್ವಥ್ ನಾರಾಯಣ ಜಂಟಿ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಮಾತನಾಡಿದ ಬೊಮ್ಮಾಯಿ, ನಾಳೆ (ಜ.14) ಬಿಜೆಪಿ ಮಹಿಳಾ ನಿಯೋಗ ಹಾನಗಲ್ಗೆ ಭೇಟಿ ಕೊಡುತ್ತಿದೆ. ರಾಜ್ಯದಲ್ಲಿ ಸಂಭವಿಸಿದ ಪ್ರಕರಣಗಳ ಬಗ್ಗೆ ನಾವು ಹೋರಾಟ ಮಾಡುತ್ತೇವೆ. ಎಸ್ಐಟಿ ರಚಿಸಿದರೂ ನ್ಯಾಯಾಂಗ ಮೇಲುಸ್ತುವಾರಿಯ ತನಿಖೆ ಆಗಬೇಕು ಎಂದು ಆಗ್ರಹಿಸಿದರು. ರಾಜ್ಯದಲ್ಲಿ ನೈತಿಕ ಪೊಲೀಸ್ ಗಿರಿ ಹೆಚ್ಚಾಗಿದೆ. ಯುವಕರು ರೂಂನಲ್ಲಿ ಯುವತಿಯನ್ನು ಥಳಿಸಿ, ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ. ಸಾಮೂಹಿಕ ಅತ್ಯಾಚಾರ ಮುಚ್ಚಿಡುವ ಪ್ರಯತ್ನ…
ತುಮಕೂರಿನ ಕರಾಮುವಿ ಪ್ರಾದೇಶಿಕ ಕೇಂದ್ರದಲ್ಲಿ 2023-24ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿ ಪ್ರವೇಶಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಸ್ನಾತಕ/ ಸ್ನಾತಕೋತ್ತರ ಕೋರ್ಸ್ ಗಳಾದ ಬಿ.ಎ, ಬಿ.ಕಾಂ, ಬಿ.ಬಿ.ಎ, ಬಿ.ಸಿ.ಎ, ಬಿ.ಲಿಬ್.ಐ.ಎಸ್ಸಿ., ಬಿ.ಎಸ್ಸಿ., ಬಿ.ಎಸ್.ಡಬ್ಲ್ಯೂ., ಎಂ.ಎ., ಎಂ.ಸಿ.ಜೆ., ಎಂ.ಕಾಂ., ಎಂ.ಎಸ್ಸಿ., ಎಂ.ಲಿಬ್.ಐ.ಎಸ್ಸಿ., ಎಂ.ಬಿ.ಎ., ಎಂ.ಸಿ.ಎ., ಎಂ.ಎಸ್.ಡಬ್ಲ್ಯೂ ಮತ್ತು ಪಿ.ಜಿ ಸರ್ಟಿಫಿಕೇಟ್., ಡಿಪ್ಲೊಮಾ., ಸರ್ಟಿಫಿಕೇಟ್ ಕೋರ್ಸ್ ಗಳಿಗೆ 2024ರ ಜನವರಿ 10ರಿಂದ ಪ್ರವೇಶಾತಿಯನ್ನು ಪ್ರಾರಂಭಿಸಲಾಗಿದೆ. “ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮಾತ್ರ ರಾಜ್ಯದಲ್ಲಿ ದೂರ ಶಿಕ್ಷಣ ನೀಡುವ ಏಕ ಮಾತ್ರ ವಿಶ್ವವಿದ್ಯಾನಿಲಯವಾಗಿರುತ್ತದೆ”. ಕೆಎಸ್ ಒಯು ವಿಶ್ವವಿದ್ಯಾಲಯ ಧನಸಹಾಯ ಅಯೋಗದ (UGC) ಮಾನ್ಯತೆ ಪಡೆದಿದೆ ಮತ್ತು ನ್ಯಾಕ್ ನಿಂದ “ಎ ಪ್ಲಸ್” ಮಾನ್ಯತೆ ಪಡೆದಿದೆ. ಯುಜಿಸಿ ನಿಯಮಾವಳಿ ಪ್ರಕಾರ ಪೂರ್ಣಾವಧಿಯಲ್ಲಿ (ಭೌತಿಕ) (Regular) ಒಂದು ಕೋರ್ಸ್ ಮತ್ತು ದೂರ ಶಿಕ್ಷಣದಲ್ಲಿ (Open University) ಇನ್ನೂಂದು ಕೋರ್ಸ್ಅನ್ನು ಏಕಕಾಲದಲ್ಲೇ (ಒಂದೇ ವರ್ಷದಲ್ಲಿ) ಮಾಡಲು ಅವಕಾಶ ಇರುತ್ತದೆ. ಹೆಚ್ಚಿನ ವಿವರಗಳಿಗಾಗಿ: ಕರಾಮುವಿ ತುಮಕೂರು ಪ್ರಾದೇಶಿಕ…
ಬಿಹಾರದಲ್ಲಿ ಯುವಕನೊಬ್ಬ ತನ್ನ ಸ್ನೇಹಿತನನ್ನು ಇರಿದು ಬರ್ಬರವಾಗಿ ಕೊಂದಿದ್ದಾನೆ. 500 ಕೂಲಿ ನೀಡಬೇಕೆಂಬ ವಿವಾದವು ಕೊಲೆಗೆ ಕಾರಣವಾಗಿದೆ. ಕೊಲೆ ಮಾಡಿದ ಬಳಿಕ ಶವವನ್ನು ಹೊಲದಲ್ಲಿ ಬಿಟ್ಟು ಹೋಗಿದ್ದರು. ಮೃತ ದೇಹ ಕಣ್ಣು ಕಿತ್ತು ಬಂದ ಸ್ಥಿತಿಯಲ್ಲಿತ್ತು. ಭೋಜ್ ಪುರ ಜಿಲ್ಲೆಯ ಅರ್ಹ್ ಪ್ರದೇಶದಲ್ಲಿ ಈ ಭೀಕರ ಹತ್ಯೆ ನಡೆದಿದೆ. ಬಾರಾ ಬಸಂತಪುರ ಗ್ರಾಮದ ನಿವಾಸಿ ಮೋಹನ್ ಸಿಂಗ್(20) ಮೃತ ವ್ಯಕ್ತಿ. ಸಿಂಗ್ ಅವರ ಪರಿಚಯಸ್ಥ ಅಜಯ್ ಮಹತೋ ಅವರಿಂದ 500 ರೂಗೆ . ಕೂಲಿ ವಿಚಾರಕ್ಕೆ ಇಬ್ಬರೂ ಆಗಾಗ ಜಗಳವಾಡುತ್ತಿರುತ್ತಾರೆ. ಪಾರ್ಟಿಯಲ್ಲಿ ಪಾಲ್ಗೊಳ್ಳುವ ನೆಪದಲ್ಲಿ ಅಜಯ್ ಸಿಂಗ್ ಅವರನ್ನು ಕರೆಸಲಾಗಿತ್ತು. ನಂತರ ಆತನ ಮೇಲೆ ಚಾಕುವಿನಿಂದ ಬರ್ಬರವಾಗಿ ಹಲ್ಲೆ ನಡೆಸಿದ್ದಾನೆ. ಬಳಿಕ ಕಣ್ಣುಗಳನ್ನು ಕಿತ್ತು ಮೃತದೇಹವನ್ನು ಸನ್ವಾರಿ ಸೇತುವೆ ಬಳಿಯ ಜಮೀನಿನಲ್ಲಿ ಎಸೆದು ಹೋಗಿರುತ್ತಾನೆ . ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಆರೋಪಿ ತಲೆಮರೆಸಿಕೊಂಡಿದ್ದಾನೆ. ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ದೇಶದ ಅತಿ ಉದ್ದದ ಸಮುದ್ರ ಸೇತುವೆ ‘ಅಟಲ್ ಸೇತು’ ವನ್ನು ಪ್ರಧಾನಿ ದೇಶಕ್ಕೆ ಸಮರ್ಪಿಸಿದರು. 22 ಕಿ.ಮೀ. ಉದ್ದದ ಆರು ಪಥದ ಸೇತುವೆ ಇದಾಗಿದ್ದು, ನಿರ್ಮಾಣ ವೆಚ್ಚ 17,840 ಕೋಟಿ ರೂ. ಎನ್ನಲಾಗಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮತ್ತು ರಾಜ್ಯಪಾಲ ರಮೇಶ್ ಬೈಸ್ ಅವರ ಉಪಸ್ಥಿತಿಯಲ್ಲಿ ಉದ್ಘಾಟನೆ ನಡೆಯಿತು. ಈ ಸೇತುವೆಯು ದಕ್ಷಿಣ ಮುಂಬೈಯನ್ನು ನವಿ ಮುಂಬೈಗೆ ಸಂಪರ್ಕಿಸುತ್ತದೆ. ಎರಡು ಗಂಟೆಗಳ ಪ್ರಯಾಣವನ್ನು ಕೇವಲ 15-20 ನಿಮಿಷಗಳಿಗೆ ಕಡಿಮೆ ಮಾಡಬಹುದು. ಸೇತುವೆಯು ಸಮುದ್ರ ಮಟ್ಟದಿಂದ 15 ಮೀಟರ್ ಎತ್ತರದಲ್ಲಿದೆ. ಅಟಲ್ ಸೇತು, ಸೇತುವೆ ದೇಶದ ಎಂಜಿನಿಯರಿಂಗ್ ಶ್ರೇಷ್ಠತೆಗೆ ಉತ್ತಮ ಉದಾಹರಣೆಯಾಗಿದೆ. ಅಟಲ್ ಸೇತು ವಿಶ್ವದ 12 ನೇ ಅತಿ ಉದ್ದದ ಸೇತುವೆಯಾಗಿದೆ. ಇದು ಭಾರತದ ಅತಿ ಉದ್ದದ ಸೇತುವೆಯೂ ಹೌದು. ಅಟಲ್ ಸೇತು ಅಡಿಯಲ್ಲಿ ಹಡಗುಗಳು ಸಹ ಹಾದು ಹೋಗಬಹುದು. ವಾಹನಗಳು ಗಂಟೆಗೆ 100 ಕಿ.ಮೀ ವೇಗದಲ್ಲಿ ಹೋಗಬಹುದು. ಸೇತುವೆ ಮೇಲೆ ಬೈಕ್ ಮತ್ತು ಆಟೋರಿಕ್ಷಾಗಳಿಗೆ…
ಪಶ್ಚಿಮ ಬಂಗಾಳದಲ್ಲಿ ಜಾರಿ ನಿರ್ದೇಶನಾಲಯ ತಂಡದ ಮೇಲೆ ಗುಂಪೊಂದು ದಾಳಿ ನಡೆಸಿದ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಸಂಘರ್ಷದ ನೇತೃತ್ವ ವಹಿಸಿದ್ದವರನ್ನು ಬಂಧಿಸಲಾಯಿತು. ಉತ್ತರ 24 ಪರಗಣ ಜಿಲ್ಲೆಯಲ್ಲಿ ಜನವರಿ 5ರಂದು ಇಡಿ ತಂಡದ ಮೇಲೆ ದಾಳಿ ನಡೆಸಿತ್ತು. ಒಂದು ವಾರದ ಹಿಂಸಾಚಾರದ ನಂತರ ಪ್ರಕರಣದಲ್ಲಿ ಬಂಧನವನ್ನು ಮಾಡಲಾಗಿದೆ. ಮೆಹಬೂಬ್ ಮೊಲ್ಲಾ ಮತ್ತು ಸುಕಮಲ್ ಸರ್ದಾರ್ ಬಂಧಿತ ಆರೋಪಿಗಳು. ಇಂದು ಬೆಳಗ್ಗೆ ಓಲುವಿನಲ್ಲಿ ನಜತ್ ಪೊಲೀಸರು ಅವರನ್ನು ಬಂಧಿಸಿದ್ದಾರೆ. ದಾಳಿಯ ವಿಡಿಯೋ ದೃಶ್ಯಾವಳಿಗಳನ್ನು ಪರಿಶೀಲಿಸಿದ ನಂತರ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಟಿಎಂಸಿ ನಾಯಕ ಷಹಜಹಾನ್ ಶೇಖ್ ಇನ್ನೂ ತಲೆ ಮರೆಸಿಕೊಂಡಿದ್ದಾನೆ. ಇಡಿ ಷಹಜಹಾನ್ ಶೇಖ್ಗಾಗಿ ಲುಕ್ ಔಟ್ ನೋಟಿಸ್ ಜಾರಿ ಮಾಡಿದೆ. ಪಡಿತರ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂದೇಶ ದೊರೆತು ಇಡಿ ಕಳೆದ ಶುಕ್ರವಾರ ಶೇಖ್ ಮನೆಯಲ್ಲಿ ಶೋಧ ನಡೆಸಿತ್ತು. ಇದೇ ವೇಳೆ ಜನರ ಗುಂಪು ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದೆ. ಘಟನೆಯಲ್ಲಿ ಮೂವರು ಅಧಿಕಾರಿಗಳು ಗಾಯಗೊಂಡಿದ್ದು, ವಾಹನಗಳಿಗೆ ಹಾನಿಯಾಗಿದೆ. ಘಟನೆಗೆ ಸಂಬಂಧಿಸಿದಂತೆ…
ಅಯೋಧ್ಯೆ ರಾಮಮಂದಿರ ಸಮಾರಂಭಕ್ಕೂ ಮುನ್ನ ಬಿಜೆಪಿಯ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿದ್ದಾರೆ. ಪ್ರಧಾನಿಯನ್ನು ಆಯ್ಕೆ ಮಾಡಿದ್ದು ಶ್ರೀರಾಮ ಎಂದು ಅಡ್ವಾಣಿ ಹೇಳಿದ್ದಾರೆ. ಪ್ರತಿಷ್ಠಾ ಸಮಾರಂಭವು ದೈವಿಕ ಕನಸಿನ ಸಾಕಾರವಾಗಿದೆ ಎಂದು ಹೇಳಿದರು. ಇದನ್ನು ರಾಷ್ಟ್ರಧರ್ಮ ಪತ್ರಿಕೆಯಲ್ಲಿ ಬರೆದ ಲೇಖನದಲ್ಲಿ ಹೇಳಲಾಗಿದೆ. ಪ್ರಧಾನಿ ದೇಶದ ಜನರ ಪ್ರತಿನಿಧಿ ಎಂದೂ ಅಡ್ವಾಣಿ ಹೇಳುತ್ತಾರೆ. ಸೆಪ್ಟೆಂಬರ್ 25, 1990 ರಂದು ವಿವಾದಿತ ‘ರಥ ಯಾತ್ರೆ’ಯ ನೇತೃತ್ವ ವಹಿಸಿದ್ದವರು ಅಡ್ವಾಣಿ. ಪ್ರಯಾಣದ ಕೊನೆಯಲ್ಲಿ, ಡಿಸೆಂಬರ್ 6, 1992 ರಂದು ಬಾಬರಿ ಮಸೀದಿಯನ್ನು ಕೆಡವಲಾಯಿತು. ಮಸೀದಿ ಕೆಡವಿದಾಗ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಷಿ ಅಯೋಧ್ಯೆಯಲ್ಲಿದ್ದರು. ಅಯೋಧ್ಯೆಯಲ್ಲಿ ಮುಂದೊಂದು ದಿನ ರಾಮಮಂದಿರ ನಿರ್ಮಾಣವಾಗಬೇಕು ಎಂದು ವಿಧಿ ನಿರ್ಧರಿಸಿದೆ ಎಂದು ಅಂದುಕೊಂಡಿದ್ದೆ. ‘ರಥಯಾತ್ರೆ’ ಆರಂಭಿಸಿದ ದಿನಗಳ ನಂತರ ನಾನೊಬ್ಬ ಸಾರಥಿ ಎಂದು ಅರಿವಾಯಿತು. ಪ್ರಯಾಣವೇ ಮುಖ್ಯ ಸಂದೇಶವಾಗಿತ್ತು. ರಾಮನ ಜನ್ಮಸ್ಥಳಕ್ಕೆ ಹೋಗುತ್ತಿದ್ದುದರಿಂದ ಅದು ಪೂಜೆಗೆ ಅರ್ಹವಾದ ‘ರಥ’ ಎಂದು ಅಡ್ವಾಣಿ…