Author: admin

ಬೆಂಗಳೂರು: 15ನೇ ಹಣಕಾಸು ಆಯೋಗದ ಅನುದಾನಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಡಿರುವ ಭ್ರಷ್ಟಾಚಾರದ ಆರೋಪಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. “ಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ನನ್ನ ಹೆಸರು ಹೇಳುವುದು ಒಂದು ಆಸರೆಯಾಗಿದೆ” ಎಂದು ಅವರು ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಸುದೀರ್ಘ ಪೋಸ್ಟ್ ಮಾಡಿರುವ ಅವರು, ಬಿಜೆಪಿಯ ಮಾಜಿ ಶಾಸಕರೊಬ್ಬರು ಮಾಡಿರುವ ಆರೋಪಗಳನ್ನು “ತರ್ಕವಿಲ್ಲದ ಮತ್ತು ಸತ್ಯಾಂಶವಿಲ್ಲದ ಮಾತುಗಳು” ಎಂದು ತಳ್ಳಿಹಾಕಿದ್ದಾರೆ. ಖರ್ಗೆ ನೀಡಿದ ಸ್ಪಷ್ಟನೆಗಳೇನು? ಅನುದಾನ ಹಂಚಿಕೆ: 15ನೇ ಹಣಕಾಸು ಆಯೋಗದ ಅನುದಾನವನ್ನು ಶೇ. 90ರಷ್ಟು ಜನಸಂಖ್ಯೆ ಮತ್ತು ಶೇ. 10ರಷ್ಟು ಭೌಗೋಳಿಕ ವಿಸ್ತೀರ್ಣದ ಆಧಾರದ ಮೇಲೆ ಹಂಚಿಕೆ ಮಾಡಲಾಗುತ್ತದೆ. ಇದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಾರ್ಗಸೂಚಿಯಂತೆಯೇ ನಡೆಯುತ್ತಿದೆ. ಗ್ರಾಮ ಪಂಚಾಯತಿಗಳ ಪಾತ್ರ: ಒಟ್ಟು ಅನುದಾನದಲ್ಲಿ ಶೇ. 60ರಷ್ಟು ನಿರ್ಬಂಧಿತ ಮತ್ತು ಶೇ. 40ರಷ್ಟು ಅನಿರ್ಬಂಧಿತ ಅನುದಾನವಿರುತ್ತದೆ. ಗ್ರಾಮ ಪಂಚಾಯತಿಗಳು ಗ್ರಾಮ ಸಭೆಗಳನ್ನು ನಡೆಸಿ, ತಾವೇ ಕ್ರಿಯಾಯೋಜನೆ ಸಿದ್ಧಪಡಿಸಿ…

Read More

ಬೆಂಗಳೂರು: ರಾಜ್ಯದ ಹೆಣ್ಣುಮಕ್ಕಳಲ್ಲಿ ಋತುಚಕ್ರದ ನೈರ್ಮಲ್ಯ ಮತ್ತು ಸುಸ್ಥಿರತೆಯನ್ನು ಕಾಪಾಡುವ ನಿಟ್ಟಿನಲ್ಲಿ ಕರ್ನಾಟಕ ಆರೋಗ್ಯ ಇಲಾಖೆಯು ಮಹತ್ವದ ಹೆಜ್ಜೆಯನ್ನಿಟ್ಟಿದೆ. 9 ರಿಂದ 12ನೇ ತರಗತಿಯ ವಿದ್ಯಾರ್ಥಿನಿಯರಲ್ಲಿ ಮುಟ್ಟಿನ ಕಪ್ (Menstrual Cup) ಬಳಕೆಯನ್ನು ಉತ್ತೇಜಿಸಲು ಇಲಾಖೆಯು ಈಗ ಶಿಕ್ಷಕಿಯರು ಮತ್ತು ತಾಯಂದಿರಿಗೆ ವಿಶೇಷ ತರಬೇತಿ ನೀಡಲು ಮುಂದಾಗಿದೆ. ಮುಂದಿನ ಎರಡು ತಿಂಗಳಲ್ಲಿ ಶಿಕ್ಷಣ ಸಂಸ್ಥೆಗಳ ಮೂಲಕ ವಿದ್ಯಾರ್ಥಿನಿಯರಿಗೆ ಮುಟ್ಟಿನ ಕಪ್‌ಗಳನ್ನು ಪೂರೈಸಲು ಆರೋಗ್ಯ ಇಲಾಖೆ ಸಿದ್ಧತೆ ನಡೆಸಿದೆ. ವಿದ್ಯಾರ್ಥಿನಿಯರು ಕಪ್ ಬಳಕೆಗೆ ಒಗ್ಗಿಕೊಳ್ಳಲು ಸಮಯ ಬೇಕಾಗುವುದರಿಂದ, ಆರಂಭದಲ್ಲಿ ಕಪ್‌ಗಳ ಜೊತೆಗೆ ಆರು ತಿಂಗಳಿಗೆ ಆಗುವಷ್ಟು ಸ್ಯಾನಿಟರಿ ಪ್ಯಾಡ್‌ಗಳನ್ನು ಸಹ ವಿತರಿಸಲಾಗುತ್ತದೆ. ತರಬೇತಿ: ಮಕ್ಕಳು ಈ ಹೊಸ ಪದ್ಧತಿಯನ್ನು ಅಳವಡಿಸಿಕೊಳ್ಳಲು ಪೂರಕವಾಗಿ ಶಿಕ್ಷಕಿಯರಿಗೆ ಹಾಗೂ ತಾಯಂದಿರಿಗೆ ಎನ್‌ಜಿಒಗಳ ಸಹಯೋಗದೊಂದಿಗೆ ತರಬೇತಿ ನೀಡಲಾಗುತ್ತಿದೆ. ತಾಯಂದಿರು ಈ ಬಗ್ಗೆ ಅರಿವು ಹೊಂದಿದ್ದರೆ ಮಕ್ಕಳಿಗೆ ಮಾರ್ಗದರ್ಶನ ನೀಡಲು ಸುಲಭವಾಗುತ್ತದೆ ಎಂಬುದು ಇಲಾಖೆಯ ಆಶಯ. ಬಜೆಟ್: ಮುಟ್ಟಿನ ಕಪ್ ಮತ್ತು ಸ್ಯಾನಿಟರಿ ಪ್ಯಾಡ್‌ಗಳ ಖರೀದಿಗಾಗಿ ಸರ್ಕಾರ ಒಟ್ಟು 71…

Read More

ಶಿರಾ: ಕೇಂದ್ರ ಸಚಿವರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ. ಕುಮಾರಸ್ವಾಮಿ ಅವರು ಈ ನಾಡು ಕಂಡ ಅಪರೂಪದ ಮುಖ್ಯಮಂತ್ರಿಗಳಾಗಿದ್ದು, ಅವರ ಅವಧಿಯಲ್ಲಿ ನಡೆದ ಗ್ರಾಮ ವಾಸ್ತವ್ಯ ಹಾಗೂ ರಾಜ್ಯದ ಅಭಿವೃದ್ಧಿ ಕಾರ್ಯಗಳು ಇಂದಿಗೂ ಹಸಿರಾಗಿಯೇ ಇವೆ. ಇಂತಹ ಸೇವಾ ಭಾವನೆಯ ಕೇಂದ್ರ ಸಚಿವರ ವಿರುದ್ಧ ಬಾಯಿ ಚಪಲ ತೀರಿಸಿಕೊಳ್ಳಲು ಮಾತನಾಡಿರುವ ಡಿ.ಕೆ. ಸುರೇಶ್ ತಮ್ಮ ಅವಾಚ್ಯ ಹೇಳಿಕೆಯನ್ನು ಈ ಕೂಡಲೇ ವಾಪಸ್ ಪಡೆಯಬೇಕು ಎಂದು ಜೆಡಿಎಸ್ ಮುಖಂಡರು ವಾಗ್ದಾಳಿ ನಡೆಸಿದರು. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧದ ಅವಾಚ್ಯ ಹೇಳಿಕೆಗೆ ಡಿ.ಕೆ. ಸುರೇಶ್ ಕ್ಷಮೆ ಯಾಚಿಸಲೆಂದು ಶಿರಾ ತಾಲೂಕು ಜೆಡಿಎಸ್ ಮುಖಂಡರು ಶನಿವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು. ರಾಜ್ಯ ಜೆಡಿಎಸ್ ಕಾರ್ಯಕಾರಿ ಸಮಿತಿ ಸದಸ್ಯ ಆರ್. ಉಗ್ರೇಶ್ ಮಾತನಾಡಿ, ಅಣ್ಣ ತಮ್ಮ ನೀವಿಬ್ಬರೂ ಸೇರಿಕೊಂಡು ಈ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಡಳಿತ ನಡೆಸಲು ಬಿಡುತ್ತಿಲ್ಲ. ಇನ್ನು ನಿಮ್ಮ ಪಕ್ಷದಲ್ಲಿರುವವರನ್ನು ನೀವು ಬಿಡುವವರೇ ಅಲ್ಲ. ಮುಂದೆ ಇಂತಹ ಹೇಳಿಕೆ ನೀಡಿದಲ್ಲಿ ಶಿರಾದಿಂದ…

Read More

ಬೆಂಗಳೂರು: ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ನೀಡಲಾಗುವ ಶೂ ಮತ್ತು ಸಾಕ್ಸ್ ವಿತರಣೆಯಲ್ಲಿ ಆಗುವ ವಿಳಂಬವನ್ನು ತಪ್ಪಿಸಲು ರಾಜ್ಯ ಸರ್ಕಾರ ಈಗಿನಿಂದಲೇ ಸಿದ್ಧತೆ ಆರಂಭಿಸಿದೆ. 2026-27ನೇ ಶೈಕ್ಷಣಿಕ ಸಾಲಿಗಾಗಿ ವಿದ್ಯಾರ್ಥಿಗಳ ಮಾಹಿತಿ (Indent) ಸಂಗ್ರಹಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸೂಚನೆ ನೀಡಿದೆ. ಮಾಹಿತಿ ಸಂಗ್ರಹ: 1 ರಿಂದ 10ನೇ ತರಗತಿಯ ವಿದ್ಯಾರ್ಥಿಗಳ ನಿಖರ ಅಂಕಿಅಂಶಗಳನ್ನು ಒದಗಿಸುವಂತೆ ಎಲ್ಲ ಜಿಲ್ಲೆಗಳ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ (DDPI) ಇಲಾಖೆಯು ಅಧಿಕೃತ ಸುತ್ತೋಲೆ ಹೊರಡಿಸಿದೆ. ಶೂ ಬದಲು ಚಪ್ಪಲಿ?: ಈ ಬಾರಿ ಸರ್ಕಾರ ಒಂದು ಮಹತ್ವದ ಬದಲಾವಣೆಗೆ ಚಿಂತನೆ ನಡೆಸಿದೆ. ಕೆಲವು ಜಿಲ್ಲೆಗಳಲ್ಲಿ ಶೂ ಮತ್ತು ಸಾಕ್ಸ್ ಬದಲಿಗೆ ‘ಚಪ್ಪಲಿ’ ವಿತರಿಸುವ ಬಗ್ಗೆ ಸರ್ಕಾರ ಆಲೋಚಿಸುತ್ತಿದೆ. ಸ್ಥಳೀಯ ಆಯ್ಕೆಗೆ ಅವಕಾಶ: ಶಾಲೆಯು ಇರುವ ಪ್ರದೇಶದ ಹವಾಮಾನ ಮತ್ತು ಭೌಗೋಳಿಕ ಪರಿಸ್ಥಿತಿಗೆ ಅನುಗುಣವಾಗಿ ಶೂ ಬೇಕೋ ಅಥವಾ ಚಪ್ಪಲಿ ಬೇಕೋ ಎಂಬುದನ್ನು ಆಯ್ಕೆ ಮಾಡುವ ಸ್ವಾತಂತ್ರ್ಯವನ್ನು ಶಾಲಾ ಅಭಿವೃದ್ಧಿ…

Read More

ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ : ಐತಿಹಾಸಿಕ ಇತಿಹಾಸ ಪ್ರಸಿದ್ಧ ಶ್ರೀಕ್ಯಾಮೇನಹಳ್ಳಿ ಆಂಜನೇಯ ಸ್ವಾಮಿ ರಥೋತ್ಸವಕ್ಕೂ ಮೊದಲು ಮಕರ ಸಂಕ್ರಾತಿ ಹಬ್ಬದ ಮಾರನೇ ದಿನದಿಂದ ಆರಂಭಗೊಳ್ಳುವ ರಾಸುಗಳ ಜಾತ್ರೆಗೆ ರಾಜ್ಯದ ಅನೇಕ ಭಾಗದ ರೈತರ ವಿವಿಧ ತಳಿಯ ರಾಸುಗಳು ಆಗಮಿಸುತ್ತಿದ್ದು, ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆಯ ಹಬ್ಬದ ಸಡಗರ ಮನೆ ಮಾಡಿತ್ತು. ತಾಲ್ಲೂಕಿನ ಹೊಳವನಹಳ್ಳಿ ಹೋಬಳಿ ಕ್ಯಾಮೇನಹಳ್ಳಿ ಗ್ರಾ.ಪಂ ವ್ಯಾಪ್ತಿಯ ಕೇಂದ್ರ ಸ್ಥಾನದಲ್ಲಿ ರಥ ಸಪ್ತಮಿಯಂದು ನಡೆಯುವ ಕಮನೀಯ ಕ್ಷೇತ್ರ ಕ್ಯಾಮೇನಹಳ್ಳಿ ಆಂಜನೇಯ ಸ್ವಾಮಿ ರಥೋತ್ಸವ ವಾರವಿದ್ದಂತೆ ಶುರುವಾಗುವ ಈ ರಾಸುಗಳ ಜಾತ್ರೆಗೆ ಈ ಬಾರಿ ವಿವಿಧ ತಳಿಯ ರಾಸುಗಳು ಹೆಚ್ಚಾಗಿ ಆಗಮಿಸುತ್ತಿದ್ದು ರೈತರನ್ನು ಆಕರ್ಷಿಸುತ್ತಿದೆ. ಈ ವರ್ಷದ ರಾಸುಗಳ ಜಾತ್ರೆಯಲ್ಲಿ ರಾಸುಗಳನ್ನ ೫೦ ಸಾವಿರದಿಂದ ೫ ಲಕ್ಷದವರೆಗೆ ರೈತರು ಖರೀದಿಸುತ್ತಿದ್ದು, ಹೊಲ ಉಳುಮೆಗೆ ಯೋಗ್ಯವಾದ ರಾಸುಗಳನ್ನು ಹೆಚ್ಚಿನ ಡಿಮ್ಯಾಂಡ್ ಇದ್ದು, ರಾಜ್ಯದ ಬಳ್ಳಾರಿ, ಹಾವೇರಿ, ಶಿವಮೊಗ್ಗ, ದೊಡ್ಡಬಳ್ಳಾಪುರ, ಚಿಕ್ಕಬಳ್ಳಾಪುರ, ಗೌರಿಬಿದನೂರು ಸೇರಿದಂತೆ ಆಂದ್ರ ಪ್ರದೇಶ, ಇತರೆ ರಾಜ್ಯಗಳಿಂದ ರೈತರು ಹೆಚ್ಚಾಗಿ…

Read More

ಮಧುಗಿರಿ: ಪೊಲೀಸ್‌ ಠಾಣೆ ಕಟ್ಟಡ ಕಾಮಗಾರಿಗೆ ಬಂದಿದ್ದ ಕಾರ್ಮಿಕ ಅಚಾನಕ್ಕಾಗಿ ಮೃತಪಟ್ಟ ಘಟನೆ ನಡೆದಿದೆ. ತಾಲೂಕಿನ ಕೊಡಿಗೇನಹಳ್ಳಿ ನೂತನ ಪೊಲೀಸ್‌ ಠಾಣೆಯ ಕಟ್ಟಡದ ಕಾಮಗಾರಿಗೆ ಕಳೆದ ನಾಲ್ಕು ದಿನಗಳ ಹಿಂದೆ ಬಂದಿದ್ದ ಕಾರ್ಮಿಕರ ತಂಡದಲ್ಲಿದ್ದ ವಾಲ್ಮೀಕಿ ಸಹನ್‌ ಭಾನುವಾರ ಬೆಳಿಗ್ಗೆ 7 ಗಂಟೆ ಮದ್ಯಪಾನ ಮಾಡಿಕೊಂಡು ಸುತ್ತಾಡುತ್ತಿದ್ದು ಜಪಾನ್‌ ಕಾಂಡಿಮೆಂಟ್ಸ್ ಬಳಿ ಸುಮಾರು 11 ಗಂಟೆಗೆ ಕುಸಿದು ಬಿದ್ದು ಮೃತಪಟ್ಟಿದ್ದಾನೆ. ಗುತ್ತಿಗೆದಾರ ಮಾಹಿತಿ ಇಲ್ಲದೆ ಕಟ್ಟಡ ಕೆಲಸಕ್ಕೆ ಕಾರ್ಮಿಕರನ್ನು ಕರೆದುಕೊಂಡಿದ್ದ ಪರಿಣಾಮ ಕಾರ್ಮಿಕನ ವಿಳಾಸ ಹುಡುಕಲು ಕೆಲ ಕಾಲ ಪೊಲೀಸರ ಪರದಾಡಿದರು. ಬಿಹಾರ ಮೂಲದ ಪಲ್ಯ ಜಿಲ್ಲೆಯ ವಾಲ್ಮೀಕಿ ಸಹನ್‌ (35) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಸಿಪಿಐ ಹನುಮಂತರಾಯಪ್ಪ ಎಎಸ್‌ ಐ ರಂಗನಾಥ್‌ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದು ಮೃತ ವ್ಯಕ್ತಿಯ ದೇಹವನ್ನು ತುಮಕೂರು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…

Read More

ತುಮಕೂರು: ವೊಡೆ ಪ್ರತಿಷ್ಠಾನ ಬೆಂಗಳೂರು ಇವರ ವತಿಯಿಂದ ತುಮಕೂರು ಜಿಲ್ಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಏಕಪೋಷಕ ಹಾಗೂ ಅನಾಥ ಅಂಗವಿಕಲ ಹೆಣ್ಣು ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವ ದೃಷ್ಟಿಯಿಂದ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನವನ್ನು ನೀಡಲು ಉದ್ದೇಶಿಸಿದೆ. ಆಸಕ್ತರು ಪ್ರೊ. ಕೆ. ಚಂದ್ರಣ್ಣ, ಗೌರವ ಕಾರ್ಯದರ್ಶಿಗಳು, ಶುದ್ಧಿ ಪ್ರತಿಷ್ಠಾನ, ಸೌಮ್ಯ ಸದನ, ಶಾರದಾ ದೇವಿ ನಗರ, ತುಮಕೂರು ಈ ವಿಳಾಸದಲ್ಲಿ ಅರ್ಜಿ ಪಡೆದು ಜೂ. 30ರ ಒಳಗಾಗಿ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ಪ್ರೊ. ಚಂದ್ರಣ್ಣ, 6360002626 ಇವರನ್ನು ಸಂಪರ್ಕಿಸುವುದು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ತುಮಕೂರು: ಜನವರಿ 26 ಗಣರಾಜ್ಯೋತ್ಸವ ದಿನದಂದು ನಗರದ ಬಿಜಿಎಸ್ ವೃತ್ತದಿಂದ ಎಸ್.ಪಿ. ಕಚೇರಿಯವರೆಗೆ ವಿವಿಧ ದಲಿತಪರ ಸಂಘಟನೆಗಳಿಂದ ಬೃಹತ್ ತಮಟೆ ಚಳುವಳಿಯನ್ನು ಹಮ್ಮಿಕೊಂಡಿದ್ದು ಆ ಕುರಿತು  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿಯನ್ನು ಸಹ ಸಲ್ಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ತುಮಕೂರು ನಗರದ ಎಂ.ಜಿ.ರಸ್ತೆಯಲ್ಲಿರುವ ಅಂಬೇಡ್ಕರ್ ಭವನದಲ್ಲಿ ತುರುವೇಕೆರೆ ತಾಲೂಕು ಕಾಡಲಗೆರೆ ಕಾವಲ್ ಗ್ರಾಮದಲ್ಲಿ ದಲಿತರು ತೆಗೆದುಕೊಂಡಿರುವ ಜಮೀನಿನಲ್ಲಿ ಕಲ್ಲುಕಂಬ ಹೊಡೆದು ಹಾಕಿರುವ ವಿಚಾರವಾಗಿ ಮತ್ತು ಕಲ್ಲುಕಂಬ ಹೊಡೆದು ಹಾಕಿರುವ ರವರ ಮೇಲೆ ಕಾನೂನು ರೀತಿ ಅಟ್ರಾಸಿಟಿ ಕೇಸ್ ದಾಖಲಿಸದೆ ಇರುವ ಬಗ್ಗೆ ವಿವಿಧ ದಲಿತ ಸಂಘಟನೆಗಳು ಎರಡನೇ ಪೂರ್ವಭಾವಿ ಸಭೆಯನ್ನು ಕರೆದು ವಿವರವಾಗಿ ಚರ್ಚಿಸಿ ಈಗಾಗಲೇ ತುರುವೇಕೆರೆ ವೃತ್ತ ನಿರೀಕ್ಷಕರು ವರ್ಗಾವಣೆಗೊಂಡಿದ್ದು ನೂತನ ವೃತ್ತ ನಿರೀಕ್ಷಕರಿಗೆ ಅಧಿಕಾರ ಹಸ್ತಾಂತರ ಮಾಡದೆ ಇರುವುದು ಮತ್ತು ದಲಿತರು ಕೊಟ್ಟಿರುವ ದೂರಿಗೆ ಎಫ್‌ ಐಆರ್ ದಾಖಲಿಸಲು ಶಿಸ್ತು ಕ್ರಮ ಕೈಗೊಳ್ಳಲು ಕುಣಿಗಲ್ ಡಿವೈಎಸ್ಪಿ ರವರಿಗೆ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ದೂರನ್ನು ವರ್ಗಾವಣೆ ಮಾಡಿದರು ಸಹ…

Read More

ತುಮಕೂರು: ತುಮಕೂರು ರನ್ನರ್ಸ್ ಕ್ಲಬ್ ಟ್ರಸ್ಟ್ ವತಿಯಿಂದ ‘ಸೇ ನೋ ಡ್ರಗ್ಸ್ – ಯಸ್ ಟೂ ಸ್ಪೋರ್ಟ್ಸ್’ ಎಂಬ ಘೋಷವಾಕ್ಯದೊಂದಿಗೆ 2026ನೇ ಫೆಬ್ರವರಿ 01 ರಂದು 5 ಕಿ.ಮೀ., 10 ಕಿ.ಮೀ ಹಾಗೂ 21 ಕಿ.ಮೀ.ಗಳ 2ನೇ ತುಮಕೂರು ಮ್ಯಾರಥಾನ್ ಆಯೋಜಿಸಲಾಗಿದೆ ಎಂದು ಟ್ರಸ್ಟ್‌ನ ಕಾರ್ಯದರ್ಶಿ ಡಾ.ರವಿ.ಪಿ.ಎಂ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ 2ನೇ ತುಮಕೂರು ಮ್ಯಾರಥಾನ್ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ಅವರು, 2026ರ ಫೆಬ್ರವರಿ 01 ರಂದು ಬೆಳಿಗ್ಗೆ 6 ಗಂಟೆಯಿಂದ 8 ಗಂಟೆಯವರೆಗೆ 2ನೇ ತುಮಕೂರು ಮ್ಯಾರಥಾನ್ ಓಟ ಆಯೋಜಿಸಲಾಗಿದೆ. ಈಗಾಗಲೇ 1800 ಓಟಗಾರರು ತಮ್ಮ ಹೆಸರು ನೋಂದಾಯಿಸಿದ್ದು, ಜನವರಿ 18ಕ್ಕೆ ಹೆಸರು ನೋಂದಾವಣೆಯ ನೀಡಿದ್ದ ಅವಧಿ ಪೂರ್ಣಗೊಂಡಿದೆ. 5, 10 ಮತ್ತು 21 ಕಿಮಿ ಓಟದ ಮಹಿಳಾ ಮತ್ತು ಪುರುಷರ ವಿಭಾಗದಲ್ಲಿ ಮೊದಲ ಮೂರು ಸ್ಥಾನ ಪಡೆಯುವ ಓಟಗಾರರಿಗೆ ಐವತ್ತು ಸಾವಿರ ರೂಗಳ ಬಹುಮಾನವನ್ನು ಹಂಚಿಕೆ ಮಾಡಲಾಗುವುದು ಎಂದರು. ಉದಯೋನ್ಮುಖ ಕ್ರೀಡಾಪಟುಗಳ ಪ್ರೋತ್ಸಾಹಕ್ಕೆ ತುಮಕೂರು ಮ್ಯಾರಥಾನ್ ಒಳ್ಳೆಯ ವೇದಿಕೆಯಾಗಿದೆ.…

Read More

ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಯ ಶೇ.100 ಸಾಧನೆ: ಇಂದಿನ ಸ್ಪರ್ಧಾತ್ಮಕ ಶಿಕ್ಷಣ ವ್ಯವಸ್ಥೆಯಲ್ಲಿ ಅಂಕಗಳು ಮತ್ತು ರ್ಯಾಂಕ್‌ ಗಳೇ ಯಶಸ್ಸಿನ ಏಕೈಕ ಮಾನದಂಡಗಳಾಗುತ್ತಿರುವ ಸಂದರ್ಭದಲ್ಲಿ, ವಿದ್ಯಾರ್ಥಿಯ ಸೃಜನಶೀಲತೆ, ಕಲಾತ್ಮಕತೆ ಹಾಗೂ ಮಾನಸಿಕ ಅಭಿವ್ಯಕ್ತಿಗೂ ಸಮಾನ ಮಹತ್ವ ನೀಡಬೇಕಾದ ಅಗತ್ಯ ಹೆಚ್ಚಾಗಿದೆ. ಈ ಹಿನ್ನಲೆಯಲ್ಲಿ ಗುಬ್ಬಿ ತಾಲ್ಲೂಕಿನ ಮಾವಿನಹಳ್ಳಿಯ ಡಾ.ಬಿ.ಆರ್.ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ ಸಾಧಿಸಿರುವ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯ ಶೇ.100 ಫಲಿತಾಂಶ ಕೇವಲ ಒಂದು ಪರೀಕ್ಷಾ ಸುದ್ದಿಯಲ್ಲ; ಅದು ಶಿಕ್ಷಣದ ದಿಕ್ಕನ್ನು ಮರುಪರಿಶೀಲಿಸಲು ಪ್ರೇರೇಪಿಸುವ ಮಹತ್ವದ ಸಂದೇಶವಾಗಿದೆ. 2025–26ನೇ ಸಾಲಿನ ಲೋಯರ್ ಗ್ರೇಡ್ ಡ್ರಾಯಿಂಗ್ ಪರೀಕ್ಷೆಯಲ್ಲಿ ಭಾಗವಹಿಸಿದ್ದ 12 ವಿದ್ಯಾರ್ಥಿನಿಯರಲ್ಲಿ 9 ವಿದ್ಯಾರ್ಥಿನಿಯರು ಡಿಸ್ಟಿಂಕ್ಷನ್ ಹಾಗೂ 3 ವಿದ್ಯಾರ್ಥಿನಿಯರು ಪ್ರಥಮ ದರ್ಜೆ ಪಡೆದುಕೊಂಡಿರುವುದು, ವಸತಿ ಶಾಲೆಗಳಲ್ಲಿಯೂ ಪ್ರತಿಭೆಯನ್ನು ಗುರುತಿಸಿ ಬೆಳೆಸುವ ಶಕ್ತಿ ಇದೆ ಎಂಬುದನ್ನು ಸ್ಪಷ್ಟವಾಗಿ ತೋರಿಸಿದೆ. ಸಾಮಾನ್ಯವಾಗಿ ವಸತಿ ಶಾಲೆಗಳ ಬಗ್ಗೆ ಸಮಾಜದಲ್ಲಿ ಇರುವ ಕೆಲ ತಪ್ಪು ಕಲ್ಪನೆಗಳನ್ನು ಈ ಸಾಧನೆ ಸಂಪೂರ್ಣವಾಗಿ ತಳ್ಳಿ ಹಾಕಿದೆ.…

Read More