Author: admin

ಚಂಡೀಗಢ: ಪಂಜಾಬ್ ನ ಜಲಂಧರ್ ನಲ್ಲಿ ಒಂದೇ ಕುಟುಂಬದ 5 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. 59 ವರ್ಷದ ಮನ್ ಮೋಹನ್ ಸಿಂಗ್, ಅವರ ಪತ್ನಿ, ಇಬ್ಬರು ಮಕ್ಕಳು, ಮೂರು ವರ್ಷದ ಮೊಮ್ಮಗಳ ಶವ ಪತ್ತೆಯಾಗಿದೆ. ಮನಮೋಹನ್ ಅವರ ಶವ ಸೀಲಿಂಗ್ ಫ್ಯಾನ್‌ ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇತರರ ಮೃತದೇಹ ಅದೇ ಕೋಣೆಯಲ್ಲಿ ಹಾಸಿಗೆಯ ಮೇಲೆ ಪತ್ತೆಯಾಗಿದೆ. ಮನಮೋಹನ್ ಸಿಂಗ್ ಅವರು ಬರೆದಿರುವ ಆತ್ಮಹತ್ಯೆ ಪತ್ರದಲ್ಲಿ ಕೆಲವು ಹಣಕಾಸಿನ ಸಮಸ್ಯೆಗಳಿಂದಾಗಿ ಈ ನಿರ್ಧಾರವನ್ನು ತೆಗೆದುಕೊಳ್ಳುತ್ತಿರುವುದಾಗಿ ಬರೆದಿದ್ದಾರೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ, ಜಲಂಧರ್ (ಗ್ರಾಮೀಣ) ಮುಖವಿಂದರ್ ಸಿಂಗ್ ಭುಲ್ಲರ್ ಹೇಳಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ ಮನಮೋಹನ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ತನ್ನ ಕುಟುಂಬದ ಸದಸ್ಯರನ್ನು ಕತ್ತು ಹಿಸುಕಿ ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

Read More

ಬೆಂಗಳೂರು: ಸಾರ್ವಜನಿಕರಿಂದ ‘ಪಲ್ಲಕ್ಕಿ’ ಉತ್ಸವ ಹೆಸರಿನ ಐಷಾರಾಮಿ ಸ್ಲೀಪರ್ ಬಸ್ ಸೇವಗೆ ಉತ್ತಮ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಇನ್ನೂ 100 ಪಲ್ಲಕ್ಕಿ ಸ್ಲೀಪರ್ ಬಸ್ ಗಳ ಸೇರ್ಪಡೆಗೊಳಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನಿರ್ಧರಿಸಿದೆ ಎಂದು ತಿಳಿದು ಬಂದಿದೆ. ಬಸ್ ಗಳು ಬಜೆಟ್ ಸ್ನೇಹಿಯಾಗಿದ್ದು, ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.‘ಸಂತೋಷವು ಪ್ರಯಾಣಿಸುತ್ತಿದೆ’ ಎಂಬ ಅಡಿಬರಹದ ಅಡಿಯಲ್ಲಿ ಕಾರ್ಯನಿರ್ವಹಿಸುವ ಪಲ್ಲಕ್ಕಿ ಬಸ್ ಸೇವೆಗಳು ಪ್ರಾರಂಭವಾದಾಗಿನಿಂದ ಪೂರ್ಣ ಸಾಮರ್ಥ್ಯದೊಂದಿಗೆ ಸಂಚರಿಸುತ್ತಿವೆ. ಅತ್ಯಾಧುನಿಕ ವ್ಯವಸ್ಥೆಗಳನ್ನು ಹೊಂದಿರುವ ‘ಪಲ್ಲಕ್ಕಿ’ ಉತ್ಸವ ಬಸ್ ಗಳಿಗೆ ಅಕ್ಟೋಬರ್ 7ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಚಾಲನೆ ನೀಡಿದ್ದರು. ಕೆಎಸ್ ಆರ್ ಟಿಸಿಯು 40 ಬಸ್ ಗಳನ್ನು ರಸ್ತೆಗಿಳಿಸಿತ್ತು. ಪಲ್ಲಕ್ಕಿ ನಾನ್ ಎ.ಸಿ. ಸ್ಲೀಪರ್ ಬಸ್ ಆಗಿದ್ದು, 30 ಸ್ಲೀಪರ್ ಬರ್ತ್ ಹೊಂದಿದೆ. ಕೆಎಸ್ ಆರ್ ಟಿಸಿ ಎಂಡಿ ಅನ್ಬು ಕುಮಾರ್ ಮಾತನಾಡಿ, “ಅಕ್ಟೋಬರ್ ನಲ್ಲಿ ಪಲ್ಲಕ್ಕಿ ಸ್ಲೀಪರ್ ಬಸ್ ಗಳನ್ನು ಪರಿಚಯಿಸಲಾಗಿತ್ತು. ಅಂದಿನಿಂದ ಇದು ಕೆಎಸ್ ಆರ್ ಟಿಸಿಯ…

Read More

ಬೆಂಗಳೂರು: ಒಂದು ವರ್ಷದಲ್ಲಿ ನೂರು ಕೋಟಿ ರೂ. ಗೂ ಅಧಿಕ ಮೌಲ್ಯದ ಡ್ರಗ್ಸ್ ನ್ನು ಬೆಂಗಳೂರು ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. 2023ರಲ್ಲಿ ಒಟ್ಟು ಇದುವರೆಗೆ ನೂರು ಕೋಟಿಗೂ ಹೆಚ್ಚು ಮೌಲ್ಯದ ಡ್ರಗ್ಸ್‌ ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಕೊನೆಯ ನಾಲ್ಕು ತಿಂಗಳುಗಳಲ್ಲಿಯೇ ಭರ್ಜರಿ ಬೇಟೆಯಾಡಿದ ಪೊಲೀಸರು ಬರೋಬ್ಬರಿ 60 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ. ಇಲ್ಲಿಯವರೆಗೆ ಮೂರು ಸಾವಿರ ಡ್ರಗ್ಸ್ ಪೆಡ್ಲರ್ ಗಳನ್ನು ಬಂಧಿಸಿದ್ದಾರೆ.

Read More

ನೇಮಕಾತಿ ಆದೇಶ ಪ್ರತಿಗಾಗಿ ನೂರಾರು ಆಕಾಂಕ್ಷಿಗಳು ಕೆಪಿಟಿಸಿಎಲ್ ಕೇಂದ್ರ ಕಚೇರಿಗೆ ಮುತ್ತಿಗೆ ಹಾಕಿ, “ಕೆಪಿಸಿಎಲ್ ನಿಂದ ಆರ್ಡರ್ ಕಾಪಿ ಯಾವಾಗ ಕೊಡ್ತೀರಾ” ಅಂತ ಬಿತ್ತಿ ಪತ್ರ ಕಾರಿಗೆ ಅಂಟಿಸಿ ಪ್ರತಿಭಟನೆ ನಡೆಸಿದರು. ಕೇಂದ್ರ ಕಚೇರಿಯ ಗೇಟ್ ನ ಮುಂಭಾಗ ದಲ್ಲಿ ಭಿತ್ತಿ ಪತ್ರ ಅಂಟಿಸಿದ ಕಾರನ್ನು ಅಡ್ಡಲಾಗಿ ನಿಲ್ಲಿಸಿ, ಯಾವುದೇ ಕಾರುಗಳು ಒಳಗೆ ಹಾಗೂ ಹೊರಗೆ ಹೋಗದಂತೆ ಗೇಟ್ ಗೆ ಅಡ್ಡ ನಿಲ್ಲಿಸಿ, ಗೇಟ್ ಮುಂಭಾಗ ಕೂತು ಕೆಪಿಟಿಸಿಎಲ್ ಗೆ ಧಿಕ್ಕಾರ ಕೂಗುತ್ತಾ ಪ್ರತಿಭಟಿಸಿದರು.

Read More

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಮೂರು ಕೋವಿಡ್ ಸಾವುಗಳು ವರದಿಯಾಗಿವೆ. ಕೇರಳ, ಕರ್ನಾಟಕ ಮತ್ತು ಬಿಹಾರದಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ. ಒಂದೇ ದಿನದಲ್ಲಿ 841 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಇದು ಕಳೆದ 227 ದಿನಗಳಲ್ಲಿ ಅತಿ ಹೆಚ್ಚು ಅಂಕಿ ಅಂಶವಾಗಿದೆ. ಇದರೊಂದಿಗೆ ದೇಶದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೋವಿಡ್ ರೋಗಿಗಳ ಸಂಖ್ಯೆ 4309 ಕ್ಕೆ ಏರಿಕೆಯಾಗಿದೆ. ಕಳೆದ ಕೆಲವು ದಿನಗಳಲ್ಲಿ ಕೋವಿಡ್ ರೂಪಾಂತರವಾದ ಜೆಎನ್ 1 ರ ಪ್ರಕರಣಗಳ ಸಂಖ್ಯೆಯಲ್ಲಿಯೂ ಹೆಚ್ಚಳವಾಗಿದೆ. ಡಿಸೆಂಬರ್ 28 ರ ಹೊತ್ತಿಗೆ, 145 ಜೆಎನ್ 1 ಪ್ರಕರಣಗಳು ವರದಿಯಾಗಿವೆ. ಹೆಚ್ಚುತ್ತಿರುವ ಕೋವಿಡ್ ನ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಜಾಗರೂಕರಾಗಿರಲು ಆರೋಗ್ಯ ಸಚಿವಾಲಯ ಸಲಹೆ ನೀಡಿದೆ. ಅನಾರೋಗ್ಯದಿಂದ ಬಳಲುತ್ತಿರುವ ವೃದ್ಧರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಜಾಗರೂಕರಾಗಿರಬೇಕು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.

Read More

ತೆಹ್ರೀಕ್-ಎ-ಹುರಿಯತ್ ಅನ್ನು ಕೇಂದ್ರ ಸರ್ಕಾರ ನಿಷೇಧಿತ ಸಂಘಟನೆ ಎಂದು ಘೋಷಿಸಿದೆ. ಪ್ರತ್ಯೇಕತಾವಾದಿ ಚಟುವಟಿಕೆಗಳಲ್ಲಿ ಭಾಗಿಯಾಗಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಜಮ್ಮು ಮತ್ತು ಕಾಶ್ಮೀರವನ್ನು ಭಾರತದಿಂದ ಬೇರ್ಪಡಿಸಿ ಇಸ್ಲಾಮಿಕ್ ಆಡಳಿತವನ್ನು ಸ್ಥಾಪಿಸಲು ಸಂಘಟನೆ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಕೇಂದ್ರವು ಕಳೆದ ದಿನ ಮುಸ್ಲಿಂ ಲೀಗ್ ಜಮ್ಮು ಮತ್ತು ಕಾಶ್ಮೀರವನ್ನು (ಮಸರತ್ ಆಲಂ ವಿಂಗ್) ನಿಷೇಧಿಸಿತ್ತು. ಈ ಕ್ರಮವು ದೇಶ ವಿರೋಧಿ ಮತ್ತು ಪ್ರತ್ಯೇಕತಾವಾದಿ ಚಟುವಟಿಕೆಗಳಲ್ಲಿ ತೊಡಗಿದೆ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಇಸ್ಲಾಮಿಕ್ ಆಡಳಿತವನ್ನು ಸ್ಥಾಪಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಲಾಗಿದೆ. ಇದಾದ ಬೆನ್ನಲ್ಲೇ ತೆಹ್ರೀಕ್-ಇ-ಹುರಿಯತ್ ಅನ್ನು ನಿಷೇಧಿಸಲು ಕೇಂದ್ರ ಹೊಸ ನಿರ್ಧಾರ ಕೈಗೊಳ್ಳಲಾಗಿದೆ. ಗೃಹ ಸಚಿವಾಲಯದ ಕ್ರಮವು ಯುಎಪಿಎ ಅಡಿಯಲ್ಲಿದೆ. ಹತ್ಯೆಗೀಡಾದ ಪ್ರತ್ಯೇಕತಾವಾದಿ ನಾಯಕ ಸೈಯದ್ ಅಲಿ ಶಾ ಗಿಲಾನಿ ಈ ಸಂಘಟನೆಯ ನೇತೃತ್ವ ವಹಿಸಿದ್ದರು. ಜಮ್ಮು ಮತ್ತು ಕಾಶ್ಮೀರವನ್ನು ಭಾರತದಿಂದ ಬೇರ್ಪಡಿಸಿ ಇಸ್ಲಾಮಿಕ್ ಆಡಳಿತ ಸ್ಥಾಪಿಸಲು ಸಂಘಟನೆ ಪ್ರಯತ್ನಿಸಿದೆ ಎಂದು ಅಮಿತ್…

Read More

24ರ ಹರೆಯದ ಯುವಕನೊಬ್ಬ ತನ್ನ ತಾಯಿಗೆ ಡ್ರಗ್ಸ್ ಕೊಡದ ಕಾರಣಕ್ಕೆ ನಡೆದ ಜಗಳದಲ್ಲಿ ಚಾಕುವಿನಿಂದ ಇರಿದು ಕೊಂದಿದ್ದಾನೆ. ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಈ ಘಟನೆ ನಡೆದಿದೆ. ಕೊಲೆಯ ಬಳಿಕ ಆರೋಪಿ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಗಾಜಿಯಾಬಾದ್‌ನ ಅಮನ್ ಗಾರ್ಡನ್ ಪ್ರದೇಶದಲ್ಲಿ ಶನಿವಾರ ಈ ಘಟನೆ ನಡೆದಿದೆ. 24 ವರ್ಷದ ಶಾರುಖ್ ತನ್ನ 65 ವರ್ಷದ ತಾಯಿ ದಿಲ್ಶಾದ್ ಬೇಗಂ ಅವರನ್ನು ಚಾಕುವಿನಿಂದ ಇರಿದು ಕೊಂದಿದ್ದಾನೆ. ನಂತರ ಲೋಣಿ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾರೆ. ಮಾದಕ ವಸ್ತು ಖರೀದಿಸಲು ಹಣ ನೀಡದ ಹಿನ್ನೆಲೆಯಲ್ಲಿ ತಾಯಿಯನ್ನು ಕೊಂದಿರುವುದಾಗಿ ಪೊಲೀಸರ ಮುಂದೆ ಬಹಿರಂಗಪಡಿಸಿದ್ದಾನೆ. ನಂತರ ಅಶೋಕ್‌ ವಿಹಾರ್‌ ಕಾಲೋನಿಯಲ್ಲಿ ಮಹಿಳೆಯೊಬ್ಬರು ರಕ್ತದ ಮಡುವಿನಲ್ಲಿ ಬಿದ್ದಿದ್ದ ಶವವನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಶಾರುಖ್ ಮಾದಕ ವ್ಯಸನಿಯಾಗಿದ್ದಾರೆ. ಈ ವಿಚಾರವಾಗಿ ಆತ ಆಗಾಗ್ಗೆ ತನ್ನ ತಾಯಿಯೊಂದಿಗೆ ಜಗಳವಾಡುತ್ತಿದ್ದ. 3 ತಿಂಗಳ ಹಿಂದೆ ಮೆಕ್ಯಾನಿಕ್ ಕೆಲಸ ಹುಡುಕುತ್ತಿದ್ದ. ಅವನು ಪ್ರಸ್ತುತ ನಿರುದ್ಯೋಗಿಯಾಗಿದ್ದಾನೆ ಎಂದು…

Read More

ಉತ್ತರ ಪ್ರದೇಶದಲ್ಲಿ ಕಿರುಕುಳ ತಡೆಯಲು ಯತ್ನಿಸಿದ ದಲಿತ ಮಹಿಳೆಯನ್ನು ಬೆಲ್ಲ ತಯಾರಿಕಾ ಘಟಕದಲ್ಲಿ ಬಿಸಿ ಕಡಾಯಿಗೆ ತಳ್ಳಲಾದ ಘಟನೆ ಬುಡೌನ್ ಜಿಲ್ಲೆಯಲ್ಲಿ ನಡೆದಿದೆ. ತೀವ್ರ ಸುಟ್ಟಗಾಯಗಳಿದ್ದ 18 ವರ್ಷದ ಮಹಿಳೆಯನ್ನು ದೆಹಲಿಯ ಜಿಟಿಬಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಜಾಫರ್‌ ನಗರ ಮೂಲದ ಮಹಿಳೆ ಪ್ರಮೋದ್ ಅವರ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ ಬುಧವಾರ, ಕೆಲಸದ ಸ್ಥಳದ ಮಾಲೀಕರು ಮತ್ತು ಇತರ ಮೂವರು ಮಹಿಳೆಗೆ ಕಿರುಕುಳ ನೀಡಲು ಪ್ರಯತ್ನಿಸಿದರು. ಇದನ್ನು ವಿರೋಧಿಸಿದಾಗ ಮಹಿಳೆಯನ್ನು ಬೆಲ್ಲ ತಯಾರಿಕಾ ಘಟಕದ ಕುದಿಯುವ ಬಿಸಿ ಪಾತ್ರೆಗೆ ತಳ್ಳಿದ್ದಾರೆ. ಆ ಬಳಿಕ ಆರೋಪಿ ಓಡಿ ಹೋಗಿದ್ದಾನೆ. ಆರೋಪಿಗಳು ಜಾತಿ ನಿಂದನೆ ಮಾಡುತ್ತಿದ್ದರು ಎಂದು ಸಹೋದರ ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ.

Read More

ಜನವರಿ 26ರಂದು ಗಣರಾಜ್ಯೋತ್ಸವದ ಪ್ರಯುಕ್ತ ಅದಿತಿ ಪ್ರಭುದೇವ ಮತ್ತು ಪವನ್ ತೇಜ್ ಅವರು ನಾಯಕಿ-ನಾಯಕನಾಗಿ ಅಭಿನಯಿಸಿದ ‘ಅಲೆಕ್ಸಾ’ ಸಿನಿಮಾ ರಿಲೀಸ್ ಆಗಲಿದೆ. ಪವನ್ ತೇಜ್ ಹೀರೋ ಆಗಿ ನಟಿಸಿದರೆ.. ಅದಿತಿ ಪ್ರಭುದೇವ ಅವರು ವಿಶೇಷ ತನಿಖಾ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ನಟಿ ಅದಿತಿ ಪ್ರಭುದೇವ ಅವರು ಅಭಿನಯಿಸಿದ ‘ಅಲೆಕ್ಸಾ’ ಸಿನಿಮಾ ಕೌತುಕವನ್ನು ಮೂಡಿಸಿದೆ. ಈ ಸಿನಿಮಾವನ್ನು ವಿ. ಚಂದ್ರು ನಿರ್ಮಾಣ ಮಾಡಿದ್ದಾರೆ. ಜೀವ ಅವರು ನಿರ್ದೇಶನ ಮಾಡಿದ್ದಾರೆ. ‘ಅಲೆಕ್ಸಾ’ ಸಿನಿಮಾವನ್ನು ಡಿಸೆಂಬರ್ 29ರಂದು ರಿಲೀಸ್ ಮಾಡಬೇಕು ಎಂದು ಚಿತ್ರತಂಡ ನಿರ್ಧರಿಸಿತ್ತು. ಆದರೆ ಡಿ.29ಕ್ಕೆ ‘ಚಾಲೆಂಜಿಂಗ್ ಸ್ಟಾರ್’ ದರ್ಶನ್ ನಟನೆಯ ಸಿನಿಮಾ ‘ಕಾಟೇರ’ ಬಿಡುಗಡೆ ಆಗಿದ್ದರಿಂದ ‘ಅಲೆಕ್ಸಾ’ ಸಿನಿಮಾದ ರಿಲೀಸ್ ಜನವರಿ 26ಕ್ಕೆ ಮಂದೂಡಿಕೆ ಆಗಿದೆ.

Read More

ಕೆಂಪು ಸಮುದ್ರ, ಏಡನ್ ಕೊಲ್ಲಿ ಮತ್ತು ಅರಬ್ಬಿ ಸಮುದ್ರದ ಮೂಲಕ ಸಾಗುವ ಸರಕು ಹಡಗುಗಳ ಮೇಲೆ ದಾಳಿಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ನೌಕಾಪಡೆಯು ಮಧ್ಯ ಮತ್ತು ಉತ್ತರ ಅರಬ್ಬೀ ಸಮುದ್ರದಲ್ಲಿ ಕಣ್ಗಾವಲು ಹೆಚ್ಚಿಸಿದೆ. ನೌಕಾಪಡೆಯು ಸರಕು ಹಡಗುಗಳಿಗೆ ಭದ್ರತೆಯನ್ನು ಒದಗಿಸಲು ವಿಧ್ವಂಸಕ ಮತ್ತು ಯುದ್ಧನೌಕೆಗಳನ್ನು ಒಳಗೊಂಡ ಕಾರ್ಯ ಗುಂಪುಗಳನ್ನು ನಿಯೋಜಿಸಿದೆ. P-18, ಲಾಂಗ್ ರೇಂಜ್ ಮ್ಯಾರಿಟೈಮ್ ಪೆಟ್ರೋಲ್ ಏರ್‌ಕ್ರಾಫ್ಟ್ ಮತ್ತು ರಿಮೋಟ್ಲಿ ಪೈಲಟೆಡ್ ಏರ್‌ ಕ್ರಾಫ್ಟ್ (ಆರ್‌ ಎಪಿ) ಗಳನ್ನು ಸಹ ಭದ್ರತೆಗಾಗಿ ನಿಯೋಜಿಸಲಾಗಿದೆ. ನೌಕಾಪಡೆಯ ಭದ್ರತಾ ಕಾರ್ಯಾಚರಣೆಗಳು ಕೋಸ್ಟ್ ಗಾರ್ಡ್ ಸಹಯೋಗದೊಂದಿಗೆ ಇವೆ. ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಆರ್ ಹರಿ ಕುಮಾರ್ ಅವರು ಅರಬ್ಬಿ ಸಮುದ್ರ ಪ್ರದೇಶದಲ್ಲಿ ಭದ್ರತೆಯನ್ನು ಹೆಚ್ಚಿಸಲು ಮತ್ತು ಕಾರ್ಯಾಚರಣೆಗಳನ್ನು ಮೇಲ್ವಿಚಾರಣೆ ಮಾಡಲು ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ ಎಂದು ನೌಕಾ ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ಕೆಲವು ವಾರಗಳಲ್ಲಿ ಅಂತಾರಾಷ್ಟ್ರೀಯ ಹಡಗು ಮಾರ್ಗಗಳ ಮೂಲಕ ಸಾಗುವ ಸರಕು ಹಡಗುಗಳ ಮೇಲೆ ಹಲವಾರು ದಾಳಿಗಳು ನಡೆದಿರುವ ಹಿನ್ನೆಲೆಯಲ್ಲಿ,…

Read More