Subscribe to Updates
Get the latest creative news from FooBar about art, design and business.
- ಪ್ರಥಮ ಬಿ.ಸಿ.ಎ. ಪದವಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
- ಕುಣಿಗಲ್ ಪುರಸಭಾ ವ್ಯಾಪ್ತಿಯ ಸಾರ್ವಜನಿಕರಿಗೆ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
- ತುಮಕೂರು: ‘ಕರ್ನಾಟಕ ಪಬ್ಲಿಕ್ ಸ್ಕೂಲ್’ ಸಿನಿಮಾ ಮುಹೂರ್ತ ಸಮಾರಂಭ
- ತುಮಕೂರು: ಪಾದರಕ್ಷೆ ತಯಾರಿಕಾ ಸ್ಪರ್ಧೆಗೆ ಅರ್ಜಿ
- ಭೀಕರ ಅಪಘಾತ: ಶನಿಮಹಾತ್ಮ ದೇವಾಲಯ ವ್ಯವಸ್ಥಾಪಕ ಜಗನ್ನಾಥ್ ನಿಧನ
- ನೈರ್ಮಲ್ಯ ಕಾಪಾಡಿ, ಗರ್ಭಾಶಯದ ಕ್ಯಾನ್ಸರ್ ತಡೆಗಟ್ಟಿ: ಮಹಿಳೆಯರಿಗೆ ಕಾವೇರಿ ಎನ್. ಕರೆ
- ಪೌತಿ ಖಾತೆ, ಕಂದಾಯ ಗ್ರಾಮ ಹಕ್ಕುಪತ್ರ, ಪೋಡಿ ಮುಕ್ತ ಅಭಿಯಾನ: ರೈತರ ಅಲೆದಾಟ ತಪ್ಪಿಸಲು ಸರ್ಕಾರದ ಮಹತ್ವದ ಕ್ರಮ
- ತುಮಕೂರನ್ನು ಬೆಂಗಳೂರಿನ ಭಾಗವಾಗಿಸಿ: ಸಾಧನಾ ಸಮಾವೇಶದಲ್ಲಿ ಡಾ.ಜಿ.ಪರಮೇಶ್ವರ್ ಪ್ರಸ್ತಾಪ
Author: admin
ಬಾಗಲಕೋಟೆ: ಉತ್ತಮ ಆರೋಗ್ಯಕ್ಕಾಗಿ ಚಿಕಿತ್ಸೆಯ ಜೊತೆಗೆ ಜನರಲ್ಲಿ ಅರಿವು ಮೂಡಿಸುವುದು ಅಗತ್ಯವಾಗಿದ್ದು ರೇಡಿಯೋ ಕನ್ನಡಿ ಮತ್ತು ನೆರಳಿನಂತೆ ಸಮಾಜಮುಖಿಯಾಗಿ ದಶಕಗಳಿಂದ ಕಾರ್ಯನಿರ್ವಹಿಸುತ್ತಿದೆ ಎಂದು ಕಲಾ ಮಹಾವಿದ್ಯಾಲಯದ ಪ್ರಾಚಾರ್ಯರಾದ ಎಸ್.ಆರ್. ಮುಗನೂರಮಠ ಹೇಳಿದರು. ನಗರದ ಬಿವಿವಿ ಸಂಘದ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ವತಿಯಿಂದ ನೂತನ ಸಭಾಭವನದಲ್ಲಿ ಹಮ್ಮಿಕೊಳ್ಳಲಾದ ಸಂಪೂರ್ಣ ಆರೋಗ್ಯಕ್ಕಾಗಿ ಹೋಮಿಯೋಪಥಿ ರೇಡಿಯೋ ಸಂವಾದ ಮತ್ತು ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭದ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ಹೋಮಿಯೋಪಥಿಯು ಭಾರತ ಜಗತ್ತಿಗೆ ನೀಡಿದ ವೈದ್ಯ ಪದ್ದತಿಯಾಗಿದ್ದು 12ನೇ ಶತಮಾನದಲ್ಲಿಯೇ ವೈದ್ಯ ಸಂಗಣ್ಣ ತನ್ನ ವಚನದಲ್ಲಿ ಜೀವನಕ್ರಮ ಮತ್ತು ದೇಹದ ಆರೋಗ್ಯದ ಕುರಿತು ಉಲ್ಲೇಖಿಸಿದ್ದು ಗಮನಾರ್ಹ ಸಂಗತಿ. ತನು, ಮನ, ಭಾವ ಶುದ್ದಿಗಳೆ ನಿಜವಾದ ಆರೋಗ್ಯ. ಸರಿಯಾದ ನಿದ್ರೆ, ಆಹಾರ, ವ್ಯಾಯಾಮಗಳಂತ ಚಟುವಟಿಕೆಗಳನ್ನು ಅಳವಡಿಸಿಕೊಳ್ಳಲು ರೇಡಿಯೋ ಸಂವಾದ, ಚರ್ಚೆ, ಹರಟೆಯಂತಹ ಕಾರ್ಯಕ್ರಮಗಳನ್ನು ಆಲಿಸುವುದು ಉತ್ತಮ ಎಂದರು. ಕೊರೋನಾದಂತಹ ಸಂದರ್ಭದಲ್ಲಿ ಮಾದ್ಯಮಗಳು ಮತ್ತು ವೈದ್ಯರು ಸಮಾಜಮುಖಿಯಾಗಿ ಕಾರ್ಯನಿರ್ವಹಿಸಿದ್ದು ಅದರಲ್ಲಿ ರೇಡಿಯೋ ಪಾತ್ರವು…
ನೌಕಾಪಡೆಯ ಹಿರಿಯ ಅಧಿಕಾರಿಗಳಿಗೆ ಹೊಸ ವಿನ್ಯಾಸದ ಎಪೌಲೆಟ್ ಗಳನ್ನು ಬಿಡುಗಡೆ ಮಾಡಲಾಗಿದೆ. ಹೊಸ ವಿನ್ಯಾಸವು ಛತ್ರಪತಿ ಶಿವಾಜಿಯವರ ರಾಜಮುದ್ರೆಯಿಂದ ಪ್ರೇರಿತವಾಗಿದೆ. ಡಿಸೆಂಬರ್ 4 ರಂದು ಮಹಾರಾಷ್ಟ್ರದ ಸಿಂಧುದುರ್ಗದಲ್ಲಿ ನಡೆದ ನೌಕಾಪಡೆಯ ದಿನಾಚರಣೆಯಲ್ಲಿ ನೌಕಾಪಡೆಯ ಸಿಬ್ಬಂದಿಗೆ ಹೊಸ ವಿನ್ಯಾಸವನ್ನು ಅನಾವರಣಗೊಳಿಸಲಾಗುವುದು ಎಂದು ಪ್ರಧಾನಿ ಘೋಷಿಸಿದ್ದರು. ಭಾರತೀಯ ನೌಕಾಪಡೆಯ ಉನ್ನತ ಮೂರು ಶ್ರೇಣಿಯ ಅಧಿಕಾರಿಗಳಿಗೆ ಹೊಸ ವಿನ್ಯಾಸದ ಎಪೌಲೆಟ್ಗಳನ್ನು ನೀಡಲಾಗಿದೆ. ಹೊಸ ಎಪೌಲೆಟ್ ಗಳನ್ನು ಆರಂಭದಲ್ಲಿ ಅಡ್ಮಿರಲ್, ವೈಸ್ ಅಡ್ಮಿರಲ್ ಮತ್ತು ರಿಯರ್ ಅಡ್ಮಿರಲ್ ಶ್ರೇಣಿಗಳಿಗೆ ನೀಡಲಾಗುತ್ತದೆ. ನೌಕಾಪಡೆಯ ದಿನದ ಭಾಷಣದಲ್ಲಿ ಪ್ರಧಾನಿಯವರು ಇನ್ನು ಮುಂದೆ ನೌಕಾ ಅಧಿಕಾರಿಗಳಿಗೆ ಇಪೌಲೆಟ್ ಗಳು ಭಾರತೀಯ ಪರಂಪರೆಯ ಆಧಾರದ ಮೇಲೆ ಹೊಸ ವಿನ್ಯಾಸವಾಗಿದೆ ಎಂದು ಹೇಳಿದ್ದರು. ನೆಲ್ಸನ್ಸ್ ರಿಂಗ್, ಬ್ರಿಟಿಷ್ ಆಳ್ವಿಕೆಯಲ್ಲಿ ಪರಿಚಯಿಸಲಾದ ವಸಾಹತುಶಾಹಿ ಸಂಪ್ರದಾಯವನ್ನು ಇಲ್ಲಿಯವರೆಗೆ ಭಾರತೀಯ ನೌಕಾಪಡೆಯ ಚಿಹ್ನೆಯಾಗಿ ಬಳಸಲಾಗುತ್ತಿತ್ತು.
ಅಯೋಧ್ಯೆ ರಾಮಮಂದಿರ ಉದ್ಘಾಟನೆಗಾಗಿ ಅನೇಕ ಜನರು ದೇವಸ್ಥಾನಕ್ಕೆ ದೇಣಿಗೆ ನೀಡುತ್ತಿದ್ದಾರೆ. ಬೃಹತ್ ಡ್ರಮ್ ಮತ್ತು ಅದರ ವೈಶಿಷ್ಟ್ಯಗಳನ್ನು ಈಗ ಅಹಮದಾಬಾದ್ ನ ತಂಡವು ಚರ್ಚಿಸುತ್ತಿದೆ. ಇಂಡಿಯಾ ಟುಡೇ ಈ ಬಗ್ಗೆ ಸುದ್ದಿ ಮಾಡಿದೆ. ಜನವರಿ 15 ರಂದು ಅಯೋಧ್ಯೆಗೆ ಡ್ರಮ್ ತಲುಪಿಸಲಾಗುವುದು ಎಂದು ಸಂಘಟಕರು ಹೇಳುತ್ತಾರೆ. ಸಾವಿರ ವರ್ಷಗಳಿಗಿಂತ ಹೆಚ್ಚು ಕಾಲ ಈ ಡೋಲು ನಾಶವಾಗುವುದಿಲ್ಲ ಎನ್ನುತ್ತಾರೆ ಸಂಸ್ಥೆಯ ಪ್ರತಿನಿಧಿಗಳಾದ ಅಂಬಾಲಾಲ್ ದಗ್ಬರ್ ಮತ್ತು ದೀಪಕ್. ತಾಮ್ರದ ತಗಡುಗಳನ್ನು ಡ್ರಮ್ ನ ಹೊರಭಾಗದಲ್ಲಿ ಜೋಡಿಸಲಾಗಿದೆ ಮತ್ತು ಡ್ರಮ್ ಮಾಡಲು ಚಿನ್ನ ಮತ್ತು ಬೆಳ್ಳಿಯನ್ನು ಬಳಸಲಾಗುತ್ತದೆ. ಅಖಿಲ ಭಾರತ ದಗ್ಬರ್ ಸಮಾಜದಿಂದ ಡೋಲು ವಾದನ ನಡೆಯಿತು. ದೇವಸ್ಥಾನಕ್ಕೆ 450 ಕೆಜಿ ತೂಕದ ಡೋಲು ತರಲು ವಿಶೇಷ ರಥದ ವ್ಯವಸ್ಥೆ ಕೂಡ ಮಾಡಲಾಗಿದೆ. ಇದರ ತೂಕ 700 ಕೆ.ಜಿ. ದೈತ್ಯಾಕಾರದ ಡ್ರಮ್ ನ ಕಾಮಗಾರಿ ಪೂರ್ಣಗೊಳಿಸಲು ಎರಡೂವರೆ ತಿಂಗಳು ಬೇಕಾಯಿತು. ಡೋಲು ಹೊತ್ತ ರಥ ಮುಂದಿನ ವಾರ ಅಹಮದಾಬಾದ್ ನ ದ್ರ್ಯಾಪುರ ತಲುಪಲಿದೆ. ಅಹಮದಾಬಾದ್…
ಶಾಲಾ ಸ್ವಚ್ಚತೆ ಕಾಪಾಡುವುದು ಕೇವಲ ಶಿಕ್ಷಕರ ಜವಾಬ್ದಾರಿಯಲ್ಲ, ಎಸ್ ಡಿಎಂಸಿಯ ಜವಾಬ್ದಾರಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ
ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಂದ ಶೌಚಾಲಯ ಕ್ಲೀನಿಂಗ್ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೆ ಇದೀಗ ಎಚ್ಚೆತ್ತುಕೊಂಡಿರುವ ಸರ್ಕಾರ ಈ ಬಗ್ಗೆ ಕ್ರಮ ಕೈಗೊಳ್ಳಲು ಮುಂದಾಗಿದೆ. ಈ ಸಂಬಂಧ ಶಿವಮೊಗ್ಗದಲ್ಲಿ ಮಾತನಾಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಶಾಲೆಗಳಲ್ಲಿನ ಸ್ವಚ್ಛತೆಯ ಜವಾಬ್ದಾರಿಯನ್ನ ಶಾಲಾ ಶಿಕ್ಷಕರ ಜೊತೆ ಎಸ್ ಡಿಎಂಸಿ ತೆಗೆದುಕೊಳ್ಳಬೇಕು. ಈ ಸಂಬಂಧ ಅಧಿಸೂಚನೆ ಹೊರಡಿಸುತ್ತೇವೆ ಎಂದಿದ್ದಾರೆ. ಶಾಲಾಮಕ್ಕಳಿಂದ ಶೌಚಾಲಯ ಸ್ವಚ್ಚಗೊಳಿಸಿದರೇ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಇಲಾಖೆಯಿಂದ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ. ಶಾಲಾ ಮಕ್ಕಳಿಂದ ಯಾವುದೇ ಕೆಲಸ ಮಾಡಿಸಬಾರದು. ಇದರಿಂದ ಇಲಾಖೆಗೆ, ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತದೆ. ಶಾಲಾ ಸ್ವಚ್ಚತೆ ಕಾಪಾಡುವುದು ಕೇವಲ ಶಿಕ್ಷಕರ ಜವಾಬ್ದಾರಿಯಲ್ಲ. ಎಸ್ ಡಿಎಂಸಿಯೂ ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಳಿ ಬಿಜೆಪಿಯವರ ಎಲ್ಲಾ ವೀಕ್ನೆಸ್ ಇದೆ. ಹೀಗಾಗಿ ಬಿಜೆಪಿಯವರು ಯತ್ನಾಳ್ ವಿರುದ್ದ ಶಿಸ್ತುಕ್ರಮ ಜರುಗಿಸುತ್ತಿಲ್ಲ ಅನ್ನಿಸುತ್ತಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಲೇವಡಿ ಮಾಡಿದ್ದಾರೆ. ಈ ಕುರಿತು ಮಾತನಾಡಿದ ಸಚಿವ ಎಂ.ಬಿ. ಪಾಟೀಲ್, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೂ ಕಾಂಗ್ರೆಸ್ ಗೂ ಯಾವುದೇ ಸಂಬಂಧವಿಲ್ಲ. ಯತ್ನಾಳ್ ಕಾಂಗ್ರೆಸ್ ನ ಏಜೆಂಟ್ ಅಲ್ಲ. ಯತ್ನಾಳ್ ಹಿಂದಿನಿಂದಲೂ ಹೇಳುತ್ತಾ ಬಂದಿರುವುದು ಎಲ್ಲವೂ ಸತ್ಯ. ಹೀಗಾಗಿ ಬಿಜೆಪಿ ಯತ್ನಾಳ್ ವಿರುದ್ದ ಕ್ರಮ ಕೈಗೊಳ್ಳುತ್ತಿಲ್ಲ ಎಂದು ವ್ಯಂಗ್ಯವಾಡಿದರು. ಯತ್ನಾಳ್ ಬಳಿ ಎಲ್ಲಾ ದಾಖಲೆ ಇದ್ದಿರಬಹುದು. ಹೀಗಾಗಿ ಬಿಜೆಪಿಗೆ ಯತ್ನಾಳ್ ಕಂಡರೇ ಭಯ. ಯತ್ನಾಳ್ ಆರೋಪದ ಬಗ್ಗೆ ಸರ್ಕಾರವೂ ತನಿಖೆ ನಡೆಸುತ್ತದೆ. ಗುತ್ತಿಗೆದಾರ, ಅಸೋಸಿಯೇಷನ್ ಆರೋಪ ಸೇರಿ ಎಲ್ಲವನ್ನೂ ತನಿಖೆ ಮಾಡುತ್ತೇವೆ ಎಂದು ಸಚಿವ ಎಂ.ಬಿ. ಪಾಟೀಲ್ ತಿಳಿಸಿದರು.
ಕಾಂಗ್ರೆಸ್ ನ ಹಿರಿಯ ನಾಯಕ ಶಶಿ ತರೂರ್ ಸಂಸದರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಮ ಮಂದಿರದ ಉದ್ಘಾಟನೆ ಮತ್ತು ಅಬುಧಾಬಿಯ ಬಿಎಪಿಎಸ್ ಹಿಂದೂ ದೇವಾಲಯದ ಕಾರ್ಯಕ್ರಮಗಳ ನಂತರವೇ ಸಾರ್ವತ್ರಿಕ ಚುನಾವಣಾ ದಿನಾಂಕವನ್ನು ಪ್ರಕಟಿಸಲಾಗುವುದು. ಚುನಾವಣೆಯಲ್ಲಿ ನರೇಂದ್ರ ಮೋದಿ ಅವರನ್ನು ‘ಹಿಂದೂ ಹೃದಯ ಚಕ್ರವರ್ತಿ’ ಎಂದು ಬಿಂಬಿಸಲು ಬಿಜೆಪಿ ಯತ್ನಿಸುತ್ತಿದೆ ಎಂದರು. ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ಮತ್ತು ಫೆಬ್ರವರಿ 14 ರಂದು ಅಬುಧಾಬಿಯಲ್ಲಿ ಹಿಂದೂ ದೇವಾಲಯವನ್ನು ಪ್ರಧಾನಿ ಉದ್ಘಾಟಿಸಲಿದ್ದಾರೆ. ಶೀಘ್ರದಲ್ಲೇ ಚುನಾವಣೆ ಘೋಷಣೆಯಾಗಲಿದೆ. ಸಂದೇಶವು ಸ್ಪಷ್ಟವಾಗಿದೆ…2009 ರಲ್ಲಿ, ಮೋದಿಯನ್ನು ಆರ್ಥಿಕ ಅಭಿವೃದ್ಧಿಯ ದ್ಯೋತಕವಾಗಿ ಭಾರತೀಯ ಮತದಾರರಿಗೆ ಮಾರಲಾಯಿತು. 2019 ರ ಪುಲ್ವಾಮಾ ಭಯೋತ್ಪಾದಕ ದಾಳಿಯು ಮೋದಿಯವರಿಗೆ ಸಾರ್ವತ್ರಿಕ ಚುನಾವಣೆಯನ್ನು ರಾಷ್ಟ್ರೀಯ ಭದ್ರತಾ ಚುನಾವಣೆಯನ್ನಾಗಿ ಪರಿವರ್ತಿಸುವ ಅವಕಾಶವನ್ನು ನೀಡಿತು. 2024ರಲ್ಲಿ ಬಿಜೆಪಿ ಮೋದಿಯನ್ನು ‘ಹಿಂದೂ ಹೃದಯ ಚಕ್ರವರ್ತಿ’ ಎಂದು ಬಿಂಬಿಸಲಿದೆ ಎಂಬುದು ಸ್ಪಷ್ಟವಾಗಿದೆ’ ಎಂದು ಶಶಿ ತರೂರ್ ಹೇಳಿದ್ದಾರೆ. “ಅಚ್ಛೇ ದಿನ್ ಏನಾಯಿತು? ವರ್ಷಕ್ಕೆ 2…
ಚಿತ್ರದುರ್ಗ ನಗರದ ಚಳ್ಳಕೆರೆ ಗೇಟ್ ಸಮೀಪವಿರುವ ಜೈಲ್ ರಸ್ತೆಯಲ್ಲಿರುವ ಪಾಳುಬಿದ್ದ ಮನೆಯಲ್ಲಿ ನಿಗೂಢವಾಗಿ ಐದು ಅಸ್ಥಿಪಂಜರ ಪತ್ತೆ ಆಗಿದ್ದು, ಇದು ಆತ್ಮಹತ್ಯೆಯೋ ಅಥವಾ ಕೊಲೆಯೂ ಎಂಬ ಅನುಮಾನ ವ್ಯಕ್ತವಾಗಿದೆ. ಸ್ಥಳೀಯರೊಬ್ಬರು ನೀಡಿದ ಮಾಹಿತಿ ಅಧರಿಸಿ ಪೊಲೀಸರು ಪಾಳುಬಿದ್ದ ಮನೆಯಲ್ಲಿ ಪರಿಶೀಲನೆ ನಡೆಸಿದಾಗ ಈ ಅಸ್ಥಿಪಂಜರಗಳು ಸಿಕ್ಕಿವೆ. ಸ್ಥಳಕ್ಕೆ ಡಿವೈಎಸ್ ಪಿ ಪಿ.ಅನಿಲ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪವನ್ ಕುಮಾರ್ ಎಂಬುವರು ಚಿತ್ರದುರ್ಗ ಬಡಾವಣೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಮನೆಯಲ್ಲಿ ಪವನ್ ಕುಮಾರ್ ಸಂಬಂಧಿ ಜಗನ್ನಾಥರೆಡ್ಡಿ ಮತ್ತು ಕುಟುಂಬ ವಾಸವಾಗಿದ್ದರು. ಜಗನ್ನಾಥರೆಡ್ಡಿ, ಪತ್ನಿ ಪ್ರೇಮಕ್ಕ, ಪುತ್ರಿ ತ್ರಿವೇಣಿ, ಪುತ್ರ ಕೃಷ್ಣರೆಡ್ಡಿ, ನರೇಂದ್ರರೆಡ್ಡಿ ವಾಸವಾಗಿದ್ದರು ಎನ್ನಲಾಗಿದೆ. ಮೃತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ? ಇಲ್ಲವೇ ಕೊಲೆಯಾಗಿದ್ದಾರೆಯೇ? ಎಂಬುವುದರ ಕುರಿತು ತಿಳಿದು ಬರಬೇಕಿದೆ. ಸದ್ಯ ಅಸ್ಥಿಪಂಜರಗಳನ್ನು ಎಫ್ ಎಸ್ ಎಲ್ ಪರೀಕ್ಷೆಗೆ ಕಳಿಸಲು ತೀರ್ಮಾನಿಸಲಾಗಿದೆ. ಪೊಲೀಸರ ಸೂಕ್ತ ತನಿಖೆ ಬಳಿಕವಷ್ಟೇ ಐದು ಅಸ್ಥಿಪಂಜರಗಳ ಬಗ್ಗೆ ಮಾಹಿತಿ ತಿಳಿದು ಬರಲಿದೆ.
ಗೋವಾದಿಂದ ಅಕ್ರಮವಾಗಿ ಕಲಬುರಗಿಗೆ ಮದ್ಯ ಸಾಗಿಸುತ್ತಿದ್ದ ವೇಳೆ ಖಾಸಗಿ ಬಸ್ ಮೇಲೆ ಕಲಬುರಗಿ ಜಿಲ್ಲಾ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ 48 ಲೀಟರ್ ಮದ್ಯ ಸೀಜ್ ಮಾಡಿದ್ದಾರೆ. ಇದರೊಂದಿಗೆ 51 ಲಕ್ಷ ರೂ. ಮೌಲ್ಯದ ಒಂದು ಖಾಸಗಿ ಬಸ್ ಹಾಗೂ 2 ಬೈಕ್ ಸೀಜ್ ಮಾಡಿದ್ದಾರೆ. ಅಲ್ಲದೇ 6 ಜನರನ್ನ ಬಂಧಿಸಿದ್ದಾರೆ ಪಣಜಿಯಿಂದ ಬರುತ್ತಿದ್ದ ಖಾಸಗಿ ಬಸ್ ನ ವಿವಿಧೆಡೆ ಮದ್ಯದ ಬಾಟಲಿಗಳನ್ನ ಇಡಲಾಗಿತ್ತು. ಬಸ್ ಕಲಬುರಗಿ ಗಡಿಗೆ ಎಂಟ್ರಿ ಕೊಡುತ್ತಿದ್ದಂತೆ ಅಲರ್ಟ್ ಆದ ಕಲಬುರಗಿ ಅಬಕಾರಿ ಪೊಲೀಸರು, ಇಡೀ ಬಸ್ ಜಾಲಾಡಿದ್ದಾರೆ. ಈ ವೇಳೆ ನೂರಾರು ಬಾಟಲ್ ಗಳು ಅಬಕಾರಿ ಪೊಲೀಸರ ಕೈಗೆ ಸಿಕ್ಕಿವೆ. ನೆರೆ ರಾಜ್ಯ ಗೋವಾ ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿ ಕಡಿಮೆ ಬೆಲೆಗೆ ಮದ್ಯ ಸಿಗುತ್ತೆ. ಹೀಗಾಗಿ ನ್ಯೂ ಇಯರ್ ಸೆಲಬ್ರೇಷನ್ ಗಾಗಿ ಈ ಎರಡು ರಾಜ್ಯದ ಅಗ್ಗದ ಮದ್ಯಕ್ಕೆ ಸಾಕಷ್ಟು ಡಿಮ್ಯಾಂಡ್ ಇದೆ. ಅದಕ್ಕಾಗಿ ಅಕ್ರಮವಾಗಿ ಮದ್ಯ ಸಾಗಾಟ ಮಾಡಲಾಗುತ್ತಿದೆ ಎಂದು ಹೇಳಲಾಗಿದೆ.
ಬೆಳಗಾವಿ: ಹಿರಿಯ ನಾಗರಿಕರೇ ನಮಗೆ ಕಣ್ಣಿಗೆ ಕಾಣುವ ದೇವರು. ಅವರ ಸೇವೆ ಮಾಡುವ ಮೂಲಕ ದೇವರ ಸೇವೆ ಮಾಡೋಣ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲ ಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಇಲ್ಲಿಯ ಕಿಣಿಯೆಯಲ್ಲಿರುವ ಶಾಂತಾಯಿ ವೃದ್ದಾಶ್ರಮದಲ್ಲಿ ಗುರುವಾರ ಪ್ರಾರ್ಥನಾ ಮಂದಿರ ಉದ್ಘಾಟಿಸಿ ಅವರು ಮಾತನಾಡಿದರು. ಸಮಾಜದ ದುರ್ಬಲರೆಂದು ಗುರುತಿಸಲ್ಪಟ್ಟಿರುವ ಹಿರಿಯ ನಾಗರಿಕರು, ವಿಕಲಚೇತನರು, ಮಹಿಳೆಯರು ಮತ್ತು ಮಕ್ಕಳ ಸೇವೆ ಮಾಡುವ ಸೌಭಾಗ್ಯ ನನಗೆ ಸಿಕ್ಕಿದೆ. ಈ ಅವಕಾಶವನ್ನು ಬಳಸಿಕೊಂಡು ನನ್ನ ಅವಧಿಯಲ್ಲಿ ಏನನ್ನಾದರೂ ಸಾಧಿಸಬೇಕೆನ್ನುವ ಕನಸು ಹೊತ್ತಿದ್ದೇನೆ. ನಮ್ಮನ್ನು ದುರ್ಬಲರ ಸೇವೆಯಲ್ಲಿ ತೊಡಗಿಸಿಕೊಂಡಾಗ ಅದರಿಂದ ಸಿಗುವ ಆತ್ಮತೃಪ್ತಿ ಬೇರೆಲ್ಲೂ ಸಿಗಲು ಸಾಧ್ಯವಿಲ್ಲ ಎಂದು ಸಚಿವರು ತಿಳಿಸಿದರು. ಆಶ್ರಮದ ರಸ್ತೆ ಅಭಿವೃದ್ಧಿ ಭರವಸೆ ನೀಡಿದ ಲಕ್ಷ್ಮೀ ಹೆಬ್ಬಾಳಕರ್, ಸರಕಾರದಿಂದ ಸಿಗುವ ಎಲ್ಲ ಸೌಲಭ್ಯಗಳನ್ನು ಒದಗಿಸುವುದಾಗಿ ತಿಳಿಸಿದರು. ಕಳೆದ 25 ವರ್ಷದಿಂದ ಶಾಂತಾಯಿ ವೃದ್ದಾಶ್ರಮ ನಿರಂತರ ಸೇವೆಯಲ್ಲಿ ತೊಡಗಿಕೊಂಡಿದೆ. ವಿಜಯ ಮೋರೆ ಮತ್ತು ಇಲ್ಲಿನ…
ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ಸೇರಿದಂತೆ ಕನ್ನಡ ಹೋರಾಟಗಾರರನ್ನು ಜೈಲಿಗೆ ಹಾಕಿರುವುದು ದುಃಖವಾಗಿದೆ. ಕನ್ನಡ ಹೋರಾಟಗಾರನ್ನು ನಾವು ಬೆಂಬಲಿಸಬೇಕು. ಸರ್ಕಾರ ಸರಿಯಾಗಿ ಕಾನೂನು ಅನುಷ್ಠಾನ ಮಾಡದಿರುವುದಕ್ಕೆ ಕನ್ನಡಪರ ಸಂಘಟನೆಗಳು ಹೋರಾಟದ ಹಾದಿ ಹಿಡಿಯಬೇಕಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ ಏರ್ಪಡಿಸಿದ್ದ ರಾಷ್ಟ್ರಕವಿ ಕುವೆಂಪು ಅವರ ನವೀಕೃತ ಸಭಾಂಗಣ ಹಾಗೂ ಕುವೆಂಪು ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನಾನು ಸಿಎಂ ಆಗಿದ್ದಾಗ ಸುಮಾರು ಎರಡು ಸಾವಿರ ಕನ್ನಡ ಹೋರಾಟಗಾರರ ಪ್ರಕರಣಗಳನ್ನು ವಾಪಸ್ ಪಡೆದಿದ್ದೆವು. ನಾಮಫಲಕಗಳಲ್ಲಿ ಕಡ್ಡಾಯ ಕನ್ನಡ ಅನುಷ್ಠಾನ ಮಾಡದಿರುವುದರಿಂದ ಈ ಪರಿಸ್ಥಿತಿ ಬಂದಿದೆ. ಆಡಳಿತಗಾರರಿಗೆ ಸೂಕ್ಷ್ಮತೆ ಇರಬೇಕು ಎಂದಿದ್ದಾರೆ. ನಾವು ಕನ್ನಡದ ಅನುಷ್ಠಾನಕ್ಕಾಗಿ ವಿಧೇಯಕ ಜಾರಿಗೊಳಿಸಿದ್ದೆವು. ಸ್ವಾತಂತ್ರ್ಯ ಬಂದು 75 ವರ್ಷಗಳಾಗಿದ್ದು, ಕನ್ನಡ ನಾಡಿನಲ್ಲಿ ಕನ್ನಡದ ಅನುಷ್ಠಾನಕ್ಕಾಗಿ ಕಾನೂನು ಮಾಡುವ ಅನಿವಾರ್ಯತೆ ಬಂದಿರುವುದು ಬೇಸರದ ಸಂಗತಿ. ಈಗ ಕಾನೂನೂ ಮಾಡದಿದ್ದರೆ ನಮ್ಮ ಮಕ್ಕಳಿಗೆ ಕಷ್ಟವಾಗಲಿದೆ. ಈಗಲೂ ಕಾನೂನು ಅನುಷ್ಠಾನ ಮಾಡದಿದ್ದರೆ…