Subscribe to Updates
Get the latest creative news from FooBar about art, design and business.
- ಪ್ರಥಮ ಬಿ.ಸಿ.ಎ. ಪದವಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
- ಕುಣಿಗಲ್ ಪುರಸಭಾ ವ್ಯಾಪ್ತಿಯ ಸಾರ್ವಜನಿಕರಿಗೆ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
- ತುಮಕೂರು: ‘ಕರ್ನಾಟಕ ಪಬ್ಲಿಕ್ ಸ್ಕೂಲ್’ ಸಿನಿಮಾ ಮುಹೂರ್ತ ಸಮಾರಂಭ
- ತುಮಕೂರು: ಪಾದರಕ್ಷೆ ತಯಾರಿಕಾ ಸ್ಪರ್ಧೆಗೆ ಅರ್ಜಿ
- ಭೀಕರ ಅಪಘಾತ: ಶನಿಮಹಾತ್ಮ ದೇವಾಲಯ ವ್ಯವಸ್ಥಾಪಕ ಜಗನ್ನಾಥ್ ನಿಧನ
- ನೈರ್ಮಲ್ಯ ಕಾಪಾಡಿ, ಗರ್ಭಾಶಯದ ಕ್ಯಾನ್ಸರ್ ತಡೆಗಟ್ಟಿ: ಮಹಿಳೆಯರಿಗೆ ಕಾವೇರಿ ಎನ್. ಕರೆ
- ಪೌತಿ ಖಾತೆ, ಕಂದಾಯ ಗ್ರಾಮ ಹಕ್ಕುಪತ್ರ, ಪೋಡಿ ಮುಕ್ತ ಅಭಿಯಾನ: ರೈತರ ಅಲೆದಾಟ ತಪ್ಪಿಸಲು ಸರ್ಕಾರದ ಮಹತ್ವದ ಕ್ರಮ
- ತುಮಕೂರನ್ನು ಬೆಂಗಳೂರಿನ ಭಾಗವಾಗಿಸಿ: ಸಾಧನಾ ಸಮಾವೇಶದಲ್ಲಿ ಡಾ.ಜಿ.ಪರಮೇಶ್ವರ್ ಪ್ರಸ್ತಾಪ
Author: admin
ಬೆಳಗಾವಿ: ವಿಶ್ವ ಮಾನವ, ರಾಷ್ಟ್ರಕವಿ ಕುವೆಂಪು ಅವರು ಸಾಹಿತ್ಯ, ಸಂಗೀತ, ನಾಟಕ, ಕಥೆ, ಕಾದಂಬರಿ ರಚಿಸಿ ಅವುಗಳನ್ನು ವಿಶ್ವಕ್ಕೆ ಸಾರುವುದರ ಮೂಲಕ ಸಮಾಜದಲ್ಲಿ ಸಮಾನತೆಯ ಪ್ರಾಮುಖ್ಯತೆ ತೋರಿಸಿಕೊಟ್ಟ ಮಹಾನ್ ಕವಿಯಾಗಿದ್ದಾರೆ ಎಂದು ಸಾಹಿತಿ ಟಿ.ಎಸ್. ವಂಟಗೂಡಿ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಕುಮಾರ ಗಂಧರ್ವ ಕಲಾಮಂದಿರದಲ್ಲಿ ಶುಕ್ರವಾರ (ಡಿ.29) ರಂದು ಏರ್ಪಡಿಸಲಾಗಿದ್ದ ರಾಷ್ಟ್ರ ಕವಿ ಕುವೆಂಪುರವರ ಜನ್ಮ ದಿನದ ಅಂಗವಾಗಿ ವಿಶ್ವ ಮಾನವ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು. ಸಾಹಿತ್ಯ ವಿಮರ್ಶೆ, ಕಾವ್ಯಮೀಮಾಂಸೆ, ನಾಟಕ, ಕಥೆ, ಕಾದಂಬರಿಯ ಕ್ಷೇತ್ರಗಳಿಗೆ ಪುಟ್ಟಪ್ಪನವರ ಕೊಡುಗೆ ಸ್ಮರಣೆಯವಾದದ್ದು, ಅವರನ್ನು ಸಾಹಿತ್ಯದ ಮೂಲಕ ಚಿರಂಜೀವಿಯಾಗಿಸುವುದರ ಜೊತೆಗೆ ಅವರು ಹಾಕಿ ಕೊಟ್ಟ ಮಾರ್ಗದರ್ಶನ ತತ್ವ ಆದರ್ಶ, ಸಿದ್ಧಾಂತ ಗಳನ್ನು ಯುವ ಪೀಳಿಗೆ ಮೈಗೂಡಿಸಿಕೊಳ್ಳಬೇಕಿದೆ ಎಂದರು. ಸಾಹಿತ್ಯ ಲೋಕದ ಮೇರುಶಿಖರ ಕುವೆಂಪು: ಮನುಜ ಮತ ವಿಶ್ವ ಪಥ ಎಂದು…
ಬೆಂಗಳೂರು: 2023ಕ್ಕೆ ವಿದಾಯ ಹೇಳಿ 2024ನ್ನು ಸ್ವಾಗತಿಸಲು ಬಹಳಷ್ಟು ಜನರು ಕಾತುರರಾಗಿದ್ದು, ಹೊಸವರ್ಷ ಹತ್ತಿರ ಬರುತ್ತಿದ್ದು, ಆಚರಣೆಯ ಕೇಂದ್ರ ಬಿಂದುವಾಗಿರುವ ನಗರದ ಎಂ.ಜಿ ರಸ್ತೆ, ಬ್ರಿಗೇಡ್ ರಸ್ತೆ ಹಾಗೂ ಕಮರ್ಷಿಯರ್ ಸ್ಟ್ರೀಟ್ ಗಳಲ್ಲಿ ಈಗಾಗಲೇ ಸಿದ್ಧತೆಗಳು ಜೋರಾಗಿ ನಡೆಯುತ್ತಿದೆ. ಪ್ರತೀ ವರ್ಷದಂತೆಯೇ ಈ ವರ್ಷವೂ ಎಂ.ಜಿ ರಸ್ತೆ, ಬ್ರಿಗೇಡ್ ರಸ್ತೆ ಹಾಗೂ ಕಮರ್ಷಿಯರ್ ಸ್ಟ್ರೀಟ್ ಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವ ನಿರೀಕ್ಷೆಗಳಿವೆ. ಈ ಹಿನ್ನೆಲೆಯಲ್ಲಿ ಈ ಹಿಂದೆ ಚರ್ಚ್ ಸ್ಟ್ರೀಟ್ ನಲ್ಲಿ ಸಂಭವಿಸಿದ ಸ್ಫೋಟ, ದೌರ್ಜನ್ಯದಂತಹ ಅಹಿತಕರ ಘಟನೆಗಳು ಸಂಭವಿಸದಂತೆ ಮಾಡಲು ಕ್ಯಾಮೆರಾ, ವೀಕ್ಷಣಾ ಗೋಪುರ (ವಾಚ್ ಟವರ್)ಗಳನ್ನು ಸ್ಥಾಪಿಸಿ ಭದ್ರತೆಗಳ ಹೆಚ್ಚಿರುವಂತೆ ವ್ಯಾಪಾರಿಗಳು ಹಾಗೂ ಅಂಗಡಿ ಸಂಘಗಳು ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದಾರೆ. ಬ್ರಿಗೇಡ್ ಶಾಪ್ಸ್ ಆ್ಯಂಡ್ ಎಸ್ಟಾಬ್ಲಿಷ್ ಮೆಂಟ್ ಅಸೋಸಿಯೇಷನ್ ಕಾರ್ಯದರ್ಶಿ ಸುಹೇಲ್ ಯೂಸುಫ್ ಮಾತನಾಡಿ, ಬಿಗಿ ಪೊಲೀಸ್ ನಿಯೋಜನೆಗಾಗಿ ಕೇಂದ್ರ ಡಿಸಿಪಿಗೆ ಪತ್ರದ ಮೂಲಕ ಮನವಿ ಮಾಡಿಕೊಳ್ಳಲಾಗಿದೆ. ನಮ್ಮ ಸಂಘದಿಂದ ಕ್ಯಾಮೆರಾ, ವಾಚ್ ಟವರ್ ಗಳನ್ನು ಅಳವಡಿಸಲಾಗುತ್ತಿದೆ…
ಮಣಿಪುರ: ಶಸ್ತ್ರಸಜ್ಜಿತ ದುಷ್ಕರ್ಮಿಗಳು ಗಾಯಕನ ಹೆಂಡತಿ ಮತ್ತು ತಾಯಿಗೆ ಬಂದೂಕು ತೋರಿಸಿ ನಂತರ ಗಾಯಕನನ್ನು ಅಪಹರಿಸಿದ ಘಟನೆ ಮಣಿಪುರದಲ್ಲಿ ನಡೆದಿದೆ. ಪೊಲೀಸರ ಪ್ರಕಾರ, ಘಟನೆ ನಡೆದಿದ್ದು ಬಂದೂಕುದಾರಿಗಳು ಮಣಿಪುರದ ಗಾಯಕ ಅಖು ಚಿಂಗಾಂಗ್ ಬಾಮ್ ಅವರನ್ನು ಅಪಹರಿಸಿದ್ದಾರೆ. ದುಷ್ಕರ್ಮಿಗಳಿಂದ ಅಪಹರಣಕ್ಕೊಳಗಾಗಿರುವ ಗಾಯಕ ಅಖು ಚಿಂಗಾಂಗ್ಬಾಮ್ ಇಂಫಾಲ್ ಪೂರ್ವದ ಖುರೈ ನಿವಾಸಿ.
ಕೋಲಾರ: ಅಪ್ರಾಪ್ತೆಯನ್ನು ಪುಸಲಾಯಿಸಿ ಕರೆದೊಯ್ದು ಐವರಿಂದ ಅತ್ಯಾಚಾರ ಆರೋಪ ಕೇಳಿ ಬಂದಿದೆ. ಸಂತ್ರಸ್ತೆ ತಾಯಿ ದೂರಿನ ಮೇರೆಗೆ ಜಿಲ್ಲೆಯ ಕೆಜಿಎಫ್ ತಾಲೂಕಿನ ಬೇತಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಐವರು ಆರೋಪಿಗಳ ಪೈಕಿ ನಾಗರಾಜ್, ಲವಕುಮಾರ, ನವೀನ್ ಬಂಧಿಸಲಾಗಿದೆ. ತಲೆ ಮರೆಸಿಕೊಂಡಿರುವ ಶಬರೀಶ್, ಸುಮನ್ ಗಾಗಿ ಪೊಲೀಸರು ಶೋಧ ನಡೆಸಿದ್ದಾರೆ. ಸಂತ್ರಸ್ತ ಬಾಲಕಿಯನ್ನು ಕೆಜಿಎಫ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಹುಬ್ಬಳ್ಳಿ: ಮತ್ತು ಬರುವ ಔಷಧಿ ನೀಡಿ ಯುವತಿಗೆ ಅತ್ಯಾಚಾರವೆಸಗಿದ ಆರೋಪಿ ಗುಲಾಮ ಜಿಲಾನಿ ಅಜಹರಿ ಮೌಲ್ವಿಯನ್ನು ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇನ್ನು ಪ್ರಕರಣದಲ್ಲಿ ಭಾಗಿಯಾಗಿದ್ದ ಗುಲಾಮ್ ಜಿಲಾನಿ ಅಜಹರಿ ಸೇರಿದಂತೆ 8 ಜನರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಹುಬ್ಬಳ್ಳಿ ಮೂಲದ 23 ವರ್ಷದ ಯುವತಿ, ಮಧ್ಯಪ್ರದೇಶದ ಖಂಡವಾದಲ್ಲಿರುವ ಮುಫ್ತಿ ಗುಲಾಮ ಜಿಲಾನಿ ಅಜಹರಿಯ ಮದರಸಾದಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಳು. ಗುಲಾಮ ಜಿಲಾನಿ ಅಜಹರಿ ಯುವತಿಯ ತಂದೆಯ ಪರಿಚಯಸ್ಥನಾಗಿದ್ದನು. ಹೀಗಾಗಿ ಗುಲಾಮ ಜಿಲಾನಿ ಅಜಹರಿ ಯುವತಿಯ ತಂದೆಗೆ “ನಿಮ್ಮ ಮಗಳಿಗೆ ನಮ್ಮಲ್ಲಿ ಕೆಲಸ ಇದೆ” ಎಂದು ಹೇಳಿದ್ದ ಹಿನ್ನೆಲೆಯಲ್ಲಿ ಯುವತಿ ಖಂಡವಾ ಪಟ್ಟಣಕ್ಕೆ ಹೋಗಿದ್ದಳು. ಅಲ್ಲಿ ಯುವತಿಯನ್ನು ಪುಸಲಾಯಿಸಿದ ಮುಫ್ತಿ ಗುಲಾಮ ಜಿಲಾನಿ ಅಜಹರಿ, ತನ್ನ ಮೊದಲ ಹೆಂಡತಿಗೆ ವಿಚ್ಛೇದನ ನೀಡಿದ್ದಾನೆ. ನಾನು ನಿನ್ನನ್ನು ಮದುವೆಯಾಗುತ್ತೇನೆ ಎಂದು ಹೇಳುತ್ತಲೇ ಯುವತಿಗೆ ಮತ್ತು ಬರುವ ಔಷಧ ಕೊಟ್ಟು ನಿರಂತರವಾಗಿ ಅತ್ಯಾಚಾರವೆಸಗಿದ್ದು, ಆರೋಪಿಯ ಬಂಧನ ಮಾಡಲಾಗಿದೆ.
ಬೆಂಗಳೂರು: ಕನ್ನಡ ಸೇನಾನಿ ಕನ್ನಡ ಪರ ಚಿಂತಕ ನಾಡ ಹೋರಾಟಗಾರ ಕನ್ನಡ ಚಳುವಳಿಯ ಭೀಷ್ಮ ಎಂದು ರಾಜ್ಯದ ಕನ್ನಡ ಪ್ರೇಮಿಗಳು ಕರೆಯುವ ಕರವೇ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌ ರವರನ್ನು ರಾಜ್ಯ ಪೊಲೀಸ್ ಅಧಿಕಾರಿಗಳು ಬಂಧಿಸಿದ್ದು ಖಂಡನೀಯವೆಂದು ಕರ್ನಾಟಕ ರಣಧೀರರ ವೇದಿಕೆಯು ನೆಲಮಂಗಲ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದಾರೆ.. ಬೆಂಗಳೂರು ನಗರದ ವ್ಯಾಪ್ತಿಯಲ್ಲಿರುವ ವಾಣಿಜ್ಯ ಮಳಿಗೆಗಳು ಕಟ್ಟಡಗಳು ಹಾಗೂ ಇನ್ನಿತರೆ ವ್ಯಾಪಾರ ಸ್ಥಳಗಳಲ್ಲಿ ಶೇಕಡಾ 60% ರಷ್ಟು ಕನ್ನಡ ಭಾಷೆಯನ್ನು ಬಳಸಬೇಕೆಂದು ಶೇಕಡಾ 40% ರಷ್ಟು ಇಂಗ್ಲೀಷ್ ಆಂಗ್ಲ ಭಾಷೆಯನ್ನು ಬಳಸಬೇಕೆಂದು ಸ್ಥಳೀಯ ಪ್ರಾಧಿಕಾರದ ಹಾಗೂ ಬಿ.ಬಿ.ಎಂ.ಪಿ ಮತ್ತು ಸರ್ಕಾರದ ಆದೇಶಗಳಿದ್ದರೂ ಸಹ ಸದರಿ ಆದೇಶಗಳನ್ನು ಉಲ್ಲಂಘನೆ ಮಾಡಿ ಹಿಂದಿ ತೆಲುಗು ತಮಿಳು ಮಲಯಾಳಿ ಸೇರಿದಂತೆ ಆಂಗ್ಲ ಮತ್ತು ಹಿಂದಿ ಭಾಷೆಗಳಲ್ಲಿ ನಾಮಫಲಕಗಳನ್ನು ಹಾಕಿಕೊಂಡು ವ್ಯಾಪಾರ ಮಾಡುತ್ತಿದ್ದಾರೆ ಇದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಕನ್ನಡ ಪರ ಸಂಘಟನೆಗಳು 27 ರಂದು ಬೃಹತ್ ಪ್ರತಿಭಟನೆಯನ್ನು ಕೈಗೊಂಡಿದ್ದರು. ಈ ಸಂದರ್ಭದಲ್ಲಿ ಪಟ್ಟಭದ್ರ ಹಿತಾಸಕ್ತಿಗಳ…
ಪಾವಗಡ: ಕನ್ನಡ ನಾಮಫಲಕ ಕಡ್ಡಾಯಗೊಳಿಸಲು ಒತ್ತಾಯಿಸಿ ಪಾವಗಡ ಪಟ್ಟಣದ ಪ್ರವಾಸಿ ಮಂದಿರದಿಂದ ಆರಂಭಿಸಿ ಪಟ್ಟಣದ ವಿವಿಧ ಅಂಗಡಿಗಳಿಗೆ ಭೇಟಿ ನೀಡಿ ಕನ್ನಡ ನಾಮಫಲಕ ಬಳಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣ ಸೂಚನೆ ನೀಡಿತು. ಬಳಿಕ ಗ್ರೇಟ್ 2 ತಹಶೀಲ್ದಾರ್ ನರಸಿಂಹಮೂರ್ತಿ ರವರಿಗೆ ಮನವಿ ಪತ್ರ ಸಲ್ಲಿಸಿ ಕಡ್ಡಾಯ ಕನ್ನಡ ನಾಮಫಲಕ ಹಾಕಿಸಲು ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಕ್ಷಣಾ ವೇದಿಕೆ ಮುಖಂಡರು ಒತ್ತಾಯಿಸಿದರು. ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷರಾದ ಲಕ್ಷ್ಮೀನಾರಾಯಣ್, ಉಪಾಧ್ಯಕ್ಷರಾದ ಸಂಗಮ್ ಅಂಗಡಿ ಮಾಲೀಕರಾದ ನರಸೀ ಪಾಟೀಲ್, ಪದಾಧಿಕಾರಿಗಳಾದ ಪಾಳೆಗಾರ್ ಲೋಕೇಶ್, ರಂಗನಾಯಕ, ಮಣಿ, ರಾಜು, ಪ್ರಶಾಂತ್, ಲಚ್ಚಿ, ಮಂಜು, ಜೆ.ಆರ್.ಶ್ರೀನಿವಾಸ್, ನಾಗಲಮಡಿಕೆ ಮಲ್ಲಿಕಾರ್ಜುನ, ಕುಮಾರ್, ಗೋಪಾಲ್, ನಾಗೇಂದ್ರ ಚಂದ್ರು, ಮುಂತಾದವರು ಭಾಗವಹಿಸಿದ್ದರು. ವರದಿ: ಮಲ್ಲಿಕಾರ್ಜುನ್ ನಾಗಲಮಡಿಕೆ
ಬೆಂಗಳೂರು: ಸರಣಿ ಅಪಘಾತ ಮಾಡಿ ಅಪ್ರಾಪ್ತನ ಸಾವಿಗೆ ಕಾರಣವಾಗಿದ್ದ ಚಾಲಕನಿಗೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ 3 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಚಾಲಕ ಸುರೇಶ್(24) ಶಿಕ್ಷೆಗೆ ಗುರಿಯಾದವ. 2017ರ ಮೇ. 27ರಂದು ಬಾಬುಸಾಪಾಳ್ಯದಲ್ಲಿ ನಡೆದಿದ್ದ ಅಪಘಾತವು ಕಾರಿನಲ್ಲಿದ್ದ ಸುರೇಶ್ ನಿಂದ ಸರಣಿ ಅಪಘಾತವಾಗಿತ್ತು. ಇಬ್ಬರು ಬಾಲಕರಿಗೆ ಡಿಕ್ಕಿ ಹೊಡೆದಿದ್ದ. ಇದರಿಂದ 12ವರ್ಷದ ಬಾಲಕ ಮೃತಪಟ್ಟು, ಮತ್ತೊಬ್ಬನಿಗೆ ಗಂಭೀರ ಗಾಯವಾಗಿತ್ತು. ಬಾಣಸವಾಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದೀಗ ಚಾಲಕನಿಗೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ 3 ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಗಂಟಲು ನೋವು, ಕಫದಿಂದ ಕಿರಿಕಿರಿ, ಊತಕ್ಕೆ ಹೇಳಿ ಗುಡ್ ಬೈ: ಕೇವಲ ಈ ಟಿಪ್ಸ್ ಅನುಸರಿಸಿದರೆ ಸಾಕು..! ಗಂಟಲು ನೋವು, ಕಫದಿಂದ ಕಿರಿಕಿರಿ, ಕೆಮ್ಮಿನಿಂದಾಗಿ ನೋವು ಮತ್ತು ಊತವು ಬದಲಾಗುತ್ತಿರುವ ಋತುವಿನಲ್ಲಿ ಸಾಮಾನ್ಯ ಸಮಸ್ಯೆಗಳಾಗಿವೆ. ಇದನ್ನು ತಪ್ಪಿಸಲು ಅರಿಶಿನ ಪುಡಿ ಬೆರೆಸಿದ ಉಗುರು ಬೆಚ್ಚಗಿನ ನೀರಿನಲ್ಲಿ ಬಾಯಿ ಮುಕ್ಕಳಿಸಬೇಕು. ಇದನ್ನು ಉಪ್ಪು ನೀರಿನೊಂದಿಗೂ ಸಹ ಮಾಡಬಹುದು ಹೀಗೆ ಮಾಡಿದರೆ ಗಂಟಲು ನೋವು, ಕಿರಿಕಿರಿ ಕಡಿಮೆಯಾಗುತ್ತದೆ. ಜತೆಗೆ ಉಗುರು ಬೆಚ್ಚಗಿನ ನೀರಿನಲ್ಲಿ ನಿಂಬೆಯನ್ನು ಸೇವಿಸುವುದರಿಂದ ಗಂಟಲಿನ ಊತವು ಕಡಿಮೆಯಾಗುತ್ತದೆ. ಮೂಲಂಗಿ ಎಲೆಯಲ್ಲಿದೆ ಆರೋಗ್ಯ.. ಮೂಲಂಗಿಯನ್ನು ಅಡುಗೆಗೆ ಬಳಕೆ ಮಾಡುವುದು ಸಾಮಾನ್ಯ. ಆದರೆ ಮೂಲಂಗಿ ಎಲೆಯಲ್ಲಿ ಹೆಚ್ಚಿನ ಪೋಷಕಾಂಶ ಇದೆ. ಇದರ ಸೇವನೆ ಮಾಡುವುದರಿಂದ ಜೀರ್ಣಕ್ರಿಯೆ ವ್ಯವಸ್ಥೆಯ ಕಾರ್ಯವನ್ನು ಸುಧಾರಿಸುತ್ತದೆ. ಕರುಳಿನ ಕಾರ್ಯವನ್ನು ಸುಗಮಗೊಳಿಸುತ್ತದೆ. ಮೂಲಂಗಿ ಎಲೆಗಳನ್ನು ತಿನ್ನುವುದರಿಂದ ಮಲಬದ್ಧತೆ, ಆಮ್ಮಿಯತೆ ಮತ್ತು ಗ್ಯಾಸ್ ತಡೆಯುತ್ತದೆ. ಜೀರ್ಣಕ್ರಿಯೆ ಸಮಸ್ಯೆಯಿಂದ ಬಳಲುತ್ತಿರುವವರು ಮೂಲಂಗಿ ಎಲೆಗಳನ್ನು ಆಹಾರದಲ್ಲಿ ಸೇರಿಸುವುದು ಒಳ್ಳೆಯದು. ಇದು ರಕ್ತದಲ್ಲಿನ ಹಿಮೊಗ್ಲೋಬಿನ್ ಅಂಶವನ್ನು ಹೆಚ್ಚಿಸುತ್ತದೆ.…
ಸ್ವಾತಂತ್ರ್ಯ ಸಂಗ್ರಾಮದ ಮೂಲಕ ಸಮೃದ್ದ ಭಾರತದ ನಿರ್ಮಾಣಕ್ಕೆ ಪೂರಕವಾಗುವಂತೆ ದೇಶದ ಆತ್ಮವಾದ ಸಂವಿಧಾನದ ಆಶಯವನ್ನು ಬಲಪಡಿಸುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಆದರೆ ಧರ್ಮ ಮತ್ತು ದೇವರ ಹೆಸರಿನಲ್ಲಿ ದೇಶವನ್ನು ವಿಭಜಿಸಲು ಹೊರಟಿರುವ ಕೋಮುವಾದಿ ರಾಜಕಾರಣವನ್ನು ಕೊನೆಗಾಣಿಸಬೇಕಿದೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ. ಮಹದೇವಪ್ಪ ಅವರು ತಿಳಿಸಿದರು. ಮೈಸೂರು ನಗರ ಮತ್ತು ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಸಮಿತಿ ಹಾಗೂ ಕಾಂಗ್ರೆಸ್ ಸೇವಾದಳ ಸಹಯೋಗದಲ್ಲಿ ಗುರುವಾರ ಕಾಂಗ್ರೆಸ್ ಭವನದಲ್ಲಿ ಆಯೋಜಿಸಿದ್ದ 138ನೇ ಭಾರತದ ರಾಷ್ಟ್ರೀಯ ಕಾಂಗ್ರೆಸ್ ಹಾಗೂ 100 ನೇ ಕಾಂಗ್ರೆಸ್ ಸೇವಾದಳ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಚಳುವಳಿಗೆ ಆಗಾಧವಾದ ಶಕ್ತಿ ಇದೆ. ಇಂದಿನ ದೇಶದ ಪರಿಸ್ಥಿತಿಗೆ ಅನುಗುಣವಾಗಿ ಚಳುವಳಿಯನ್ನು ನಿರಂತರವಾಗಿ ನಡೆಸುವ ಮೂಲಕ ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ರಕ್ಷಣೆಗಾಗಿ ಎರಡನೇ ಸ್ವಾತಂತ್ರ್ಯ ಸಂಗ್ರಾಮ ಪ್ರಾರಂಭಿಸಲು ಕಾಂಗ್ರೆಸ್ ಪಕ್ಷ ಸಿದ್ಧವಿದೆ ಎಂದು ಹೇಳಿದರು. ಅನೇಕ ಧರ್ಮಗಳು, ವಿವಿಧ ಭಾಷೆಯ ಜನರು ವಾಸಿಸುವ ಬಹುತ್ವದ…