Author: admin

ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ನಟ ಮತ್ತು ದೇಸಿಯ ಮುರ್ಪೊಕ್ಕು ದ್ರಾವಿಡ ಕಳಗಂ (DMDK) ಸಂಸ್ಥಾಪಕ ವಿಜಯಕಾಂತ್ ಗುರುವಾರ ಬೆಳಗಿನ ಜಾವ ಚೆನ್ನೈಯ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು.  ನ್ಯೂಮೋನಿಯಾ ಜ್ವರ ಮತ್ತು ಕೊರೊನಾ ಸೋಂಕಿನಿಂದಾಗಿ ಚೆನ್ನೈನ ಎಂಐಒಟಿ ಇಂಟರ್ನ್ಯಾಷನಲ್ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯ ತೀವ್ರ ಕ್ಷೀಣಿಸಿದ್ದರಿಂದ ನಿನ್ನೆ ರಾತ್ರಿಯಿಂದ ಅವರು ವೆಂಟಿಲೇಟರ್ ಬೆಂಬಲದಲ್ಲಿದ್ದರು. ಕ್ಯಾಪ್ಟನ್ ವಿಜಯಕಾಂತ್ ಅವರು ನ್ಯುಮೋನಿಯಾಕ್ಕೆ ದಾಖಲಾದ ನಂತರ ವೆಂಟಿಲೇಟರಿ ಬೆಂಬಲದಲ್ಲಿದ್ದರು. ವೈದ್ಯಕೀಯ ಸಿಬ್ಬಂದಿಯ ಅತ್ಯುತ್ತಮ ಪ್ರಯತ್ನಗಳ ಹೊರತಾಗಿಯೂ, ಇಂದು ಬೆಳಗ್ಗೆ ನಿಧನರಾದರು ಎಂದು ಆಸ್ಪತ್ರೆಯ ಬುಲೆಟಿನ್ ದೃಢಪಡಿಸಿದೆ.

Read More

ಯುವನಿಧಿ ಯೋಜನೆ ನೋಂದಣಿ ಪ್ರಕ್ರಿಯೆಗೆ ಚಾಲನೆ ದೊರಕಿದೆ. ಆದರೆ,  ಅರ್ಜಿ ಸಲ್ಲಿಕೆಗೆ  ಹತ್ತಾರು ನಿಬಂಧನೆಗಳಿರುವ ಹಿನ್ನೆಲೆ  ಮೈಸೂರಿನಲ್ಲಿ ಪದವೀಧರರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಪದವೀಧರರು ಕರ್ನಾಟಕ ಒನ್ ಕೇಂದ್ರದತ್ತ ಸುಳಿಯುತ್ತಿಲ್ಲ. ಅದರ ಬದಲಾಗಿ ಗೃಹಲಕ್ಷ್ಮಿ ತಿದ್ದುಪಡಿ ಸಮಸ್ಯೆ ಹೊತ್ತು ಬರುವವರ ಸಂಖ್ಯೆಯೇ ಹೆಚ್ಚಾಗಿದೆ. ಯುವನಿಧಿ ಸರ್ಕಾರದ ನಿಬಂಧನೆಗಳ  ಪ್ರಕಾರ ಪದವಿ ಮುಗಿದು 6 ತಿಂಗಳು ಮುಗಿದಿರಬೇಕು ಎನ್ನುವ ನಿಬಂಧನೆ ಇದೆ. ಆದರೆ 2023ರ ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಆಗಿ ಈಗ ಎರಡು ತಿಂಗಳ ಹಿಂದೆ ಮುಗಿದಿದೆ. ನ್ಯಾಷನಲ್ ಅಕಾಡೆಮಿಕ್ ಡೆಪಾಸಿಟರಿ(ಎನ್ಎಡಿ) ಯಲ್ಲಿ ಪದವೀಧರ ನೋಂದಣಿ ಆಗಿರಬೇಕು. ಕಳೆದ ಆರು ತಿಂಗಳಿಂದ ಯಾವುದೇ ಖಾಸಗಿ, ಅಥವಾ ಸ್ವಯಂ ಉದ್ಯೋಗದಲ್ಲೂ ಇರಬಾರದು ಎಂಬ ನಾನಾ ನಿಬಂಧನೆಗಳಿದ್ದು ಇದು  ಅರ್ಜಿ ಸಲ್ಲಿಕೆಗೆ ತಡೆಯಾಗಿದೆ. ಹೀಗಾಗಿ ವಿದ್ಯಾರ್ಥಿಗಳಿಂದ ಅರ್ಜಿ ಸಲ್ಲಿಸಲು ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜೊತೆಗೆ ಇತ್ತ ಗೃಹಲಕ್ಷ್ಮಿ ಯೋಜನೆ ಅರ್ಹ ಫಲಾನುಭವಿಗಳಿಗೂ ಹಣ ಬಾರದೆ  ಮಹಿಳೆಯರು ಪರದಾಟ ನಡೆಸುತ್ತಿದ್ದಾರೆ. ಅಲ್ಲಿ…

Read More

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ 2024ಕ್ಕೆ ಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗವು ಪರಿಷ್ಕೃತ ವೇಳಾ ಪಟ್ಟಿಯನ್ನು ಹೊರಡಿಸಿದೆ ಎಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹಕ್ಕು ಮತ್ತು ಆಕ್ಷೇಪಣೆ ಇತ್ಯರ್ಥ ಪಡಿಸುವ ದಿನಾಂಕವನ್ನು ಜನವರಿ 12ಕ್ಕೆ , ದತ್ತಾಂಶಗಳನ್ನು ಸಂಗ್ರಹಿಸಿ ಮತ್ತು ಪರಿಶೀಲಿಸುವ ದಿನಾಂಕವನ್ನು ಜನವರಿ 17ಕ್ಕೆ ಹಾಗೂ ಅಂತಿಮ ಮತದಾರರ ಪಟ್ಟಿಯನ್ನು ಜನವರಿ 22ಕ್ಕೆ ಪರಿಷ್ಕೃತ ವೇಳಪಟ್ಟಿಯಲ್ಲಿ ನಿಗದಿಪಡಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಎಲ್ಲಾ ಜಾತಿ–ಧರ್ಮದವರಿಗೂ ಆದ್ಯತೆ ನೀಡಬೇಕು.  ಕೋಲಾರ ಜಿಲ್ಲೆ ಅಪರಾಧ ಮುಕ್ತ ಆಗಬೇಕು ಎಂದು ಅಧಿಕಾರಿಗಳಿಗೆ  ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು. ಕೋಲಾರದಲ್ಲಿ ಸಾರ್ವಜನಿಕರ ಸಮಸ್ಯೆ ಆಲಿಸಿದರು. ಬಳಿಕ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ,  ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ದೇವಸ್ಥಾನದ ಮತ್ತು ವಕ್ಫ್  ಬೋರ್ಡ್ ಗೆ  ಸಂಬಂಧಪಟ್ಟ ಸ್ಥಳಗಳು, ಜಮೀನು ಆಯಾ ಆಯಾ ಸಂಸ್ಥೆಗೆ ಹೋಗಬೇಕು. ಇವರ ಜಾಗ ಅವರಿಗೆ, ಅವರ ಜಾಗ ಇವರಿಗೆ ಹೋಗದಂತೆ, ತಾಂತ್ರಿಕ ದಾಖಲಾತಿಗಳ ಗೊಂದಲ ಉಂಟಾಗದಂತೆ ಸಮಗ್ರವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು. ವಿಶ್ವಕರ್ಮ ಯೋಜನೆ ಸೇರಿದಂತೆ ಯಾವುದೇ ಯೋಜನೆಗಳಲ್ಲೂ ನಿಯಮಾನುಸಾರ ಎಲ್ಲಾ ಜಾತಿ ಧರ್ಮದವರಿಗೂ ಅವಕಾಶ ನೀಡಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸ್ಪಷ್ಟ ಸೂಚನೆಯನ್ನು ನೀಡಿದರು. ಹಾಗೆಯೇ ಕೋಲಾರ ಜಿಲ್ಲೆಯಲ್ಲಿ ಅಪರಾಧಗಳ ಹೆಚ್ಚಳ ಆದರೆ ನಾನು ಸಹಿಸಲ್ಲ. ಕೋಲಾರ ಅಪರಾಧ ಮುಕ್ತ ಆಗಬೇಕು. ಚಾಳಿಬಿದ್ದ ಆರೋಪಿಗಳನ್ನು ಗಡಿಪಾರು ಮಾಡುವುದೂ ಸೇರಿದಂತೆ ಇತರೆ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ರಕ್ಷಣಾಧಿಕಾರಿಗಳಿಗೆ  ಸಿಎಂ ಸಿದ್ದರಾಮಯ್ಯ ಸ್ಪಷ್ಟ ಸೂಚನೆ ನೀಡಿದರು.

Read More

ದೇಶ ನಡೆಯುತ್ತಿರುವುದು ಸಂವಿಧಾನದ ಮೇಲೆ ಹೊರತು ಭಗವದ್ಗೀತೆ, ಕುರಾನ್ ಮೇಲೆ ಅಲ್ಲ ಎಂದು ಗ್ರಾಮೀಣಾಭಿವೃದ್ಧಿ  ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ,  ಈ ಹಿಂದೆ ರಾಜ್ಯದಲ್ಲಿ ಹಿಂದುತ್ವದ ಸರ್ಕಾರ ಇತ್ತು. ಈಗ ಸಂವಿಧಾನದ ಸರ್ಕಾರ ಇದೆ. ದೇಶ ನಡೆಯುತ್ತಿರುವುದು ಭಗವದ್ಗೀತೆ ಮೇಲೆ ಅಲ್ಲ, ಕುರಾನ್ ಮೇಲೆ ಅಲ್ಲ, ಬೈಬಲ್ ಮೇಲೆ ಅಲ್ಲ. ದೇಶ ನಡೆಯುತ್ತಿರುವುದು ಸಂವಿಧಾನದ ಮೇಲೆ. ಯಾರು ಏನೆ ಅಂದರೂ ಕರ್ನಾಟಕದಲ್ಲಿ ನಡೆಯುತ್ತಿರುವುದು ಸಂವಿಧಾನದ ಸರ್ಕಾರವೇ ಎಂದು ಹೇಳಿದರು. ಸ್ಪೀಕರ್ ಪೀಠದ ಮೇಲೆ ಕುಳಿತು  ವಿಶ್ವೇಶ್ವರ ಹೆಗಡೆ ಕಾಗೇರಿ ನಾನು ಆರ್‌ ಎಸ್‌ ಎಸ್‌ ನವರು ಎಂದಿದ್ದರು. ಕೋವಿಡ್ ಕಾಲದಲ್ಲಿ ಬಿಜೆಪಿಯವರು ಹೆಣದ ಮೇಲೆ ಹಣ ಮಾಡಿದ್ದಾರೆ. ಯತ್ನಾಳ್‌ ಆರೋಪಕ್ಕೆ ವಿಜಯೇಂದ್ರ ಉತ್ತರ ಕೊಡಬೇಕು ಎಂದು ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದರು.

Read More

ಕಳೆದ ವರ್ಷ ಭಾರತ್ ಜೋಡೋ ಯಾತ್ರೆ ನಡೆಸಿದ್ದ ಕಾಂಗ್ರೆಸ್ ಇದೀಗ  ಅದೇ ಮಾದರಿಯಲ್ಲಿ ಭಾರತ ನ್ಯಾಯ ಯಾತ್ರೆ ನಡೆಸಲು ಮುಂದಾಗಿದೆ. ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಈ ಭಾರತ ನ್ಯಾಯ ಯಾತ್ರೆ ನಡೆಸಲು ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಸಿದ್ಧತೆ ನಡೆಸಿದ್ದಾರೆ.  ಜನವರಿ 14 ರಂದು ಭಾರತ ನ್ಯಾಯ ಯಾತ್ರೆ  ಪ್ರಾರಂಭವಾಗಲಿದ್ದು, ಮಣಿಪುರದಿಂದ ಮುಂಬೈವರೆಗೆ ನಡೆಯಲಿದೆ. ಈಶಾನ್ಯ ಭಾರತದ ರಾಜ್ಯವಾದ ಮಣಿಪುರದಿಂದ ಜನವರಿ 14 ರಂದು ಪ್ರಾರಂಭವಾಗುವ ಪಾದಯಾತ್ರೆಯು 30 ತಿಂಗಳವರೆಗೆ ಇರುತ್ತದೆ. ಮಾರ್ಚ್‌ 20 ರಂದು ಮುಂಬೈನಲ್ಲಿ ಯಾತ್ರೆ ಅಂತ್ಯಗೊಳ್ಳಲಿದೆ. 6,200 ಕಿ.ಮೀ ರಾಹುಲ್ ಗಾಂಧಿ ಯಾತ್ರೆ ಸಾಗಲಿದೆ. 14 ರಾಜ್ಯಗಳ 85 ಜಿಲ್ಲೆಗಳಲ್ಲಿ ಸಂಚಾರ ನಡೆಯಲಿದೆ. 14 ರಾಜ್ಯ 85 ಜಿಲ್ಲೆಗಳು ಕಾಂಗ್ರೆಸ್‌ ನ ಈ ಭಾರತ ನ್ಯಾಯ ಯಾತ್ರೆ 14 ರಾಜ್ಯಗಳು ಮತ್ತು 85 ಜಿಲ್ಲೆಗಳ ಮೂಲಕ ಹಾದುಹೋಗುತ್ತದೆ. ಇದು ಅಸ್ಸಾಂ, ನಾಗಾಲ್ಯಾಂಡ್, ಮೇಘಾಲಯ, ಬಿಹಾರ, ಜಾರ್ಖಂಡ್, ಬಂಗಾಳ, ಛತ್ತೀಸ್‌ಗಢ, ಮಧ್ಯಪ್ರದೇಶ, ಯುಪಿ, ರಾಜಸ್ಥಾನ, ಗುಜರಾತ್ ಮತ್ತು ಮೂಲಕ…

Read More

ಮೈಸೂರು ತಾಲ್ಲೂಕು ವರುಣ ಹೋಬಳಿ ಸರ್ಕಾರಿ ಉತ್ತನಹಳ್ಳಿಯ ಅಂಬೇಡ್ಕರ್ ಬೀದಿಯಲ್ಲಿ 6 ವರ್ಷದ ಮಗು ಮದ್ಯ ಮಾರಾಟದಲ್ಲಿ ತೊಡಗಿದ್ದು ಇದಕ್ಕೆ ಸಹಕರಿಸುತ್ತಿರುವ, ಗ್ರಾಮದ ಕೆಲವು ಯಜಮಾನರು ಮುಖಂಡರ ಸಹಿತ ಸದರಿ ಅಕ್ರಮದಲ್ಲಿ ಭಾಗಿಯಾಗಿರುವ ಎಲ್ಲರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಕೋರಿ  ಮೈಸೂರು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ , ಸಹಾಯಕ ಕಾರ್ಮಿಕ ಆಯುಕ್ತರಿಗೆ ಸಾಮಾಜಿಕ ಹೋರಾಟಗಾರ ಮತ್ತು ಪತ್ರಕರ್ತ ರವೀಂದ್ರ ಎಂ. ಅವರು ದೂರು ಸಲ್ಲಿಸಿದ್ದಾರೆ. ಈ ಕುರಿತು ದೂರು ಸಲ್ಲಿಸಿರುವ ಎಂ.ರವೀಂದ್ರ, ಉತ್ತನಹಳ್ಳಿಯ ನಿವಾಸಿಯಾದ ನಾನು ಮೈಸೂರು ತಾಲೂಕಿನ ಎಸ್ ಉತ್ತನಹಳ್ಳಿ ಗ್ರಾಮದ ಮನೆಯಲ್ಲಿ, ಬಾಲಕಾರ್ಮಿಕನು ಮದ್ಯ ಮಾರಾಟ ಮಾಡುವ ಕೆಲಸವನ್ನು ಮಾಡುತ್ತಿದ್ದ ಎಂಬುದಕ್ಕೆ ಸಂಬಂಧಿಸಿದಂತೆ ವಿಡಿಯೋ ಚಿತ್ರೀಕರಣ ಮಾಡಿ ಮಕ್ಕಳ ಸಹಾಯವಾಣಿ 1098 ಇಲ್ಲಿಗೆ ಕರೆ ಮಾಡಿ ತಿಳಿಸಿರುತ್ತೇನೆ. ಸದರಿಯವರ ನಿರ್ದೇಶನದಂತೆ ಮೈಸೂರಿನ DCPU ರವರಿಗೆ ಸಹ ಈ ಬಗ್ಗೆ ತಿಳಿಸಿ, ಅವರ ಸೂಚನೆ ಮೇರೆಗೆ ಮೊಬೈಲ್ ಸಂಖ್ಯೆ 8951069897 ಇಲ್ಲಿಗೆ ಹಾಗೂ DCPU ರವರ 9972505030…

Read More

ಎಂಫಿಲ್ (ಮಾಸ್ಟರ್ ಆಫ್ ಫಿಲಾಸಫಿ) ಯುನಿವರ್ಸಿಟಿ ಗ್ರಾಂಟ್ಸ್ ಕಮಿಷನ್ (ಯುಜಿಸಿ) ಯಿಂದ ಗುರುತಿಸಲ್ಪಡದ ಪದವಿಯಾಗಿದ್ದು, ಎಂಫಿಲ್ ಕೋರ್ಸ್‌ಗಳ ಪ್ರವೇಶವನ್ನು ನಿಲ್ಲಿಸುವಂತೆ ವಿಶ್ವವಿದ್ಯಾಲಯಗಳಿಗೆ ಸೂಚನೆ ನೀಡಲಾಗಿದೆ. ಕೆಲವು ವಿಶ್ವವಿದ್ಯಾನಿಲಯಗಳು ಹೊಸದಾಗಿ ಅರ್ಜಿಗಳನ್ನು ಆಹ್ವಾನಿಸುತ್ತಿರುವುದು ಗಮನಕ್ಕೆ ಬಂದ ನಂತರ ಸ್ಪಷ್ಟನೆ ನೀಡಲಾಗಿದೆ ಎಂದು ಯುಜಿಸಿ ಕಾರ್ಯದರ್ಶಿ ಮನೀಶ್ ಜೋಶಿ ಹೇಳಿದ್ದಾರೆ. 2023-24ರ ಶೈಕ್ಷಣಿಕ ವರ್ಷಕ್ಕೆ ಎಂಫಿಲ್‌ಗೆ ಪ್ರವೇಶವನ್ನು ನಿಲ್ಲಿಸಲು ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳುವಂತೆ ಆಯೋಗವು ವಿಶ್ವವಿದ್ಯಾಲಯಗಳನ್ನು ಕೇಳಿದೆ. ಎಂಫಿಲ್ ಯುಜಿಸಿ ನಿಯಮಗಳ ಅಡಿಯಲ್ಲಿ ಮಾನ್ಯತೆ ಪಡೆದ ಪದವಿಯಲ್ಲ. ಯಾವುದೇ ಉನ್ನತ ಶಿಕ್ಷಣ ಸಂಸ್ಥೆಗಳು ಎಂಫಿಲ್ ಕೋರ್ಸ್ ನೀಡಬಾರದು. ಎಂಫಿಲ್ ಕೋರ್ಸ್‌ಗೆ ಪ್ರವೇಶ ಪಡೆಯದಂತೆ ವಿದ್ಯಾರ್ಥಿಗಳಿಗೆ ಸೂಚಿಸಲಾಗಿದೆ ಎಂದು ಜೋಶಿ ಹೇಳಿದರು.

Read More

ತಮಿಳುನಾಡಿನ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, ಚೆನ್ನೈನ ತೊಂಡಿಯಾರ್‌ ಪೇಟ್‌ ನಲ್ಲಿರುವ ಪ್ಲಾಂಟ್‌ ನಲ್ಲಿ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಐಒಸಿಎಲ್ ಘಟಕದ ಒಳಗಿನ ಕೆಸರಿನ ತೊಟ್ಟಿಯನ್ನು ಸ್ವಚ್ಛಗೊಳಿಸುವ ವೇಳೆ ಈ ಅವಘಡ ಸಂಭವಿಸಿದೆ. ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ಹತೋಟಿಗೆ ತರುತ್ತಿದ್ದಾರೆ. ಐದು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಬಂದಿವೆ. ಅಪಘಾತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ.

Read More

ತಮಿಳುನಾಡಿನ ಕಾಂಚೀಪುರಂನಲ್ಲಿ ಪೊಲೀಸ್ ಎನ್‌ ಕೌಂಟರ್ ನಡೆಸಲಾಗಿದ್ದು, ಬುಧವಾರ ಬೆಳಗ್ಗೆ ನಡೆದ ಎನ್‌ ಕೌಂಟರ್‌ ನಲ್ಲಿ ಇಬ್ಬರು ಕುಖ್ಯಾತ ಕ್ರಿಮಿನಲ್‌ ಗಳನ್ನು ಹೊಡೆದುರುಳಿಸಲಾಗಿತ್ತು. ಕೊಲೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ರಘುವರನ್ ಮತ್ತು ಕರುಪುಪ್ ಅಸಿನ್ ಎನ್‌ ಕೌಂಟರ್‌ ನಲ್ಲಿ ಸಾವನ್ನಪ್ಪಿದ್ದಾರೆ. ಕುಖ್ಯಾತ ಪಾತಕಿ ಪ್ರಭಾಕರನ್ ಹತ್ಯೆಯಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಇಬ್ಬರೂ ಕಾಂಚೀಪುರಂ ಪೊಲೀಸರ ಕಣ್ಗಾವಲಿನಲ್ಲಿದ್ದರು. ಜಿಲ್ಲೆಯ ಪುತ್ತುಪಾಳ್ಯಂ ಬೀದಿಯಲ್ಲಿ ಮಂಗಳವಾರ ಜನರ ಗುಂಪೊಂದು ಪ್ರಭಾಕರನ್ ಅವರನ್ನು ಹತ್ಯೆ ಮಾಡಿತ್ತು. ರಘುವರನ್ ಮತ್ತು ಆಸಿನ್ ಪ್ರಕರಣದ ಪ್ರಮುಖ ಆರೋಪಿಗಳಾಗಿದ್ದರು. ಪೊಲೀಸರು ಅವರಿಗಾಗಿ ಹುಡುಕಾಟ ನಡೆಸುತ್ತಿದ್ದರು. ಈ ಮಧ್ಯೆ, ಕಾಂಚೀಪುರಂ ಹೊಸ ರೈಲು ನಿಲ್ದಾಣದ ಸೇತುವೆ ಬಳಿಯ ಪಾಳುಬಿದ್ದ ಕಟ್ಟಡದಲ್ಲಿ ಇಬ್ಬರೂ ತಲೆಮರೆಸಿಕೊಂಡಿದ್ದಾರೆ ಎಂಬ ಮಾಹಿತಿ ಪೊಲೀಸರಿಗೆ ಸಿಕ್ಕಿದೆ. ಇಲ್ಲಿಂದ ಆರೋಪಿಗಳನ್ನು ಬಂಧಿಸುವ ವೇಳೆ ಕುಡುಗೋಲಿನಿಂದ ಪೊಲೀಸರನ್ನು ಕೊಯ್ದು ಪರಾರಿಯಾಗಲು ಯತ್ನಿಸಿದ  ವೇಳೆ ಸಬ್ ಇನ್ಸ್ ಪೆಕ್ಟರ್ ಸುಧಾಕರ್ ಗುಂಡು ಹಾರಿಸಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರ ಪ್ರಾಣ…

Read More