Author: admin

ದೇವನಹಳ್ಳಿ: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ, ದೆಹಲಿಗೆ ಅಕ್ರಮವಾಗಿ ಸಾಗಿಸುತ್ತಿದ್ದ 26 ಕೋಟಿ ಮೌಲ್ಯದ 2.6 ಕೆಜಿ ಕೊಕೇನ್ ವಶಕ್ಕೆ ಪಡೆದಿದ್ದಾರೆ. ಕೊಕೇನ್ ಸಮೇತ ಮಹಿಳೆಯನ್ನ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದು ಬೆಂಗಳೂರಿನ ಡಿಆರ್ ​ಐ ಕಚೇರಿಯಲ್ಲಿ ಮಹಿಳೆಯ ವಿಚಾರಣೆ ನಡೆಸಲಾಗುತ್ತಿದೆ. ಪ್ರವಾಸಿ ವೀಸಾ ಮೇರೆಗೆ ದೇಶಕ್ಕೆ ಬಂದಿದ್ದ ಕೀನ್ಯಾ ಮೂಲದ 36 ವರ್ಷದ ಮಹಿಳೆಯನ್ನು ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದೆ. ಮಹಿಳೆ ಲಗ್ಗೇಜ್ ಬ್ಯಾಗ್​ನಲ್ಲಿ ಕೊಕೇನ್ ಮರೆಮಾಚಿ ಬೆಂಗಳೂರಿನಿಂದ ದೆಹಲಿಗೆ ಸಾಗಿಸಲು ಯತ್ನಿಸುತ್ತಿದ್ದಳು. ಈ ವೇಳೆ ಸಿಕ್ಕಿಬಿದ್ದಿದ್ದಾಳೆ. ಇಂಡಿಗೋ ವಿಮಾನದಲ್ಲಿ ದೆಹಲಿಗೆ ತೆರಳಲು ಚೆಕ್ ಇನ್ ಆಗ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾಳೆ. ಕೊಕೇನ್ ಸಮೇತ ಮಹಿಳೆಯನ್ನ ವಶಕ್ಕೆ ಪಡೆದ ಅಧಿಕಾರಿಗಳು ಬೆಂಗಳೂರಿನ ಡಿಆರ್ ಐ ಕಚೇರಿಯಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.

Read More

ಗೋಧ್ರಾ ಮಾದರಿಯಲ್ಲಿ ಮತ್ತೊಂದು ಘಟನೆ ನಡೆಯಬಹುದು. ಅಯೋಧ್ಯೆಗೆ ತೆರಳುವವರಿಗೆ ರಕ್ಷಣೆ ನೀಡಿ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಎಂಎಲ್ ಸಿ ಬಿ.ಕೆ. ಹರಿಪ್ರಸಾದ್ ಅವರನ್ನ ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ತಮ್ಮ ವಿರುದ್ದವೇ ವಿಚಾರಣೆ ನಡೆಸಿದ ಹಿನ್ನೆಲೆ ಸರ್ಕಾರದ ವಿರುದ್ದ ಎಂಎಲ್ ಸಿ ಬಿ.ಕೆ. ಹರಿಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಕೆಕೆ ಗೆಸ್ಟ್ ಹೌಸ್ ನಲ್ಲಿ  ಸಿಸಿಬಿ ಪೊಲೀಸರು ಬಿ.ಕೆ. ಹರಿಪ್ರಸಾದ್ ಅವರನ್ನ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಪೊಲೀಸರಿಗೆ ವಿವಿಐಪಿ ಟ್ರೀಟ್ ಮೆಂಟ್ ಬೇಡ.  ಬೇಕಾದರೇ ಅರೆಸ್ಟ್ ಮಾಡಿ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಿ. ಬಹಿರಂಗವಾಗಿ ಮಂಪರು ಪರೀಕ್ಷೆ ಮಾಡಿ ನಮ್ಮದೇ ಸರ್ಕಾರದಲ್ಲಿ ನನ್ನ ವಿಚಾರಣೆ ನಡೆದಿದೆ.  ನನ್ನ ಜೀವನದಲ್ಲಿ ಯಾವುದೇ ಕೇಸ್ ಇಲ್ಲ. ಕಾಂಗ್ರೆಸ್ ಸರ್ಕಾರದ ವಿಚಾರಣೆ ನಡೆಸಿರೋದು ಆಶ್ಚರ್ಯ. ಇದು ಕಾಂಗ್ರೆಸ್ ಸರ್ಕಾರನಾ..? ಅಥವಾ ಆರ್ ಎಸ್ ಎಸ್ ಸರ್ಕಾರನಾ..? ಎಂದು ಬಿ.ಕೆ. ಹರಿಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ವಿಚಾರಣೆ ಬಳಿಕ ಮಾತನಾಡಿದ ಬಿ.ಕೆ. ಹರಿಪ್ರಸಾದ್,  ಗೋಧ್ರಾ…

Read More

ರಾಮನಗರ: ಆಸ್ತಿ ವಿಚಾರಕ್ಕೆ ಗಲಾಟೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಮಹಿಳೆಯ ಹತ್ಯೆ ಮಾಡಿರುವಂತಹ ಘಟನೆ ಹಾರೋಹಳ್ಳಿ ತಾಲೂಕಿನ ಭದ್ರೇಗೌಡನ ದೊಡ್ಡಿ ಗ್ರಾಮದಲ್ಲಿ ನಡೆದಿದೆ. ಗೌರಮ್ಮ(55) ಕೊಲೆಯಾದ ದುರ್ದೈವಿ. ಜಮೀನು ಒತ್ತುವರಿ ವಿಚಾರಕ್ಕೆ ಕೊಲೆ ಮಾಡಲಾಗಿದೆ ಎಂದು ಶಂಕೆ ವ್ಯಕ್ತವಾಗಿದೆ. ಕೃತ್ಯ ಆರೋಪವು ಗೌರಮ್ಮನ ದೂರದ ಸಂಬಂಧಿಯಿಂದಲೇ ಮಾಡಲಾಗಿದೆ. ಸ್ಥಳಕ್ಕೆ ರಾಮನಗರ ಎಸ್ಪಿ ಕಾರ್ತಿಕ್ ರೆಡ್ಡಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಆರೋಪಿಗಾಗಿ ಪೊಲೀಸರಿಂದ ಹುಡುಕಾಟ ಆರಂಭಿಸಿದ್ದು, ಕನಕಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Read More

ಬೆಂಗಳೂರು: ದುಷ್ಕರ್ಮಿಗಳು ಲಸ್ಸಿ ಕೆಫೆಗೆ ನುಗ್ಗಿ ಮ್ಯಾನೇಜರ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿರುವಂತಹ ಘಟನೆ ನಗರದ ಕೆಂಗೇರಿಯ ಹೊಯ್ಸಳ ಸರ್ಕಲ್ ನಲ್ಲಿ ನಡೆದಿದೆ. ಹೊಯ್ಸಳ ಸರ್ಕಲ್ ಬಳಿ ಕೆಫೆ ಮ್ಯಾನೇಜರ್ ಆಗಿದ್ದ ಇರ್ಷಾದ್ ಮೇಲೆ ಹಲ್ಲೆ ಮಾಡಲಾಗಿದೆ. ಬೈಕ್ ನಲ್ಲಿ ಬಂದ ಇಬ್ಬರು ದುರ್ಷರ್ಮಿಗಳಿಂದ ಕೃತ್ಯವೆಸಗಲಾಗಿದ್ದು, ಮೂರು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ತೀವೃ ಗಾಯಗೊಂಡ ಇರ್ಷಾದ್ ಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಕೆಂಗೇರಿ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ಇಬ್ಬರು ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

Read More

ಯಾವುದೇ ಕ್ಷಣದಲ್ಲಾದರೂ ನಿಗಮಮಂಡಳಿಗಳ ಪಟ್ಟಿ ಪ್ರಕಟವಾಗಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಈ ಕುರಿತು ಮಾನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್, ಯಾವುದೇ ಕ್ಷಣದಲ್ಲಿ ನಿಗಮ ಮಂಡಳಿ ಪಟ್ಟಿ ಪ್ರಕಟವಾಗಲಿದೆ. 36 ಶಾಸಕರು 39 ಕಾರ್ಯಕರ್ತರ ಪಟ್ಟಿ ಪ್ರಕಟ ಆಗುತ್ತೆ. ಇನ್ನು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆಗೆ ಸಚಿವರ ನಿರಾಕರಣೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್,  ಪಕ್ಷ ಹೇಳಿದಂತೆ ಎಲ್ಲರೂ ಕೇಳಬೇಕು ಎಂದರು.

Read More

ತುಮಕೂರು: ವಿಪ್ರೋ ಎಂಟರ್ ಪ್ರೈಸಸ್ ಪ್ರೈ.ಲಿ. ಮತ್ತು ಮಡಿಲು ಸೇವಾ ಟ್ರಸ್ಟ್(ರಿ), ಊರ್ಡಿಗೆರೆ ಗ್ರಾಮ ಪಂಚಾಯತ್ ಸಹಕಾರದೊಂದಿಗೆ ಊರ್ಡಿಗೆರೆ ಗ್ರಾ.ಪಂ. ಆವರಣದಲ್ಲಿ ಜನವರಿ 20ರಂದು ಉಚಿತ ಕಣ್ಣಿನ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿದೆ. ತುಮಕೂರಿನ ಅಪರೇಷನ್ಸ್  ವಿಪ್ರೋ ಎಂಟರ್ ಪ್ರೈಸಸ್ ನ ವೈಸ್ ಪ್ರೆಸಿಡೆಂಟ್ ವಿಶ್ವನಾಥ್ ಕಾರ್ಕಡ ಅವರು ಉದ್ಘಾಟನೆ ಮಾಡಲಿದ್ದಾರೆ. ಮಡಿಲು ಸೇವಾ ಟ್ರಸ್ಟ್ ನ ಮುಖ್ಯಸ್ಥ ಸಿ.ಕೆ.ಮುರಳೀಧರನ್ ಅಧ್ಯಕ್ಷತೆ ವಹಿಸಲಿದ್ದಾರೆ. ಊರ್ಡಿಗೆರೆ ಗ್ರಾ.ಪಂ. ಅಧ್ಯಕ್ಷರಾದ ಅನ್ನಪೂರ್ಣಮ್ಮ ಶಿಬಿರಕ್ಕೆ ಚಾಲನೆ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಊರ್ಡಿಗೆರೆ ಗ್ರಾ.ಪಂ. ಉಪಾಧ್ಯಕ್ಷರಾದ ಸುಗುಣ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಚಂದ್ರಪ್ರಭ, ಮಡಿಲು ಸೇವಾ ಟ್ರಸ್ಟ್ ಟ್ರಸ್ಟಿ ಅಬ್ರಹಾಂ ಭಾಗವಹಿಸಲಿದ್ದಾರೆ. ಹಿರಿಯ ಪತ್ರಕರ್ತರು, ಪ್ರಗತಿಪರ ಚಿಂತಕರಾದ ಸಾ.ಚಿ.ರಾಜಕುಮಾರ್, ಪ್ರಾಧ್ಯಾಪಕರಾದ ಡಾ.ಪರಶುರಾಮ ಕೆ.ಜಿ. ವಿಶೇಷ ಆಹ್ವಾನಿತರಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮಕ್ಕೆ ಊರ್ಡಿಗೆರೆ ಗ್ರಾ.ಪಂ. ಸದಸ್ಯರು, ಕಚೇರಿ ಸಿಬ್ಬಂದಿ ಹಾಗೂ ಸಂಸ್ಥೆಯ ಸ್ವಯಂ ಸೇವಕರು ಮೊದಲಾದವರು ಸಹಕಾರ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Read More

ಒಳ ಮೀಸಲಾತಿ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದರು. ಮಾಧ್ಯಮಗಳ ಜೊತೆ ಮಾತನಾಡಿದ ಡಾ.ಜಿ.ಪರಮೇಶ್ವರ್, ಒಳ ಮೀಸಲಾತಿ ಬಗ್ಗೆ ಅಂತಿಮ ನಿರ್ಣಯ ತೆಗೆದುಕೊಳ್ಳಲು ನಿರ್ಧಾರ ಮಾಡಿದ್ದೇವೆ. ಹಿಂದಿನ ಸರ್ಕಾರದಲ್ಲಿ ಚಿತ್ರದುರ್ಗ ಸಮಾವೇಶ ಮಾಡಿ ನಿರ್ಣಯ ಮಾಡಲಾಗಿತ್ತು.  ನ್ಯಾ ಸದಾಶಿವ ಆಯೋಗದ ವರದಿ ಬಗ್ಗೆ ನಿರ್ಣಯಕ್ಕೆ ತೀರ್ಮಾನ ಮಾಡಲಾಗಿದೆ. ಈ ಹಿಂದೆ ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದಾಗ, ವರದಿ ತಿರಸ್ಕಾರ ಮಾಡಿದ್ದರು. ಕಾನೂನಾತ್ಮಕವಾಗಿ ಒಳ ಮೀಸಲಾತಿ ಕೊಡಬೇಕಾಗುತ್ತದೆ. ನಾವೇ ಸಂವಿಧಾನ ತಿದ್ದುಪಡಿ ತರಲು ಆಗಲ್ಲ. ಹೀಗಾಗಿ ಶಿಫಾರಸ್ಸು ಮಾಡುವ ಬಗ್ಗೆ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದರು. ‘ಬಾಬ್ರಿ ಮಸೀದಿಯಂತೆ ಇತರೆ ಮಸೀದಿ ನಿರ್ನಾಮ ಮಾಡುತ್ತೇವೆ’ ಎಂಬ ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿಕೆಗೆ ಕಿಡಿಕಾರಿದ ಡಾ.ಜಿ.ಪರಮೇಶ್ವರ್, ಅನಂತ್ ಕುಮಾರ್ ಹೆಗಡೆ ಸಂಯಮದಿಂದ ವರ್ತಿಸಲಿ. ಪೊಲೀಸರು ಹೆಗಡೆಗೆ ಸಮಯ ನೀಡಿದ್ದಾರೆ. ಅದನ್ನ ಅರ್ಥ ಮಾಡಿಕೊಳ್ಳಬೇಕು.  ಅನಂತ್ ಕುಮಾರ್ ಹೆಗಡೆ ಮಾತು…

Read More

ಬೆಳಗಾವಿ: ಸಂವಿಧಾನ ರಕ್ಷಣೆಗಾಗಿ ಪ್ರಜಾಪ್ರಭುತ್ವದ ಉಳಿವಿಗೆ ಜಿಲ್ಲಾ ಮಟ್ಟದ ಜಾಗೃತ ಸಮಾವೇಶವನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಬೆಳಗಾವಿ ನಗರದ ಕುಮಾರ ದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಪ್ರೋ.ಕೆ.ಡಿ ಮಂತ್ರೇಶಿ ಸಂವಿಧಾನ ಪ್ರತಿಯೊಬ್ಬ ನಾಗರೀಕನ ರಕ್ಷಣೆಗಾಗಿ ನಿಂತಿದೆ. ಸಂವಿಧಾನ ರಚನೆ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಮಾಜ ಬದುಕುವ ದಾರಿಯನ್ನು ನೀಡಿದ್ದಾರೆ ಎಂದರು. ಈ ಸಂದರ್ಭದಲ್ಲಿ ಕಾರ್ಯಕ್ರಮದ ಪ್ರಸ್ತಾವಿಕವಾಗಿ ಮಾತನಾಡಿದ ಮಲ್ಲೇಶ್ ಚೌಗುಲೆ ಅವರು, ಸಂವಿಧಾನದ ರಚನೆಗಾಗಿ ನಾವೆಲ್ಲರು ಸೇರಿದ್ದೇವೆ. ಇದು ದಲಿತ ಸಂಘಟನೆಗಳಿಗೆ ಹಾಗೆ ಮಾತ್ರ ಸೀಮಿತವಲ್ಲ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ಸಂವಿಧಾನ ರಕ್ಷಣೆಗಾಗಿ ಪ್ರಜಾಪ್ರಭುತ್ವದ ಉಳಿವಿಗಾಗಿ ಕರ್ನಾಟಕದಲ್ಲಿ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ ) ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಎಂದರು. ಬೆಳಗಾವಿ ಉತ್ತರ ಮತ ಕ್ಷೇತ್ರದ ಶಾಸಕರಾದ ರಾಜು ಸೆಟ ಮಾತನಾಡಿ ಸಂವಿಧಾನ ಪ್ರತಿಯೊಬ್ಬರ ಜವಾಬ್ದಾರಿ ಶ್ರೀಮಂತ ಬಡವ ಎನ್ನದೆ ಸಮಾನತೆಯ ಪ್ರತೀಕವಾಗಿದೆ. ಪ್ರತಿಯೊಬ್ಬರು ಆತ್ಮ ಸನ್ಮಾನ ಮತ್ತು…

Read More

ಬಾಗಲಕೋಟೆ: ಜನರಲ್ಲಿ ಎಚ್ ಐವಿ ಸೋಂಕಿನ ಬಗ್ಗೆ ಇರುವ ಆತಂಕ ಮತ್ತು ಗೊಂದಲಗಳನ್ನು ದೂರ ಮಾಡುವುದರ ಜೊತೆಗೆ, ಏಡ್ಸ್ ನಿಂದ ಉಂಟಾಗುವ ಕಳಂಕ ಮತ್ತು ತಾರತಮ್ಯವನ್ನು ಹೊಗಲಾಡಿಸುವ ಕೆಲಸ ಮಾಡಬೇಕಿದೆ ಎಂದು, ನವನಗರದ ಜಿಲ್ಲಾಸ್ಪತ್ರೆಯ ಐಸಿಟಿಸಿ ವಿಭಾಗದ ಆಪ್ತಸಮಾಲೋಚಕಿ ಸಾವಿತ್ರಿ ಬಿ. ಕೊಣ್ಣೂರ ಹೇಳಿದರು. ನಗರದ ಬಿ.ವ್ಹಿ.ವ್ಹಿ ಸಂಘದ ಬಸವೇಶ್ವರ ಕಲಾ ಮಹಾವಿದ್ಯಾಲಯದಲ್ಲಿ ಎನ್ ಎಸ್ ಎಸ್‌ ಘಟಕಗಳು, ರೆಡ್ ಕ್ರಾಸ್ ಹಾಗೂ ರೆಡ ರಿಬ್ಬನ್ ಕ್ಲಬ್ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ ಏಡ್ಸ್ ಜಾಗೃತಿ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಅವರು, ಇದೊಂದು ಮಾರಕ ರೋಗವಾಗಿದ್ದು ಯುವಜನತೆ ಇದರ ಬಗ್ಗೆ ತಿಳಿದುಕೊಳ್ಳುವುದು ಅವಶ್ಯಕ. ಎಚ್ ಐವಿ ಸೋಂಕಿತರನ್ನು ಮಾನವೀಯ ದೃಷ್ಟಿಯಿಂದ ನೋಡುವುದರ ಜೊತೆಗೆ ಧೈರ್ಯ ತುಂಬುವ ಹೊಣೆಗಾರಿಕೆ ನಮ್ಮೆಲ್ಲರ ಮೇಲೆ ಇದೆ. ಇಂತಹ ಸಾಂಕ್ರಾಮಿಕ ರೋಗಕ್ಕೆ ಆಪ್ತಸಲಹೆಗಾರರ ಅವಶ್ಯಕತೆ ತುಂಬಾ ಇದೆ. ಎಚ್ ಐವಿ ಸೋಂಕು, ಅಸುರಕ್ಷಿತ ಲೈಂಗಿಕ ಸಂಪರ್ಕ, ಸಂಸ್ಕರಿಸದಿರುವ ಸೂಜಿ, ಸಿರಿಂಜ್, ಸಂಸ್ಕರಿಸದ ರಕ್ತ ಹಾಗೂ ಸೋಂಕಿತ ತಾಯಿಯ…

Read More

ಶಿವಮೊಗ್ಗ: ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ತೀರ್ಥಹಳ್ಳಿಯ  ಬಿಳುಕೊಪ್ಪ ಗ್ರಾಮದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಅಧೀಕ್ಷಾ(20) ಎಂದು ಗುರುತಿಸಲಾಗಿದೆ. ಯುವತಿ ಬಾಳೆಬೈಲು ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ವ್ಯಾಸಂಗ ಮಾಡ್ತಿದ್ದಳು. ಗುರುವಾರ ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾಳೆ. ಬೆಳಗ್ಗೆ ಯುವತಿ ಹೊರಗೆ ಬರದೇ ಇದ್ದಿದ್ದರಿಂದ ಅನುಮಾನಗೊಂಡು ಬಾಗಿಲು ತೆರೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More