Subscribe to Updates
Get the latest creative news from FooBar about art, design and business.
- ಪ್ರಥಮ ಬಿ.ಸಿ.ಎ. ಪದವಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
- ಕುಣಿಗಲ್ ಪುರಸಭಾ ವ್ಯಾಪ್ತಿಯ ಸಾರ್ವಜನಿಕರಿಗೆ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
- ತುಮಕೂರು: ‘ಕರ್ನಾಟಕ ಪಬ್ಲಿಕ್ ಸ್ಕೂಲ್’ ಸಿನಿಮಾ ಮುಹೂರ್ತ ಸಮಾರಂಭ
- ತುಮಕೂರು: ಪಾದರಕ್ಷೆ ತಯಾರಿಕಾ ಸ್ಪರ್ಧೆಗೆ ಅರ್ಜಿ
- ಭೀಕರ ಅಪಘಾತ: ಶನಿಮಹಾತ್ಮ ದೇವಾಲಯ ವ್ಯವಸ್ಥಾಪಕ ಜಗನ್ನಾಥ್ ನಿಧನ
- ನೈರ್ಮಲ್ಯ ಕಾಪಾಡಿ, ಗರ್ಭಾಶಯದ ಕ್ಯಾನ್ಸರ್ ತಡೆಗಟ್ಟಿ: ಮಹಿಳೆಯರಿಗೆ ಕಾವೇರಿ ಎನ್. ಕರೆ
- ಪೌತಿ ಖಾತೆ, ಕಂದಾಯ ಗ್ರಾಮ ಹಕ್ಕುಪತ್ರ, ಪೋಡಿ ಮುಕ್ತ ಅಭಿಯಾನ: ರೈತರ ಅಲೆದಾಟ ತಪ್ಪಿಸಲು ಸರ್ಕಾರದ ಮಹತ್ವದ ಕ್ರಮ
- ತುಮಕೂರನ್ನು ಬೆಂಗಳೂರಿನ ಭಾಗವಾಗಿಸಿ: ಸಾಧನಾ ಸಮಾವೇಶದಲ್ಲಿ ಡಾ.ಜಿ.ಪರಮೇಶ್ವರ್ ಪ್ರಸ್ತಾಪ
Author: admin
ಅಭೂತಪೂರ್ವ ಗೆಲುವು ಸಾಧಿಸಲು ಹಿರಿಯರ ಮಾರ್ಗದರ್ಶನ ಅತ್ಯಗತ್ಯ: ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ
ಲೋಕಸಭಾ ಚುನಾವಣೆಯೂ ಸೇರಿದಂತೆ ರಾಜ್ಯದಲ್ಲಿ ಮುಂಬರುವ ಎಲ್ಲ ಚುನಾವಣೆಗಳಲ್ಲಿ ಅಭೂತಪೂರ್ವ ಗೆಲುವು ಸಾಧಿಸಲು ಶ್ರಮಿಸುವ ಅಗತ್ಯವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಹೇಳಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಬಿಜೆಪಿ ರಾಜ್ಯ ಪ್ರಮುಖರ ವಿಶೇಷ ಸಭೆಯ ನೇತೃತ್ವ ವಹಿಸಿ ಅವರು ಮಾತನಾಡಿದರು. ಲೋಕಸಭೆ ಸೇರಿದಂತೆ ಎಲ್ಲ ಚುನಾವಣೆಗಳಲ್ಲಿ ಅಭೂತಪೂರ್ವ ಗೆಲುವು ಸಾಧಿಸಲು ಹಿರಿಯರ ಮಾರ್ಗದರ್ಶನ ಅತ್ಯಗತ್ಯ ಎಂದರು. ಲೋಕಸಭಾ ಚುನಾವಣೆವೆರಗೂ ಶಾಸಕ ಬಸನಗೌಡ ಯತ್ನಾಳ್ ಬಗ್ಗೆ ಸೈಲೆಂಟ್ ಆಗಿರಲು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ಯತ್ನಾಳ್ ವಿರುದ್ಧ ಕ್ರಮಕ್ಕೆ ಮುಂದಾದರೆ ಪಂಚಮಸಾಲಿಗರ ವಿರೋಧ ಕಟ್ಟಿಕೊಳ್ಳಬಹುದು ಅನ್ನೋ ಆತಂಕ ವಿಜಯೇಂದ್ರ ಅವರನ್ನ ಕಾಡುತ್ತಿದೆ. 40 ಲಕ್ಷ ಪಂಚಮಸಾಲಿ ಮತಗಳು ಚದುರುವ ಭಯದ ಜೊತೆ ಸಿ.ಸಿ. ಪಾಟೀಲ್, ಬೆಲ್ಲದ್ ಸೇರಿ ಕೆಲವರ ವಿರೋಧ ಕಟ್ಟಿಕೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಯತ್ನಾಳ್ ವಿರುದ್ಧ ಕ್ರಮಕ್ಕೆ ವರಿಷ್ಠರು ಹಿಂದೇಟು ಹಾಕ್ತಿದ್ದಾರೆ.
ಬಿಜೆಪಿಯವರದ್ದು ಡೋಂಗಿ ಹಿಂದುತ್ವ ಎಂದು ಟೀಕಿಸಿದ್ದ ಸಿಎಂ ಸಿದ್ದರಾಮಯ್ಯಗೆ ಮಾಜಿ ಸಚಿವ ಸಿ.ಟಿ. ರವಿ ತಿರುಗೇಟು ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಮಾಜಿ ಸಚಿವ ಸಿ.ಟಿ ರವಿ, ನಿಜವಾದ ಡೋಂಗಿ ರಾಜಕಾರಣಿ ಯಾರೆಂದು ಕೇಳಿಕೊಳ್ಳಲಿ. ಸಿದ್ದರಾಮಯ್ಯ ತಮ್ಮ ಅಂತರಾಳವನ್ನ ಕೇಳಿಕೊಳ್ಳಲಿ. ದುಬಾರಿ ವಾಚ್ ಕಟ್ಟಿಕೊಂಡು ಮಜವಾದಿ ಅನ್ನಿಸಿಕೊಂಡವರು, ರೈತರ ಆತ್ಮಹತ್ಯೆ ಬಗ್ಗೆ ಮಾತನಾಡಿದ್ರೂ ರಾಜೀನಾಮೆ ಇಲ್ಲ. ಬರಗಾಲದಲ್ಲೂ ಐಷರಾಮಿ ಫ್ಲೈಟ್ ನಲ್ಲಿ ಪ್ರಯಾಣಿಸುವವರು. ಸಚಿವರಾದ ಶಿವಾನಂದ್ ಪಾಟೀಲ್, ಜಮೀರ್ ಅಹ್ಮದ್ ಖಾನ್ ಬಳಿ ರಾಜೀನಾಮೆ ಪಡೆಯದವರು. ಸಿದ್ದರಾಮಯ್ಯನವರೇ ಡೋಂಗಿ ರಾಜಕಾರಣಿ ಯಾರೆಂದು ಹೇಳಿ ಎಂದು ಆಕ್ರೋಶ ವ್ಯಕ್ತಪಪಡಿಸಿದರು. ಕನ್ನಡ ಫಲಕ ಕಡ್ಡಾಯಕ್ಕೆ ಆಗ್ರಹಿಸಿ ಪ್ರತಿಭಟನೆ, ಕರವೇ ಕಾರ್ಯಕರ್ತರ ಬಂಧನ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿ.ಟಿ. ರವಿ, ಕನ್ನಡದ ಆಸ್ಮಿತೆಗಾಗಿ ಹೋರಾಟ ಮಾಡುವುದು ತಪ್ಪಲ್ಲ. ಕನ್ನಡ ಹೋರಾಟಗಾರರ ಬಂಧನ ಸರಿಯಲ್ಲ ಎಂದು ಸರ್ಕಾರದ ನಡೆಗೆ ಕಿಡಿಕಾರಿದರು.
ಕಡ್ಡಾಯ ಕನ್ನಡ ನಾಮಫಲಕ ಹಾಕುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ವೇಳೆ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡರನ್ನ ಬಂಧಿಸಿರುವುದಕ್ಕೆ ಅಖಿಲ ಕರ್ನಾಟಕ ಮಹಮ್ಮದೀಯರ ಕನ್ನಡ ವೇದಿಕೆ ಖಂಡಿಸಿದೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ಅಖಿಲ ಕರ್ನಾಟಕ ಮಹಮ್ಮದೀಯರ ಕನ್ನಡ ವೇದಿಕೆ ಅಧ್ಯಕ್ಷರು, ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ನಾರಾಯಣಗೌಡರನ್ನು ಬಂಧಿಸಿರುವುದನ್ನು ವಿರೋಧಿಸಿ ಖಂಡಿಸುತ್ತೇವೆ. ಕನ್ನಡ ಬೇರೆಯಲ್ಲ, ನಾರಾಯಣಗೌಡರು ಬೇರೆಯಲ್ಲ. ಯಾವ ತಪ್ಪಿಗಾಗಿ ಜೈಲುವಾಸ ನಾರಾಯಣಗೌಡರಿಗೆ, ಇವತ್ತು ಕರ್ನಾಟಕದಲ್ಲಿ ಕನ್ನಡಿಗರು ಒಗ್ಗಟ್ಟಾಗಿ ಒಕ್ಕೊರಲಿನ ಧ್ವನಿಯಂತೆ ಕೇಳಿಸುತ್ತದೆ ಎಂದರೆ ಅದರ ಹಿಂದಿನ ಶಕ್ತಿ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ನಾರಾಯಣ ಗೌಡರು. ಇಂತಹ ಕನ್ನಡ ಕಟ್ಟಾಳನ್ನು ಬಂಧಿಸಿರುವುದು ಸರ್ಕಾರಕ್ಕೆ ಶೋಭೆ ತರುವಂತಹದ್ದಲ್ಲ, ದ. ರಾಮಕೃಷ್ಣ ಹೆಗ್ಗಡೆಯವರು ಮುಖ್ಯಮಂತ್ರಿಯಾಗಿದ್ದಾಗ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಕನ್ನಡ ಕಾವಲು ಸಮಿತಿ ಅಧ್ಯಕ್ಷರಾಗಿದ್ದಂತಹವರು. ಕನ್ನಡಿಗರ ಕಷ್ಟ ಏನೆಂದು ಅವರಿಗೆ ತಿಳಿಯದ ವಿಷಯವೇನಲ್ಲ. ಹಾಗಾಗಿ ಯಾವುದೇ ಒತ್ತಡಕ್ಕೆ ಮಣಿಯದೇ ಈ ಕೂಡಲೇ ನಾರಾಯಣಗೌಡರನ್ನು ಬಿಡುಗಡೆ ಮಾಡಬೇಕೆಂದು ವೇದಿಕೆ ಆಗ್ರಹಿಸುತ್ತದೆ. ಭಾರತದಲ್ಲಿ ಪ್ರಾದೇಶಿಕ ಭಾಷಾ…
ಕೋವಿಡ್ ಸಂದರ್ಭದಲ್ಲಿ 40 ಸಾವಿರ ಕೋಟಿ ರೂ. ಹಗರಣ ನಡೆದಿದೆ ಎಂದು ತಮ್ಮ ಪಕ್ಷದ ಪ್ರಮುಖ ನಾಯಕರ ವಿರುದ್ಧವೇ ಗಂಭೀರ ಆರೋಪ ಮಾಡಿರುವ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಬಿಜೆಪಿ ನಾಯಕರು ಮೌನ ವಹಿಸಿರುವುದು ಏಕೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಪ್ರಶ್ನೆ ಮಾಡಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಇದು ಅತ್ಯಂತ ದೊಡ್ಡ ಹಗರಣ. ಯತ್ನಾಳ್ ಬಿಜೆಪಿಯ ಅತ್ಯಂತ ಪ್ರಮುಖ ನಾಯಕರಲ್ಲಿ ಒಬ್ಬರು. ಅವರ ಯಾವ ಹೇಳಿಕೆಯನ್ನೂ ಲಘುವಾಗಿ ಪರಿಗಣಿಸುವಂತಿಲ್ಲ. ಪ್ರತಿಯೊಂದಕ್ಕೂ ನಮ್ಮ ಸರ್ಕಾರದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವ ಬಿಜೆಪಿ ನಾಯಕರು ಯತ್ನಾಳ್ ಆರೋಪಕ್ಕೆ ಮೌನ ವಹಿಸಿರುವುದು ಹಲವು ಸಂಶಯಗಳಿಗೆ ಎಡೆ ಮಾಡಿಕೊಟ್ಟಿದೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ನಮ್ಮ ಶೇ.40 ಕಮಿಷನ್ ಆರೋಪಕ್ಕೆ ಯತ್ನಾಳ್ ಅವರೇ ಸಾಕ್ಷಿ ಒದಗಿಸಿದ್ದಾರೆ ಎಂದು ಶರಣ ಪ್ರಕಾಶ್ ಪಾಟೀಲ್ ಹೇಳಿದ್ದಾರೆ. ಮಾತೆತ್ತಿದರೆ ಪ್ರಧಾನಿ ನರೇಂದ್ರ ಮೋದಿಯವರ…
ಅಯೋಧ್ಯೆಯ ರಾಮಮಂದಿರದ 84 ಕಿ.ಮೀ. ವ್ಯಾಪ್ತಿಯಲ್ಲಿ ಮದ್ಯ ಮಾರಾಟವನ್ನು ಉತ್ತರ ಪ್ರದೇಶ ಸರ್ಕಾರ ನಿಷೇಧಿಸಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಕಾರ, ದೇವಸ್ಥಾನದ 84 ಕಿ.ಮೀ. ವ್ಯಾಪ್ತಿಯಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಜನವರಿ 22ರಂದು ನಡೆಯಲಿರುವ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೂ ಮುನ್ನವೇ ಈ ಕ್ರಮ. ಕಳೆದ ವರ್ಷ ಜೂನ್ ನಲ್ಲಿ, ಯುಪಿ ಸರ್ಕಾರವು ಅಯೋಧ್ಯೆ ಮತ್ತು ಮಥುರಾದಲ್ಲಿನ ದೇವಾಲಯಗಳಲ್ಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮದ್ಯಮುಕ್ತ ವಲಯಗಳನ್ನು ಘೋಷಿಸಿತ್ತು. ಎಲ್ಲಾ ಮದ್ಯದ ಅಂಗಡಿಗಳನ್ನು ಮುಚ್ಚಲಾಗಿದೆ ಅಥವಾ ಬೇರೆಡೆಗೆ ಸ್ಥಳಾಂತರಿಸಲಾಗಿದೆ. 2018 ರಿಂದ, ಅಯೋಧ್ಯೆ ನಗರದಲ್ಲಿ ಮದ್ಯ ಮತ್ತು ಮಾಂಸವನ್ನು ನಿಷೇಧಿಸಲು ಬೇಡಿಕೆಯಿದೆ. ಫೈಜಾಬಾದ್ ಜಿಲ್ಲೆಯನ್ನು ಅಯೋಧ್ಯೆ ಎಂದು ಮರುನಾಮಕರಣ ಮಾಡಿದ ನಂತರ ಬೇಡಿಕೆ ಬಲವಾಯಿತು.
ಚಿಕ್ಕಬಳ್ಳಾಪುರ: ಶಾಲಾ ಮುಖ್ಯ ಶಿಕ್ಷಕಿಯೊಬ್ಬರು ಹದಿಹರೆಯದ ವಿದ್ಯಾರ್ಥಿ ಜತೆ ರೊಮ್ಯಾಂಟಿಕ್ ಫೋಟೊಶೂಟ್ ಮಾಡಿಸಿದ ಘಟನೆ ನಡೆದಿದೆ. ಚಿಕ್ಕಬಳ್ಳಾಪುರದ ಚಿಂತಾಮಣಿ ತಾಲೂಕಿನ ಮುರುಗಮಲ್ಲ ಗ್ರಾಮದ ಸರ್ಕಾರಿ ಪ್ರೌಢಶಾಲೆಯಿಂದ ಮಕ್ಕಳನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗಲಾಗಿತ್ತು. ಈ ವೇಳೆ ವಿದ್ಯಾರ್ಥಿ ಜೊತೆ ಮುಖ್ಯ ಶಿಕ್ಷಕಿ ಪುಷ್ಪಲತಾ ಎಂಬವರು ಕೆನ್ನೆಗೆ ಮುತ್ತು ಕೊಡುವಂತೆ, ಸೀರೆ ಸೆರಗು ಎಳೆಯುವಂತೆ ರೊಮ್ಯಾಂಟಿಕ್ ಫೋಟೊಶೂಟ್ ಮಾಡಿಸಿದ್ದಾರೆ. ಮುಖ್ಯ ಶಿಕ್ಷಕಿಯ ವರ್ತನೆಗೆ ಸಾರ್ವಜನಿಕರು ಆಕ್ರೋಶಗೊಂಡಿದ್ದಾರೆ.
ಕಾಡಿನ ಸಂರಕ್ಷಣೆ, ಸಂವಿಧಾನದ ಅರಿವು, ಸಂವಿಧಾನದ ಮಹತ್ವದ ಬಗ್ಗೆ ಅರಿವು ಮೂಡಿಸುವ ಹಾಗೂ ಕಾಡಿನ ಮೂಲ ನಿವಾಸಿಗಳ ಬದುಕು ಮತ್ತು ಸಂಘರ್ಷದ ಕಥೆಯನ್ನು ಸವಿಸ್ತಾರವಾಗಿ ತೆರೆದಿಡುವ ಕಥಾ ಸಾರಾಂಶವನ್ನು ಹೊಂದಿರುವ ಅಡವಿ ಚಿತ್ರದ ಲಿರಿಕಲ್ ಸಾಂಗ್ ಅನ್ನು ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ ಅವರ ಕಾಲ, ಕಬಾಲಿ ಮುಂತಾದ ಹಿಟ್ ಚಿತ್ರಗಳನ್ನು ನಿರ್ದೇಶಿಸಿ ಈಗ ದೇಶಾದ್ಯಂತ ಭಾರಿ ಕುತೂಹಲದಿಂದ ನಿರೀಕ್ಷಿಸುತ್ತಿರುವ ತಂಗಲಾನ್ ಚಿತ್ರವನ್ನು ನಿರ್ದೇಶಿಸಿರುವ ದಕ್ಷಿಣ ಭಾರತದ ಸ್ಟಾರ್ ನಿರ್ದೇಶಕ ಪ. ರಂಜಿತ್ ಅವರು ಬಿಡುಗಡೆ ಮಾಡಿದ್ದಾರೆ. ಹಿರಿಯ ಸಂಗೀತ ನಿರ್ದೇಶಕ ಹಾಗೂ ಸಾಹಿತಿ ವಿ. ಮನೋಹರ್ ಸಾಹಿತ್ಯ ನೀಡಿರುವ ಖ್ಯಾತ ಗಾಯಕ ನವೀನ್ ಸಜ್ಜು ಹಾಡಿರುವ ಸಿಂಗಾರ ಸಿಂಗಾರ ತ್ವಾಟ ಎಂಬ ಲಿರಿಕಲ್ ವಿಡಿಯೋ ಹಾಡನ್ನು ಕೆಜಿಎಫ್ ಮುನಿಸಿಪಲ್ ಗ್ರೌಂಡ್ ನಲ್ಲಿ ಬಿಡುಗಡೆ ಮಾಡಿದರು. ಈ ಹಾಡು ವಿ. ಮನೋಹರ್ ಅವರ ಲೇಖನಿಯಿಂದ ಮೂಡಿ ಬಂದಿರುವ 2500 ನೇ ರಚನೆ ಎಂಬುದು ವಿಶೇಷ. ದಕ್ಷಿಣ ಭಾರತದ ಖ್ಯಾತ ನಿರ್ದೇಶಕ ಪಾರಂಜೀತ್…
ತುರುವೇಕೆರೆ: ತಾಲೂಕಿನ ಮಾಯಸಂದ್ರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಖಾಯಂ ವೈದ್ಯರು ಮತ್ತು ಸಿಬ್ಬಂದಿಗಳನ್ನು ನೇಮಿಸುವಂತೆ ಹಾಗೂ ಆಸ್ಪತ್ರೆಯ ಅವ್ಯವಸ್ಥೆಯನ್ನು ಆರೋಪಿಸಿ ಗ್ರಾಮಸ್ಥರು ಅಹೋರಾತ್ರಿ ಧರಣಿ ಮೂಲಕ ಸರ್ಕಾರಕ್ಕೆ ಒತ್ತಾಯಿಸಿದರು. ಈ ವೇಳೆ ಧರಣಿಯನ್ನು ಉದ್ದೇಶಿಸಿ ಯುವ ಮುಖಂಡ ರಮೇಶ್ ಮಾತನಾಡಿ, ಹಲವಾರು ವರ್ಷಗಳಿಂದ ಮಾಯಸಂದ್ರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಖಾಯಂ ವೈದ್ಯರು ಮತ್ತು ಸಿಬ್ಬಂದಿಗಳನ್ನು ಸರ್ಕಾರ ನೇಮಕ ಮಾಡಿಲ್ಲ, ಹೋಬಳಿಯ ಹತ್ತಾರು ಹಳ್ಳಿಗಳಿಂದ ನೂರಾರು ಬಡವರು, ರೈತರು, ಸಾರ್ವಜನಿಕರು ಪ್ರತಿನಿತ್ಯ ಆಸ್ಪತ್ರೆಗೆ ಭೇಟಿ ನೀಡುತ್ತಿದ್ದು, ತುರ್ತು ಸಂದರ್ಭದಲ್ಲಿ ಆಂಬುಲೆನ್ಸ್ ಸೇವೆ ಹಾಗೂ ತುರ್ತು ಚಿಕಿತ್ಸೆ ನೀಡಲು ಸಾಧ್ಯವಾಗುತ್ತಿಲ್ಲ, ಆಸ್ಪತ್ರೆಯಲ್ಲಿ ಕೆಲವು ಔಷಧಿಗಳು ದೊರೆಯುತ್ತಿಲ್ಲ, ರಕ್ತಪರೀಕ್ಷಾ ಕೇಂದ್ರದಲ್ಲಿ ಸಿಬ್ಬಂದಿಗಳಿಲ್ಲ, ತುರ್ತು ಸಂದರ್ಭಗಳಲ್ಲಿ ಖಾಸಗಿ ಆಸ್ಪತ್ರೆಗಳಿಗೆ ಭೇಟಿ ನೀಡಬೇಕು, ಹೀಗಾದರೆ ಬಡವರ ಕಥೆ ಏನು? ಆಸ್ಪತ್ರೆಯಲ್ಲಿ ಕೆಲವು ಸಿಬ್ಬಂದಿಗಳು ರೋಗಿಗಳೊಂದಿಗೆ, ಸಾರ್ವಜನಿಕರೊಂದಿಗೆ ನಿರ್ಲಕ್ಷದಿಂದ ವರ್ತಿಸುತ್ತಾರೆ ಎಂದು ಗಂಭೀರವಾಗಿ ಆರೋಪಿಸಿದರು. ದಲಿತ ಯುವ ಮುಖಂಡ ಜಯಣ್ಣ ಮಾತನಾಡಿ, ಮಾಯಸಂದ್ರ ಹೋಬಳಿಯಾದ್ಯಂತ ಹಲವಾರು ಖಾಸಗಿ…
ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪ ಮೇಯರ್ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ. ವಿಜಯಪುರ ಮಹಾನಗರ ಪಾಲಿಕೆ ಮೇಯರ್, ಉಪ ಮೇಯರ್ ಚುನಾವಣೆಗೆ 2024ರ ಜ.9 ರಂದು ಚುನಾವಣೆ ನಿಗದಿ ಮಾಡಿ ಚುನಾವಣಾ ಅಧಿಕಾರಿಯೂ ಆಗಿರುವ ಬೆಳಗಾವಿ ಪ್ರಾದೇಶಿಕ ಆಯುಕ್ತರು ಅಧಿಸೂಚನೆ ಹೊರಡಿಸಿದ್ದಾರೆ. ವಿಜಯಪುರ ಮಹಾನಗರ ಪಾಲಿಕೆಯು 35 ಸದಸ್ಯ ಬಲವನ್ನು ಹೊಂದಿದೆ. ಬಿಜೆಪಿ 17, ಕಾಂಗ್ರೆಸ್ 10, ಪಕ್ಷೇತರ 5, ಎಂಐಎಂ 2 ಹಾಗೂ 1 ಜೆಡಿಎಸ್ ಸದಸ್ಯರನ್ನು ಹೊಂದಿದೆ. ವಾರ್ಡ್ ಮರುವಿಂಗಡಣೆ, ಮೇಯರ್, ಉಪ ಮೇಯರ್ ಮೀಸಲಾತಿ ವಿಚಾರ ನ್ಯಾಯಾಲಯದಲ್ಲಿ ವ್ಯಾಜ್ಯವಿತ್ತು. ಕಲಬುರಗಿ ಹೈಕೋರ್ಟ್ ನಲ್ಲಿ ಕೆಲ ಸದಸ್ಯರು ಅರ್ಜಿ ಸಲ್ಲಿಸಿದ್ದ ಕಾರಣ ಚುನಾವಣೆಗೆ ತಡೆ ಬಿದ್ದಿತ್ತು. ಕಳೆದ ಅಕ್ಟೋಬರ್ 30 ರಂದು ನಡೆಯಬೇಕಿದ್ದ ಚುನಾವಣೆಗೂ ಹೈಕೋರ್ಟ್ ತಡೆ ನೀಡಿತ್ತು. ಮೇಯರ್ ಹಾಗೂ ಉಪ ಮೇಯರ್ ಸ್ಥಾನಗಳ ಮೀಸಲಾತಿ ವಿಚಾರದಲ್ಲಿ ಕೆಲ ಸದಸ್ಯರು ಅರ್ಜಿ ಸಲ್ಲಿಕೆ ಮಾಡಿದ್ದರಿಂದ ತಡೆ ನೀಡಲಾಗಿತ್ತು. ಸದ್ಯ ಇದೀಗಾ ನ್ಯಾಯಾಲಯದ ವಿಚಾರಣೆ…
ಹುಬ್ಬಳ್ಳಿ: ಕರ್ನಾಟಕದಲ್ಲಿ ವ್ಯವಹಾರ ನಡೆಸುವ ಅಂಗಡಿ, ಉದ್ದಿಮೆಗಳ ಮಾಲೀಕರು ಕಡ್ಡಾಯವಾಗಿ ಕನ್ನಡದಲ್ಲಿ ನಾಮಫಲಕ ಹಾಕಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅಭಿಪ್ರಾಯಪಟ್ಟಿದ್ದಾರೆ. ಕರ್ನಾಟಕದಲ್ಲಿ ಕಡ್ಡಾಯವಾಗಿ ಕನ್ನಡ ನಾಮಫಲಕ ಹಾಕಬೇಕು ಎಂದು ಕನ್ನಡ ಸಂಘಟನೆಗಳು ಹೋರಾಟಕ್ಕಿಳಿದಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವರು, ನನಗೆ ಬಂದಿರುವ ಮಾಹಿತಿ ಪ್ರಕಾರ ಕರ್ನಾಟಕದಲ್ಲಿ ಕೆಲವು ಅಂಗಡಿಯವರು ಉದ್ದೇಶಪೂರ್ವಕವಾಗಿ ಕನ್ನಡ ಬೋರ್ಡ್ ಹಾಕಲು ಬಯಸುವುದಿಲ್ಲ. ಇದನ್ನು ನಾನು ಒಪ್ಪುವುದಿಲ್ಲ ಎಂದರು. ಕರ್ನಾಟಕದಲ್ಲಿ ಬಹುಪಾಲು ಜನತೆ ಕನ್ನಡ ಮಾತನಾಡುವವರಿದ್ದಾರೆ. ಹೀಗಿರುವಾಗ, ಆಂಗ್ಲ ಮತ್ತು ಹಿಂದಿಯೊಂದಿಗೆ ಕನ್ನಡವನ್ನು ಸೇರಿಸುವಲ್ಲಿ ಅಂಗಡಿ ಮಾಲೀಕರಿಗೆ ಸಮಸ್ಯೆ ಏನು? ಈ ಬಗ್ಗೆ ಜನರು ಪ್ರಶ್ನಿಸಿದಾಗ ಕೆಲ ಉದ್ದಿಮೆಗಳ ಮಾಲೀಕರು ದುರಹಂಕಾರದಿಂದ ವರ್ತಿಸಿದ್ದಾರೆ. ನಾನು ಹಿಂಸಾಚಾರವನ್ನು ಒಪ್ಪುವುದಿಲ್ಲ, ಆದರೆ ಅವರು ಕನ್ನಡ ನಾಮಫಲಕಗಳನ್ನು ಪ್ರದರ್ಶಿಸಲು ಹಿಂದೇಟು ಹಾಕೋದ್ಯಾಕೆ? 20-30% ಅಂಗಡಿಯವರು ಸಹ ಕನ್ನಡದಲ್ಲಿ ಬೋರ್ಡ್ ಹಾಕುವುದಿಲ್ಲ. ಇದು ತಪ್ಪು. ಇಂಗ್ಲೀಷ್ ನ ಜೊತೆಗೆ ಕನ್ನಡದಲ್ಲಿ ನಾಮಫಲಕ ಹಾಕಿದರೆ ತೊಂದರೆಯೇನು? ಇದು ಬ್ರಿಟನ್ ಅಥವಾ ಇಂಗ್ಲೆಂಡ್…