Subscribe to Updates
Get the latest creative news from FooBar about art, design and business.
- ಪ್ರಥಮ ಬಿ.ಸಿ.ಎ. ಪದವಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
- ಕುಣಿಗಲ್ ಪುರಸಭಾ ವ್ಯಾಪ್ತಿಯ ಸಾರ್ವಜನಿಕರಿಗೆ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
- ತುಮಕೂರು: ‘ಕರ್ನಾಟಕ ಪಬ್ಲಿಕ್ ಸ್ಕೂಲ್’ ಸಿನಿಮಾ ಮುಹೂರ್ತ ಸಮಾರಂಭ
- ತುಮಕೂರು: ಪಾದರಕ್ಷೆ ತಯಾರಿಕಾ ಸ್ಪರ್ಧೆಗೆ ಅರ್ಜಿ
- ಭೀಕರ ಅಪಘಾತ: ಶನಿಮಹಾತ್ಮ ದೇವಾಲಯ ವ್ಯವಸ್ಥಾಪಕ ಜಗನ್ನಾಥ್ ನಿಧನ
- ನೈರ್ಮಲ್ಯ ಕಾಪಾಡಿ, ಗರ್ಭಾಶಯದ ಕ್ಯಾನ್ಸರ್ ತಡೆಗಟ್ಟಿ: ಮಹಿಳೆಯರಿಗೆ ಕಾವೇರಿ ಎನ್. ಕರೆ
- ಪೌತಿ ಖಾತೆ, ಕಂದಾಯ ಗ್ರಾಮ ಹಕ್ಕುಪತ್ರ, ಪೋಡಿ ಮುಕ್ತ ಅಭಿಯಾನ: ರೈತರ ಅಲೆದಾಟ ತಪ್ಪಿಸಲು ಸರ್ಕಾರದ ಮಹತ್ವದ ಕ್ರಮ
- ತುಮಕೂರನ್ನು ಬೆಂಗಳೂರಿನ ಭಾಗವಾಗಿಸಿ: ಸಾಧನಾ ಸಮಾವೇಶದಲ್ಲಿ ಡಾ.ಜಿ.ಪರಮೇಶ್ವರ್ ಪ್ರಸ್ತಾಪ
Author: admin
ಕರ್ನಾಟಕದ ಕ್ರಿಕೆಟಿಗ ಕೆ.ಸಿ ಕಾರಿಯಪ್ಪ ಅವರ ವಿರುದ್ದ ಪ್ರೀತಿಸಿ ವಂಚಿಸಿದ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ಅವರ ಮಾಜಿ ಪ್ರೇಯಸಿ ಆರ್ .ಟಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನು ಕೆ.ಸಿ ಕಾರಿಯಪ್ಪ ಅವರೂ ಸಹ ಮಾಜಿ ಪ್ರೇಯಸಿ ವಿರುದ್ದ ಬಾಗಲಗುಂಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ಎನ್ನಲಾಗಿದೆ. ಮದುವೆಯಾಗುವುದಾಗಿ ನಂಬಿಸಿ ಬಳಸಿಕೊಂಡು, ಈಗ ಮೋಸ ಮಾಡಿದ್ದಾರೆ ಎಂದು ಕಾರಿಯಪ್ಪ ಅವರ ಮಾಜಿ ಪ್ರಿಯತಮೆ ಆರ್.ಟಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನನಗೆ ಗರ್ಭಪಾತ ಮಾಡಿಸಿಕೊಳ್ಳಲು ಹೇಳಿದ್ದರು. ನಾನು ಮಗು ಬೇಕು ಅಂತಾ ಒತ್ತಾಯಿಸಿದ್ದೆ. ಆದರೆ ಬಲವಂತವಾಗಿ ನನಗೆ ಮಾತ್ರೆ ಕುಡಿಸಿದರು. ನನಗೆ ತುಂಬಾ ಮಾನಸಿಕವಾಗಿ ನೋವು ನೀಡಿದ್ದಾರೆ. ದೂರು ಕೊಟ್ಟಾಗಲೆಲ್ಲ ರಾಜಿ ಮಾಡಿಕೊಂಡರು ಎಂದು ಕೆ.ಸಿ ಕಾರಿಯಪ್ಪ ವಿರುದ್ದ ಮಾಜಿ ಪ್ರೇಯಸಿ ಆರೋಪ ಮಾಡಿದ್ದಾರೆ. ಇನ್ನು ಕ್ರಿಕೆಟಿಗ ಕೆ.ಸಿ ಕಾರಿಯಪ್ಪ ಅವರು ಕೂಡಾ ಮಾಜಿ ಪ್ರೇಯಸಿ ವಿರುದ್ದ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ…
ರೈತರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಸಕ್ಕರೆ ಸಚಿವ ಶಿವಾನಂದ್ ಪಾಟೀಲ್ ವಿರುದ್ದ ಆಕ್ರೋಶ ವ್ಯಕ್ತವಾಗುತ್ತಿದ್ದು, ಇದೀಗ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಕುರಿತು ಮಾತನಾಡಿರುವ ಹೆಚ್.ಡಿ ಕುಮಾರಸ್ವಾಮಿ, ರೈತರ ಬಗ್ಗೆ ಹಗುರವಾಗಿ, ಅವಹೇಳನಕಾರಿಯಾಗಿ ಮಾತನಾಡಿರುವ ಸಚಿವ ಶಿವಾನಂದ ಪಾಟೀಲ್ ಹೇಳಿಕೆ ಖಂಡನೀಯ. ಅನ್ನದಾತನ ಸಂಕಷ್ಟವನ್ನು ಅವಮಾನಿಸುವುದು ಸರಿಯಲ್ಲ . ರೈತರು ಕೇಳುತ್ತಿರುವುದು ತನ್ನ ಹಕ್ಕನ್ನಷ್ಟೇ, ಭಿಕ್ಷೆಯನ್ನಲ್ಲ ಎಂದು ವಾಗ್ದಾಳಿ ನಡೆಸಿದರು. ನಾನು ಕೃಷಿ ಸಾಲಮನ್ನಾ ಮಾಡುವ ಮುನ್ನ ರಾಜ್ಯದಲ್ಲಿ ನಡೆದ ರೈತರ ಸರಣಿ ಆತ್ಮಹತ್ಯೆ ನೆನೆಪು ಮಾಡಿಕೊಂಡರೆ ಈಗಲೂ ನನ್ನ ಮೈ ನಡುಗುತ್ತದೆ. ರೈತರ ಕಷ್ಟಗಳನ್ನು ಅವಮಾನ ಮಾಡುವುದು ಸರಿಯಲ್ಲ. ಸಚಿವರು ಇಂಥ ವಿಷಯಗಳ ಬಗ್ಗೆ ಎಚ್ಚರಿಕೆ, ಸೂಕ್ಷ್ಮತೆಯಿಂದ ಮಾತನಾಡಬೇಕು. ಸಚಿವರು ತಕ್ಷಣ ಕ್ಷಮೆ ಕೇಳಿ ತಮ್ಮ ಹೇಳಿಕೆಯನ್ನ ಹಿಂಪಡೆಯಬೇಕು ಎಂದು ಹೆಚ್.ಡಿ ಕುಮಾರಸ್ವಾಮಿ ಆಗ್ರಹಿಸಿದರು.
ಹಿಜಾಬ್ ನಿಷೇಧ ಆದೇಶ ವಾಪಸ್ ಪಡೆಯುವುದಾಗಿ ಸಿಎಂ ಸಿದ್ದರಾಮಯ್ಯ ನೀಡಿದ ಹೇಳಿಕೆಗೆ ಬಿಜೆಪಿ ವ್ಯಾಪಕ ವಿರೋಧ ವ್ಯಕ್ತಪಡಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ ಶಿವಕುಮಾರ್, ಹಿಜಾಬ್ ವಿಷಯವನ್ನು ಅನಗತ್ಯವಾಗಿ ದೊಡ್ಡದು ಮಾಡಲಾಗಿದೆ, ಈ ವಿಚಾರದ ಬಗ್ಗೆ ನಾವಿನ್ನೂ ಯೋಚನೆ ಮಾಡಿಲ್ಲ ಎಂದಿದ್ದಾರೆ. ಈ ಕುರಿತು ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್, ಹಿಜಾಬ್ ವಿಚಾರ ಚರ್ಚೆಗೆ ಬರುತ್ತಿದೆ, ಚರ್ಚೆ ಮಾಡಲಾಗುತ್ತದೆ ಎಂದು ಸಿಎಂ ಹೇಳಿದ್ದಾರೆ. ಆದರೆ ಅದೇ ವಿಚಾರವನ್ನ ದೊಡ್ಡದು ಮಾಡಲಾಗಿದೆ ಎಂದರು. ರೈತರ ಬಗ್ಗೆ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಅವರ ಹೇಳಿಕೆ ಕುರಿತು ನಾನು ಪ್ರತಿಕ್ರಿಯಿಸುವುದಿಲ್ಲ, ಆ ಬಗ್ಗೆ ಅವರನ್ನೇ ಕೇಳಿ ಎಂದರು. ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಸಂಬಂಧ ಸಚಿವರನ್ನು,ವೀಕ್ಷಕರನ್ನಾಗಿ ನೇಮಿಸಲಾಗಿದೆ. ಸಚಿವ ಸಂಪುಟ ಸಭೆಯ ಬಳಿಕ ಈ ಬಗ್ಗೆ ನಾನು ಮತ್ತು ಸಿಎಂ ಸಚಿವರ ಜೊತೆ ಚರ್ಚೆ ಮಾಡಿದ್ದೇವೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.
ರಾಜ್ಯದಲ್ಲಿ ಈಗಿರುವ ಕೋವಿಡ್ ಮಾರ್ಗಸೂಚಿಯೇ ಮುಂದುವರೆಯಲಿದ್ದು, ಹೊಸ ವರ್ಷಾಚರಣೆ, ಸಭೆ ಸಮಾರಂಭಗಳಿಗೆ ಯಾವುದೇ ನಿರ್ಬಂಧ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ದಿನೇಶ್ ಗುಂಡೂರಾವ್, ಒಮಿಕ್ರಾನ್ ಉಪತಳಿ ಜೆಎನ್.1 ಬಂದಿರುವ ಬಗ್ಗೆ ಮಾಹಿತಿ ಇತ್ತು. ಒಮಿಕ್ರಾನ್ JN.1 ಬಂದ ತಕ್ಷಣ ಯಾರು ಗಾಬರಿಯಾಗುವುದು ಬೇಡ. ರಾಜ್ಯದಲ್ಲಿ ಈಗಾಗಲೇ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದರು. ಆರೋಗ್ಯ ಇಲಾಖೆ ಅಧಿಕಾರಿಗಳು ಬಿಬಿಎಂಪಿ ಜೊತೆ ಸಭೆ ನಡೆಸಿದ್ದೇವೆ. ಹೊಸ ವರ್ಷಾಸರಣೆ ಸೇರಿದಂತೆ ಸಭೆ ಸಮಾರಂಭಗಳಿಗೆ ನಿರ್ಬಂಧ ವಿಲ್ಲ. ರಾಜ್ಯದಲ್ಲಿ ಈಗಿರುವ ಮಾರ್ಗಸೂಚಿಯೇ ಮುಂದುವರೆಯಲಿದೆ. ಏನಾದರೂ ಬದಲಾವಣೆ ತಂದರೆ ಮಾಹಿತಿ ನೀಡುತ್ತೇವೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ತುಮಕೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಚಾರದ ಗೀಳಿಗೆ ಬಿದ್ದಿದ್ದಾರೆ.ಕೇವಲ ಆರೇ ಆರು ತಿಂಗಳಲ್ಲಿ 18.50 ಕೋಟಿ ರು ಜಾಹೀರಾತಿಗೆ ಬಿಡುಗಡೆ ಆಗಿದೆ.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ 2023-24ನೇ ಸಾಲಿನ ಆಯವ್ಯಯದಲ್ಲಿ ಒದಗಿಸಿದ್ದ 37.95 ಕೋಟಿ ರು. ನಲ್ಲಿ ಈಗಾಗಲೇ 18.50 ಕೋಟಿ ರು. ಗೂ ಹೆಚ್ಚು ಮೊತ್ತದಲ್ಲಿ ಜಾಹೀರಾತು ಬಿಡುಗಡೆ ಆಗಿರುವುದು ಇದೀಗ ಬಹಿರಂಗವಾಗಿದೆ ಎಂದು ಕರ್ನಾಟಕ ರಾಷ್ರ್ಟಸಮಿತಿ ಪಕ್ಷ ರಾಜ್ಶ ಕಾರ್ಯದರ್ಶಿ ಮಲ್ಲಿಕಾರ್ಜುನ ಭಟ್ಟರಹಳ್ಳಿ ಹೇಳಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ ಸಂಪನ್ಮೂಲ ಕ್ರೋಢೀಕರಣ, ಬರ ಪರಿಹಾರ ಕಾಮಗಾರಿ ಕೈಗೊಳ್ಳಲು ಹಣ ಬಿಡುಗಡೆ ಮತ್ತು ಬರ ಪರಿಹಾರಕ್ಕೆ ಹಣ ಹೊಂದಿಸಲು ಏದುಸಿರು ಬಿಡುತ್ತಿರುವ ಸರ್ಕಾರವು ಜಾಹೀರಾತುಗಳಿಗೆ ಕೋಟ್ಯಂತರ ರುಪಾಯಿ ಖರ್ಚು ಮಾಡುತ್ತಿದೆ ಎಂದು ಅವರು ಆರೋಫಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ಸಾಧನೆಗಳನ್ನು ಪ್ರಚಾರ ಮಾಡಲು “ದ ಪಾಲಿಸಿ ಫ್ರಂಟ್ ” ನ ಸೇವೆ ಪಡೆಯಲು ವಾರ್ತಾ ಇಲಾಖೆ ಕೋರಿದ್ದ ಪ್ರಸ್ತಾವನೆಯಲ್ಲಿ ಜಾಹೀರಾತಿಗೆ ಮಾಡಿರುವ ಖರ್ಚಿನ ವಿವರವನ್ನು ಪ್ರಸ್ತಾವಿಸಲಾಗಿದೆ. ‘ಸಿದ್ದರಾಮಯ್ಯ ಅವರ ಅಂತರ್ಜಾಲದಿಂದ…
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೈಸೂರು ಜಿಲ್ಲೆಯ ನಂಜನಗೂಡು ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಿರುವ ಕವಲಂದೆ, ಅಂತರಸಂತೆ, ಜಯಪುರ ಪೊಲೀಸ್ ಠಾಣೆಗಳನ್ನು ಉದ್ಘಾಟಿಸಿದರು. ಕ್ಷೇತ್ರದ ಶಾಸಕರಾದ ದರ್ಶನ್ ಧ್ರುವನಾರಾಯಣ್, ಗೃಹ ಸಚಿವರಾದ ಜಿ.ಪರಮೇಶ್ವರ್, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಕ್ಷೇತ್ರದ ಶಾಸಕರಾದ ಅನಿಲ್ ಚಿಕ್ಕಮಾದು, ರವಿಶಂಕರ್, ಎ.ಆರ್.ಕೃಷ್ಣಮೂರ್ತಿ, ಆಶ್ರಯ ಸಮಿತಿ ಅಧ್ಯಕ್ಷರಾದ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಸೇರಿ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಕ್ರಿಸ್ ಮಸ್ ಟ್ರಿ ಪ್ರದರ್ಶನ ಹಾಗೂ ಟಿಕೆಟ್ ನಿಗದಿಪಡಿಸಿರುವುದನ್ನು ವಿರೋಧಿಸಿ ಮಾಲ್ ಸಿಬ್ಬಂದಿಗೆ ತೊಂದರೆ ಹಾಗೂ ಬೆದರಿಕೆ ಹಾಕಿರುವ ಆರೋಪದಡಿ ಸಂಘಪರಿವಾರದ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಮತ್ತು ಅವರ ನಾಲ್ವರು ಬೆಂಬಲಿಗರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬ್ಯಾಟರಾಯನಪುರದ ಮಾಲ್ ಆಫ್ ಏಷ್ಯಾದ ಸೆಕ್ಯೂರಿಟಿ ಅಸಿಸ್ಟೆಂಟ್ ಮ್ಯಾನೇಜರ್ ಸ್ಟೀಫನ್ ವಿಕ್ಟರ್ ಎಂಬುವರು ನೀಡಿರುವ ದೂರಿನನ್ವಯ ಇಲ್ಲಿನ ಕೊಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
ಬೆಂಗಳೂರು: ಯಾವ ದೇವರು ಮತ್ತು ಧರ್ಮ ನಮ್ಮನ್ನು ಉದ್ಧಾರ ಮಾಡುವುದಿಲ್ಲ, ಶಿಕ್ಷಣ ಹಾಗೂ ನಮ್ಮ ಸ್ವಯಂ ಪರಿಶ್ರಮದಿಂದಲೇ ನಮ್ಮ ಉದ್ಧಾರ ಸಾಧ್ಯ ಎಂಬ ಬಾಬಾ ಸಾಹೇಬರ ಮಾತುಗಳನ್ನು ನಾವು ಎಂದಿಗೂ ಮರೆಯಬಾರದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ.ಮಹದೇವಪ್ಪ ತಿಳಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಒಂದು ವೇಳೆ ಅವರ ಮಾತನ್ನು ನಾವು ಮರೆತರೆ ರಾಜಕೀಯ ಕಾರಣಕ್ಕಾಗಿ ಇವರು ಮಂದಿರ ಮಸೀದಿಗಳೇ ಪ್ರಮುಖವೆಂದು ವಾದಿಸುತ್ತಾ, ಅದರೊಳಗೆ ಶೋಷಿತ ಸಮುದಾಯ ಪ್ರವೇಶ ಮಾಡದಂತೆ ಹುನ್ನಾರ ರೂಪಿಸುತ್ತವೆ ಎಂದರು. ರಾಜ್ಯದ ಶಾಲೆ ಹಾಗೂ ಹಾಸ್ಟೆಲ್ ಸ್ಥಿತಿಗತಿ ಅರಿಯಲು ವಿಚಕ್ಷಣ ದಳ ರಚನೆ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್ಸಿ ಮಹದೇವಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ವಸತಿ ಶಾಲೆಗಳನ್ನು ಶಿಸ್ತುಬದ್ಧವಾಗಿ ಮತ್ತು ಶಿಕ್ಷಣದ ಆಶಯಕ್ಕೆ ಅನುಗುಣವಾಗಿ ನಿರ್ವಹಣೆ ಮಾಡಲು ಬೇಕಾದ ವ್ಯವಸ್ಥೆಯನ್ನು ಸರ್ಕಾರ ಮಾಡುತ್ತಿದೆ ಎಂದರು. ಇನ್ನು ಮುಂದೆ ಶಾಲೆ ಹಾಗೂ ಹಾಸ್ಟೆಲ್ ಗಳ ಹಂತದಲ್ಲಿ ವಿಚಕ್ಷಣ ದಳವನ್ನು ರಚಿಸುವ ಕೆಲಸ…
ಬೆಂಗಳೂರು: ಬಿಜೆಪಿಯವರು ಚುನಾವಣೆ ಹಿನ್ನೆಲೆ ಹಿಜಾಬ್ ಅನ್ನು ಅಸ್ತ್ರವನ್ನಾಗಿ ಪ್ರಯೋಗಿಸುತ್ತಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆರೋಪಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇದಕ್ಕೂ ಮುಂಚೆ ಹಿಜಾಬ್ ಹಾಕಿಕೊಂಡು ಬರೋರನ್ನು ಯಾರು ಕೇಳುತ್ತಿದ್ದರು. ಬಿಜೆಪಿಯವರೇ ಅದನ್ನ ಕ್ರಿಯೇಟ್ ಮಾಡಿದ್ದು ಅಲ್ಲವೇ, ಈಗ ಅವರು ಮತ್ತದೇ ಹಿಜಾಬ್ ವಿಚಾರವನ್ನು ದೊಡ್ಡ ವಿಷಯ ಮಾಡಲು ಹೊರಟಿದ್ದಾರೆ ಎಂದು ಡಾ. ಜಿ ಪರಮೇಶ್ವರ್ ಕಿಡಿ ಕಾರಿದರು. ಹಿಜಾಬ್ ವಿಚಾರವನ್ನೇ ಬಿಜೆಪಿಯವರು ದೊಡ್ಡದಾಗಿ ಬಿಂಬಿಸುತ್ತಿದ್ದಾರೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಆರೋಪಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಅದನ್ನೇ ಮೂಲವಾಗಿಟ್ಟುಕೊಂಡು ದೊಡ್ಡ ಪ್ರಮಾಣದಲ್ಲಿ ಬಿಂಬಿಸುತ್ತಿದ್ದಾರೆ. ಅದರ ಅವಶ್ಯಕತೆ ಇಲ್ಲ ಎಂಬುದು ನನ್ನ ಭಾವನೆ ಎಂದರು. ಕಾನೂನನ್ನು ಪರಿಶೀಲನೆ ಮಾಡಿಯೇ ಮಾಡುತ್ತೇವೆ. ಕಾನೂನುನನ್ನ ಬಿಟ್ಟು ಮಾಡೋದಕ್ಕೆ ಹೋಗುವುದಿಲ್ಲ. ಕಾನೂನು ಸುವ್ಯವಸ್ಥೆಯನ್ನು ಹ್ಯಾಂಡಲ್ ಮಾಡೋದಕ್ಕೆ ಸಮರ್ಥವಾಗಿದೆ ಎಂದರು.
ಪ್ರಧಾನಿ ಮೋದಿ ಅವರನ್ನು ದೆಹಲಿಯಲ್ಲಿ ಭೇಟಿ ಆದ ಬಳಿಕ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ನನಗೆ ಫೋನ್ ಮಾಡಿ ಮಾಹಿತಿ ನೀಡಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಸಂಚಲನ ಸೃಷ್ಟಿಸುವ ಭರವಸೆ ಮೂಡಿಸಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿಕೆ ನೀಡಿದ್ದಾರೆ. ದೇವೇಗೌಡರ ಜತೆಗೂ ಪ್ರಧಾನಿಯವರು ಆತ್ಮೀಯವಾಗಿ ಮಾತಾಡಿದ್ದಾರೆ. ಈ ಸಲ ಲೋಕಸಭೆ ಚುನಾವಣೆಯಲ್ಲಿ ನಾವು ಎಲ್ಲಾ ಸ್ಥಾನಗಳನ್ನೂ ಗೆಲ್ಲುತ್ತೇವೆ ಎಂದರು. ಸೀಟು ಹಂಚಿಕೆಯಲ್ಲಿ ಒಂದು ಸೀಟ್ ಹೆಚ್ಚು ಕಡಿಮೆ ಆದರೂ ನಡೆಯುತ್ತದೆ ಎಂದಿದ್ದಾರೆ. ನಾನು ಪಕ್ಷದ ಸಿಪಾಯಿ. ಹೈಕಮಾಂಡ್ ಹೇಳಿದಂತೆ ನಡೆದುಕೊಳ್ತಿನಿ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೋರಾಟ ಮಾಡೋದೇ ನಮ್ಮಗುರಿ. ಅದನ್ನ ಹೈಕಮಾಂಡ್ ಬಳಿ ಚರ್ಚೆ ಮಾಡ್ತೀನಿ. 28ಕ್ಕೆ 28 ಕ್ಷೇತ್ರ ಗೆಲ್ಲೋದೆ ನಮ್ಮಗುರಿ. ಅದರ ಬಗ್ಗೆ ನಾವು ನಿರ್ಧಾರ ಮಾಡ್ತಿದ್ದೇವೆ. ಕೇಂದ್ರದಲ್ಲಿ ಹೈಕಮಾಂಡ್ ಕೂಡ ಯಾರನ್ನ ಅಭ್ಯರ್ಥಿ ಮಾಡಬೇಕು ಅಂತ ಚರ್ಚೆ ನಡೆಸುತ್ತಿದೆ. ಯಾರನ್ನ ಅಭ್ಯರ್ಥಿ…