Subscribe to Updates
Get the latest creative news from FooBar about art, design and business.
- ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್
- ತುಮಕೂರು: ಜುಲೈ 15ರಿಂದ ಉಚಿತ ಯೋಗ ತರಬೇತಿ, ತರಗತಿಗಳು ಆರಂಭ
- ಅರಸೀಕೆರೆ–ಯಲಹಂಕ ಮೆಮು ರೈಲಿಗೆ ಹಸಿರು ನಿಶಾನೆ
- ಮಾದಕ ವ್ಯಸನಗಳಿಗೆ ಒಳಗಾದರೆ ನಿಮ್ಮ ಇಡೀ ಜೀವನವೇ ನಾಶವಾಗುತ್ತದೆ: ಜನಜಾಗೃತಿ ವೇದಿಕೆ ಸದಸ್ಯ ಶಿವಕುಮಾರ್
- ಪ್ರತಿ ಠಾಣೆಗಳಲ್ಲಿ 2ನೆ ಭಾನುವಾರ ಪರಿಶಿಷ್ಟರ ಸಭೆ: ಪ್ರಿಯಾಂಕ್ ಖರ್ಗೆ
- ಮೀನುಗಾರರಿಗೆ ಸೌಲಭ್ಯ ಸಹಾಯಧನ : ಅರ್ಜಿ ಆಹ್ವಾನ
- ಪಿ.ಆರ್.ಸಿ. ಕಾಯ್ದೆ ಮೂಲಕ ಅಕ್ರಮ ವಲಸಿಗರನ್ನು ಸಕ್ರಮಗೊಳಿಸಲು ಹುನ್ನಾರ: ಶಾಸಕ ಜಿ.ಬಿ.ಜ್ಯೋತಿಗಣೇಶ್ ಆಕ್ರೋಶ
- ಒಕ್ಕಲೆಬ್ಬಿಸಿದರೆ ಸಾಕೇ? ರೈತರಿಗೆ ಪರ್ಯಾಯ ಭೂಮಿ ನೀಡಿ: ಸರ್ಕಾರಕ್ಕೆ ರೈತ ಸಂಘ ಒತ್ತಾಯ
Author: admin
ತುಮಕೂರು: ಬಿಜೆಪಿ ಪಕ್ಷಕ್ಕೆ ಪುನರ್ ಸೇರ್ಪಡೆಗೊಂಡಿರುವ ಬಿಜೆಪಿ ಮುಖಂಡ ಜಗದೀಶ್ ಶೆಟ್ಟರ್ ಅವರು ಇಂದು ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದರು. ಅಲ್ಲದೆ ವಿಶೇಷ ಪೂಜೆಯನ್ನು ಕೂಡ ಸಲ್ಲಿಸಿದರು. ಇದೇ ವೇಳೆ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಈಗಾಗಲೇ ಬಿಜೆಪಿ ಪುನರ್ ಸೇರ್ಪಡೆ ಆಗಿದ್ದೇನೆ, ಅಲ್ಲದೆ ನೆನ್ನೆ ನಡೆದ ರಾಜ್ಯ ಕಾರ್ಯಕಾರಣಿ ಸಭೆಯಲ್ಲಿಯೂ ಕೂಡ ನಾನು ಭಾಗವಹಿಸಿದ್ದೇನೆ. ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಸ್ವಾಮೀಜಿಗಳ ಆಶೀರ್ವಾದವನ್ನು ಪಡೆಯಲು ಬಂದಿದ್ದೇನೆ ಎಂದು ತಿಳಿಸಿದರು. ರಾಜ್ಯದ ಎಲ್ಲಾ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ನಾನು ಬಿಜೆಪಿ ಪುನರ್ ಸೇರ್ಪಡೆ ನಿರ್ಧಾರದ ಕುರಿತು ಆತ್ಮೀಯವಾಗಿ ಹಾಗೂ ಗೌರವಯುತವಾಗಿ ಬರಮಾಡಿಕೊಂಡಿದ್ದಾರೆ ಎಂದು ಹೇಳಿದರು. ನಾನು ಈ ಹಿಂದೆ ಬಿಜೆಪಿಯನ್ನು ಬಿಟ್ಟು ಹೊರ ಹೋಗಿದ್ದೆ ಆದರೆ ನಂತರ ದಿನಗಳಲ್ಲಿ ನಾನು ಯಾವುದೇ ಜಿಲ್ಲೆಗೆ ಹೋದರು ಕೂಡ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ನೀವು ಪುನಃ ಬಿಜೆಪಿಗೆ ವಾಪಸ್ ಬರಬೇಕೆಂಬ ಆಶಯವನ್ನು ವ್ಯಕ್ತಪಡಿಸುತ್ತಿದ್ದರು…
ಚಿತ್ರದುರ್ಗ: ಮಂಡ್ಯದಲ್ಲಿ ಹನುಮ ಧ್ವಜ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಚಿತ್ರದುರ್ಗದ ಎಸ್.ಜೆಎಂ ಶಾಲಾ ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದರು. ಧ್ವಜಸ್ಥಂಭದಲ್ಲಿ ರಾಷ್ಟ್ರ ಧ್ಬಜ ಹಾರಿಸುವ ಬದಲು ಹನುಮ ಧ್ವಜ ಹಾರಿಸಿದ್ದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ರಾಷ್ಟ್ರ ಧ್ಬಜ ಹಾಗೂ ಕನ್ನಡ ಧ್ವಜ ಹಾರಿಸಲು ಅನುಮತಿ ನೀಡಲಾಗಿತ್ತು. ಆದರೆ, ರಾಷ್ಟ್ರ ಧ್ಬಜ ಹಾರಿಸುವ ಬದಲು ಹನುಮ ಧ್ವಜ ಹಾರಿಸಿದ್ದು ಸರಿಯಲ್ಲ ಎಂದು ಸಿಎಂ ಅಸಮಾಧಾನ ಹೊರಹಾಕಿದರು.
ಬೆಂಗಳೂರು: ವಿಧಾನ ಪರಿಷತ್ ಜೆಡಿಎಸ್ ಸದಸ್ಯ ಸೂರಜ್ ರೇವಣ್ಣ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಶನಿವಾರ ಭೇಟಿ ಮಾಡಿದ್ದಾರೆ. ಈ ಭೇಟಿ ಹಲವು ಕುತೂಹಲಗಳಿಗೆ ಕಾರಣವಾಗಿದೆ. ಸದಾಶಿವನಗರದಲ್ಲಿರುವ ಡಿ.ಕೆ.ಶಿವಕುಮಾರ್ ಅವರ ಮನೆಗೆ ಆಗಮಿಸಿದ ಸೂರಜ್ ರೇವಣ್ಣ ಡಿ.ಕೆ.ಶಿವಕುಮಾರ್ ರಹಸ್ಯ ಮಾತುಕತೆ ನಡೆಸಿದ್ದಾರೆ. ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಸೂರಜ್, ಜಿಲ್ಲೆಯ ಅಭಿವೃದ್ಧಿ ಕಾರ್ಯಗಳ ಕುರಿತು ಉಪ ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸಲಾಯಿತು ಎಂದು ಹೇಳಿದ್ದಾರೆ. ಜಿಲ್ಲೆಯ ಪ್ರತಿನಿಧಿಯಾಗಿ ಅಭಿವೃದ್ಧಿ ಕಾರ್ಯಗಳ ಕುರಿತ ಅವರನ್ನು ಭೇಟಿ ಮಾಡುವುದು ಅಗತ್ಯವಿದೆ. ಹೀಗಾಗಿ ಭೇಟಿ ಮಾಡಲಾಯಿತು ಅಂತಾ ಅವರು ತಿಳಿಸಿದ್ದಾರೆ.
ಕಲಬುರಗಿ: ನಿತೀಶ್ ಕುಮಾರ್ ಮಹಾಘಟಬಂಧನ್ ತೊರೆಯುವ ಬಗ್ಗೆ ಮುಂಚೆಯೇ ಗೊತ್ತಿತ್ತು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ, ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಹಾಗೂ ಅವರ ಮಗ ತೇಜಸ್ವಿ ಯಾದವ್ ಅವರೊಂದಿಗೆ ಮಾತನಾಡುವಾಗ ನಿತೀಶ್ ಮಹಾಘಟಬಂಧನ್ ತೊರೆಯುವ ಬಗ್ಗೆ ಮಾಹಿತಿ ನೀಡಿದ್ದರು. ಅದು ಇಂದು ನಿಜವಾಗಿದೆ ಎಂದು ಅವರು ಹೇಳಿದರು. ಮುಂಬರುವ ಲೋಕಸಭಾ ಚುನಾವಣೆ ಸೀಟು ಹಂಚಿಕೆ ಕುರಿತು ಇಂಡಿಯಾ ಮೈತ್ರಿಕೂಟದ ಇತರ ಪಕ್ಷಗಳೊಂದಿಗೆ ಚರ್ಚಿಸಲು ಆರು ಜನರ ಸಮಿತಿ ರಚಿಸಲಾಗಿದೆ. ವಿವಿಧ ಪಕ್ಷಗಳೊಂದಿಗೆ ಸೀಟು ಹಂಚಿಕೆ ಕುರಿತು ಚರ್ಚೆ ನಡೆದಿದೆ ಎಂದು ಇದೇ ವೇಳೆ ಅವರು ತಿಳಿಸಿದರು.
ದೆಹಲಿ: ಬಿಜೆಪಿಯು ಆಪ್ ಶಾಸಕರಿಗೆ 25 ಕೋಟಿ ರೂ. ಆಮಿಷ ಒಡ್ಡಿ ದೆಹಲಿಯಲ್ಲಿ ಆಪರೇಷನ್ ಕಮಲ ನಡೆಸಲು ಮುಂದಾಗಿದೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ. ದೆಹಲಿಯ ಎಲ್ಲಾ ಏಳು ಲೋಕಸಭಾ ಕ್ಷೇತ್ರಗಳು ಈಗ ಬಿಜೆಪಿ ಬಳಿ ಇವೆ. 2024ರ ವೇಳೆಗೆ ಇವೆಲ್ಲವನ್ನೂ ತನ್ನ ಖಾತೆಗೆ ಸೇರಿಸುವ ಗುರಿಯನ್ನು ಆಮ್ ಆದ್ಮಿ ಹೊಂದಿದೆ. ಇದಕ್ಕಾಗಿ ರೂಪುರೇಷೆಗಳನ್ನು ಸಿದ್ಧಪಡಿಸಲಾಗುತ್ತಿದೆ. ಇದನ್ನು ಮನಗಂಡ ಬಿಜೆಪಿ ವಿಧ್ವಂಸಕ ನಡೆಗಳನ್ನು ಆರಂಭಿಸಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅರವಿಂದ್ ಕೇಜ್ರಿವಾಲ್ ಅವರ ಆರೋಪವನ್ನು ತಳ್ಳಿ ಹಾಕಿರುವ ಬಿಜೆಪಿ, ಅರವಿಂದ್ ಕೇಜ್ರಿವಾಲ್ ಅವರ ವಾದಗಳು ಸಂಪೂರ್ಣ ಸುಳ್ಳು. ಇಡಿ ಸಮನ್ಸ್ ಬಗ್ಗೆ ಅರವಿಂದ್ ಕೇಜ್ರಿವಾಲ್ ಅವರು ನೀಡಿರುವ ಪ್ರತಿಕ್ರಿಯೆ ಸಾರ್ವಜನಿಕವಾಗಿ ನಗೆಪಾಟಲಿಗೀಡಾಗಿದೆ ಎಂದಿದೆ. ಕೇಜ್ರಿವಾಲ್ ಸುಳ್ಳು ಆರೋಪ ಮಾಡುವ ಮೂಲಕ ಭ್ರಷ್ಟಾಚಾರದ ತನಿಖೆಯಿಂದ ತಮ್ಮ ಮುಖವನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ಅರವಿಂದ್ ಹೇಳಿಕೆಗೆ ಬಿಜೆಪಿ ವಕ್ತಾರ ಕಪಿಲ್ ಮಿಶ್ರಾ ತಿರುಗೇಟು ನೀಡಿದ್ದಾರೆ.
ಉತ್ತರಾಖಂಡ ವಕ್ಫ್ ಮಂಡಳಿಗೆ ಸಂಯೋಜಿತವಾಗಿರುವ ಮದರಸಾಗಳು ಭಗವಾನ್ ರಾಮನ ಕಥೆಯನ್ನು ಪಠ್ಯಕ್ರಮದ ಭಾಗವಾಗಿಸಲು ಮುಂದಾಗಿವೆ.ಈ ವರ್ಷದ ಮಾರ್ಚ್ನಲ್ಲಿ ಪ್ರಾರಂಭವಾಗುವ ಅಧಿವೇಶನದಲ್ಲಿ ಹೊಸ ಪಠ್ಯಕ್ರಮವನ್ನು ಜಾರಿಗೆ ತರಲಾಗುವುದು ಎಂದು ವಕ್ಫ್ ಬೋರ್ಡ್ ಅಧ್ಯಕ್ಷ ಶಾದಾಬ್ ಶಾಮ್ಸ್ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಇಂಡಿಯಾ ಟುಡೇ, ಡೆಕ್ಕನ್ ಹೆರಾಲ್ಡ್ ಸೇರಿದಂತೆ ರಾಷ್ಟ್ರೀಯ ಮಾಧ್ಯಮಗಳು ಈ ಬಗ್ಗೆ ವರದಿ ಮಾಡಿವೆ. ಉತ್ತರಾಖಂಡ ಶಿಕ್ಷಣ ಮಂಡಳಿಯ ಮಾರ್ಗಸೂಚಿಗಳ ಆಧಾರದ ಮೇಲೆ ಪರಿಷ್ಕೃತ ಪಠ್ಯಕ್ರಮವನ್ನು ಮಾರ್ಚ್ನಿಂದ ಉತ್ತರಾಖಂಡ ವಕ್ಫ್ ಮಂಡಳಿಗೆ ಸಂಯೋಜಿತವಾಗಿರುವ ಮದರಸಾಗಳಲ್ಲಿ ಪರಿಚಯಿಸಲಾಗುವುದು ಎಂದು ವಕ್ಫ್ ಮಂಡಳಿಯ ಅಧ್ಯಕ್ಷರು ತಿಳಿಸಿದ್ದಾರೆ. ಪ್ರವಾದಿ ಮುಹಮ್ಮದ್ ಅವರ ಜೀವನದೊಂದಿಗೆ ಶ್ರೀರಾಮನ ಜೀವನ ಕಥೆಯನ್ನು ಮದರಸಾದ ವಿದ್ಯಾರ್ಥಿಗಳಿಗೆ ಕಲಿಸಲಾಗುವುದು ಎಂದು ಹೇಳಿದರು. ಭಗವಾನ್ ರಾಮನು ಪ್ರತಿನಿಧಿಸುವ ಮೌಲ್ಯಗಳನ್ನು ಅವರ ಧರ್ಮ ಅಥವಾ ಪಂಥವನ್ನು ಲೆಕ್ಕಿಸದೆ ಎಲ್ಲರೂ ಅನುಸರಿಸಬೇಕು. ಡಾ. ಎಪಿಜೆ ಅಬ್ದುಲ್ ಕಲಾಂ ಅವರ ಹೆಸರಿನಲ್ಲಿ ಪ್ರಾರಂಭವಾಗಿರುವ ಆಧುನಿಕ ಮದರಸಾಗಳಲ್ಲಿ ಎನ್ ಸಿಇಆರ್ ಟಿ ಪಠ್ಯಕ್ರಮವನ್ನು ಕಲಿಸಲಾಗುತ್ತದೆ.…
ರೇವಾ: ಗಣರಾಜ್ಯೋತ್ಸವದ ಅಂಗವಾಗಿ ಶಾಲೆಯಲ್ಲಿ ವಿತರಿಸಲಾಗಿದ್ದ ಮಧ್ಯಾಹ್ನದ ಊಟ ಸೇವಿಸಿದ ಬಳಿಕ ಸುಮಾರು 58 ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ಮಧ್ಯಪ್ರದೇಶದ ರೇವಾ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಊಟ ಸೇವಿಸಿದ ಬಳಿಕ ಹೊಟ್ಟೆ ನೋವು ಮತ್ತು ವಾಂತಿಯಿಂದ ಬಳಲುತ್ತಿದ್ದ 58 ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಇಬ್ಬರು ವಿದ್ಯಾರ್ಥಿಗಳ ಸ್ಥಿತಿ ಚಿಂತಾಜನಕವಾಗಿದೆ. ಗಣರಾಜ್ಯೋತ್ಸವದ ಅಂಗವಾಗಿ ಪದ್ರಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು. ಕಾರ್ಯಕ್ರಮದ ನಂತರ ಮಕ್ಕಳಿಗೆ ಮಧ್ಯಾಹ್ನದ ಊಟವನ್ನೂ ತಯಾರಿಸಲಾಗಿತ್ತು. ವಿದ್ಯಾರ್ಥಿಗಳಿಗೆ ಪೂರಿ, ಕೋಸಂಬರಿ, ಲಡ್ಡೂ ಬಡಿಸಲಾಯಿತು. ಅನೇಕ ವಿದ್ಯಾರ್ಥಿಗಳಿಗೆ ತಿಂದ ತಕ್ಷಣ ಅಸ್ವಸ್ಥರಾಗಿದ್ದಾರೆ. ತಕ್ಷಣ ಅವರನ್ನು ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಯಿತು. ಘಟನೆ ಸಂಬಂಧ ತನಿಖೆ ನಡೆಸಲಾಗುತ್ತಿದೆ.
ವೈ.ಎನ್.ಹೊಸಕೋಟೆ : ಕನ್ನಡ ಮನಸ್ಸುಗಳ ಸಹಕಾರಿ ಗುಣವೇ ಕನ್ನಡ ಬೆಳವಣಿಗೆಗೆ ಶಕ್ತಿಯಾಗಿದೆ ಎಂದು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಘಟಕದ ಅಧ್ಯಕ್ಷ ಹೊ.ಮ.ನಾಗರಾಜು ತಿಳಿಸಿದರು. ಗ್ರಾಮದಲ್ಲಿ ಶನಿವಾರದಂದು ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿ ಅವರು, ಇತ್ತೀಚೆಗೆ ಹೋಬಳಿ ಘಟಕದ ವತಿಯಿಂದ ರಂಗಸಮುದ್ರದಲ್ಲಿ ಹಮ್ಮಿಕೊಂಡಿದ್ದ ೨ನೇ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸು ಕಂಡಿದೆ. ಇದಕ್ಕೆ ರಂಗಸಮುದ್ರ ಮತ್ತು ಹೋಬಳಿಯ ಕನ್ನಡ ಮನಸುಗಳ ಸಹಕಾರ ಮತ್ತು ಸ್ಪಂದನೆಯೇ ಮೂಲ ಕಾರಣವಾಗಿದ್ದು, ಯಶಸ್ಸಿಗೆ ಶ್ರಮಿಸಿದ ಪ್ರತಿಯೊಬ್ಬರಿಗೂ ಅಭಿನಂದನಾಪೂರ್ವಕ ಧನ್ಯವಾದಗಳು. ಜಿಲ್ಲೆ, ತಾಲ್ಲೂಕು ಮತ್ತು ಹೋಬಳಿ ಘಟಕಗಳ ಪದಾಧಿಕಾರಿಗಳ ಮತ್ತು ಹಿರಿಯ ಕನ್ನಡ ಚೇತನಗಳ ಮಾರ್ಗದರ್ಶನ ಸಲಹೆ ಸೂಚನೆಗಳಂತೆ ಎಲ್ಲರೂ ಒಗ್ಗೂಡಿ ಕಾರ್ಯಕ್ರಮ ರೂಪಿಸಿದ ಪರಿಣಾಮ ಯಶಸ್ವಿ ಸಮ್ಮೇಳನ ನೆರವೇರಿಸಲು ಸಾಧ್ಯವಾಗಿದೆ. ಗಡಿಭಾಗದಲ್ಲಿ ಕನ್ನಡ ನಿರಂತರವಾಗಿ ಪಸರಿಸಲು ಪ್ರತಿಯೊಬ್ಬರ ಕೊಡುಗೆ ಅಪಾರವಾಗಿದೆ ಎಂದರು. ತಾಲ್ಲೂಕು ಕಸಾಪ ಅಧ್ಯಕ್ಷ ಕಟ್ಟಾನರಸಿಂಹಮೂರ್ತಿ ಮಾತನಾಡಿ, ಕನ್ನಡ ಕಾರ್ಯಕ್ರಮ ರೂಪಿಸುವಲ್ಲಿ ಹಲವು ಎಡರು ತೊಡರುಗಳು ಬರುವುದು ಸಹಜ. ಅವುಗಳೆಲ್ಲವನ್ನೂ ಮೀರಿ ಹೋಬಳಿ ಪರಿಮಿತಿಯಲ್ಲಿ…
ನಿನ್ನೆಯಷ್ಟೆ ಕೆಪಿಸಿಸಿ 32 ಶಾಸಕರಿಗೆ ನಿಗಮಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಆದೇಶಿಸಿದ್ದು ಕೆಎಸ್ ಆರ್ ಟಿಸಿ ನಿಗಮದ ಅಧ್ಯಕ್ಷರಾಗಿ ತಮ್ಮನ್ನು ನೇಮಕ ಮಾಡಿರುವ ಕುರಿತು ಶಾಸಕ ಎಸ್.ಆರ್. ಶ್ರೀನಿವಾಸ್ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿರುವ ಶಾಸಕ ಎಸ್.ಆರ್. ಶ್ರೀನಿವಾಸ್, ಸಿಎಂ, ಡಿಸಿಎಂ ನಂಬಿಕೆ ಇಟ್ಟು ನನ್ನ ನೇಮಕ ಮಾಡಿದ್ದಾರೆ. ನನಗೆ ಯಾವುದೇ ಅಸಮಾಧಾನವಿಲ್ಲ ನಾನು ಯಾವುದೇ ಸ್ಥಾನಮಾನ ಕೇಳಿರಲಿಲ್ಲ. ಇದರಲ್ಲಿ ಅಸಮಾಧಾನ ಪ್ರಶ್ನೆಯೇ ಉದ್ಭವಿಸಲ್ಲ. ಯಾವುದು ಕೊಟ್ಟಿದ್ದಾರೆ ಎಂದು ನಾನು ಚಿಂತಿಸುವುದಿಲ್ಲ ಎಂದು ತಿಳಿಸಿದ್ದಾರೆ.
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಸಕ್ಕರೆ ಕಾರ್ಖಾನೆ ಘಟಕ ಬಂದ್ ಗೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ ಹೊರಡಿಸಿದೆ. ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಚಿಮ್ಮಾಯಿದಲಾಯಿ ಗ್ರಾಮದ ಬಳಿ ಇರುವ ಸಕ್ಕರೆ ಕಾರ್ಖಾನೆ ಮತ್ತು ಏಥೆನಾಲ್ ಘಟಕಕ್ಕೆ ಬೀಗ ಹಾಕಲು ಆದೇಶಿಸಲಾಗಿದೆ. ಕಾರ್ಖಾನೆಯ ಕಲುಷಿತ ನೀರು ಮುಲ್ಲಾಮಾರಿ ಜಲಾಶಯಕ್ಕೆ ಬೀಡಲಾಗುತ್ತಿತ್ತು ಎಂಬ ಆರೋಪ ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಚಿಂಚೋಳಿಯ ಸಿದ್ಧಶ್ರೀ ಸೌಹಾರ್ದ ಸಹಕಾರಿ ಸಕ್ಕರೆ ಕಾರ್ಖಾನೆಗಳನ್ನು ತಕ್ಷಣದಿಂದಲೇ ಮುಚ್ಚುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶಿಸಿದೆ. ಅಲ್ಲದೇ ವಾಯು, ಜಲ ಕಾಯ್ದೆ ಉಲ್ಲಂಘನೆ ಆರೋಪ ಹಿನ್ನಲೆ ಬೀಗ ಜಡಿಯುವಂತೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ ಹೊರಡಿಸಿದೆ. ಫ್ಯಾಕ್ಟರಿಗೆ ನೀಡಿರುವ ವಿದ್ಯುತ್, ನೀರಿನ ಸಂರ್ಪಕ ಕಡಿತಗೊಳಿಸುವಂತೆ ಸೂಚನೆ ನೀಡಿದೆ ಎನ್ನಲಾಗಿದೆ.