Author: admin

ಬೆಂಗಳೂರು: ಕೊವಿಡ್‌ 19ಗೆ ಗುರುವಾರ ನಾಲ್ವರು ಬಲಿಯಾಗಿದ್ದು, 298 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಸದ್ಯ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1240ಕ್ಕೆ ಏರಿಕೆಯಾಗಿದೆ.  ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 298 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಕೋವಿಡ್ 19 ಪಾಸಿಟಿವ್‌ ಆಗಿ ಆಸ್ಪತ್ರೆಗೆ ಸೇರ್ಪಡೆಯಾಗಿದ್ದ 229 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 7,791 ಮಂದಿಗೆ ಕೊರೋನಾ ಟೆಸ್ಟ್ ಮಾಡಲಾಗಿದೆ. ಪಾಸಿಟಿವಿಟಿ ದರ ಶೇ. 3.82 ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Read More

ಬೆಂಗಳೂರು: ಪ್ರಸ್ತುತ ಬಿಎಂಎಸ್ ಮಹಿಳಾ ಪದವಿ  ಕಾಲೇಜಿನ ಇತಿಹಾಸ ವಿಭಾಗದ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿರುವ ಹಾಗೂ  ಬೆಂಗಳೂರು ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿಯಾಗಿದ್ದ ವಡ್ಡೆ ವೆಂಕಟೇಶ್ ಅವರಿಗೆ  ಪಿಎಚ್.ಡಿ ಪದವಿ ಗೌರವ ನೀಡಲಾಗಿದೆ. ಇವರು ಇತಿಹಾಸ ವಿಭಾಗದ ಹಿರಿಯ  ಪ್ರಾಧ್ಯಾಪಕರಾದ  ಪ್ರೊ. ವಿಜಯಲಕ್ಷ್ಮಿ ಕೆ.ಎಸ್. ಅವರ ಮಾರ್ಗದರ್ಶನದಲ್ಲಿ ಮಂಡಿಸಿದ  “ದ ಅನ್ಆರ್ಗನೈಸ್ಡ್ ಸೆಕ್ಟರ್ ಅಂಡ್ ವರ್ಕಿಂಗ್ ವಿಮೆನ್ ಇನ್ ಕಾಂಟೆಂಪರರಿ  ಬೆಂಗಳೂರು ಸಿಟಿ – ಎ ಸ್ಟಡಿ” ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಪಿಎಚ್.ಡಿ ಪದವಿ ಪ್ರಧಾನ ಮಾಡಲಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.

Read More

ತುಮಕೂರು: ಅಂಬೇಡ್ಕರ್‌ ವಿವಿಧೋದ್ದೇಶ ಸಹಕಾರಿ ಸಂಘ(AVSS) ತುಮಕೂರು ಜಿಲ್ಲಾ ಶಾಖೆ ಸದಾಶಿವನಗರದ ಕಚೇರಿ ಉದ್ಘಾಟನೆ ಕಾರ್ಯಕ್ರಮ ಗುರುವಾರ ನಡೆಯಿತು. ಮೈಸೂರು ಉರಿಲಿಂಗಿ ಪೆದ್ದಿಮಠದ ಗೌರವಾಧ್ಯಕ್ಷರಾದ ಜ್ಞಾನಪ್ರಕಾಶ ಸ್ವಾಮೀಜಿ, ಅಧ್ಯಕ್ಷರು ತುಂಬಲ ರಂಮಣ್ಣ, ಮೈಸೂರು, AVSS ಉಸ್ತುವಾರಿ ರಾಮಾಂಜಿನಪ್ಪ, ಭಾನುಪ್ರಕಾಶ್‌, ನಿವೃತ್ತ ಶಿಕ್ಷಕರು, ಗುಬ್ಬಿ ಮುಖಂಡರು ಶಿವಲಿಂಗಯ್ಯ ಎಂ.ಎಸ್.‌, ಗುಬ್ಬಿ AVSS ಉಸ್ತುವಾರಿ  ಶಿವಲಿಂಗಯ್ಯ ಮೇಳೇಕಲ್ಲಹಳ್ಳಿ, ದಿಬ್ಬೂರು ಸದಸ್ಯರು ಇಂದ್ರಕುಮಾರ್‌ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಶಿವಲಿಂಗಯ್ಯ ಎಂ ಎಸ್  ಮಾತನಾಡಿ, ಡಾ.ಬಿ.ಆರ್. ಅಂಬೇಡ್ಕರ್‌ ಅವರ ಜ್ಞಾಪಕಾರ್ಥವಾಗಿ ಇಡೀ ರಾಜ್ಯದಲ್ಲಿ  ಆರ್ಥಿಕ ಮುಗ್ಗಟ್ಟನ್ನು ಎದುರಿಸಲು  ಅಂಬೇಡ್ಕರ್‌ ವಿವಿಧೋದ್ದೇಶ ಸಹಕಾರಿ ಸಂಘ ಸ್ಥಾಪನೆ ಮಾಡಿದ್ದೇವೆ ಎಂದರು. AVSS ಉಸ್ತುವಾರಿಗಳು ರಾಮಂಜಿನಪ್ಪ ಮಾತನಾಡಿ,   ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಕ್ಕೆ ತಳಮಟ್ಟದಲ್ಲಿ ಆರ್ಥಿಕ ಸಹಕಾರ ನೀಡಬೇಕು ಎನ್ನುವ ಉದ್ದೇಶದಿಂದ ಈ ಸಹಕಾರ ಸಂಘ ಸ್ಥಾಪನೆಯಾಗಿದೆ ಎಂದು ಅವರು ತಿಳಿಸಿದರು. ದಿಬ್ಬೂರು ಸದಸ್ಯರಾದ ಇಂದ್ರ ಕುಮಾರ್  ಮಾತನಾಡಿ, ಈ ಸಹಕಾರ ಸಂಘ ನಾವು ಬಹಳ ತಡವಾಗಿ ಸ್ಥಾಪನೆ ಮಾಡಿದೆವು…

Read More

ನಾಪತ್ತೆಯಾಗಿದ್ದ ಖ್ಯಾತ ಮಾಡೆಲ್ ದಿವ್ಯಾ ಪಹುಜಾ ಕೊಲೆಯಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.  ಗುರುಗ್ರಾಮ್‌ ನ ಹೋಟೆಲ್‌  ಕೋಣೆಯಿಂದ ಮೃತದೇಹವನ್ನು ಎಳೆದುಕೊಂಡು ಹೋಗುತ್ತಿರುವ ಪ್ರಮುಖ ಸಿಸಿಟಿವಿ ದೃಶ್ಯಾವಳಿಗಳು ಪೊಲೀಸರಿಗೆ ಸಿಕ್ಕಿವೆ. ಆದರೆ ಮೃತದೇಹ ಹಾಗೂ ಆರೋಪಿಗಳ ಪತ್ತೆ ಇನ್ನೂ ಸಾಧ್ಯವಾಗಿಲ್ಲ. ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಕೊಲೆ ನಡೆದಿರುವುದು ಬೆಳಕಿಗೆ ಬಂದಿದೆ. ಜನವರಿ 22 ರಂದು ದೆಹಲಿಯ ಉದ್ಯಮಿ ದಿವ್ಯಾ ಪಹುಜಾ ಮತ್ತು ಗುರುಗ್ರಾಮ್‌ ನ ಹೋಟೆಲ್ ಮಾಲೀಕ ಅಭಿಜಿತ್ ಸಿಂಗ್ ಇತರ ಇಬ್ಬರೊಂದಿಗೆ ಹೋಟೆಲ್‌ ಗೆ ಹೋಗಿ ಕೊಠಡಿ ತೆಗೆದುಕೊಂಡಿದ್ದರು. ಕೊಠಡಿ ಸಂಖ್ಯೆ 111ಕ್ಕೆ ಹೋದಾಗಲೂ ಅಭಿಜಿತ್ ಜತೆಗಿದ್ದರು. ಸ್ವಲ್ಪ ಹೊತ್ತಿನ ನಂತರ ದಿವ್ಯಾ ಪಹುಜಾಳ ಮೃತದೇಹವನ್ನು ಕಂಬಳಿಯಲ್ಲಿ ಸುತ್ತಿ ನೆಲದಿಂದ ಎಳೆದು ಹೊರಗೆ ತೆಗೆದಿರುವುದು ಸಿಸಿಟಿವಿ ದೃಶ್ಯಾವಳಿಯಲ್ಲಿ ಸ್ಪಷ್ಟವಾಗಿದೆ. ಈ ದೃಶ್ಯಗಳನ್ನು ಕೇಂದ್ರೀಕರಿಸಿ ತನಿಖೆ ನಡೆಸಿದಾಗ ಕೊಲೆಯ ಹಿಂದೆ ಅಭಿಜಿತ್ ಸಿಂಗ್ ಕೈವಾಡವಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶವವನ್ನು ಹೊಟೇಲ್‌ ನಿಂದ ಹೊರತೆಗೆಯಲು ಅಭಿಜಿತ್ ತನ್ನ ಜೊತೆಗಿದ್ದವರಿಗೆ ಹತ್ತು ಲಕ್ಷ…

Read More

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ  ವೈ.ಎಸ್.ರಾಜಶೇಖರ ರೆಡ್ಡಿ ಅವರ ಪುತ್ರಿ ವೈಎಸ್ ಶರ್ಮಿಳಾ ಕಾಂಗ್ರೆಸ್ ಸೇರಿದ್ದಾರೆ. ಅವರದೇ ಪಕ್ಷ ವೈಎಸ್ ಆರ್ ತೆಲಂಗಾಣ ಪಕ್ಷವನ್ನು ಕಾಂಗ್ರೆಸ್ ಜೊತೆ ವಿಲೀನಗೊಳಿಸಲಾಗುವುದು. ಎಐಸಿಸಿ ಕೇಂದ್ರ ಕಚೇರಿಯಲ್ಲಿ ಬೆಳಗ್ಗೆ 10:30ಕ್ಕೆ ಶರ್ಮಿಳಾ ಕಾಂಗ್ರೆಸ್ ಸೇರಿದ್ದಾರೆ. ದೆಹಲಿಗೆ ಬಂದಿಳಿದ ಶರ್ಮಿಳಾ ಕಾಂಗ್ರೆಸ್ ಸೇರುವ ಮುನ್ನ ಸೋನಿಯಾ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಪಾನೀಯ ಸೇವಿಸಲಿದ್ದಾರೆ. ಆಂಧ್ರಪ್ರದೇಶದಲ್ಲಿ ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿ ವಿರುದ್ಧ ಶರ್ಮಿಳಾ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಮುಂದಾಗಿದೆ. ಕಾಂಗ್ರೆಸ್ ಶರ್ಮಿಳಾ ಅವರಿಗೆ ಪ್ರಮುಖ ಜವಾಬ್ದಾರಿ ನೀಡಬಹುದು ಎನ್ನಲಾಗಿದೆ.

Read More

ಕೇಂದ್ರ ಸರ್ಕಾರ ದೇಶದ ಉನ್ನತ ಪೊಲೀಸ್ ಅಧಿಕಾರಿಗಳ ಸಭೆ ಕರೆದಿದೆ. ಸಭೆಯಲ್ಲಿ ಭಯೋತ್ಪಾದನೆ ಮತ್ತು ಹೊಸ ಕ್ರಿಮಿನಲ್ ಕಾನೂನುಗಳ ಬಗ್ಗೆ ಚರ್ಚಿಸಲು ಉದ್ದೇಶಿಸಲಾಗಿದೆ. ಮೂರು ದಿನಗಳ ಸಭೆ ನಾಳೆ ರಾಜಸ್ಥಾನದ ಜೈಪುರದಲ್ಲಿ ಆರಂಭವಾಗಲಿದೆ. ಎಲ್ಲಾ ರಾಜ್ಯಗಳ ಡಿಜಿಪಿಗಳು ಮತ್ತು ಐಜಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಭೆಯಲ್ಲಿ ಮಾವೋವಾದಿ ವಿಚಾರದ ಬಗ್ಗೆಯೂ ಚರ್ಚೆ ನಡೆಯಲಿದೆ. ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಪೊಲೀಸ್ ಘಟಕಗಳ ಅಂತರರಾಜ್ಯ ಸೇವೆಯ ಸಮನ್ವಯತೆ ಬಗ್ಗೆಯೂ ಚರ್ಚಿಸಲಾಗುವುದು. ಸಂಸತ್ತು ಅಂಗೀಕರಿಸಿದ ಮೂರು ಹೊಸ ಕ್ರಿಮಿನಲ್ ಕಾನೂನುಗಳಿಗೆ ರಾಷ್ಟ್ರಪತಿಗಳು ಅನುಮೋದನೆ ನೀಡಿದ್ದರು. ಅಧ್ಯಕ್ಷೆ ದ್ರೌಪದಿ ಮುರ್ಮು ಅವರು ಎಲ್ಲಾ ಮೂರು ಮಸೂದೆಗಳಿಗೆ ಸಹಿ ಹಾಕಿದರು. ಮೂರು ಮಸೂದೆಗಳು ಭಾರತೀಯ ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷಿ. ಹೊಸ ಶಾಸನವು IPC, CrPC ಮತ್ತು ಎವಿಡೆನ್ಸ್ ಆಕ್ಟ್ ಅನ್ನು ಬದಲಿಸಿದೆ. ದೇಶದ ಕ್ರಿಮಿನಲ್ ಕಾನೂನುಗಳನ್ನು ಸುಧಾರಿಸಲು ಹೊಸ ಮಸೂದೆಗಳನ್ನು ಪರಿಚಯಿಸಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿಕೊಂಡಿದೆ. ಹೊಸ ಮಸೂದೆಗಳ ಪ್ರಕಾರ,…

Read More

ಚಾಕೊಲೇಟ್ ಕೊಟ್ಟು ಊಟ ಕೊಡಿಸುವುದಾಗಿ ಹೇಳಿ 16 ವರ್ಷ ಬಾಲಕಿಯನ್ನ ಕಿಡ್ನಾಪ್ ಮಾಡಲು ಯತ್ನಿಸಿದ ನಾಲ್ವರನ್ನ ನಗರದ ಪೊಲೀಸರು ಬಂಧಿಸಿದ್ದಾರೆ. ಮಲ್ಲಪುರಂ ಜಿಲ್ಲೆಯ ಯಡಪಾಡ್ ಗ್ರಾಮದ ಇಸ್ಮಾಯಿಲ್, ಅಯೂಬ್, ಆಲಿ, ಉಮರ್ ಪೊಲೀಸ್ ಬಂಧಿತ ಆರೋಪಿಗಳು. ಬಂಧಿತರು ಕೇರಳದವರಾಗಿದ್ದು, ನಗರದಲ್ಲಿ ಮನೆ ಮನೆಗೆ ತೆರಳಿ ಕೂದಲು ಸಂಗ್ರಹಿಸುತ್ತಿದ್ದ 16 ವರ್ಷದ ಬಾಲಕಿಯನ್ನು ಮಂಗಳವಾರ ಸಂಜೆ ಅಪಹರಿಸಿ ಕಾರಿನಲ್ಲಿ ಕರೆದೊಯ್ಯುತ್ತಿದ್ದರು. ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲ್ಲೂಕಿನ ಗ್ರಾಮವೊಂದರ ಬಾಲಕಿ ಹಾಗೂ ಆಕೆಯ ಕುಟುಂಬದ ಸದಸ್ಯರು ಕೂದಲು ಸಂಗ್ರಹ ಮತ್ತು ಮಾರಾಟಕ್ಕಾಗಿ ನಗರಕ್ಕೆ ಬಂದಿದ್ದರು. ಮಂಗಳವಾರ ಸಂಜೆ ನಗರದ ವಾಸವಿ ವಿದ್ಯಾಕೇಂದ್ರದ ಮುಂಭಾಗದಲ್ಲಿ ಬಾಲಕಿ ಕೂದಲು ಸಂಗ್ರಹಿಸುತ್ತಿದ್ದಳು. ಈ ವೇಳೆ ಕುಡಿದ ಮತ್ತಿನಲ್ಲಿದ್ದ ಬಂಧಿತ ನಾಲ್ವರು, ಬಾಲಕಿಗೆ ಚಾಕೊಲೇಟ್ ನೀಡಿ  ಊಟಕೊಡಿಸುವುದಾಗಿ ಹೇಳಿ ಕಾರಿನಲ್ಲಿ ಕೂರಿಸಿಕೊಂಡು ತಾಲ್ಲೂಕಿನ ಮಧುವನಹಳ್ಳಿ ಗ್ರಾಮದ ಬಳಿ ಹೋಗುತ್ತಿದ್ದರು. ಈ ವೇಳೆ  ಕಾರು ಬೈಕ್‌ ಗೆ ಡಿಕ್ಕಿ ಹೊಡೆದಿದ್ದು,  ಗ್ರಾಮಸ್ಥರು ಕಾರನ್ನು ತಡೆದಿದ್ದಾರೆ. ನಂತರ ಗ್ರಾಮಸ್ಥರು ಕಾರಿನಲ್ಲಿದ್ದವರನ್ನು ನೋಡಿದಾಗ ನಾಲ್ವರು …

Read More

ನಾವು ಭಾವನೆ ಮೇಲೆ ರಾಜಕಾರಣ ಮಾಡಲ್ಲ. ಏನೇ ಸಮಸ್ಯೆ ಇದ್ದರೂ ನಮ್ಮ ಬಳಿ ಹೇಳಿ ಎಂದು ಜನಸ್ಪಂದನ ಕಾರ್ಯಕ್ರಮದಲ್ಲಿ  ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ಕೆ.ಆರ್​.ಪುರಂನ ಐಟಿಐ ಕ್ರೀಡಾಂಗಣದಲ್ಲಿ ಜನಸ್ಪಂದನ ಕಾರ್ಯಕ್ರಮಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಚಾಲನೆ ನೀಡಿದರು ಬಳಿಕ  ಮಾತನಾಡಿದ ಅವರು, ನೀವು ನಮ್ಮನ್ನು ಭೇಟಿ ಮಾಡಲು ಬಹಳ ಕಷ್ಟ ಆಗುತ್ತೆ. ಶಾಸಕರಿಗೆ ಬಹಳಷ್ಟು ಒತ್ತಡ ಇರುತ್ತೆ. ಹೀಗಾಗಿ ಎಲ್ಲಾ ಅಧಿಕಾರಿಗಳನ್ನು ಕರೆದುಕೊಂಡು ನಿಮ್ಮ ಮನೆ ಬಾಗಿಲಿಗೆ ಬಂದಿದ್ದೇನೆ. ನಿಮ್ಮ‌ ಸಮಸ್ಯೆ ಕೇಳಿಯೇ ಹೋಗುತ್ತೇನೆ.  ನನಗೆ ರಾಜಕಾರಣ ಮುಖ್ಯ ಅಲ್ಲ. ನಿಮ್ಮ ಬದುಕಿನ ಮೇಲೆ ರಾಜಕಾರಣ ಮಾಡಲ್ಲ. ನಾನು ನಿಮ್ಮ ಕಷ್ಟ ಕೇಳಲು ಇಲ್ಲಿಗೆ ಬಂದಿದ್ದೇನೆ ಎಂದು ಜನರನ್ನುದ್ಧೇಶಿಸಿ  ಹೇಳಿದರು. ಕಾರ್ಯಕ್ರಮದಲ್ಲಿ ಶಾಸಕರಾದ ಭೈರತಿ ಬಸವರಾಜ್ ಹಾಗೂ ಮಂಜುಳಾ ಲಿಂಬಾವಳಿ, ಮಾಜಿ ಶಾಸಕರಾದ ನಾಗೇಶ್, ಪೂರ್ಣಿಮಾ,  ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್, ವಿವಿಧ ಪ್ರಾಧಿಕಾರಿಗಳ ಅಧ್ಯಕ್ಷ ರಾಕೇಶ್ ಸಿಂಗ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Read More

ರಾಜ್ಯದಲ್ಲಿ ಗೋಧ್ರಾ ಹತ್ಯಾಕಾಂಡದ ರೀತಿ ಆಗದಂತೆ ನೋಡಿಕೊಳ್ಳಿ ಎಂಬ ಎಂಎಲ್ ಸಿ ಹರಿಪ್ರಸಾದ್ ಹೇಳಿಕೆ ಕುರಿತು ವಿಧಾನಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಕಿಡಿಕಾರಿದ್ದಾರೆ. ಈ ಕುರಿತು ಮಾತನಾಡಿದ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯದಲ್ಲಿ  ಗಲಭೆಗಳು ನಡೆದರೆ  ಸಿಎಂ  ಸಿದ್ದರಾಮಯ್ಯನೇ ನೇರ ಕಾರಣ. ದೇಶದಲ್ಲಿ ಗಲಭೆಯಾದರೇ ಕಾಂಗ್ರೆಸ್ ಪಕ್ಷವೇ ಕಾರಣವಾಗುತ್ತೆ. ಕಾಂಗ್ರೆಸ್ ಪಕ್ಷ ಬಹುದೊಡ್ಡ ಪಿತೂರಿ ಮಾಡಲು ಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ರಾಮನ ಭಕ್ತರಲ್ಲಿ ಭಯ ಹೆಚ್ಚಿಸುವ ಹೇಳಿಕೆ ಇದು. ಕೂಡಲೇ  ಬಿ.ಕೆ ಹರಿಪ್ರಸಾದ್ ರನ್ನ ವಿಚಾರಣೆ ಮಾಡಬೇಕು ಎಂದು ಕೋಟ ಶ್ರೀನಿವಾಸ ಪೂಜಾರಿ ಆಗ್ರಹಿಸಿದರು.

Read More

ಜಮೀನಿನಲ್ಲಿ ಕೆಲಸ ಮಾಡುವ ವೇಳೆ ಹುಲಿ ದಾಳಿ ನಡೆಸಿದ ಪರಿಣಾಮ ಮಹಿಳೆ ಗಂಭೀರ ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಹಲ್ಲರೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಲೋಕೇಶ್ ನಾಯಕ ಪತ್ನಿ ಶಿವಮಲ್ಲಮ್ಮ ಹುಲಿದಾಳಿಗೆ ಸಿಲುಕಿ ಗಂಭೀರ ಗಾಯಗೊಂಡವರು. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹುಲಿ ದಾಳಿ ನಡೆಸಿದ್ದು, ಗಂಭೀರ ಗಾಯಗೊಂಡಿರುವ ಶಿವಮಲ್ಲಮ್ಮ ಅವರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕೆಲವು ದಿನಗಳ ಹಿಂದೆ ಹೆಡಿಯಾಲ ಬಳಿ ಹುಲಿ ದಾಳಿಗೆ ವ್ಯಕ್ತಿ ಬಲಿಯಾಗಿದ್ದರು. ಇದೀಗ ರೈತ ಮಹಿಳೆ ಮೇಲೆ ಹುಲಿ ದಾಳಿಯಿಂದ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಇನ್ನು ವಿಷಯ ತಿಳಿದು ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ  ನಡೆಸಿದ್ದು, ಹುಲಿ ಸೆರೆ ಹಿಡಿಯದ ಅರಣ್ಯಾಧಿಕಾರಿಗಳ ವಿರುದ್ದ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Read More