Subscribe to Updates
Get the latest creative news from FooBar about art, design and business.
- ಕೋಡಿಗೇನಹಳ್ಳಿ: ಗ್ರಾಮೀಣ ಭಾಗದಲ್ಲೂ ಔಷಧ ಅಂಗಡಿಗಳು ಬಂದ್: ಬೇಡಿಕೆಗಳೇನು?
- ಸರ್ಕಾರಿ ಗೋಮಾಳ ತೆರವಿಗೆ ಗ್ರಾಮಸ್ಥರ ಆಗ್ರಹ: 4.28 ಎಕರೆ ಬದಲು 18.27 ಎಕರೆ ಗೋಮಾಳ ಅಕ್ರಮ ಖಾತೆ ಆರೋಪ
- ಕೊರಟಗೆರೆ: ದ್ವಿಚಕ್ರ ವಾಹನದ ಮೇಲೆ ಬಿದ್ದ ಗೂಡ್ಸ್ ವಾಹನ: ಸವಾರ ಸಾವು
- ತುಮಕೂರು ಜಿಲ್ಲೆಯ ಅಸ್ತಿತ್ವ ಕಳೆಯಬೇಡಿ: ಬೆಂಗಳೂರು ಉತ್ತರ ಜಿಲ್ಲೆ ಪ್ರಸ್ತಾಪಕ್ಕೆ ಬಿಜೆಪಿ ವಿರೋಧ
- ತುಮಕೂರು: ಅಕ್ರಮ ಶೆಡ್ ನಿರ್ಮಿಸಲು ಹೊರಟಿರುವವರನ್ನು ತೆರವುಗೊಳಿಸಲು ಮನವಿ
- ಕುಣಿಗಲ್: ಗ್ರಾಪಂ ಸ್ವತ್ತಿನಲ್ಲಿ ಅಕ್ರಮ ಮಳಿಗೆ: ಒತ್ತುವರಿ ಜಾಗದಲ್ಲಿ ಗ್ರಂಥಾಲಯಕ್ಕೆ ದಲಿತ ಸಂಘಟನೆ ಆಗ್ರಹ
- ತುಮಕೂರು: ಕಂಪ್ಯೂಟರ್ ಡಿಟಿಪಿ ತರಬೇತಿಗೆ ಅರ್ಜಿ ಆಹ್ವಾನ
- ಪ್ರಥಮ ಬಿ.ಸಿ.ಎ. ಪದವಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
Author: admin
ರಾಜ್ಯದಲ್ಲಿ ಮೂರು ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಠಿ ವಿಚಾರಕ್ಕೆ ಸಂಬಂಧಿಸಿದಂತೆ ಇದ್ದ ಗೊಂದಲಕ್ಕೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ತೆರೆ ಎಳೆದಿದ್ದಾರೆ. ಈ ಕುರಿತು ಮಾತನಾಡಿರುವ ರಣದೀಪ್ ಸಿಂಗ್ ಸುರ್ಜೇವಾಲ, ಡಿಸಿಎಂ ಸೃಷ್ಠಿ ವಿಷಯ ಸಿನಿಮೀಯ ರೀತಿಯಲ್ಲಿ ಚರ್ಚೆಯಾಗುತ್ತಿದೆ. ಲೋಕಸಭೆ ಚುನಾವಣೆಗೆ ನಾವು ತಯಾರಿ ನಡೆಸುತ್ತಿದ್ದೇವೆ. ಮೂರು ಡಿಸಿಎಂ ಹುದ್ದೆ ಸೃಷ್ಠಿ ಮಾಡುವ ಯಾವುದೇ ಪ್ರಸ್ತಾಪವಿಲ್ಲ ಎಂದು ಸ್ಪಷ್ಟಪಡಿಸಿದರು. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಚನೆ ಮಾಡಲಾಗಿದೆ. ರಾಜ್ಯ ,ಜಿಲ್ಲಾ, ತಾಲೂಕು ವಿಧಾನಸಭಾ ಕ್ಷೇತ್ರದ ಮಟ್ಟದಲ್ಲಿ ಸಮಿತಿ ರಚನೆ ಮಾಡಲಾಗಿದೆ. ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಟಾನ ಹಿನ್ನೆಲೆ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.
ಮಹಾರಾಷ್ಟ್ರ ಸರ್ಕಾರ ರಾಮ ಮಂದಿರಕ್ಕೆ 11 ಕೋಟಿ ರೂಪಾಯಿ ದೇಣಿಗೆ ನೀಡಿದೆ. ರಾಮಕ್ಷೇತ್ರ ಟ್ರಸ್ಟ್ಗೆ ಚೆಕ್ ಹಸ್ತಾಂತರಿಸಲಾಗಿದೆ ಎಂದು ಕೈಗಾರಿಕಾ ಸಚಿವ ಉದಯ್ ಸಾಮಂತ್ ತಿಳಿಸಿದ್ದಾರೆ. ಮಹಾರಾಷ್ಟ್ರದ ಜನರಿಗಾಗಿ ಅಯೋಧ್ಯೆಗೆ ಬಂದಿದ್ದೇವೆ ಎಂದರು. ದೇವಾಲಯದ ಮುಂದಿನ ನಿರ್ಮಾಣ ಕಾರ್ಯಕ್ಕೆ ರಾಜ್ಯದ ಜನತೆಯ ಕೊಡುಗೆಯಾಗಿ ಹಣವನ್ನು ನೀಡಿದರು. ಉದಯ್ ಸಾಮಂತ್ 11 ಕೋಟಿ ಚೆಕ್ ಅನ್ನು ದೇವಸ್ಥಾನದ ಟ್ರಸ್ಟ್ ಗೆ ಹಸ್ತಾಂತರಿಸಿದರು. ಇದು ಪೂರ್ಣಗೊಂಡ ಬಳಿಕವೇ ಮಾಧ್ಯಮಗಳಿಗೆ ದೇಣಿಗೆ ಕುರಿತು ಸ್ಪಷ್ಟನೆ ನೀಡಿದ್ದಾರೆ. ಚೆಕ್ ಹಸ್ತಾಂತರ ಸಮಾರಂಭದಲ್ಲಿ ಏಕನಾಥ್ ಶಿಂಧೆ ಅವರ ಪುತ್ರ ಹಾಗೂ ಸಂಸದ ಶ್ರೀಕಾಂತ್ ಶಿಂಧೆ ಹಾಗೂ ಇತರ ಮುಖಂಡರು ಭಾಗವಹಿಸಿದ್ದರು. ರಾಮಜನ್ಮಭೂಮಿ ತೀರ್ಥ ದೇವಸ್ಥಾನ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಅವರು ರಾಮ ಮಂದಿರಕ್ಕಾಗಿ ದೇಣಿಗೆ ನೀಡಿದ ಏಕನಾಥ್ ಶಿಂಧೆ ಅವರಿಗೆ ಧನ್ಯವಾದ ಅರ್ಪಿಸಿದರು. ರಾಮಮಂದಿರ ನಿರ್ಮಾಣಕ್ಕಾಗಿ ಇಷ್ಟು ದೊಡ್ಡ ಮೊತ್ತವನ್ನು ದೇಣಿಗೆಯಾಗಿ ನೀಡಿದ್ದಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಚಂಪತ್ ರೈ ಹೇಳಿದ್ದಾರೆ. ಚೆಕ್ ಅನ್ನು…
ತುಮಕೂರು: ಹಾಸ್ಟೆಲ್ ನಲ್ಲಿದ್ದ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ನಡೆದಿದೆ. ಈ ಹಿನ್ನೆಲೆಯಲ್ಲಿ ತುಮಕೂರಿನ ಸಮಾಜ ಕಲ್ಯಾಣ ಇಲಾಖೆ ಗ್ರೇಡ್ ಒನ್ ಸಹಾಯಕ ನಿರ್ದೇಶಕ ಶಿವಣ್ಣ ಹಾಗೂ ಹಾಸ್ಟೆಲ್ ವಾರ್ಡನ್ ನಿವೇದಿತಾ ಅವರನ್ನು ಅಮಾನತು ಮಾಡಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಭು ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ವಿದ್ಯಾರ್ಥಿ ನಿಲಯದಲ್ಲಿದ್ದ ಈ ಬಾಲಕಿಯು 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು. ನಾಲ್ಕೈದು ದಿನಗಳಿಂದ ಶಾಲೆಗೆ ಗೈರು ಹಾಜರು ಆಗಿದ್ದಳು. ಹೊಟ್ಟೆ ನೋವು ಕಾಣಿಸಿಕೊಂಡ ಆಕೆಯನ್ನು ಪೋಷಕರು ಆಸ್ಪತ್ರೆಗೆ ದಾಖಲಿಸಿದಾಗ ಆಕೆ ಗರ್ಭಿಣಿ ಆಗಿರುವುದು ಬೆಳಕಿಗೆ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಕ್ಷಣ ಕ್ರಮ ಕೈಗೊಂಡಿರುವ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವರು ಇಬ್ಬರು ಸಿಬ್ಬಂದಿಗಳನ್ನು ಅಮಾನತು ಮಾಡಿ ಆದೇಶ ಮಾಡಿದ್ದಾರೆ. ಬಾಲಕಿಯ ದೇಹದಲ್ಲಿ ಯಾವುದೇ ಅನುಮಾನ ಮೂಡುವಂತಿರಲಿಲ್ಲ. ಆಕೆ ಬೇರೆಯವರ ಜೊತೆ ಸಂಪರ್ಕದಲ್ಲಿರುವುದು ಕೂಡ ಗಮನಕ್ಕೆ ಬಂದಿರಲಿಲ್ಲ ಎಂದು ವಾರ್ಡನ್ ನಿವೇದಿತ ಅವರು ಅಧಿಕಾರಿಗಳ ಬಳಿ ಹೇಳಿಕೆ…
ವಿಜಯಪುರ: ಸರ್ಕಾರಿ ಬಸ್ ನಡಿಗೆ ಬಿದ್ದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ನಗರದ ಟಿಪ್ಪು ಸುಲ್ತಾನ್ ಸರ್ಕಲ್ ನಲ್ಲಿ ನಡೆದಿದೆ. ವಿಶ್ವನಾಥ ಶಂಕರಯ್ಯ (38) ಚಲಿಸುತ್ತಿದ್ದ ಬಸ್ ನಡಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಬಸ್ ಬರುತ್ತಿದ್ದಂತೆ ಕೈಯಲ್ಲಿದ್ದ ಮೊಬೈಲ್ ಎಸೆದು ಏಕಾಏಕಿ ಬಸ್ ನಡಿಗೆ ಬಿದಿದ್ದಾನೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವಿಶ್ವನಾಥ ಮೂಲತಃ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಮೂಲದವರು. ಆದ್ರೆ ಬಸ್ ಚಕ್ರಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಆತ್ಮಹತ್ಯೆ ಮಾಡಿಕೊಂಡ ಯುವಕನ ಕುಟುಂಬಸ್ಥರ ಮೊಬೈಲ್ ಸಂಖ್ಯೆ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಧಾನಸೌಧದ ಮುಂಭಾಗದಲ್ಲೇ ದಂಪತಿ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಇಂದು ನಡೆದಿದೆ. ಜೆಜೆ ನಗರದ ಶಾಯಿಸ್ತಾ ದಂಪತಿ ಆತ್ಮಹತ್ಯೆಗೆ ಯತ್ನಿಸಿದವರು. ಶಾಯಿಸ್ತಾ ಬ್ಯಾಂಕ್ ನಿಂದ ಸಾಲ ಪಡೆದಿದ್ದರು. ಸಾಲ ಪಾವತಿಸದ ಹಿನ್ನೆಲೆಯಲ್ಲಿ ಬ್ಯಾಂಕ್ ನವರು ಜಮೀನು ಹರಾಜು ಹಾಕಿದ್ದರು. ಇದರಿಂದ ಮನನೊಂದು ಶಾಯಿಸ್ತಾ ದಂಪತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸ್ಥಳದಲ್ಲಿದ್ದ ಪೊಲೀಸರು ಕೂಡಲೆ ದಂಪತಿಯನ್ನು ತಡೆದಿದ್ದಾರೆ. ಶಾಯಿಸ್ತಾ ಬಿತ್ತಿ ಪತ್ರಗಳನ್ನು ಹಿಡಿದುಕೊಂಡು ನಮ್ಮ ರಕ್ಷಣೆಗೆ ಯಾರೂ ಕೂಡ ಬಂದಿಲ್ಲ. ಬ್ಯಾಂಕ್ ನಿಂದ ಕಿರುಕುಳವಾಗಿದೆ. ನಮಗೆ ನ್ಯಾಯ ಬೇಕು. ನ್ಯಾಯ ಸಿಗುವವರೆಗೂ ಹೋಗುವುದಿಲ್ಲ. ಇಡೀ ಕುಟುಂಬ ಬೀದಿಗೆ ಬಂದಿದೆ. ನಮಗೆ ಸಾಕಷ್ಟು ಕಿರುಕುಳ ನೀಡಲಾಗಿದೆ ಎಂದು ಕೂಗಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ವೇಳೆ ಮಹಿಳಾ ಪೊಲೀಸರು ಶಾಯಿಸ್ತಾ ಅವರನ್ನು ತಡೆದು ಪೊಲೀಸ್ ವಾಹನದಲ್ಲಿ ಠಾಣೆಗೆ ಕರೆದೊಯ್ದಿದ್ದಾರೆ.
ಅಯೋಧ್ಯೆಯಲ್ಲಿ ಮಿನಿ ಇ-ಲಾಬಿಯೊಂದಿಗೆ ತನ್ನ 915 ನೇ ಶಾಖೆಯನ್ನು ತೆರೆದಿದೆ. ‘ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ’ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಅವರು ನೂತನ ಶಾಖೆಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ದೀಪ ಬೆಳಗಿಸಿ ಮಾತನಾಡಿದ ಬ್ಯಾಂಕಿನ ಎಂಡಿ ಮತ್ತು ಸಿಇಒ ಶ್ರೀಕೃಷ್ಣನ್ ಎಚ್, “ಜಾಗತಿಕ ಭೂಪಟದಲ್ಲಿ ವಿರಾಜಮಾನವಾಗಿರುವ ಪವಿತ್ರ ನಗರವಾದ ಅಯೋಧ್ಯೆಗೆ ಕಾಲಿಡಲು ನಾವು ಸಂತೋಷ ಪಡುತ್ತೇವೆ. ಇದೀಗ ವಿಶ್ವ ದರ್ಜೆಯ ಮೂಲಸೌಕರ್ಯದೊಂದಿಗೆ, ಅಯೋಧ್ಯೆಯು ಸಾಂಸ್ಕೃತಿಕ ಸಂರಕ್ಷಣೆಯ ಪರಿಪೂರ್ಣ ತಾಣವಾಗಿ ಹೊರಹೊಮ್ಮಿದೆ ಹಾಗೂ ಪ್ರಪಂಚದಾದ್ಯಂತ ಪ್ರವಾಸಿಗರನ್ನು ಆಕರ್ಷಿಸುತ್ತದೆ. 100 ವರ್ಷಗಳ ವಿಶ್ವಾಸಾರ್ಹ ಹಾಗೂ ಗ್ರಾಹಕಸ್ನೇಹಿ ಪರಂಪರೆಯನ್ನು ಹೊಂದಿರುವ ಕರ್ಣಾಟಕ ಬ್ಯಾಂಕ್, ಅಯೋಧ್ಯೆಯ ನಾಗರಿಕರಿಗೆ ಹಾಗೂ ಪ್ರವಾಸಿಗರಿಗೆ ಉತ್ಕೃಷ್ಟ ಬ್ಯಾಂಕಿಂಗ್ ಸೇವೆಗಳನ್ನು ನೀಡಲಿದೆ” ಎಂದು ನುಡಿದರು. ನೂತನ ಶಾಖೆಯ ಮಿನಿ ಇ-ಲಾಬಿಯನ್ನು ಉದ್ಘಾಟಿಸಿ ಮಾತನಾಡಿದ ಬ್ಯಾಂಕ್ ನ ಎಕ್ಸಿಕ್ಯೂಟಿವ್ ಡೈರೆಕ್ಟರ್ ಶೇಖರ್ ರಾವ್, “ಭಗವಾನ್ ಶ್ರೀರಾಮನ ಪವಿತ್ರ ಜನ್ಮಸ್ಥಳವಾದ ಅಯೋಧ್ಯೆಯಲ್ಲಿ ನಮ್ಮ ಬ್ಯಾಂಕಿನ ಹೊಸ ಶಾಖೆಯನ್ನು ಉದ್ಘಾಟಿಸಲು ನಾವು…
ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯ ಮನೆಯೊಂದರಲ್ಲಿ ಐವರು ಮಕ್ಕಳು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಇನ್ನಿಬ್ಬರ ಸ್ಥಿತಿ ಚಿಂತಾಜನಕವಾಗಿ ಆಸ್ಪತ್ರೆಗೆ ದಾಖಲಾಗಿದೆ. ರಾತ್ರಿ ವೇಳೆ ತಣ್ಣಗಾಗಲು ಒಲೆಯಲ್ಲಿ ಕಲ್ಲಿದ್ದಲು ಸುಟ್ಟದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಆಮ್ಲಜನಕದ ಕೊರತೆಯಿಂದ ಸಾವು ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಮ್ರೋಹ ಮೂಲದ ರಹೀಜುದ್ದೀನ್ ಎಂಬುವವರ ಮೂವರು ಮಕ್ಕಳು ಹಾಗೂ ಸಂಬಂಧಿಕರ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, ರಹೀಜುದ್ದೀನ್ ಅವರ ಪತ್ನಿ ಹಾಗೂ ಸಹೋದರನ ಸ್ಥಿತಿ ಚಿಂತಾಜನಕವಾಗಿದೆ.
ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯ ಮನೆಯೊಂದರಲ್ಲಿ ಐವರು ಮಕ್ಕಳು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಇನ್ನಿಬ್ಬರ ಸ್ಥಿತಿ ಚಿಂತಾಜನಕವಾಗಿ ಆಸ್ಪತ್ರೆಗೆ ದಾಖಲಾಗಿದೆ. ರಾತ್ರಿ ವೇಳೆ ತಣ್ಣಗಾಗಲು ಒಲೆಯಲ್ಲಿ ಕಲ್ಲಿದ್ದಲು ಸುಟ್ಟದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಆಮ್ಲಜನಕದ ಕೊರತೆಯಿಂದ ಸಾವು ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಮ್ರೋಹ ಮೂಲದ ರಹೀಜುದ್ದೀನ್ ಎಂಬುವವರ ಮೂವರು ಮಕ್ಕಳು ಹಾಗೂ ಸಂಬಂಧಿಕರ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, ರಹೀಜುದ್ದೀನ್ ಅವರ ಪತ್ನಿ ಹಾಗೂ ಸಹೋದರನ ಸ್ಥಿತಿ ಚಿಂತಾಜನಕವಾಗಿದೆ.
ಅಯೋಧ್ಯೆಯ ರಾಮಜನ್ಮಭೂಮಿ ದೇವಸ್ಥಾನದಲ್ಲಿ ಮೊದಲ ಚಿನ್ನದ ಬಾಗಿಲುಗಳನ್ನು ಸ್ಥಾಪಿಸಲಾಯಿತು. ಮಂಗಳವಾರ ಅಯೋಧ್ಯೆಯ ರಾಮಜನ್ಮಭೂಮಿ ದೇವಸ್ಥಾನದಲ್ಲಿ ಮೊದಲ ಚಿನ್ನದ ಬಾಗಿಲನ್ನು ಸ್ಥಾಪಿಸಲಾಯಿತು. ಈ ಬಾಗಿಲುಗಳನ್ನು ಹೈದರಾಬಾದ್ ನ ಅನುರಾಧ ಟಿಂಬರ್ ಇಂಟರ್ ನ್ಯಾಶನಲ್ ಕಂಪನಿ ತಯಾರಿಸಿದೆ. ಮುಂದಿನ 1000 ವರ್ಷಗಳವರೆಗೆ ಹಾಳಾಗದ ರೀತಿಯಲ್ಲಿ ಬಾಗಿಲುಗಳನ್ನು ನಿರ್ಮಿಸಲಾಗಿದೆ ಎಂದು ಸಂಸ್ಥೆಯ ಮಾಲೀಕ ಶರದ್ ಬಾಬು ತಿಳಿಸಿದ್ದಾರೆ. ರಾಮ ಮಂದಿರದಲ್ಲಿ ಪ್ರತಿಷ್ಠಾಪಿಸಲು 14 ಚಿನ್ನದ ಲೇಪಿತ ಬಾಗಿಲುಗಳನ್ನು ರಾಮ ಜನ್ಮಭೂಮಿಗೆ ತರಲಾಗಿದೆ. ಬಾಗಿಲುಗಳನ್ನು ನಾಗರ ಶೈಲಿಯಲ್ಲಿ ಮಾಡಲಾಗಿದೆ. ಈ ಬಾಗಿಲುಗಳನ್ನು ಜನವರಿ 15 ರಿಂದ ಅಳವಡಿಸಲಾಗುವುದು. ದೇವಸ್ಥಾನದ ಬಾಗಿಲುಗಳಿಗೆ ಮರವನ್ನು ಮಹಾರಾಷ್ಟ್ರದಿಂದ ತರಲಾಗಿತ್ತು. ಇದಕ್ಕಾಗಿ ವಿಶೇಷ ರೀತಿಯ ತೇಗವನ್ನು ಸಂಗ್ರಹಿಸಲಾಗಿದೆ. ಈ ಕೆಲಸವು ಅತ್ಯಂತ ಕಡಿಮೆ ಸಮಯದಲ್ಲಿ ಪೂರ್ಣಗೊಂಡಿತು. ದೊಡ್ಡ ದೇವಸ್ಥಾನಗಳ ಬಾಗಿಲು ಹಾಕಿದ ಅನುಭವವೂ ಇದೆ ಎಂದರು. ಕುಶಲಕರ್ಮಿಗಳು ಮರದ ಮೇಲೆ ಅತ್ಯಂತ ನಿಖರವಾದ ರೀತಿಯಲ್ಲಿ ಚಿತ್ರಗಳನ್ನು ಕೆತ್ತಿದ್ದಾರೆ.
ಬೆಳಗಾವಿ: ತಾಲೂಕಿನ ಮುತಗಾ ಗ್ರಾಮ ಪಂಚಾಯತ್ ಅಡಿಯಲ್ಲಿ ಯಾವುದೇ ಅಭಿವೃದ್ಧಿ ಕೆಲಸ ನಡೆದಿಲ್ಲ ಎಂದು ಅಸಮಾಧಾನಗೊಂಡ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ಯಾಮ್ ಗಂಗಾಧರ್ ಮುತಗೆಕರ ರಾಜೀನಾಮೆಯನ್ನು ಸಲ್ಲಿಸಲು ಮುಂದಾಗಿದ್ದರು. ಈ ಸಂದರ್ಭದಲ್ಲಿ ಪಂಚಾಯಿತಿಯಲ್ಲಿ ಭಯದ ವಾತಾವರಣ ಸೃಷ್ಟಿಯಾಗಿತ್ತು. ಉಪಾಧ್ಯಕ್ಷರು ಪಂಚಾಯತ್ ವ್ಯಾಪ್ತಿಯಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿ ನಡೆಯುತ್ತಿಲ್ಲ. ಜನರಿಗೆ ಉತ್ತರ ಕೊಡಲು ಸಾಧ್ಯವಾಗುತ್ತಿಲ್ಲ. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮೀರಾ ದೇಶಪಾಂಡೆ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯತನ ಇದಕ್ಕೆ ಕಾರಣ ಎಂದು ಅಸಮಾದಾನಗೊಂಡ ಉಪಾಧ್ಯಕ್ಷರು ರಾಜೀನಾಮೆ ನೀಡಲು ಮುಂದಾಗಿದ್ದರು. ಕೆಲ ಹೊತ್ತು ಪಂಚಾಯತಿಯಲ್ಲಿ ಭಯದ ವಾತಾವರಣ ನಿರ್ಮಾಣವಾಗಿತ್ತು. ಈ ಸಮಸ್ಯೆಗೆ ಸ್ಪಂದಿಸಲು ಸದಸ್ಯರುಗಳಾದ ಬಾಲಚಂದ್ರ, ಶ್ರೀಕಾಂತ ಪಾಟೀಲ ಹಾಗೂ ರವಿ ಕೋಟಬಾಗಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕಿರಣ ಕಲ್ಲಪ್ಪ ಪಾಟೀಲ್ ಉಪಾಧ್ಯಕ್ಷರಾದ ಶ್ಯಾಮ್ ಮುತ್ತೆಗೆಕರ ಅವರನ್ನು ಸಮಾಧಾನಪಡಿಸಿ ಮುತಗಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪ್ರತಿವಾಡದಲ್ಲೂ ಕೆಲಸ ಕಾರ್ಯ ಮಾಡಲು ನಾವು ಅಧಿಕಾರಿಗಳಿಗೆ ಸೂಚನೆ ನೀಡುತ್ತೇವೆ. ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಅಭಿವೃದ್ಧಿ ಅಧಿಕಾರಿಗಳು…