Subscribe to Updates
Get the latest creative news from FooBar about art, design and business.
- ಕೋಡಿಗೇನಹಳ್ಳಿ: ಗ್ರಾಮೀಣ ಭಾಗದಲ್ಲೂ ಔಷಧ ಅಂಗಡಿಗಳು ಬಂದ್: ಬೇಡಿಕೆಗಳೇನು?
- ಸರ್ಕಾರಿ ಗೋಮಾಳ ತೆರವಿಗೆ ಗ್ರಾಮಸ್ಥರ ಆಗ್ರಹ: 4.28 ಎಕರೆ ಬದಲು 18.27 ಎಕರೆ ಗೋಮಾಳ ಅಕ್ರಮ ಖಾತೆ ಆರೋಪ
- ಕೊರಟಗೆರೆ: ದ್ವಿಚಕ್ರ ವಾಹನದ ಮೇಲೆ ಬಿದ್ದ ಗೂಡ್ಸ್ ವಾಹನ: ಸವಾರ ಸಾವು
- ತುಮಕೂರು ಜಿಲ್ಲೆಯ ಅಸ್ತಿತ್ವ ಕಳೆಯಬೇಡಿ: ಬೆಂಗಳೂರು ಉತ್ತರ ಜಿಲ್ಲೆ ಪ್ರಸ್ತಾಪಕ್ಕೆ ಬಿಜೆಪಿ ವಿರೋಧ
- ತುಮಕೂರು: ಅಕ್ರಮ ಶೆಡ್ ನಿರ್ಮಿಸಲು ಹೊರಟಿರುವವರನ್ನು ತೆರವುಗೊಳಿಸಲು ಮನವಿ
- ಕುಣಿಗಲ್: ಗ್ರಾಪಂ ಸ್ವತ್ತಿನಲ್ಲಿ ಅಕ್ರಮ ಮಳಿಗೆ: ಒತ್ತುವರಿ ಜಾಗದಲ್ಲಿ ಗ್ರಂಥಾಲಯಕ್ಕೆ ದಲಿತ ಸಂಘಟನೆ ಆಗ್ರಹ
- ತುಮಕೂರು: ಕಂಪ್ಯೂಟರ್ ಡಿಟಿಪಿ ತರಬೇತಿಗೆ ಅರ್ಜಿ ಆಹ್ವಾನ
- ಪ್ರಥಮ ಬಿ.ಸಿ.ಎ. ಪದವಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
Author: admin
ರೂಪದರ್ಶಿ ದಿವ್ಯಾ ಪಹುಜಾಳನ್ನು ಕೊಂದು ಶವವನ್ನು ನದಿಗೆ ಎಸೆದ ವ್ಯಕ್ತಿಯನ್ನು ಪಶ್ಚಿಮ ಬಂಗಾಳದಲ್ಲಿ ಬಂಧಿಸಲಾಗಿದೆ. ಕೋಲ್ಕತ್ತಾ ಪೊಲೀಸರು ಬಾಲರಾಜ್ ಗಿಲ್ ಅವರನ್ನು ಬಂಧಿಸಿದ್ದಾರೆ. ಪ್ರಕರಣದ ಮತ್ತೊಬ್ಬ ಆರೋಪಿ ರವಿ ಬಾಂದ್ರಾ ಜೊತೆಗೆ ವಿಮಾನದಲ್ಲಿ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಾಗ ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಬಾಲರಾಜ್ ಸಿಕ್ಕಿಬಿದ್ದಿದ್ದಾನೆ. ಜೊತೆಗಿದ್ದ ರವಿ ಪಾರಾಗಿದ್ದಾನೆ. ಈ ವರ್ಷದ ಜನವರಿ 2 ರಂದು, ದಿವ್ಯಾಳನ್ನು ಐದು ಜನರು ಹೋಟೆಲ್ ಸಿಟಿ ಪಾಯಿಂಟ್ ಗೆ ಕರೆತಂದರು ಮತ್ತು ಮನೆಯ ನಂ. 111 ರಲ್ಲಿ ಗುಂಡಿಕ್ಕಿ ಕೊಂದರು. ಬಳಿಕ ದಿವ್ಯಾಳ ಶವವನ್ನು ನದಿಗೆ ಎಸೆದಿದ್ದಾರೆ. ಇದುವರೆಗೂ ಪೊಲೀಸರಿಗೆ ಮೃತದೇಹ ಪತ್ತೆಯಾಗಿಲ್ಲ. ಮೃತದೇಹ ಪತ್ತೆಗೆ ಪ್ರಯತ್ನ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪೊಲೀಸರು ನೀಡಿದ ಮಾಹಿತಿಯ ಪ್ರಕಾರ, ದಿವ್ಯಾ ಅವರ ಫೋನ್ ನಲ್ಲಿ ಅಭಿಜಿತ್ ಸಿಂಗ್ ಅವರ ಕೆಲವು ಅಶ್ಲೀಲ ವೀಡಿಯೊಗಳಿವೆ. ಅದನ್ನು ತೆಗೆಯುವಂತೆ ಹೇಳಿದರೂ ದಿವ್ಯಾ ಪಾಲಿಸಲಿಲ್ಲ. ಅಭಿಜಿತ್ ಗೆ ನಿರಂತರವಾಗಿ ಬೆದರಿಕೆ ಹಾಕಲಾಗಿತ್ತು. ನಂತರ ಅಭಿಜಿತ್ ಮತ್ತು ಅವನ ಸ್ನೇಹಿತರು…
ನೂತನ ಶಿಕ್ಷಣ ನೀತಿ ವಿರೋಧಿಸಿ ಇಂದು ದೇಶಾದ್ಯಂತ ಜಂಟಿ ವಿದ್ಯಾರ್ಥಿ ಸಂಘಟನೆಗಳಿಂದ ಪ್ರತಿಭಟನೆ ನಡೆಯಲಿದೆ. ದೆಹಲಿಯ ಜಂತರ್ ಮಂದರ್ ನಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆಯಲ್ಲಿ ವಿವಿಧ ವಿದ್ಯಾರ್ಥಿ ಸಂಘಟನೆಗಳ ರಾಷ್ಟ್ರೀಯ ಮುಖಂಡರು ಭಾಗವಹಿಸಲಿದ್ದಾರೆ. ದೇಶದ ವಿವಿಧ ಭಾಗಗಳ ವಿದ್ಯಾರ್ಥಿಗಳೂ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಶಿಕ್ಷಣವನ್ನು ಉಳಿಸಿ, NEP ಅನ್ನು ತಿರಸ್ಕರಿಸಿ. ಪ್ರತಿಭಟನೆಯಲ್ಲಿ ಭಾರತ ಉಳಿಸಿ ಮತ್ತು ಬಿಜೆಪಿಯನ್ನು ತಿರಸ್ಕರಿಸಿ ಎಂಬ ಘೋಷಣೆಗಳನ್ನು ಕೂಗಲಾಗುವುದು. ಹೊಸ ಶಿಕ್ಷಣ ನೀತಿಯು ಶಿಕ್ಷಣ ಕ್ಷೇತ್ರ ಮತ್ತು ವಿದ್ಯಾರ್ಥಿಗಳ ವಿರುದ್ಧದ ಕ್ರಮವಾಗಿದೆ ಎಂದು ಸಂಘಟನೆಗಳು ಆರೋಪಿಸಿವೆ. ಅಖಿಲ ಭಾರತ ವಿದ್ಯಾರ್ಥಿಗಳ ಸಂಘ, ಎಐಎಸ್ ಎಫ್, ಎಸ್ ಎಫ್ ಐ, ಎನ್ ಎಸ್ ಯುಐ, ಡಿಎಂಕೆ ವಿದ್ಯಾರ್ಥಿ ವಿಭಾಗ ಮತ್ತು ಬುಡಕಟ್ಟು ವಿದ್ಯಾರ್ಥಿಗಳ ಒಕ್ಕೂಟದಂತಹ ಸುಮಾರು 14 ಸಂಘಟನೆಗಳು ಭಾಗವಹಿಸಲಿವೆ.
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ನೆಲವಾಗಲು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿ ಎಂಟು ಜನ ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥ ಮಕ್ಕಳನ್ನು ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ವಿದ್ಯಾರ್ಥಿಗಳು ಮಧ್ಯಾಹ್ನದ ಬಿಸಿ ಊಟ ಸೇವಿಸಿ, ವಸತಿ ನಿಲಯಕ್ಕೆ ತೆರಳಿದ್ದಾರೆ. ಅಲ್ಲಿ ಕೆಲ ವಿದ್ಯಾರ್ಥಿಗಳಿಗೆ ವಾಂತಿ, ಹೊಟ್ಟೆ ನೋವಿನಿಂದ ಬಳಲಿದ್ದಾರೆ. ತಕ್ಷಣ ವಸತಿ ನಿಲಯದ ವಾರ್ಡನ್ ವಿದ್ಯಾರ್ಥಿಗಳನ್ನ ಹೊಸಕೋಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ವಿದ್ಯಾರ್ಥಿಗಳು ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾರೆ. ಪ್ರೌಡಶಾಲೆಯಲ್ಲಿ ನೀಡಿದ ಕೊಳೆತ ಮೊಟ್ಟೆಯಿಂದ ಈ ರೀತಿಯಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಕಳೆದೆರಡು ದಿನಗಳಿಂದ ವಿದ್ಯಾರ್ಥಿಗಳಿಗೆ ಕೊಳೆತ ಮೊಟ್ಟೆ ವಿತರಿಸುತ್ತಿರುವ ಆರೋಪ ಕೇಳಿಬಂದಿದೆ.
ಬೆಂಗಳೂರು: ರಾಮಮಂದಿರ ಉದ್ಘಾಟನೆ ಮತ್ತು ರಾಮನ ಮೂರ್ತಿಯ ಪ್ರತಿಷ್ಠಾಪನೆಯ ವಿಶೇಷ ಸಂದರ್ಭದಲ್ಲಿ ನಾವಿದ್ದೇವೆ. ಕಾಂಗ್ರೆಸ್ ಮುಖಂಡರಿಗೆ ಆಹ್ವಾನ ಇದ್ದರೂ ತಾವು ಹೋಗುವುದಿಲ್ಲ ಎಂಬ ತೀರ್ಮಾನ ಮಾಡಿದ್ದು ಅತ್ಯಂತ ದುರ್ದೈವದ ಸಂಗತಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ನಗರದ ಖಾಸಗಿ ಹೋಟೆಲ್ ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಲೋಕಸಭಾ ಚುನಾವಣೆ 2024ರ ಸಿದ್ಧತಾ ಸಭೆಯನ್ನು ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ ಕಾಂಗ್ರೆಸ್ ಪಕ್ಷದ ನಿಲುವನ್ನು ನಾನು ಖಂಡಿಸುತ್ತೇನೆ ಎಂದು ತಿಳಿಸಿದರು. ರಾಮರಾಜ್ಯ, ರಾಮನ ಕನಸು ನನಸು ಆಗಬೇಕಿದೆ. ಆದರೆ ಕೋಟ್ಯಂತರ ಹಿಂದೂಗಳ ಭಾವನೆಗೆ ಧಕ್ಕೆ ತರುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಮಾಡುತ್ತಿದೆ. ಇದು ಅಕ್ಷಮ್ಯ ಅಪರಾಧ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಕಾಂಗ್ರೆಸ್ಸಿಗರು ಯಾಕಾಗಿ ರಾಮಮಂದಿರ ಉದ್ಘಾಟನೆಗೆ ಹೋಗುತ್ತಿಲ್ಲ ಎಂದು ಸ್ಪಷ್ಟಪಡಿಸಲಿ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯ ಸೇರಿ ಒಂದು ಒಳ್ಳೆಯ ಕೆಲಸಕ್ಕೆ ಕಲ್ಲು…
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಯೋಧ್ಯೆ ರಾಮ ಮಂದಿರದ ಶಂಕುಸ್ಥಾಪನೆ ಸಮಾರಂಭವನ್ನು ರಾಷ್ಟ್ರೀಯ ಹಬ್ಬವನ್ನಾಗಿ ಮಾಡಬೇಕು ಎಂದು ಸಲಹೆ ನೀಡಿದರು. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಜನವರಿ 22 ರಂದು ಉತ್ತರ ಪ್ರದೇಶದ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿದ್ದಾರೆ. ಎಲ್ಲಾ ಸರ್ಕಾರಿ ಕಟ್ಟಡಗಳನ್ನು ಅಲಂಕರಿಸುವಂತೆಯೂ ನಿರ್ದೇಶನ ನೀಡಲಾಯಿತು. ಜನವರಿ 14ರಿಂದ ಸ್ವಚ್ಛತಾ ಶಿಬಿರ ಆರಂಭವಾಗಲಿದೆ ಎಂದು ಮುಖ್ಯಮಂತ್ರಿಗಳು ಮಾಹಿತಿ ನೀಡಿದರು. ಸಿದ್ಧತೆಗಳನ್ನು ಪರಿಶೀಲಿಸಲು ಆದಿತ್ಯನಾಥ್ ನಿನ್ನೆ ಅಯೋಧ್ಯೆಗೆ ಬಂದಿದ್ದರು. ಸ್ವಚ್ಛತೆ ಸೇರಿದಂತೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದಾರೆ. ವಿವಿಐಪಿಗಳ ತಂಗುದಾಣವನ್ನು ಮೊದಲೇ ನಿರ್ಧರಿಸಿ ಕಾರ್ಯಕ್ರಮ ಸುಗಮವಾಗಿ ನಡೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಯೋಗಿ ನಿರ್ದೇಶನ ನೀಡಿದರು. ಜನವರಿ 22 ರಂದು ನಡೆಯುವ ಸಮರ್ಪಣಾ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಇತರರು ಭಾಗವಹಿಸಲಿದ್ದಾರೆ. ಉದ್ಯಮದ ಪ್ರಮುಖರು, ಚಲನಚಿತ್ರ ತಾರೆಯರು ಸೇರಿದಂತೆ ಸಾಮಾಜಿಕ ಮತ್ತು ಸಾಂಸ್ಕೃತಿಕ ಕ್ಷೇತ್ರಗಳ 7000 ಕ್ಕೂ ಹೆಚ್ಚು ಜನರು ಪಾಲ್ಗೊಳ್ಳಲಿದ್ದಾರೆ ಎಂದು ರಾಮ ಜನ್ಮಭೂಮಿ ಟ್ರಸ್ಟ್…
ಲೋಕಸಭಾ ಚುನಾವಣೆ ಗೆಲ್ಲಲು ನಾವೆಲ್ಲರೂ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು. ರಾಹುಲ್ ಗಾಂಧಿ ಅವರು 14 ನೇ ತಾರೀಖಿನಿಂದ 14 ರಾಜ್ಯಗಳಲ್ಲಿ 85 ಜಿಲ್ಲೆಗಳಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರಾ ಕೈಗೊಳ್ಳಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಚುನಾವಣೆಯನ್ನು ನಾವು ಗೆಲ್ಲಲೇಬೇಕು. ಇಷ್ಟೆಲ್ಲಾ ಮಾಡಿಯೂ ನಾವು ಗೆಲ್ಲದೆ ಹೋದರೆ ಅದು ನಮಗೆ ಹಿನ್ನಡೆಯಾಗಲಿದೆ. 28 ಕ್ಕೆ 28 ಸೀಟನ್ನು ಗೆಲ್ಲಬೇಕು. ಕನಿಷ್ಠ 26 ಸೀಟು ಗೆಲ್ಲಬೇಕು. ಜನರ ನಾಡಿ ಮಿಡಿತ ನಮ್ಮ ಪರವಾಗಿರುವುದರಿಂದ ಅಪಪ್ರಚಾರದಿಂದ ನಾವು ಯಾರೂ ಹತಾಶರಾಗಬಾರದು. ಸಕಾರಾತ್ಮಕವಾಗಿರಬೇಕು ಎಂದು ಸಿಎಂ ಸಿದ್ದರಾಮಯ್ಯ ಕಿವಿಮಾತು ಹೇಳಿದರು. ವಿಧಾನಸಭೆಯಲ್ಲಿಯೂ ಒಂದು ಸಮಿತಿ ಇರಲಿದ್ದು, ರಾಜ್ಯಮಟ್ಟದಲ್ಲಿ ಅಧ್ಯಕ್ಷರು, ಐದು ಜನ ಉಪಾಧ್ಯಕ್ಷರು ಇರಲಿದ್ದಾರೆ. ಅಧ್ಯಕ್ಷರಾದವರಿಗೆ ಸಂಪುಟ ದರ್ಜೆ ಸ್ಥಾನಮಾನ ಇರಲಿದೆ. ಉಪಾಧ್ಯಕ್ಷರಿಗೆ ರಾಜ್ಯ ಸಚಿವ ಸ್ಥಾನ ನೀಡಲಾಗುವುದು. ಸುಮಾರು 31 ಜನ ಸದಸ್ಯರು ಇರಲಿದ್ದು ಇವರೆಲ್ಲರೂ ಕಾರ್ಯಕರ್ತರು. 31 ಜಿಲ್ಲಾ ಮಟ್ಟದಲ್ಲಿ ಒಬ್ಬ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಹಾಗೂ ಸದಸ್ಯರು ಇರಲಿದ್ದಾರೆ. ಅವರಿಗೆ ಕಚೇರಿ ವ್ಯವಸ್ಥೆ…
ಅಯೋಧ್ಯೆಯಲ್ಲಿ ರಾಮಮಂದಿರ ಸಮರ್ಪಣಾ ಸಮಾರಂಭಕ್ಕೂ ಮುನ್ನ ಬಿಜೆಪಿ ದೇಶದಾದ್ಯಂತ ದರ್ಗಾ ಮತ್ತು ಮಸೀದಿಗಳಲ್ಲಿ ದೀಪ ಬೆಳಗಲಿದೆ. ಬಿಜೆಪಿಯ ಅಲ್ಪಸಂಖ್ಯಾತ ಮೋರ್ಚಾ ದೇಶಾದ್ಯಂತ 1,200 ದರ್ಗಾಗಳು ಮತ್ತು ಮಸೀದಿಗಳಲ್ಲಿ ಮಣ್ಣಿನ ದೀಪಗಳನ್ನು ಬೆಳಗಿಸುವುದಾಗಿ ಘೋಷಿಸಿದೆ. ದೀಪೋತ್ಸವ ಎಂಬ ಹೆಸರಿನ ಕಾರ್ಯಕ್ರಮವನ್ನು ಜನವರಿ 12 ರಿಂದ 22 ರವರೆಗೆ ಆಯೋಜಿಸಲಾಗಿದೆ. ‘ದೆಹಲಿಯೊಂದರಲ್ಲೇ 36 ಕೇಂದ್ರಗಳನ್ನು ಆಯ್ಕೆ ಮಾಡಲಾಗಿದೆ. ಸಣ್ಣ ಮತ್ತು ದೊಡ್ಡ ಮಸೀದಿಗಳು, ದರ್ಗಾಗಳು ಮತ್ತು ಇತರ ಮುಸ್ಲಿಂ ಪೂಜಾ ಸ್ಥಳಗಳು ಸೇರಿದಂತೆ 1200 ಸ್ಥಳಗಳನ್ನು ಆಯ್ಕೆ ಮಾಡಲಾಗಿದೆ. ಇಲ್ಲಿ ದೀಪ ಬೆಳಗಲಾಗುವುದು. ಇದು ದೆಹಲಿ ಜಮಾ ಮಸೀದಿ ಮತ್ತು ನಿಜಾಮುದ್ದೀನ್ ದರ್ಗಾವನ್ನು ಒಳಗೊಂಡಿರುತ್ತದೆ’ – ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಸಂಚಾಲಕ ಯಾಸರ್ ಜೀಲಾನಿ ಹೇಳಿದರು. ಡಿಸೆಂಬರ್ 30 ರಂದು ಅಯೋಧ್ಯೆಗೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ರಾಮ ಮಂದಿರ ಲೋಕಾರ್ಪಣೆ ಸಮಾರಂಭಕ್ಕೆ ಸಂಬಂಧಿಸಿದಂತೆ ದೇಶದ ಎಲ್ಲಾ ಮನೆಗಳಲ್ಲಿ ದೀಪಗಳನ್ನು ಬೆಳಗಿಸುವಂತೆ ಕರೆ ನೀಡಿದ್ದರು. ಜನವರಿ 14 ರಿಂದ 22 ರವರೆಗೆ…
ಬೈಕ್ ಮತ್ತು ಸರ್ಕಾರಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಬಸ್ ಬೆಂಕಿಗಾಹುತಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಸಿಂದಗಿ ತಾಲೂಕಿನ ಗಬಸಾವಳಗಿ ಬಳಿ ಈ ಘಟನೆ ನಡೆದಿದೆ. ಸಿಂದಗಿಯಿಂದ ಮೋರಟಗಿಗೆ ತೆರಳುತ್ತಿದ್ದ ಬೈಕ್ ಸವಾರನಿಗೆ ಎದುರಿನಿಂದ ಬಂದ ಸರ್ಕಾರಿ ಬಸ್ ಡಿಕ್ಕಿ ಹೊಡೆದಿದ್ದು ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ, ಬಸ್ ಗೆ ಬೆಂಕಿ ತಗುಲಿದ್ದು ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಬೆಂಕಿ ಹೊತ್ತಿಕೊಂಡ ಬೆನ್ನಲ್ಲೆ ಪ್ರಯಾಣಿಕರು ಬಸ್ ನಿಂದ ಇಳಿದಿದ್ದು ಅಪಾಯದಿಂದ ಪಾರಾಗಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಬರುವಷ್ಟರಲ್ಲಿ ಬಸ್ ಬೆಂಕಿಯಿಂದ ಸುಟ್ಟು ಕರಕಲಾಗಿದ್ದು, ಸಿಂದಗಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರಾಜ್ಯದ 4 ಕೋಟಿ 30 ಲಕ್ಷ ಕನ್ನಡಿಗರಿಗೆ ಸರ್ಕಾರದ ಗ್ಯಾರಂಟಿಯ ಫಲ ಪ್ರತೀ ದಿನ-ಪ್ರತೀ ತಿಂಗಳು ತಲುಪುತ್ತಿದೆ. ಈ ಫಲಾನುಭವಿಗಳಲ್ಲಿ BJPಯವರೇ ಹೆಚ್ಚಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. KPCC ವತಿಯಿಂದ ಇಂದಿರಾಗಾಂಧಿ ಭವನದ ಭಾರತ್ ಜೋಡೋ ಸಭಾಂಗಣದಲ್ಲಿ ನಡೆದ ಪಕ್ಷದ ಮುಖಂಡರ ಮಧ್ಯಾಹ್ನದ ಸಭೆಯಲ್ಲಿ ಮಾತನಾಡಿದರು. ಪಕ್ಷದ ಕಾರ್ಯಕರ್ತರೇ ನಮ್ಮ ಬೆನ್ನೆಲುಬು. ನಿಮ್ಮ ಹೋರಾಟದಿಂದ ಪಕ್ಷ ಅಧಿಕಾರಕ್ಕೆ ಬಂದಿದೆ. ವಾಮಮಾರ್ಗದಲ್ಲಿ ಮೂರೂವರೆ ವರ್ಷ ಅಧಿಕಾರ ನಡೆಸಿದ ಬಿಜೆಪಿ ಮಾಡಬಾರದ್ದನ್ನೆಲ್ಲಾ ಮಾಡಿ ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿದ್ದಾರೆ. ನೀರಾವರಿ ಇಲಾಖೆಯೊಂದರಲ್ಲೇ 13 ಸಾವಿರ ಕೋಟಿಗೂ ಅಧಿಕ ಬಿಲ್ ಬಾಕಿ ಉಳಿಸಿದ್ದಾರೆ. ಲೋಕೋಪಯೋಗಿ ಇಲಾಖೆಯಲ್ಲಿ 9000 ಕೋಟಿ ಬಿಲ್ ಬಾಕಿ ಉಳಿಸಿದ್ದಾರೆ, ಸಣ್ಣನೀರಾವರಿ ಇಲಾಖೆಯಲ್ಲಿ 2000 ಕೋಟಿ ರೂಪಾಯಿ ಬಿಲ್ ಬಾಕಿ ಉಳಿಸಿದ್ದಾರೆ, ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ 6000 ಕೋಟಿ ರೂಪಾಯಿ ಬಿಲ್ ಬಾಕಿ ಉಳಿಸಿದ್ದಾರೆ, ಬೆಂಗಳೂರು ನಗರ 5000 ಕೋಟಿ ಬಿಲ್ ಬಾಕಿ ಉಳಿಸಿದ್ದಾರೆ. ಹೀಗೆ ರಾಜ್ಯವನ್ನು, ರಾಜ್ಯದ ಆರ್ಥಿಕತೆಯನ್ನು ಹಾಳು…
ಅಯೋಧ್ಯೆಯಲ್ಲಿ ಜನವರಿ 22ರಂದು ನಡೆಯಲಿರುವ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಹೋಗದಿರಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮದ ಆಹ್ವಾನವನ್ನು ಕಾಂಗ್ರೆಸ್ ಗೌರವಯುತವಾಗಿ ತಿರಸ್ಕರಿಸಿದೆ ಎನ್ನಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಹಾಗೂ ಲೋಕಸಭೆಯಲ್ಲಿ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಕಾರ್ಯಕ್ರಮಕ್ಕೆ ಹೋಗದಿರಲು ನಿರ್ಧರಿಸಿದ್ದಾರೆ ಇದೊಂದು ಆರ್ಎಸ್ಎಸ್ ಹಾಗೂ ಬಿಜೆಪಿಯ ಕಾರ್ಯಕ್ರಮವಾಗಿದ್ದು, ಹೀಗಾಗಿ ಇವರು ಪಾಲ್ಗೊಳ್ಳುವುದಿಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮ ದೇಶದಲ್ಲಿ ಲಕ್ಷಾಂತರ ಜನರು ರಾಮನನ್ನು ಪೂಜಿಸುತ್ತಾರೆ. ಧರ್ಮ ಎಂಬುದು ವೈಯಕ್ತಿಕ ವಿಷಯವಾಗಿದೆ. ಆದರೆ ಆರ್ ಎಸ್ ಎ ಸ್ ಮತ್ತು ಬಿಜೆಪಿಯವರು ಬಹಳ ಹಿಂದಿನಿಂದಲೂ ಅಯೋಧ್ಯೆಯಲ್ಲಿ ಮಂದಿರವನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ. ಬಿಜೆಪಿ ಮತ್ತು ಆರ್ ಎಸ್ ಎಸ್ ನಾಯಕರಿಂದ ಆಗುತ್ತಿರುವ ಈ ದೇವಾಲಯದ ಉದ್ಘಾಟನೆಯನ್ನು ಚುನಾವಣಾ ಲಾಭಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ ಎಂಬುದು ಬಹಳ ಸ್ಪಷ್ಟವಾಗಿದೆ. 2019ರ…