Author: admin

ಇನ್‌ ಸ್ಟಾಗ್ರಾಮ್ ರೀಲ್ ಮಾಡಲು ಬಿಡದ ಪತಿಯನ್ನು ಮಹಿಳೆ ಕೊಂದಿದ್ದಾಳೆ. ಬಿಹಾರದಲ್ಲಿ ಘಟನೆ ನಡೆದಿದೆ. ಮಹಿಳೆ ತನ್ನ ಪ್ರಿಯಕರ ಮತ್ತು ಇಬ್ಬರು ಸಹೋದರಿಯರ ಸಹಾಯದಿಂದ ಪತಿಯನ್ನು ಕೊಂದಿದ್ದಾಳೆ. ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೇಗುಸರಾಯ್‌ ನ ಫಾಫೌಟ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸಮಸ್ತಿಪುರ್ ಜಿಲ್ಲೆಯ ನರ್ಹಾನ್ ಗ್ರಾಮದ ಮಹೇಶ್ವರ್ ಕುಮಾರ್ ರೈ (25) ಎಂಬಾತನನ್ನು ಆತನ ಪತ್ನಿ ರಾಣಿ ಕೊಲೆ ಮಾಡಿದ್ದಾಳೆ. ಮಹೇಶ್ವರ್ ಕೋಲ್ಕತ್ತಾದಲ್ಲಿ ಕಾರ್ಮಿಕ. ಕೆಲ ದಿನಗಳ ಹಿಂದೆ ಬಿಹಾರ ತಲುಪಿದ್ದರು. ಮಹೇಶ್ವರ್ ಹಿಂತಿರುಗಿದಾಗ, ರಾಣಿ ಫಾಫೌಟ್‌ ನಲ್ಲಿರುವ ತನ್ನ ತಾಯಿಯ ಮನೆಯಲ್ಲಿದ್ದಳು. ಅವರೂ ಇಲ್ಲಿಗೆ ಬಂದರು. ಸೋಷಿಯಲ್ ಮೀಡಿಯಾದಲ್ಲಿ ಸಕ್ರಿಯವಾಗಿದ್ದ ರಾಣಿಗೆ ರೀಲ್ ಮಾಡದಂತೆ ಮಹೇಶ್ವರ್ ಕೂಡ ನಿಷೇಧ ಹೇರಿದ್ದರು. ಈ ಬಗ್ಗೆ ಆಗಾಗ್ಗೆ ಜಗಳವಾಡುತ್ತಿರುತ್ತಾರೆ. ಇದ್ಯಾವುದನ್ನೂ ಲೆಕ್ಕಿಸದೆ ರಾಣಿಗೆ ರೀಲುಗಳನ್ನು ತಯಾರಿಸುವುದು ವಾಡಿಕೆಯಾಗಿತ್ತು. ಅತ್ತೆ ಮನೆಯಲ್ಲೂ ರೀಲ್ ವಿಚಾರವಾಗಿ ಇಬ್ಬರ ನಡುವೆ ಜಗಳ ನಡೆದಿದೆ. ಆಗ ರಾಣಿ ಕುಟುಂಬಸ್ಥರೂ ಮಧ್ಯ ಪ್ರವೇಶಿಸಿದರು. ಇದರೊಂದಿಗೆ ಯುವಕನನ್ನು ಕೊಲ್ಲಲು ಯುವತಿ…

Read More

ಮಧುಮೇಹ ಚಿಕಿತ್ಸೆಯಲ್ಲಿ ಆಧುನಿಕ ಮತ್ತು ನವೀನ ಕೊಡುಗೆಗಾಗಿ ಡಾ. ಜ್ಯೋತಿದೇವ್ ಕೇಶವದೇವ್ ಅವರಿಗೆ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ವಿಶ್ವ-ಭಾರತ ಮಧುಮೇಹ ಪ್ರತಿಷ್ಠಾನ ಮತ್ತು ಇಂಡಿಯನ್ ಅಕಾಡೆಮಿ ಆಫ್ ಡಯಾಬಿಟಿಸ್ ಜಂಟಿಯಾಗಿ ಮುಂಬೈನಲ್ಲಿ ನಡೆದ ಮಧುಮೇಹ ಕುರಿತ 23ನೇ ಅಂತಾರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಡಾ. ಜ್ಯೋತಿದೇವ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಡಾ. ಶ್ರೀಕುಮಾರನ್ ನಾಯರ್ (ಮೇಯೊ ಕ್ಲಿನಿಕ್, ಅಮೇರಿಕಾ), ಡಾ. ಶಶಾಂಕ್ ಜೋಶಿ, ಡಾ. ಬನ್ಶಿ ಸಾಬು, ಶ್ರೀ. ರಾಮನ್ ಕಪೂರ್ ಮತ್ತು ಶ್ರೀ. ಸೈರಸ್ ಐಬರ ಪ್ರಶಸ್ತಿ ಪ್ರದಾನ ಮಾಡಿದರು. ಮಧುಮೇಹ ಚಿಕಿತ್ಸೆಯಲ್ಲಿ ಆಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಂಡು ರೋಗಿಗಳಿಗೆ ಉತ್ತಮ ಗುಣಮಟ್ಟದ ಜೀವನ  ನಡೆಸಲು ಸಾಧ್ಯ. ಡಾ. ಜ್ಯೋತಿದೇವ್ ಅವರಿಗೆ ಸಂಶೋಧನ ಪ್ರಕಟಣೆಗಳಿಗಾಗಿ ಪ್ರಶಸ್ತಿಯನ್ನು ನೀಡಲಾಯಿತು, ಅದು ಕಾರ್ಯಸಾಧ್ಯತೆಯನ್ನು ಪ್ರದರ್ಶಿಸುತ್ತದೆ ಮತ್ತು ಮಧುಮೇಹ ರೋಗಿಗಳಲ್ಲಿ ಅಸಾಮರ್ಥ್ಯವಿಲ್ಲದೆ ವೃದ್ಧಾಪ್ಯದಲ್ಲಿ ದೀರ್ಘಾಯುಷ್ಯವನ್ನು ಹೆಚ್ಚಿಸುತ್ತದೆ. ಮಧುಮೇಹದ ರೋಗ ನಿರ್ಣಯದ ನಂತರ ಹತ್ತು ಹದಿನೈದು ವರ್ಷಗಳ ನಂತರ ಹೃದ್ರೋಗ, ಮೂತ್ರಪಿಂಡದ ಕಾಯಿಲೆ, ಪಾದದ ಹುಣ್ಣು…

Read More

‘ಜಬ್ ವೀ ಮೇಟ್’ ಸಿನಿಮಾ ಖ್ಯಾತಿಯ ಸಿಂಗರ್ ಉಸ್ತಾದ್ ರಶೀದ್ ಖಾನ್(55) ಅವರು ಇಂದು ಕ್ಯಾನ್ಸರ್‌ ನಿಂದ ನಿಧನರಾಗಿದ್ದಾರೆ. ಕೊಲ್ಕತ್ತಾದ ಟಾಟಾ ಮೆಮೊರಿಯಲ್ ಆಸ್ಪತ್ರೆಯಲ್ಲಿ ಸಂಗೀತ ಮಾಂತ್ರಿಕ ಉಸ್ತಾದ್ ಇಹಲೋಕ ತ್ಯಜಿಸಿದ್ದಾರೆ. ಬಾಲಿವುಡ್ ‌ನ ಸಾಕಷ್ಟು ಹಾಡುಗಳಿಗೆ ಧ್ವನಿಯಾಗಿದ್ದ ಉಸ್ತಾದ್ ರಶೀದ್ ಖಾನ್ ಅವರು ಕೆಲ ಸಮಯದಿಂದ ಕ್ಯಾನ್ಸರ್‌ ನಿಂದ ಬಳಲುತ್ತಿದ್ದರು. ಅದಕ್ಕಾಗಿ ಸೂಕ್ತ ಚಿಕಿತ್ಸೆ ಕೂಡ ಪಡೆಯುತ್ತಿದ್ದರು. ದೀರ್ಘಕಾಲದಿಂದ ವೆಂಟಿಲೇಟರ್‌ ನಲ್ಲಿ ಇದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಉಸ್ತಾದ್ ನಿಧನರಾಗಿದ್ದಾರೆ. ಗಾಯಕ ಉಸ್ತಾದ್ ರಶೀದ್ ಖಾನ್ ನಿಧನದ ಬಗ್ಗೆ ವೆಸ್ಟ್ ಬೆಂಗಾಲ್ ಸಿಎಂ ಮಮತಾ ಬ್ಯಾನರ್ಜಿ  ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಸಂತಾಪ ಸೂಚಿಸಿದ್ದಾರೆ. ಇಡೀ ದೇಶಕ್ಕೆ ಮತ್ತು ಮ್ಯೂಸಿಕ್ ಬಂಧುಗಳಿಗೆ ಅವರ ನಿಧನದಿಂದ ನಷ್ಟವಾಗಿದೆ. ರಶೀದ್ ಇನ್ನಿಲ್ಲ ಎಂದು ನಂಬಲು ಸಾಧ್ಯವಾಗುತ್ತಿಲ್ಲ ಎಂದು ಬರೆದು ಕೊಂಡಿದ್ದಾರೆ.

Read More

ಭಾರತಕ್ಕೆ ಆಗಮಿಸಿದ ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರಿಗೆ ಆತ್ಮೀಯ ಸ್ವಾಗತ ದೊರೆಯಿತು. ಅಹಮದಾಬಾದ್‌ ನಲ್ಲಿ ಯುಎಇ ಅಧ್ಯಕ್ಷರನ್ನು ಪ್ರಧಾನಿ ನರೇಂದ್ರ ಮೋದಿ ಬರಮಾಡಿಕೊಂಡರು. ವೈಬ್ರೆಂಟ್ ಗುಜರಾತ್ ಶೃಂಗಸಭೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ವೈಬ್ರೆಂಟ್ ಗುಜರಾತ್ ಇಂಟರ್ನ್ಯಾಷನಲ್ ಶೃಂಗಸಭೆಯ 10 ನೇ ಆವೃತ್ತಿಯಲ್ಲಿ ಭಾಗವಹಿಸಲು ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ. ಅಹಮದಾಬಾದ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಯುಎಇ ಅಧ್ಯಕ್ಷರನ್ನು ಪ್ರಧಾನಿ ನರೇಂದ್ರ ಮೋದಿ ಸ್ವಾಗತಿಸಿದರು. ವಿದೇಶಾಂಗ ಸಚಿವ ಎಸ್ ಜೈಶಂಕರ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತಿತರರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಗಾರ್ಡ್ ಆಫ್ ಆನರ್ ಸ್ವೀಕರಿಸಿದ ನಂತರ, ಯುಎಇ ಅಧ್ಯಕ್ಷರು ಸಹ ಪ್ರಧಾನಿಯೊಂದಿಗೆ ರೋಡ್ ಶೋನಲ್ಲಿ ಭಾಗವಹಿಸಿದರು. ವೈಬ್ರೆಂಟ್ ಗುಜರಾತ್ ಶೃಂಗಸಭೆಯಲ್ಲಿ ಯುಎಇ ವಾಣಿಜ್ಯ ಖಾತೆ ರಾಜ್ಯ ಸಚಿವ ಥಾನಿ ಬಿನ್ ಅಹ್ಮದ್ ಅಲ್ ಸೆಯುದಿ ಮತ್ತು ಗಲ್ಫ್ ರಾಷ್ಟ್ರದ ಸಂಪೂರ್ಣ…

Read More

ಬೆಳಗಾವಿ: ಅನಾರೋಗ್ಯದಿಂದ ಮೃತರಾದ ಗೋಕಾಕ್ ತಾಲೂಕಿನ ಡುಮ್ಮಉರಬಿನಹಟ್ಟಿಯ ವೀರಯೋಧ ಮಹಾಂತೇಶ ಬ. ಹುಬ್ಬಳ್ಳಿ (31) ಅವರ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಂಬನಿ ಮಿಡಿದಿದ್ದಾರೆ. ಮಹಾಂತೇಶ ಅವರು ಅನಾರೋಗ್ಯದಿಂದ ದೆಹಲಿಯ ಆಸ್ಪತ್ರೆಯಲ್ಲಿ 2 ದಿನಗಳ ಹಿಂದೆ ನಿಧನರಾಗಿದ್ದಾರೆ. ಇಂದು ಯೋಧನ ಪಾರ್ಥಿವ ಶರೀರ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿಗೆ ಆಗಮಿಸಿದ್ದ ಕುಟುಂಬಸ್ಥರನ್ನು ಭೇಟಿ ಮಾಡಿ ಧೈರ್ಯ ತುಂಬಿದ ಸಚಿವರು, ಯೋಧನ ಆತ್ಮಕ್ಕೆ ಶಾಂತಿ ಕೋರಿದರು. ಮದ್ರಾಸ್ ಇಂಜಿನಿಯರಿಂಗ್ ಗ್ರುಪ್ (MEG) ನ ಪಂಜಾಬ್ ಯುನಿಟ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಯೋಧ ಮಹಾಂತೇಶ ಚಿಕ್ಕ ವಯಸ್ಸಿನಲ್ಲಿಯೇ ಮೃತರಾಗಿರುವುದು ದುರ್ದೈವದ ಸಂಗತಿ, ಅವರ ನಿಧನದ ಸುದ್ದಿ ಅತೀವ ನೋವುಂಟು ಮಾಡಿದೆ ಎಂದು ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

Read More

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕೊರೋನಾ ಸೋಂಕು ತಗುಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು ಸದ್ಯ ರಾಜಭವನದಲ್ಲಿ ಕ್ವಾರಂಟೈನ್ ಆಗಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು ರಾಜ್ಯಪಾಲರ ಆರೋಗ್ಯ ಸ್ಥಿರವಾಗಿದ್ದು, ಮುಂದಿನ ದಿನಾಂಕದವರೆಗೆ ರಾಜ್ಯಪಾಲರ ನಿಗದಿತ ಕಾರ್ಯಕ್ರಮಗಳು ರದ್ದುಗೊಂಡಿವೆ. ಈ ಕುರಿತು ರಾಜಭವನದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೋವಿಡ್-19 ಪರೀಕ್ಷೆಗೆ  ಒಳಪಟ್ಟಿದ್ದರು. ಅವರ ಪರೀಕ್ಷೆ ವರದಿಯಲ್ಲಿ ಅವರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ತಿಳಿದು ಬಂದಿದೆ ಎಂದಿದೆ.  ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕೋವಿಡ್-19 ಪಾಸಿಟಿವ್ ಎಂಬುದಾಗಿ ಪರೀಕ್ಷೆಯಲ್ಲಿ ದೃಢಪಟ್ಟ ಕಾರಣ, ಮುಂದಿನ ದಿನಾಂಕದವರೆಗೆ ಅವರ ಎಲ್ಲಾ ನಿಗದಿತ ಕಾರ್ಯಕ್ರಮಗಳನ್ನು ರದ್ದು ಗೊಳಿಸಿರೋದಾಗಿ ತಿಳಿಸಿದೆ.

Read More

ವಿಜಯಪುರ ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪಮೇಯರ್ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ನಗೆ ಬೀರಿದ್ದು ಈ ಮೂಲಕ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಗೆ ಮುಖಭಂಗವಾಗಿದೆ. ಮೇಯರ್ ಮತ್ತು ಉಪಮೇಯರ್ ಎರಡೂ ಸ್ಥಾನದಲ್ಲಿ ಕಾಂಗ್ರೆಸ್  ಜಯ ಸಾಧಿಸಿದೆ. ವಿಜಯಪುರ ಪಾಲಿಕೆ ಮೇಯರ್ ಆಗಿ ಕಾಂಗ್ರೆಸ್ ನ ಮೆಹಜಬೀನ್ ಹೊರ್ತಿ, ಉಪ ಮೇಯರ್ ಆಗಿ ಕಾಂಗ್ರೆಸ್ ನ ದಿನೇಶ್ ಹಳ್ಳಿ ಆಯ್ಕೆಯಾಗಿದ್ದಾರೆ. ಈ ಮೂಲಕ ಕಾಂಗ್ರೆಸ್ ವಿಜಯಪುರ ಮಹಾನಗರ ಪಾಲಿಕೆಯನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದ ವಿಜಯಪುರ ಪಾಲಿಕೆ ಮೇಯರ್ ಸ್ಥಾನಕ್ಕೆ ಸ್ಪರ್ಧಿಸಿದ್ದ ಮಹೆಜಬೀನ್ ಹೊರ್ತಿ ಒಟ್ಟು 22 ಮತ ಪಡೆದು ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಇನ್ನು ಎಸ್ ಟಿಗೆ ಮೀಸಲಾಗಿದ್ದ ಉಪಮೇಯರ್ ಸ್ಥಾನಕ್ಕೆ ಕಾಂಗ್ರೆಸ್ಸಿನ ದಿನೇಶ್ ಹಳ್ಳಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Read More

ಬೆಂಗಳೂರು: 2024ನೇ ಸಾಲಿನ ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳಿಗೆ ಇದೇ ಏಪ್ರಿಲ್ 20 ಮತ್ತು 21ರಂದು ಸಿಇಟಿ(ಸಾಮಾನ್ಯ ಪ್ರವೇಶ ಪರೀಕ್ಷೆ) ನಡೆಸಲು ದಿನಾಂಕ ನಿಗದಿ ಮಾಡಲಾಗಿತ್ತು. ಆದ್ರೆ, ಇದೀಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ದಿನಾಂಕವನ್ನು ಬದಲಾವಣೆ ಮಾಡಿದ್ದು, ಏಪ್ರಿಲ್ 18 ಮತ್ತು 19ರಂದು ಸಿಇಟಿ ಪರೀಕ್ಷೆ ನಡೆಸಲು ತೀರ್ಮಾನಿಸಿದೆ. ಈ ಬಗ್ಗೆ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಅವರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2024ನೇ ಸಾಲಿನ ವಿವಿಧ ವೃತ್ತಿ ಪರ ಕೋರ್ಸ್‌ಗಳ ಪ್ರವೇಶ ಪರೀಕ್ಷೆಗಳ ದಿನಾಂಕವನ್ನು ನಾಲ್ಕು ತಿಂಗಳು ಮೊದಲೇ ಪ್ರಕಟಿಸಿತ್ತು. ಎಂಜಿನಿಯರಿಂಗ್‌, ಕೃಷಿ, ಪಶು ಸಂಗೋಪನೆ, ನರ್ಸಿಂಗ್‌, ಫಾರ್ಮಸಿ, ಆಯುಷ್ ಸಹಿತ ವಿವಿಧ ವೃತ್ತಿಪರ ಕೋರ್ಸ್‌ ಗಳಿಗೆ 2024ರ ಪ್ರವೇಶ ಪರೀಕ್ಷೆಗಳನ್ನು ಏಪ್ರಿಲ್‌ 20 ಮತ್ತು 21ರಂದು ನಿಗದಿ ಮಾಡಲಾಗಿತ್ತು. ಆದ್ರೆ, ಏಪ್ರಿಲ್ 21ರಂದು ಎನ್ ಡಿ ಎ ಪರೀಕ್ಷೆ ನಡೆಯಲಿದೆ. ಹೀಗಾಗಿ ಕೆಇಎ, ಸಿಇಟಿ ಪರೀಕ್ಷೆ ದಿನಾಂಕವನ್ನು ಬದಲಾವಣೆ ಮಾಡಲಾಗಿದೆ…

Read More

ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದ ಪರೇಡ್ ಗೆ ಪ್ರತಿ ವರ್ಷ ಎಲ್ಲಾ ರಾಜ್ಯಗಳ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗಳು ಟ್ಯಾಬ್ಲೋ ಪರಿಕಲ್ಪನೆಯನ್ನು ಕಳುಹಿಸುತ್ತವೆ. ಆಯ್ಕೆ ಸಮಿತಿಯು ಟ್ಯಾಬ್ಲೋಗಳನ್ನು ಆಯ್ಕೆ ಮಾಡುತ್ತದೆ. ಕೆಲವೊಂದನ್ನು ಆಯ್ಕೆ ಮಾಡಿ ಕೆಲವನ್ನು ತಿರಸ್ಕರಿಸಲಾಗುತ್ತಿದೆ. ಈ ಬಾರಿ ಕರ್ನಾಟಕ ನಾಲ್ಕು ವಿಷಯದ ಮೇಲೆ ಪರಿಕಲ್ಪನೆ ಸಲ್ಲಿಸಲಾಗಿದ್ದು, ಎಲ್ಲವೂ ತಿರಸ್ಕೃತಗೊಂಡಿವೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಈ ಬಾರಿ ಬ್ರಾಂಡ್ ಬೆಂಗಳೂರು, ನಾಲ್ವಡಿ ಕೃಷ್ಣರಾಜ ಒಡೆಯರ್, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಟರ್ಮಿನಲ್ 2 ಮತ್ತು ಬೆಂಗಳೂರು ಅಣ್ಣಮ್ಮ ದೇವಿ ದೇವಸ್ಥಾನದ ಥೀಮ್ ಕಲ್ಪನೆಗಳನ್ನು ಆಯ್ಕೆ ಸಮಿತಿಗೆ ಕಳುಹಿಸಿತ್ತು. ಆದರೆ ಎಲ್ಲಾ ನಾಲ್ಕು ಪರಿಕಲ್ಪನೆಗಳನ್ನು ತಿರಸ್ಕರಿಸಲಾಗಿದೆ ಎಂದು ತಿಳಿದು ಬಂದಿದೆ. ಕರ್ನಾಟಕವು ಸತತ 14 ವರ್ಷಗಳಿಂದ ಟ್ಯಾಬ್ಲೋಗಳನ್ನು ಕಳುಹಿಸುತ್ತಿದೆ. ಸತತ 14 ವರ್ಷಗಳಿಂದ ಟ್ಯಾಬ್ಲೋ ವಿಭಾಗದಲ್ಲಿ ಭಾಗವಹಿಸಿದ ದೇಶದ ಏಕೈಕ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ. 2023 ರ ಗಣರಾಜ್ಯೋತ್ಸವದ ಪರೇಡ್ ನಲ್ಲಿ…

Read More

ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಾಗಲೇ ರಾಜ್ಯದಲ್ಲಿ ಮೂರು ಡಿಸಿಎಂ ಹುದ್ದೆ ಸೃಷ್ಠಿ ಬಗ್ಗೆ ಚರ್ಚೆಯಾಗುತ್ತಿದ್ದು ಈ ಕುರಿತು ಸಹಕಾರ ಸಚಿವ ಕೆ.ಎನ್. ರಾಜಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಸಚಿವ ಕೆ.ಎನ್. ರಾಜಣ್ಣ, ರಾಜ್ಯದಲ್ಲಿ  3 ಡಿಸಿಎಂ ಹುದ್ದೆ ಸೃಷ್ಠಿಸುವ ಬೇಡಿಕೆ ನಿರಂತರವಾಗಿರುತ್ತೆ. ಹೈಕಮಾಂಡ್ ಮುಂದೆ ಬೇಡಿಕೆ ಇಟ್ಟಿದ್ದೇವೆ. ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿಗೆ  ಬಹುತೇಕ ಸಚಿವರ ಒಪ್ಪಿಗೆ ಇದೆ ಎಂದರು. ಸಿಎಂ ಹುದ್ದೆಗೆ ಆಕಾಂಕ್ಷಿ ಕುರಿತು ಪ್ರತಿಕ್ರಿಯಿಸಿದ ಸಚಿವ ಕೆ.ಎನ್. ರಾಜಣ್ಣ, ಸಿಎಂ ಆಗುವ ಅವಕಾಶ ಸಿಕ್ಕರೇ ಯಾರಾದ್ರೂ ಬೇಡ ಅಂತಾರ. ಸಿಎಂ ಆಗೋಕೆ ಸಾಕಷ್ಟು ನಾಯಕರಿಗೆ ಆಸೆ ಇದೆ ಎಂದರು.

Read More