Subscribe to Updates
Get the latest creative news from FooBar about art, design and business.
- ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್
- ತುಮಕೂರು: ಜುಲೈ 15ರಿಂದ ಉಚಿತ ಯೋಗ ತರಬೇತಿ, ತರಗತಿಗಳು ಆರಂಭ
- ಅರಸೀಕೆರೆ–ಯಲಹಂಕ ಮೆಮು ರೈಲಿಗೆ ಹಸಿರು ನಿಶಾನೆ
- ಮಾದಕ ವ್ಯಸನಗಳಿಗೆ ಒಳಗಾದರೆ ನಿಮ್ಮ ಇಡೀ ಜೀವನವೇ ನಾಶವಾಗುತ್ತದೆ: ಜನಜಾಗೃತಿ ವೇದಿಕೆ ಸದಸ್ಯ ಶಿವಕುಮಾರ್
- ಪ್ರತಿ ಠಾಣೆಗಳಲ್ಲಿ 2ನೆ ಭಾನುವಾರ ಪರಿಶಿಷ್ಟರ ಸಭೆ: ಪ್ರಿಯಾಂಕ್ ಖರ್ಗೆ
- ಮೀನುಗಾರರಿಗೆ ಸೌಲಭ್ಯ ಸಹಾಯಧನ : ಅರ್ಜಿ ಆಹ್ವಾನ
- ಪಿ.ಆರ್.ಸಿ. ಕಾಯ್ದೆ ಮೂಲಕ ಅಕ್ರಮ ವಲಸಿಗರನ್ನು ಸಕ್ರಮಗೊಳಿಸಲು ಹುನ್ನಾರ: ಶಾಸಕ ಜಿ.ಬಿ.ಜ್ಯೋತಿಗಣೇಶ್ ಆಕ್ರೋಶ
- ಒಕ್ಕಲೆಬ್ಬಿಸಿದರೆ ಸಾಕೇ? ರೈತರಿಗೆ ಪರ್ಯಾಯ ಭೂಮಿ ನೀಡಿ: ಸರ್ಕಾರಕ್ಕೆ ರೈತ ಸಂಘ ಒತ್ತಾಯ
Author: admin
ಕಲಬುರಗಿ: ಕಲಬುರಗಿ ಆಶ್ರಯ ಕಾಲೊನಿಯಲ್ಲಿ ಯುವಕನೊಬ್ಬನನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದ್ದು, ಕಲಬುರಗಿ ಆಶ್ರಯ ಕಾಲೊನಿ ನಿವಾಸಿಯಾಗಿರುವ ರೋಹನ್(22) ಕೊಲೆಯಾದ ಯುವಕನಾಗಿದ್ದಾನೆ. ಕಲಬುರಗಿ ನಗರದ ಏಷ್ಯನ್ ಮಾಲ್ ನಲ್ಲಿ ಮೊಬೈಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ರೋಹನ್ನನ್ನು ಒಬ್ಬ ರೌಡಿ ಶೀಟರ್ ಮಂಗಳವಾರ ರಾತ್ರಿ ಆಶ್ರಯ ಕಾಲೋನಿಯಲ್ಲಿ ಕೊಲೆ ಮಾಡಿದ್ದಾನೆ. ಆರೋಪಿಯು, ಮಹಾರಾಷ್ಟ್ರದ ಪುಣೆಯಿಂದ ಗಡಿಪಾರಾಗಿ ಬಂದಿದ್ದ ರೌಡಿ ಶೀಟರ್ ರೋಹನ್ ಜತೆಗೆ ಯಾವುದೋ ಕಾರಣಕ್ಕೆ ದ್ವೇಷವನ್ನು ಹೊಂದಿದ್ದ ಎನ್ನಲಾಗಿದೆ. ಇದರಿಂದಾಗಿ ಆತ ಚೂರಿಯಿಂದ ಇರಿದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಹೊಸದಿಲ್ಲಿ: ಕೇವಲ 8 ನೇ ವಯಸ್ಸಿನಲ್ಲಿ, ಆಕೆ 10 ನೇ ತರಗತಿಯ ಪರೀಕ್ಷೆ ಉತ್ತೀರ್ಣಳಾದಳು, ಆಮೂಲಕ ತನ್ನ ಗೆಳೆಯರಿಗಿಂತ ಬಹಳ ಮುಂದಿದ್ದಳು. 10 ನೇ ವಯಸ್ಸಿನಲ್ಲಿ, ಜೈಸ್ವಾಲ್ ತನ್ನ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದಳು, ಇದು ಅಸಾಧಾರಣ ಶೈಕ್ಷಣಿಕ ವೃತ್ತಿಜೀವನದ ಆರಂಭ. ಜೈಸ್ವಾಲ್ ಶೈಕ್ಷಣಿಕ ಸಾಧನೆ ಅಲ್ಲಿಗೇ ನಿಲ್ಲಲಿಲ್ಲ. ಆಕೆ ತನ್ನ 13 ನೇ ವಯಸ್ಸಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಪದವಿ ಪಡೆದಳು. 15 ನೇ ವರ್ಷಕ್ಕೆ ಏಷ್ಯಾದ ಕಿರಿಯ ಸ್ನಾತಕೋತ್ತರ ಪದವೀಧರೆ ಎಂಬ ಹೆಗ್ಗಳಿಕೆಗೆ ಪಾತ್ರ, ಉಸ್ಮಾನಿಯಾ ವಿಶ್ವವಿದ್ಯಾಲಯದಿಂದ ರಾಜಕೀಯ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ. ಆಕೆಯ ಶೈಕ್ಷಣಿಕ ಸಾಧನೆಯಲ್ಲಿ ಕಾನೂನು ಪದವಿ ಸಹ ಒಳಗೊಂಡಿದೆ, ಇದು ಜೈಸ್ವಾಲ್ ಳ ವೈವಿಧ್ಯಮಯ ಆಸಕ್ತಿ ಮತ್ತು ಸಾಮರ್ಥ್ಯಕ್ಕೆ ಸಾಕ್ಷಿ. 17 ನೇ ವಯಸ್ಸಿನಲ್ಲಿ ಪಿಎಚ್ ಡಿ ಅಧ್ಯಯನ ಪ್ರಾರಂಭಿಸಿದ ಜೈಸ್ವಾಲ್, 22 ನೇ ವಯಸ್ಸಿಗೆ ಭಾರತದ ಅತ್ಯಂತ ಕಿರಿಯ ಡಾಕ್ಟರೇಟ್ ಪದವೀಧರೆ ಎಂಬ ಹೆಸರು ಪಡೆದಳು. ಆಕೆಯ ಅದ್ಭುತ ಸಂಶೋಧನೆಯು ಮಹಿಳೆಯರ ಆರ್ಥಿಕ…
ಪ್ರಸಿದ್ಧ ಚಾರಣಗಳಲ್ಲೊಂದಾದ ಕುಮಾರ ಪವರ್ತದಲ್ಲಿ ಟ್ರಕ್ಕಿಂಗ್ ಗೆ ನಿರ್ಬಂಧ ಹೇರಲಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ ಜನಜಂಗುಳಿಯಿಂದ ಪರಿಸರ ಹಾನಿ ಭೀತಿ ಎದುರಾಗಿರುವ ಕಾರಣ ಈ ಕ್ರಮ ಅನಿವಾರ್ಯವಾಗಿ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಈಶ್ವರ್ ಖಂಡ್ರೆ, “ಚಾರಣ ನಿಯಂತ್ರಣ ಸಂಬಂಧ ವರದಿ ಸಲ್ಲಿಸಲು ಸೂಚಿಸಿದ್ದೇನೆ. ಅದರ ಜೊತೆಗೆ ಚಾರಣಕ್ಕೆ ಆನ್ ಲೈನ್ ದಾಖಲಾತಿ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ. ಪ್ಲಾಸ್ಟಿಕ್ ತ್ಯಾಜ್ಯದಿಂದ ಅಪಾರ ಹಾನಿಯಾಗುತ್ತಿದೆ. ಕರಾವಳಿ ಪ್ರದೇಶಗಳನ್ನು ಪ್ಲಾಸ್ಟಿಕ್ ಮುಕ್ತ ನಗರ ಮಾಡುವ ಗುರಿ ಇದೆ.ರಾಜ್ಯದ ಎಲ್ಲಾ ಚಾರಣ ಪಥಗಳನ್ನು ಆನ್ ಲೈನ್ ದಾಖಲಾತಿ ವ್ಯಾಪ್ತಿಗೆ ತರುತ್ತೇವೆ. ಏಕಾಏಕಿ ಸಾವಿರಾರು ಜನ ಹೋದರೆ ಇಕ್ಕಟ್ಟಾಗಿ ಸಮಸ್ಯೆ ಆಗುತ್ತದೆ. ಕುಮಾರ ಪರ್ವತದಲ್ಲಿ ಅಂದಾಜು 20 ಕಿ.ಮೀ ಚಾರಣ ಇರಬಹುದು. ಇಂಥ ಜಾಗದಲ್ಲಿ ಎಷ್ಟು ಜನ ಹೋಗಬಹುದು ಅಂತ ನೋಡಿ ಆನ್ ಲೈನ್ ಮೂಲಕ ನಿಗದಿ ಮಾಡುತ್ತೇವೆ ಎಂದು ಹೇಳಿದ್ದಾರೆ. ಈ…
ಉತ್ತರಾಖಂಡದ ಮಾಜಿ ಅರಣ್ಯ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಹರಕ್ ಸಿಂಗ್ ರಾವತ್ ವಿರುದ್ಧ ಜಾರಿ ನಿರ್ದೇಶನಾಲಯ ಕ್ರಮ. ಡೆಹ್ರಾಡೂನ್ ನ ಡಿಫೆನ್ಸ್ ಕಾಲೋನಿಯಲ್ಲಿರುವ ರಾವತ್ ನಿವಾಸದ ಮೇಲೆ ಇಡಿ ದಾಳಿ ನಡೆಸಿದೆ. ಉತ್ತರಾಖಂಡ, ದೆಹಲಿ ಮತ್ತು ಚಂಡೀಗಢದ ಸುಮಾರು 15 ಸ್ಥಳಗಳಲ್ಲಿ ತಪಾಸಣೆ ನಡೆಸಲಾಗುತ್ತಿದೆ ಎಂದು ವರದಿಯಾಗಿದೆ. ಕಾರ್ಬೆಟ್ ಟೈಗರ್ ರಿಸರ್ವ್ ಅರಣ್ಯ ಭೂಮಿ ಭ್ರಷ್ಟಾಚಾರ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಕ್ರಮ ಕೈಗೊಳ್ಳುತ್ತಿದೆ ಎಂದು ರಾಷ್ಟ್ರೀಯ ಮಾಧ್ಯಮ ವರದಿ ಮಾಡಿದೆ. ಕಳೆದ ವರ್ಷ ಆಗಸ್ಟ್ ನಲ್ಲಿ ರಾವತ್ ವಿರುದ್ಧ ವಿಜಿಲೆನ್ಸ್ ಇಲಾಖೆ ಕ್ರಮ ಕೈಗೊಂಡಿತ್ತು ಎಂಬುದು ಕೂಡ ಗಮನಾರ್ಹ. ಈ ಹಿಂದೆ ಹರಕ್ ಸಿಂಗ್ ರಾವತ್ ಅವರನ್ನು ಬಿಜೆಪಿ ಪಕ್ಷದಿಂದ ಅಶಿಸ್ತಿನ ಕಾರಣದಿಂದ ಸಂಪುಟ ಸಚಿವರಾಗಿ ಉಚ್ಚಾಟಿಸಲಾಗಿತ್ತು. 2022ರ ವಿಧಾನಸಭಾ ಚುನಾವಣೆಗೂ ಮುನ್ನ ರಾವತ್ ಕಾಂಗ್ರೆಸ್ ಸೇರಿದ್ದರು. ಹರಕ್ ಸಿಂಗ್ ಅವರ ಸೊಸೆ ಅನುಕೃತಿ ಗುಸೇನ್ ಕೂಡ ಕಾಂಗ್ರೆಸ್ ಸೇರಿದರು.
ಕೆಲವೊಮ್ಮೆ ಯಾವುದೇ ಕೆಲಸ ಮಾಡೋ ಮುಂಚೆ ನೂರು ಬಾರಿ ಯೋಚನೆ ಮಾಡಬೇಕಾಗುತ್ತೆ. ಬೇರೆ ಬೇರೆ ಕೋನಗಳಲ್ಲಿ ಯೋಚಿಸಿ ನಿರ್ಧಾರಕ್ಕೆ ಬರಬೇಕಾಗುತ್ತೆ. ಹೌದು, ಬಾಲಿವುಡ್ ನಟ ಹೃತಿಕ್ ರೋಷನ್ ಅಭಿನಯದ ‘ಫೈಟರ್’ ಸಿನಿಮಾ ಕಳೆದ ಜನವರಿ 25, 2024ರಂದು ರಿಲೀಸ್ ಆಗಿರೋದ್ರ ಬಗ್ಗೆ ನಿಮ್ಗೆ ಗೊತ್ತಿದೆ. ಇದೀಗ ನಟ ಹೃತಿಕ್ ರೋಷನ್ ಹಾಗೂ ದೀಪಿಕಾ ಪಡುಕೋಣೆ ವಿರುದ್ಧ ಲೀಗಲ್ ನೋಟಿಸ್ ಜಾರಿ ಮಾಡಲಾಗಿದೆ. ಈ ಚಿತ್ರದಲ್ಲಿ ದೀಪಿಕಾ ಪಡುಕೋಣೆ ನಾಯಕಿಯಾಗಿ ಕಾಣಿಸಿಕೊಂಡಿದ್ದರು. ಜೊತೆಗೆ ಅನಿಲ್ ಕಪೂರ್, ಅಕ್ಷಯ್ ಒಬೆರಾಯ್, ಸಂಜೀದಾ ಶೇಖ್ ಈ ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ‘ಫೈಟರ್’ ಸಿನಿಮಾದಲ್ಲಿ ನಟ ಹೃತಿಕ್ ರೋಷನ್ ಹಾಗೂ ದೀಪಿಕಾ ಪಡುಕೋಣೆ ವಾಯುಪಡೆ ಅಧಿಕಾರಿಗಳಾಗಿ ಕಾಣಿಸಿಕೊಂಡಿದ್ದರು. ಸಿನಿಮಾದಲ್ಲಿ ಇಬ್ಬರೂ ವಾಯುಪಡೆ ಅಧಿಕಾರಿಗಳಾಗಿರುತ್ತಾರೆ. ಇಬ್ಬರ ರೊಮ್ಯಾಂಟಿಕ್ ದೃಶ್ಯಗಳೂ ಇವೆ. ಆದರೆ ವಾಯುಪಡೆ ದಿರಿಸಿನಲ್ಲಿ ಚುಂಬನ, ರೊಮ್ಯಾಂಟಿಕ್ ದೃಶ್ಯಗಳನ್ನು ಮಾಡಿದ್ದಕ್ಕೆ ದೀಪಿಕಾ ಮತ್ತು ಹೃತಿಕ್ ಇಬ್ಬರಿಗೂ ವಾಯುಪಡೆ ಲೀಗಲ್ ನೋಟಿಸ್ ನೀಡಿದೆ. ವಾಯುಪಡೆಗೆ ಅದರದ್ದೇ ಆದ ಗೌರವವಿದೆ.…
ಆರ್ಥಿಕ ನೆರವು ಸೇರಿದಂತೆ ವಿಚಾರದಲ್ಲಿ ಕೇಂದ್ರದ ನಿರ್ಲಕ್ಷ್ಯ ಖಂಡಿಸಿ ಇಂದು ದೆಹಲಿಯಲ್ಲಿ ಕರ್ನಾಟಕ ಸರ್ಕಾರದ ಪ್ರತಿಭಟನೆ. ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಜಂತರ್ ಮಂತರ್ ನಲ್ಲಿ ‘ಚಲೋ ದೆಹಲಿ’ ಪ್ರತಿಭಟನೆಯ ನೇತೃತ್ವ ವಹಿಸಲಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ರಾಜ್ಯ ತೀವ್ರ ನಿರ್ಲಕ್ಷ್ಯಕ್ಕೆ ಒಳಗಾಗುತ್ತಿದೆ ಎಂಬುದು ಕರ್ನಾಟಕ ಸರ್ಕಾರದ ದೂರು. ಬುಧವಾರ ಬೆಳಗ್ಗೆ 11 ಗಂಟೆಗೆ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಕಾಂಗ್ರೆಸ್ ಸಚಿವರು, ಶಾಸಕರು, ಎಂಎಲ್ಸಿಗಳು ನಿನ್ನೆ ಬೆಂಗಳೂರಿನಿಂದ ರಾಷ್ಟ್ರ ರಾಜಧಾನಿಗೆ ಆಗಮಿಸಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ಕೇಂದ್ರದ ವಿರುದ್ಧ ರಾಜ್ಯ ಸರ್ಕಾರದ ಸಂಪೂರ್ಣ ತಂಡ ಪ್ರತಿಭಟನೆ ನಡೆಸುತ್ತಿರುವುದು ಇದೇ ಮೊದಲು. ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಕರ್ನಾಟಕದ ರಾಜ್ಯಸಭಾ ಮತ್ತು ಲೋಕಸಭೆಯ ಸದಸ್ಯರು ಮತ್ತು ಕೇಂದ್ರ ಸಚಿವರಿಗೆ ಪತ್ರಗಳನ್ನು ನೀಡಲಾಯಿತು. 2017-18ನೇ ಸಾಲಿನಿಂದ ಕರ್ನಾಟಕಕ್ಕೆ ಅನುದಾನ, ವಿಶೇಷ ಅನುದಾನ ಮತ್ತು ಕೇಂದ್ರದಿಂದ ಆರಂಭಿಸಲಾದ ಯೋಜನೆಗಳಲ್ಲಿ ನೀಡಬೇಕಾದ ಪಾಲು…
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸದಾ ಒಂದಿಲ್ಲೊಂದು ಎಡವಟ್ಟುಗಳನ್ನು ಮಾಡುತ್ತಲೇ ಸುದ್ದಿಯಾಗುತ್ತಿದ್ದಾರೆ. ಈ ಹಿಂದೆ ಬಟಾಟೆಯಿಂದ ಚಿನ್ನ ತೆಗೆಯಬಹುದು ಎಂಬ ಹೇಳಿಕೆ ಭಾರಿ ವೈರಲ್ ಆಗಿತ್ತು. ಇದೀಗ ಅಂತಹದ್ದೇ ಒಂದು ವಿವಾದಾತ್ಮಕ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸದ್ಯ ವೈರಲ್ ಆಗಿದೆ. ಭಾರತ್ ಜೋಡೋ ನ್ಯಾಯ ಯಾತ್ರೆ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ರಾಹುಲ್ ಗಾಂಧಿಯವರು ರೋಡ್ ಶೋ ನಡುವೆ ನಾಯಿಗೆ ಬಿಸ್ಕೆಟ್ ತಿನ್ನಿಸುತ್ತಿರುವುದನ್ನು ನೀವು ವಿಡಿಯೋದಲ್ಲಿ ಗಮನಿಸಬಹುದು. ಆ ಸಮಯದಲ್ಲಿ, ನಾಯಿ ಬಿಸ್ಕತ್ತನ್ನು ತಿನ್ನಲು ನಿರಾಕರಿಸಿದಾಗ, ಅವರು ಅದೇ ಬಿಸ್ಕತ್ತನ್ನು ತನ್ನ ಕಾರ್ಯಕರ್ತನಿಗೆ ನೀಡಿರುವ ವಿಡಿಯೋ ಇದೀಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ರಾಹುಲ್ ಗಾಂಧಿ ಅವರ ರೋಡ್ ಶೋ ವೇಳೆ ಅವರ ಜತೆಗಿದ್ದ ನಾಯಿಗೆ ಬಿಸ್ಕತ್ತು ನೀಡಿದ್ದರು. ಆದರೆ ಆ ನಾಯಿ ತಿನ್ನಲು ನಿರಾಕರಿಸಿದೆ. ಅದೇ ಸಮಯದಲ್ಲಿ ಕಾರ್ಯಕರ್ತರೊಬ್ಬರು ರಾಹುಲ್ ಗಾಂಧಿಯನ್ನು ಮಾತನಾಡಿಸಿದರು. ಆಗ ರಾಹುಲ್ ನಾಯಿಗೆ ಹಾಕಿದ್ದ ಬಿಸ್ಕತ್ತಲ್ಲೇ ಒಂದು ಬಿಸ್ಕತ್ತನ್ನು ತೆಗೆದು ಕಾರ್ಯಕರ್ತನಿಗೂ ನೀಡಿದ್ದರು. ಅದಾದ ಬಳಿಕ…
ಮಹಿಳೆಯನ್ನು ಹತ್ಯೆ ಮಾಡಿ ಮೃತದೇಹದೊಂದಿಗೆ ಸಂಬೋಗ ನಡೆಸಿದ ಆರೋಪದ ಮೇಲೆ ಛತ್ತೀಸ್ ಗಢದ ಬಲರಾಮ್ಪು ರ ಜಿಲ್ಲೆಯಲ್ಲಿ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರಾಜ್ಪುರ ಠಾಣೆ ವ್ಯಾಪ್ತಿಯ ಪರಸಗುಡಿ ಹರಿತ್ಮಾ ಗ್ರಾಮದ ಕಾಡಿನಲ್ಲಿ ಈ ಘಟನೆ ನಡೆದಿದ್ದು, ಅಪ್ರಾಪ್ತ ವಯಸ್ಕ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. 17 ವರ್ಷ ವಯಸ್ಸಿನ ಅಪ್ರಾಪ್ತ ವಯಸ್ಕ ಹತ್ಯೆಯಾದ ಮಹಿಳೆಯ ಪತಿಯ ಕಿರಿಯ ಸಹೋದರನಾಗಿದ್ದು,ಸಂಬಂಧಿಕ ಎಂದು ವರದಿ ತಿಳಿಸಿದೆ. ಮಹಿಳೆ ಮತ್ತು ಆಕೆಯ ಪತಿ ಕೆಲಸದ ನಿಮಿತ್ತ ಪರ್ಸಗುಡಿ ಎಂಬಲ್ಲಿಂದ ಕೆಲವು ಕಿಲೋಮೀಟರ್ ದೂರದಲ್ಲಿರುವ ಸುರ್ಗುಜಾ ಜಿಲ್ಲೆಯ ಅಕೋಲಾಕ್ಕೆ ಸ್ಥಳಾಂತರಗೊಂಡಿದ್ದರು. ಘಟನೆಯ ದಿನ ಆರೋಪಿಗಳು ತಮ್ಮ ಕೃಷಿ ಭೂಮಿಗೆ ನೀರುಣಿಸಲು ಹರಿತ್ಮಾ ಅರಣ್ಯಕ್ಕೆ ಬರುವಂತೆ ಫೋನ್ ಮೂಲಕ ಕರೆದಿದ್ದರು. ಕಾಡಿಗೆ ಬಂದ ಮಹಿಳೆಯೊಂದಿಗೆ ಮದ್ಯ ಸೇವಿಸಿದ ನಂತರ ಅಪ್ರಾಪ್ತ ಬಾಲಕ ನೈಲಾನ್ ಹಗ್ಗದಿಂದ ಆಕೆಯ ಕತ್ತು ಹಿಸುಕಿ ಕೊಂದು ನಂತರ ಶವದೊಂದಿಗೆ ಲೈಂಗಿಕ ಕ್ರಿಯೆ ನಡೆಸಿ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಮರುದಿನ ಬೆಳಗ್ಗೆ ದಾರಿಹೋಕರು ಆಕೆಯ ಶವವನ್ನು…
ಸರಗೂರು: ನಾವೆಲ್ಲರೂ ಸಂಘಟಿತರಾಗುವ ಮೂಲಕ ಆರ್ಥಿಕವಾಗಿ ಹಿಂದುಳಿದಿರುವ ಭೋವಿ ಜನಾಂಗವನ್ನು ಮೇಲೇತ್ತುವ ಕೆಲಸ ಮಾಡಬೇಕಿದೆ ಎಂದರು. ಮಹಾ ಸಂಸ್ಥಾನ ಭೋವಿ ಗುರುಪೀಠ ಇಮ್ಮಡಿ ಸಿದ್ದರಾಮೇಶ್ವರಸ್ವಾಮಿ ಆಶೀರ್ವಚನ ನೀಡಿದರು. ತಾಲ್ಲೂಕಿನ ಪಟ್ಟಣದ ಶಿವಯೋಗಿ ಸಿದ್ಧರಾಮೇಶ್ವರ ಭೋವಿ ಸಮಾಜ ಸೇವೆ ಸಮಿತಿ ವತಿಯಿಂದ ಶಿವಯೋಗಿ ಸಿದ್ಧರಾಮೇಶ್ವರರ 852 ನೇ ಜಯಂತೋತ್ಸವ ಕಾರ್ಯಕ್ರಮವನ್ನು ಮಂಗಳವಾರ ಹಮ್ಮಿಕೊಂಡಿದ್ದು ಗಣ್ಯರು ಕಾರ್ಯಕ್ರಮದ ಜ್ಯೋತಿ ಬೆಳಗಿಸಿ ಸಿದ್ದರಾಮೇಶ್ವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಉದ್ಘಾಟಿಸಿ ಮಾತನಾಡಿದರು. ಒಬ್ಬ ನೇಯ್ಗೆ ಕಾಯಕದವ, ಇನ್ನೊಬ್ಬ ಕನ್ನಡಿ (ಕ್ಷೌರದ) ಕಾಯಕದವ. ಇವರಿಬ್ಬರಲ್ಲದೆ ಅಮುಗೇಶ್ವರಲಿಂಗ ಎಂಬ ಅಂಕಿತದ ಒಬ್ಬ ವಚನಕಾರನನ್ನು ಕವಿಚರಿತೆಕಾರರು ಹೇಳಿ ಒಂದು ವಚನವನ್ನು ಉದಾಹರಿಸಿ ಆತ ಇನ್ನೊಬ್ಬ ಆಮುಗಿದೇವಯ್ಯನೆಂದು ಅಭಿಪ್ರಾಯಪಟ್ಟಿದ್ದಾರೆ. ಸಿದ್ದರಾಮೇಶ್ವರರು ತಮ್ಮ ವಚನಗಳ ಮೂಲಕ ಸಮಾಜದಲ್ಲಿದ್ದ ಅಂಕುಡೊಂಕುಗಳನ್ನು ತಿದ್ದುವ ಕಾರ್ಯ ಮಾಡಿದ್ದಾರೆ. ಇವರ ವಚನಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಶಾಸಕ ಹಾಗೂ ಜಂಗಲ್ ಲಾಡ್ಜ್ ಹಾಗೂ ರೆಸಾರ್ಟ್ ಗಳ ನಿಗಮದ ಅಧ್ಯಕ್ಷ ಅನಿಲ್ ಚಿಕ್ಕಮಾದು ಮಾತನಾಡಿ, ನದಿ,…
ಅಡವಿ ಚಿತ್ರಕ್ಕೆ ಮೂರು ಅಂತಾರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ, ಆಂಧ್ರಪ್ರದೇಶದ ತಿರುಪತಿಯಲ್ಲಿ ಇಂಡಿಯನ್ ಫಿಲಂ ಮೇಕರ್ಸ್ ಅಸೋಸಿಯೇಷನ್ (ಐ ಎಫ್ ಎಂ. ಎ ) ಆಯೋಜಿಸಿದ್ದ ಇಂಟರ್ನ್ಯಾಷನಲ್ ಫಿಲಂ ಫೆಸ್ಟಿವಲ್ ಆಫ್ ತಿರುಪತಿ ಇಲ್ಲಿ ಅತ್ಯುತ್ತಮ ಕಥೆ. ಅತ್ಯುತ್ತಮ ಗೀತರಚನೆ ಅತ್ಯುತ್ತಮ ಖಳನಟ ಹೀಗೆ ಮೂರು ವಿಭಾಗಗಳಲ್ಲಿ ಅಡವಿ ಪ್ರಶಸ್ತಿಗಳನ್ನು ಪಡೆದುಕೊಂಡಿದೆ. ಅಡವಿ ಚಿತ್ರವು ವಿಭಿನ್ನ ಕಥಾಹಂದರವನ್ನು ಹೊಂದಿದ್ದು ಪರಿಸರ ರಕ್ಷಣೆ ಹಾಗೂ ಆದಿವಾಸಿಗಳ ಬದುಕಿನ ಮೂಲ ಭೂತ ಸಮಸ್ಯೆ ಹಾಗೂ ಸಂವಿಧಾನದ ಹರಿವು ಮೂಡಿಸುವುದರ ಬಗ್ಗೆ ದ್ವನಿ ಎತ್ತಿದ್ದು ಚಿತ್ರದ ಹಾಡುಗಳು ಹಾಗೂ ತುಣುಕುಗಳು ಸಾಮಾಜಿಕ ಜಾಲತಾಣದಲ್ಲಿ 90 ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದು ಚಿತ್ರ ರಸಿಕರು. ಪರಿಸರ ಪ್ರೇಮಿಗಳು ಚಿಂತಕರು ಸಾಹಿತಿಗಳು ಪ್ರಗತಿಪರ ರನ್ನು ದಿನದಿಂದ ದಿನಕ್ಕೆ ಸೆಳೆಯುತ್ತಿದೆ. ಇದೀಗ ಇಂಟರ್ನ್ಯಾಷನಲ್ ಫಿಲಂ ಫೆಸ್ಟಿವಲ್ ನಲ್ಲಿ ಅತ್ಯುತ್ತಮ ಕಥೆ ಪ್ರಶಸ್ತಿಯನ್ನೂ ತನ್ನದಾಗಿಸಿಕೊಂಡಿದೆ. ಟೈಗರ್ ನಾಗ್ ಅವರು ಅಡವಿ ಕಾದಂಬರಿ ಬರೆದು ಕರ್ನಾಟಕ ರಾಜ್ಯದ ಗೃಹ ಮಂತ್ರಿಗಳು ಹಾಗೂ ಕೊರಟಗೆರೆ ಕ್ಷೇತ್ರದ…