Subscribe to Updates
Get the latest creative news from FooBar about art, design and business.
- ಪ್ರಥಮ ಬಿ.ಸಿ.ಎ. ಪದವಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
- ಕುಣಿಗಲ್ ಪುರಸಭಾ ವ್ಯಾಪ್ತಿಯ ಸಾರ್ವಜನಿಕರಿಗೆ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
- ತುಮಕೂರು: ‘ಕರ್ನಾಟಕ ಪಬ್ಲಿಕ್ ಸ್ಕೂಲ್’ ಸಿನಿಮಾ ಮುಹೂರ್ತ ಸಮಾರಂಭ
- ತುಮಕೂರು: ಪಾದರಕ್ಷೆ ತಯಾರಿಕಾ ಸ್ಪರ್ಧೆಗೆ ಅರ್ಜಿ
- ಭೀಕರ ಅಪಘಾತ: ಶನಿಮಹಾತ್ಮ ದೇವಾಲಯ ವ್ಯವಸ್ಥಾಪಕ ಜಗನ್ನಾಥ್ ನಿಧನ
- ನೈರ್ಮಲ್ಯ ಕಾಪಾಡಿ, ಗರ್ಭಾಶಯದ ಕ್ಯಾನ್ಸರ್ ತಡೆಗಟ್ಟಿ: ಮಹಿಳೆಯರಿಗೆ ಕಾವೇರಿ ಎನ್. ಕರೆ
- ಪೌತಿ ಖಾತೆ, ಕಂದಾಯ ಗ್ರಾಮ ಹಕ್ಕುಪತ್ರ, ಪೋಡಿ ಮುಕ್ತ ಅಭಿಯಾನ: ರೈತರ ಅಲೆದಾಟ ತಪ್ಪಿಸಲು ಸರ್ಕಾರದ ಮಹತ್ವದ ಕ್ರಮ
- ತುಮಕೂರನ್ನು ಬೆಂಗಳೂರಿನ ಭಾಗವಾಗಿಸಿ: ಸಾಧನಾ ಸಮಾವೇಶದಲ್ಲಿ ಡಾ.ಜಿ.ಪರಮೇಶ್ವರ್ ಪ್ರಸ್ತಾಪ
Author: admin
ವೈದ್ಯಕೀಯ ಸೀಟುಗಳ ಸಂಖ್ಯೆಯನ್ನು 40,000 ದಷ್ಟು ಹೆಚ್ಚಳ ಮಾಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ದೇಶದಲ್ಲಿನ ವೈದ್ಯಕೀಯ ಸೀಟುಗಳ ಸಂಖ್ಯೆಯನ್ನು 40,000 ದಷ್ಟು ಹೆಚ್ಚಳ ಮಾಡಲು ತೀರ್ಮಾನಿಸಲಾಗಿದೆ ಎಂದು ಜೋಶಿ ಹೇಳಿದ್ದಾರೆ. ಬಡವರ ಮಕ್ಕಳು ವೈದ್ಯಕೀಯ ಶಿಕ್ಷಣ ಪಡೆಯಲು ಅನುಕೂಲವಾಗಬೇಕೆನ್ನುವುದು ಸರ್ಕಾರದ ಆಶಯವಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಪ್ರಸ್ತುತ ದೇಶದಲ್ಲಿ 1.1 ಲಕ್ಷದಷ್ಟು ಇರುವ ವೈದ್ಯಕೀಯ ಸೀಟುಗಳನ್ನು 2029ರ ವೇಳೆಗೆ 1.50 ಲಕ್ಷಕ್ಕೆ ಹೆಚ್ಚಳ ಮಾಡಲು ತೀರ್ಮಾನಿಸಲಾಗಿದೆ ಎಂದು ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಸಾಲಮನ್ನಾ ಆಸೆಗೆ ರೈತರು ಬರಗಾಲ ಬರಲಿ ಎನ್ನುತ್ತಾರೆ ಎಂದು ಹೇಳುವ ಮೂಲಕ ಸಕ್ಕರೆ ಸಚಿವ ಶಿವಾನಂದ್ ಪಾಟೀಲ್ ಉಡಾಫೆ ಮಾತುಗಳನ್ನಾಡಿದ್ದಾರೆ. ಅಥಣಿ ತಾಲೂಕಿನ ಸುಟ್ಟಟ್ಟಿ ಗ್ರಾಮದಲ್ಲಿ ನಡೆದ ವಿವಿಧೋದ್ದೇಶ ಸಹಕಾರಿ ಸಂಘದ 25ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಸಚಿವ ಶಿವಾನಂದ್ ಪಾಟೀಲ್, ಪದೇ ಪದೇ ಬರಗಾಲ ಬರಲಿ ಎಂದು ರೈತರಿಗೆ ಆಸೆ ಇರುತ್ತದೆ. ಕೃಷ್ಣಾ ನದಿ ನೀರು ಪುಕ್ಸಟ್ಟೆ ಇದೆ, ಕರೆಂಟ್ ಕೂಡ ಪುಕ್ಸಟ್ಟೆ ಇದೆ. ಬಹಳಷ್ಟು ಮುಖ್ಯಮಂತ್ರಿಗಳು ಬಿತ್ತನೆ ಬೀಜ ಕೊಟ್ಟರು, ಗೊಬ್ಬರನೂ ಕೊಟ್ಟರು. ಬರಗಾಲ ಬಂದರೇ ರೈತರು ಸಾಲಮನ್ನಾದ ನಿರೀಕ್ಷೆ ಇಟ್ಟುಕೊಳ್ಳುತ್ತಾರೆ ಎಂದು ಹೇಳಿಕೆ ನೀಡಿದ್ದಾರೆ. ಸಾಲಮನ್ನಾ ಆಸೆಗೆ ರೈತರು ಬರಗಾಲ ಬರಲಿ ಎನ್ನುತ್ತಾರೆ. ಹಿಂದಿನ ಸರ್ಕಾರಗಳು ಸಾಲಮನ್ನಾ ಮಾಡಿವೆ. ಆದರೆ ಸರ್ಕಾರ ಸಂಕಷ್ಟದಲ್ಲಿದ್ದಾಗ ರೈತರ ಸಾಲಮನ್ನ ಕಷ್ಟ ಸಾಧ್ಯ. ಎಂದು ಸಚಿವ ಶಿವಾನಂದ್ ಪಾಟೀಲ್ ತಿಳಿಸಿದ್ದಾರೆ.
ಬೆಂಗಳೂರು: ಡಿಸೆಂಬರ್ 19 ರಂದು ಬೇಗೂರು ಬಳಿಯ ಲಕ್ಷ್ಮಿ ಬಡಾವಣೆಯಲ್ಲಿ ಅಡುಗೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಐವರಿಗೆ ಗಾಯವಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಗಾಯಗೊಂಡಿದ್ದ ಮಗು, ತಂದೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಎರಡೂವರೆ ವರ್ಷದ ಮಗು ರೋಹನ್ ಮತ್ತು ತಂದೆ ಸಂದೇಶ್(30) ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಉಳಿದ ಮೂವರು ಗಾಯಾಳುಗಳಿಗೆ ಚಿಕಿತ್ಸೆ ಮುಂದುವರಿದಿದೆ. ಡಿ.19 ರಂದು ಬೇಗೂರು ಠಾಣಾ ವ್ಯಾಪ್ತಿಯ ಗಾರ್ವೆಬಾವಿಪಾಳ್ಯದ ಲಕ್ಷ್ಮೀ ಲೇಔಟ್ನಲ್ಲಿ ಸುಬ್ರಮಣಿ ಎಂಬುವರಿಗೆ ಸೇರಿದ ಕಟ್ಟಡದಲ್ಲಿ ಅಡುಗೆ ಅನಿಲ ಸೋರಿಕೆಯಿಂದ ಸಿಲಿಂಡರ್ ಸ್ಫೋಟಗೊಂಡು ಒಂದೇ ಕುಟುಂಬದ ಐವರು ಗಾಯಗೊಂಡಿದ್ದರು. ಘಟನೆಯಲ್ಲಿ ಉತ್ತರ ಪ್ರದೇಶ ಮೂಲದ ಸಂದೇಶ್(30), ಆತನ ನಾದಿನಿ ನಿಖೀಲಾ(26) ಮತ್ತು ಮೂವರು ಮಕ್ಕಳಾದ ರೋಷಿಣಿ, ರೋಹನ್ ಹಾಗೂ ರೋಷನ್ ಎಂಬುವರು ಗಾಯಗೊಂಡಿದ್ದರು. ಆದರೆ ಈಗ ಸಂದೇಶ್ ಹಾಗೂ ರೋಹನ್ ಸಾವನ್ನಪ್ಪಿದ್ದಾರೆ.
ಹಾವೇರಿ: ಹೆಂಡತಿ ಮೇಲೆ ಅನುಮಾನ ಪಟ್ಟು ಕೊಲೆ ಮಾಡಿದ ಘಟನೆ ನಡೆದಿದೆ. ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕದರಮಂಡಲ ನಿವಾಸಿ ಪತಿ ರೇವಣಪ್ಪ ಆರೋಪಿಯಾಗಿದ್ದಾನೆ. ಪವಿತ್ರ ಮೃತ ದುರ್ದೈವಿ. ಮದುವೆ ಆಗಿ ಆರಂಭದಲ್ಲಿ ಎಲ್ಲವೂ ಚೆನ್ನಾಗಿ ಇತ್ತು. ಆದರೆ, ಬರು ಬರುತ್ತಾ ಮದ್ಯದ ದಾಸನಾದ ರೇವಣಪ್ಪ ನಿತ್ಯ ಕುಡಿದ ಅಮಲಿನಲ್ಲಿ ಜಗಳ ವಾಡುತ್ತಿದ್ದನಂತೆ. ನೆರೆ-ಹೊರೆಯವರ ಜೊತೆ ಮಾತನಾಡಿದ್ರು, ಸಂಬಂಧ ಕಲ್ಪಿಸಿ ಜಗಳ ವಾಡುತ್ತಾ ಕಿರಿಕಿರಿ ಮಾಡುತ್ತಿದ್ದ. ಆದ್ರೆ, ಈ ಎಲ್ಲವನ್ನು ಸಹಿಸಿಕೊಂಡು ಕಳೆದ ಐದು ವರ್ಷದಿಂದ ಪವಿತ್ರ ಸಂಸಾರ ನಿಬಾಯಿಸಿಕೊಂಡು ಬಂದಿದ್ದಳು. ಪವಿತ್ರಾ ಹಸಿ ಬಾಣಂತಿ ನಿನ್ನೆ ರಾತ್ರಿ ಐದು ತಿಂಗಳ ಕಂದಮ್ಮನನ್ನು ಕಂಕಳಲ್ಲಿ ಕೂರಿಸಿಕೊಂಡು ಏಕಾದಶಿ ಹಿನ್ನೆಲೆ ಶಿವನ ದರ್ಶನಕ್ಕೆ ದೇವಸ್ಥಾನಕ್ಕೆ ಹೋಗಿದ್ದಳು. ತನ್ನ ಗಂಡ ತನ್ನ ತವರು ಮನೆಗೆ ಬಂದಿದ್ದಾನೆ ಎಂದು ಸುದ್ದಿ ಕೇಳಿದ ತಕ್ಷಣ ಪವಿತ್ರ, ನನ್ನ ಗಂಡ ನನ್ನ ಮಕ್ಕಳನ್ನು ಎತ್ತಿಕೊಂಡು ಮುದ್ದಾಡುತ್ತಾನೆ ಎಂಬ ಆಸೆಯಿಂದ ಧಾವಂತದಲ್ಲಿ ಮನೆಗೆ ಬಂದಿದ್ದಳು. ಆದ್ರೆ, ಪಾಪಿ ಪತಿ ಅನುಮಾನ…
ಮಧ್ಯಪ್ರದೇಶ: ನಾಯಿ ತನ್ನನ್ನು ನೋಡಿ ಬೊಗಳಿತು ಎನ್ನುವ ಒಂದು ಕ್ಷುಲ್ಲಕ ಕಾರಣಕ್ಕಾಗಿ ಕೋಪದಲ್ಲಿ ವ್ಯಕ್ತಿಯೊಬ್ಬ ಮಾಲೀಕರನ್ನೇ ಹತ್ಯೆ ಮಾಡಿರುವ ಘಟನೆ ನಡೆದಿದೆ. ಆರೋಪಿ ತನ್ನ ಅಂಗಡಿಯನ್ನು ಮುಚ್ಚಿ ಮನೆಗೆ ಹೋಗುತ್ತಿದ್ದಾಗ ಘಟನೆ ನಡೆದಿದೆ. ರಾತ್ರಿ 10.30 ರ ಸುಮಾರಿಗೆ ಅವರು ಸಮುದಾಯ ಭವನದ ಬಳಿ ಇದ್ದಾಗ ನಾಯಿಯೊಂದು ನಿರಂತರವಾಗಿ ಬೊಗಳಲು ಪ್ರಾರಂಭಿಸಿತು ಮತ್ತು ಆ ವ್ಯಕ್ತಿಗೆ ರಸ್ತೆಯ ಮೂಲಕ ಹೋಗಲು ಸಾಧ್ಯವಾಗಲಿಲ್ಲ ಎಂದು ಆಜಾದ್ ನಗರ ಪೊಲೀಸ್ ಠಾಣೆ ಪ್ರಭಾರಿ ನೀರಜ್ ಮೇಧಾ ತಿಳಿಸಿದ್ದಾರೆ. 65 ವರ್ಷದ ಮಹಿಳೆಯೊಬ್ಬರು ತನ್ನ ಮನೆಯಿಂದ ಹೊರಬಂದಿದ್ದರು ಮತ್ತು ಆ ವ್ಯಕ್ತಿ ಜತೆ ಜಗಳಕ್ಕಿಳಿದಿದ್ದರು. ಆಗ ಆ ವ್ಯಕ್ತಿ ಮಹಿಳೆಯ ಹೊಟ್ಟೆಗೆ ಒದ್ದಿದ್ದಾನೆ, ಆಕೆ ತಕ್ಷಣ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಆರೋಪಿಯ ವಿರುದ್ಧ ಕೊಲೆ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ಸಾವನ್ನಪ್ಪಿದ್ದಾರೆ. ಶೀರಿ ಬಾರಾಮುಲ್ಲಾದ ಗಂಟ್ಮುಲ್ಲಾ ಎಂಬಲ್ಲಿರುವ ಮಸೀದಿಯಲ್ಲಿ ಉಗ್ರರು ಗುಂಡಿನ ದಾಳಿ ವೇಳೆ ಪ್ರಾರ್ಥನೆ ಸಲ್ಲಿಸುತ್ತಿದ್ದ ನಿವೃತ್ತ ಪೊಲೀಸ್ ಅಧಿಕಾರಿ ಮೊಹಮ್ಮದ್ ಶಫಿ ಅವರು ಗಂಭೀರವಾಗಿ ಗಾಯಗೊಂಡು, ಮೃತಪಟ್ಟಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ನಡುವೆ ದಾಳಿ ನಡೆಸಿದ ಉಗ್ರರು ಸ್ಥಳದಿಂದ ಕಾಲ್ಕಿತ್ತು, ಉಗ್ರರ ಸದೆಬಡಿಯು ಭದ್ರತಾ ಪಡೆಗಳು ಸ್ಥಳದಲ್ಲಿ ಕಾರ್ಯಾಚರಣೆ ಆರಂಭಿಸಿದ್ದಾರೆ.
ಚಿಕ್ಕಮಗಳೂರು: ದತ್ತ ಜಯಂತಿ ಪ್ರಯುಕ್ತ ತಾಲೂಕಿನ ಆಲ್ದೂರಿನಲ್ಲಿ ಶನಿವಾರ ನಡೆದ ಶೋಭಾ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಮತ್ತು ಮಾಜಿ ಸಚಿವ ಸಿ.ಟಿ. ರವಿ ಕಾರ್ಯಕರ್ತರೊಂದಿಗೆ ಕುಣಿದು ಕುಪ್ಪಳಿಸಿದ್ದಾರೆ. ರಸ್ತೆಯುದ್ಧಕ್ಕೂ ಜೈ ಶ್ರೀರಾಮ್ ಹಾಗೂ ದತ್ತಾತ್ರೇಯ ಎಂಬ ಘೋಷಣೆಯೊಂದಿಗೆ ಕೈಯಲ್ಲಿ ಭಗವಾ ಧ್ವಜ ಹಿಡಿದು ಸಾವಿರಾರರು ಕಾರ್ಯಕರ್ತರು, ದತ್ತ ಮಾಲಾಧಾರಿಗಳೊಂದಿಗೆ ಡಿಜೆ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿತ್ತು.
ಬಾಳೆಕಾಯಿಯಲ್ಲೂ ಇವೆ ಅನೇಕ ಆರೋಗ್ಯ ಪ್ರಯೋಜನಗಳು: ಬಾಳೆ ಕಾಯಿಯನ್ನು ತಿನ್ನುವುದರಿಂದ ಹಲವಾರು ಅರೋಗ್ಯ ಪ್ರಯೋಜನಗಳಿವೆ. ಬಾಳೆ ಕಾಯಿ ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಪೊಟ್ಯಾಸಿಯಮ್, ವಿಟಮಿನ್ ಬಿ6 ಮತ್ತು ವಿಟಮಿನ್ ಸಿ ಸಮೃದ್ಧವಾಗಿದೆ. ಬಾಳೆ ಕಾಯಿಯು ಕರುಳಿನ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಹಸಿವನ್ನು ಕಡಿಮೆ ಮಾಡುತ್ತದೆ. ಇವುಗಳಲ್ಲಿರುವ ಪೆಕ್ಟಿನ್ ತೂಕ ಹೆಚ್ಚಾಗುವುದನ್ನು ತಡೆಯುತ್ತದೆ. ಹೃದ್ರೋಗ, ಕ್ಯಾನ್ಸರ್, ಕಣ್ಣಿನ ಸಮಸ್ಯೆಗಳನ್ನು ತಡೆಯುತ್ತದೆ. ನುಗ್ಗೆ ಸೊಪ್ಪಿನಿಂದ ಎಷ್ಟು ಪ್ರಯೋಜನಗಳಿವೆ ಗೊತ್ತಾ?: ಆಯುರ್ವೇದದಲ್ಲಿ ನುಗ್ಗೆ ಸೊಪ್ಪಿಗೆ ವಿಶೇಷ ಸ್ಥಾನವಿದೆ. ಇದನ್ನು ಅಮೃತವೆಂದು ಪರಿಗಣಿಸಲಾಗುತ್ತದೆ. ಏಕೆಂದರೆ ನುಗ್ಗೆ ಸೊಪ್ಪು 300ಕ್ಕೂ ಹೆಚ್ಚು ರೋಗಗಳನ್ನು ಗುಣಪಡಿಸುತ್ತದೆ ಎನ್ನುತ್ತಾರೆ ತಜ್ಞರು. ಈ ನುಗ್ಗೆ ಸೊಪ್ಪಿನಲ್ಲಿ ವಿಟಮಿನ್ ಸಿ ಇದ್ದು ಇದು ರೋಗನಿರೋಧಕ ಶಕ್ತಿಯನ್ನು ಸುಧಾರಿಸುತ್ತದೆ. ಇದು ಮಧುಮೇಹಿಗಳಿಗೂ ಒಳ್ಳೆಯದು. ನುಗ್ಗೆ ಸೊಪ್ಪು ಮೂಳೆಗಳಿಗೆ ಅಗತ್ಯವಾದ ಕ್ಯಾಲ್ಸಿಯಂ ಮತ್ತು ಮೆಗ್ನಿಸಿಯಮ್ ಅನ್ನು ಒದಗಿಸುತ್ತದೆ ಎಂದು ತಜ್ಞರು ಬಹಿರಂಗಪಡಿಸಿದ್ದಾರೆ. ಚಳಿಗಾಲದಲ್ಲಿ ಮೀನು ತಿನ್ನುತ್ತೀರಾ?…
ಹಿಜಾಬ್ ನಿಷೇಧ ವಾಪಸ್ ಪಡೆಯುವ ಸಿಎಂ ಸಿದ್ದರಾಮಯ್ಯ ನಿರ್ಧಾರವನ್ನ ಮಂಡ್ಯದಲ್ಲಿ ಹಿಜಾಬ್ ಹೋರಾಟಗಾರ್ತಿ ಮುಸ್ಕಾನ್ ಸ್ವಾಗತಿಸಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಮುಸ್ಕಾನ್, ಹಿಜಾಬ್ ನಿಷೇಧ ವಾಪಸ್ ಪಡೆಯುವ ನಿರ್ಧಾರ ಸ್ವಾಗತಿಸುತ್ತೇನೆ. ಆದೇಶ ಹಿಂಪಡೆಯುವ ನಿರ್ಧಾರ ದಿಂದ ಖುಷಿಯಾಗಿದೆ. ನನ್ನ ಓದು ಅರ್ಧಕ್ಕೆ ನಿಲ್ಲಿಸಿದ್ದೆ. ಈಗ ಮತ್ತೆ ಕಾಲೇಜಿಗೆ ಹೋಗುತ್ತೇನೆ ಎಂದಿದ್ದಾರೆ. ಕೋರ್ಟ್ ನಿಂದ ನ್ಯಾಯ ಸಿಗುವ ವಿಶ್ವಾಸವಿದೆ. ಹಿಜಾಬ್ ನಿಂದ ವಿದ್ಯಾಭ್ಯಾಸ ಬಿಟ್ಟಿದ್ದವರು ವಾಪಸ್ ಕಾಲೇಜಿಗೆ ಬನ್ನಿ. ಮಕ್ಕಳ ಶಿಕ್ಷಣದಲ್ಲೂ ರಾಜಕೀಯ ಮಾಡಬಾರದು. ನಮ್ಮ ಹಕ್ಕು ನಮಗೆ ನೀಡಿದಕ್ಕೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿ.ಕೆ. ಶಿವಕುಮಾರ್ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದು ತಿಳಿಸಿದ್ದಾರೆ.
1 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಪುರಸಭೆಯ ಇಬ್ಬರು ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಶ್ರೀರಂಗಪಟ್ಟಣ ಪುರಸಭೆಯ ಮುಖ್ಯಾಧಿಕಾರಿ ರಾಣಿ ಹಾಗೂ ಕಂದಾಯ ಅಧಿಕಾರಿ ಗಿರೀಶ್ ಲೋಕಾಯುಕ್ತ ಬಲೆಗೆ ಬಿದ್ದವರು. ಪೌತಿ ಖಾತೆ ಮಾಡಿಕೊಡಲು ಅಧಿಕಾರಿಗಳಿಬ್ಬರೂ ಮಂಡ್ಯ ಮೂಲದ ಪ್ರಶಾಂತ್ ಎಂಬುವವರ ಬಳಿ 2 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಕಚೇರಿಯಲ್ಲಿ ಮುಂಗಡವಾಗಿ 1 ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಡಿವೈಎಸ್ ಪಿ ಸುನೀಲ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ಇಬ್ಬರು ಅಧಿಕಾರಿಗಳನ್ನು ವಶಕ್ಕೆ ಪಡೆದಿದ್ದಾರೆ.