Author: admin

ಬಾಗಲಕೋಟೆ: ಜಿಲ್ಲೆಯ ತುಂಬರಮಟ್ಟಿ ಕ್ರಾಸ್​ ಬಳಿ ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ​ಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ. ವಿಜಯಪುರ ಜಿಲ್ಲೆಯ ಹೊನಗನಹಳ್ಳಿ ಗ್ರಾಮದ ಮಲ್ಲು ಪೂಜಾರಿ(24), ಕಲ್ಲಪ್ಪ ಕೌಟಗಿ(34), ಕಾಮಾಕ್ಷಿ ಬಡಿಗೇರ(35), ತುಕಾರಾಮ್ ತಳೇವಾಡ(30) ಮೃತಪಟ್ಟವರಾಗಿದ್ದಾರೆ. ಇವರು ಬಾದಾಮಿಯಿಂದ ಹೊನಗನಹಳ್ಳಿಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಬಾಗಲಕೋಟೆ ಎಸ್‌ ಪಿ ಅಮರನಾಥ ರೆಡ್ಡಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜೆಸಿಬಿ ಮೂಲಕ ಕಬ್ಬು ತೆರವುಗೊಳಿಸಿ ಕಾರು ಹೊರತೆಗೆಯಲಾಯಿತು. ಮೃತದೇಹಗಳನ್ನು ಬೀಳಗಿ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.

Read More

ಲೋಕಸಭೆ ಚುನಾವಣೆಗೆ ಬಿಜೆಪಿ ಅಧಿಕೃತ ಪ್ರಚಾರ ಆರಂಭಿಸಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಪ್ರಧಾನಿಯವರ ವಾಸ್ತವ ಉಪಸ್ಥಿತಿಯಲ್ಲಿ ಪ್ರಚಾರ ಆರಂಭಿಸಿದರು. ವೀಡಿಯೊದಲ್ಲಿ ಅಯೋಧ್ಯೆ ಪ್ರತಿಷ್ಠಾ, ಜಿ20 ಮತ್ತು ಚಂದ್ರಯಾನ ಮಿಷನ್ ನ ದೃಶ್ಯಗಳಿವೆ. ವಂಶಾಡಳಿತ ಪಕ್ಷವನ್ನು ಸೋಲಿಸಲು ಯುವಕರು ಬಿಜೆಪಿಗೆ ಮತ ಹಾಕಬೇಕು ಎಂದು ಪ್ರಧಾನಿ ಹೇಳಿದರು. ಬಿಜೆಪಿಯ ಪ್ರಣಾಳಿಕೆಯನ್ನು ಯುವಕರು ನಿರ್ದೇಶಿಸಬೇಕು ಎಂದು ಮೋದಿ ಹೇಳಿದರು. ಜೆಪಿ ನಡ್ಡಾ ಅವರು ಸಪ್ನೆ ನಹೀ ಹಕೀಕತ್ ಬುಂದೇ ಹೈ, ‘ತಬಿ ತೋ ಸಾಬ್ ಮೋದಿ ಕೋ ಚುಮಂತೆ ಹೈ’ ಎಂಬ ಪ್ರಚಾರ ಗೀತೆಯನ್ನು ಬಿಡುಗಡೆ ಮಾಡಿದರು. ಭಾರತದಲ್ಲಿ ಪರಿಸ್ಥಿತಿ ಹದಗೆಟ್ಟಾಗ ದೇಶವು ಮೋದಿಯನ್ನು ಪ್ರಧಾನಿಯನ್ನಾಗಿ ಆಯ್ಕೆ ಮಾಡಿದೆ ಎಂದು ಹಾಡು ಹೇಳುತ್ತದೆ. ಅಭಿವೃದ್ಧಿ ಹೊಂದಿದ ದೇಶದ ಕನಸು ಕೇವಲ ಕನಸಾಗಿ ಉಳಿಯಲಿಲ್ಲ ಮತ್ತು ಮೋದಿ ಅದನ್ನು ನನಸಾಗಿಸಿದರು ಎಂದು ಹಾಡು ಹೇಳುತ್ತದೆ. ಪಕ್ಷದ ಎಲ್ಲಾ ಕಾರ್ಯಕರ್ತರು ಇದನ್ನು ಹೊರತೆಗೆಯಬೇಕು ಮತ್ತು ದೇಶದ ಮೂಲೆ ಮೂಲೆಗಳಲ್ಲಿ ಈ ಶಿಬಿರದ ಬಗ್ಗೆ…

Read More

ದೇಶವು ತನ್ನ 75 ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದೆ. ಗಣರಾಜ್ಯೋತ್ಸವವು 1950 ರಲ್ಲಿ ನಮ್ಮ ದೇಶದಲ್ಲಿ ಸಂವಿಧಾನವು ಜಾರಿಗೆ ಬಂದ ದಿನದ ಆಚರಣೆಯಾಗಿದೆ. ಈ ವರ್ಷದ ಗಣರಾಜ್ಯೋತ್ಸವ ಆಚರಣೆಗಳು ‘ವಿಕಸಿತ ಭಾರತ’ ಥೀಮ್ ಅನ್ನು ಆಧರಿಸಿವೆ. ಈ ಬಾರಿಯ ಮೆರವಣಿಗೆಯೂ ಮಹಿಳಾ ಶಕ್ತಿಯ ಘೋಷಣೆಯಾಗಿರುವುದು ಪ್ರಸ್ತುತವಾಗಿದೆ. ಸಾರ್ವಭೌಮತ್ವ ಜನರ ಮೇಲಿದೆ. ಇದು ಗಣರಾಜ್ಯ ಎಂಬ ಪದದ ಅರ್ಥ. ಪ್ರತಿ ಗಣರಾಜ್ಯೋತ್ಸವವು ದೇಶವು ಸಾರ್ವಭೌಮ ರಾಷ್ಟ್ರವಾಗುವುದನ್ನು ನೆನಪಿಸುತ್ತದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗಣರಾಜ್ಯೋತ್ಸವ ಆಚರಣೆಗಳು ಇಂಡಿಯಾ ಗೇಟ್‌ನಲ್ಲಿರುವ ಅಮರ್ ಜವಾನ್ ಜ್ಯೋತಿಗೆ ಪ್ರಧಾನಮಂತ್ರಿಯವರು ಮಾಲಾರ್ಪಣೆ ಮಾಡುವುದರೊಂದಿಗೆ ಪ್ರಾರಂಭವಾಗುತ್ತದೆ. ಭಾರತದ ಸೇನಾ ಸಾಮರ್ಥ್ಯ, ಸಾಂಸ್ಕೃತಿಕ ವೈವಿಧ್ಯತೆ ಮತ್ತು ತಾಂತ್ರಿಕ ಪ್ರಗತಿಯನ್ನು ಸಾರುವ ಭವ್ಯ ಮೆರವಣಿಗೆ, ರಾಷ್ಟ್ರಪತಿ ಭವನದ ಮುಂಭಾಗದಲ್ಲಿ ಧ್ವಜಾರೋಹಣದ ಸಂದರ್ಭದಲ್ಲಿ ಬಂದೂಕು ವಂದನೆ ಮತ್ತು ಸಶಸ್ತ್ರ ಪಡೆಗಳ ವಿವಿಧ ಶಾಖೆಗಳ ಅಧಿಕಾರಿಗಳಿಗೆ ವಿಶಿಷ್ಟ ಸೇವಾ ಪದಕಗಳನ್ನು ನೀಡಲಾಯಿತು. ದ್ವಿಪಕ್ಷೀಯ ಸಂಬಂಧಗಳನ್ನು ಉತ್ತೇಜಿಸಲು ವಿದೇಶಿ ರಾಷ್ಟ್ರಗಳ ಮುಖ್ಯಸ್ಥರು ಅತಿಥಿಗಳಾಗಿ ಬರುತ್ತಾರೆ. ಜನವರಿ 29 ರಂದು ನಡೆಯುವ…

Read More

ಇಂಡಿಯಾ ಮೈತ್ರಿಕೂಟದಲ್ಲಿ ಮಹಾ ಬಿರುಕು ಉಂಟಾಗಿದ್ದು, ಭಿನ್ನಮತ ಸ್ಪೋಟವಾಗಿದೆ. ಲೋಕಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ಟಿಎಂಸಿ(ತೃಣಮೂಲ ಕಾಂಗ್ರೆಸ್) ನಿರ್ಧರಿಸಿದೆ. ಈ ಮೂಲಕ ಇಂಡಿಯಾ ಮಿತ್ರಕೂಟಕ್ಕೆ ಭಾರೀ ದೊಡ್ದ ಹಿನ್ನಡೆಯಾಗಿದ್ದು, ಇಂಡಿಯಾ ಮಿತ್ರಕೂಟಕ್ಕೆ ಬೆಂಬಲ ನೀಡಿದ್ದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದೀಗ ಲೋಕಸಭೆ ಚುನಾವಣೆಯಲ್ಲಿ ತಮ್ಮ ರಾಜ್ಯದಲ್ಲಿ ಟಿಎಂಸಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಹೇಳಿದ್ದಾರೆ. ಈ ಕುರಿತು ಮಾತನಾಡಿದ ಪಶ್ಚಿಮ ಬಂಗಾಳ ಸಿಎಂ ಹಾಗೂ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ, ಲೋಕಸಭೆ ಚುನಾವಣೆಯಲ್ಲಿ ಏಕಾಂಗಿ ಸ್ಪರ್ಧೆಗೆ ಟಿಎಂಸಿ ನಿರ್ಧಾರ ಮಾಡಿದೆ.  ಪ.ಬಂಗಾಳದಲ್ಲಿ ಯಾವುದೇ ಹೊಂದಾಣಿಕೆ ಇಲ್ಲ. ಟಿಎಂಸಿ ಯಾರೊಂದಿಗೂ ಮೈತ್ರಿ ಮಾಡಿಕೊಳ್ಳಲ್ಲ. ಟಿಎಂಸಿ ಯಾರ ಜತೆಗೂ ಕೈಜೋಡಿಸಲ್ಲ ಎಂದಿದ್ದಾರೆ. ಕಾಂಗ್ರೆಸ್ ಪಕ್ಷ ಬೇಕಿದ್ದರೇ ಬಿಜೆಪಿ ವಿರುದ್ದ 300 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿ. ಯಾವುದೇ ಮೈತ್ರಿ ಇಲ್ಲ ಎಂದು ಮಮತಾ ಬ್ಯಾನರ್ಜಿ ಸ್ಪಷ್ಟನೆ ನೀಡಿದ್ದಾರೆ.

Read More

ಉತ್ತರ ಪ್ರದೇಶ: ಟೆಂಪೋ ಹಾಗೂ ಆಟೋ ರಿಕ್ಷಾ ನಡುವೆ ಭೀಕರ ಅಪಘಾತ ನಡೆದ ಪರಿಣಾಮ 12 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಶಹಜಹಾನ್ ಪುರದದಲ್ಲಿ ಸಂಭವಿಸಿದೆ. ವೇಗವಾಗಿ ಬಂದ ಡಂಪರ್ ಆಟೋ ರಿಕ್ಷಾಗೆ ಡಿಕ್ಕಿ ಹೊಡೆದಿದೆ. ದಟ್ಟವಾದ ಮಂಜಿನಿಂದ ಉಂಟಾದ ಕಡಿಮೆ ಗೋಚರತೆಯು ಅಪಘಾತಕ್ಕೆ ಕಾರಣವಾಗಿದೆ ಎನ್ನಲಾಗಿದೆ. ಅಲ್ಲಾಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಫರೂಕಾಬಾದ್ ರಸ್ತೆಯಲ್ಲಿ ಘರ್ಷಣೆ ಸಂಭವಿಸಿದ್ದು, ಘಟನೆಯ ಬಗ್ಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ದುಃಖತಪ್ತ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. ಗಾಯಾಳುಗಳ ತಕ್ಷಣದ ಚಿಕಿತ್ಸೆಗೆ ಆದ್ಯತೆ ನೀಡಬೇಕು ಮತ್ತು ಮೃತರ ಕುಟುಂಬಗಳಿಗೆ ಸಾಧ್ಯವಿರುವ ಎಲ್ಲ ನೆರವು ನೀಡುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.

Read More

ತುಮಕೂರು: ತುಮಕೂರು ನಗರದ ಬಾಲಕಿಯರ ಬಾಲ ಮಂದಿರದಲ್ಲಿ ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬಾಲಕಿಯು ಮೈಸೂರು ಮೂಲದವರಾಗಿದ್ದು, ಅಪ್ರಾಪ್ತ ಬಾಲಕಿಗೆ ಬಾಲ ಮಂದಿರದಲ್ಲಿ ಆಶ್ರಯ ನೀಡಲಾಗಿತ್ತು. ಇದೀಗ ಬೆಳ್ಳಂ ಬೆಳಗ್ಗೆ ಬಾಲ ಮಂದಿರದಲ್ಲಿಯೇ ನೇಣಿಗೆ ಶರಣಾಗಿದ್ದಾರೆ. ಇನ್ನು ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಘಟನೆ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಮುಸ್ಲಿಂ ಸಮುದಾಯಕ್ಕೆ ಸೇರಿದ ಐವರನ್ನು ಸಾರ್ವಜನಿಕವಾಗಿ ಥಳಿಸಿದ್ದ ಕೃತ್ಯದಲ್ಲಿ ಭಾಗಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಪೊಲೀಸರಿಗೆ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದೆ. ಇನ್‌ ಸ್ಪೆಕ್ಟ‌ರ್ ಎ.ವಿ. ಪರ್ಮಾರ್, ಸಬ್‌ ಇನ್‌ ಸ್ಪೆಕ್ಟರ್ ಡಿ.ಬಿ. ಕುಮಾವತ್ ಮತ್ತು ಇಬ್ಬರು ಕಾನ್‌ ಸ್ಟೆಬಲ್‌ಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಗಳಾದ ಬಿ.ಆರ್. ಗವಾಯಿ ಹಾಗೂ ಸಂದೀಪ್ ಮೆಹ್ತಾ ಅವರಿದ್ದ ಪೀಠ ನಡೆಸಿತು. ‘ಜನರನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿಸಲು ನಿಮಗೆ ಅಧಿಕಾರ ಕೊಟ್ಟವರು ಯಾರು’ ಎಂದು ಈ ವೇಳೆ ನ್ಯಾಯಪೀಠ ಖಾರವಾಗಿ ಪ್ರಶ್ನಿಸಿದೆ. ಆರೋಪಿಗಳನ್ನು ಬಂಧಿಸುವ ಮತ್ತು ವಿಚಾರಣೆಗೆ ಒಳಪಡಿಸುವ ಕುರಿತ ಸುಪ್ರೀಂ ಕೋರ್ಟ್‌ ನ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ಗುಜರಾತ್ ಹೈಕೋರ್ಟ್, 2023ರ ಅಕ್ಟೋಬರ್ 19ರಂದು ಈ ನಾಲ್ವರಿಗೆ 14 ದಿನಗಳ ಜೈಲು ಶಿಕ್ಷೆ ವಿಧಿಸಿತ್ತು. ಆದೇಶವನ್ನು ಪ್ರಶ್ನಿಸಲು ಪೊಲೀಸರಿಗೆ ಅವಕಾಶ ನೀಡುವ ಉದ್ದೇಶದಿಂದ ಹೈಕೋರ್ಟ್, ತನ್ನ ಆದೇಶದ ಅನುಷ್ಠಾನಕ್ಕೆ ಮೂರು ತಿಂಗಳ ತಡೆಯಾಜ್ಞೆ ನೀಡಿತ್ತು. ಹೈಕೋರ್ಟ್‌ ಆದೇಶ ಪ್ರಶ್ನಿಸಿ ಪೊಲೀಸರು ಸುಪ್ರಿಂ ಕೋರ್ಟ್…

Read More

ರಾಮ ದೇವರಲ್ಲ, ಡಾ.ಬಿ.ಆರ್. ಅಂಬೇಡ್ಕ‌ರ್ ದೇವರು ಎಂದು ವಾಟ್ಸಪ್ ಸ್ಟೇಟಸ್ ಹಾಕಿದ್ದ ಪರಿಶಿಷ್ಟ ಜಾತಿಗೆ ಸೇರಿದ ವಿದ್ಯಾರ್ಥಿಯನ್ನು, ಬಲವಂತವಾಗಿ ಹನುಮಾನ್ ದೇವಸ್ಥಾನಕ್ಕೆ ಕರೆದೊಯ್ದು ಒತ್ತಾಯಪೂರ್ವಕವಾಗಿ ‘ಜೈ ಶ್ರೀರಾಮ್’ ಎಂದು ಹೇಳಿಸಿ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿರುವ ಆರೋಪದ ಮೇಲೆ ಹುಮನಾಬಾದ್ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಹುಮನಾಬಾದ್ ಪಟ್ಟಣದ ಅಭಿಷೇಕ್, ರಿತೇಶ ರೆಡ್ಡಿ. ಸುನೀಲ ರೆಡ್ಡಿ ಹಾಗೂ ಅಭಿಷೇಕ ತೆಲಂಗ ಬಂಧಿತರು. ಹುಮನಾಬಾದ್ ತಾಲ್ಲೂಕಿನ ಹುಣಸಗೇರಾ ಗ್ರಾಮದ ದರ್ಶನ್ ಲಕ್ಷ್ಮಣ ಕಟ್ಟಿಮನಿ ಹಲ್ಲೆಗೊಳಗಾದ ದ್ವಿತೀಯ ಪಿಯು ವಿದ್ಯಾರ್ಥಿ. ದರ್ಶನ್ ಎಂಬ ವಿದ್ಯಾರ್ಥಿ ಜನವರಿ 22 ರಂದು ‘ರಾಮ ದೇವರಲ್ಲ, ಡಾ.ಬಿ.ಆರ್. ಅಂಬೇಡ್ಕ‌ರ್ ದೇವರು’ ಎಂದು ವಾಟ್ಸಪ್‌ ನಲ್ಲಿ ಸ್ಟೇಟಸ್ ಇಟ್ಟುಕೊಂಡಿದ್ದ. ಇದನ್ನು ನೋಡಿದ ಅಭಿಷೇಕ್, ರಿತೇಶ ರೆಡ್ಡಿ, ಸುನೀಲ ರೆಡ್ಡಿ ಹಾಗೂ ಅಭಿಷೇಕ ತೆಲಂಗ ಅವರು ದರ್ಶನ್ ನನ್ನು ವಾಹನದಲ್ಲಿ ಹನುಮಾನ್ ದೇವಸ್ಥಾನಕ್ಕೆ ಕರೆದೊಯ್ದು ಜೈ ಶ್ರೀರಾಮ್ ಎಂದು ಹೇಳಿಸಿ ಕಪಾಳಕ್ಕೆ ಹೊಡೆದಿದ್ದಾರೆ ಎಂದು ಎಸ್ ಪಿ ತಿಳಿಸಿದ್ದಾರೆ.

Read More

ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ) ಏರ್ ಇಂಡಿಯಾಗೆ 1.10 ಕೋಟಿ ರೂ. ಕೆಲವು ದೀರ್ಘ-ಪ್ರಯಾಣದ ಮಾರ್ಗಗಳಲ್ಲಿ ಕಾರ್ಯನಿರ್ವಹಿಸುವ ವಿಮಾನಗಳಲ್ಲಿ ಸುರಕ್ಷತಾ ನಿಯಮಗಳ ಉಲ್ಲಂಘನೆಯ ಆವಿಷ್ಕಾರವನ್ನು ಈ ಕ್ರಮ ಅನುಸರಿಸುತ್ತದೆ. DGCA ಹೊರಡಿಸಿದ ಹೇಳಿಕೆಯ ಪ್ರಕಾರ, ಏರ್ ಇಂಡಿಯಾ ಉದ್ಯೋಗಿ ಸ್ವತಃ ವಿವಿಧ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ವಿಮಾನಯಾನ ಸಂಸ್ಥೆಯ ವಿರುದ್ಧ ವರದಿಯನ್ನು ಸಲ್ಲಿಸಿದ್ದಾರೆ. ವಿಮಾನಯಾನ ನಿಯಂತ್ರಕರು ವರದಿಯನ್ನು ಕೂಲಂಕಷವಾಗಿ ಪರಿಶೀಲಿಸಿದ್ದು, ಆರೋಪಗಳು ನಿಜವೆಂದು ಕಂಡುಬಂದಿದೆ ಎಂದು ಹೇಳಿದ್ದಾರೆ. ಕೆಲವು ಪ್ರಮುಖ ದೀರ್ಘಾವಧಿಯ ಮಾರ್ಗಗಳಲ್ಲಿ ಏರ್ ಇಂಡಿಯಾ ನಿರ್ವಹಿಸುವ ವಿಮಾನಗಳಲ್ಲಿ ಭದ್ರತಾ ಉಲ್ಲಂಘನೆಯ ಆರೋಪಗಳಿವೆ. ಏರ್ ಇಂಡಿಯಾ ಲಿಮಿಟೆಡ್ ವ್ಯವಸ್ಥಾಪಕರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ.

Read More

ಬೆಂಗಳೂರು: ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಜ. 26ರಂದು ಗಣರಾಜ್ಯೋತ್ಸವ ಸಮಾರಂಭ ನಡೆಯಲಿದ್ದು, ಎರಡು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ 1,500 ಮಕ್ಕಳು ಭಾಗವಹಿಸಲಿದ್ದಾರೆ. ಮೈದಾನದಲ್ಲಿ ಪೂರ್ವಭಾವಿ ಸಿದ್ಧತೆಗಳನ್ನು ಪರಿಶೀಲಿಸಿದ ನಂತರ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾ‌ರ್ ಗಿರಿನಾಥ್, ಹೆಗ್ಗನಹಳ್ಳಿ ಕರ್ನಾಟಕ ಪಬ್ಲಿಕ್ ಶಾಲೆಯ 700 ಮಕ್ಕಳು, ಪಿಳ್ಳಣ್ಣಗಾರ್ಡನ್ ಬಿಬಿಎಂಪಿ ಸಂಯುಕ್ತ ಪದವಿಪೂರ್ವ ಕಾಲೇಜಿನ 700 ಮಕ್ಕಳು ನೃತ್ಯ ಮಾಡಲಿದ್ದಾರೆ ಎಂದು ತಿಳಿಸಿದರು. ಕೇರಳ ಪೊಲೀಸ್, ಸ್ಕೌಟ್ಸ್-ಗೈಡ್ಸ್, ಎನ್‌ ಸಿಸಿ, ಸೇವಾದಳ ಮತ್ತು ವಿವಿಧ ಶಾಲೆಗಳ ಮಕ್ಕಳು ಕವಾಯತು ಮತ್ತು ಬ್ಯಾಂಡ್ ‌ಗಳನ್ನು 38 ತುಕಡಿಗಳಲ್ಲಿ 1,150 ಮಂದಿ ನಡೆಸಿಕೊಡಲಿದ್ದಾರೆ. ಎಂಇಜಿ ತಂಡ ‘ಕಳರಿಪಯಟ್ಟು’, ಎಎಸ್‌ ಸಿ ಸೆಂಟರ್‌ ನ ಅನೀಶ್ ಥಾಮಸ್ ತಂಡದವರು ‘ದ್ವಿಚಕ್ರ ವಾಹನ ಸಾಹಸ’ ಪ್ರದರ್ಶನ ನೀಡಲಿದ್ದಾರೆ. ಎಸ್ ‌ಎಫ್ ವಿಶೇಷ ತಂಡದ ಜೇಮ್ಸ್ ಅವರು ‘ಅಡಗು ತಾಣಗಳಲ್ಲಿ ಹೊಕ್ಕು ದಾಳಿ ಮಾಡುವ ನಿರೂಪಣೆ’ಯನ್ನು ನಡೆಸಿ ಕೊಡಲಿದ್ದಾರೆ ಎಂದು ಹೇಳಿದರು. ನಗರ ಪೊಲೀಸ್ ಕಮಿಷನರ್‌ ದಯಾನಂದ್,…

Read More