Author: admin

ಬೆಂಗಳೂರು: ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನದ ವೇಳೆ ನಡೆದ ಬೆಳವಣಿಗೆಗಳನ್ನು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರವಾಗಿ ಖಂಡಿಸಿದ್ದು, ಇಂದು ಕರ್ನಾಟಕ ಶಾಸಕಾಂಗ ಇತಿಹಾಸದಲ್ಲೇ ಒಂದು ‘ಕರಾಳ ದಿನ’ ಎಂದು ಬಣ್ಣಿಸಿದ್ದಾರೆ. ಗುರುವಾರ ಆರಂಭವಾದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಸರ್ಕಾರ ನೀಡಿದ ಭಾಷಣದ ಬದಲು, ಕೇವಲ ಒಂದು ವಾಕ್ಯವನ್ನು ಓದಿ ನಿರ್ಗಮಿಸಿದರು. ಈ ವೇಳೆ ಕಾಂಗ್ರೆಸ್ ಸದಸ್ಯರು ರಾಜ್ಯಪಾಲರನ್ನು ಅಡ್ಡಗಟ್ಟಿ ಅಗೌರವ ತೋರಿದ್ದಾರೆ ಎಂದು ಅಶೋಕ್ ಆರೋಪಿಸಿದ್ದಾರೆ. ಕಾಂಗ್ರೆಸ್ ನಾಯಕರ ಈ ವರ್ತನೆಯನ್ನು ‘ಗೂಂಡಾಗಿರಿ’ ಎಂದು ಕರೆದಿರುವ ಅವರು, ಇದು ಸಂವಿಧಾನಕ್ಕೆ ಮಾಡಿದ ಅವಮಾನ ಎಂದಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಸ್ಪೀಕರ್ ಯು.ಟಿ. ಖಾದರ್ ಅವರಿಗೆ ಅಧಿಕೃತ ದೂರು ನೀಡಿರುವ ಅಶೋಕ್, ನಿಯಮ 27ರ ಉಲ್ಲಂಘನೆಯಡಿ ತಪ್ಪಿತಸ್ಥ ಶಾಸಕರ ವಿರುದ್ಧ ಕಠಿಣ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ರಾಜ್ಯಪಾಲರು ತಮ್ಮ ಸಾಂವಿಧಾನಿಕ ಕರ್ತವ್ಯ ನಿರ್ವಹಿಸುವಾಗ ಅಡ್ಡಿಪಡಿಸುವುದು ಸದನದ ನಿಯಮಗಳ ಗಂಭೀರ ಉಲ್ಲಂಘನೆಯಾಗಿದೆ ಎಂದು ಅವರು ದೂರಿದ್ದಾರೆ.…

Read More

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 12ರ ವಿಜೇತರಾಗಿ ಹೊರಹೊಮ್ಮಿರುವ ‘ಗಿಲ್ಲಿ ನಟ’ (ನಟರಾಜ್) ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಶೇಷ ಗೌರವ ಸಲ್ಲಿಸಿದ್ದಾರೆ. ಬೆಂಗಳೂರಿನ ಸಿಎಂ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಇಂದು ಗಿಲ್ಲಿ ನಟ ಮುಖ್ಯಮಂತ್ರಿಗಳನ್ನು ಭೇಟಿಯಾದರು. ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ನಟನಿಗೆ ಗಂಧದ ಹಾರ ಹಾಕಿ, ಶಾಲು ಹೊದಿಸಿ ಆತ್ಮೀಯವಾಗಿ ಸನ್ಮಾನಿಸಿದರು. ಅಲ್ಲದೆ, ಗಿಲ್ಲಿ ನಟನ ಭುಜದ ಮೇಲೆ ಕೈ ಹಾಕಿ ಬೆನ್ನು ತಟ್ಟಿ ಪ್ರೋತ್ಸಾಹ ನೀಡಿದರು. ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ (ಟ್ವಿಟರ್) ನಲ್ಲಿ ಫೋಟೋ ಹಂಚಿಕೊಂಡಿರುವ ಮುಖ್ಯಮಂತ್ರಿಗಳು, “12ನೇ ಆವೃತ್ತಿಯ ಬಿಗ್ ಬಾಸ್ ವಿಜೇತ ಗಿಲ್ಲಿ ನಟರಾಜ್ ಅವರನ್ನು ಅಭಿನಂದಿಸಿ, ಮುಂದಿನ ಜೀವನ ಇನ್ನಷ್ಟು ಯಶಸ್ಸು ಮತ್ತು ಸಂತಸದಿಂದ ಕೂಡಿರಲಿ ಎಂದು ಶುಭ ಹಾರೈಸಿದೆ,” ಎಂದು ಬರೆದುಕೊಂಡಿದ್ದಾರೆ. ಈ ಭೇಟಿಯ ಸಂದರ್ಭದಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಹಾಗೂ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಪ್ರಭಾಕರ್ ಅವರು ಉಪಸ್ಥಿತರಿದ್ದರು. ನಮ್ಮತುಮಕೂರಿನ ಕ್ಷಣ…

Read More

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಜಂಟಿ ಅಧಿವೇಶನವು ಗುರುವಾರ ಅಭೂತಪೂರ್ವ ಬೆಳವಣಿಗೆಗೆ ಸಾಕ್ಷಿಯಾಯಿತು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಧಿವೇಶನವನ್ನು ಉದ್ದೇಶಿಸಿ ಕೇವಲ ಎರಡೇ ಸಾಲುಗಳ ಭಾಷಣ ಮಾಡಿ ಹೊರನಡೆಯುವ ಮೂಲಕ ಅಚ್ಚರಿ ಮೂಡಿಸಿದರು. ಜನವರಿ 22 ರಿಂದ ಆರಂಭವಾದ ವಿಶೇಷ ಅಧಿವೇಶನದ ಮೊದಲ ದಿನದಂದು ರಾಜ್ಯಪಾಲರು ಜಂಟಿ ಸದನವನ್ನು ಉದ್ದೇಶಿಸಿ ಸುದೀರ್ಘ ಭಾಷಣ ಮಾಡಬೇಕಿತ್ತು. ಆದರೆ, ವೇದಿಕೆಗೆ ಬಂದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಸ್ಪೀಕರ್ ಯು.ಟಿ. ಖಾದರ್ ಮತ್ತು ಇತರ ಗಣ್ಯರಿಗೆ ಶುಭಾಶಯ ಕೋರಿ, “ನನ್ನ ಸರ್ಕಾರವು ರಾಜ್ಯದ ಆರ್ಥಿಕ, ಸಾಮಾಜಿಕ ಮತ್ತು ಭೌತಿಕ ಅಭಿವೃದ್ಧಿಯನ್ನು ದ್ವಿಗುಣಗೊಳಿಸಲು ಬದ್ಧವಾಗಿದೆ. ಜೈ ಹಿಂದ್, ಜೈ ಕರ್ನಾಟಕ” ಎಂದು ಹೇಳಿ ಕೇವಲ ಎರಡು ನಿಮಿಷಗಳಲ್ಲಿ ಭಾಷಣ ಮುಗಿಸಿದರು. ರಾಜ್ಯಪಾಲರ ಈ ನಡೆಯಿಂದ ಆಕ್ರೋಶಗೊಂಡ ಕಾಂಗ್ರೆಸ್ ಶಾಸಕರು, ಬಿ.ಕೆ. ಹರಿಪ್ರಸಾದ್ ನೇತೃತ್ವದಲ್ಲಿ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ರಾಜ್ಯಪಾಲರು ಪೂರ್ಣ ಭಾಷಣ ಓದದೆ ನಿರ್ಗಮಿಸುತ್ತಿರುವುದನ್ನು ಖಂಡಿಸಿ ಧಿಕ್ಕಾರ ಕೂಗಿದ ಶಾಸಕರು, ಅವರನ್ನು ಅಡ್ಡಗಟ್ಟಲು ಯತ್ನಿಸಿದರು.…

Read More

ಗುಬ್ಬಿ: ತಾಲೂಕಿನ ಕಿಟ್ಟದಕುಪ್ಪೆ ಗ್ರಾಮದ ರೈತರ ಜಮೀನುಗಳಲ್ಲಿ ಹೈ ಟೆನ್ಷನ್ ವಿದ್ಯುತ್ ತಂತಿ ಅಳವಡಿಸಲು ಅಧಿಕಾರಿಗಳು ಮುಂದಾಗಿರುವುದು ಈಗ ಭಾರಿ ವಿವಾದಕ್ಕೆ ಕಾರಣವಾಗಿದೆ. ಸೂಕ್ತ ಪರಿಹಾರ ನೀಡದಿದ್ದರೆ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಉಗ್ರ ಪ್ರತಿಭಟನೆ ನಡೆಸುವುದಾಗಿ ಗ್ರಾಮದ ರೈತರು ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತಕ್ಕೆ ನೇರ ಎಚ್ಚರಿಕೆ ನೀಡಿದ್ದಾರೆ. ಕಿಟ್ಟದಕುಪ್ಪೆ ಗ್ರಾಮದ ಕೃಷಿ ಭೂಮಿಯಲ್ಲಿ ಹೈ ಟೆನ್ಷನ್ ವಿದ್ಯುತ್ ಲೈನ್ ಹಾದುಹೋಗಲು ಸಕಲ ಸಿದ್ಧತೆಗಳು ನಡೆದಿವೆ. ಈ ಯೋಜನೆಯಿಂದಾಗಿ ರೈತರು ದಶಕಗಳಿಂದ ಬೆಳೆಸಿದ ಸಾವಿರಾರು ತೆಂಗು ಮತ್ತು ಅಡಿಕೆ ಮರಗಳನ್ನು ಕಡಿಯಬೇಕಾದ ಅನಿವಾರ್ಯತೆ ಎದುರಾಗಿದೆ. ರೈತರು ಹೇಳುತ್ತಿರುವುದೇನು? ಅವೈಜ್ಞಾನಿಕ ಪರಿಹಾರ: ಅಧಿಕಾರಿಗಳು ಒಂದು ಅಡಿಕೆ ಮರಕ್ಕೆ ಕೇವಲ 3,000 ರೂಪಾಯಿ ಪರಿಹಾರ ನಿಗದಿಪಡಿಸಿದ್ದಾರೆ. ಆದರೆ ರೈತರ ಪ್ರಕಾರ, ಒಂದು ಅಡಿಕೆ ಮರವು ಪ್ರತಿ ವರ್ಷಕ್ಕೆ ಸರಾಸರಿ 3,000 ರೂಪಾಯಿ ಆದಾಯ ನೀಡುತ್ತದೆ. ಹೀಗಿರುವಾಗ ಜೀವಮಾನದ ಆದಾಯ ನೀಡುವ ಮರಕ್ಕೆ ಕೇವಲ ಒಂದು ವರ್ಷದ ಆದಾಯವನ್ನು ಪರಿಹಾರವಾಗಿ ನೀಡುವುದು ನ್ಯಾಯವಲ್ಲ ಎಂಬುದು ರೈತರ…

Read More

ಶಿರಾ: ಹಿಂದೂ ಸಮಾಜೋತ್ಸವ ಆಯೋಜನಾ ಸಮಿತಿ ವತಿಯಿಂದ ಜ. 24 ರಂದು ಶಿರಾ ನಗರದಲ್ಲಿ ಹಿಂದೂ ಸಮಾಜೋತ್ಸವ ಕಾರ್ಯಕ್ರಮ ನಡೆಯಲಿದೆ. ಅಂದು ಮಧ್ಯಾಹ್ನ 1.30ಕ್ಕೆ ಶ್ರೀವಿದ್ಯಾ ಗಣಪತಿ ದೇವಸ್ಥಾನದ ಆವರಣದಿಂದ ಶೋಭಾಯಾತ್ರೆ ಆರಂಭವಾಗಲಿದ್ದು, ಸಂಜೆ 4 ಘಂಟೆಗೆ ಪ್ರೆಸಿಡೆನ್ಸಿ ಶಾಲಾ ಸಮೀಪದ ಆವರಣದಲ್ಲಿ ವೇದಿಕೆಯ ಕಾರ್ಯಕ್ರಮ ನಡೆಯಲಿದೆ. ಆರ್‌ಎಸ್‌ಎಸ್ ಜಿಲ್ಲಾ ವಿಭಾಗದ ಪ್ರಚಾರಕ್ ಶಿವರಾಜು ಮುಖ್ಯ ಭಾಷಣ ಮಾಡಲಿರುವರು. ಶ್ರೀನಂಜಾವಧೂತ ಸ್ವಾಮೀಜಿ, ಶ್ರೀ ಚಿದಾನಂದ ಭಾರತಿ ಸ್ವಾಮೀಜಿ, ಶ್ರೀವೀರಭದ್ರ ಶಿವಾಚಾರ್ಯ ಸ್ವಾಮೀಜಿ, ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ, ಶ್ರೀ ಬಸವ ಮಾಚಿದೇವ ಸ್ವಾಮೀಜಿ, ಶ್ರೀ ಸೇವಾಲಾಲ್ ಸರ್ದಾರ್ ಸ್ವಾಮೀಜಿ, ಶ್ರೀ ಬಸವ ರಮಾನಂದ ಸ್ವಾಮೀಜಿ, ಶ್ರೀ ಮೇದಾರ ಇಮವಿಧೇಯಕಡಿ ಬಸವಪ್ರಭು ಕೇತೇಶ್ವರ ಸ್ವಾಮೀಜಿ, ಶ್ರೀ ವೇದ ಶಿವಶರಣ ದಶರಥ ಗೋಸಾಯಿ ಸ್ವಾಮೀಜಿಗಳು ದಿವ್ಯ ಸಾನಿಧ್ಯ ವಹಿಸುವರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…

Read More

ಪಾವಗಡ: ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆ ಕರಿಯಮ್ಮನ ಪಾಳ್ಯ ಶಾಲೆಯ ಮಕ್ಕಳಿಗೆ ಪಾವಗಡ ತಾಲೂಕು ವಾಲ್ಮೀಕಿ ಜಾಗೃತಿ ವೇದಿಕೆ ವತಿಯಿಂದ ಉಚಿತ ಸಮವಸ್ತ್ರ ನೋಟ್ ಪುಸ್ತಕ ಲೇಖನಿ ಸಾಮಗ್ರಿ ಶಾಲಾ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು ವಾಲ್ಮೀಕಿ ಜಾಗೃತಿ ವೇದಿಕೆ ವತಿಯಿಂದ ಹಮ್ಮಿಕೊಂಡಿರುವ ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರ ಲೇಖನಿ ಸಾಮಗ್ರಿಗಳ ವಿತರಣೆ ಕಾರ್ಯಕ್ರಮವನ್ನು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ  ರೇಣುಕಮ್ಮರವರು ಉದ್ಘಾಟಿಸಿ ಮಾತನಾಡಿ, ಸರ್ಕಾರಿ ಶಾಲೆಯ ಉಳಿವಿಗೆ ಸಂಘ, ಸಂಸ್ಥೆಗಳು, ದಾನಿಗಳು ಮುಂದೆ ಬಂದು ಸರ್ಕಾರಿ ಶಾಲೆ ಉಳಿಸುವ ಪ್ರಯತ್ನಗಳನ್ನು ಪ್ರಾಮಾಣಿಕವಾಗಿ ಮಾಡಿದರೆ ಸರ್ಕಾರಿ ಶಾಲೆಗಳು ಉನ್ನತ ಮಟ್ಟಕ್ಕೆ ಬೆಳೆಯುತ್ತವೆ. ಸರ್ಕಾರಿ ಶಾಲೆಗಳಲ್ಲಿ ಇಂತಹ ಕಾರ್ಯಕ್ರಮಗಳು   ಹೆಚ್ಚಾಗಿ ಆಗಬೇಕು ಎಂದರು ಹಾಗೆಯೇ ವಾಲ್ಮೀಕಿ ಜಾಗೃತಿ ವೇದಿಕೆಯ ವತಿಯಿಂದ ಇಂದು ಹಮ್ಮಿಕೊಂಡಿರುವ ಕಾರ್ಯಕ್ರಮವನ್ನು ಪ್ರಶಂಸಿಸಿ ಅಭಿನಂದನೆಗಳನ್ನು ತಿಳಿಸಿದರು. ಕಾರ್ಯಕ್ರಮ ಉದ್ದೇಶಿಸಿ ವಾಲ್ಮೀಕಿ ಜಾಗೃತಿ ವೇದಿಕೆ ಅಧ್ಯಕ್ಷ ಪಾಳೇಗಾರ್ ಲೋಕೇಶ್ ಮಾತನಾಡಿ,  ಸರ್ಕಾರಿ ಶಾಲೆಯ ಮಕ್ಕಳಿಗೆ ಹಾಗೂ ಶಾಲೆಯ ಅಭಿವೃದ್ಧಿಗೆ ಸಹಾಯ ಸಹಕಾರ ಮಾಡಿ ಬಡ ಮಕ್ಕಳ…

Read More

ಕುಣಿಗಲ್: ಸರ್ಕಾರವು ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಕೋಟ್ಯಂತರ ಹಣ ಖರ್ಚು ಮಾಡುತ್ತಿದೆ. ಆದರೆ ನೀವುಗಳು ಕಾಟಾಚಾರಕ್ಕೆ ಯೋಜನೆಗಳನ್ನು ತಯಾರು ಮಾಡಿ ಕಾಮಗಾರಿಗೆ ಚಾಲನೆ ನೀಡುತ್ತಿದ್ದೀರಿ, ಇದು ನನಗೆ ಸರಿ ಅನಿಸುತ್ತಿಲ್ಲ ಎಂದು ಶಾಸಕ ಡಾ. ಹೆಚ್.ಡಿ. ರಂಗನಾಥ್ ಇಇ ಪಂಪಾಪತಿ ಅವರಿಗೆ ಸೂಚಿಸಿದರು. ಕೊತ್ತಗೆರೆ ಹೋಬಳಿ ಬಾಗೇನಹಳ್ಳಿ ಗ್ರಾಮದಿಂದ ಶೆಟ್ಟಗೆರೆ ಗ್ರಾಮದವರೆಗೆ ಡಾಂಬರೀಕರಣ ರಸ್ತೆ ಕಾಮಗಾರಿಗೆ 4.50 ಕೋಟಿ ರೂ. ವೆಚ್ಚದಲ್ಲಿ ಹಾಗೂ ಸೀನಪ್ಪನಹಳ್ಳಿ ಹೊಸಕೆರೆ ಬಳಿ ಡಾ.ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ 12.50 ಕೋಟಿ ವೆಚ್ಚದ ಎರಡನೇ ಹಂತದ ಅಭಿವೃದ್ಧಿ ಕಾಮಗಾರಿಗೆ ಶಾಸಕರು ಭೂಮಿ ಪೂಜೆ ನೆರವೇರಿಸಿ  ಅವರು ಮಾತನಾಡಿದರು. ಕಳೆದ ನಾಲ್ಕು ದಶಕಗಳ ಹಿಂದೆ ಅಂದಿನ ಸಚಿವರಾದ ಡಿ.ಎನ್. ಹುಚ್ಚಮಾಸ್ತಿಗೌಡ ಅವರು ಕಾಡೋರನಹಳ್ಳಿ ಗ್ರಾಮದಿಂದ ಮಾಗಡಿ ತಾಲೂಕು ಸಂಪರ್ಕಿಸಲು ಬಂಡಿ ಜಾಡು ರಸ್ತೆ ನಿರ್ಮಾಣ ಮಾಡಿಸಿದ್ದರು. ಈ ಭಾಗದಲ್ಲಿ ಉತ್ತಮ ರಸ್ತೆ ಆಗದೆ ತಮಗೆ ತೊಂದರೆಯಾಗಿದೆ ಎಂದು ಗ್ರಾಮಸ್ಥರು ನನ್ನಲ್ಲಿ ಕೋರಿದ್ದರು. ಆದ್ದರಿಂದ ಸರ್ಕಾರದಿಂದ ಹಣ ಮಂಜೂರು ಮಾಡಿಸಿ…

Read More

ತುಮಕೂರು: ಭಾರತದ ಸಮಗ್ರ ಅಭಿವೃದ್ಧಿಯಲ್ಲಿ ಸಿದ್ದಗಂಗಾ ಮಠ ಹಾಗೂ ಡಾ. ಶ್ರೀ ಶಿವಕುಮಾರಸ್ವಾಮೀಜಿ ಅವರ ಕೊಡುಗೆ ಅನನ್ಯವಾಗಿದ್ದು, ಮಠದ ಸಹಾಯಾರ್ಥ ಮಕ್ಕಳಿಗೆ ಅನ್ನ, ಆಶ್ರಯ, ಶಿಕ್ಷಣವನ್ನು ಶ್ರೀಗಳು ದಾನರೂಪದಲ್ಲಿ ನೀಡದೆ ಅವರ ಹಕ್ಕಾಗಿ ಒದಗಿಸುವ ಮೂಲಕ ದೊಡ್ಡ ಮಟ್ಟಕ್ಕೆ ಹಾಕಿಕೊಟ್ಟಿದ್ದಾರೆ ಎಂದು ಭಾರತದ ಉಪ ರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಬಣ್ಣಿಸಿದರು. ಸಿದ್ದಗಂಗಾ ಮಠದಲ್ಲಿ ಬುಧವಾರ ಜರುಗಿದ ಲಿಂಗೈಕ್ಯ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ 7ನೇ ಪುಣ್ಯಸ್ಮರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. “ಪ್ರಧಾನಿ ಮೋದಿ ಅವರ ವಿಕಸಿತ ಭಾರತದ ಪರಿಕಲ್ಪನೆಗೆ ಪೂರಕವಾಗಿ ಸಿದ್ದಗಂಗಾ ಮಠದ ಸೇವಾ ಚಟುವಟಿಕೆಗಳು ನಡೆಯುತ್ತಿದ್ದು, ಅನಿಶ್ಚಿತತೆ, ವಿಭಜನೆ ಮತ್ತು ಅಶಾಂತಿಯನ್ನು ಸೃಷ್ಟಿಸುತ್ತಿರುವ ಈ ಯುಗದಲ್ಲಿ ಸಿದ್ದಗಂಗೆಯ ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮೀಜಿಯವರ ಜೀವನ ನೈತಿಕ ದಿಕ್ಕನ್ನು ಸೂಚಿಸುವ ನಂದಾದೀಪ ವೆನಿಸಿದೆ” ಎಂದರು. ಸಿದ್ಧಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಮಾತನಾಡಿ, “89 ವರ್ಷಗಳ ಕಾಲ ಶ್ರೀಮಠದಲ್ಲಿ ಸುದೀರ್ಘ ಸೇವೆ ಸಲ್ಲಿಸಿದ ನಮ್ಮೆಲ್ಲರ ಪೂಜ್ಯ ಗುರುಗಳಾದ ಡಾ.ಶಿವಕುಮಾರಸ್ವಾಮೀಜಿಯವರು, ನಮ್ಮಲ್ಲಿ ಸದಾ ಕಾಯಕ…

Read More

ಗುಬ್ಬಿ: ಹೇಮಾವತಿ ಎಕ್ಸ್ ಪ್ರೆಸ್ ಕೆನಾಲ್  ಲಿಂಕ್ ಕಾಮಗಾರಿಗೆ  ಮೊದಲಿಂದಲೂ ನಾನು ವಿರೋಧವನ್ನು ಮಾಡುತ್ತಿದ್ದೇನೆ, ಆದರೆ ಆಡಳಿತ ಪಕ್ಷ ಇರುವುದರಿಂದ ನಾನು ಯಾವುದೇ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿಲ್ಲ, ನನಗೆ ನನ್ನ ತಾಲೂಕಿನ ಜನ ಮುಖ್ಯ, ಹೇಮಾವತಿ ನೀರಿನ ವಿಚಾರದಲ್ಲಿ ನನಗೆ ವಿರೋಧವಿದೆ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ತಿಳಿಸಿದರು. ಗುಬ್ಬಿ ತಾಲೂಕಿನ ಮಲಾಮಚಕುಂಟಿ, ಸಣಬನಹಳ್ಳಿ, ಈರಪ್ಪನ ಹಟ್ಟಿ ಹಾಗೂ ಹೂವಿನಕಟ್ಟೆಯಲ್ಲಿ ಹಮ್ಮಿಕೊಂಡಿದ್ದ ಸುಮಾರು 4 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಕುಣಿಗಲ್ ಉತ್ಸವಕ್ಕೆ ನನ್ನನ್ನು ಆಹ್ವಾನ  ಮಾಡಿದರು. ನಾನು ಕೂಡ ಹೋಗಿದ್ದೆ ಆದರೆ ಉಪಮುಖ್ಯ ಮಂತ್ರಿಗಳಾದ  ಡಿ.ಕೆ.ಶಿವಕುಮಾರ್ ಅವರು ಹೇಮಾವತಿ ವಿಚಾರದ ಬಗ್ಗೆ ಮಾತನಾಡಿರುವುದು ನಿಜ. ಆದರೆ ನಾನು ಸಂಪೂರ್ಣ ಬೆಂಬಲ ಕೊಡ್ತೀನಿ ಅಂತ ಎಲ್ಲೋ ಹೇಳಿಲ್ಲ ಹೇಳುವುದು ಇಲ್ಲ.  ಡಿ.ಕೆ.ಶಿವಕುಮಾರ್ ಅವರು ಈ ವಿಚಾರ ಯಾಕೆ ಹೇಳಿದರು ನನಗಂತೂ ಗೊತ್ತಿಲ್ಲ ಆದರೆ ನನ್ನ ತಾಲೂಕಿನ ರೈತರ ಹಿತ ಕಾಪಾಡುವ ಉದ್ದೇಶದಿಂದ ನಾನು ಕೂಡ ಹೇಮಾವತಿ…

Read More

ಸರಗೂರು:  ಹಾಲಿಗೆ ಕಲಬೆರಕೆ ಮಾಡದೆ ಗುಣಮಟ್ಟವನ್ನು ಕಾಯ್ದುಕೊಂಡು ಹಾಲಿನ ಉತ್ಪಾದನೆಗೆ ಹೆಚ್ಚಿನ ಮಹತ್ವ ನೀಡಬೇಕು ಎಂದು ಶಾಸಕರು, ಅರಣ್ಯ ವಸತಿ ಮತ್ತು ವಿಹಾರಧಾಮಗಳ‌ ಸಂಸ್ಥೆ ಅಧ್ಯಕ್ಷ ಅನಿಲ್ ಕುಮಾರ್ ತಿಳಿಸಿದರು. ತಾಲೂಕಿನ ಕೊತ್ತೇಗಾಲ ಗ್ರಾಮದಲ್ಲಿ ನೂತನವಾಗಿ ನಿರ್ಮಾಣ ಗೊಂಡ ಬಿಎಂಸಿ ಕೇಂದ್ರವನ್ನು ಮಂಗಳವಾರದಂದು ಉದ್ಘಾಟಿಸಿ ಅವರು ಮಾತನಾಡಿದರು. ಸಂಘದ ಏಳಿಗೆಗೆ ಎಲ್ಲರೂ ಶ್ರಮಿಸಬೇಕು. ಆ ಮೂಲಕ ಗುಣಮಟ್ಟದ ಹಾಲಿನ ಉತ್ಪಾದನೆಗೆ ಹೆಚ್ಚಿನ ಮಹತ್ವ ನೀಡಬೇಕು ಎಂದು ಸಲಹೆ ನೀಡಿದರು. ಹಾಲಿನಿಂದ ಮನೆಯ ನಿರ್ವಹಣೆ ಮಾಡಬಹುದು. ಹಾಲಿನಿಂದ ಕಲಬೆರಕೆ ಇರೋದಿಲ್ಲ. ಪರಿಶುದ್ದ ಹಾಲು ಮಕ್ಕಳಿಂದ ವಯೋವೃದ್ದರಿಗೂ ಬೇಕು. ಸುಂದರವಾಗಿ ಕಟ್ಟಡ ನಿರ್ಮಾಣವಾಗಿದ್ದು, ಸಂಘ‌ ಉತ್ತಮವಾಗಿ ಬೆಳೆಯಬೇಕು. ರಾಜಕಾರಣ ಮಾಡಬಾರದು ಎಂದು ಹೇಳಿದರು. ಮೈಮುಲ್  ಅಧ್ಯಕ್ಷ ಕೆ.ಈರೇಗೌಡ ಮಾತನಾಡಿ, “ಹಾಲಿಗೆ ನೀರು ಹಾಕದೆ ಗುಣಮಟ್ಟ ಕಾಯ್ದುಕೊಳ್ಳಿ. ಹಸುಗಳಿಗೆ ರೋಗಬರದಂತೆ ಮುನ್ನೆಚ್ಚರಿಕೆ ಕ್ರಮವಹಿಸಿಕೊಂಡು ಆರೋಗ್ಯ ಕಾಪಾಡಿ. ಮುಂದಿನ ದಿನಗಳಲ್ಲಿ ಉತ್ಪಾದಕರು ಸಬಲರಾಗಲು ಹೆಚ್ಚು ಹಾಲು ಉತ್ಪಾದನೆಗೆ ಮುಂದಾಗಬೇಕು,” ಎಂದರು. ಈ ಸಂದರ್ಭದಲ್ಲಿ ಮೈಸೂರು ಜಿಲ್ಲಾ ಹಾಲು…

Read More