Author: admin

ಬೆಂಗಳೂರು: ಎರಡನೇ ಲವ್ ಬಗ್ಗೆ ಪ್ರಶ್ನಿಸಿದ್ದಕ್ಕೆ ಹೋಮ್ ಗಾರ್ಡ್ ಆಗಿರುವ ಪ್ರಿಯತಮೆ ಪ್ರಿಯಕರ ಕಾನ್ ಸ್ಟೇಬಲ್ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ನಡೆದಿತ್ತು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಾನ್ ಸ್ಟೇಬಲ್ ಸಂಜಯ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದು, ಪುಟ್ಟೇನಹಳ್ಳಿ ಠಾಣಾ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಮನೆಗೆ ಬಂದು ಜಗಳ ಮಾಡಿಕೊಂಡ ಸಂಜಯ್ ಮೇಲೆ ರಾಣಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಳು ಎಂದು ಆರೋಪಿಸಲಾಗಿದೆ. ಸಂಜಯ್ ಬಂಕ್ಗೆ ತೆರಳಿ ಒಂದು ಲೀಟರ್ ಪೆಟ್ರೋಲ್ ತಂದಿದ್ದನು. ಪೆಟ್ರೋಲ್ ಹಾಕ್ತಿಯ ಹಾಕು ನೋಡೋಣ ಎಂದಿದ್ದನು. ಈ ವೇಳೆ ಸಂಜಯ್ ಹೊಟ್ಟೆ ಬೆನ್ನಿನ ಮೇಲೆ ಪೆಟ್ರೋಲ್ ಸುರಿದಿದ್ದು, ನಂತರ ನೀರು ಹಾಕಿ ಬೆಂಕಿ ಆರಿಸಿ, ಸಂಜಯ್ ನನ್ನ ತನ್ನದೇ ಗಾಡಿಯಲ್ಲಿ ಆಸ್ಪತ್ರೆಗೆ ದಾಖಲಿಸಿದ್ದಳು. ಪೊಲೀಸರ ತನಿಖೆ ವೇಳೆ ಆಕಸ್ಮಿಕವಾಗಿ ಘಟನೆ ನಡೆದಿದೆ ಎಂದು ರಾಣಿ ಹೇಳಿಕೆ ನೀಡಿದ್ದಾಳೆ. ಘಟನೆ ಸಂಬಂಧ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ರಾಮ ಮಂದಿರ ಉದ್ಘಾಟನಾ ಸಮಾರಂಭಕ್ಕೆ ಭಾರಿ ಸಿದ್ಧತೆ ನಡೆಸುತ್ತಿದೆ.  ರಾಮ ಭಕ್ತರು ತಮ್ಮ ಭಕ್ತಿಯನ್ನು ವಿಭಿನ್ನ ರೀತಿಯಲ್ಲಿ ತೋರಿಸುತ್ತಿದ್ದಾರೆ. ರಾಮಭಕ್ತರೊಬ್ಬರು ಐದೂವರೆ ಲಕ್ಷ ರೂಪಾಯಿ ವೆಚ್ಚ ವ್ಯಯಿಸಿ ತಯಾರಿಸಿದ ಬೃಹತ್ ಅಗರಬತ್ತಿಯನ್ನು ಅಯೋಧ್ಯೆಗೆ ಸ್ಥಳಾಂತರಿಸಲಾಗುತ್ತಿದೆ. ವಡೋದರ ರಾಮ ಭಕ್ತನೊಬ್ಬ ಮಾಡಿದ ಭವ್ಯವಾದ, ಭಾರವಾದ ಧೂಪದ್ರವ್ಯವು ತನ್ನ ಪರಿಮಳವನ್ನು ಅಯೋಧ್ಯೆಯಲ್ಲಿ ಹರಡಲು ಸಿದ್ಧವಾಗುತ್ತಿದೆ. ರಾಮಮಂದಿರ ಪ್ರಾಣಪ್ರತಿಷ್ಠಾ ಮಹೋತ್ಸವದಲ್ಲಿ ಈ ಧೂಪದ್ರವ್ಯವನ್ನು ಬಳಸಲಾಗುವುದು.  ವಡೋದರದ ತರ್ಸಾಲಿ ಮೂಲದ ವಿಹಾಭಾಯಿ ಭರ್ವಾಡ್ ಅವರು ವೃತ್ತಿಯಲ್ಲಿ ಕೃಷಿಕರು ಮತ್ತು ಜಾನುವಾರು ಸಾಕಣೆದಾರರಾಗಿದ್ದಾರೆ.  ರಾಮನನ್ನು ಬಹಳ ಭಕ್ತಿಯಿಂದ ಪೂಜಿಸುತ್ತಾರೆ.  ರಾಮಮಂದಿರ ಉದ್ಘಾಟನೆ ನಿಮಿತ್ತ ಬೃಹತ್ ಧೂಪದ್ರವ್ಯವನ್ನು ಸಿದ್ಧಪಡಿಸುತ್ತಿದ್ದಾರೆ.  ಇದು 108 ಅಡಿ ಉದ್ದ ಮತ್ತು ನಾಲ್ಕೂವರೆ ಅಡಿ ಅಗಲದ ಬೃಹತ್ ಊದುಬತ್ತಿಯಾಗಿದೆ.  ಡಿಸೆಂಬರ್ ಅಂತ್ಯದಲ್ಲಿ ವಡೋದರಾದಿಂದ ಅಯೋಧ್ಯೆಗೆ ಬೃಹತ್ ಮೆರವಣಿಗೆಯಲ್ಲಿ ಕೊಂಡೊಯ್ಯಲಾಗುವುದು. 108 ಅಡಿ ಉದ್ದದ ಈ ಧೂಪದ್ರವ್ಯವನ್ನು ಅಯೋಧ್ಯೆಗೆ ಸಾಗಿಸಲು ಸುಮಾರು ನಾಲ್ಕೂವರೆ ಲಕ್ಷ ರೂಪಾಯಿ ವೆಚ್ಚವಾಗಲಿದೆಯಂತೆ.  ವಡೋದರದ ತಾರ್ಸಾಲಿಯಲ್ಲಿರುವ ವಿಹಾಭಾಯಿ ಅವರ ಮನೆಯ ಸಮೀಪ ತೆರೆದ…

Read More

ಸರ್ವರಿಗೂ ಗುಣಮಟ್ಟದ ಆಹಾರ ಸಿಗಬೇಕು. ಹಣ ಕೊಟ್ಟು ಗೌರವಯುತವಾಗಿ ಊಟ ಮಾಡುವ ಮೂಲಕ ಸ್ವಾಭಿಮಾನದಿಂದ ಬೀಗಬೇಕು ಎಂಬ ಆಶಯಗಳನ್ನು ಇಟ್ಟುಕೊಂಡು ಯಶಸ್ವಿಯಾಗಿ ನಡೆಯುತ್ತಿರುವ ಇಂದಿರಾ ಕ್ಯಾಂಟೀನ್‌ ಗಳಲ್ಲಿ ಹೊಸ ಮೆನು ಪರಿಚಯಿಸಲು ನಿರ್ಧರಿಸಲಾಗಿದೆ. ರಾಗಿ ಮುದ್ದೆ, ಇಡ್ಲಿ, ಮಂಗಳೂರು ಬನ್ಸ್‌, ಬಿಸಿಬೇಳೆ ಬಾತ್ ಸೇರಿದಂತೆ ಹಲವು ತಿನಿಸುಗಳನ್ನು ನಿಗದಿಪಡಿಸಿದೆ. ಉಪಾಹಾರದಲ್ಲಿ ಇಡ್ಲಿ, ಪುಲಾವ್, ಬಿಸಿಬೇಳೆ ಬಾತ್, ಖಾರಾಬಾತ್, ಪೊಂಗಲ್, ಬ್ರೆಡ್ ಜಾಮ್, ಚೌಚೌಬಾತ್ ತಿನಿಸುಗಳು ಒಂದೊಂದು ದಿನ ಲಭ್ಯವಾಗಲಿದೆ.

Read More

ರಾಜ್ಯದ ವಿವಿಧ ಭಾಗಗಳ ಕಲೆ, ಸಂಸ್ಕೃತಿಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವ ನಿಟ್ಟಿನಲ್ಲಿ ಕಲೆ & ಸಂಸ್ಕೃತಿ ಪಠ್ಯದ ಮುಖ್ಯ ಭಾಗವಾಗಬೇಕು. ಮಲೆನಾಡಿನ ಸಂಸ್ಕೃತಿಯನ್ನು ಬಯಲುಸೀಮೆ, ಕರಾವಳಿ ವಿದ್ಯಾರ್ಥಿಗಳು, ಬಯಲುಸೀಮೆಯ ಕಲೆ, ಸಂಸ್ಕೃತಿಯನ್ನು ಇತರೆ ಭಾಗಗಳ ವಿದ್ಯಾರ್ಥಿಗಳು ಕಲಿಯಬೇಕು. ಆಹಾರ ಸಂಸ್ಕೃತಿಯ ಪರಿಚಯವಾಗಬೇಕು. ಹಾಗಾಗಿ ಇಂತಹ ಸಾಂಸ್ಕೃತಿಕ ಪರಿಚಯವನ್ನು ಎಸ್ ಇ ಪಿಯಲ್ಲಿ ಅಳವಡಿಸಲಾಗುತ್ತಿದೆ ಎಂದು ಶಿಕ್ಷಣ ಸಚಿವ ಮಧು  ಬಂಗಾರಪ್ಪ ಬೆಂಗಳೂರಿನಲ್ಲಿ ತಿಳಿಸಿದ್ದಾರೆ.

Read More

ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎ.ಎಂ. ಬಸವರಾಜು ಅವರನ್ನು ಸೇವೆಯಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಈ ಹಿಂದೆ ಬೆಳಗಾವಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬಸವರಾಜು ವಿರುದ್ಧ ಜಿಲ್ಲಾ ಕಚೇರಿ ಸಿಬ್ಬಂದಿಗಳಿಗೆ, ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಕಿರುಕುಳ, ಮಾನಸಿಕ ಹಿಂಸೆ, ಮಹಿಳಾ ಸಿಬ್ಬಂದಿಗಳ ಜೊತೆ ದುರ್ನಡತೆ, ದಬ್ಬಾಳಿಕೆ ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪ, ಸಾರ್ವಜನಿಕರ ಮುಂದೆ ಸಿಬ್ಬಂದಿಗಳನ್ನು ಅವಮಾನಿಸುತ್ತಿದ್ದರು ಎನ್ನುವ ಆರೋಪಗಳಿದ್ದವು.

Read More

ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ರೌಡಿಶೀಟರ್ ಅನಿಲ್ ಕುಮಾ‌ರ್, ಯಶವಂತಪುರ ರೌಡಿಶೀಟರ್ ಗಿರೀಶ್ ಅಲಿಯಾಸ್ ರಾಬರಿ ಗಿರಿ, ವಿವೇಕನಗರ ರೌಡಿಶೀಟರ್‌ ಗಳಾದ ನಾರಾಯಣ, ಹೇಮಂತ್, ರಾಮು, ಸೋಲದೇವನಹಳ್ಳಿ ರೌಡಿಶೀಟರ್ ತಿಮ್ಮ ಸೇರಿ ಅನೇಕರ ಮನೆ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ತಕಾರಾರು ಆಸ್ತಿಪತ್ರ, ಹಲವು ಚೆಕ್‌ ಗಳು ಪತ್ತೆಯಾಗಿವೆ. ಅಮಾಯಕರಿಗೆ ಬೆದರಿಸಿ ನಿವೇಶನ ಕಬಳಿಸಿರುವ ದೂರು ಕೇಳಿ ಬಂದಿತ್ತು. ಅಷ್ಟೇ ಅಲ್ಲದೆ ಮೀಟರ್ ಬಡ್ಡಿ ವ್ಯವಹಾರದ ಶಂಕೆ ಕೂಡ ವ್ಯಕ್ತವಾಗಿತ್ತು

Read More

ಅಯೋಧ್ಯೆಯ ರಾಮಮಂದಿರ ಸಂಕೀರ್ಣದ ವೀಡಿಯೊ ಕ್ಯಾಮರಾ ಸೆರೆ ಹಿಡಿದಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ರಾಮಮಂದಿರ ಪ್ರದೇಶವು ಅಕ್ರಮ ಛಾಯಾಗ್ರಹಣವನ್ನು ನಿಷೇಧಿಸಿರುವ ಪ್ರದೇಶವಾಗಿದೆ. ಛತ್ತೀಸ್ ‌ಗಢ ಮೂಲದ ಭಾನು ಪಟೇಲ್ ಬಂಧಿತ ಆರೋಪಿ. ಯುವಕ ಬೈಕ್ ಓಡಿಸುತ್ತಿದ್ದಾಗ ಹೆಲ್ಮೆಟ್ ಗೆ ಕ್ಯಾಮೆರಾ ಅಳವಡಿಸಿ ವೀಡಿಯೊ ರೆಕಾರ್ಡ್ ಮಾಡುತ್ತಿದ್ದಾಗ ಸಿಕ್ಕಿಬಿದ್ದಿದ್ದಾನೆ. ರಾಮಜನ್ಮಭೂಮಿ ಪೊಲೀಸ್ ಠಾಣೆಯಲ್ಲಿ ಗುಪ್ತಚರ ಸಂಸ್ಥೆಗಳು ಆತನನ್ನು ವಿಚಾರಣೆ ನಡೆಸುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಆತನ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ಪೊಲೀಸರು ಸಿದ್ಧರಿಲ್ಲ. ಪೊಲೀಸರ ಪ್ರಕಾರ, ರಾಮ ಮಂದಿರದ ಗೇಟ್ ಸಂಖ್ಯೆ 10 ರ ಬಳಿ ವಿಡಿಯೋ ರೆಕಾರ್ಡ್ ಮಾಡುವಾಗ ಸಿಕ್ಕಿಬಿದ್ದಿದ್ದಾನೆ.

Read More

ಪ್ರತಿಯೊಂದು ವಿಚಾರದಲ್ಲೂ ಜಾತಿಯನ್ನು ಎಳೆದು ತರಬಾರದು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ರಾಜ್ಯಸಭಾ ಸ್ಪೀಕರ್ ಮತ್ತು ತೃಣಮೂಲ ಕಾಂಗ್ರೆಸ್ ಸಂಸದರು ಜಾಟ್ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕೆ ಅವರನ್ನು ಅನುಕರಿಸಿದ್ದಾರೆ ಎಂಬ ಬಿಜೆಪಿ ಟೀಕೆಗೆ ಖರ್ಗೆ ಪ್ರತಿಕ್ರಿಯೆ ನೀಡಿದರು. ರಾಜ್ಯಸಭೆಯಲ್ಲಿ ಮಾತನಾಡಲು ಅವಕಾಶ ನೀಡದಿರಲು ದಲಿತ ಎಂಬ ಕಾರಣಕ್ಕೆ ಹೇಳಬೇಕೆ ಎಂದು ಖರ್ಗೆ ಪ್ರಶ್ನಿಸಿದರು. ಟಿಎಂಸಿಯ ಕಲ್ಯಾಣ್ ಬ್ಯಾನರ್ಜಿ ಅವರು ಪ್ರತಿಪಕ್ಷಗಳ ಸಂಸದರ ಅಮಾನತು ವಿರೋಧಿಸಿ ಖರ್ಗೆ ಅವರನ್ನು ಅನುಕರಿಸಿದರು. ಆದರೆ ಸಭಾಧ್ಯಕ್ಷರನ್ನು ಉದ್ದೇಶಿಸಿ ಮಾತನಾಡಿದ ಖರ್ಗೆ, ಎಲ್ಲ ವಿಷಯಗಳಲ್ಲಿ ಜಾತಿಯನ್ನು ಎಳೆದು ತರಬಾರದು, ಇಂತಹ ಹೇಳಿಕೆಗಳನ್ನು ನೀಡುವ ಬದಲು ರಾಜ್ಯಸಭಾ ಅಧ್ಯಕ್ಷರು ಸದನದ ಸದಸ್ಯರನ್ನು ರಕ್ಷಿಸಬೇಕು ಎಂದು ನೆನಪಿಸಿದರು. ಅವರಿಗೆ ರಾಜ್ಯಸಭೆಯಲ್ಲಿ ಮಾತನಾಡಲು ಯಾವಾಗಲೂ ಅವಕಾಶ ನೀಡುವುದಿಲ್ಲ. ದಲಿತ ಎಂಬ ಕಾರಣಕ್ಕೆ ಎಂದು ಹೇಳಬೇಕೆ? ಒಳಗಿನಿಂದ ಮಾತನಾಡಿ ಜಾತಿಯ ಆಧಾರದಲ್ಲಿ ಹೊರಗಿನವರನ್ನು ಕೆರಳಿಸಬಾರದು ಎಂದು ಖರ್ಗೆ ಪ್ರತಿಕ್ರಿಯಿಸಿದರು. ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ ಮಾತನಾಡಿ, ಸಂಸತ್ತಿನ…

Read More

ಮಲ್ಲಿಕಾರ್ಜುನ ಖರ್ಗೆ ಈ ದೇಶದ ಪ್ರಧಾನಿಯಾದರೆ ನಾನು ಸ್ವಾಗತಿಸುತ್ತೇನೆ. ಮಲ್ಲಿಕಾರ್ಜುನ ಖರ್ಗೆ ಪ್ರಧಾನ ಮಂತ್ರಿಯಾಗಲು ಸಮರ್ಥವಾಗಿರುವ ವ್ಯಕ್ತಿ. ಅವರು ಸಾಮಾನ್ಯ ವ್ಯಕ್ತಿಯ ಮಗನಾಗಿ ದೊಡ್ಡ ರಾಜಕಾರಣಿಯಾಗಿ ಬೆಳೆದು ಇಂದು ಪ್ರಧಾನಿಯಾಗುವ ಮಟ್ಟಕ್ಕೆ ಬೆಳೆದು ನಿಂತಿದ್ದಾರೆ. ಶೋಷಿತ ಸಮುದಾಯಗಳಿಂದ ಬಂದ  ಇಂತಹ ನಾಯಕರು ಆಗಬೇಕು ಎಂದು ಹೆಚ್. ವಿಶ್ವನಾಥ್ ತಿಳಿಸಿದರು. ರಾಮ ಮಂದಿರ ಉದ್ಘಾಟನೆಗೆ ಅಡ್ವಾಣಿ,  ಮುರಳಿ ಮನೋಹರ ಜೋಶಿ ಬರೋದು ಬೇಡ  ಎಂಬ ವಿಚಾರ  ಕುರಿತು ಪ್ರತಿಕ್ರಿಯಿಸಿದ ಹೆಚ್. ವಿಶ್ವನಾಥ್, ಬಿಜೆಪಿ ಭೀಷ್ಮ ಲಾಲ್ ಕೃಷ್ಣ ಅಡ್ವಾಣಿ. ರಾಮಮಂದಿರ ಹೋರಾಟದಲ್ಲಿ ಮುಂದಿದ್ದ ನಾಯಕ. ವಯಸ್ಸಿನ ಕಾರಣಕ್ಕೆ ಅವರನ್ನು ದೂರವಿಟ್ಟು ರಾಮಮಂದಿರ ಉದ್ಘಾಟನೆ ಮಾಡೋದು ತಪ್ಪು. ದೇವೇಗೌಡರಿಗೆ ವಯಸ್ಸಾಗಿದೆ ಅವರನ್ನು ಕರೆದಿದ್ದಾರೆ. ಕಾರ್ಯಕ್ರಮಕ್ಕೆ ಅಡ್ವಾಣಿ ಬಂದ್ರೆ  ಕ್ರೆಡಿಟ್  ಮೋದಿಗೆ ಸಿಗಲ್ಲ. ಹಾಗಾಗಿ ಈ ರೀತಿ ಮಾಡಿದ್ದಾರೆ ಎಂದು ಪ್ರಧಾನಿ ಮೋದಿ ವಿರುದ್ದ ಕಿಡಿಕಾರಿದರು. ಪ್ರಧಾನಮಂತ್ರಿಗೆ  ಮಾಧ್ಯಮ ಎದುರು ಬಂದು ನಿಲ್ಲುವ ತಾಕತ್ತು ಇಲ್ಲ. ಇಡೀ ಜಗತ್ತಿನ‌ ಮುಂದೆ ಭಾರತದ ಮಾನ ಬೆತ್ತಲಾಗಿದೆ.  ಸಂಸತ್ತನ್ನ,ಸಂಸತ್ತಿನ…

Read More

ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರತಿಷ್ಠಾಪನೆ ಸಮಾರಂಭಕ್ಕೆ ವಿರೋಧ ಪಕ್ಷದ ನಾಯಕರಿಗೆ ಆಹ್ವಾನ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಮತ್ತು ಲೋಕಸಭೆಯ ನಾಯಕ ಅಧೀರ್ ರಂಜನ್ ಚೌಧರಿ ಅವರನ್ನು ಸಮಾರಂಭಕ್ಕೆ ಆಹ್ವಾನಿಸಲಾಗಿದೆ. ಜನವರಿ 22 ರಂದು ರಾಮಮಂದಿರ ಸಮರ್ಪಣಾ ಸಮಾರಂಭವನ್ನು ನಿಗದಿಪಡಿಸಲಾಗಿದೆ. ಶ್ರೀರಾಮ ಜನ್ಮಭೂಮಿ ತೀರ್ಥ ದೇವಸ್ಥಾನ ಟ್ರಸ್ಟ್‌ ನಿಂದ ಆಮಂತ್ರಣ ಪತ್ರಿಕೆ ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಸಮಾರಂಭಕ್ಕೆ ಮಾಜಿ ಪ್ರಧಾನಿಗಳಾದ ಮನಮೋಹನ್ ಸಿಂಗ್ ಮತ್ತು ಎಚ್.ಡಿ. ದೇವೇಗೌಡರಿಗೂ ಆಹ್ವಾನ ನೀಡಲಾಗಿದೆ. ಆದರೆ ಹಿರಿಯ ಕಾಂಗ್ರೆಸ್ ನಾಯಕರು ಕಾರ್ಯಕ್ರಮಕ್ಕೆ ಬರುವ ಸಾಧ್ಯತೆ ಕಡಿಮೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಪ್ರತಿಪಕ್ಷ ನಾಯಕರಿಗೂ ಆಹ್ವಾನ ಕಳುಹಿಸಬಹುದು. ವಿವಿಧ ಸಂಪ್ರದಾಯಗಳ ಗೌರವಾನ್ವಿತ ಸಂತರು ಮತ್ತು ವಿವಿಧ ಕ್ಷೇತ್ರಗಳ ಗಣ್ಯರನ್ನು ಸಮಾರಂಭಕ್ಕೆ ಆಹ್ವಾನಿಸಲಾಗಿದೆ ಎಂದು ಟ್ರಸ್ಟ್ ತಿಳಿಸಿದೆ. ಸಮಾರಂಭದಲ್ಲಿ ಭಾಗವಹಿಸಲು ಸುಮಾರು 4000 ಸನ್ಯಾಸಿಗಳನ್ನು ಆಹ್ವಾನಿಸಲಾಗಿದೆ.

Read More