Subscribe to Updates
Get the latest creative news from FooBar about art, design and business.
- ಕೋಡಿಗೇನಹಳ್ಳಿ: ಗ್ರಾಮೀಣ ಭಾಗದಲ್ಲೂ ಔಷಧ ಅಂಗಡಿಗಳು ಬಂದ್: ಬೇಡಿಕೆಗಳೇನು?
- ಸರ್ಕಾರಿ ಗೋಮಾಳ ತೆರವಿಗೆ ಗ್ರಾಮಸ್ಥರ ಆಗ್ರಹ: 4.28 ಎಕರೆ ಬದಲು 18.27 ಎಕರೆ ಗೋಮಾಳ ಅಕ್ರಮ ಖಾತೆ ಆರೋಪ
- ಕೊರಟಗೆರೆ: ದ್ವಿಚಕ್ರ ವಾಹನದ ಮೇಲೆ ಬಿದ್ದ ಗೂಡ್ಸ್ ವಾಹನ: ಸವಾರ ಸಾವು
- ತುಮಕೂರು ಜಿಲ್ಲೆಯ ಅಸ್ತಿತ್ವ ಕಳೆಯಬೇಡಿ: ಬೆಂಗಳೂರು ಉತ್ತರ ಜಿಲ್ಲೆ ಪ್ರಸ್ತಾಪಕ್ಕೆ ಬಿಜೆಪಿ ವಿರೋಧ
- ತುಮಕೂರು: ಅಕ್ರಮ ಶೆಡ್ ನಿರ್ಮಿಸಲು ಹೊರಟಿರುವವರನ್ನು ತೆರವುಗೊಳಿಸಲು ಮನವಿ
- ಕುಣಿಗಲ್: ಗ್ರಾಪಂ ಸ್ವತ್ತಿನಲ್ಲಿ ಅಕ್ರಮ ಮಳಿಗೆ: ಒತ್ತುವರಿ ಜಾಗದಲ್ಲಿ ಗ್ರಂಥಾಲಯಕ್ಕೆ ದಲಿತ ಸಂಘಟನೆ ಆಗ್ರಹ
- ತುಮಕೂರು: ಕಂಪ್ಯೂಟರ್ ಡಿಟಿಪಿ ತರಬೇತಿಗೆ ಅರ್ಜಿ ಆಹ್ವಾನ
- ಪ್ರಥಮ ಬಿ.ಸಿ.ಎ. ಪದವಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
Author: admin
ಬೆಂಗಳೂರು: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ ಹೊತ್ತಲ್ಲೇ ಅಯೋಧ್ಯೆಯಲ್ಲಿ ಕರ್ನಾಟಕ ಯಾತ್ರಿ ನಿವಾಸ ಅನುಮತಿ ನೀಡುವಂತೆ ಕರ್ನಾಟಕ ಮುಜರಾಯಿ ಇಲಾಖೆ ಉತ್ತರ ಪ್ರದೇಶಕ್ಕೆ ಪತ್ರ ಬರೆದಿದ್ದು ಕರ್ನಾಟಕ ಧಾರ್ಮಿಕ ದತ್ತಿ ಇಲಾಖೆ ರಾಮ ಭಕ್ತರಿಗೆ ಗುಡ್ ನ್ಯೂಸ್ ಕೊಡಲು ಮುಂದಾಗಿದೆ. ಕರ್ನಾಟಕದ ಮುಜರಾಯಿ ಇಲಾಖೆ ಉತ್ತರಪ್ರದೇಶ ಸರ್ಕಾರಕ್ಕೆ ಪತ್ರ ಬರೆದಿದ್ದು ಅಯೋಧ್ಯೆಯಲ್ಲಿ ಕನ್ನಡಿಗರಿಗಾಗಿ ಕರ್ನಾಟಕ ಯಾತ್ರಿ ನಿವಾಸ ಕಟ್ಟಲು ಅನುಮತಿ ನೀಡುವಂತೆ ಮನವಿ ಮಾಡಿದೆ. ಕರ್ನಾಟಕದಿಂದ ಹೆಚ್ಚಿನ ಸಂಖ್ಯೆಯಲ್ಲಿ ಯಾತ್ರಿಗಳು, ರಾಮ ಭಕ್ತರು ಅಯೋಧ್ಯೆಗೆ ಬರುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಅವರಿಗೆ ವಸತಿ, ಊಟದ ವ್ಯವಸ್ಥೆಗಾಗಿ ಅತಿಥಿ ಗೃಹ ನಿರ್ಮಾಣ ಮಾಡುವಂತೆ ಪತ್ರದ ಮೂಲಕ ಮನವಿ ಮಾಡಿದೆ. 5 ಎಕರೆ ಜಾಗದಲ್ಲಿ 10 ಕೋಟಿ ವೆಚ್ಚದಲ್ಲಿ ರಾಜ್ಯದ ಭಕ್ತಾದಿಗಳ ಅನುಕೂಲಕ್ಕೆ ಮುಜರಾಯಿ ಇಲಾಖೆ ಅತಿಥಿ ಗೃಹ ನಿರ್ಮಾಣ ಮಾಡಲು ಸಿದ್ಧವಿದೆ ಅನುಮತಿ ನೀಡಿ ಎಂದು ಮನವಿ ಮಾಡಿದೆ. ಸರಯೂ ನದಿ ಸಮೀಪದಲ್ಲಿ ಅತಿಥಿ ಗೃಹ ನಿರ್ಮಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಈಗಾಗಲೇ…
ಬೆಳಗಾವಿ: ರಮೇಶ್ ಜಾರಕಿಹೊಳಿ ಅವರ ಒಡೆತನದ ಸೌಭಾಗ್ಯಲಕ್ಷ್ಮಿ ಸಕ್ಕರೆ ಕಾರ್ಖಾನೆಯಲ್ಲಿ ಅವ್ಯವಹಾರ ನಡೆದಿದೆ. ಅಲ್ಲದೇ ಆದಾಯ ತೆರಿಗೆಯ ಬಗ್ಗೆ ಸರ್ಕಾರಕ್ಕೆ ಸುಳ್ಳು ಲೆಕ್ಕಪತ್ರ ಕೊಟ್ಟಿದ್ದಾರೆ. ಸಕ್ಕರೆ ಕಾರ್ಖಾನೆ ಚಾಲ್ತಿಯಲ್ಲಿ ಇದ್ದರೂ ಚಾಲ್ತಿಯಲ್ಲಿ ಇಲ್ಲ ಎಂದು ಸುಳ್ಳು ದಾಖಲೆ ಕೊಟ್ಟಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಡಾ. ಮಹಾಂತೇಶ್ ಕಡಾಡಿ ಗಂಭೀರ ಆರೋಪ ಮಾಡಿದ್ದಾರೆ. ಸೌಭಾಗ್ಯಲಕ್ಷ್ಮಿ ಸಕ್ಕರೆ ಕಾರ್ಖಾನೆ ವ್ಯವಹಾರದಲ್ಲಿ ಅಕ್ರಮ ನಡೆದಿದೆ. ಕಾರ್ಖಾನೆಗೆ 700 ಎಕರೆ ಜಮೀನು ಖರೀದಿಯಲ್ಲೂ ಅವ್ಯವಹಾರವಾಗಿದೆ. 3,500 ಟನ್ ಕ್ರಷಿಂಗ್ ಸಾಮಥ್ರ್ಯದ ಕಾರ್ಖಾನೆಗೆ 300ಕೋಟಿ ರೂ. ಹಣ ವೆಚ್ಚವಾಗುತ್ತದೆ. ಇದಕ್ಕೆ ಜಾರಕಿಹೊಳಿಯವರು 500ರಿಂದ 600 ಕೋಟಿ ರೂ. ಸಾಲ ಪಡೆದಿದ್ದಾರೆ. ಅಷ್ಟೇ ಅಲ್ಲದೇ ಕಾರ್ಖಾನೆಯಲ್ಲಿ ಡಿಸ್ಟಿಲರಿ ಮಾಡುವುದಾಗಿ 60ಕೋಟಿ ಸಾಲ ಪಡೆದಿದ್ದಾರೆ. ಡಿಸ್ಟಿಲರಿ ನಿರ್ಮಾಣ ಮಾಡಿಲ್ಲ. ಬಳಿಕ 2019ರಲ್ಲಿ ದಿವಾಳಿ ಆಗಿದೆಯೆಂದು ಎನ್ಸಿಇಆರ್ಟಿಗೆ ಮನವಿ ಮಾಡಿದ್ದಾರೆ. ಆಗ ಎನ್ಸಿಇಆರ್ಟಿ ಇದು ಲಾಭದಾಯಕವಲ್ಲ ಎಂದು ಹೇಳಿದೆ. 2021-22ರಲ್ಲಿ 5ಸಾವಿರ ಮೆಟ್ರಿಕ್ ಟನ್ ಕಬ್ಬಿನಿಂದ ಸಕ್ಕರೆ ಉತ್ಪಾದನೆ ಮಾಡಿದ್ದಾರೆ. ಕಾರ್ಖಾನೆಗೆ ಬರುವ…
ಬೆಳಗಾವಿ: ವ್ಯಕ್ತಿಯೋರ್ವನಿಂದ ಹಲ್ಲೆಗೊಳಗಾಗಿರುವ ಅಂಗನವಾಡಿ ಸಹಾಯಕಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆರ್ಥಿಕ ನೆರವು ನೀಡಿದ್ದಾರೆ. ಬೆಳಗಾವಿ ತಾಲೂಕಿನ ಬಸುರ್ತೆ ಗ್ರಾಮದ ಅಂಗನವಾಡಿ ಸಹಾಯಕಿ ಮೇಲೆ ವ್ಯಕ್ತಿಯೋರ್ವ ಹಲ್ಲೆ ಮಾಡಿದ್ದ. ತೀವ್ರ ಗಾಯಗೊಂಡಿರುವ ಅಂಗನವಾಡಿ ಸಹಾಯಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಇದೀಗ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ತಮ್ಮ ಕೈಯಿಂದ 30 ಸಾವಿರ ರೂ.ಗಳ ಆರ್ಥಿಕ ನೆರವು ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಶಿವಕುಮಾರ್ ಮೇಷ್ಟ್ರುಮನೆ ತುಮಕೂರು/ಸ್ಪೆಷಲ್ ರಿಪೋರ್ಟ್: ತನ್ನ ಮಗುವಿನ ಸುರಕ್ಷತೆಯನ್ನು ನಿರ್ಲಕ್ಷ್ಯಿಸಿ, ಬೇಜವಾಬ್ದಾರಿಯಿಂದ ನಡೆದುಕೊಂಡು ಪ್ರತಿಷ್ಠಿತ ಶಾಲೆಯ ಆಡಳಿತ ಮಂಡಳಿಗೆ ಮಗುವಿನ ತಾಯಿ, ವೃತ್ತಿಯಲ್ಲಿ ವಕೀಲರಾಗಿರುವ ಹೆಚ್.ಎನ್. ಮಂಜುಳ ಅವರು ಕಾನೂನಿನ ರುಚಿ ತೋರಿಸಿದ ಘಟನೆ ತುಮಕೂರಿನಲ್ಲಿ ನಡೆದಿದೆ. ಇದು ಅಂತಿಂಥ ನಿರ್ಲಕ್ಷ್ಯ ಅಲ್ಲ, ಪ್ರತಿದಿನವೂ ಒಂದೊಂದು ವಿಚಾರದಲ್ಲಿ ಮಕ್ಕಳನ್ನು ಅಪಾಯಕ್ಕೆ ಸಿಲುಕಿಸುವಂತಹ ಸಂದರ್ಭವನ್ನು ಶಾಲಾ ಆಡಳಿತ ಮಂಡಳಿ ಸೃಷ್ಟಿಸುತ್ತಿದ್ದು, ಇದರಿಂದಾಗಿ ರೋಸಿಹೋದ ಮಗುವಿನ ತಾಯಿ ಶಾಲಾ ಆಡಳಿತ ಮಂಡಳಿಗೆ ತಾಯಿ ಕಾನೂನಿನ ಮೂಲಕ ತಕ್ಕ ಪಾಠ ಕಲಿಸಿದ್ದಾರೆ. ವೃತ್ತಿಯಲ್ಲಿ ವಕೀಲರಾಗಿರುವ ಹೆಚ್.ಎನ್. ಮಂಜುಳ ಅವರು ತಮ್ಮ ಮಗ ತುಷಾರ್ ಸಿಂಹನನ್ನು “ಚೈತನ್ಯ ಟೆಕ್ನೋ ಸ್ಕೂಲ್” ಗೆ 1ನೇ ತರಗತಿಗೆ ದಾಖಲಿಸುತ್ತಾರೆ. ಶಾಲೆಯು ತನ್ನ ಮಗುವಿನ ಸರ್ವತೋಮುಖ ಅಭಿವೃದ್ಧಿಗೆ ಹೆಚ್ಚು ಪ್ರಾಶಸ್ತ್ಯ ನೀಡುತ್ತದೆ ಎಂದು ಅವರು ಬಲವಾಗಿ ನಂಬಿದ್ದರು. ಹೀಗಾಗಿ 10 ಸಾವಿರ ರೂಪಾಯಿಗಳನ್ನು ಪಾವತಿಸಿ ಶಾಲೆಗೆ ದಾಖಲು ಮಾಡಿದ್ದರು. ಶಾಲೆಯ ಆವರಣದ ಹೊರಗಿದ್ದ ಮಗು! ಶಾಲೆ ಆರಂಭವಾದಾಗ ಮಗುವನ್ನು ಶಾಲಾ…
2017 ರಲ್ಲಿ ಸಾರ್ವಜನಿಕ ಆಸ್ತಿ ಪಾಸ್ತಿಗೆ ಹಾನಿ ಉಂಟು ಮಾಡಿದ ಪ್ರಕರಣ, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ. ನಾರಾಯಣಗೌಡ ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ಆದೇಶವನ್ನ ಬೆಂಗಳೂರಿನ 30ನೇ ಎಸಿಎಂಎಂ ಕೋರ್ಟ್ ನಾಳೆಗೆ ಕಾಯ್ದಿರಿಸಿದೆ. ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಕರವೇ ಅಧ್ಯಕ್ಷ ನಾರಾಯಣಗೌಡ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಬೆಂಗಳೂರಿನ 30ನೇ ಎಸಿಎಂಎಂ ಕೋರ್ಟ್ ನಾಳೆಗೆ ಮುಂದೂಡಿದೆ. ಈ ಹಿನ್ನೆಲೆಯಲ್ಲಿ ನಾರಾಯಣಗೌಡ ಅವರನ್ನು ಪೊಲೀಸರು ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ದಿದ್ದಾರೆ. ವಾಣಿಜ್ಯ ಮಳಿಗೆ ಅಂಗಡಿಗಳಲ್ಲಿ ಕನ್ನಡ ನಾಮಫಲಕ ಕಡ್ಡಾಯಕ್ಕೆ ಆಗ್ರಹಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಬಂಧಿತರಾಗಿದ್ದ ನಾರಾಯಣಗೌಡರಿಗೆ ಎರಡು ದಿನಗಳ ಹಿಂದೆ ಜಾಮೀನು ಸಿಕ್ಕಿತ್ತು. ಜೈಲಿನಿಂದ ಹೊರಬಂದ ಬಳಿಕ 2017 ರಲ್ಲಿ ಸಾರ್ವಜನಿಕ ಆಸ್ತಿ ಪಾಸ್ತಿಗೆ ಹಾನಿ ಉಂಟು ಮಾಡಿದ ಪ್ರಕರಣ ಸಂಬಂಧ ಮತ್ತೆ ಪೊಲೀಸರು ನಾರಾಯಣಗೌಡರನ್ನ ವಶಕ್ಕೆ ಪಡೆದಿದ್ದರು.
ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದ ಪರೇಡ್ ಗಾಗಿ ಕಳುಹಿಸಲಾಗಿದ್ದ ಕರ್ನಾಟಕದ ನಾಲ್ಕು ಟ್ಯಾಬ್ಲೋ ಪರಿಕಲ್ಪನೆಗಳನ್ನು ಆಯ್ಕೆ ಸಮಿತಿ ತಿರಸ್ಕರಿಸಿದ್ದು, ರಾಜ್ಯದ 7 ಕೋಟಿ ಕನ್ನಡಿಗರಿಗೆ ಕೇಂದ್ರ ಸರ್ಕಾರ ಅವಮಾನ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಟ್ವೀಟ್ (ಎಕ್ಸ್) ಮಾಡಿದ ಸಿದ್ದರಾಮಯ್ಯ, ಜನವರಿ 26ರಂದು ಹೊಸದಿಲ್ಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡುವ ಮೂಲಕ ಕೇಂದ್ರ ಸರ್ಕಾರವು ನಾಡಿನ ಏಳು ಕೋಟಿ ಕನ್ನಡಿಗರಿಗೆ ಅಪಮಾನ ಮಾಡಿದೆ. ಕಳೆದ ವರ್ಷ ಕೂಡ ಮೊದಲಿಗೆ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡಿ, ವಿವಾದದ ಸ್ವರೂಪ ಪಡೆದ ನಂತರ ಅನುಮತಿ ನೀಡಿತ್ತು, ಈ ಬಾರಿ ಮತ್ತೆ ಕನ್ನಡಿಗರನ್ನು ಅವಮಾನಿಸುವ ತನ್ನ ಚಾಳಿಯನ್ನು ಮುಂದುವರೆಸಿದೆ ಎಂದರು.
ರಾಜ್ಯದಲ್ಲಿ ಸರಿಯಾಗಿ ಮಳೆಯಾಗದೇ ಭೀಕರ ಬರಗಾಲವಿದೆ. ಆದರೂ ಸಹ ರಾಜ್ಯ ಕಾಂಗ್ರೆಸ್ ಸರ್ಕಾರ ಜನರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಟೀಕಿಸಿದರು. ಮಾಧ್ಯಮಗಳ ಜೊತೆ ಮಾತನಾಡಿದ ಬಸವರಾಜ ಬೊಮ್ಮಾಯಿ, ಬರ, ಪ್ರವಾಹದಂತಹ ಸಂಕಷ್ಟ ಸಂದರ್ಭದಲ್ಲಿ ಜನರ ನೆರವಿಗೆ ಸರ್ಕಾರ ಧಾವಿಸಿ ಸಹಾಯ ಮಾಡಿದರೆ ಸರ್ಕಾರ ಜೀವಂತ ಇದ್ದಂತೆ. ಸಂಕಷ್ಟದಲ್ಲಿರುವ ರೈತರ ಕಡೆಗೆ ನೋಡದಿದ್ದರೆ ಅದು ಸತ್ತಂತೆ. ರಾಜ್ಯ ಸರ್ಕಾರ ಎನ್ಡಿಆರ್ ಎಫ್ ಮತ್ತು ಎಸ್ಡಿ ಆರ್ಎಫ್ ನಿಯಮದಲ್ಲಿ ಎಷ್ಟು ಹಣವಿದೆ ಎಂಬುದನ್ನು ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದರು. 18 ಸಾವಿರ ಕೋಟಿ ರೂ. ಬರಪರಿಹಾರಕ್ಕೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಿದೆ. ಆದರೆ ರೈತರಿಗೆ ತಲಾ 2000 ರೂ. ನೀಡುವುದಾಗಿ ಹೇಳಿ ತಿಂಗಳು ಕಳೆದರೂ ರಾಜ್ಯ ಸರ್ಕಾರ ಹಣ ಬಿಡುಗಡೆ ಮಾಡಿಲ್ಲ. ಆಧಾರ್ ಜೋಡಣೆಯ ಕಥೆ ಹೇಳುತ್ತಿದ್ದಾರೆ. ಫ್ರೂಟ್ಸ್ ತಂತ್ರಾಂಶದಲ್ಲಿ ರೈತರ ಸಂಪೂರ್ಣ ಮಾಹಿತಿ ಇದೆ. ನಮ್ಮ ಸರ್ಕಾರದ ಅವಧಿಯಲ್ಲಿ 14 ಲಕ್ಷ ರೈತರಿಗೆ ನೇರವಾಗಿ ಹಣ…
ಕರ್ನಾಟಕ ರಾಜ್ಯದ ಗ್ರಾಹಕರ ವ್ಯಾಜ್ಯ ಗಳ ಪರಿಹಾರ ಖಾಯಂ ಪೀಠವನ್ನು ಬೆಳಗಾವಿ ಯಲ್ಲಿ ಪ್ರಾರಂಭಿಸಬೇಕು ಎಂದು ಅಹಿಂದ ನ್ಯಾಯವಾದಿಗಳ ಸಂಘ ಬೆಳಗಾವಿ ಎನ್ ಆರ್ ಲಾತೂರ್ ಅವರ ನೇತೃತ್ವದಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಗಳ ಆವರಣದಲ್ಲಿ ಧರಣಿ ಸತ್ಯಾಗ್ರಹ ಮಾಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ನ್ಯಾಯವಾದಿ ಲಾತೂರವರು ಬೆಳಗಾವಿ ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯ ಗಳಪರಿಹಾರ ಖಾಯಂ ಪೀಠವನ್ನು ಬೆಳಗಾವಿಯಲ್ಲಿ ಪ್ರಾರಂಭಿಸಬೇಕು. ಕಳೆದ ನಾಲ್ಕು ವರ್ಷಗಳಿಂದ ಹೋರಾಟ ಮಾಡುತ್ತಿದ್ದೇವೆ ಮತ್ತು ಈಗಾಗಲೇ ಬೆಳಗಾವಿಯಲ್ಲಿ ಸ್ಥಾಪನೆ ಮಾಡಲಾಗಿದೆ ಆದರೆ ಇನ್ನೂ ಕಾರ್ಯ ಆರಂಭವಾಗಿರುವುದಿಲ್ಲ. ಅದಕ್ಕಾಗಿ ತಕ್ಷಣವೇ ಕರ್ನಾಟಕ ಸರ್ಕಾರ ರಾಜ್ಯ ಗ್ರಾಹಕರ ವ್ಯಾಜ್ಯಗಳನ್ನು ಪರಿಹಾರ ಆಯೋಗ ಪೀಠ ಪ್ರಾರಂಭ ಮಾಡಬೇಕು. ಬೆಳಗಾವಿ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಠೇವಣಿದಾರರು ಖಾಸಗಿ ಸಹಕಾರಿ ಸಂಸ್ಥೆಗಳು ಹಣ ಠೇವಣಿ ಮಾಡಿರುತ್ತಾರೆ. ಆದರೆ ಸಹಕಾರಿ ಹಾಗೂ ಸೌಹಾರ್ದದ ಸೊಸೈಟಿಗಳು ವಂಚನೆ ಮಾಡಿರುತ್ತಾರೆ. ಇಂತಹ ಪ್ರಕರಣಗಳಿಗೆ ನ್ಯಾಯ ಸಿಗಲು ವಿಳಂಬ ಹಾಗೂ ನ್ಯಾಯ ಪಡೆಯಲು ಬೆಂಗಳೂರಿಗೆ ಹೋಗಬೇಕಾಗುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಉತ್ತರ…
ಪ್ರತಾಪ್ ಸಿಂಹ ನ್ಯಾಷನಲ್ ಲೀಡರಾ? ಎಂಬ ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಟೀಕೆಗೆ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ. ಈ ಕುರಿತು ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಖಂಡಿತ ನಾನು ನ್ಯಾಷನಲ್ ಲೀಡರ್ ಅಲ್ಲ. ಸಾಮಾನ್ಯ ಕುಟುಂಬದ ಹಿನ್ನೆಲೆಯಲ್ಲಿ ಬಂದು ಬರವಣಿಗೆ ಮೂಲಕ ಹೆಸರು ಸಂಪಾದಿಸಿ ಈ ಸ್ಥಾನಕ್ಕೆ ಬಂದಿದ್ದೇನೆ. ಅಪ್ಪ ಸಿಎಂ ಆಗಿದ್ದರೆ ತನ್ನ ಖಾಸಗಿ ಲ್ಯಾಬ್ ಗೆ ಗುತ್ತಿಗೆ ಪಡೆದು ಕೊಳ್ಳುವಂತವರು ನ್ಯಾಷನಲ್ ಲೀಡರ್. ಅಪ್ಪನ ನೆಲೆ ಬಿಡಿಸಿ ಬದಾಮಿ ಕ್ಷೇತ್ರಕ್ಕೆ ಓಡಿಸುವವರು ನ್ಯಾಷನಲ್ ಲೀಡರ್. ತಾನು ಹೇಳಿದ ವರ್ಗಾವಣೆ ಲಿಸ್ಟ್ ಗೆ ಸಹಿ ಮಾಡಿ ಅಂತಾ ಸಿಎಂ ಮೇಲೆ ಒತ್ತಡ ತರುವವರು ನ್ಯಾಷನಲ್ ಲೀಡರ್. ಮೈಸೂರು ಭಾಗದ ನಿಜವಾದ ನ್ಯಾಷನಲ್ ಲೀಡರ್ ಯತೀಂದ್ರ ಸಿದ್ದರಾಮಯ್ಯ ಎಂದು ಟಾಂಗ್ ನೀಡಿದರು.
ಲಕ್ಷದ್ವೀಪದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಿಸುವ ಯೋಜನೆ. ಮಿನಿಕಾಯ್ ದ್ವೀಪದಲ್ಲಿ ವಿಮಾನ ನಿಲ್ದಾಣ ನಿರ್ಮಿಸುವ ಪ್ರಸ್ತಾವನೆ. ವಿಮಾನ ನಿಲ್ದಾಣವು ಮಿಲಿಟರಿ ಮತ್ತು ಸಾರ್ವಜನಿಕ ಬಳಕೆಗಾಗಿ. ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯ ನಂತರ ಭಾರತದಲ್ಲಿ ಲಕ್ಷದ್ವೀಪ ಪ್ರವಾಸಕ್ಕೆ ಕರೆ ನೀಡುವ ಪ್ರಚಾರ ನಡೆಯುತ್ತಿದೆ. ಅತ್ಯಾಧುನಿಕ ವಿಮಾನ ನಿಲ್ದಾಣವು ಮಾರ್ಚ್ 31, 2026 ರೊಳಗೆ ಕಾರ್ಯನಿರ್ವಹಿಸಲಿದೆ ಎಂದು ವರದಿಯಾಗಿದೆ. ದ್ವೀಪ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಭಾಗವಾಗಿ ಲಕ್ಷದ್ವೀಪದತ್ತ ಕೇಂದ್ರ ಗಮನಹರಿಸಿದೆ. ಶೀಘ್ರವಾಗಿ ಯೋಜನೆ ಸಾಕಾರಗೊಳ್ಳುವ ಗುರಿ ಹೊಂದಲಾಗಿದೆ. ಬಾಲಿವುಡ್, ಕ್ರಿಕೆಟ್ ತಾರೆಯರು ಮಾತ್ರವಲ್ಲದೆ ಪ್ರಮುಖ ರಾಜಕಾರಣಿಗಳು ಕೂಡ ಪ್ರಚಾರದ ಭಾಗವಾಗಿದ್ದಾರೆ. ಬಂಗಾರಂ ವಿಮಾನ ನಿಲ್ದಾಣಗಳು ಕಾರ್ಯನಿರ್ವಹಿಸುತ್ತಿದ್ದರೂ ಕೊಚ್ಚಿ ನೆಡುಂಬಶ್ಶೇರಿ ವಿಮಾನ ನಿಲ್ದಾಣದಿಂದ ಮಾತ್ರ ಇಲ್ಲಿ ಸೇವೆ ಇದೆ.