Author: admin

ಹೆಚ್.ಡಿ.ಕೋಟೆ: ತಾಲ್ಲೂಕಿನ ಆನಗಟ್ಟಿ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಅಂಬೇಡ್ಕರ್ ಸೇನೆ ಸಮಿತಿ ವತಿಯಿಂದ ಭೇಟಿ ನೀಡಿ ಮಕ್ಕಳಿಗೆ ಅಂಬೇಡ್ಕರ್ ಸೇನೆಯ ಅಧ್ಯಕ್ಷ ಮಹದೇವಸ್ವಾಮಿಕೋಟೆ ಮತ್ತು ಪದಾಧಿಕಾರಿಗಳು ಹಾಗೂ ಆನಗಟ್ಟಿ ಗ್ರಾಮ ಪಂಚಾಯಿತಿ ಸದಸ್ಯ ಸೋಮಣ್ಣ ಇವರುಗಳ ಸಮ್ಮುಖದಲ್ಲಿ ಮಕ್ಕಳಿಗೆ 15 ಚೇರ್ ಗಳನ್ನು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಆನಗಟ್ಟಿ ಗ್ರಾಮ ಪಂಚಾಯಿತಿ ಸದಸ್ಯ ಸೋಮಣ್ಣ ಮಾತನಾಡಿ, ಈ ದಿನ ಅಂಬೇಡ್ಕರ್ ಸೇನೆ ತಾಲ್ಲೂಕು ಸಮಿತಿಯಿಂದ ಅಂಗನವಾಡಿ ಮಕ್ಕಳಿಗೆ ಚೇರು ವಿತರಣೆ ಮಾಡುತ್ತಿರುವುದು ಖುಷಿಯ ವಿಚಾರವಾಗಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಹೆಸರಿನಲ್ಲಿ ಹೋರಾಟದ ಜೊತೆಜೊತೆಗೆ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವುದು ಶ್ಲಾಘನೀಯ ಎಂದರು. ಅಂಬೇಡ್ಕರ್ ಸೇನೆಯು ಮುಂದಿನ ದಿನಗಳಲ್ಲಿ ತಾಲ್ಲೂಕಿನಲ್ಲಿ ಹೆಮ್ಮರವಾಗಿ ಬೆಳೆಯಲಿ ಎಂದು ಆಶಿಸಿದರು. ಚೇರ್ ವಿತರಣೆ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಸೋಮಣ್ಣ, ಗ್ರಾಮದ ಯಜಮಾನರಾದ ಜವರಾಜು, ಮುಖಂಡರಾದ ಗೋಪಾಲಯ್ಯ, ಅಂಬೇಡ್ಕರ್ ಸೇನೆ ಸಮಿತಿಯ ತಾಲ್ಲೂಕು ಅಧಕ್ಷ ಮಹದೇವಸ್ವಾಮಿಕೋಟೆ, ಪ್ರಧಾನ ಕಾರ್ಯದರ್ಶಿ ಗಣೇಶ್ ಆನಗಟ್ಟಿ ಖಜಾಂಚಿ ಹೆಗ್ಗಡಾಪುರ ವಿಶ್ವ(ಚಿಕ್ಕಣ್ಣ), ಸದಸ್ಯರುಗಳಾದ…

Read More

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಬಳ್ಳಾರಿಯ ಐದು ಹಾಗೂ ಬೆಂಗಳೂರಿನ ಎರಡು ಕಡೆ ಲೋಕಾಯುಕ್ತ ಅಧಿಕಾರಿಗಳು  ಶೋಧ ನಡೆಸಿದ್ದಾರೆ. ಕುಂದಣ ಪಿಡಿಒ ಪದ್ಮನಾಬ್ ಅವರಿ​ಗೆ ಸೇರಿದ​​​​ ಮೂರು ಮನೆ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆ ಪರಿಶೀಲಿಸುತ್ತಿದ್ದರೆ, ಜೊತೆಗೆ ದಾಬಸ್​ಪೇಟೆ ಹಾಗೂ ತುಮಕೂರಿನಲ್ಲಿ ಸಹ ಪದ್ಮನಾಬ್ ​ಗೆ ಸಂಬಂಧಿಸಿದ ಸ್ಥಳಗಳಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ವಿಜಯನಗರ ಜಿಲ್ಲೆಯ ಬೆಸ್ಕಾಂ ಜನರಲ್ ಮ್ಯಾನೇಜರ್ ನಾಗರಾಜ್ ಮತ್ತು ಅವರ ಸಂಬಂಧಿಕರ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ನಾಗರಾಜ್ ಅವರು ಕೂಡ್ಲಿಗಿ ಪಟ್ಟಣ, ಗುಡೇಕೋಟೆ ಗ್ರಾಮದಲ್ಲಿ ಅಕ್ರಮ ಆಸ್ತಿ ಹೊಂದಿರುವ ಆರೋಪ ಕೇಳಿಬಂದಿದೆ. ಈ ಅಕ್ರಮ ಹಣದಲ್ಲಿ ಪೆಟ್ರೋಲ್ ಬಂಕ್, ಮನೆ, ಜಮೀನು ಖರೀದಿ ಮಾಡಿದ್ದಾರೆ ಎನ್ನಲಾಗಿದೆ. ಬೆಂಗಳೂರು ದಕ್ಷಿಣ ತಾಲೂಕು ಚನ್ನೇನಳ್ಳಿ ಗ್ರಾಮ ಪಂಚಾಯತಿ ಸದಸ್ಯ ಸುರೇಶ್ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು ಅದಾದ ಬಳಿಕ…

Read More

ಪಾರ್ಟ್ ಟೈಂ ಜಾಬ್ ಹುಡುಕುತ್ತಿರುವವರಿಗೆ ವೀರಲೋಕ ವತಿಯಿಂದ ಉತ್ತಮ ಅವಕಾಶವಿದ್ದು,  ಪ್ರತಿ ಭಾನುವಾರ ಕನ್ನಡ ಪುಸ್ತಕಗಳನ್ನ ಮಾರಾಟ ಮಾಡಿ ಕನ್ನಡ ಪುಸ್ತಕಗಳನ್ನ ಓದುಗರಿಗೆ ತಲುಪಿಸುವ ಮೂಲಕ ಹಣ ಗಳಿಸಬಹುದಾಗಿದೆ. ಹೌದು ಮಾಡ್ಬೇಕಾದ್ದು ಇಷ್ಟೇ… ಬೆಂಗಳೂರಿನ ಪಾರ್ಕು, ಹೋಟೆಲ್ ಸೇರಿದಂತೆ ಜನದಟ್ಟಣೆಯ ಪ್ರದೇಶಗಳಲ್ಲಿ  ಪ್ರತಿ ಭಾನುವಾರ ಬೆಳಿಗ್ಗೆ ಆರೂವರೆಯಿಂದ ಹತ್ತೂವರೆ ತನಕ ಪುಸ್ತಕದ ಸ್ಟಾಂಡ್ ಇಟ್ಟು ಕನ್ನಡ ಪುಸ್ತಕ ಮಾರಬೇಕು. ಪ್ರತಿ ಭಾನುವಾರ ಸುಮಾರು ನೂರು ಕಡೆ ಈ ತರ ಕನ್ನಡ ಪುಸ್ತಕ ಓದು ಅಭಿಯಾನ ಆರಂಭಿಸುವ ಯೋಚನೆ ನಮ್ಮದು. ಲಾಭ ಇದರ ಉದ್ದೇಶವಲ್ಲ! ಯಾವುದು ಕಣ್ಣಿಗೆ ಕಾಣುವುದೋ ಅದೇ ಚಾಲ್ತಿಯಲ್ಲಿರುವುದು ಎಂಬುದು ನಮ್ಮ ಉದ್ದೇಶ.  ಮೂರೂವರೆಯಿಂದ ನಾಲ್ಕುಗಂಟೆಯ ಕೆಲಸಕ್ಕಾಗಿ ಪ್ರಯಾಣದ ವೆಚ್ಚಗಳನ್ನು ಕಳೆದು ತಲಾ ರೂ.750/- ಪಾಕೆಟ್ ಮನಿ ಕೂಡ ಸಿಗುತ್ತೆ ಎಂದು ವೀರಲೋಕ ಟೀಮ್ ತಿಳಿಸಿದೆ. ಇದು ಅವಮಾನದ ಕೆಲಸವೇನಲ್ಲ, ಅಭಿಮಾನದ ಕೆಲಸ ಜೊತೆಗೆ ಆದಾಯದ ಕೆಲಸವೂ ಹೌದು. ಆದ್ದರಿಂದ ಯಾರಿಗಾದ್ರೂ ಅನುಕೂಲವಾಗಬಹುದು ಮುಖ್ಯವಾಗಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದ್ದು ಈ ಅವಕಾಶ…

Read More

ಪಾವಗಡ:  ಮಧ್ಯವರ್ತಿಗಳ ಹಾವಳಿ ತಪ್ಪಿಸುವ ಸಲುವಾಗಿ ಹಾಗೂ ಸಾರ್ವಜನಿಕರಿಗೆ ಶೀಘ್ರ ಕಚೇರಿ ಕೆಲಸ ಮಾಡಿಕೊಡುವ ಸಲುವಾಗಿ ಅಧಿಕಾರಿಗಳ ಸಹಿತ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕರಾದ ಹೆಚ್.ವಿ. ವೆಂಕಟೇಶ್ ತಿಳಿಸಿದರು. ತುಮಕೂರು ಜಿಲ್ಲಾಡಳಿತ ಮತ್ತು ಪಾವಗಡ ತಾಲ್ಲೂಕು ಪಂಚಾಯತ್ ಸಹಯೋಗದೊಂದಿಗೆ ಹಾಗೂ ಜಿಲ್ಲಾಧಿಕಾರಿಗಳಾದ ಶುಭ ಕಲ್ಯಾಣ್ ಮತ್ತು ಶಾಸಕರಾದ ಹೆಚ್ ವಿ ವೆಂಕಟೇಶ್ ರವರ ನೇತೃತ್ವದಲ್ಲಿ ಪಟ್ಟಣದ ಎಸ್ ಎಸ್ ಕೆ ಬಯಲು ರಂಗಮಂದಿರದಲ್ಲಿ ಜನತಾ ದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು,  ಸಾರ್ವಜನಿಕರ ಯಾವುದೇ ಸಮಸ್ಯೆಗಳನ್ನು ಬೇಗ ಇತ್ಯರ್ಥಪಡಿಸಬೇಕು ಹಾಗೂ ಸತಾಯಿಸಬಾರದು ಎಂದು ಅಧಿಕಾರಿಗಳಿಗೆ ತಾಖೀತು ಮಾಡಿದರು. ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾತನಾಡಿ,  ಸಾರ್ವಜನಿಕರ ಕುಂದುಕೊರತೆಯನ್ನು ಪರಿಹಾರ ಮಾಡಲು ಜನತಾ ದರ್ಶನ ಉತ್ತಮ ಕಾರ್ಯಕ್ರಮ ಎಂದು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಎಲ್ಲ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಕೆಲವು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸಲಾಯಿತು. ವಿವಿಧ ಇಲಾಖೆಗಳಿಂದ ಅರ್ಹ ಪಲಾನುಭವಿಗಳಿಗೆ…

Read More

ಪಾವಗಡ ತಾಲ್ಲೂಕಿನ ನಿಡಗಲ್ಲು ಹೋಬಳಿಯ ಗೊಲ್ಲನಕುಂಟೆ ಆಂಜನೇಯ ಸ್ವಾಮಿ ದೇವಸ್ಥಾನದ ಸೇವಾ ಸಮಿತಿಯ ವತಿಯಿಂದ ಇತ್ತೀಚೆಗೆ ಅದ್ಧೂರಿಯಾಗಿ ಹನುಮ ಜಯಂತಿ ಉತ್ಸವ ಆಚರಣೆ ಮಾಡಲಾಯಿತು. ಉತ್ಸವದಲ್ಲಿ ಭಾಗಿಯಾಗಿದ್ದ ಹನುಮ ಭಕ್ತರಿಗೆ ಅನ್ನ ಸಂತರ್ಪಣೆ ಮಾಡಲಾಯಿತು. ಉತ್ಸವದಲ್ಲಿ ಸರಿಸುಮಾರು 2,500 ಭಕ್ತಾದಿಗಳು ದೇವರಿಗೆ ಪೂಜೆ ಸಲ್ಲಿಸಿ, ದರ್ಶನ ಪಡೆದರು. ಈ ಒಂದು ಉತ್ಸವದಲ್ಲಿ ಗೊಲ್ಲನಕುಂಟೆ ವ್ಯಾಪ್ತಿಯ ಎಸ್.ಆರ್. ಪಾಳ್ಯ ಗ್ರಾಮದ ಅರ್ಚಕರಾದ ನಾರಾಯಣ್ ರಾವ್, ಮಾಜಿ ಚೇರ್ಮಾನ್ ಬೀರಲಿಂಗಪ್ಪ, ತ್ಯಾಗರಾಜು, ನಿವೃತ್ತ ದೈಹಿಕ ಶಿಕ್ಷಕರಾದ ಹನುಮಂತರಾಯ, ಗುಜ್ಜಾರಹಳ್ಳಿ ಗ್ರಾಮದ ಬಸವರಾಜು, ಸಣ್ಣೀರಪ್ಪ, ವೀರಭದ್ರಪ್ಪ ಮತ್ತು ಕದಿರೆಹಳ್ಳಿಯ ಕೆ ಜಿ ಕರಿಯಣ್ಣ, ಹನುಮಂತರಾಯಪ್ಪ, ನರಸಿಂಹಪ್ಪ, ಆನಂದಪ್ಪ ಹಾಗೂ ಮೂರು ಗ್ರಾಮಗಳ ಗ್ರಾಮ ಪಂಚಾಯತಿ ಸದಸ್ಯರು, ಗ್ರಾಮಸ್ಥರು ಭಾಗವಹಿಸಿದ್ದರು. ವರದಿ: ನಂದೀಶ್ ನಾಯ್ಕ

Read More

ಹೆಚ್.ಡಿ. ಕೋಟೆ: ಕೇಸರಿ ಶಾಲು ಭಾವೈಕ್ಯತೆಯ ಸಂಕೇತ ಎಂದು ಶಾಸಕ ಅನಿಲ್ಚಿಕ್ಕಮಾದು ನುಡಿದರು. ಹೆಚ್.ಡಿ. ಕೋಟೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಮೀಪವಿರುವ ಕನಕಭವನದ ಆವರಣದಲ್ಲಿ ಹನುಮ ಸೇವಾ ಸಮಿತಿಯಿಂದ 6ನೇ ವರ್ಷದ ಹನುಮ ಜಯಂತಿ ಉತ್ಸವದ ಅಂಗವಾಗಿ ಕಾರ್ಯಕ್ರಮಕ್ಕೆ ಶಾಸಕ ಅನಿಲ್ಚಿಕ್ಕಮಾದು ಮತ್ತು ಬಿಡುಗಲು ಪಡವಲು ವಿರಕ್ತಪಠದ ಶ್ರೀಶ್ರೀ ಶ್ರೀ ಮಹದೇವಸ್ವಾಮಿಗಳು ಹಾಗೂ ಹನುಮ ಸೇವಾ ಸಮಿತಿ ಅಧ್ಯಕ್ಷ ಶ್ರೀಕಾಂತ್ ಹನುಮನ ಭಾವಚಿತ್ರಕ್ಕೆ ಪುಷ್ಪಾಷರ್ಚನೆ ನೆರವೇರಿಸಿ ಮೆರವಣಿಗೆಗೆ ಚಾಲನೆ ನೀಡಿದರು. ನಂತರ ಶಾಸಕ ಅನಿಲ್ ಚಿಕ್ಕಮಾದು ಮಾತನಾಡಿ ಪಟ್ಟಣದಲ್ಲಿ ಹನುಮ ಸೇವಾ ಸಮಿತಿ ವತಿಯಿಂದ ಪ್ರತಿ ವರ್ಷ ಹನುಮ ಜಯಂತಿ ಉತ್ಸವವನ್ನು ಎಲ್ಲಾ ತಾಲ್ಲೂಕುಗಳಲ್ಲೂ ಆಚರಿಸಿಕೊಂಡು ಬರುತ್ತಿದ್ದಾರೆ ಅದರಂತೆ ಇಲ್ಲಿಯೂ ಸಹ ಹನುಮ ಭಕ್ತಾದಿಗಳು ಹನುಮ ಜಯಂತಿಯನ್ನು ಭಕ್ತಿ ಭಾವೈಕ್ಯತೆಯಿಂದ ಬಹಳ ಅರ್ಥಪೂರ್ಣವಾಗಿ ತಾಲ್ಲೂಕಿನಲ್ಲಿ ಆಚರಿಸುವಂತಾಗಲಿ ಎಂದು ಶುಭ ಹಾರೈಸಿದರು. ಶ್ರೀ ರಾಮನನ್ನು ಸೃಷ್ಠಿ ಮಾಡಿದ ಶ್ರೀ ವಾಲ್ಮಿಕಿ ಮಹರ್ಷಿಯವರು ಹನುಮಲ್ಲಿರುವ ಶಕ್ತಿಯನ್ನು ತೋರಿಸಿಕೊಟ್ಟಿದ್ದಾರೆ. ಅಯೋದ್ಯೆಯಲ್ಲಿ ಶ್ರೀರಾಮನನ್ನು ಶ್ರೀ…

Read More

ಬಿಎಂಟಿಸಿ ಎಂಡಿಯಾಗಿ ಐಎಎಸ್‌ ಅಧಿಕಾರಿ ರಾಮಚಂದ್ರನ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ.  ಸತ್ಯವತಿ ಅವರ ವಿರುದ್ಧ ಸಾರಿಗೆ ಸಚಿವರಿಗೆ ಸಾಕಷ್ಟು ದೂರು ಬಂದಿತ್ತು. ಹೀಗಾಗಿ ಜಿ. ಸತ್ಯವತಿರನ್ನು ವರ್ಗಾವಣೆ ಮಾಡುವಂತೆ ಸಚಿವರಿಗೆ ಕೆಎಸ್‌ ಆರ್‌ ಟಿಸಿ ಸ್ಟಾಪ್ ಆ್ಯಂಡ್ ವರ್ಕರ್ಸ್ ಫೆಡರೇಶನ್ ಮನವಿ ಮಾಡಿತ್ತು. ಈ ಆಧಾರದ ಮೇಲೆ ರಾಜ್ಯ ಸರ್ಕಾರ ಸತ್ಯವತಿ ಅವರಿಗೆ ಯಾವುದೇ ಹುದ್ದೆ ನೀಡದೆ ವರ್ಗಾವಣೆ ಮಾಡಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸರ್ಕಾರ ಬಿಎಂಟಿಸಿಯ ನೂತನ ಎಂಡಿಯಾಗಿ ರಾಮಚಂದ್ರನ್ ಆರ್ ಅವರು ನೇಮಕವಾಗಿದ್ದಾರೆ. ಈ ಹಿಂದೆ ಬಿಬಿಎಂಪಿ ಸ್ಪೆಷಲ್ ಕಮಿಷನರ್ (ಚುನಾವಣಾ) ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

Read More

ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಅಥವಾ ರಾಯಭಾರಿಯನ್ನಾಗಿಸಬೇಕು ಎನ್ನುವ ಒಕ್ಕೊರಲ ಒತ್ತಾಯವನ್ನು ಗೌರವಿಸುತ್ತೇನೆ. ವೈಯುಕ್ತಿಕವಾಗಿ ನನಗೆ ಈ ಘೋಷಣೆ ಬಗ್ಗೆ ತಕರಾರಿಲ್ಲ. ಆದರೆ, ಇದು ಕ್ಯಾಬಿನೆಟ್ ನಲ್ಲಿ ಇಟ್ಟು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ವಚನ ಚಳವಳಿಯ ಅಣ್ಣ ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸುವಂತೆ ಒತ್ತಾಯಿಸಿ ತರಳಬಾಳು ಜಗದ್ಗುರುಗಳು ಮತ್ತು ಜಗದ್ಗುರು ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮೀಜಿ ನೇತೃತ್ವದ ಲಿಂಗಾಯತ ಸ್ವಾಮೀಜಿಗಳು, ಪ್ರಗತಿಪರ ಸ್ವಾಮೀಜಿಗಳು,  ಪ್ರಗತಿಪರ ಚಿಂತಕರು ಮತ್ತು ದಲಿತ, ರೈತ, ಕಾರ್ಮಿಕ, ಮಹಿಳಾ ಚಳವಳಿಗಳ ಮುಖಂಡರುಗಳ ನಿಯೋಗದ ಜತೆ ಚರ್ಚಿಸಿದ ಬಳಿಕ ಮಾತನಾಡಿದರು. ಬಸವಾದಿ ಶರಣರ ಆಶಯಗಳೆಲ್ಲಾ ನಮ್ಮ ಸಂವಿಧಾನದಲ್ಲಿವೆ. ವಚನ ಮತ್ತು ಸಂವಿಧಾನದ ಧ್ಯೇಯೋದ್ದೇಶಗಳು ಒಂದೇ ಆಗಿವೆ. ಆದ್ದರಿಂದ ಈ ಮಹತ್ವದ ಸಂಗತಿಯನ್ನು ಕ್ಯಾಬಿನೆಟ್ ಮುಂದೆ ಇಟ್ಟು ತೀರ್ಮಾನಿಸಲಾಗುವುದು ಎಂದರು. ನಿಯೋಗದಲ್ಲಿ ಶ್ರೀಶೈಲ ಜಗದ್ಗುರುಗಳು, ಫಕೀರ ದಿಂಗಾಲೇಶ್ವರ ಸ್ವಾಮೀಜಿ, ಡಾ.ರಾಜಶೇಖರ ಶಿವಾಚಾರ್ಯರು, ಡಾ. ಜಗದ್ಗುರು ಚನ್ನಬಸವಾನಂದ ಸ್ವಾಮೀಜಿ, ಶ್ರೀ ವೀರಭದ್ರ ಶಿವಾ ಕಡಕಂಚಿ,…

Read More

ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ಆಗಿಲ್ಲ. ಇದನ್ನು ನಾನು ಹೇಳುತ್ತಿಲ್ಲ. ಸಿಎಂ ಅವರ ಆರ್ಥಿಕ ಸಲಹೆಗಾರ ರಾಯರೆಡ್ಡಿ ಅವರೇ ಹೇಳುತ್ತಿದ್ದಾರೆ. ಸರ್ಕಾರ ಬಂದು 8 ತಿಂಗಳಾಗಿದೆ. ಬರ ಪರಿಹಾರ ವಿಚಾರದಲ್ಲಿ ಯಾವ ರೀತಿ ನಡೆದುಕೊಳ್ಳುತ್ತಿದೆ ಎಂದು ಗೊತ್ತಿದೆ. 2 ಸಾವಿರ ರೂಪಾಯಿ ಎಷ್ಟು ಜನಕ್ಕೆ ಹೋಗಿದೆ ಅನ್ನೋದು ಗೊತ್ತಿದೆ. ಮಂತ್ರಿಗಳು ಅಧಿಕಾರದ ವ್ಯಾಮೋಹದಿಂದ ಇನ್ನು ದೂರ ಬಂದಿಲ್ಲ ಎಂದು ಹೆಚ್. ಡಿಕೆ ವಾಗ್ದಾಳಿ ನಡೆಸಿದರು. ಅನ್ನಭಾಗ್ಯ’ ಅಕ್ಕಿಯಿಂದಲೇ ಅಯೋಧ್ಯೆಯ ರಾಮ ಮಂದಿರದ ಆಹ್ವಾನದ ಮಂತ್ರಾಕ್ಷತೆಯನ್ನು ಕೊಡುತ್ತಿದ್ದಾರೆ ಎಂಬ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆಗೆ  ಮಾಜಿ ಸಿಎಂ ಹೆಚ್ ​​ಡಿ ಕುಮಾರಸ್ವಾಮಿ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ. ಅಕ್ಕಿಯನ್ನು ದೊಡ್ಡ ಆಲಹಳ್ಳಿಯಲ್ಲಿ ಬೆಳೆದು ಕಳುಹಿಸಿರುವುದಾ? ರಾಮಮಂದಿರಕ್ಕೆ ಹೋಗಲು ಆಹ್ವಾನ ಕೊಡಬೇಕಾ..? ರಾಮಮಂದಿರಕ್ಕೆ ಎಲ್ಲರೂ ಬರಬಹುದು ಎಂದು ಪ್ರಧಾನಿ ಹೇಳಿದ್ದಾರೆ. ಕಾರ್ಯಕ್ರಮ ನಡೆಯುವ ದಿನ ದೊಡ್ಡಮಟ್ಟದಲ್ಲಿ ಜನರು ಸೇರುತ್ತಾರೆ. ಮುಂದೆ ಸಾರ್ವಜನಿಕರಿಗೂ ಅವಕಾಶ ಇದೆ, ಆಗ ಹೋಗಬಹುದು. ರಾಮನ ಮೇಲೆ ಭಕ್ತಿ ಇರುವವರು ಹೋಗಬಹುದು ಎಂದರು.…

Read More

ಉತ್ತರ ಪ್ರದೇಶ: ಕೊಲೆಯಲ್ಲಿ ಅಂತ್ಯವಾದ ಕೌಟುಂಬಿಕ ಕಲಹ. ಮಹಿಳೆಯೊಬ್ಬರು ಸುತ್ತಿಗೆಯಿಂದ ತನ್ನ ಪತಿಯ ತಲೆಗೆ ಹೊಡೆದು ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ. 20 ವರ್ಷ ವಯಸ್ಸಿನ ಪಾರ್ವತಿ ಎಂಬ ಮಹಿಳೆಯನ್ನು ನಿನ್ನೆ ಬಂಧಿಸಲಾಗಿದೆ. ಪಾರ್ವತಿಯ ಪತಿ ಮೇಸ್ತ್ರಿ ಕೆಲಸ ಮಾಡುತ್ತಿದ್ದ. ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಆರೋಪಿ ಮಹಿಳೆಯನ್ನು ವಶಕ್ಕೆ ಪಡೆಯಲಾಗಿದೆ, ಯಾವುದೋ ಕಾರಣಕ್ಕಾಗಿ ದಂಪತಿ ನಡುವೆ ಜಗಳ ಉಂಟಾಗಿತ್ತು. ಬಳಿಕ ಪತ್ನಿ ಪತಿಯ ತಲೆ ಮೇಲೆ ಸುತ್ತಿಗೆಯಿಂದ ಹೊಡೆದು ಹತ್ಯೆ ಮಾಡಲಾಗಿದೆ.

Read More