Author: admin

ಬೆಂಗಳೂರು: ಹೊಸ ವರ್ಷಾಚರಣೆಗೆ ರಾಜ್ಯ ರಾಜಧಾನಿ ಬೆಂಗಳೂರು ಸಿದ್ದವಾಗುತ್ತಿದೆ. ಅದರಂತೆ ಕಾನೂನು ಸುವ್ಯವಸ್ಥೆ ಕಾಪಾಡಲು ನಗರ ಪೊಲೀಸರು ತಯಾರಿ ನಡೆಸುತ್ತಿದ್ದಾರೆ. ಹೊಸ ವರ್ಷಾಚರಣೆ ವೇಳೆ ಜನರ ಸುರಕ್ಷತೆ ನಮ್ಮ ಆದ್ಯ ಕರ್ತವ್ಯ. ಯಾವುದೇ ಕಾರಣಕ್ಕೂ ಮಹಿಳೆ ಮತ್ತು ಮಕ್ಕಳಿಗೆ ಸಮಸ್ಯೆ ಆಗಬಾರದು. ಅಹಿತಕರ ಘಟನೆ ನಡೆಯದಂತೆ ಸೂಕ್ತ ವ್ಯವಸ್ಥೆಗಳನ್ನು ಮಾಡುತ್ತಿದ್ದೇವೆ. ಹೊಸ ವರ್ಷಾಚರಣೆ ದಿವಸ ಕ್ಲಬ್​ಗಳಿಗೆ ರಾತ್ರಿ 1 ಗಂಟೆಯವರೆಗೆ ಅವಕಾಶ ನೀಡಲಾಗಿದೆ. ವೈನ್ ಶಾಪ್​ ಗಳಿಗೆ ರಾತ್ರಿ 12 ಗಂಟೆಯವರೆಗೆ ಅವಕಾಶ ನೀಡಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್​ ಆಯುಕ್ತ ಬಿ.ದಯಾನಂದ್ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಭದ್ರತೆಗೆ ಇಬ್ಬರು ಹೆಚ್ಚುವರಿ ಪೊಲೀಸ್ ಆಯುಕ್ತರನ್ನು ನಿಯೋಜಿಸಲಾಗಿದೆ. ಓರ್ವ ಜಂಟಿ ಪೊಲೀಸ್ ಆಯುಕ್ತ, 15 ಡಿಸಿಪಿ, 45 ಎಸಿಪಿ, 160 ಪಿಐ, 600 ಸಬ್​​ಇನ್ಸ್​​ಪೆಕ್ಟರ್​​ಗಳು, 600 ಎಎಸ್​​ಐ, 1800 ಹೆಡ್​ಕಾನ್ಸ್​ಟೇಬಲ್ಸ್​, 5,200 ಕಾನ್ಸ್​ಟೇಬಲ್​​ಗಳನ್ನು ಭದ್ರತೆಗೆ ನಿಯೋಜನೆ ಮಾಡಲಾಗುವುದು ಎಂದು ತಿಳಿಸಿದರು. ಫ್ಲೈ ಓವರ್​ ಮೇಲೆ ವೇಗವಾಗಿ ವಾಹನ ಚಲಾಯಿಸುವುದು…

Read More

ಬೆಂಗಳೂರು: ಕೋವಿಡ್ ರೂಪಾಂತರಿ ಜೆಎನ್.1 ಉಪತಳಿ ಕರ್ನಾಟಕಕ್ಕೂ ಲಗ್ಗೆ ಇಟ್ಟಿದೆ. ಈ ಸಂಬಂಧ ಡಿಸೆಂಬರ್ 26ರಂದು ರಾಜ್ಯ ಸಂಪುಟ ಉಪಸಮಿತಿ ಸಭೆ ನಡೆದಿದ್ದು, ಉಪತಳಿ ನಿಯಂತ್ರಣದ ಬಗ್ಗೆ ಮಹತ್ವದ ಚರ್ಚೆಗಳು ನಡೆದಿವೆ. ಇನ್ನು ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಉಪಸಮಿತಿಯ ಅಧ್ಯಕ್ಷ ದಿನೇಶ್ ಗುಂಡೂರಾವ್, ರಾಜ್ಯದಲ್ಲಿ ಜೆಎನ್.1 ಉಪತಳಿ ಹೆಚ್ಚಾಗುವ ಸಾಧ್ಯತೆಗಳಿವೆ. ಡಿಸೆಂಬರ್ 25ರ 60 ಸ್ಯಾಂಪಲ್ಸ್ ನಲ್ಲಿ 34 JN.1 ಪ್ರಕರಣಗಳು ಪತ್ತೆಯಾಗಿವೆ. ಟೆಸ್ಟ್ ಹೆಚ್ಚಿಗೆ ಮಾಡಿದಷ್ಟು ಸ್ಪ್ರೆಡಿಂಗ್ ಗೊತ್ತಾಗುತ್ತೆ. ಹೀಗಾಗಿ ಇಂದಿನಿಂದ ನಿತ್ಯ 5 ಸಾವಿರ ಟೆಸ್ಟ್ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು. ಹಿಂದೆ ಆದ ತಪ್ಪು ಆಗಬಾರದು ಎಂದು ಸಿಎಂ ಸ್ಪಷ್ಟವಾಗಿ ಹೇಳಿದ್ದಾರೆ. ಇದು ಆಶ್ಚರ್ಯ ಪಡುವ ವಿಚಾರ ಅಲ್ಲ. ಇದು ಎಕ್ಸ್ ಪೆಕ್ಟ್ ಮಾಡಲಾಗಿತ್ತು. Variant of interest ಅಂತ WHO ತಿಳಿಸಿದೆ. ರಿಸ್ಕ್ ಫ್ಯಾಕ್ಟರಿ ಅಡೈಸರಿ ಬಂದಿಲ್ಲ. ಇದು ಸಮಾಧಾನಕರ ವಿಚಾರ. ಆದರೂ ಎಚ್ಚರಿಕೆ ಅಗತ್ಯ ಎಂದು ಹೇಳಿದರು. ಸಿಎಂ ಎಚ್ಚರಿಕೆಯಿಂದ ಇರಿ ಎಂದು ಸಲಹೆ…

Read More

ಬೆಂಗಳೂರು: ” ಐದು ಬೆರಳು ಸೇರಿ ಒಂದು ಮುಷ್ಟಿಯಾಯಿತು. ಐದು ಗ್ಯಾರಂಟಿ ಸೇರಿ ಕೈ ಗಟ್ಟಿಯಾಯಿತು. ಅರಳಿದ ಕಮಲದ ಹೂವು ಇದನ್ನು ನೋಡಿ ಉದುರಿ ಹೋಯಿತು. ಐದು ಗ್ಯಾರಂಟಿ ನೋಡಿ ಮಹಿಳೆ ತಾನು ಹೊತ್ತ ತೆನೆಯ ಎಸೆದು ಹೋದಳು. ಐದು ಗ್ಯಾರಂಟಿ ಸೇರಿ ಕೈ ಗಟ್ಟಿಯಾಯಿತು. ಕರ್ನಾಟಕ ಸಮೃದ್ಧವಾಯಿತು. ಕರ್ನಾಟಕ ಪ್ರಬುದ್ಧವಾಯಿತು” – ಇದು ಯುವ ನಿಧಿ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆ ಶಿವಕುಮಾರ್‌  ಅವರು ಬಿಜೆಪಿ, ಜೆಡಿಎಸ್‌ ಗೆ ಟಾಂಗ್‌ ನೀಡಲು ಹೇಳಿದ ಕವನ. ನನಗೆ ಹೆಚ್ಚು ಖುಷಿ ಕೊಟ್ಟಿರುವ ಯೋಜನೆ ಇದಾಗಿದೆ. ಈ ಯೋಜನೆ ಮೂಲಕ ಕನಸಿನ ಕರ್ನಾಟಕದ ಆಸೆ ನನಗೂ ಸಿಎಂಗೂ ಇದೆ. ಈಗಿನ ಯುವಕರು ಅದೃಷ್ಟವಂತರು. ಯಾಕೆಂದರೆ ನನಗೂ ಸಿದ್ದರಾಮಯ್ಯ ಅವರಿಗೆ ಇಂತಹ ಭಾಗ್ಯ ಇರಲಿಲ್ಲ. ನಾನು ಕೆಪಿಸಿಸಿ ಅಧ್ಯಕ್ಷ ಆದಾಗ ಮಹಿಳೆಯರು, ಯುವಕರ ಮೇಲೆ ನಂಬಿಕೆ ಇಡಬೇಕು ಅಂತ ಹೇಳಿದ್ದೆ ಎಂದರು. ಬಿಜೆಪಿ (BJP) 2 ಕೋಟಿ ಉದ್ಯೋಗ ನೀಡುತ್ತೇವೆ ಎಂದು…

Read More

ಜಾತಿಗಣತಿ ವರದಿಯನ್ನು ಸರ್ಕಾರ ಸ್ವೀಕರಿಸಿ ಎರಡು ಸದನಗಳಲ್ಲಿ ಮಂಡಿಸಲಿ ಎಂದು ಜಾಗತಿಕ ಲಿಂಗಾಯತ ಮಹಾಸಭಾ ವತಿಯಿಂದ ಸರ್ಕಾರಕ್ಕೆ ಆಗ್ರಹಿಸಿದೆ. ಜಾತಿಗಣತಿ ವಿಷಯದಲ್ಲಿ ಕೆಲವು ಸಮುದಾಯಗಳು ಅಪಸ್ವರ ಎತ್ತಿರುವ ಹಿನ್ನೆಲೆಯಲ್ಲಿ ಜಾಗತಿಕ ಲಿಂಗಾಯತ ಮಹಾಸಭೆ ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಜಾತಿಯ ಗಣತಿ ವರದಿಯನ್ನು ಸ್ವೀಕಾರ ಮಾಡಬೇಕು ಹಾಗೂ ಎರಡು ಸದನಗಳಲ್ಲಿ ಮಂಡಿಸಿ ಚರ್ಚೆ ಮಾಡಬೇಕು  ಎಂದು ಒತ್ತಾಯಿಸಿತು. ನಿವೃತ್ತ ಐಎಎಸ್ ಅಧಿಕಾರಿ ಜಾಗತಿಕ ಲಿಂಗಾಯತ ಮಹಾ ಪ್ರಧಾನ ಕಾರ್ಯದರ್ಶಿಗಳಾದ ಶಿವಾನಂದ್ ಜಮಾದಾರ ಮಾತನಾಡಿ,  2014ರಲ್ಲಿ ಕರ್ನಾಟಕ ಸರ್ಕಾರ ರಾಜ್ಯದ ಬಜೆಟ್ ದಿಂದ 160 ಕೋಟಿಗಳನ್ನು ಮೀಸಲಿಟ್ಟು ಈ ವರದಿಯನ್ನು ಸಿದ್ಧಪಡಿಸಿತ್ತು. ಆದರೆ 8 ವರ್ಷಗಳ ಕಾಲ ಈ ವರದಿ ಸರ್ಕಾರ ಸ್ವೀಕರಿಸದೆ ಇರಲು ಕಾರಣವೇನು ಇದನ್ನು ಕೂಡಲೇ ಸ್ವೀಕರಿಸಬೇಕು ಹಾಗೂ ಸದನಗಳಲ್ಲಿ ಚರ್ಚೆ ಆಗಬೇಕೆಂದು ಜಾಗತಿಕ ಲಿಂಗಾಯತ ಮಹಾಸಭಾ ಒತ್ತಾಯ ಮಾಡುತ್ತದೆ ಎಂದರು. ಇಲ್ಲಿವರೆಗೆ ಸ್ವೀಕರಿಸದೆ ಇರುವ ಕಾರಣ ಇದರ ಹಿಂದೆ ಯಾರು ತಪ್ಪು ಮಾಡಿದ್ದಾರೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಅಖಿಲ…

Read More

ಮೈಸೂರು: ಹುಣಸೂರಿನಲ್ಲಿ ನಡೆದ ಹನುಮ ಜಯಂತಿ ಕಾರ್ಯಕ್ರಮದಲ್ಲಿ ಸಂಸದ ಪ್ರತಾಪ್ ಸಿಂಹ, “ಸೋಮಾರಿ ಸಿದ್ದ” ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಾಕಾರಿ ಪದ ಬಳಕೆ ಮಾಡಿದ್ದು, ಈ ಸಂಬಂಧ . ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 504 , 153ರ ಅಡಿಯಲ್ಲಿ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ. ಪ್ರತಾಪ್‌ ಸಿಂಹ ಹೇಳಿಕೆ ವಿರುದ್ಧ ಕಾಂಗ್ರೆಸ್‌ ಕಾರ್ಯಕರ್ತರು ಪೊಲೀಸರಿಗೆ ದೂರು ನೀಡಿದ್ದಾರೆ,  ಸಂಸದ ಪ್ರತಾಪ್ ಸಿಂಹ ತಮ್ಮ ಭಾಷಣದಲ್ಲಿ ಸಿಎಂ ಸಿದ್ದರಾಮಯ್ಯ ಜಾತಿ ಜಾತಿಗಳ ನಡುವೆ ದ್ವೇಷ ಹರಡುತ್ತಿದ್ದಾರೆಂದು‌ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಕಾಂಗ್ರೆಸ್​ ಕಾರ್ಯಕರ್ತರು, ನಿನ್ನೆ ರಾತ್ರಿ ಪ್ರತಾಪ್ ಸಿಂಹ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಪೊಲೀಸರು ಎಫ್‌ ಐಆರ್‌ ದಾಖಲಿಸುವ ಭರವಸೆ ನೀಡಿದ್ದರಿಂದ ಪ್ರತಿಭಟನೆ ಹಿಂಪಡೆದುಕೊಳ್ಳಲಾಗಿದೆ. ಪ್ರತಾಪ್​ ಸಿಂಹರಿಂದ ಹಿಂದು ಮತ್ತು ಮುಸ್ಲಿಂ ನಡುವೆ ಕೋಮು ಗಲಭೆ ಸೃಷ್ಟಿಸಲು ನಿರಂತರ ಪ್ರಯತ್ನ ನಡಿತಾ ಇದೆ  ಎಂದು ಮೈಸೂರು ಗ್ರಾಮಾಂತರ ಕಾಂಗ್ರೆಸ್​ ಅಧ್ಯಕ್ಷ ಬಿ.ಜೆ ವಿಜಯಕುಮಾರ್ ಲಿಖಿತ ದೂರು…

Read More

ಕನೌಜ್‌: ರೌಡಿ ಶೀಟರ್‌ನನ್ನು ಬಂಧಿಸಲು ಹೋದ ಪೊಲೀಸರ ಮೇಲೆಯೇ ಆರೋಪಿಯ ಕುಟುಂಬಸ್ಥರು ಗುಂಡಿನ ದಾಳಿ ನಡೆಸಿದ ಘಟನೆ ಉತ್ತರ ಪ್ರದೇಶದ ವಿಷುಂಗಢ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಯಲ್ಲಿ  ಪೊಲೀಸ್ ಪೇದೆ ಸಚಿನ್ ರಾಠಿ (28) ಅವರಿಗೆ ಗುಂಡು ತಗುಲಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಅಮಿತ್ ಕುಮಾರ್ ಆನಂದ್ ತಿಳಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಪೊಲೀಸರು ಆರೋಪಿ ಅಶೋಕ್ ಕುಮಾರ್ ಅಲಿಯಾಸ್ ಮುನ್ನಾ ಯಾದವ್ ಮತ್ತು ಆತನ ಮಗನ ಮೇಲೆ ಗುಂಡಿನ ದಾಳಿ ನಡೆಸಿದ್ದು, ಅವರನ್ನೂ ಕನೌಜ್‌ ನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಶೋಕ್ ಕುಮಾರ್ ರೌಡಿ ಶೀಟರ್ ಆಗಿದ್ದು, ಆತನ ವಿರುದ್ಧ 20 ಪ್ರಕರಣಗಳು ದಾಖಲಾಗಿತ್ತು. ಆತನ ವಿರುದ್ಧ ಜಾಮೀನು ರಹಿತ ವಾರೆಂಟ್ ಇದೆ ಎಂದು ಎಸ್ಪಿ ತಿಳಿಸಿದ್ದಾರೆ. ಅಶೋಕ್‌ ಮನೆಯಲ್ಲಿರುವ ವಿಚಾರ ತಿಳಿದು ಪೊಲೀಸರು ಆತನ ಮನೆಗೆ ತೆರಳಿದ್ದರು.  ಈ ವೇಳೆ ಅಶೋಕ್‌ ಕುಮಾರ್,  ಆತನ ಪತ್ನಿ ಮತ್ತು ಮಗ ಪೊಲೀಸ್…

Read More

ಚಿಕ್ಕಬಳ್ಳಾಪುರ: ಹೊಸ ವರ್ಷವನ್ನು ಸಂಭ್ರಮಿಸಲು ಜನ ಸಿದ್ಧರಾಗಿದ್ದಾರೆ. ಇದೇ ಸಂದರ್ಭದಲ್ಲಿ ಡಿಸೆಂಬರ್ 31ರ ಸಂಜೆ 6ರಿಂದ ಜನವರಿ 1ರ ಬೆಳಗ್ಗೆ 6 ಗಂಟೆವರೆಗೆ ನಂದಿಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧಿಸಿ ವಿಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ರವೀಂದ್ರ ಆದೇಶಿಸಿದ್ದಾರೆ. ಹೊಸ ವರ್ಷಾಚರಣೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾವಾಗಿ ಈ ಕ್ರಮಕೈಗೊಳ್ಳಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಡ್ರಿಂಕ್ ಆಂಡ್ ಡ್ರೈವ್ ಅಪಘಾತ ತಡೆಯುವ ಉದ್ದೇಶದಿಂದ ಮತ್ತು ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸಾರ್ವಜನಿಕರಿಗೆ ನಂದಿಗಿರಿಧಾಮ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.  ನಂದಿಗಿರಿಧಾಮದಲ್ಲಿ ಡಿಸೆಂಬರ್​ 31ರಂದು ರೂಮ್ ಬುಕಿಂಗ್ ಸಹ ರದ್ದುಪಡಿಸಲಾಗಿದೆ.

Read More

ಕಾಂಗ್ರೆಸ್ ಸರ್ಕಾರದ ಚುನಾವಣಾ ಪ್ರಣಾಳಿಕೆಯ 5ನೇ ‘ಗ್ಯಾರಂಟಿ’ ಭರವಸೆ ‘ಯುವನಿಧಿ’ಗೆ ಸಿಎಂ ಸಿದ್ದರಾಮಯ್ಯ ಅವರು ಮಂಗಳವಾರ ಚಾಲನೆ ನೀಡಿದರು. ನಗರದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಯುವಕ ಹಾಗೂ ಯುವತಿ ಜ್ಯೋತಿ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಳಿಕ ಸಿಎಂ ಹಾಗೂ ಡಿಸಿಎಂ ಯುವನಿಧಿ ಯೋಜನೆ ಪೋಸ್ಟರ್ ಬಿಡುಗಡೆ ಮಾಡಿದರು. ಇದೇ ವೇಳೆ ಸಿಎಂ ಅವರು ಯುವನಿಧಿ ಯೋಜನೆಯ ಲೋಗೋ ಬಿಡುಗಡೆ ಮಾಡಿದರು. ನಂತರ ಯುವನಿಧಿ ಯೋಜನೆ ನೋಂದಣಿ ಪ್ರಕ್ರಿಯೆಗೆ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಇದೇ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯನವರು ಪ್ರಧಾನಿ ಮೋದಿ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಚುನಾವಣಾ ಪೂರ್ವದಲ್ಲಿ ಗ್ಯಾರಂಟಿ ಯೋಜನೆಗಳ ಭರವಸೆಯನ್ನು ಕಾಂಗ್ರೆಸ್ ಕೊಟ್ಟಾಗ, ಅದನ್ನು ಜಾರಿ ಮಾಡಲು ಆಗುವುದಿಲ್ಲ. ‌ಜಾರಿಯಾದರೆ ಕರ್ನಾಟಕ ಸರ್ಕಾರ ದಿವಾಳಿಯಾಗುತ್ತದೆ‌ ಎಂದು ಪ್ರಧಾನಿ ಮೋದಿಯವರು ಹೇಳಿದ್ದರು. ಆದರೆ, ರಾಜ್ಯ ದಿವಾಳಿ ಆಗಿಲ್ಲ,‌ ಐದು ಗ್ಯಾರಂಟಿ ಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದೇವೆ. ಗ್ಯಾರಂಟಿ ಜಾರಿ ಮಾಡಿದ…

Read More

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮಂಗಳವಾರ ಕೊವಿಡ್ ದಿಂದ ಇಬ್ಬರು ಮೃತಪಟ್ಟಿದ್ದಾರೆ  ಎಂದು ವರದಿಯಾಗಿದೆ. 74 ಮಂದಿಗೆ ಕೊವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 464ಕ್ಕೆ ಏರಿಕೆಯಾಗಿದೆ.  ಕಳೆದ 24 ಗಂಟೆಗಳಲ್ಲಿ 74 ಹೊಸ ಕೋವಿಡ್-19 ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ.  ಸಕ್ರಿಯ ಪ್ರಕರಣಗಳ ಸಂಖ್ಯೆ 464ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಇಂದು ರಾಜ್ಯದಲ್ಲಿ 6,403 ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಪಾಸಿಟಿವ್ ಪ್ರಮಾಣ ಶೇ. 1.15 ರಷ್ಟು ಇದೆ. ಬೆಂಗಳೂರಿನಲ್ಲಿ 2,104 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, 57 ಮಂದಿಗೆ ಸೋಂಕು ದೃಢಪಟ್ಟಿದೆ. ಬೆಂಗಳೂರು ಗ್ರಾಮಾಂತರ ಮತ್ತು ಹಾಸನದಲ್ಲಿ ತಲಾ 4, ಚಿಕ್ಕಬಳ್ಳಾಪುರದಲ್ಲಿ 3, ಮಂಡ್ಯ ಮತ್ತು ಮೈಸೂರಿನಲ್ಲಿ ತಲಾ ಇಬ್ಬರು ಹಾಗೂ ಚಾಮರಾಜನಗರ ಮತ್ತು ವಿಜಯನಗರದಲ್ಲಿ ತಲಾ ಒಂದು ಪ್ರಕರಣ ವರದಿಯಾಗಿವೆ.

Read More

ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಯ ವೈದ್ಯರಿಗಿಲ್ಲದ ವಸತಿಗೃಹದ ಬಗ್ಗೆ ನಮ್ಮತುಮಕೂರು ವಾಹಿನಿ ವರದಿಗೆ ಕೆಲವೇ ಗಂಟೆಗಳಲ್ಲಿ ಅಧಿಕಾರಿ ವರ್ಗ ಸ್ಪಂದಿಸಿದೆ. ಭೂತ ಬಂಗಲೆಯಂತಿದ್ದ ವಸತಿಗೃಹವು ಅನೈತಿಕ ಚಟುವಟಿಕೆಗಳ ತಾಣವಾಗಿತ್ತು. ಇಲ್ಲಿ ನಿಲ್ಲಲು ವೈದ್ಯರು ಹಿಂದೇಟು ಹಾಕುತ್ತಿದ್ದರು. ಪಾಳು ಬಿದ್ದ ಸ್ಥಿತಿಯಲ್ಲಿ ಇರುವ ವಸತಿಗೃಹದ  ಬಗ್ಗೆ ನಮ್ಮ ತುಮಕೂರು ವರದಿ ಮಾಡಿದ ಬೆನ್ನಲ್ಲೇ ಗೃಹ ಸಚಿವರ ಆದೇಶದಂತೆ ನೂತನ ವಸತಿ ಗೃಹಗಳ ನಿರ್ಮಾಣಕ್ಕೆ ಆದೇಶ ನೀಡಲಾಗಿದೆ. ಆದೇಶ ಪ್ರತಿಯಲ್ಲಿ ಹಳೆಯ ವಸತಿ ಗೃಹಗಳನ್ನು ನೆಲಸಮಗೊಳಿಸುವಂತೆ ಆದೇಶಿಸಲಾಗಿದೆ.  ನೂತನ ವಸತಿ ಗೃಹಗಳ ನಿರ್ಮಾಣಕ್ಕೆ ಅಡಿಪಾಯ ಹಾಕುವಂತೆ ಆದೇಶಿಸಲಾಗಿದೆ ಎಂದು  ತಾಲೂಕು ವೈದ್ಯಾಧಿಕಾರಿ ಲಕ್ಷ್ಮಿಕಾಂತ್ ಸ್ಪಷ್ಟನೆ ನೀಡಿದ್ದಾರೆ. ವರದಿ : ಮಂಜುಸ್ವಾಮಿ ಎಂ.ಎನ್. ಕೊರಟಗೆರೆ ಇದನ್ನೂ ಓದಿ:  ಕೊರಟಗೆರೆ: ವೈದ್ಯರು ಇರಬೇಕಾದ ಕೊಠಡಿಗಳು ಭೂತ ಬಂಗಲೆಯಂತಿವೆ!

Read More