Author: admin

ಮೈಸೂರು: ಮೈಸೂರು-ನಂಜನಗೂಡು ರಸ್ತೆಯ ಮಂಡಕಳ್ಳಿ ವಿಮಾನ ನಿಲ್ದಾಣದ ಬಳಿ ರಸ್ತೆ ದಾಟುತ್ತಿದ್ದ ಹುಲಿಗೆ ವೇಗವಾಗಿ ಸಾಗುತ್ತಿದ್ದ ಕಾರೊಂದು ಡಿಕ್ಕಿ  ಹೊಡೆದಿದೆ. ಇದರ ಪರಿಣಾಮವಾಗಿ ಹುಲಿ ಸ್ಥಳದಲ್ಲೇ ಮೃತಪಟ್ಟಿದೆ. ರಾಷ್ಟ್ರೀಯ ಪ್ರಾಣಿಯಾಗಿರುವ ಹುಲಿಯ ಸಾವು ಒಂದು ಕಡೆ ಆತಂಕಕ್ಕೆ ಕಾರಣವಾಗಿದ್ದರೆ, ಇನ್ನೊಂದು ಕಡೆ ಮಂಡಕಳ್ಳಿ ವಿಮಾನ ನಿಲ್ದಾಣ ರಸ್ತೆಯಲ್ಲಿ ಹುಲಿಗಳ ಸಂಚಾರವೂ ಜನರಿಗೆ ಭಯವನ್ನು ಹುಟ್ಟಿಸಿದೆ. ಈ ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಕಾರನ್ನು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Read More

ಪುಣೆಯ ಹೊರವಲಯದಲ್ಲಿರುವ ಹೋಟೆಲ್‌ ವೊಂದರಲ್ಲಿ ಶನಿವಾರ ರಾತ್ರಿ ಇನ್ಫೋಸಿಸ್‌ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಟೆಕ್ಕಿಯನ್ನು ಆಕೆಯ ಗೆಳೆಯನೇ  ಗುಂಡಿಕ್ಕಿ ಹತ್ಯೆ ಮಾಡಲಾಗಿದ್ದು, ಆರೋಪಿಯಿಂದ ಪಿಸ್ತೂಲ್ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪಿಂಪ್ರಿ ಚಿಂಚ್‌ ವಾಡದ ಹಿಂಜೆವಾರಿ ಪ್ರದೇಶದ ಓಯೋ ಹೋಟೆಲ್ ‌ನಲ್ಲಿ ಈ ಘಟನೆ ನಡೆದಿದ್ದು, ಗುಂಡಿನ ದಾಳಿಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಹೋಟೆಲ್‌ ಗೆ ಆಗಮಿಸಿ ಮಹಿಳೆಯ ಶವವನ್ನು ಹೊರತೆಗೆದರು. ಶವ ನೆಲದ ಮೇಲೆ ಬಿದ್ದಿದ್ದು, ಕೋಣೆಯಲ್ಲಿ ರಕ್ತದ ಕಲೆಗಳು ಕಂಡುಬಂದಿವೆ. ಪೊಲೀಸರ ಪ್ರಕಾರ, ಮಹಿಳೆಯನ್ನು ವಂದನಾ ದ್ವಿವೇದಿ ಎಂದು ಗುರುತಿಸಲಾಗಿದೆ ಮತ್ತು ಆಕೆಯ ಗೆಳೆಯ ರಿಷಬ್ ನಿಗಮ್ ಎಂದು ಗುರುತಿಸಲಾಗಿದೆ. ಇಬ್ಬರೂ ಮೂಲತಃ ಉತ್ತರ ಪ್ರದೇಶದವರು. ಇವರಿಬ್ಬರ ನಡುವೆ ಪರಸ್ಪರ ಸಂಬಂಧವಿದ್ದು, ಜಗಳವೇ ಕೊಲೆಗೆ ಕಾರಣ ಎಂಬುದು ಈವರೆಗಿನ ತನಿಖೆಯಿಂದ ತಿಳಿದುಬಂದಿದೆ. ಈ ದುರಂತ ಘಟನೆಯ ಕುರಿತು ಹೆಚ್ಚಿನ ಮಾಹಿತಿಗಾಗಿ ಆರೋಪಿಯನ್ನು ಈಗ ವಿಚಾರಣೆ ನಡೆಸಲಾಗುತ್ತಿದೆ. ಹೋಟೆಲ್‌ ನ ಸಿಸಿಟಿವಿ ಫೂಟೇಜ್ ನಲ್ಲಿ ರಿಷಬ್ ತಡರಾತ್ರಿ ಕೋಣೆಯಿಂದ…

Read More

ನವದೆಹಲಿ: ಪೊಲೀಸ್ ತರಬೇತಿ ಶಾಲೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, 450 ಕ್ಕೂ ಅಧಿಕ ವಾಹನಗಳು ಸುಟ್ಟು  ಹೋಗಿವೆ ಎಂದು ದೆಹಲಿ ಅಗ್ನಿಶಾಮಕ ಸೇವೆಗಳ ಇಲಾಖೆ ತಿಳಿಸಿದೆ. ಮಧ್ಯರಾತ್ರಿ 12.30 ಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಸತತ ಕಾರ್ಯಾಯರಣೆಯಿಂದಾಗಿ, ಬೆಳಗ್ಗೆ 4 ಗಂಟೆಗೆ ಬೆಂಕಿ ಹತೋಟಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಕಿ ಅನಾಹುತಕ್ಕೆ ಕಾರಣ ಇನ್ನೂ ಸ್ಪಷ್ಟವಾಗಿಲ್ಲ ತಿಳಿದು ಬಂದಿಲ್ಲ. ಅದೃಷ್ಟವಶಾತ್, ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

Read More

ಚಿಕ್ಕಬಳ್ಳಾಪುರ: ತಾಲೂಕಿನ ನಂದಿಗಿರಿಧಾಮದಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಈತನನ್ನು ಚಿಂತಾಮಣಿ ತಾಲ್ಲೂಕಿನ ಬ್ಯಾಲಹಳ್ಳಿ ಗ್ರಾಮದ ನಾರಾಯಣಸ್ವಾಮಿ(37) ಎಂದು ಗುರುತಿಸಲಾಗಿದೆ. ಇನ್ನು ಈತ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿ ಹೋಗಿದ್ದನಂತೆ. ಈ ಹಿನ್ನಲೆ ಚಿಕ್ಕಬಳ್ಳಾಫುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಯುವಕ ನಾಪತ್ತೆ ಪ್ರಕರಣ ದಾಖಲಾಗಿತ್ತು. ಇನ್ನು ಸ್ಥಳಕ್ಕೆ ನಂದಿಗಿರಿಧಾಮ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಮುಂದಿನ ವಾರದಲ್ಲಿ ದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಜಾರಿಗೆ ಬರಲಿದೆ ಎಂದು ಕೇಂದ್ರ ಸಚಿವ ಶಾಂತನು ಠಾಕೂರ್ ಹೇಳಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಕೇಂದ್ರ ಸಚಿವರು ಘೋಷಣೆ ಮಾಡಿದರು. ಮುಂದಿನ 7 ದಿನಗಳಲ್ಲಿ ಸಿಎಎ ಜಾರಿಗೆ ಬರಲಿದೆ. ಈ ಕಾನೂನು ಬಂಗಾಳದಲ್ಲಿ ಮಾತ್ರವಲ್ಲದೆ ದೇಶದಾದ್ಯಂತ ಜಾರಿಯಾಗಲಿದೆ ಎಂದರು. “ಮುಂದಿನ ಏಳು ದಿನಗಳಲ್ಲಿ ಸಿಎಎ ಪಶ್ಚಿಮ ಬಂಗಾಳದಲ್ಲಿ ಮಾತ್ರವಲ್ಲದೆ ಭಾರತದಾದ್ಯಂತ ಜಾರಿಗೆ ಬರಲಿದೆ ಎಂದು ನಾನು ನಿಮಗೆ ಭರವಸೆ ನೀಡಬಲ್ಲೆ, ”ಎಂದು ಶಾಂತನು ಠಾಕೂರ್  ಸಾರ್ವಜನಿಕ ಸಭೆಯಲ್ಲಿ ಹೇಳಿದರು. ಕಳೆದ ವರ್ಷ ಡಿಸೆಂಬರ್‌ನಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಸಿಎಎಯನ್ನು ಜಾರಿಗೆ ತರುತ್ತದೆ ಮತ್ತು ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಅಮಿತ್ ಶಾ ಹೇಳಿದ್ದರು. ಸಿಎಎಯನ್ನು ವಿರೋಧಿಸುತ್ತಿರುವ ತೃಣಮೂಲ ಕಾಂಗ್ರೆಸ್ ಅಧ್ಯಕ್ಷೆ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಗುರಿಯಾಗಿರಿಸಿಕೊಂಡಿವೆ. ಕೋಲ್ಕತ್ತಾದ ಐಕಾನಿಕ್ ಎಸ್‌ ಪ್ಲೇನೇಡ್ ‌ನಲ್ಲಿ ನಡೆದ ರ್ಯಾಲಿಯಲ್ಲಿ, ಒಳನುಸುಳುವಿಕೆ, ಭ್ರಷ್ಟಾಚಾರ, ರಾಜಕೀಯ ಹಿಂಸಾಚಾರ…

Read More

ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ. ಇಬ್ಬರು ಮಲಯಾಳಿಗಳು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. 6 ಮಂದಿ ಗಾಯಗೊಂಡಿದ್ದಾರೆ. ಪಟಾಕಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಸ್ವಾಮಿ (55) ಮತ್ತು ವರ್ಗೀಸ್ (68) ಮೃತ ಮಲಯಾಳಿಗಳು. ಮಲಪ್ಪುರಂ ಮೂಲದ ಬಶೀರ್ ಅವರ ಜಮೀನಿನಲ್ಲಿ ಪಟಾಕಿ ಕಾರ್ಖಾನೆ ಇತ್ತು. ಸ್ಫೋಟದ ರಭಸಕ್ಕೆ ಪಟಾಕಿ ತಯಾರಿಸುತ್ತಿದ್ದ ಚಿಕ್ಕ ಕಟ್ಟಡ ಸಂಪೂರ್ಣ ನಾಶವಾಗಿದೆ. ಅಪಘಾತದ ವೇಳೆ ಕಟ್ಟಡದಲ್ಲಿ 9 ಮಂದಿ ಇದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಲ್ಲಿ ತೋಟದ ಮಾಲೀಕ ಸೇರಿದಂತೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಾಲಿಡ್ ಫೈರ್ ವರ್ಕ್ ಹೆಸರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಂಸ್ಥೆಗೆ ಪರವಾನಗಿ ಇದೆಯೇ ಎಂಬ ಬಗ್ಗೆಯೂ ಪೊಲೀಸರು ಪರಿಶೀಲನೆ ನಡೆಸಲಿದ್ದಾರೆ.

Read More

ಜ್ಞಾನವಾಪಿಯಲ್ಲಿನ ಕಮಾನುಗಳನ್ನು ತೆರೆಯುವ ಬೇಡಿಕೆಯನ್ನು ತುರ್ತಾಗಿ ಪರಿಗಣಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಈ ಬೇಡಿಕೆಯೊಂದಿಗೆ ಹಿಂದೂ ಮಹಿಳೆಯರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಜ್ಞಾನವಾಪಿಗೆ ಸಂಬಂಧಿಸಿದ ಮಹತ್ವದ ಸಾಕ್ಷ್ಯಾಧಾರಗಳು ವಾಲ್ಟ್ ನಲ್ಲಿದ್ದು, ಸಮೀಕ್ಷೆ ನಡೆಸಲು ಪುರಾತತ್ವ ಇಲಾಖೆಗೆ ಸೂಚಿಸಬೇಕು ಎಂಬುದು ಮನವಿಯಲ್ಲಿನ ಆಗ್ರಹವಾಗಿದೆ. ಜ್ಞಾನವಾಪಿಯಲ್ಲಿರುವ ಹತ್ತು ವಾಲ್ಟ್‌ಗಳನ್ನು ತೆರೆಯಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ. ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಹೊಂದಿಕೊಂಡಿರುವ ಜ್ಞಾನವಾಪಿ ಸಂಕೀರ್ಣದಲ್ಲಿ ಎ.ಎಸ್.ಐ. ನಿನ್ನೆ ಹಿಂದೂ ಪಂಥದ ವಕೀಲರು ನಡೆಸಿದ ವೈಜ್ಞಾನಿಕ ಪರೀಕ್ಷೆಯ ವರದಿಯ ವಿವರ ಬಹಿರಂಗವಾಗಿತ್ತು. ಪುರಾತತ್ತ್ವ ಶಾಸ್ತ್ರದ ಸಮೀಕ್ಷೆಯ ವರದಿಯು ಜ್ಞಾನವಾಪಿ ಮಸೀದಿಯ ಸ್ಥಳದಲ್ಲಿ ಹಿಂದೂ ದೇವಾಲಯವಿದೆ ಎಂದು ತೋರಿಸಿದೆ ಎಂದು ಹಿಂದೂ ವಕೀಲ ವಿಷ್ಣು ಶಂಕರ್ ಜೈನ್ ಹೇಳಿದ್ದಾರೆ. ಜೈನ್ ಪ್ರಕಾರ, ಅಸ್ತಿತ್ವದಲ್ಲಿರುವ ಜ್ಞಾನವಾಪಿ  ಹಿಂದೂ ದೇವಾಲಯದ ಹಲವಾರು ಅವಶೇಷಗಳನ್ನು ಹೊಂದಿದೆ ಎಂದು ಸಮೀಕ್ಷೆಯು ಕಂಡುಹಿಡಿದಿದೆ. ಅರ್ಜಿದಾರರಲ್ಲಿ ಒಬ್ಬರಾದ ರಾಖಿ ಸಿಂಗ್ ಪರ ವಕೀಲರಾದ ಮದನ್ ಮೋಹನ್ ಯಾದವ್, ಮಸೀದಿಯಲ್ಲಿ ಪರ್ಷಿಯನ್ ಭಾಷೆಯಲ್ಲಿ ಕಲ್ಲಿನ…

Read More

ತಿಪಟೂರು:  ಕಾರು ಮತ್ತು ಬೈಕ್‌ ನಡುವೆ ನಡೆದ ಭೀಕರ ಅಪಘಾತದಲ್ಲಿ  ಬೈಕ್‌ ಸವಾರ ದಾರುಣವಾಗಿ ಸಾವನ್ನಪ್ಪಿದ ಘಟನೆ  ತಿಪಟೂರು ತಾಲೂಕಿನ ತಿಮ್ಲಾಪುರ ಗ್ರಾಮದ ಬಳಿ ನಡೆದಿದೆ. ಹೋನ್ನವಳ್ಳಿ ಹೋಗುತ್ತಿರುವ ಮಾರ್ಗಮಧ್ಯೆ ಈ ಘಟನೆ ನಡೆದಿದ್ದು, ಹೊನ್ನವಳ್ಳಿ ಮೂಲೆ ಮನೆ ನಿವಾಸಿ ಸೋಮಶೇಖರ (42) ಅಪಘಾತದಲ್ಲಿ ಮೃತಪಟ್ಟವರು ಎಂದು ತಿಳಿದು ಬಂದಿದೆ. ಅಪಘಾತದ ತೀವ್ರತೆಗೆ ಬೈಕ್‌ ಸವಾರನ ಕಾಲು ತುಂಡಾಗಿ ಕಾರಿನ ಮುಂಭಾಗದಲ್ಲೇ ಸಿಲುಕಿಕೊಂಡಿರುವ ದೃಶ್ಯ ಭೀಕರವಾಗಿದ್ದು, ಸಾರ್ವಜನಿಕರು ಬೆಚ್ಚಿಬಿದ್ದಿದ್ದಾರೆ. ಅಪಘಾತದಲ್ಲಿ ಉಮೇಶ್‌ ಎಂಬವರಿಗೆ ಗಂಭೀರವಾಗಿ ಗಾಯವಾಗಿದ್ದು, ಅವರ ಕಾಲು ಮುರಿತಕ್ಕೊಳಗಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಮಶೇಖರ ಅವರು ತನ್ನ ಜಮೀನಿನಲ್ಲಿ ಬೆಳೆದ ಅವರೇಕಾಯಿಯನ್ನು ಕೊಯ್ಡ್ತು ತಿಪಟೂರಿನ ಬೀದಿ ಬದಿಯಲ್ಲಿ ಮಾರಾಟ ಮಾಡಿ ಊರಿಗೆ ವಾಪಸ್‌ ಆಗುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಘಟನೆ ಸಂಬಂಧ ಹೊನವಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.  ವರದಿ: ಆನಂದ ತಿಪಟೂರು

Read More

ಪಾವಗಡ : ತಾಲ್ಲೂಕಿನ ವೈ.ಎನ್.ಹೊಸಕೋಟೆ ಗ್ರಾಮದ ಮಂತ್ರಾಲಯದ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದ ಗುರುಗಳಾದ ೧೦೦೮ನೇ ಪರಮಪೂಜ್ಯ ಶ್ರೀ ಸುವಿದ್ಯೇಂದ್ರತೀರ್ಥರು  ಗ್ರಾಮದ ಶ್ರೀ ರಾಘವೇಂದ್ರಸ್ವಾಮಿ ಮಠಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ಶ್ರೀಗುರುಗಳನ್ನು ಭಕ್ತರು ಗ್ರಾಮದ ಹೊರವಲಯದಿಂದಲೇ ಸ್ವಾಗತಿಸಿ ಬೆಳ್ಳಿರಥದಲ್ಲಿ ಶೋಭಯಾತ್ರೆಯ ಮೂಲಕ ಮಠಕ್ಕೆ ಕರೆದೊಯ್ದರು. ರಾಯರ ಮಠದಲ್ಲಿ ಮೂಲರಾಮದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ಗುರುಪಾದ ಪೂಜೆ, ಸಂಸ್ಥಾನ ಪೂಜೆ, ಅನುಗ್ರಹ ಸಂದೇಶ ಮಹಾ ಮಂಗಳಾರತಿ ಕಾರ್ಯಗಳು ನೆರವೇರಿದವು. ಭಕ್ತಾಧಿಗಳು ಗುರುಗಳನ್ನು ಮನೆಗಳಿಗೆ ಆಹ್ವಾನಿಸಿ, ತುಲಾಭಾರ, ಪುಷ್ಪಾರ್ಚನೆ ಮತ್ತು ಪಾದಪೂಜೆ ನೆರವೇರಿಸಿದರು. ಮಠದಲ್ಲಿ ಭಕ್ತಾಧಿಗಳಿಗೆ ತೀರ್ಥ ಪ್ರಸಾದ ವಿನಿಯೋಗವಾಯಿತು. ಇದೇ ವೇಳೆ ಶ್ರೀಗಳು ಹಲವು ಭಕ್ತರಿಗೆ ಮುದ್ರಾಧಾರಣೆ ಮಾಡಿದರು. ಈ ಸಂದರ್ಭದಲ್ಲಿ ಮಠದ ಅರ್ಚಕರಾದ ಗುರುರಾಜಾಚಾರ್, ಆನಂದರಾವ್, ಎನ್.ಎಸ್.ಮಂಜುನಾಥ, ಎನ್.ಆರ್.ಅಶ್ವಥ್, ಎನ್.ಸಿ.ಸುಂಬ್ರಮಣ್ಯಂ, ಎನ್.ಎ.ಲಕ್ಷ್ಮಿನಾರಯಣ, ಎನ್.ಎ.ಲಕ್ಷ್ಮಿಶಂಕರ್, ಟಿ.ವಿ.ನಾಗರಾಜು, ಚಂದ್ರಶೇಖರ್ ಮುದ್ರಾಡಿ, ಡಿ.ವಿ.ಅನಿಲ್ ಮುಂತಾದ ಭಕ್ತರು ಇದ್ದರು. ವರದಿ:  ನಂದೀಶ್‌ ನಾಯ್ಕ

Read More

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಶೋಷಿತ ಜಾತಿ-ಸಮುದಾಯಗಳ ಮಹಾ ಒಕ್ಕೂಟ ಮತ್ತು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಚಿತ್ರದುರ್ಗದಲ್ಲಿ ಆಯೋಜಿಸಿದ್ದ “ಶೋಷಿತರ ಜಾಗೃತಿ ಸಮಾವೇಶವನ್ನು” ಉದ್ಘಾಟಿಸಿದರು. ಸಮಾವೇಶದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರುಗಳಾದ ಎಚ್.ಸಿ.ಮಹದೇವಪ್ಪ, ಸತೀಶ್ ಜಾರಕಿಹೊಳಿ, ಜಮೀರ್ ಅಹ್ಮದ್ ಖಾನ್, ಬೋಸ್ ರಾಜು, ಕೆ.ಎಚ್.ಮುನಿಯಪ್ಪ, ಬೈರತಿ ಸುರೇಶ್, ಸಂತೋಷ್ ಲಾಡ್, ಮಧು ಬಂಗಾರಪ್ಪ, ದಿನೇಶ್ ಗುಂಡೂರಾವ್, ಆರ್.ಬಿ.ತಿಮ್ಮಾಪುರ್, ನಾಗೇಂದ್ರ, ಡಿ.ಸುಧಾಕರ್, ಶಿವರಾಜ್ ತಂಗಡಗಿ, ರಹೀಂಖಾನ್, ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಅಧ್ಯಕ್ಷರಾದ ರಾಮಚಂದ್ರಪ್ಪ, ದಲಿತ ಸಂಘರ್ಷ ಸಮಿತಿ ಮುಖಂಡರಾದ ಮಾವಳ್ಳಿ ಶಂಕರ್, ಮಾಜಿ ಸಚಿವ ಎಚ್.ಎಂ.ರೇವಣ್ಣ, ಎಚ್.ಆಂಜನೇಯ, ಮಾಜಿ ಸಂಸದ ಉಗ್ರಪ್ಪ ಹಾಗೂ ಶಾಸಕರುಗಳಾದ ಪ್ರಕಾಶ್ ರಾಥೋಡ್, ನಾಗರಾಜ್ ಯಾದವ್, ಅಜಯ್ ಸಿಂಗ್, ನಸೀರ್ ಅಹಮದ್ ಸೇರಿ 20ಕ್ಕೂ ಹೆಚ್ಚು ಶಾಸಕರುಗಳು ಉಪಸ್ಥಿತರಿದ್ದರು.

Read More