Author: admin

ತಹಶೀಲ್ದಾರ್ ಕಚೇರಿಗೆ ಬರುವವರ ಕಣ್ಣೀರು ಒರೆಸುವುದಕ್ಕಿಂತ ಪುಣ್ಯದ ಕೆಲಸ ಬೇರೆ ಇಲ್ಲ. ಮಾಸಲು ಬಟ್ಟೆಯಲ್ಲಿ ಚಡ್ಡಿಯಲ್ಲಿ ಬರುವ ಬಡವರ ಕಣ್ಣೀರು ಒರೆಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಕರ್ನಾಟಕ ಆಡಳಿತಾ ಸೇವಾ ಅಧಿಕಾರಿಗಳ ಸಂಘದ 2024ನೇ ಸಾಲಿನ ದಿನಚರಿ ಮತ್ತು ವಾರ್ಷಿಕ ಕ್ಯಾಲೆಂಡರ್ ಬಿಡುಗಡೆ ಮಾಡಿ ಮಾತನಾಡಿದರು. ಸವೆದ ಚಪ್ಪಲಿ, ಹರಕಲು ಚೆಡ್ಡಿ, ಮಾಸಿದ ಬಟ್ಟೆ, ಅವಿದ್ಯಾವಂತರ ಪರವಾಗಿ ನಿಮ್ಮಗಳ ಹೃದಯ ಮಿಡಿಯಬೇಕು. ನೀವು ಒಳ್ಳೆ ಕೆಲಸ ಮಾಡಿದರೆ ಸರ್ಕಾರಕ್ಕೆ ಒಳ್ಳೆ ಹೆಸರು ಬರುತ್ತದೆ. ಈ ಜವಾಬ್ದಾರಿಯನ್ನು ನಿರ್ವಹಿಸಿ, ಮಧ್ಯವರ್ತಿಗಳನ್ನು ನಿಮ್ಮ ಕಚೇರಿ ಬಳಿ ಸೇರಿಸದೆ ಜನರ ಸೇವೆ ಮಾಡಿ ಎಂದರು. ನಾವು ನೀವು ರಾಜ್ಯದ 7 ಕೋಟಿ ಜನರ ಹಿತ ಕಾಯುವುದಕ್ಕಾಗಿ ಇದ್ದೇವೆ. ರಾಜಕಾರಣಿಗಳು ಜನರಿಂದ ರಿನೀವಲ್ ಆದರೆ ಮಾತ್ರ ಐದು ವರ್ಷದ ಬಳಿಕವೂ ಜನ ಸೇವೆಯಲ್ಲಿ ಇರ್ತಾರೆ. ಆದರೆ ಕೆಎಎಸ್ ಅಧಿಕಾರಿಗಳು 30 ವರ್ಷಗಳ‌ ಕಾಲ ನಿರಂತರ ಜನ ಸೇವೆಯಲ್ಲಿ ಇರುತ್ತೀರಿ. ಆದ್ದರಿಂದ ಹೆಚ್ಚು ಜನಪರವಾಗಿ…

Read More

ಅರೆಕಾಲಿಕ ಹುದ್ದೆಗಳಲ್ಲಿ ನೇಮಕಗೊಂಡಿರುವ ಬೋಧಕೇತರ ಸಿಬ್ಬಂದಿಗಳ ಹುದ್ದೆಗೆ ಸಂಬಂಧಿಸಿದಂತೆ ನಡೆದ ಮೈಸೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್‌ ಸಭೆ, ಯಾವುದೇ ನಿರ್ಣಯಕ್ಕೆ ಬಂದಿಲ್ಲ. ಕುಲಪತಿ ಪ್ರೊ.ಲೋಕನಾಥ್‌ ಅಧ್ಯಕ್ಷತೆಯಲ್ಲಿ ವಿಶೇಷ ಸಿಂಡಿಕೇಟ್‌ ಸಭೆ ಆಯೋಜಿಸಲಾಗಿತ್ತು. ವಿವಿಯಲ್ಲಿನ ಬೋಧಕೇತರ ಸಿಬ್ಬಂದಿಗಳ ಹುದ್ದೆ ನೇಮಕಾತಿ ಸಂಬಂಧ ತೀರ್ಮಾನ ಕೈಗೊಳ್ಳುವ ಸಲುವಾಗಿ ಈ ಸಭೆ ನಡೆಸಲಾಯಿತು. ಆದರೂ ಯಾವುದೇ ಅಂತಿಮ ತೀರ್ಮಾನಕ್ಕೆ ಸಭೆ ಬರಲಾಗಲಿಲ್ಲ. ಬೋಧಕೇತರ ಸಿಬ್ಭಂದಿ ನೇಮಕ ಪ್ರಶ್ನಿಸಿ ಸರಕಾರ ಸೂಕ್ತ ಕ್ರಮಕ್ಕೆ ಸೂಚಿಸಿದ್ದ ಹಿನ್ನೆಲೆಯಲ್ಲಿ ಈ ಸಭೆ ಮಹತ್ವ ಪಡೆದುಕೊಂಡಿತ್ತು. 400 ಕ್ಕೂ ಹೆಚ್ಚು ಬೋಧಕೇತರ ಸಿಬ್ಬಂದಿಗಳ ಅಳಿವು –ಉಳಿವಿನ ಪ್ರಶ್ನೆ ಇದಾಗಿತ್ತು.

Read More

ಧಾರವಾಡ: ‘ಯುವಜನರು ಭವ್ಯ ಭಾರತದ ಭವಿಷ್ಯ ಮತ್ತು ಅಭಿವೃದ್ಧಿಯ ಪ್ರಮುಖ ಅಂಶವಾಗಿದ್ದು, ಇಂದಿನ ಯುವ ಸಮುದಾಯವೇ ಭಾರತ ಇಂದು ವಿಶ್ವ ಗುರು ಆಗಲು ಕಾರಣವಾಗಿದೆʼ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಅಂಗವಿಕಲರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅಭಿಪ್ರಾಯಪಟ್ಟರು. ಇಲ್ಲಿನ ಕರ್ನಾಟಕ ಕಾಲೇಜಿನ ಸೃಜನಾ ರಂಗಮಂದಿರದಲ್ಲಿ ಕರ್ನಾಟಕ ಕಲಾ ಮಹಾವಿದ್ಯಾಲಯದ ಪ್ರವಾಸೋದ್ಯಮ ಅಧ್ಯಯನ ವಿಭಾಗ ಹಾಗೂ ಕೇಂದ್ರ ಪವಾಸೋದ್ಯಮ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಮೂರು ದಿನಗಳ ʻಸಾಂಸ್ಕೃತಿಕ ಉತ್ಸವ- ಸಾರ್ಥವಾಹ-2024 ವಿಶೇಷ ಕಾರ್ಯಕ್ರಮ ಉದ್ಘಾಟಿಸಿ, ಸಚಿವರು ಮಾತನಾಡಿದರು. ಸ್ವಾತಂತ್ರ್ಯ ಬಂದ 75 ವರ್ಷಗಳಲ್ಲಿ ಭಾರತ ಗಮನಾರ್ಹ ಪ್ರಗತಿ ಸಾಧಿಸಿದೆ. ಸ್ವಾವಲಂಬನೆಯತ್ತ ರಾಷ್ಟ್ರದ ಪ್ರಯಾಣ ಮುಂದುವರಿದಿದೆ. ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿಸಲು ಹಾಗೂ ದೇಶವನ್ನು ವಿಶ್ವದ ಅತ್ಯುತ್ತಮ ಸ್ಥಾನದಲ್ಲಿ ಇರಿಸಲು ಪ್ರತಿಯೊಬ್ಬರ ಸಹಕಾರ ಅಗತ್ಯವಿದೆ ಎಂದು ಹೇಳಿದ ಅವರು, ಭಾರತವು ವಿಶಿಷ್ಟ ಸಂಸ್ಕೃತಿಗಳಿಂದ ತುಂಬಿದ ವೈವಿಧ್ಯಮಯ ದೇಶವಾಗಿದೆ ಮತ್ತು ವಿವಿಧತೆಯಲ್ಲಿ ಏಕತೆ ಈ ರಾಷ್ಟ್ರದ ಶಕ್ತಿಯಾಗಿ ಉಳಿದಿದೆ…

Read More

ಪೀರನವಾಡಿ ಪಟ್ಟಣ ಪಂಚಾಯತಿಯಲ್ಲಿ ನಡಿಯುತೀರುವ ಎದ್ವಾ -ತದ್ವಾ ಕೆಲಸಗಳ ಬಗ್ಗೆ ಪೀರನವಾಡಿ ಪಟ್ಟಣದ ನಾಗರಿಕರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಂಖಡ ರಾಕೇಶ್ ತಳವಾರ ಅವರ ನೇತೃತ್ವದಲ್ಲಿ ಪಟ್ಟಣ ಪಂಚಾಯತ್ ಕಚೇರಿಗೆ ಆಗಮಿಸಿ, ಮುಖ್ಯ ಅಧಿಕಾರಿ ಹನುಮಂತಪ್ಪ ಮನೋ ವಡ್ಡರ ಅವರಿಗೆ ಪಟ್ಟಣ ಪಂಚಾಯಿತಿ ಕಚೇರಿಯಿಂದ ಹಾಗೂ ಸಿಬ್ಬಂದಿಗಳಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತಿರುವ ವಿಚಾರವನ್ನು ಪ್ರಶ್ನೆ ಮಾಡಿದರು . ಪಟ್ಟಣ ಪಂಚಾಯತಿಯಿಂದ ಅನುಷ್ಠಾನಗೊಳುತ್ತಿರುವ ಯೋಜನೆಗಳು ಹಾಗೂ ಅನುದಾನಗಳ ಖರ್ಚು ವೆಚ್ಚಗಳನ್ನು ಸಾರ್ವಜನಿಕಗೊಳಿಸಬೇಕು ಮತ್ತು ಪಟ್ಟಣದ ಕಸ ವಿಲೇವಾರಿ ಗುತ್ತಿಗೆದಾರರು ಯಾರಿದ್ದಾರೆ ? ಹಾಗೂ ಕಂಪ್ಯೂಟರ್ ಉತಾರ ನಿಗದಿಯಾಗಿರುವ ದರ ಎಷ್ಟು ? ಎಂಬುದು ಉತ್ತರವನ್ನು ನೀಡಬೇಕೆಂದು ನಾಗರಿಕರು ಒತ್ತಾಯಿಸಿದರು. ಏಳುದಿನಗಳ ಒಳಗೆ ಕಚೇರಿ ಹೊರಗಡೆ ಯೋಜನೆಗಳ ಮಾಹಿತಿ ಇರುವ ಫಲಕ ಹಾಕಬೇಕು ಮತ್ತು ಗ್ರಾಮ ಸಭೆ ಮಾಡಬೇಕು ಎಂದು ಒತ್ತಾಯ ಮಾಡಿದರು. ಈ ಸಂದರ್ಭದಲ್ಲಿ ರಾಕೇಶ್ ತಳವಾರ್ ಮಾತನಾಡಿ, ಪಟ್ಟಣ ಪಂಚಾಯತಿ ಸಿಬ್ಬಂದಿಗಳ ವರ್ತನೆ ಸಾರ್ವಜನಿಕರ ಜೊತೆ ಸರಿಯಾಗಿಲ್ಲ,…

Read More

ಪಾವಗಡ:  ತಾಲೂಕಿನಲ್ಲಿ ಇರುವಂತಹ ಸೋಲಾರ್ ಕಂಪನಿಗಳು ಸ್ಥಳೀಯ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪಾವತಿಸಬೇಕಾದಂತಹ ತೆರಿಗೆ ಎಲ್ಲ ಪಾವತಿಸದೆ ವಂಚಿಸುತ್ತಿದ್ದು, ಇವುಗಳ ವಿರುದ್ಧ ಆಡಳಿತ ಸೂಕ್ತ ರೀತಿಯ ಕ್ರಮ ಕೈಗೊಳ್ಳಬೇಕು ಎಂದು ಎಎಪಿ ಮುಖಂಡ ರಾಮಾಂಜಿನಪ್ಪ ಒತ್ತಾಯಿಸಿದರು. ಪಾವಗಡ ಪಟ್ಟಣದ ತಮ್ಮ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು,  ಪಾವಗಡ ಸೋಲಾರ್ ಪಾರ್ಕ್ ವಿಚಾರದಲ್ಲಿ ಸ್ಥಳೀಯ  ಮಟ್ಟದ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಗ್ರಾಮ ಲೆಕ್ಕಾಧಿಕಾರಿ, ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಜಾಣ ಕುರುಡರಾಗಿದ್ದಾರೆ. ಒಂದೊಂದು ಸೋಲಾರ್ ಕಂಪನಿ, ಲಕ್ಷಾಂತರ ರೂಪಾಯಿ ತೆರಿಗೆ ಹಣವನ್ನು ಬಾಕಿ ಉಳಿಸಿಕೊಂಡಿರುವುದರಿಂದ ಪಂಚಾಯತಿ ಅಭಿವೃದ್ಧಿ ಕುಂಠಿತಗೊಳ್ಳುತ್ತಿದೆ, ಪಂಚಾಯಿತಿ ಮಟ್ಟದಲ್ಲಿ ಜನರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸಾಧ್ಯವಾಗುತ್ತಿಲ್ಲ, ಈಗಾಗಲೇ ಪಾವಗಡ ತಾಲೂಕಿನ ತಿರುಮಣಿ , ನಾಗಲಮಡಿಕೆ, ವಳ್ಳೂರು ಸೇರಿದಂತೆ ಯಾವ ಯಾವ ಗ್ರಾಮ ಪಂಚಾಯತಿಗಳಲ್ಲಿ ಖಾಸಗಿ ಸೋಲಾರ್ ಕಂಪನಿಗಳ ಬಗ್ಗೆ ಮಾಹಿತಿಯನ್ನು ಪಡೆಯಲು ಮುಂದಾದಾಗ ಯಾವ ಗ್ರಾಮ ಪಂಚಾಯಿತಿನಲ್ಲೂ ಸಮರ್ಪಕವಾದ ಉತ್ತರ ಲಭಿಸುತ್ತಿಲ್ಲ ಎಂದು ಅವರು ದೂರಿದರು. ಪಾವಗಡ ತಾಲೂಕು…

Read More

ತುರುವೇಕೆರೆ: ತಾಲ್ಲೂಕಿನ ದಬ್ಬೇಘಟ್ಟ ಗ್ರಾಮದಲ್ಲಿ ತೋಟಗಾರಿಕೆ ಇಲಾಖೆ ಮತ್ತು ಜಿಲ್ಲಾ ಪಂಚಾಯತ್ ತುಮಕೂರು ಇವರ ವತಿಯಿಂದ “ರೈತರ ತಾಕುಗಳಲ್ಲಿ ಪ್ರಾತ್ಯಕ್ಷತೆ ಕಾರ್ಯಕ್ರಮ” ತೆಂಗಿನ ಬೆಳೆಗಳಿಗೆ ರೋಗನಿರ್ವಹಣೆ ವಿಚಾರ ಸಂಕೀರ್ಣ ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಶಾಸಕ ಎಂ.ಟಿ. ಕೃಷ್ಣಪ್ಪ, ಈ ಕಾರ್ಯಕ್ರಮಕ್ಕೆ ದಬ್ಬೇಘಟ್ಟ ಹೋಬಳಿಯಿಂದ ಸಾಕಷ್ಟು ರೈತರು ಬರುವ ನಿರೀಕ್ಷೆಯಿತ್ತು ತೋಟಗಾರಿಕಾ ಇಲಾಖೆಯ ಸಿಬ್ಬಂದಿಗಳಿಂದ ರೈತರಿಗೆ ಸರಿಯಾದ ಮಾಹಿತಿ ದೊರಕದೆ ರೈತರು ಕಡಿಮೆ ಸಂಖ್ಯೆಯಲ್ಲಿ ಭಾಗವಹಿಸಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರಲ್ಲದೇ,   ಈ ಕಾರ್ಯಕ್ರಮ ನನಗೆ ತೃಪ್ತಿ ತಂದಿಲ್ಲ ಮುಂದಿನ ದಿನಗಳಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ರೈತರಿಗೆ ಸರಿಯಾಗಿ ಮಾಹಿತಿ ನೀಡಿ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು. ದಬ್ಬೇಘಟ್ಟ ಹೋಬಳಿಯು ತೀರಾ ಹಿಂದುಳಿದಿದ್ದು ನೀರಾವರಿ ಸೌಲಭ್ಯದಿಂದ ವಂಚಿತವಾಗಿದೆ ಇದನ್ನು ಮನಗಂಡು ನಾನು ಕಳೆದ ಬಾರಿ ಶಾಸಕನಾಗಿದ್ದಾಗ ಮಲ್ಲಾಘಟ್ಟ ಹಿನ್ನೀರಿನಿಂದ  ಏತನೀರಾವರಿಗೆ ಯೋಜನೆಯನ್ನು ರೂಪಿಸಿ, ಅದನ್ನು ಜಾರಿಗೊಳಿಸಲು ಸಾಕಷ್ಟು ಶ್ರಮವಹಿಸಿದ್ದೇನೆ.  ಇದರಿಂದ ಹೋಬಳಿಯ ಸುಮಾರು ಕೆರೆಗಳಿಗೆ ನೀರು ಹರಿಯಲಿದ್ದು,  ಈ ಭಾಗದ ರೈತರಿಗೆ ಉಪಯೋಗವಾಗಲಿದೆ…

Read More

ಛತ್ತೀಸ್ ‌ಗಢ: 16 ವರ್ಷದ ಬಾಲಕಿಯನ್ನು ಅಪಹರಿಸಿ  2 ದಿನಗಳ ಕಾಲ  ನಿರಂತರ ಅತ್ಯಾಚಾರವೆಸೆಗಿದ ಘಟನೆ ಛತ್ತೀಸ್‌ ಗಢದ ಗೌರೆಲಾ-ಪೇಂದ್ರ-ಮಾರ್ವಾಹಿ ಜಿಲ್ಲೆಯಲ್ಲಿ ನಡೆದಿದೆ. ಡಿ.21ರಂದು ಸಂಜೆ ಆರೋಪಿ ಹಾಗೂ ಆತನ ತಾಯಿ  ಸೇರಿಕೊಂಡು ಬಾಲಕಿಯನ್ನು ಮನೆಗೆ ಲಿಫ್ಟ್ ಕೊಡುವ ನೆಪದಲ್ಲಿ ಅಪಹರಿಸಿದ ಆರೋಪಿಗಳು ಬೈಕ್‌ನಲ್ಲಿ ತನ್ನ ಮನೆಗೆ ಕರೆದೊಯ್ದು ಎರಡು ದಿನಗಳ ಕಾಲ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ನಂತರ ಆರೋಪಿ ಮತ್ತು ಆತನ ತಾಯಿ ಬಾಲಕಿಯ ಮೇಲೆ ಹಲ್ಲೆ ನಡೆಸಿ  ಪ್ರಜ್ಞಾಹೀನ ಸ್ಥಿತಿಯಲ್ಲಿ ಗ್ರಾಮದ ಹೊರವಲಯದಲ್ಲಿರುವ ಕೊಳದ ಬಳಿ ಬಿಟ್ಟು ಹೋಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ವಿಷಯ ತಿಳಿದ ಬಾಲಕಿಯ ತಂದೆ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಂತ್ರಸ್ತೆಯ ತಂದೆಯು ಆರೋಪಿ ಹಾಗೂ ಆತನ ತಾಯಿ ವಿರುದ್ಧ ದೂರು ದಾಖಲಿಸಿದ್ದಾರೆ. ಅವರ ದೂರಿನ ಆಧಾರದ ಮೇಲೆ, ಪೊಲೀಸರು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.ಆರೋಪಿಯನ್ನು ಡಿಸೆಂಬರ್ 29 ರಂದು ಬಂಧಿಸಲಾಗಿದ್ದು, ಆತನ ತಾಯಿಯನ್ನು ಪತ್ತೆಹಚ್ಚಿ ಬಂಧಿಸುವುದಾಗಿ   ಪೊಲೀಸರು ತಿಳಿಸಿದ್ದಾರೆ.

Read More

ಶುಂಠಿ ಎಣ್ಣೆಯಿಂದ ಕೂದಲಿನ ಸಮಸ್ಯೆಗಳು ನಿವಾರಣೆಯಾಗುತ್ತವೆ: ಬಿಳಿ ಕೂದಲಿಗೆ ಶುಂಠಿ ಎಣ್ಣೆಯನ್ನು ಬಳಸುವುದರಿಂದ ಅದು ಕಪ್ಪು ಬಣ್ಣಕ್ಕೆ ತಿರುಗುತ್ತದೆ. ಇದರಿಂದ ಕೂದಲು ಉದುರುವುದು ಕೂಡ ಕಡಿಮೆಯಾಗುತ್ತದೆ ಎನ್ನುತ್ತಾರೆ ತಜ್ಞರು. ವಾರದಲ್ಲಿ ಮೂರು ದಿನ ಶುಂಠಿ ಎಣ್ಣೆಯನ್ನು ಬಳಸುವುದರಿಂದ ಕೂದಲಿನ ಆರೋಗ್ಯ ಸುಧಾರಿಸುತ್ತದೆ. ಶುಂಠಿಯನ್ನು ಸೇವಿಸುವುದರಿಂದ ಕೂದಲಿಗೆ ರಕ್ತ ಸಂಚಾರಕ್ಕೆ ಸಹಕಾರಿಯಾಗುತ್ತದೆ. ಶುಂಠಿಯಲ್ಲಿ ವಿಟಮಿನ್ ಬಿ, ಎ, ಸಿ, ಇ ಮುಂತಾದ ಪೋಷಕಾಂಶಗಳು ಹೇರಳವಾಗಿವೆ. ಇವು ಕೂದಲಿನ ಆರೋಗ್ಯಕ್ಕೆ ಹಲವು ರೀತಿಯಲ್ಲಿ ಉಪಯುಕ್ತವಾಗಿವೆ. ತೂಕ ಇಳಿಸಿಕೊಳ್ಳಲು ಬಯಸಿದರೆ ನೀವು ಬೆಳಗಿನ ಉಪಾಹಾರದಲ್ಲಿ ಇವುಗಳನ್ನು ತಿನ್ನಬೇಕು: ಅನೇಕ ಜನರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ ತೂಕವನ್ನು ಕಳೆದುಕೊಳ್ಳುವಲ್ಲಿ ಆಹಾರ ಕ್ರಮವು ಬಹಳ ಮುಖ್ಯವಾಗಿದೆ. ಆಹಾರ ಮತ್ತು ವ್ಯಾಯಾಮದ ಬಗ್ಗೆ ಜಾಗರೂಕರಾಗಿರಬೇಕು. ಅದಕ್ಕಾಗಿ, ನೀವು ಖಂಡಿತವಾಗಿಯೂ ಆರೋಗ್ಯಕರ ಉಪಹಾರವನ್ನು ಸೇವಿಸಬೇಕು. ಓಟ್ಸ್, ನಟ್ಸ್, ಬೇಯಿಸಿದ ಮೊಟ್ಟೆ, ಬಾಳೆಹಣ್ಣು ಇತ್ಯಾದಿಗಳನ್ನು ಬೆಳಗಿನ ಉಪಾಹಾರವಾಗಿ ತೆಗೆದುಕೊಳ್ಳಬಹುದು. ಇವೆಲ್ಲವೂ ತೂಕ ಇಳಿಕೆಗೆ ಸಹಕಾರಿ ಎನ್ನುತ್ತಾರೆ ಆರೋಗ್ಯ ತಜ್ಞರು. ಬೆಳಗ್ಗೆ ಕುಡಿಯುವ…

Read More

ಮರ್ಯಾದಾ ಪುರುಷ ಶ್ರೀರಾಮನಿಗೂ ಮತ್ತು ಕರ್ನಾಟಕಕ್ಕೂ ಅವಿನಾಭಾವ ಸಂಬಂಧವಿದೆ. ಶ್ರೀರಾಮ ತನ್ನ ವನವಾಸ ಕಾಲದಲ್ಲಿ ಲಕ್ಷಣ, ಸೀತಾದೇವಿಯ ಜೊತೆಗೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಮೇಲುಕೋಟೆ ಸಮೀಪ ಇರುವ ಧನುಷ್ಕೋಟಿಗೆ ಬಂದು ತಂಗಿದ್ದ. ಆ ವೇಳೆ, ಸೀತಾದೇವಿಗೆ ಬಾಯಾರಿಕೆಯಾಗಿ ನೀರು ಬೇಕು ಎಂದಾಗ ಶ್ರೀರಾಮ ಬಂಡೆಗೆ ಬಾಣ ಬಿಟ್ಟು ನೀರು ಬರಿಸಿದ್ದ. ಹೀಗಾಗಿಯೇ ಇಲ್ಲಿ ಎಂತಹ ಕಾಲದಲ್ಲೂ ನೀರು ಇರುತ್ತೆ. ಬೇಸಿಗೆ ಇರಲಿ, ಬರಗಾಲ ಎದುರಾದರೂ ನೀರು ಖಾಲಿಯಾಗುವುದಿಲ್ಲ. ಶ್ರೀರಾಮ ಧನಸ್ಸು ಬಿಟ್ಟು ನೀರು ಬರಿಸಿದ ಸ್ಥಳ ಧನುಷ್ಕೋಟಿ ಎಂದೇ ಹೆಸರಾಗಿದೆ.

Read More

ರಾಜ್ಯದಲ್ಲಿ ಮತ್ತೆ ಮದ್ಯದ ದರ ಹೆಚ್ಚಳವಾಗಿದೆ. ಬಡವರು ಹೆಚ್ಚಾಗಿ ಕುಡಿಯುವ ಬ್ರ್ಯಾಂಡ್​ ಗಳ ದರ ಏರಿಕೆ ಮಾಡಲಾಗಿದೆ. ಜೊತೆಗೆ ಮದ್ಯ ಉತ್ವಾದಕ ಕಂಪನಿಗಳು 20 ರಿಂದ 30 ರೂಪಾಯಿ ಹೆಚ್ಚಳ ಮಾಡಿವೆ ಎಂದು ಸುದ್ದಿ ಹರಡಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿರುವ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ , ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿದ ಸಚಿವ ಆರ್.ಬಿ. ತಿಮ್ಮಾಪುರ, ರಾಜ್ಯ ಸರ್ಕಾರದಿಂದ ಯಾವುದೇ ಮದ್ಯದ ದರ ಏರಿಕೆ ಮಾಡಿಲ್ಲ. ಮದ್ಯ ಉತ್ಪಾದಕರು ದರ ಹೆಚ್ಚಳ ಮಾಡಿರಬಹುದು. ಆದರೆ ನಾವಂತೂ ಹೆಚ್ಚಿಸಿಲ್ಲ. ಅಬಕಾರಿ ಶುಲ್ಕ ಹೆಚ್ಚಳ ಮಾಡೋದಾದರೆ ಮೊದಲೇ ಹೇಳುತ್ತೇವೆ. ಇನ್ನು ಬಜೆಟ್​​ ನಲ್ಲೂ ಸದ್ಯ ತೆರಿಗೆ ಹೆಚ್ಚಳದ ಬಗ್ಗೆ ಪ್ರಸ್ತಾಪ ಮಾಡಿಲ್ಲ. ಯಾವುದೇ ಟಾರ್ಗೆಟ್ ಕೂಡ ನೀಡಿಲ್ಲ, ಆದರೆ, ಆದಾಯ ಸಂಗ್ರಹದ ಗುರಿ ಇದೆ ಎಂದು ತಿಳಿಸಿದರು. ರಾಮಲಲ್ಲಾ ಪ್ರತಿಷ್ಠಾಪನೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಆರ್.ಬಿ. ತಿಮ್ಮಾಪುರ, ರಾಮನ ಗುಡಿ ಕಟ್ಟಿದರೆ ಸಾಲದು, ರಾಮರಾಜ್ಯ ಆಗಬೇಕು. ಧರ್ಮ, ದೇವರು ಯಾರಪ್ಪನ…

Read More