Author: admin

ತುಮಕೂರು:  ಚಲಿಸುತ್ತಿದ್ದ ಕಾರಿನಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆ ಕಾರು ನಡುರಸ್ತೆಯಲ್ಲಿ ಧಗ ಧಗನೇ ಹೊತ್ತಿ ಉರಿದು ಭಸ್ಮವಾಗಿದೆ. ಬೆಂಕಿ ಕೆನ್ನಾಲಿಗೆಗೆ ಕಾರು ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಗುಬ್ಬಿ ತಾಲೂಕಿನ ಹೊಸಪಾಳ್ಯ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ನಡೆದಿದೆ. ಗುಬ್ಬಿಯಿಂದ ತುಮಕೂರು ಕಡೆಗೆ ಹೊರಟಿದ್ದ ಹೋಂಡಾ ಐಕಾನ್  ಕಾರು ಚಲಿಸುತ್ತಿದ್ದಾಗಲೇ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕಾರಿನಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಕಿ ಕೆನ್ನಾಲಿಗೆ ಕಾರು ಸಂಪೂರ್ಣ ಭಸ್ಮವಾಗಿದ್ದು ವಿಷಯ ತಿಳಿದು  ತಕ್ಷಣ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿ ಅದರು. ಘಟನೆಯಿಂದ ಯಾವುದೇ ಸಾವು, ನೋವು ಸಂಬವಿಸಿಲ್ಲ. ಈ ಸಂಬಂಧ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ತುಮಕೂರು: ಮಕ್ಕಳ ಕೈ ಸಿಕ್ಕಿದ ಹಂದಿ ಬೇಟೆಗೆ ಬಳಸುವ ಸಿಡಿ ಮದ್ದಿನ ಉಂಡೆಯಿಂದ ಭಾರಿ ಅನಾಹುತ ಒಂದು ತಪ್ಪಿರುವ ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯನಕನಹಳ್ಳಿ ತಾಲ್ಲೂಕಿನ ಮಾದೇನಹಳ್ಳಿಯಲ್ಲಿ ನಡೆದಿದೆ. ಶಾಲೆ ಪಕ್ಕದಲ್ಲೇ ಎಸೆದಿದ್ದ ಸಿಡಿಮದ್ದಿನ  ಉಂಡೆಯನ್ನು ಬಾಲ್ ಅಂತ ಭಾವಿಸಿದ್ದ ಬಾಲಕರಿಬ್ಬರು ಅದನ್ನು ತಮ್ಮ ಬಳಿ ಇಟ್ಟುಕೊಂಡು ಓಡಾಡಿದ್ದಾರೆ. ಯುವರಾಜ ಹಾಗೂ ಶ್ರೀನಿವಾಸ್ ಎಂಬ ಬಾಲಕರಿಗೆ ಸಿಕ್ಕಿದ್ದ ಸ್ಪೋಟಕವೆಂದು ಪರಿಗಣಿತವಾಗಿರಲಿಲ್ಲ. ಶ್ರೀನಿವಾಸ್ ನಿಗೆ ನೀಡಿದ್ದ ಯುವರಾಜ, ಆ ಸ್ಪೋಟಕ ಉಂಡೆಯನ್ನು ತಂದೆಗೆ ನೀಡಿದ್ದನು. ಇದು ಯಾವುದೋ ವಾಮಾಚಾರದ ಬಾಲ್ ಇರಬೇಕೆಂದು ಭಾವಿಸಿದ ಶ್ರೀನಿವಾಸ್ ಅದನ್ನು ದೂರಕ್ಕೆ ಎಸೆದಿದ್ದರು. ಶ್ರೀನಿವಾಸ್ ತಂದೆ ಎಸೆದ ಉಂಡೆಯನ್ನು ಅಲ್ಲಿಯೇ ಇದ್ದ   ಬೀದಿನಾಯಿ ಕಚ್ಚಿತ್ತು. ನಾಯಿ ಕಚ್ಚುತ್ತಿದ್ದಂತೆ  ಮದ್ದಿನ ಉಂಡೆ  ಸ್ಫೋಟಗೊಂಡಿದೆ.  ಸ್ಫೋಟಗೊಳ್ಳುತ್ತಿದ್ದಂತೆ  ಬಾಯಿ ಛಿದ್ರಗೊಂಡ ಸ್ಥಳದಲ್ಲೇ ಪ್ರಾಣ ಬಿಟ್ಟಿದೆ. ಅದೃಷ್ಟವಶಾತ್ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಂದಿ ಬೇಟೆಯಾಡಲು ಬಳಸುವ ಮದ್ದಿನ ಉಂಡೆಯಗಿದೆ ಎಂಬುದು ಖಚಿತವಾಗಿದೆ. ಶಾಲೆ ಪಕ್ಕದಲ್ಲಿ  ಯಾರು ಎಸೆದಿದ್ದರು ಎಂಬ ಅಂಶ ಸ್ಪಷ್ಟವಾಗಿಲ್ಲ. ಸ್ಥಳಕ್ಕೆ…

Read More

ಔರಾದ: ಕರವೇ ರಾಜ್ಯ ಅಧ್ಯಕ್ಷರಾದ ಟಿ.ಎ. ನಾರಾಯಣಗೌಡ ಅವರನ್ನು ಹಾಗೂ ಕರವೇ ಕಾರ್ಯಕರ್ತರನ್ನು ಕೂಡಲೇ ಬಿಡುಗಡೆ ಮಾಡುವಂತೆ ಒತ್ತಾಯಿಸಿ  ಬೀದರ್ ಜಿಲ್ಲೆಯ ಔರಾದ ಪಟ್ಟಣದಲ್ಲಿ ಔರಾದ ಕರವೇ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.  ಕರ್ನಾಟಕ ರಕ್ಷಣಾ ವೇದಿಕೆಯು ಕಳೆದ ಡಿಸೆಂಬರ್ 27  ರಂದು ಬೆಂಗಳೂರಿನಲ್ಲಿ ಕನ್ನಡ ನಾಮ ಫಲಕ ಕಡ್ಡಾಯವಾಗಿ ಹಾಕುವಂತೆ ನಡೆಸಿದ ಬೃಹತ್ ಜನಜಾಗೃತಿ ರಾಲಿಯಲ್ಲಿ ಭಾಗವಹಿಸಿದ್ದ ರಾಜ್ಯ ಅಧ್ಯಕ್ಷರಾದ ಟಿ.ಎ. ನಾರಾಯಣಗೌಡ  ಹಾಗೂ ಕರವೇ ಕಾರ್ಯಕರ್ತರನ್ನು ಪೋಲಿಸರು ಬಂಧಿಸಿರುವುದನ್ನು ಪ್ರತಿಭಟನಾಕಾರರು ಖಂಡಿಸಿದರು. ಮುಖ್ಯಮಂತ್ರಿಗಳು ಕೂಡಲೇ ನಮ್ಮ ರಾಜ್ಯಾಧ್ಯಕ್ಷರನ್ನು ಹಾಗೂ ಕಾರ್ಯಕರ್ತರನ್ನು ಬಿಡುಗಡೆಗೊಳಿಸಿ, ಅವರ ವಿರುದ್ದ ಹೂಡಿರುವ ಮೊಕದ್ದಮೆಯನ್ನು ಹಿಮ್ಮಪಡೆಯವಂತೆ ಒತ್ತಾಯಿಸಿದ ಪ್ರತಿಭಟನಾಕಾರರು ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿಯನ್ನು ಸಲ್ಲಿಸಿದರು.  ಮನವಿ ಸಲ್ಲಿಸಿದ ನಂತರ ಮಾತನಾಡಿದ ಕರವೇ ಜಿಲ್ಲಾ ಅಧ್ಯಕ್ಷ ಸೋಮನಾಥ ಮುದೊಳ,  ನಾಡ ನುಡಿ ನೆಲ ಜಲಕ್ಕಾಗಿ ಜೀವನ ಪರ್ಯಂತ ಹೋರಾಟ ನಡೆಸಿಕೊಂಡು ನಾರಾಯಣ ಗೌಡರನ್ನು ಯಾವುದೇ ಪ್ರಕರಣ ದಾಖಲಿಸದೆ, ಮುಖ್ಯಮಂತ್ರಿಗಳು ಕೂಡಲೆ ಬಿಡುಗಡೆಗೊಳಿಸದಿದ್ದರೆ, ಮುಂಬರುವ ದಿನಗಳಲ್ಲಿ ಉಗ್ರ…

Read More

ಕೆ.ಆರ್. ಪೇಟೆಯ ಅಕ್ಕಿ ಹೆಬ್ಬಾಳು ಶ್ರೀ ಲಕ್ಷ್ಮೀ ವೆಂಕಟೇಶ್ವರ ಸಮುದಾಯ ಭವನದಲ್ಲಿ ತಾಲೂಕು ಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರೆಯ ಪೂರ್ವಭಾವಿ ಸಭೆ ಏರ್ಪಡಿಸಲಾಗಿತ್ತು. ಕಾರ್ಯಕ್ರಮವನ್ನು ಶ್ರೀ ಮಹರ್ಷಿ ವಾಲ್ಮೀಕಿ ಮಠದ ಶ್ರೀ ಪ್ರಸನ್ನಾನಂದ ಮಹಾಸ್ವಾಮಿಗಳು, ಶ್ರೀ ಮಹರ್ಷಿ ವಾಲ್ಮೀಕಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಚುನಾವಣೆ ಬಂದಾಗ ಮಾತ್ರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮಾಜದವರು ರಾಜಕಾರಣಿಗಳಿಗೆ ನೆನಪಾಗುತ್ತಾರೆ, ಚುನಾವಣೆ ನಂತರ ನಮ್ಮ ಸಮಾಜದವರನ್ನು ಮರೆತುಬಿಡುತ್ತಾರೆ. ಅದರಿಂದ ನಮ್ಮ ಸಮಾಜದವರು ಒಗ್ಗಟ್ಟಿನಿಂದ ಇರಬೇಕು. ಒಗ್ಗಟ್ಟಿನಲ್ಲಿ ಬಲವಿದೆ ಎಂದು ತೋರಿಸಬೇಕು ಎಂದು ನಾಯಕ ಸಮಾಜದವರಿಗೆ ಕಿವಿಮಾತು ಹೇಳಿದರು. ಫೆಬ್ರವರಿ 8 ಮತ್ತು 9 ರಂದು ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠ ರಾಜನಹಳ್ಳಿಯಲ್ಲಿ ನಡೆಯಲಿರುವ ಮಹರ್ಷಿ ವಾಲ್ಮೀಕಿ ಜಾತ್ರೆ ಹಾಗೂ ಶ್ರೀ ಮಠದ 26 ನೇ ವಾರ್ಷಿಕೋತ್ಸವ ಮತ್ತು ಲಿಂಗೈಕ್ಯ ಜಗದ್ಗುರು ಶ್ರೀ ಪುಣ್ಯಾನಂದಪುರಿ ಮಹಾಸ್ವಾಮಿಜಿಯವರ 17 ನೇ ವರ್ಷದ…

Read More

ದೌಲತಾಬಾದ್: ಪಶ್ಚಿಮ ಬಂಗಾಳದ ಮುರ್ಷಿಬಾದ್ನ ಶಾಲೆಯೊಂದರ ಬಳಿ ಗುರುವಾರ ಮಧ್ಯಾಹ್ನ ಊಟದ ವೇಳೆ ಬಾಂಬಾ ಸ್ಫೋಟಗೊಂಡು 2 ನೇ ತರಗತಿಯ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ. ಮೃತ ವಿದ್ಯಾರ್ಥಿಯನ್ನು ಮಕ್ಲೇಸೂರ್ ರೆಹಮಾನ್ (7) ಎಂದು ಗುರುತಿಸಲಾಗಿದೆ. ಈ ಸ್ಫೋಟದಿಂದ ಅನೇಕರಿಗೆ ಗಾಯಗಳಾಗಿವೆ. ದೌಲತಾಬಾದ್ ಪೊಲೀಸ್ ಠಾಣೆ ಬಳಿ ಈ ಘಟನೆ ನಡೆದಿದೆ. ಇನ್ನು ಪೊಲೀಸರು ಹಾಗೂ ಸ್ಥಳೀಯ ಪ್ರಕಾರ ಗ್ರಾಮದ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನದ ಊಟ ಮಾಡಿ ಹೊರಗಡೆ ಬರಬೇಕಾದರೆ ಚೆಂಡಿನಂತಿರುವ ಬಾಂಬ್ ಕೈಯಲ್ಲಿ ಹಿಡಿದು, ಸ್ನೇಹಿತರೊಂದಿಗೆ ಆಟವಾಡುತ್ತಿದ್ದ ಈ ವೇಳೆ ರೆಹಮಾನ್ ಚೆಂಡಿನಂತಿರುವ ಬಾಂಬ್ ಗೋಡೆ ಎಸೆದಿದ್ದಾನೆ, ಈ ವೇಳೆ ಬಾಂಬ್ ಸ್ಫೋಟಗೊಂಡಿದೆ. ಈ ವೇಳೆ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇನ್ನು ಪೋಷಕರು ಶಾಲಾ ಮಂಡಳಿಯ ವಿರುದ್ಧ ಆಕ್ರೋಶಗೊಂಡಿದ್ದಾರೆ. ಬಾಂಬ್ ಸ್ಫೋಟದ ಶಬ್ದ ಕೇಳಿ ಸ್ಥಳೀಯರು ಶಾಲೆಯತ್ತ ಬಂದಿದ್ದಾರೆ. ಸ್ಫೋಟದಿಂದ ಬಾಲಕ ಸಾವನ್ನಪ್ಪಿದ್ದಾನೆ. ಹಾಗೂ ಅನೇಕರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಿದ್ದಾರೆ. ಇನ್ನು ಬಾಲಕನ ಮೃತದೇಹವನ್ನು ಪೊಲೀಸರು ಮರಣೋತ್ತರ…

Read More

ರಾಮ ಮಂದಿರ ಉದ್ಘಾಟನಾ ಮಹೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಹಲವು ವಿವಿಐಪಿಗಳು ಉಪಸ್ಥಿತರಾಗಲಿದ್ದಾರೆ. ದೇಶಾದ್ಯಂತ ಸಹ ಲಕ್ಷಾಂತರ ಭಕ್ತರು ಭಾಗವಹಿಸುತ್ತಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಟಿಟಿಡಿ ಎಕ್ಸಿಕ್ಯೂಟೀವ್ ಆಫೀಸರ್ ಎ.ವಿ. ಧರ್ಮರೆಡ್ಡಿ ಅವರು ಲಕ್ಷ ಲಕ್ಷ ಶ್ರೀವಾರಿ ಲಡ್ಡುಗಳನ್ನು ಅಯೋಧ್ಯೆಗೆ ಕಳುಹಿಸುತ್ತಿದ್ದೇವೆ. ಶ್ರೀರಾಮನ ಪ್ರಾಣಪ್ರತಿಷ್ಠಾಪನೆ ಮತ್ತು ಶ್ರೀರಾಮ ಮಂದಿರದ ಉದ್ಘಾಟನಾ ಸಮಾರಂಭಕ್ಕೆ ಬರುವ ಭಕ್ತರಿಗೆ ಈ ಲಡ್ಡುಗಳನ್ನು ನೀಡಲಾಗುತ್ತದೆ. ಪ್ರತಿ ಲಡ್ಡು 25 ಗ್ರಾಂ ತೂಗುತ್ತದೆ. ಅಯೋಧ್ಯೆಯಲ್ಲಿ ನಡೆಯಲಿರುವ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಉದ್ಘಾಟನೆಗೆ ಇಡೀ ದೇಶವೇ ಕಾತರದಿಂದ ಕಾಯುತ್ತಿದೆ ಎಂದು ಹೇಳಿದ್ದಾರೆ.

Read More

ಬೆಂಗಳೂರು: ಹಿರಿಯ ನಾಗರೀಕನ ಮೇಲೆ ನೈಂಟಿ ಎಣ್ಣೆ ಕೊಡಿಸದಿದ್ದಕ್ಕೆ ಇಟ್ಟಿಗೆಯಿಂದ ಹಲ್ಲೆ ನಡೆಸಿದ ಘಟನೆ ಬೆಂಗಳೂರು  ನಗರದ ಗಿರಿನಗರದಲ್ಲಿ ನಡೆದಿದೆ. ಸಿಂಗಾರ ವೇಲು ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದು, ಧರ್ಮ ಕೃತ್ಯದ ನಂತರ ತಲೆಮರೆಸಿಕೊಂಡಿರುವ ಆರೋಪಿಯಾಗಿದ್ದಾನೆ. ಘಟನೆಯಲ್ಲಿ ಸಿಂಗಾರ ವೇಲು ಅವರ ತುಟಿ ಹರಿದು ಹೋಗಿದ್ದು, ಆಸ್ಪತ್ರೆಗೆ ದಾಖಲಿಸಿ ಪ್ಲಾಸ್ಟಿಕ್ ಸರ್ಜರಿ ಮಾಡಿಸಲಾಗಿದೆ. ಡಿಸೆಂಬರ್ 29 ರ ರಾತ್ರಿ 8:30 ರ ಸುಮಾರಿಗೆ ನಡೆದ ಘಟನೆ ಇದು ಎಂದು ತಿಳಿದುಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಗಿರಿನಗರ ಠಾಣಾ ಪೊಲೀಸರು ಆರೋಪಿ ಧರ್ಮನಿಗಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ.

Read More

ಬೆಂಗಳೂರು: ಆಹಾರದಲ್ಲಿ ಜಿರಳೆ ಕಾಣಿಸಿಕೊಂಡಿದ್ದನ್ನು ಪ್ರಶ್ನಿಸಿದ ಹೈಕೋರ್ಟ್ ವಕೀಲರೊಬ್ಬರ ಮೇಲೆ ಹೋಟೆಲ್ ಸಿಬ್ಬಂದಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ವಕೀಲೆ ಶೀಲಾ ದೀಪಕ್ ಅವರು ಗುರುವಾರ ಮಧ್ಯಾಹ್ನ ರಾಜಭವನ ರಸ್ತೆಯಲ್ಲಿರುವ ಕ್ಯಾಪಿಟಲ್ ಹೋಟೆಲ್ ಗೆ ಊಟಕ್ಕೆ ತೆರಳಿದ್ದರು. ಅವರಿಗೆ ಬಡಿಸಿದ ಪನೀರ್ ಬಟರ್ ಮಸಾಲಾ ಖಾದ್ಯದಲ್ಲಿ ಜಿರಳೆ ಕಂಡು ಬಂದಿತ್ತು. ನಂತರ ಅವರು ಮೊಬೈಲ್ ಫೋನ್ ಬಳಸಿ ಅಡುಗೆ ಮನೆಯ ವಿಡಿಯೋ ರೆಕಾರ್ಡ್ ಮಾಡಲು ಯತ್ನಿಸಿದಾಗ ಇಬ್ಬರು ಮಹಿಳಾ ಸಿಬ್ಬಂದಿ ಮತ್ತು ಒಬ್ಬ ಪುರುಷ ಕೆಲಸಗಾರ ಆಕೆಯ ಮೇಲೆ ಹಲ್ಲೆ ನಡೆಸಿದ್ದಾರೆ. ಬಳಿಕ ಶೀಲಾ ಅವರು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅಡುಗೆ ಮನೆಯ ವಿಡಿಯೋ ರೆಕಾರ್ಡ್ ಮಾಡಲು ಯತ್ನಿಸಿದಾಗ ಹೋಟೆಲ್ ಸಿಬ್ಬಂದಿ ಆಕೆಯ ಮೇಲೆ ಹಲ್ಲೆ ನಡೆಸಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಬಳಿಕ ಶೀಲಾ ಅವರು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಘಟನೆಯ ಸಂಬಂಧ ಐಪಿಸಿ ಸೆಕ್ಷನ್ 506 (ಕ್ರಿಮಿನಲ್ ಬೆದರಿಕೆ), 341 (ಅಸಂಯಮದ ವರ್ತನೆ), 504…

Read More

ಭಾರತದ ಅತ್ಯಂತ ಸುರಕ್ಷಿತ ನಗರಗಳು ದಕ್ಷಿಣ ಭಾರತದಲ್ಲಿವೆ ಎಂದು ಮಹಿಳೆಯರು ಹೇಳುತ್ತಾರೆ. ‘ಭಾರತದ ಮಹಿಳೆಯರಿಗಾಗಿ ಉನ್ನತ ನಗರಗಳು’ ವರದಿಯು ಸುರಕ್ಷಿತ ನಗರಗಳ ಬಗ್ಗೆ ಮಾಹಿತಿಯನ್ನು ಹೊಂದಿದೆ. ದೇಶದ 113 ನಗರಗಳ ಮಹಿಳೆಯರನ್ನು ಕೇಂದ್ರೀಕರಿಸಿ ನಡೆಸಿದ ಅಧ್ಯಯನದ ಆಧಾರದ ಮೇಲೆ ವರದಿ ಸಿದ್ಧಪಡಿಸಲಾಗಿದೆ. ಹೆಚ್ಚಿನ ಉದ್ಯೋಗಾವಕಾಶಗಳು, ಮಹಿಳೆಯರ ವಿರುದ್ಧ ಕಡಿಮೆ ಅಪರಾಧ, ಶಿಕ್ಷಣ, ಆರೋಗ್ಯ, ಸಾರಿಗೆ ಮತ್ತು ಸುರಕ್ಷತೆ ಈ ನಗರಗಳನ್ನು ಆಯ್ಕೆ ಮಾಡಲು ಕಾರಣವಾಗಿದೆ. ಒಂದು ಕೋಟಿಗಿಂತ ಹೆಚ್ಚು ಜನಸಂಖ್ಯೆ ಹೊಂದಿರುವ ನಗರಗಳು ಮತ್ತು ಅದಕ್ಕಿಂತ ಕಡಿಮೆ ಜನಸಂಖ್ಯೆಯ ನಗರಗಳು ಎಂದು ಎರಡು ವಿಭಾಗಗಳಾಗಿ ವರದಿಯನ್ನು ವಿಂಗಡಿಸಲಾಗಿದೆ. ಒಂದು ಕೋಟಿ ಅಡಿಯಲ್ಲಿ 64 ನಗರಗಳಲ್ಲಿ ಅಧ್ಯಯನ ನಡೆಸಲಾಗಿದೆ. ಈ ವಿಭಾಗದಲ್ಲಿ ಆಯ್ಕೆಯಾದ ಪ್ರಮುಖ ಐದು ನಗರಗಳಲ್ಲಿ ನಾಲ್ಕು ದಕ್ಷಿಣ ಭಾರತದಿಂದ ಬಂದಿವೆ. ತಮಿಳುನಾಡಿನ ತಿರುಚಿರಾಪಳ್ಳಿ ಮತ್ತು ವೆಲ್ಲೂರು ಮೊದಲ ಮತ್ತು ಎರಡನೇ ಸ್ಥಾನದಲ್ಲಿವೆ. ಕೊಚ್ಚಿ ಮತ್ತು ತಿರುವನಂತಪುರಂ ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿವೆ. ಹಿಮಾಚಲ ಪ್ರದೇಶದ ಶಿಮ್ಲಾ ಐದನೇ ಸ್ಥಾನದಲ್ಲಿದೆ. ಕೋಝಿಕ್ಕೋಡ್…

Read More

ರಾಮಮಂದಿರ ಉದ್ಘಾಟನೆಯಾಗುತ್ತಿರುವುದಕ್ಕೆ ಕಾಂಗ್ರೆಸ್ ನವರು ಹೊಟ್ಟೆಕಿಚ್ಚು ಪಡುತ್ತಿದ್ದಾರೆ ಎಂದಿದ್ದ ಬಿಜೆಪಿ ನಾಯಕರಿಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿರುಗೇಟು ನೀಡಿದ್ದಾರೆ. ಬಿಜೆಪಿಯವರು ದೇಶಕ್ಕಾಗಿ ಏನೇನು ಮಾಡಿಲ್ಲ‌. ದೇಶಕ್ಕಾಗಿ ಎಲ್ಲಾ ರೀತಿಯಲ್ಲಿ ತ್ಯಾಗ ಮಾಡಿದ್ದು ಕಾಂಗ್ರೆಸ್. ನಾವ್ಯಾಕೆ ಹೊಟ್ಟೆ ಕಿಚ್ಚು ಪಡಬೇಕು? ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ. ಶ್ರೀಕಾಂತ್ ಪೂಜಾರಿ ಬಂಧನ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ವಿರುದ್ದ ಕಿಡಿಕಾರಿ ಮಾತನಾಡಿದ ಸಚಿವ ಈಶ್ವರ್ ಖಂಡ್ರೆ,  ಬಿಜೆಪಿಯವರು ಜಾತಿ, ಧರ್ಮಗಳ ನಡುವೆ ವಿಷಬೀಜ ಬಿತ್ತುತ್ತಿದ್ದಾರೆ‌. ಭಾವನಾತ್ಮಕವಾಗಿ ಜನರ ಕೆರಳಿಸಿ ಲಾಭ ಮಾಡಿಕೊಳ್ಳುವುದು ಬಿಜೆಪಿಯ ಗುಣ. ಜನ ಬಹಳಷ್ಟು ಜಾಗೃತರಾಗಿದ್ದಾರೆ. ಈ ರೀತಿಯ ವಿಷ ಬೀಜ ಬಿತ್ತುವ ಬಿಜೆಪಿಗೆ ರಾಜ್ಯದ ಜನರು ತಕ್ಕ ಪಾಠ ಕಲಿಸುತ್ತಾರೆ ಎಂದು ಗುಡುಗಿದರು. ರಾಮ, ಕೃಷ್ಣ, ಸೀತಾ ಎಲ್ಲಾ ಜನರ ಭಕ್ತಿ ಮತ್ತು ನಂಬಿಕೆಗೆ ಬಿಟ್ಟಿದ್ದು. ನಾವು ದೇವರ ಭಕ್ತರೇ ಇದ್ದೇವೆ. ರಾಷ್ಟ್ರವಿರೋಧಿ ಸಂಘಟನೆಗಳಿಗೆ ಯಾವತ್ತಿಗೂ ಬೆಂಬಲ ಕೊಡುವವರು ಬಿಜೆಪಿಯವರು. ನಮಗೆ ನಷ್ಟ ಆದ್ರೂ ಪರವಾಗಿಲ್ಲ, ನಾವು…

Read More