Author: admin

ಛತ್ತೀಸ್ ‌ಗಢದಲ್ಲಿ ನಕ್ಸಲೀಯರ ದಾಳಿ. ಗುಂಡಿನ ದಾಳಿಯಲ್ಲಿ 6 ತಿಂಗಳ ಹೆಣ್ಣು ಮಗು ಸಾವನ್ನಪ್ಪಿದೆ. ಮಗುವಿನ ತಾಯಿ ಮತ್ತು ಇಬ್ಬರು ಯೋಧರು ಗಾಯಗೊಂಡಿದ್ದಾರೆ. ಸೋಮವಾರ ಬಿಜಾಪುರದಲ್ಲಿ ಭದ್ರತಾ ಪಡೆಗಳು ಮತ್ತು ನಕ್ಸಲೀಯರು ಘರ್ಷಣೆ ನಡೆಸಿದರು. ಗಂಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಮುತ್ವಂಡಿ ಗ್ರಾಮದ ಬಳಿಯ ಅರಣ್ಯದಲ್ಲಿ ಸಂಜೆ 5 ಗಂಟೆ ಸುಮಾರಿಗೆ ಎನ್‌ಕೌಂಟರ್ ನಡೆದಿದೆ. ಡಿಆರ್ ಜಿ ತಂಡ ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸುತ್ತಿತ್ತು. ಈ ವೇಳೆ ನಕ್ಸಲರು ಗುಂಡಿನ ದಾಳಿ ನಡೆಸಿದ್ದರು ಎಂದು ವರದಿಯಾಗಿದೆ. ಭದ್ರತಾ ಪಡೆಗಳೂ ಪ್ರತಿದಾಳಿ ನಡೆಸಿದಾಗ ಎನ್‌ ಕೌಂಟರ್ ಆರಂಭವಾಯಿತು. ಗಾಯಗೊಂಡ ಮಹಿಳೆ ಹಾಗೂ ಇಬ್ಬರು ಯೋಧರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಆರ್‌ ಜಿ ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ ಅಧಿಕಾರಿಗಳು ಎನ್‌ ಕೌಂಟರ್ ನಡೆದ ಪ್ರದೇಶದಲ್ಲಿ ಶೋಧ ನಡೆಸುತ್ತಿದ್ದಾರೆ.

Read More

ಭೂಗತ ಪಾತಕಿ ‘ಗೋಲ್ಡಿ ಬ್ರಾರ್’ ನನ್ನು ಕೇಂದ್ರ ಸರ್ಕಾರ ಭಯೋತ್ಪಾದಕ ಎಂದು ಘೋಷಣೆ ಮಾಡಿದೆ. ಕಾನೂನುಬಾಹಿರ ಚಟುವಟಿಕೆ ಕಾಯ್ದೆಯಡಿ ಗೋಲ್ಡಿ ಬ್ರಾರ್ ನನ್ನು ಭಯೋತ್ಪಾದಕ ಎಂದು ಕೇಂದ್ರ ಗೃಹ ಸಚಿವಾಲಯ ಘೋಷಿಸಿದೆ. ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ, 1967 ರ ಅಡಿಯಲ್ಲಿ ಸತ್ವಿಂದರ್ ಸಿಂಗ್ ಅಲಿಯಾಸ್ ಸತೀಂದರ್ಜಿತ್ ಸಿಂಗ್ ಅಲಿಯಾಸ್ ಗೋಲ್ಡಿ ಬ್ರಾರ್ ನನ್ನು ಭಯೋತ್ಪಾದಕ ಎಂದು ಗೃಹ ಸಚಿವಾಲಯ (ಎಂಎಚ್‌ಎ) ಸೋಮವಾರ ಘೋಷಿಸಿದೆ. ಗೋಲ್ಡಿ ಬ್ರಾರ್ ಪಂಜಾಬ್ ನ ಫರೀದ್ ಕೋಟ್ ನಲ್ಲಿ ಜನಿಸಿದ್ದು ಸದ್ಯ ಕೆನಡಾದಲ್ಲಿ ತಲೆಮರಿಸಿಕೊಂಡಿದ್ದಾನೆ ಎನ್ನಲಾಗಿದೆ.

Read More

ವರ್ಷದ ಮೊದಲ ದಿನ, ಹೊಸ ವರ್ಷಾಚರಣೆ ಹಿನ್ನೆಲೆ ಮೈಸೂರಿನಲ್ಲಿ ಚಾಮುಂಡಿ ಬೆಟ್ಟಕ್ಕೆ ಸಾವಿರಾರು ಭಕ್ತರು ಭೇಟಿ ನೀಡಿದ್ದು, ಭಾರೀ ಜನಜಂಗುಳಿ ಉಂಟಾಗಿದೆ. ನಾಡ ಅಧಿದೇವತೆ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಸಾವಿರಾರು ಮಂದಿ ಭಕ್ತರು ಆಗಮಿಸಿದ್ದು, ಶಕ್ತಿ ದೇವತೆಯ ದರ್ಶನ ಪಡೆಯಲು ಭಕ್ತ ಸಾಗರ ಸಾಲುಗಟ್ಟಿ ನಿಂತಿರುವ ದೃಶ್ಯ ಕಂಡು ಬಂದಿತು. ಹೊಸ ವರ್ಷದಂದು ನೂಕು‌ ನುಗ್ಗಲಿ‌ನ ನಡುವೆ ತಾಯಿ  ಚಾಮುಂಡೇಶ್ವರಿ ದರ್ಶನ ಪಡೆಯಲು ಭಕ್ತರು ಮುಗಿಬಿದ್ದರು. ಭಕ್ತಸಾಗರವೇ ಚಾಮುಂಡಿ ಬೆಟ್ಟಕ್ಕೆ ಹರಿದು ಬಂದ ಹಿನ್ನೆಲೆಯಲ್ಲಿ ಬೆಟ್ಟದಲ್ಲಿ ಫುಲ್ ಟ್ರಾಫಿಕ್ ಜಾಮ್ ಉಂಟಾಗಿತ್ತು. ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನಗಳಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡಿದ ಹಿನ್ನೆಲೆ, ಚಾಮುಂಡಿ ಬೆಟ್ಟಕ್ಕೆ ತೆರಳುವ ಮಾರ್ಗದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ಹಲವೆಡೆ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಅತಿಯಾದ ವಾಹನಗಳ ದಟ್ಟಣೆಯಿಂದಾಗಿ ಮಹಿಳೆಯರು, ಮಕ್ಕಳು, ವೃದ್ದರ ಪರದಾಟ ನಡೆಸಿದ್ದು, ವಾಹನಗಳ ದಟ್ಟಣೆ ಸರಿಪಡಿಸಲು ಸಂಚಾರಿ ಪೊಲೀಸರು ಹರಸಾಹಸ ಪಟ್ಟರು.

Read More

ನವದೆಹಲಿ: ಅಯೋಧ್ಯೆಯಲ್ಲಿ ಜನವರಿ 22 ರಂದು ರಾಮಲಲ್ಲಾನ ಪ್ರಾಣ ಪ್ರತಿಷ್ಠೆ ನಡೆಯುವ ಪ್ರಯುಕ್ತ ‘ಶ್ರೀ ರಾಮ್, ಜೈ ರಾಮ್, ಜೈ ಜೈ ರಾಮ್’ ಎಂಬ ಮಂತ್ರ ಪಠಿಸುಂತೆ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಸ್ಲಿಂ ರಾಷ್ಟ್ರೀಯ ಮಂಚ್ ಮುಖ್ಯ ಪೋಷಕ ಮತ್ತು ಆರ್‌ ಎಸ್ ‌ಎಸ್ ನ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಇಂದ್ರೇಶ್ ಕುಮಾರ್ ಅವರು ಮುಸ್ಲಿಮರು ಮತ್ತು ಇತರರಿಗೆ ಕರೆ ನೀಡಿದ್ದಾರೆ. ದರ್ಗಾಗಳು, ಮಕ್ತಬ್ ​ಗಳು, ಮದರಸಾಗಳು ಮತ್ತು ಮಸೀದಿಗಳಲ್ಲಿ ‘ಶ್ರೀ ರಾಮ್, ಜೈ ರಾಮ್, ಜೈ ಜೈ ರಾಮ್’ ಪಠಣ ಮಾಡಬೇಕು ಎಂಬುದಾಗಿ ಎಂಆರ್ ​ಎಂ ಮನವಿ ಮಾಡಿದೆ. ಅದನ್ನೇ ಪುನರುಚ್ಚರಿಸುತ್ತೇನೆ ಎಂದು ಇಂದ್ರೇಶ್ ಕುಮಾರ್ ಹೇಳಿದ್ದಾರೆ. ದೇಶದ ವೈವಿಧ್ಯಮಯ ಧಾರ್ಮಿಕ ಸಮುದಾಯಗಳ ಪರಂಪರೆ ಮತ್ತು ವಂಶಾವಳಿಯನ್ನು ಪ್ರಸ್ತಾಪಿಸಿದ ಅವರು, ಸುಮಾರು ಶೇ 99 ರಷ್ಟು ಮುಸ್ಲಿಮರು ಮತ್ತು ಇತರ ಹಿಂದೂಯೇತರರು ಭಾರತದ ಭಾಗವಾಗಿದ್ದಾರೆ ಎಂದು ಹೇಳಿದ್ದಾರೆ. “ರಾಮ ಮಂದಿರ್, ರಾಷ್ಟ್ರ ಮಂದಿರ್ – ಎ ಕಾಮನ್ ಹೆರಿಟೇಜ್” ಪುಸ್ತಕ…

Read More

ಬೆಳಗಾವಿ: ಭೀಮ ಕೋರೆಗಾವ್ 206ನೇ ವಿಜಯೋತ್ಸವ ಆಚರಣೆ ಸಂದರ್ಭದಲ್ಲಿ ಸಮಾಜದ ವಿವಿಧ ಸಂಘಟನೆಯ ಮುಖಂಡರುಗಳು ಬೆಳಗಾವಿ ನಗರದ ಭಾರತ ರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಉದ್ಯಾನವನದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಭೀಮಾಕೋರೆಗಾವ್ ವಿಜಯೋತ್ಸವ ಹಾಗೂ ಭೀಮಾ ಕೋರೆಗಾವ್ ಯುದ್ಧದಲ್ಲಿ ಶೌರ್ಯವನ್ನು ಮೆರೆದ ಯೋಧರಿಗೆ ಮೌನವಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸಮಾಜದ ಮುಖಂಡರಾದ ಮಲ್ಲಪ್ಪ ಚೌಗುಲೆ ಅವರು ಸುದ್ದಿಗಾರರೊಂದಿಗೆ ಮಾತನಾಡಿ ಭೀಮ ಕೋರೆಗಾವ್ ಯುದ್ಧ ಜರುಗಿ 206 ವರ್ಷಗಳು ಕಳೆದಿವೆ. ಯುದ್ಧದಲ್ಲಿ ಶೌರ್ಯ ಮೆರೆದ ಯೋಧರಿಗೆ ನಾವು ಗೌರವ ವಂದನೆಯನ್ನು ಸಲ್ಲಿಸುತ್ತಿದ್ದೇವೆ . 1818 ಜನವರಿ 1 ರಂದು ನಡೆದ ಪೇಶ್ವೆಗಳು ವಿರುದ್ಧ ಈಸ್ಟ್ ಇಂಡಿಯಾ ಕಂಪನಿ ಜೊತೆ ದಲಿತ ಸೈನಿಕರು ಪೇಶ್ವೆಗಳವಿರುದ ವಿಜಯ ಪತಾಕೆ ಹಾರಿಸಿದ್ದು ಇತಿಹಾಸ. ಅದರ ನಿಮಿತ್ತವಾಗಿ ಇಂದು ನಾವು ಆ ಮಹಾನ್ ಸೈನ್ಯಾನಿಗಳಿಗೆ ಮಾನವಂದನವನ್ನು ನೀಡುತ್ತಿದ್ದೇವೆ .ರಾಜ್ಯ ಹಾಗೂ ವಿವಿಧ ದಲಿತ ಸಂಘಟನೆಗಳು ಅಲ್ಲದೆ ಬೇರೆ ದೇಶಗಳಲ್ಲಿ…

Read More

ಬೆಳಗಾವಿ: ಅಯೋದ್ಯೆಯ ರಾಮಮಂದಿರದಲ್ಲಿ ರಾಮ ಪ್ರತಿಷ್ಟಾಪನೆ ಅಂಗವಾಗಿ ವಿಶ್ವ ಹಿಂದು ಪರಿಷತ್ ವತಿಯಿಂದ ಅಕ್ಷತೆ ತಲುಪಿಸುವ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ರಾಘವೇಂದ್ರ ಕಾಗವಾಡ, ಆರ್ ಎಸ್ ಎಸ್ ಪ್ರಾಂತ ಕಾರ್ಯನಿರ್ವಾಹಕ ಜೇಠಾ ಬಾಯಿ ಪಟೇಲ, ಡಾ. ಸುಭಾಷ ಪಾಟೀಲ, ಸಂತೋಷ ವಾದ್ವಾ, ರಾಜೇಶ್ವರೀ ಸಂಬರಗೀಮಠ, ಕ್ರಷ್ಣಾ ಭಟ್ ಪ್ರಾಂತ ವಿಶ್ವ ಹಿಂದುಪರಿಷತ್ ಕೋಶಾಧ್ಯಕ್ಷ‌ ಮಹಿಳೆಯರು, ಪರಿವಾರದ ಸಂಘಟನೆಯ ಎಲ್ಲಾ ಪದಾಧಿಕಾರಿಗಳ ಉಪಸ್ತಿಯೊಂದಿಗೆ ಚೆನ್ನಮ್ಮ ಸರ್ಕಲ್ ಗಣಪತಿ ಮಂದಿರದಲ್ಲಿ ಮನೆ ಮನೆಗೆ ಅಕ್ಷತೆ ಕೊಡುವ ಅಭಿಯಾನಕ್ಕೆ ಚಾಲನೆ ನೀಡಿದರು. ಪೂಜ್ಯ ಶಿವಸಿದ್ದ ಸೋಮೇಶ್ವರ ಸ್ವಾಮೀಜಿಯವರು ಮಾತನಾಡುತ್ತಾ ಎಲ್ಲರ ಮನಸ್ಸಿನ ಭಕ್ತಿ ಭಾವದ ಪ್ರತೀಕ ಭವ್ಯ ರಾಮಮಂದಿರದಲ್ಲಿ ಬಾಲರಾಮನ ಪ್ರತಿಷ್ಠೆ ಆಗುತ್ತಾ ಇರುವದು ಭಾರತದ ಜನಮಾನಸದ ಹೆಮ್ಮೆಯ ಪ್ರತೀಕ. ಪ್ರತಿ ರಾಮಭಕ್ತರು ಇದರಲ್ಲಿ ಪಾಲ್ಗೊಂಡು ಭಾರತದ ಆಧ್ಯಾತ್ಮ ಇತಿಹಾಸ ಜಗತ್ತಿಗೆ ಪ್ರಸರಿಸಲಿ ಎಂದು ಆಶೀರ್ವಾದಿಸುತ್ತ ನೂರಾರು ಹೋರಾಟ ಮಾಡಿ ಹಿಂದು ಸಂಸ್ಕೃತಿ ಉಳಿಸುವ ವಿಶ್ವ ಹಿಂದುಪರಿಷತ್ ಕಾರ್ಯಕ್ಕೆ ಎಲ್ಲರೂ ಕೈ ಜೋಡಿಸುವಂತೆ ಕರೆ ಕೊಟ್ಟರು.…

Read More

 ಪಾವಗಡ: ತಾಲ್ಲೂಕಿನಲ್ಲಿ  ಸಂವಿಧಾನ ಬಳಗದ ವತಿಯಿಂದ ಭೀಮಾ ಕೋರೆಗಾಂವ್ ವಿಜಯೋತ್ಸವದ ಅಂಗವಾಗಿ ಬೈಕ್ ರಾಲಿಗೆ ಚಾಲನೆ ನೀಡಲಾಯಿತು.  ಭೀಮಾ ಕೋರೆಗಾಂವ್ ವಿಜಯೋತ್ಸವದ ಹಿನ್ನಲೆಯಲ್ಲಿ ಪಾವಗಡ ನಗರದ ನಿರೀಕ್ಷಣಾ ಮಂದಿರದಿಂದ ಹೊರಟು, ಡಾ‌.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಸಂವಿಧಾನ ಶಿಲ್ಪಿಯ ಡಾ.ಆರ್.ಬಿ.ಆರ್ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಪುಷ್ಪ ನಮನ ಸಲ್ಲಿಸಿ ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು. ಸಿ.ಕೆ.ಪುರ ಹನುಮಂತರಾಯಪ್ಪನವರ ತಂಡದವರಿಂದ ಭೀಮ ಕೋರೆಗಾಂವ್ ಹಾಡಿನ ಮೂಲಕ ಕಾರ್ಯಕ್ರಮವನ್ನು ಪ್ರಾರಂಭವಾಯಿತು.  ಕಾರ್ಯಕ್ರಮದ ಸಂಘಟಕರಾದ ಸುಬ್ಬರಾಜು ಬೌದ್ಧ ಸಮಾಜ ಮಾತನಾಡಿ,  ಭಾರತ ದೇಶವು ಜಾತಿ ವ್ಯವಸ್ಥೆಯಿಂದ ಕೂಡಿರುವ ದೇಶವಾಗಿದೆ.  ಜಾತಿಯ ಕಾರಣಕ್ಕಾಗಿ ವ್ಯಕ್ತಿಯನ್ನು ಕೆಟ್ಟದಾಗಿ ಕಾಣುವ ಪರಿಸ್ಥಿತಿ ಇಂದಿಗೂ ಇದೆ ಎಂದು ಬೇಸರ ವ್ಯಕ್ತಪಡಿಸಿದರು. ಡಿ ಜೆ ಎಸ್ ನಾರಾಯಣಪ್ಪ ಮಾತನಾಡಿ, ಈ ನಾಡಿನ ಶೋಷಿತರಿಗೆ ಒಂದು ಬದುಕನ್ನು ಕಟ್ಟಿಕೊಟ್ಟವರು ಅಂಬೇಡ್ಕರ್ ಅವರು, ಅಂಬೇಡ್ಕರ್ ಅವರನ್ನು ನಾವು ಸ್ಮರಣೆ ಮಾಡಿಕೊಳ್ಳಬೇಕು. ಜ.1, 1818 ರಲ್ಲಿ ಮೊಟ್ಟ ಮೊದಲ ಬಾರಿಗೆ ಸಮುದಾಯದ ಸ್ವಾಭಿಮಾನಕ್ಕಾಗಿ ಭೀಮಾ ಕೋರೆಗಾಂವ್ ಯುದ್ಧವು…

Read More

ಪಾವಗಡ : ಗ್ರಾಮೀಣ ಜನಜೀವನದ ಪ್ರತಿಬಿಂಬ ಜಾನಪದ ಕಲೆಯಾಗಿದ್ದು, ಪ್ರೋತ್ಸಾಹಿಸುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಲೇಖಕ ಹೊ.ಮ.ನಾಗರಾಜು ತಿಳಿಸಿದರು. ನಿಡಗಲ್ಲು ಕ್ಷೇತ್ರದಲ್ಲಿ ಭಾನುವಾರದಂದು ಸಿದ್ದಾಪುರದ ಸ್ವಾಮಿ ವಿವೇಕಾನಂದ ಕಲಾಸಂಘವು, ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆ, ತುಮಕೂರು ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ  ಗ್ರಾಮೀಣ ಜಾನಪದ ಸಂಭ್ರಮ-2023 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಆಧುನಿಕತೆಯ ಭರಾಟೆಯಲ್ಲಿ ಗ್ರಾಮೀಣ ಕಲಾ ಮಾಧ್ಯಮಗಳು ಕಣ್ಮರೆಯಾಗುತ್ತಿವೆ. ಅವುಗಳನ್ನು ರಕ್ಷಿಸಿ ಪ್ರೋತ್ಸಾಹಿಸಿ ಬೆಳೆಸಿದರೆ ತಲೆಮಾರಿ ಜಾನಪದ ಸಿರಿ ಮುಂದುವರೆಯುತ್ತದೆ ಎಂದರು. ವಾಲ್ಮೀಕಿ ಜಾಗೃತಿ ವೇದಿಕೆ ಅಧ್ಯಕ್ಷ ಲೋಕೇಶ್ ಪಾಳೆಗಾರ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, ಪ್ರತಿದಿನದ ಬದುಕಿನಲ್ಲಿ ಹಳ್ಳಿಗರು ತಮ್ಮ ಶ್ರಮದ ಧಣಿವಾರಿಸಿಕೊಳ್ಳಲು ಹಲವು ಕಲೆಗಳನ್ನು ಕರಗತ ಮಾಡಿಕೊಂಡಿದ್ದರು. ಆದರೆ ಯುವ ಪೀಳಿಗೆಯು ಈ ಸೊಗಡನ್ನು ಅಳವಡಿಸಿಕೊಳ್ಳುವಲ್ಲಿ ಅಸಡ್ಡೆ ಮತ್ತು ನಿರಾಸಕ್ತಿ ಹೊಂದಿದೆ. ಪರಿಣಾಮವಾಗಿ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಕಾರಣವಾಗಿರುವ ಜಾನಪದ ಕಲೆಗಳು ಅವಸಾನ ತಲುಪುವ ಹಂತಕ್ಕೆ ಬಂದು ನಿಂತಿವೆ. ಸರ್ಕಾರಗಳು ತಮ್ಮ ಪ್ರಯತ್ನ ಮಾಡುತ್ತಿದ್ದು, ಹಲವಾರು ಸಂಘ ಸಂಸ್ಥೆಗಳ…

Read More

ಕೊರಟಗೆರೆ ತಾಲೂಕಿನ ನವಿಲುಕುರಿಕೆ ಗ್ರಾಮಸ್ಥರ ಮನವಿಯಂತೆ ಕೊನೆಗೂ ಬಂತು ಸರ್ಕಾರಿ ಬಸ್ ಗ್ರಾಮಕ್ಕೆ ಬಂದಿದೆ. ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಎಂಬ ಮಹತ್ವದ ಕಾರ್ಯಕ್ರಮದಲ್ಲಿ ಸರ್ಕಾರಿ ಬಸ್ ಗಾಗಿ ಗ್ರಾಮಸ್ಥರು ಮನವಿ ಸಲ್ಲಿಸಿದ್ದರು. ಸ್ಥಳೀಯ ಶಾಸಕರು ಹಾಗೂ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ಮಾರ್ಗದರ್ಶನದಂತೆ ಗ್ರಾಮದ ಜನರ ದಿನನಿತ್ಯದ ಸಂಚಾರಕ್ಕೆ KSRTC ಅಧಿಕಾರಿಗಳು ಸಾರಿಗೆ ಬಸ್ ವ್ಯವಸ್ಥೆ ಮಾಡಿದ್ದಾರೆ. ಕೊರಟಗೆರೆ ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ನವಿಲುಕುರಿಕೆ ಗ್ರಾಮದ ಸಾರ್ವಜನಿಕರ ಮನವಿಗೆ ಅಂದಿನ ತಹಶೀಲ್ದಾರ್ ನಹೀದಾ ಜಂ ಜಂ KSRTC ಅಧಿಕಾರಿಗಳಿಗೆ ಶಾಸಕರ ಆದೇಶದಂತೆ ಪತ್ರ ಬರೆದಿದ್ದರು. ಸರ್ಕಾರಿ ಬಸ್ ವ್ಯವಸ್ಥೆ ಇಲ್ಲದೆ ಪರದಾಡುತ್ತಿದ್ದ ವಿದ್ಯಾರ್ಥಿಗಳ ಮುಖದಲ್ಲಿ ಇಂದು ಈ ನಗರ ಸಾರಿಗೆ ನಗು ತಂದಿದೆ .. ಪ್ರತಿದಿನ ತುಮಕೂರು, ಕೊರಟಗೆರೆಯತ್ತ ಶಾಲಾ ಕಾಲೇಜು ಗಳಿಗೆ ಮೈಲುಗಟ್ಟಲೆ ನಡೆದುಕೊಂಡು ಹೋಗುತ್ತಿದ್ದರು. ಇಂದು ಸರ್ಕಾರಿ ಬಸ್ ನಲ್ಲಿ ಹಾಯಾಗಿ ಪ್ರಯಾಣ ಮಾಡಿದರು. ನವಿಲುಕುರಿಕೆ, ದಮಗಲಯ್ಯನ ಪಾಳ್ಯ ಗ್ರಾಮಸ್ಥರು ಸರ್ಕಾರಿ ಬಸ್ ಕಂಡು ಸಂತೋಷ ವ್ಯಕ್ತಪಡಿಸಿದರು. ಗ್ರಾಮಸ್ಥರೆಲ್ಲ…

Read More

ಜಾರ್ಖಂಡ್: ಜಾರ್ಖಂಡ್ ನ ಜಮ್‌ ಶೆಡ್‌ ಪುರ ನಗರದಲ್ಲಿ ಸೋಮವಾರ ಬೆಳಗ್ಗೆ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಂಜಾನೆ 5 ಗಂಟೆ ಸುಮಾರಿಗೆ ಬಿಸ್ತುಪುರ್ ಪೊಲೀಸ್ ಠಾಣೆ ವ್ಯಾಪ್ತಿಯ ಸರ್ಕ್ಯೂಟ್ ಹೌಸ್ ಸ್ಕ್ವೇರ್ ಬಳಿ ಅಪಘಾತ ಸಂಭವಿಸಿದೆ. ಐದು ಆಸನಗಳ ಕಾರಿನಲ್ಲಿ ಎಂಟು ಜನರು ಪ್ರಯಾಣಿಸುತ್ತಿದ್ದರು. ಕಾರು ಮೊದಲು ರಸ್ತೆ ವಿಭಜಕಕ್ಕೆ ಮತ್ತು ನಂತರ ರಸ್ತೆ ಬದಿಯ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅವರಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಮೂವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಸ್ಪತ್ರೆಯಲ್ಲಿ ಒಬ್ಬ ವ್ಯಕ್ತಿ ಗಾಯಗೊಂಡು ಸಾವನ್ನಪ್ಪಿದ್ದರೆ, ಉಳಿದ ಇಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿದ್ದಾರೆ.

Read More