Subscribe to Updates
Get the latest creative news from FooBar about art, design and business.
- ಇ–ಪೌತಿ ಖಾತಾ ಆಂದೋಲನ–2 : ರೈತರಿಂದ ಅರ್ಜಿಗಳ ಸ್ವೀಕಾರ — ಬಾಕಿ ಆರ್ ಆರ್ ಟಿ ಅರ್ಜಿಗಳ ಶೀಘ್ರ ವಿಲೇವಾರಿಗೆ ಸೂಚನೆ
- ನೀಟ್ ಮರು ಪರೀಕ್ಷೆ ; ಕಟ್ಟುನಿಟ್ಟಿನ ಸಿದ್ಧತೆಗೆ ಎಡಿಸಿ ಸೂಚನೆ
- ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹ
- ಜೂನ್ 19ರಂದು ತುಮಕೂರಿನಲ್ಲಿ ಪ್ರಧಾನ ಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ
- ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
- ಜು.18: ನ್ಯಾಯಾಲಯಗಳಲ್ಲಿ ವಿಶೇಷ ಲೋಕ ಅದಾಲತ್: ವಿವಿಧ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಸಹಕಾರಿ
- ಕೊರಟಗೆರೆ: ಆಟೋ ಡಿಕ್ಕಿಯಾಗಿ ಯುವಕ ಸಾವು
- ಸಮಾಜ ಕಲ್ಯಾಣ ಇಲಾಖೆ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಆರಂಭ
Author: admin
ಸರಗೂರು: ಕಾಳಿಹುಂಡಿ ಗ್ರಾಮಕ್ಕೆ 1 ಕೋಟಿ ರೂ. ಗ್ರಾಮ ವಿಕಾಸ್ ಯೋಜನೆಯಡಿ ಮಂಜೂರಾಗಿದೆ. ಉಳಿಕೆ ರಸ್ತೆ ಕಾಮಗಾರಿಗೆ ಅನುದಾನ ಬಿಡುಗಡೆಯಾಗಿದ್ದು, ಭೂಮಿ ಪೂಜೆ ನೆರವೇರಿಸಲಾಗುವುದು ಎಂದು ಶಾಸಕ ಅನಿಲ್ ಚಿಕ್ಕಮಾದು ತಿಳಿಸಿದರು. ಮುಂದಿನ ದಿನಗಳಲ್ಲಿ ರಸ್ತೆ ಡಾಂಬರೀಕರಣಕ್ಕೆ ಅನುದಾನ ಬಿಡುಗಡೆ ಮಾಡಲಾಗುವುದು. ಕೋಟೆ ದೊಡ್ಡ ತಾಲೂಕು ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡುತ್ತಿದ್ದೇನೆ. ತಂದೆಯ ಶ್ರಮದ ಫಲವಾಗಿ ಉಸಿರು ಇರುವರೆಗೂ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಲಾಗುವುದು. ನಮ್ಮ ತಂದೆ ದಿ ಚಿಕ್ಕಮಾದುರವರು ಗುದ್ದಲಿ ಪೂಜೆ ಸಲ್ಲಿಸಿದ ಕಾಮಗಾರಿಯನ್ನು ಪೂರ್ಣಗೊಳಿಸಲು ಮಾರ್ಚ್ ತಿಂಗಳಲ್ಲಿ ನಡೆಯುವ ಬಜೆಟ್ ಮಂಡನೆ ಮುಗಿದ ಮೇಲೆ ಅನುದಾನವನ್ನು ಬಿಡುಗಡೆಗೊಳಿಸಿ ಪೂರ್ಣ ಮಾಡಲಾಗುವುದು ಎಂದರು. ಅಂಬೇಡ್ಕರ್ ಭವನದ ಸುತ್ತ ಕಾಂಪೌಂಡ್ ನಿರ್ಮಾಣ ಹಾಗೂ ಗ್ರಂಥಾಲಯ ಮಾಡಲು ಮನವಿ ಗ್ರಾಮಸ್ಥರು ಮಾಡಿದ್ದಾರೆ. ನನ್ನ ಶಾಸಕರ ಅನುದಾನದಲ್ಲಿ ಮಾಡುತ್ತೇನೆಂದು ಭರವಸೆ ನೀಡಿದರು. ನಮ್ಮ ಕುಟುಂಬಕ್ಕೆ ಮೂರು ಬಾರಿ ತಾಲೂಕಿನ ಜನರ ಸೇವೆ ಮಾಡಲು ಅವಕಾಶ ಕಲ್ಪಿಸಿದ್ದಿರಾ ಅದರಂತೆ ವರ್ಷದ 365 ದಿನಗಳಲ್ಲಿ ನಮ್ಮ ಕುಟುಂಬದವರು…
ಕೊರಟಗೆರೆ: ಕೊರಟಗೆರೆ ಕ್ಷೇತ್ರದಲ್ಲಿ ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಮುಖ್ಯಮಂತ್ರಿಗಳ ವಿಶೇಷ 50 ಕೋಟಿ ಅನುದಾನ ತಂದು ರಾಜ್ಯಕ್ಕೆ ಮಾದರಿ ಕ್ಷೇತ್ರ ಮಾಡುವುದೇ ನನ್ನ ಮೊದಲ ಆದ್ಯತೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು. ತಾಲ್ಲೂಕಿನ ಹೊಳವನಹಳ್ಳಿ ಹೋಬಳಿಯ ಶಾಂತಲಿಂಗಯ್ಯನ ಪಾಳ್ಯ ಗ್ರಾಮದ ಮುಖ್ಯ ರಸ್ತೆಗೆ ಸುಮಾರು 60 ಲಕ್ಷದ ಕಾಮಗಾರಿ ಉದ್ಘಾಟಿಸಿ ಹಾಗೂ ಬಿ.ಡಿ.ಪುರ ಗ್ರಾಮದಲ್ಲಿ 40 ಲಕ್ಷ ರೂಗಳ ಗ್ರಾಪಂ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಕೊರಟಗೆರೆ ಕ್ಷೇತ್ರದಲ್ಲಿ ಹಲವು ಗ್ರಾಮಗಳಲ್ಲಿ ದಶಕಗಳಿಂದ ರಸ್ತೆಗಳು ಅಭಿವೃದ್ದಿ ಹೊಂದಿಲ್ಲ ಎನ್ನವ ಗ್ರಾಮಸ್ಥರ ಬೇಡಿಕೆಗಳಿಗೆ ಮುಖ್ಯಮಂತ್ರಿಗಳಿಂದ 50 ಕೋಟಿಗಳ ವಿಶೇಷ ಅನುದಾನದಲ್ಲಿ ಗ್ರಾಮಗಳ ಮೂಲಭೂತ ಸೌಕರ್ಯಗಳನ್ನ ಅಭಿವೃದ್ಧಿ ಪಡಿಸಲಾಗುತ್ತಿದೆ. ಈ ವರ್ಷ 50 ಕೋಟಿಗಳನ್ನ ಪೂರೈಸಿ ಮುಂಬರುವ ದಿನಗಳಲ್ಲಿ ಮತ್ತೆ 50 ಕೋಟಿ ರೂ ಅನುದಾನ ಪಡೆದು ಕ್ಷೇತ್ರವನ್ನು ಅಭಿವೃದ್ಧಿ ಪಡಿಸಲಾಗವುದು ಎಂದರು. ತಾಲ್ಲೂಕಿನ ಜನರ ಬೇಡಿಕೆಯಂತೆ ಈಗಾಗಲೇ ತೋವಿನಕೆರೆ ಹೋಬಳಿ ಕೇಂದ್ರದಲ್ಲಿ 36 ಕೋಟಿ ವ್ಯಚ್ಚದಲ್ಲಿ ಆಸ್ಪತ್ರೆಯನ್ನ ಮೇಲ್ಜಾಗೆ ಅಭಿವೃದ್ಧಿ…
ತುಮಕೂರು: ತುಮಕೂರಿನ ಸರ್ಕಾರಿ ಚಿತ್ರಕಲಾ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಡಾ.ಸುರೇಂದ್ರನಾಥ ಡಿ.ಆರ್. ಮತ್ತು ಡಾ.ಶ್ವೇತಾ ಡಿ.ಎಸ್. ಇವರನ್ನು ಸೇವೆಯಿಂದ ಬಿಡುಗಡೆಗೊಳಿಸಲಾಗಿದೆ. ಕಾಲೇಜಿನ ಅತಿಥಿ ಉಪನ್ಯಾಸಕರ ವಿರುದ್ಧ ವಿದ್ಯಾರ್ಥಿಗಳು ಹಲವು ಆರೋಪಗಳನ್ನು ಮಾಡಿದ್ದರು. ಈ ಸಂಬಂಧ ಸರ್ಕಾರಿ ಚಿತ್ರಕಲಾ ಕಾಲೇಜಿನ ಹಳೆಯ ವಿದ್ಯಾರ್ಥಿ ಸಂಘ ಪ್ರಾದೇಶಿಕ ಕಚೇರಿಯ ಜಂಟಿ ನಿರ್ದೇಶಕರ ಕಚೇರಿಗೆ ಈ ಬಗ್ಗೆ ಮನವಿ ಸಲ್ಲಿಸಿ ಸಮಸ್ಯೆ ಬಗೆಹರಿಸಲು ಮನವಿ ಮಾಡಿಕೊಂಡಿತ್ತು. ಈ ಸಂಬಂಧ ಕಾಲೇಜಿಗೆ ಭೇಟಿ ನೀಡಿದ ಪ್ರಾದೇಶಿಕ ಜಂಟಿ ನಿರ್ದೇಶಕರು ಹಾಗೂ ಕೇಂದ್ರ ಕಚೇರಿಯ ಸಹಾಯಕ ನಿರ್ದೇಶಕರು ವಿಚಾರಣೆ ನಡೆಸಿ ಸಲ್ಲಿಸಿದ ವರದಿಯನ್ವಯ ಈ ಕ್ರಮಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳನ್ನು ನಿರ್ಲಕ್ಷಿಸುವ ಉಪನ್ಯಾಸಕರಿಗೆ ಇದೊಂದು ಎಚ್ಚರಿಕೆಯ ಕರೆಗಂಟೆಯಾಗಿದೆ, ವಿದ್ಯಾರ್ಥಿಗಳ ಒಗ್ಗಟ್ಟಿನ ಹೋರಾಟಕ್ಕೆ ತಡವಾಗಿಯಾದರೂ ಜಯ ಸಿಕ್ಕಿದೆ. ಹೋರಾಟಕ್ಕೆ ಸಹಕರಿಸಿದ ಎಲ್ಲ ಸಂಘಟನೆಗಳಿಗೆ ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯ ಹಳೆಯ ವಿದ್ಯಾರ್ಥಿಗಳ ಸಂಘ ಕೃತಜ್ಞತೆ ಸಲ್ಲಿಸುವುದಾಗಿ, ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾದ ನಟರಾಜು ಜಿ.ಎಲ್., ಖಜಾಂಚಿ ಮಹಮದ್ ಗೌಸ್ ಪೀರ್, ಕಾರ್ಯದರ್ಶಿ…
ಕ್ರೀಡಾ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವ ಮತ್ತು ತರಬೇತುದಾರರಾಗಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವವರಿಗೆ ಭಾರತೀಯ ಕ್ರೀಡಾ ಪ್ರಾಧಿಕಾರ (Sports Authority of India – SAI) ಸುವರ್ಣಾವಕಾಶ ನೀಡಿದೆ. ಸಾಯಿ ತನ್ನ ಅಧಿಕೃತ ಅಧಿಸೂಚನೆಯಲ್ಲಿ ಒಟ್ಟು 323 ‘ಸಹಾಯಕ ತರಬೇತುದಾರ’ (Assistant Coach) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ. ಪ್ರಮುಖ ವಿವರಗಳು: ಈ ನೇಮಕಾತಿಯು ಅಥ್ಲೆಟಿಕ್ಸ್, ಶೂಟಿಂಗ್, ಈಜು, ಕುಸ್ತಿ, ಬಾಕ್ಸಿಂಗ್ ಸೇರಿದಂತೆ ಒಟ್ಟು 26 ವಿವಿಧ ಕ್ರೀಡಾ ವಿಭಾಗಗಳಲ್ಲಿ ನಡೆಯಲಿದೆ. ಅರ್ಹ ಅಭ್ಯರ್ಥಿಗಳನ್ನು ಭಾರತದಾದ್ಯಂತ ಇರುವ ಸಾಯಿಯ ಪ್ರಾದೇಶಿಕ ಕೇಂದ್ರಗಳು ಮತ್ತು ರಾಷ್ಟ್ರೀಯ ಶ್ರೇಷ್ಠತಾ ಕೇಂದ್ರಗಳಲ್ಲಿ (NCOE) ನೇಮಕ ಮಾಡಿಕೊಳ್ಳಲಾಗುವುದು. ಒಟ್ಟು ಹುದ್ದೆಗಳಲ್ಲಿ ಶೇಕಡಾ 33 ರಷ್ಟು ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡಲಾಗಿದೆ. ವಯೋಮಿತಿ ಮತ್ತು ವೇತನ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 30 ವರ್ಷಗಳಾಗಿರಬೇಕು (ಸರ್ಕಾರದ ನಿಯಮಗಳಂತೆ ವಯೋಮಿತಿ ಸಡಿಲಿಕೆ ಇರುತ್ತದೆ). ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 35,400 ರಿಂದ ರೂ. 1,12,400 ರವರೆಗೆ (ಲೆವೆಲ್-6) ವೇತನ ಶ್ರೇಣಿ ದೊರೆಯಲಿದೆ.…
ಸರಗೂರು: ತಾಲೂಕಿನ ಅಡ್ಡಹಳ್ಳಿ ಗ್ರಾಮದಲ್ಲಿನ ನಾಮಧಾರಿಗೌಡರ ಬೀದಿ ಸಿಸಿ ರಸ್ತೆ ಕಾಮಗಾರಿ ನಿರ್ಮಾಣಕ್ಕೆ ಎರಡು ಇಲಾಖೆ ಮುಂದಾದಾಗ ಸಾರ್ವಜನಿಕರಿಂದ ಭಾರೀ ವಿರೋಧ ವ್ಯಕ್ತವಾದ ಹಿನ್ನಲೆ ಅಧಿಕಾರಿಗಳು, ಪೊಲೀಸರ ಮಧ್ಯಸ್ಥಿಕೆಯಿಂದ ಕಾಂಕ್ರೀಟ್ ಕಾಮಗಾರಿ ನಡೆಯಿತು. ಶಾಸಕ ಅನಿಲ್ ಚಿಕ್ಕಮಾದು ಅವರು ಅಡ್ಡಹಳ್ಳಿ ಗ್ರಾಮಕ್ಕೆ 40 ಲಕ್ಷ ರೂ.ಅನುದಾನ ಮಂಜೂರು ಮಾಡಿದ್ದು, ಈ ಪೈಕಿ ಗ್ರಾಮದಲ್ಲಿ ಕಾಮಗಾರಿಯನ್ನು ಹುಣಸೂರಿನ ಕೆಆರ್ ಐಡಿಎಲ್ ಸಂಸ್ಥೆ ವಹಿಸಿಕೊಂಡು ಕೆಲಸ ಮಾಡುತ್ತಿತ್ತು. ಇದಕ್ಕೂ ಮುನ್ನವೇ ಗ್ರಾಮ ಪಂಚಾಯಿತಿ ಸದಸ್ಯರಾದ ನಂದಕುಮಾರ್ ಅವರೂ ಸಹ ನರೇಗಾದಡಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯಿಂದ ಕ್ರಿಯಾಯೋಜನೆ ರೂಪಿಸಿಕೊಂಡು ಚರಂಡಿ ನಿರ್ಮಾಣ ಮಾಡಿದ್ದು, ಸಿಸಿ ರಸ್ತೆಗೆ ಕಾಂಕ್ರೀಟ್ ರಸ್ತೆ ಮಾಡಿಸಲು ಶಿಥಿಲಗೊಂಡ ವಿದ್ಯುತ್ ಕಂಬ ಹಾಕಿದ ಬಳಿಕ ಮಾಡಿಸಲು ವಿಳಂಬ ಮಾಡಲಾಗಿದೆ ಎಂದು ಆರೋಪಿಸಿ ಬೀದಿ ಜನರು ಪ್ರತಿಭಟಿಸಿದರು. ಗ್ರಾಮ ಪಂಚಾಯಿತಿ ಸದಸ್ಯರಾದ ನಂದಕುಮಾರ್ ಅವರಿಗೆ ಮನುಗನಹಳ್ಳಿ ಗ್ರಾಮ ಪಂಚಾಯಿತಿಯಿಂದ ದಾಸಯ್ಯ ಅವರ ಮನೆಯಿಂದ ಸುದಿಕುಮಾರ್ ಅವರ ಮನೆಯವರೆಗೆ ಸಿಸಿ ರಸ್ತೆ ಮತ್ತು ಚರಂಡಿ…
ಗದಗ: ಅಲ್ಪಸಂಖ್ಯಾತ ಸಮುದಾಯದ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವುದು ರಾಜ್ಯ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಅಲ್ಪಸಂಖ್ಯಾತ ಕಲ್ಯಾಣ ಮತ್ತು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ. ಬುಧವಾರ ಗದಗ ಜಿಲ್ಲೆಯಲ್ಲಿ ಕರ್ನಾಟಕ ಮೌಲಾನಾ ಅಜಾದ್ ಪಬ್ಲಿಕ್ ಸ್ಕೂಲ್ (ಇಂಗ್ಲಿಷ್ ಮೀಡಿಯಂ) ನ ನೂತನ ಕಟ್ಟಡ ಉದ್ಘಾಟನೆ ಹಾಗೂ ಗಂಗಿಮಡಿಯಲ್ಲಿ ಹೆಚ್ಚುವರಿ ತರಗತಿ ಕೊಠಡಿಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. 4,500 ಕೋಟಿ ರೂ. ಅನುದಾನ: ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಗೆ ಸರ್ಕಾರ ಪ್ರಸಕ್ತ ಸಾಲಿನಲ್ಲಿ ಒಟ್ಟು 4,500 ಕೋಟಿ ರೂಪಾಯಿ ಅನುದಾನ ಮಂಜೂರು ಮಾಡಿದೆ. ಈ ಮೊತ್ತದ ಸಿಂಹಪಾಲು ಮಕ್ಕಳ ಶಿಕ್ಷಣ ಮತ್ತು ಶೈಕ್ಷಣಿಕ ಅಭಿವೃದ್ಧಿಗೆ ಬಳಕೆಯಾಗುತ್ತಿದೆ ಎಂದು ಸಚಿವರು ವಿವರಿಸಿದರು. ವಸತಿ ಶಾಲೆಗಳ ವಿಸ್ತರಣೆ: ರಾಜ್ಯಾದ್ಯಂತ ಪ್ರಸ್ತುತ 2.38 ಲಕ್ಷಕ್ಕೂ ಹೆಚ್ಚು ಮಕ್ಕಳು ವಸತಿ ಶಾಲೆಗಳಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹಿಂದಿನ ಅವಧಿಯಲ್ಲಿ ಹಲವು ಶಾಲೆಗಳು ಆರಂಭವಾಗಿದ್ದು, ಈಗ ಮತ್ತೆ ಹೊಸದಾಗಿ 100…
ಕೊರಟಗೆರೆ: ರಾಜ್ಯ ಸರ್ಕಾರವು ಡಿಜಿಟಲ್ ಸೇವೆಯಡಿ ಜಾರಿಗೊಳಿಸಿದ ‘ಇ–ಸ್ವತ್ತು’ ಯೋಜನೆ ಕೊರಟಗೆರೆ ತಾಲ್ಲೂಕಿನಲ್ಲಿ ತಾಂತ್ರಿಕ ದೋಷಗಳಿಂದಾಗಿ ಹಳ್ಳ ಹಿಡಿದಿದೆ. ಸಾಫ್ಟ್ವೇರ್ ಮತ್ತು ಸರ್ವರ್ ಸಮಸ್ಯೆಗಳಿಂದಾಗಿ ತಾಲ್ಲೂಕಿನಾದ್ಯಂತ ಸುಮಾರು 49,521 ಇ-ಸ್ವತ್ತು ಅರ್ಜಿಗಳು ವಿಲೇವಾರಿಯಾಗದೆ ಬಾಕಿ ಉಳಿದಿವೆ. ಅರ್ಜಿಗಳ ವಿಲೇವಾರಿ ಕುಂಠಿತ: ತಾಲ್ಲೂಕಿನ 24 ಗ್ರಾಮ ಪಂಚಾಯಿತಿಗಳಲ್ಲಿ ಅಭಿಯಾನ ಆರಂಭವಾದಾಗಿನಿಂದ ಈವರೆಗೆ ಕೇವಲ 234 ಅರ್ಜಿಗಳು ಮಾತ್ರ ವಿಲೇವಾರಿಯಾಗಿವೆ. ಉಳಿದ ಸಾವಿರಾರು ಅರ್ಜಿಗಳು ತಾಂತ್ರಿಕ ಕಾರಣಗಳಿಂದ ಕಚೇರಿಯಲ್ಲೇ ಉಳಿದುಕೊಂಡಿವೆ. ತಾಂತ್ರಿಕ ದೋಷ: ನಿಯಮದ ಪ್ರಕಾರ 15 ದಿನಗಳಲ್ಲಿ ಮ್ಯುಟೇಶನ್ ಆಗಬೇಕಿದ್ದರೂ, ಸಾಫ್ಟ್ವೇರ್ನಲ್ಲಿ 30 ದಿನಗಳ ನೋಟಿಸ್ ಅವಧಿ ತೋರಿಸುತ್ತಿದೆ. ಸರಿಯಾದ ದಾಖಲೆ ಸಂಖ್ಯೆ ನೀಡಿದರೂ ‘ತಪ್ಪು’ ಎಂದು ಸಾಫ್ಟ್ವೇರ್ ತೋರಿಸುತ್ತಿದೆ. ಮಾಲೀಕರ ಇ–ಕೆವೈಸಿ ಪ್ರಕ್ರಿಯೆ ಪೂರ್ಣಗೊಳ್ಳುತ್ತಿಲ್ಲ. 2004ಕ್ಕೂ ಹಿಂದಿನ ಮಾರಾಟದ ದಾಖಲೆಗಳ ದಿನಾಂಕ ನಮೂದಿಸಲು ಸಾಧ್ಯವಾಗುತ್ತಿಲ್ಲ. ಸರ್ವರ್ ಪದೇ ಪದೇ ಲಾಗೌಟ್ ಆಗುವುದು ಮತ್ತು ಜಿಯೋ-ಮ್ಯಾಪಿಂಗ್ ದೋಷಗಳು ಕಾಡುತ್ತಿವೆ. ಜನಸಾಮಾನ್ಯರ ಹೈರಾಣ: ಗ್ರಾಮ ಪಂಚಾಯಿತಿಗಳಿಗೆ ದಿನವಿಡೀ ಅಲೆದಾಡುತ್ತಿರುವ ರೈತರು ಮತ್ತು ಕೂಲಿ ಕಾರ್ಮಿಕರಿಗೆ…
ತುಮಕೂರು: ತಾಲ್ಲೂಕಿನ ಬೆಳಧರ ಸರ್ಕಾರಿ ಶಾಲೆಗೆ ಕಾಂಪೌಂಡ್ ನಿರ್ಮಿಸುವಂತೆ ಒತ್ತಾಯಿಸಿ 6 ತಿಂಗಳಿನಿಂದ ಶಾಲೆಗೆ ತೆರಳದೆ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿನಿಯನ್ನು ಮತ್ತೆ ಶಾಲೆಗೆ ಕರೆತರುವ ಕಾರ್ಯ ಯಶಸ್ವಿಯಾಗಿದೆ. 4ನೇ ತರಗತಿ ವಿದ್ಯಾರ್ಥಿನಿ ಸಿಮ್ರಾ ಸನೋಬರ್ ಶಾಲೆಯಿಂದ ದೂರ ಉಳಿದು ಪ್ರತಿಭಟನೆ ನಡೆಸುತ್ತಿದ್ದರು. ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ ಹಾಗೂ ಅಧಿಕಾರಿಗಳ ತಂಡ ಸೋಮವಾರ ಬಾಲಕಿ ಮನೆಗೆ ಭೇಟಿ ನೀಡಿ ಅಹವಾಲು ಆಲಿಸಿತು. ‘ನನ್ನ ಶಾಲೆಗೆ ಭದ್ರತೆ ಬೇಕು. ಶಾಲಾ ಮೈದಾನದಲ್ಲಿ ಓಡಾಡುವ ವಾಹನಗಳಿಂದ ಕಿರಿಕಿರಿಯಾಗುತ್ತಿದೆ. ಕಾಂಪೌಂಡ್ ನಿರ್ಮಿಸಬೇಕು’ ಎಂದು ಸಿಮ್ರಾ ಮನವಿ ಮಾಡಿದರು. ‘ಶೀಘ್ರದಲ್ಲಿಯೇ ಕಾಂಪೌಂಡ್ ನಿರ್ಮಿಸಲಾಗುವುದು’ ಎಂದು ನೂರುನ್ನೀಸಾ ಭರವಸೆ ನೀಡಿದರು. ವಿದ್ಯಾರ್ಥಿನಿಯನ್ನು ಅವರ ಜತೆಯಲ್ಲಿಯೇ ಶಾಲೆಗೆ ಕರೆದುಕೊಂಡು ಬಂದರು. ತುಮಕೂರು ತಾಲ್ಲೂಕಿನ ಬೆಳಧರ ಸರ್ಕಾರಿ ಶಾಲೆಗೆ ವಿದ್ಯಾರ್ಥಿನಿಯನ್ನು ಸೋಮವಾರ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ ಕರೆ ತಂದರು. ಉಪವಿಭಾಗಾಧಿಕಾರಿ ನಾಹಿದಾ ಜಮ್ ಜಮ್, ತಹಶೀಲ್ದಾರ್ ಪಿ.ಎಸ್.ರಾಜೇಶ್ವರಿ ಇತರರು ಹಾಜರಿದ್ದರು. ಉಪವಿಭಾಗಾಧಿಕಾರಿ ನಾಹಿದಾ ಜಮ್ ಜಮ್,…
ತುಮಕೂರು: ರಾಜ್ಯದಲ್ಲಿ ಕೆಪಿಎಸ್ — ಮ್ಯಾಗ್ನೆಟ್ ಹೆಸರಿನಲ್ಲಿ ಸಿರಾ ತಾಲೂಕಿನ ಸೀಬಿಅಗ್ರಹಾರ ಗ್ರಾಮ ಪಂಚಾಯಿತಿ ಮತ್ತು ಕುಂಟೇಗೌಡನಹಳ್ಳಿಯ ಸರ್ಕಾರಿ ಶಾಲೆ ಉಳಿಸಲು ಊರಿನ ವಿದ್ಯಾರ್ಥಿಗಳು , ಪೋಷಕರು ಎಐಡಿಎಸ್ ಓ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನ ಉದ್ದೇಶಿಸಿ ಜಿಲ್ಲಾ ಕಾರ್ಯದರ್ಶಿ ಲಕ್ಕಪ್ಪ ಮಾತನಾಡಿ, ಊರಿನ ಶಾಲೆ ಮುಚ್ಚಲು ಮುಂದಾಗಿರುವ ರಾಜ್ಯ ಸರ್ಕಾರ ಹಂತ ಹಂತವಾಗಿ ಶಿಕ್ಷಣವನ್ನ ಸಂಪೂರ್ಣ ರೈತ ಕಾರ್ಮಿಕರಿಂದ ಕಿತ್ತುಕೊಂಡು ಶ್ರೀಮಂತರ ಸ್ವತ್ತಾಗಿಸುತ್ತಿದೆ. ಈ ಊರಿನ ಎಲ್ಲಾ ಜನರು ಕೂಡ ಸರ್ಕಾರಿ ಶಾಲೆಗಳ ಮೇಲೆ ಸಂಪೂರ್ಣವಾಗಿ ಅವಲಂಬಿತರಾಗಿದ್ದಾರೆ. ಏಶಿಯನ್ ಡೆವಲಪ್ಮೆಂಟ್ ಬ್ಯಾಂಕ್ ಇಂದ 2,500 ಕೋಟಿ ಸಾಲವನ್ನು ತೆಗೆದುಕೊಳ್ಳುವ ಮೂಲಕ ಸರ್ಕಾರಿ ಶಿಕ್ಷಣ ಸಂಸ್ಥೆಗಳ ಸಂಖ್ಯೆಯನ್ನು ಇಳಿಮುಖಗೊಳಿಸುತ್ತಾ, ಬಡ ಜನಗಳ ಹೊರೆಯನ್ನು ಇನ್ನು ಹೆಚ್ಚು ಮಾಡಲು ಮುಂದಾಗಿದೆ ಎಂದು ಆರೋಪಿಸಿದರು. ಮುಂದುವರೆಯುತ್ತಾ, ಇತ್ತೀಚಿಗೆ ಹೊರಡಿಸಲಾದ ಸರ್ಕಾರದ ಹೊಸ ಆದೇಶವು ಕೌಶಲ್ಯಾಧಾರಿತ ಶಿಕ್ಷಣವನ್ನು ನೀಡುವ ಮೂಲಕ ಸರ್ಕಾರಿ ಶಾಲೆಯಲ್ಲಿ ಓದುವ ಮಕ್ಕಳಿಗೆ ದೀಪ ಮತ್ತು ಹಣತೆ ಮಾಡಲು, ಅಡಿಕೆ ಕಾಯಿ ಬಿಡಿಸಲು,…
ತೂಕ ಇಳಿಸಿಕೊಳ್ಳುವುದು ಅಂದುಕೊಂಡಷ್ಟು ಸುಲಭದ ಮಾತಲ್ಲ. ಇದಕ್ಕೆ ಶಿಸ್ತು, ತಾಳ್ಮೆ ಮತ್ತು ಕಠಿಣ ಪರಿಶ್ರಮದ ಅಗತ್ಯವಿದೆ. ಫಿಟ್ನೆಸ್ ತರಬೇತುದಾರರಾದ ತಾರ್ನ್ ಕೌರ್ ಅವರು ಕೇವಲ 8 ತಿಂಗಳಲ್ಲಿ ಬರೋಬ್ಬರಿ 31 ಕೆಜಿ ತೂಕ ಇಳಿಸಿಕೊಳ್ಳುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಅವರು ತಮ್ಮ ಈ ಯಶಸ್ವಿ ಪಯಣದಲ್ಲಿ ಅಳವಡಿಸಿಕೊಂಡ 3 ಪ್ರಮುಖ ಬದಲಾವಣೆಗಳ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಈ ಮನಸ್ಥಿತಿ ತಪ್ಪು: ತಾರ್ನ್ ಕೌರ್ ಅವರ ಪ್ರಕಾರ, ಹೆಚ್ಚಿನವರು ತೂಕ ಇಳಿಸಲು ನಿರ್ಧರಿಸಿದಾಗ ಎಲ್ಲವನ್ನೂ ತಕ್ಷಣವೇ ಅಚ್ಚುಕಟ್ಟಾಗಿ ಮಾಡಲು ಬಯಸುತ್ತಾರೆ. ಆದರೆ, ಸಣ್ಣ ತಪ್ಪಾದ ತಕ್ಷಣ ಅಥವಾ ಡಯಟ್ನಲ್ಲಿ ಸ್ವಲ್ಪ ವ್ಯತ್ಯಾಸವಾದ ತಕ್ಷಣ ಹತಾಶರಾಗಿ ಪ್ರಯತ್ನವನ್ನೇ ಕೈಬಿಡುತ್ತಾರೆ. ಈ ಮನಸ್ಥಿತಿ ತಪ್ಪು. ಎಲ್ಲವೂ ಯೋಜನೆಯಂತೆಯೇ ನಡೆಯುವುದಿಲ್ಲ ಎಂಬುದನ್ನು ಒಪ್ಪಿಕೊಂಡು, ಸಣ್ಣಪುಟ್ಟ ತಪ್ಪುಗಳ ನಡುವೆಯೂ ಸತತ ಪ್ರಯತ್ನ ಮುಂದುವರಿಸಬೇಕು. ತಕ್ಷಣದ ಫಲಿತಾಂಶ ನಿರೀಕ್ಷಿಸಬೇಡಿ: ತೂಕ ಇಳಿಸುವುದು ಒಂದು ಮ್ಯಾರಥಾನ್ ಇದ್ದಂತೆ, ಅದು ಓಟದ ಸ್ಪರ್ಧೆಯಲ್ಲ. ಶಾರ್ಟ್ಕಟ್ ಮೂಲಕ ಅಥವಾ ಮ್ಯಾಜಿಕ್ ಮಾತ್ರೆಗಳ ಮೂಲಕ…