Author: admin

ಬೆಂಗಳೂರು: 27 ವರ್ಷದ ಟೆಕ್ಕಿಯೊಬ್ಬ ಸಿಗರೇಟ್ ಸೇದುವ ವೇಳೆ ಬಾಲ್ಕನಿಯಿಂದ ಬಿದ್ದು ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 33ನೇ ಮಹಡಿಯ ಬಾಲ್ಕನಿಯಿಂದ ಯುವಕ ಬಿದ್ದಿದ್ದಾನೆ ಎಂದು ಹೇಳಲಾಗುತ್ತಿದೆ. ಮೃತನನ್ನು ದಿಪಾಂಶು ಶರ್ಮಾ ಎಂದು ಗುರುತಿಸಲಾಗಿದೆ. ಸ್ನೇಹಿತರ ಜೊತೆ ಪಾರ್ಟಿ ಮಾಡುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ದಿಪಾಂಶು ಶರ್ಮಾ, ಇಬ್ಬರು ಯುವತಿಯರು ಹಾಗೂ ಓರ್ವ ಸ್ನೇಹಿತ ಸೇರಿ ಪಾರ್ಟಿ ಮಾಡಿದ್ದರು. ಪಾರ್ಟಿ ವೇಳೆ ಕಂಠಪೂರ್ತಿ ಕುಡಿದು ಗಾಂಜಾ ಸೇವನೆ ಮಾಡಿರುವ ಅನುಮಾನ ವ್ಯಕ್ತವಾಗಿದೆ. ಮೃತ ಟೆಕ್ಕಿಯು ಆರ್ಮಿ ಸಿಬ್ಬಂದಿಯ ಮಗನಾಗಿದ್ದು, ಉತ್ತರ ಪ್ರದೇಶ ಮೂಲದವನಾಗಿದ್ದಾನೆ. ಪಿಜಿಯಲ್ಲಿ ವಾಸವಾಗಿದ್ದು ಮೊನ್ನೆ ರಾತ್ರಿ ಸ್ನೇಹಿತರ ಮನೆಯಲ್ಲಿ ಪಾರ್ಟಿಗೆಂದು ಹೋಗಿದ್ದ ಎಂದು ತಿಳಿದು ಬಂದಿದೆ.

Read More

ಜನವರಿ ಕೊನೆಯ ವಾರದಲ್ಲಿ ಬೆಂಗಳೂರಿನಲ್ಲಿ ಉದ್ಯೋಗ ಮೇಳ ಆಯೋಜಿಸಲು ಉದ್ದೇಶಿಸಲಾಗಿದ್ದು, ಇದನ್ನು ಪರಿಣಾಮಕಾರಿಯಾಗಿ ಆಯೋಜಿಸಲೂ ಸಚಿವರ ತಂಡವನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ರಾಜ್ಯಮಟ್ಟದ ಉದ್ಯೋಗ ಮೇಳ ಆಯೋಜಿಸುವ ಕುರಿತು ಪೂರ್ವಭಾವಿ ಸಭೆ ನಡೆಸಿದರು. ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್, ಐಟಿ, ಬಿಟಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ, ಕೌಶಲ್ಯಾಭಿವೃದ್ಧಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ, ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್‌, ಯುವ ಸಬಲೀಕರಣ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ, ಕಾರ್ಮಿಕ ಸಚಿವ ಸಂತೋಷ್‌ ಲಾಡ್‌, ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರನ್ನೊಳಗೊಂಡ ಸಚಿವರ ತಂಡ ರಚಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ಸಚಿವರ ಈ ತಂಡವು ಉದ್ಯೋಗದಾತರೊಂದಿಗೆ ಸಭೆ ನಡೆಸಿ ಈ ಕುರಿತು ಚರ್ಚಿಸಿ ಅವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಬಗ್ಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಚುನಾವಣಾ ಪ್ರಣಾಳಿಕೆಯಲ್ಲಿ ತಿಳಿಸಿದಂತೆ ಉದ್ಯೋಗ ಮೇಳ ಆಯೋಜಿಸಲಾಗುವುದು. ಕೈಗಾರಿಕೆಗಳೊಂದಿಗೆ ಚರ್ಚಿಸಿ,…

Read More

ಚೆಕ್ ಬೌನ್ಸ್ ಪ್ರಕರಣದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ದಂಡ ವಿಧಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್  ಆದೇಶಿಸಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಬರೋಬ್ಬರಿ 6 ಕೋಟಿ 96 ಲಕ್ಷ 70 ಸಾವಿರ ರೂ. ದಂಡವನ್ನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಿಧಿಸಿದೆ. ದಂಡ ಪಾವತಿಸದೇ ಇದ್ದರೇ 6 ತಿಂಗಳು ಸೆರೆವಾಸ ಅನುಭವಿಸುವಂತೆ ಆದೇಶಿಸಿದೆ. ದಂಡದ ಹಣದಲ್ಲಿ 6,96,60,000 ಹಣವನ್ನು ದೂರುದಾರರಿಗೆ ಪರಿಹಾರವಾಗಿ ನೀಡಬೇಕು. ಅಲ್ಲದೇ 10 ಸಾವಿರ ರೂ. ಹಣವನ್ನು ಸರ್ಕಾರಕ್ಕೆ ದಂಡವನ್ನು ನೀಡುವಂತೆ ಆದೇಶಿಸಿದೆ. ರಾಜೇಶ್ ಎಕ್ಸ್ ಪೋರ್ಟ್ ಸಂಸ್ಥೆ 6.60 ಕೋಟಿ ರೂ. ಚೆಕ್ ಬೌನ್ಸ್ ಕೇಸ್ ಹಾಕಿತ್ತು. ಸಚಿವ ಮಧು ಬಂಗಾರಪ್ಪ  ಆಕಾಶ್ ಆಡಿಯೋ ಕಂಪನಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು.  ಈ ನಡುವೆ ದೂರುದಾರ ಕಂಪನಿಗೆ ಬಾಕಿ ಪಾವತಿಗೆ ಮಧು ಬಂಗಾರಪ್ಪ 6.60 ಕೋಟಿ ರೂ.ನ  ಚೆಕ್  ನೀಡಿದ್ದರು. ಆದರೆ  2011ರಲ್ಲಿ ಚೆಕ್ ಬೌನ್ಸ್ ಆಗಿತ್ತು. ಖಾತೆಯಲ್ಲಿ ಹಣವಿಲ್ಲದೇ ಚೆಕ್ ಬೌನ್ಸ್…

Read More

ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ಅಗತ್ಯವಿಲ್ಲ ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಈ ಕುರಿತು  ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ಪ್ರತಾಪ್ ಸಿಂಹ,  ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ಅಗತ್ಯವಿಲ್ಲ ನಂದಿಬೆಟ್ಟಕ್ಕೆ ಬೇಕಾದರೇ ರೋಪ್ ವೇ  ನಿರ್ಮಿಸಲಿ ಎಂದು ಹೇಳಿದರು. ಚಾಮುಂಡಿ ಬೆಟ್ಟ ಪ್ರೇಕ್ಷಣಿಕ ಸ್ಥಳ, ಧಾರ್ಮಿಕ ತಾಣ ಚಾಮುಂಡಿಬೆಟ್ಟಕ್ಕೆ ಭಕ್ತಿ ಭಾವದಿಂದ  ಹೋಗಬೇಕು.  ರೋಪ್ ವೇನಲ್ಲಿ ಹೋಗಿ ನೋಡುವಂತಹದ್ದು  ಅಲ್ಲ.  ರೋಪ್ ವೇಗೆ ನಮ್ಮ ವಿರೋಧವಿದೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದರು.

Read More

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ಸಿಕ್ಕಿದ್ದು,  ಕೇಂದ್ರ ಸರ್ಕಾರ ಸ್ಥಗಿತಗೊಳಿಸಿದ್ದ ವಿದ್ಯಾರ್ಥಿ ವೇತನವನ್ನ ರಾಜ್ಯ ಸರ್ಕಾರವೇ ನೀಡಲು ತೀರ್ಮಾನ ಕೈಗೊಳ್ಳಲಾಗಿದೆ. ರಾಜ್ಯದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರದಿಂದ ನೀಡುತ್ತಿದ್ದ ವಿದ್ಯಾರ್ಥಿ ವೇತನ ಸ್ಥಗಿತಗೊಳಿಸಲಾಗಿತ್ತು. ಹೀಗಾಗಿ ಈವರೆಗೆ ವಿದ್ಯಾರ್ಥಿ ವೇತನ ನೀಡಲಾಗಿರಲಿಲ್ಲ. ಈ ಕುರಿತು ಇಂದು ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ, ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ನೀಡುತ್ತಿದ್ದ ವಿದ್ಯಾರ್ಥಿ ವೇತನ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವೇ ಇದನ್ನು ಭರಿಸಲು ತೀರ್ಮಾನಿಸಿದೆ.  6.4 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಬಿಡುಗಡೆಗೆ ಸಿದ್ಧವಾಗಿದೆ. ಆಯವ್ಯಯದಲ್ಲಿ 60 ಕೋಟಿ ರೂ. ನಿಗದಿಯಾಗಿದ್ದು, ಇಲಾಖೆಗೆ ಲಭ್ಯ ಅನುದಾನದಲ್ಲಿಯೇ ಮರುಹಂಚಿಕೆ ಮಾಡಿ ಹೆಚ್ಚುವರಿ 40 ಕೋಟಿ ಭರಿಸಲು ಸೂಚನೆ ನೀಡಿದರು. ಇನ್ನು ಇದೇ ವೇಳೆ ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ  ಸಾವಿರ ಕೋಟಿ ರೂ.ಗಳ ಕ್ರಿಯಾ ಯೋಜನೆ ರೂಪಿಸಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

Read More

ಕಡ್ಡಾಯವಾಗಿ ಕನ್ನಡ ನಾಮಫಲಕ ಹಾಕುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರನ್ನ ಬಂಧಿಸಿ, ಎಫ್ ಐ ಆರ್ ದಾಖಲು ಮಾಡಿರುವುದನ್ನು ರಾಜ್ಯ ಆಮ್ ಆದ್ಮಿ ಪಕ್ಷದ(AAP) ಮುಖ್ಯಸ್ಥ ಮುಖ್ಯಮಂತ್ರಿ ಚಂದ್ರು  ಖಂಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಮುಖ್ಯಮಂತ್ರಿ ಚಂದ್ರು, ರಾಜ್ಯ ವಿಂಗಡಣೆ ಆಗಿರುವುದು ಭಾಷೆ ಮೇಲೆ. ಭಾಷೆ ಬಗ್ಗೆ ದನಿ ಎತ್ತಿದರೇ ದೇಶ ದ್ರೋಹವಾಗಲ್ಲ.  ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡರನ್ನ ಬಂಧಿಸಿದ್ದು ಸರಿಯಲ್ಲ. ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ದದ ಕೇಸ್  ವಾಪಸ್ ಪಡೆಯುತ್ತೀರಿ. ಕನ್ನಡ ಹೋರಾಟಗಾರರ ಮೇಲಿನ ಕೇಸ್ ವಾಪಸ್ ಪಡೆಯೋಕೆ ಆಗಲ್ಲವಾ..? ಎಂದು ಕಿಡಿಕಾರಿದರು. ಅಧಿಕಾರಿಗಳು ಸರ್ಕಾರದ ಆದೇಶ ಪಾಲಿಸುತ್ತಿಲ್ಲ. ಅಧಿಕಾರಿಗಳನ್ನ ಜೈಲಿಗೆ ಕಳುಹಿಸಬೇಕು.  ಕ್ಷಮೆ ಕೇಳಿ ಕನ್ನಡ ಕಾರ್ಯಕರ್ತರನ್ನ ಬಿಡುಗಡೆ ಮಾಡಿ ಎಂದು ಆಗ್ರಹಿಸಿದರು. ಸರ್ಕಾರ ಮಾಲ್ ಗಳ ಪರ ನಿಂತು ದ್ರೋಹ ಮಾಡುತ್ತಿದೆ. ಕಮಿಷನ್ ಗಾಗಿ ಕನ್ನಡಿಗರಿಗೆ ದ್ರೋಹ ಮಾಡುತ್ತಿದೆ ಎಂದು ಸರ್ಕಾರದ ವಿರುದ್ದ ಮುಖ್ಯಮಂತ್ರಿ ಚಂದ್ರು ಆರೋಪಿಸಿದರು.

Read More

ಸ್ವಪಕ್ಷದ ವಿರುದ್ದವೇ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಸಮಾಧಾನ ವ್ಯಕ್ತಪಡಿಸಿರುವ ಕುರಿತು ಮಾಜಿ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಡಿ.ವಿ. ಸದಾನಂದಗೌಡರು, ಯತ್ನಾಳ್ ವಿರುದ್ದ ನಾವು ಕ್ರಮ ಕೈಗೊಳ್ಳಲ್ಲ.  ಯತ್ನಾಳ್ ವಿಚಾರವನ್ನ ಹೈಕಮಾಂಡ್ ಗೆ  ತಿಳಿಸಿದ್ದೇವೆ.  ಯತ್ನಾಳ್ ವಿರುದ್ದ ಕೇಂದ್ರ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು. ಬಿಜೆಪಿ ಪದಾಧಿಕಾರಿಗಳ ನೇಮಕಕ್ಕೆ ಅಪಸ್ವರ ವಿಚಾರ ಕುರಿತು ಪ್ರತಿಕ್ರಿಯಿಸಿದ ಡಿ.ವಿ. ಸದಾನಂದಗೌಡರು,  ನೂರಾರು  ತಪ್ಪುಗಳಿಂದ ಚುನವಣೆಯಲ್ಲಿ ಸೋಲನುಭವಿಸ ಬೇಕಾಯಿತು.  ಬೇಗ ಪಟ್ಟಿ ಕಳುಹಿಸಿ ಎಂದು ಹೈಕಮಾಂಡ್ ಸೂಚಿಸಿತ್ತು. ಕೆಲವರ ಜೊತೆ ಚರ್ಚಿಸಿ ಪಟ್ಟಿ ಕಳುಹಿಸಿದ್ದಾರೆ.  ಜಿಲ್ಲಾಧ್ಯಕ್ಷರ ನೇಮಕಕ್ಕೂ ಮುನ್ನ ಚರ್ಚಿಸಬೇಕಿತ್ತು. ರಾಜ್ಯ ಘಟಕಕ್ಕಿಂತ ಜಿಲ್ಲಾ ಘಟಕ ಪ್ರಮುಖವಾದದ್ದು ಎಂದು ತಿಳಿಸಿದರು.

Read More

ತಮಿಳುನಾಡು: ವೇಗವಾಗಿ ಬಂದ ಲಾರಿಯೊಂದು ನಿಯಂತ್ರಣ ಕಳೆದುಕೊಂಡು ರಸ್ತೆ ಪಕ್ಕದಲ್ಲಿದ್ದ ಟೀ ಅಂಗಡಿಗೆ ನುಗ್ಗಿದ ಪರಿಣಾಮ ಮಹಿಳೆ ಸೇರಿ 5 ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಿರುಚಿಯಲ್ಲಿ ನಡೆದಿದೆ. ಘಟನೆಯಲ್ಲಿ 19 ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸಮೀಪದ ಪುದುಕೊಟ್ಟೈ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತಿರುಚಿ-ರಾಮೇಶ್ವರಂ ಹೆದ್ದಾರಿಯಲ್ಲಿ ನಿಯಂತ್ರಣ ಕಳೆದುಕೊಂಡ ಲಾರಿ ಏಕಾಏಕಿ ಟೀ ಅಂಗಡಿಗೆ ನುಗ್ಗಿದೆ ಎಂದು ವರದಿಯಾಗಿದೆ. ಅಪಘಾತದಲ್ಲಿ ಲಾರಿಯ ಮುಂಭಾಗ ಸಂಪೂರ್ಣವಾಗಿ ನಜ್ಜು-ಗುಜ್ಜಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಸಿಮೆಂಟ್ ತುಂಬಿದ್ದ ಲಾರಿ ಅರಿಯಲೂರಿನಿಂದ ಶಿವಗಂಗೈಗೆ ತೆರಳುತ್ತಿತ್ತು. ಈ ವೇಳೆ ಚಾಲಕ ನಿದ್ರೆಗೆ ಜಾರಿದ್ದು, ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಮೊದಲಿಗೆ ಎರಡು ವಾಹನಗಳಿಗೆ ಡಿಕ್ಕಿ ಹೊಡೆದು ನಂತರ, ತಿರುಚ್ಚಿ-ರಾಮೇಶ್ವರಂ ಹೆದ್ದಾರಿಯಲ್ಲಿ ಟೀ ಅಂಗಡಿಗೆ ನುಗ್ಗಿದೆ ಎಂದು ತಿಳಿದುಬಂದಿದೆ. ಲಾರಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಮತ್ತೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Read More

ಹೊಸ ಅಯೋಧ್ಯೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೆಸರಿಡಲಾಗಿದೆ. ಕೊಟ್ಟಿರುವ ಹೆಸರು ಮಹರ್ಷಿ ವಾಲ್ಮೀಕಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ. ಅಯೋಧ್ಯೆಯನ್ನು ಪ್ರಪಂಚದ ಎಲ್ಲಾ ಭಾಗಗಳೊಂದಿಗೆ ಸಂಪರ್ಕಿಸುವ ಉದ್ದೇಶದಿಂದ ಹೊಸ ವಿಮಾನ ನಿಲ್ದಾಣವನ್ನು ಸ್ಥಾಪಿಸಲಾಗಿದೆ. ಡಿಸೆಂಬರ್ 30 ರಂದು ಪ್ರಧಾನಿಯವರು ಅದನ್ನು ರಾಷ್ಟ್ರಕ್ಕೆ ಪ್ರಸ್ತುತಪಡಿಸುವ ಸಂದರ್ಭದಲ್ಲಿ ಅಧಿಕಾರಿಗಳು ವಿಮಾನ ನಿಲ್ದಾಣದ ಹೊಸ ಹೆಸರನ್ನು ಬಿಡುಗಡೆ ಮಾಡಿದ್ದಾರೆ. ಅಯೋಧ್ಯೆಯಲ್ಲಿ ಪೂರ್ಣಗೊಂಡಿರುವ ರೈಲು ನಿಲ್ದಾಣವನ್ನೂ ಅವರು ಉದ್ಘಾಟಿಸಲಿದ್ದಾರೆ. ನಂತರ ಅಯೋಧ್ಯೆಯಲ್ಲಿ ರೋಡ್ ಶೋ ನಡೆಯಲಿದೆ. ರಾಮಮಂದಿರದ ಮಾದರಿಯಲ್ಲಿರುವ ವಿಮಾನ ನಿಲ್ದಾಣದ ಸಂಕೀರ್ಣವನ್ನು ಭಗವಾನ್ ರಾಮನ ಜೀವನ ಕಥೆಯನ್ನು ಚಿತ್ರಿಸುವ ಭಿತ್ತಿಚಿತ್ರಗಳು ಮತ್ತು ವರ್ಣಚಿತ್ರಗಳಿಂದ ಅಲಂಕರಿಸಲಾಗಿದೆ. 1,450 ಕೋಟಿ ವೆಚ್ಚದಲ್ಲಿ ವಿಮಾನ ನಿಲ್ದಾಣವನ್ನು ನಿರ್ಮಿಸಲಾಗಿದೆ. ವಿಮಾನ ನಿಲ್ದಾಣವು 6500 ಚದರ ಮೀಟರ್ ‌ಗಳಲ್ಲಿ ಹರಡಿದೆ ಮತ್ತು ವರ್ಷಕ್ಕೆ 10 ಲಕ್ಷ ಪ್ರಯಾಣಿಕರನ್ನು ನಿಭಾಯಿಸುತ್ತೆ ಎನ್ನಲಾಗಿದೆ.

Read More

ದ್ವಿಚಕ್ರವಾಹನದಲ್ಲಿಒಂದು ವೇಳೆ ಅಪಘಾತ ಸಂಭವಿಸಿ ಹಿಂಬದಿ ಸವಾರ ಮೃತಪಟ್ಟರೆ  ಅವರ ಸಾವಿಗೆ ಬೈಕ್‌ ಮಾಲೀಕನೇ ಪರಿಹಾರ ನೀಡಬೇಕು ಎಂದು ರಾಜ್ಯ ಹೈಕೋರ್ಟ್‌ ಆದೇಶ ನೀಡಿದೆ. ಕುಣಿಗಲ್‌ ಬಳಿ ಬೈಕ್‌ ವೊಂದರ ಹಿಂಬದಿಯಲ್ಲಿ ಸಿದ್ದಿಕ್‌ ಉಲ್ಲಾಖಾನ್‌ ಎಂಬುವವರು ಕುಳಿತು ಸಂಚರಿಸುತ್ತಿದ್ದರು. ನಿಜಾಮುದ್ದೀನ್‌ ಎಂಬುವರ  ಬೈಕ್‌ ಅಪಘಾತಕ್ಕೀಡಾಗಿ ಸಿದ್ದಿಕ್‌ ಉಲ್ಲಾಖಾನ್‌ ಮೃತಪಟ್ಟಿದ್ದರು. ತುಮಕೂರಿನ ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಾಧೀಕರಣ ವಿಮಾ ಸಂಸ್ಥೆಗೆ ಪರಿಹಾರ ವಿತರಿಸಬೇಕೆಂದು ಆದೇಶಿಸಿತ್ತು.  ಹೈಕೋರ್ಟ್‌ ಈ ಆದೇಶವನ್ನು ರದ್ದುಪಡಿಸಿದೆ. ನ್ಯಾಯಾಧೀಕರಣ ನಿಗದಿಪಡಿಸಿದ ಪರಿಹಾರ ಮೊತ್ತವನ್ನು ಮೃತ ಸಿದ್ದಿಕ್‌ ಉಲ್ಲಾಖಾನ್‌ ಅವರ ಕುಟುಂಬದವರಿಗೆ ನೀಡುವಂತೆ ಬೈಕ್‌ ಮಾಲೀಕ  ನಿಜಾಮುದ್ದೀನ್‌ ಅವರಿಗೆ ಹೈಕೋರ್ಟ್‌ ಸೂಚಿಸಿದೆ. ವಾಹನವು ಎರಡು ಆಸನವನ್ನು ಹೊಂದಿದೆ. ಇದರ ಆಧಾರದ ಮೇಲೆ ನ್ಯಾಯಾಧೀಕರಣವು ವಿಮಾ ಕಂಪನಿಗೆ ಪರಿಹಾರ ನೀಡಬೇಕೆಂದು ಹೇಳಿದೆ. ಇದು ಸೂಕ್ತವಲ್ಲ. ಬೈಕ್‌ ಮಾಲೀಕನೇ ಪರಿಹಾರ ನೀಡಬೇಕೆಂದು ಹೈಕೋರ್ಟ್‌ ತೀರ್ಪು ನೀಡಿದೆ.

Read More