Subscribe to Updates
Get the latest creative news from FooBar about art, design and business.
- ಪ್ರಥಮ ಬಿ.ಸಿ.ಎ. ಪದವಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
- ಕುಣಿಗಲ್ ಪುರಸಭಾ ವ್ಯಾಪ್ತಿಯ ಸಾರ್ವಜನಿಕರಿಗೆ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
- ತುಮಕೂರು: ‘ಕರ್ನಾಟಕ ಪಬ್ಲಿಕ್ ಸ್ಕೂಲ್’ ಸಿನಿಮಾ ಮುಹೂರ್ತ ಸಮಾರಂಭ
- ತುಮಕೂರು: ಪಾದರಕ್ಷೆ ತಯಾರಿಕಾ ಸ್ಪರ್ಧೆಗೆ ಅರ್ಜಿ
- ಭೀಕರ ಅಪಘಾತ: ಶನಿಮಹಾತ್ಮ ದೇವಾಲಯ ವ್ಯವಸ್ಥಾಪಕ ಜಗನ್ನಾಥ್ ನಿಧನ
- ನೈರ್ಮಲ್ಯ ಕಾಪಾಡಿ, ಗರ್ಭಾಶಯದ ಕ್ಯಾನ್ಸರ್ ತಡೆಗಟ್ಟಿ: ಮಹಿಳೆಯರಿಗೆ ಕಾವೇರಿ ಎನ್. ಕರೆ
- ಪೌತಿ ಖಾತೆ, ಕಂದಾಯ ಗ್ರಾಮ ಹಕ್ಕುಪತ್ರ, ಪೋಡಿ ಮುಕ್ತ ಅಭಿಯಾನ: ರೈತರ ಅಲೆದಾಟ ತಪ್ಪಿಸಲು ಸರ್ಕಾರದ ಮಹತ್ವದ ಕ್ರಮ
- ತುಮಕೂರನ್ನು ಬೆಂಗಳೂರಿನ ಭಾಗವಾಗಿಸಿ: ಸಾಧನಾ ಸಮಾವೇಶದಲ್ಲಿ ಡಾ.ಜಿ.ಪರಮೇಶ್ವರ್ ಪ್ರಸ್ತಾಪ
Author: admin
ಬೆಂಗಳೂರು: ನಗರದ ಮಾಗಡಿ ರಸ್ತೆ ನೈಸ್ ರೋಡ್ ಜಂಕ್ಷನ್ ಬಳಿ ನಿಂತಿದ್ದ ಲಾರಿಗೆ ಕಾರು ಹಿಂದಿನಿಂದ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ, ಅಮೆಜಾನ್ ಕಂಪನಿಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಸಂತೋಷ್ ಎಂಬವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಂತೋಷ್ ಅವರು ರಾತ್ರಿ ಕೆಲಸ ಮುಗಿಸಿ ಕಾರಿನಲ್ಲಿ ಸಾಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ಜಖಂ ಆಗಿದ್ದು ಸಂತೋಷ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ವಿಪರೀತ ವೇಗದಲ್ಲಿ ಇತ್ತು ಎಂದು ಶಂಕಿಸಲಾಗಿದೆ. ಸಂತೋಷ್ ಅವರ ಕುಟುಂಬಿಕರು, ಸ್ನೇಹಿತರು ಆಗಮಿಸಿದ್ದು, ಮೃತದೇಹವನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.
ತುಮಕೂರಿನಲ್ಲಿ ಮೊದಲ ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಮಧುಗಿರಿ ಮೂಲದ ವ್ಯಕ್ತಿಯೊಬ್ಬರಿಗೆ ಪಾಸಿಟಿವ್ ರಿಪೋರ್ಟ್ ಬಂದಿದೆ. ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಚಿಕಿತ್ಸೆಗೆ ತೆರಳಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಹೃದಯರೋಗ ಸಂಬಂಧ ಜಯದೇವ ಆಸ್ಪತ್ರೆಗೆ ವ್ಯಕ್ತಿ ಹೋಗಿದ್ದರು. ಅಲ್ಲಿ ಕೊವಿಡ್ ಪರೀಕ್ಷೆ ನಡೆಸಿದಾಗ ಪಾಸಿಟಿವ್ ಬಂದಿದೆ. ಕೊವಿಡ್ ಪತ್ತೆ ಹಿನ್ನೆಲೆಯಲ್ಲಿ ಜಯದೇವ ಆಸ್ಪತ್ರೆಯಲ್ಲೇ ಪ್ರತ್ಯೇಕವಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಸೋಂಕಿತರ ಕುಟುಂಬಸ್ಥರಿಗೆ ಜಿಲ್ಲಾ ಆರೋಗ್ಯ ಇಲಾಖೆ ಕೋವಿಡ್ ಪರೀಕ್ಷೆ ನಡೆಸಿದೆ. ಸೋಂಕಿತ ಸಂಪರ್ಕಕ್ಕೆ ಬಂದವರ ಮೇಲೆ ಆರೋಗ್ಯ ಇಲಾಖೆ ನಿಗಾವಹಿಸಿದೆ ಎಂದು ಡಿಎಚ್ ಒ ಮಂಜುನಾಥ್ ಮಾಹಿತಿ ನೀಡಿದ್ದಾರೆ.
ಬೆಳಗಾವಿ: ಅಯೋಧ್ಯೆಯಲ್ಲಿ 22 ಜನವರಿ 2024ರಂದು ನಡೆಯಲಿರುವ ರಾಮ ಮಂದಿರ ಉದ್ಘಾಟನೆ ಹಾಗೂ ಶ್ರೀರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಬೆಳಗಾವಿ ಜಿಲ್ಲೆಯಿಂದ 5 ಲಕ್ಷ ಮನೆಗಳಿಗೆ ಆಮಂತ್ರಣ ನೀಡಲಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಬೆಳಗಾವಿ ಜಿಲ್ಲಾಧ್ಯಕ್ಷರಾದ ಶ್ರೀಕಾಂತ್ ಕದಂ ಹೇಳಿದರು. ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆಯಲ್ಲಿ ಅಭಿಯಾನ ಯಶಸ್ವಿಯಾಗಲು ಡಿಸೆಂಬರ್ 8-2023 ರಂದು ಅಯೋಧ್ಯೆಯಿಂದ ಬಂದ ಪವಿತ್ರ ಅಕ್ಷತಾ ಕಳಶವನ್ನು ದಕ್ಷಿಣ ಕಾಶಿ ಎಂದೇ ಪ್ರಸಿದ್ದಿ ಪಡೆದಿರುವ ಕಪಿಲೇಶ್ವರ ಮಂದಿರದಲ್ಲಿ ಸಾವಿರಾರು ಭಕ್ತರ ಭಕ್ತಿಯಿಂದ ಸ್ವಾಗತಿಸಿ ಪೂಜೆಗೆ ಇಂದು ಪಲ್ಲಕ್ಕಿಯಲ್ಲಿ ಪವಿತ್ರ ಕಳಿಸಿದ್ದು ಮೆರವಣಿಗೆ ಮೂಲಕ ವಿಶ್ವ ಹಿಂದೂ ಪರಿಷತ್ ಕಾರ್ಯಾಲಯದಲ್ಲಿ ಇರಿಸಲಾಗಿದೆ. ಪ್ರತಿನಿತ್ಯ ಸಂಜೆ 7:30 ರಿಂದ 8:30ರವರೆಗೆ ಭಕ್ತಿಯಿಂದ ಹನುಮಾನ್ ಚಾಲೀಸ ಪಠಣ ಮಾಡಿ ಪೂಜೆ ಮಾಡಲಾಗುತ್ತದೆ. ದಿನಾಂಕ 19 ಡಿಸೆಂಬರ್ 2023 ರಂದು ಸಂಜೆ 4:30ಕ್ಕೆ ಬೆಳಗಾವಿ ಸುತ್ತು ಮುತ್ತಿನ ಪೂಜ್ಯ ಸಂತರ ದಿವ್ಯ ಸಾನಿಧ್ಯದಲ್ಲಿ ಪವಿತ್ರಾಕ್ಷತಕಾಲ ಪೂಜೆ ಮಾಡಿ ಅಮೃತ ಹಸ್ತದಿಂದ…
ಬೆಳಗಾವಿ: ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಂಗಳವಾರ ನವದೆಹಲಿಯಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿಯವರನ್ನು ಭೇಟಿ ಮಾಡಿ, ಕೇಂದ್ರ ಪುರಸ್ಕೃತ ಯೋಜನೆಗಳ ಅನುದಾನ ಬಿಡುಗಡೆ ಕುರಿತಂತೆ ಸುದೀರ್ಘವಾಗಿ ಮಾತುಕತೆ ನಡೆಸಿದರು. ಕೇಂದ್ರ ಪುರಸ್ಕೃತ ಯೋಜನೆಗಳಾದ ಸಖಿ ಒನ್ ಸ್ಟಾಪ್ ಸೆಂಟರ್, ಸಖಿ ನಿವಾಸ್, ಶಕ್ತಿ ಸದನ್, ಉಜ್ವಲ್ ಹಾಗೂ ಸ್ವಾಧಾರ ಗೃಹ ಯೋಜನೆಗಳ ಅನುದಾನ ಬಿಡುಗಡೆಗೊಳಿಸುವಂತೆ ವಿನಂತಿಸಿದರು. ಐಸಿಡಿಎಸ್ ಯೋಜನೆಯಡಿ ಅಂಗನವಾಡಿಗಳಿಗೆ ನೀಡಬೇಕಿರುವ ಅಕ್ಕಿ ಮತ್ತು ಗೋದಿ ಕಳೆದ ಒಂದು ವರ್ಷದಿಂದ ಬಿಡುಗಡೆಯಾಗದೆ ಬಾಕಿ ಉಳಿದಿರುವ ಕುರಿತು ಸಹ ಕೇಂದ್ರ ಸಚಿವರ ಗಮನ ಸೆಳೆದ ಲಕ್ಷ್ಮೀ ಹೆಬ್ಬಾಳಕರ್, ಕೂಡಲೇ ಬಿಡುಗಡೆಗೊಳಿಸಲು ಕ್ರಮ ತೆಗೆದುಕೊಳ್ಳುವಂತೆ ಕೋರಿದರು. ಜೊತೆಗೆ, ರಾಜ್ಯದಲ್ಲಿ ಹೊಸದಾಗಿ ರಚನೆಯಾಗಿರುವ 51 ತಾಲೂಕುಗಳಿಗೆ ಶಿಶು ಅಭಿವೃದ್ಧಿ ಕಚೇರಿ ಮಂಜೂರು ಮಾಡುವಂತೆ ಮತ್ತು ಸಿಬ್ಬಂದಿ ನೀಡುವಂತೆ ಹಾಗೂ ಸಕ್ಷಮ್ ಯೋಜನೆಯಡಿಯ ಅಂಗನವಾಡಿ ಕೇಂದ್ರಗಳನ್ನು ಸ್ಮಾರ್ಟ್ ಕ್ಲಾಸ್ ರೂಂ ಆಗಿ ಪರಿವರ್ತಿಸಲು…
ಬೆಳಗಾವಿ: ಎಲ್ಲ ಮಠಗಳ ಮಧ್ಯೆ ಆತ್ಮೀಯತೆ ಬಂದರೆ, ಎಲ್ಲ ಧಾರ್ಮಿಕ ಸಂಪ್ರದಾಯಗಳೂ ಒಂದಾದರೆ ದೇಶ ಅಖಂಡವಾಗುತ್ತದೆ. ದೇಶದ ಎಲ್ಲ ಸಮಸ್ಯೆಗಳೂ ಪರಿಹಾರವಾಗುತ್ತವೆ ಎಂದು ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮಿಗಳು ಹಾಗೂ ಗುರುಶಾಂತೇಶ್ವರ ಸಂಸ್ಥಾನ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯ ಪಟ್ಟಿದ್ದಾರೆ. ಹುಕ್ಕೇರಿ ಹಿರೇಮಠದ ಬೆಳಗಾವಿ ಶಾಖೆಯಲ್ಲಿ ಮಂಗಳವಾರ ಹಿರೇಮಠದ ವತಿಯಂದ ಸ್ವರ್ಣವಲ್ಲೀ ಶ್ರೀಗಳನ್ನು ಸತ್ಕರಿಸಿ, ಗೀತಾಭಿಯಾನಾರ್ಣವ ಬಿರುದು ಪ್ರದಾನ ಮಾಡಲಾಯಿತು. ಈ ವೇಳೆ ಮೊದಲು ಮಾತನಾಡಿದ ಚಂದ್ರಶೇಖರ ಶಿವಾಚಾರ್ಯರು, ಜಗದ್ಗುರು ರೇಣುಕಾಚಾರ್ಯರು ಮತ್ತು ಜಗದ್ಗುರು ಶಂಕರಾಚಾರ್ಯರು ಹಿಂದೆ ಒಟ್ಟಾಗಿ ಕೆಲಸ ಮಾಡಿದ್ದರೇನೋ ಎನ್ನುವ ಭಾವನೆ ನಮಗೆ ಬರುತ್ತಿದೆ. ಜಾತಿ ಮೀರಿ ಎರಡೂ ಮಠಗಳು ಕೆಲಸ ಮಾಡುತ್ತಿವೆ. ಮಠಗಳ ಮಧ್ಯೆ ಸಾಮರಸ್ಯ ಮೂಡಬೇಕು ಎನ್ನುವುದು ನಮ್ಮ ಭಾವನೆ. ಸ್ವರ್ಣವಲ್ಲೀ ಮಠ ಪೂರ್ಣ ಸುಖ ನೀಡುವ ಮಠವಾಗಿದೆ ಎಂದರು. ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನ ಮಠದ ಮಠಾಧೀಶ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ…
ಬೆಳಗಾವಿ: ಹುಕ್ಕೇರಿ ತಾಲೂಕಿನ 17 ವರ್ಷದ ಬಾಲಕಿ ಮತ್ತು ಹಳಿಯಾಳದ 9 ವರ್ಷದ ಬಾಲಕನಿಗೆ ಬೆಳಗಾವಿಯ ಕೆಎಲ್ ಇಎಸ್ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಯಶಸ್ವಿಯಾಗಿ ಪ್ರೀ ಎಮ್ಟಿವ್ (preemptive) ಮೂತ್ರಪಿಂಡ ಕಸಿ ಮಾಡಲಾಯಿತು. 17 ವರ್ಷದ ಹುಡುಗಿ ತನ್ನ ತಾಯಿಯಿಂದ ಮತ್ತು 9 ವರ್ಷದ ಹುಡುಗ ತನ್ನ ಅಜ್ಜಿಯಿಂದ ಕಿಡ್ನಿ ಪಡೆದಿದ್ದಾರೆ. ಇಬ್ಬರೂ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದರು. ಅವರನ್ನು ಉಳಿಸಿಕೊಳ್ಳಲು ಡಯಾಲಿಸಿಸ್ ಅಥವಾ ಕಿಡ್ನಿ ಟ್ರಾನ್ಸ್ ಪ್ಲಾಂಟೇಶನ್ ಗೆ ಅನಿವಾರ್ಯವಾಗಿತ್ತು. ಪೀಡಿಯಾಟ್ರಿಕ್ ನೆಪ್ರಾಲಜಿಸ್ಟ್ ಡಾ. ಮಹಾಂತೇಶ ವಿ. ಪಾಟೀಲ್ ಅವರ ಟೀಮ್ ಯಶಸ್ವಿಯಾಗಿ ಕಿಡ್ನಿ ಟ್ರಾನ್ಸ್ ಪ್ಲಾಂಟೇಶನ್ ನಡೆಸಿತು. ಉತ್ತರ ಕರ್ನಾಟಕದಲ್ಲಿ ಕೆಎಲ್ ಇ ಆಸ್ಪತ್ರೆಯಲ್ಲಿ ಮಾತ್ರ ಈ ಸೌಲಭ್ಯವಿದೆ. ಮಕ್ಕಳು ಡಯಾಲಿಸಿಸ್ ಗೆ ಒಳಗಾಗುವುದು ಬಹಳ ಕಷ್ಟ. ಮತ್ತು ಡಯಾಲಿಸಿಸ್ ಸಮಯದಲ್ಲಿ ಪೋಷಕರು ಮತ್ತು ಮಕ್ಕಳು ಇಬ್ಬರೂ ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಾರೆ. ಮಕ್ಕಳು ವಿದ್ಯಾಭ್ಯಾಸ ವಂಚಿತರಾದರೆ, ಪಾಲಕರು ಉದ್ಯೋಗ ಕಳೆದು ಕೊಳ್ಳಬೇಕಾಗುತ್ತದೆ. ಆದ್ದರಿಂದ ಡಯಾಲಿಸಿಸ್…
ಮುಂಬರುವ ಐಪಿಎಲ್ ಗೆ ಆರ್ ಸಿಬಿ ಟೀಮ್ ಫೈನಲ್ ಆಗಿದಂತಿದೆ. ಘಟಾನುಘಟಿ ಆಟಗಾರರನ್ನು ಒಳಗೊಂಡ ತಂಡ ಇದಾಗಿದೆ. ತಂಡ: ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್ವೆಲ್, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮೋರ್, ಕರಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್, ವಿಜಯ್ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ರೀಸ್ ಟೋಪಿ, ಹಿಮಾಂಶು ಶರ್ಮಾ, ರಾಜನ್, ಕ್ಯಾಮೆರೋನ್ ಗ್ರೀನ್, ಅಲ್ಪಾರಿ, ಯಶ್ ದಯಾಳ್ ಟಾಮ್ ಕಾನ್, ಲಾಕಿ ಫರ್ಗುಸನ್, ಸ್ವಪ್ಟಿಲ್, ಸೌರವ್ ಚೌಹಾಣ್.
ಆನಂದ್ ವಿವಾಹ ಕಾಯ್ದೆಯನ್ನು ಜಾರಿಗೊಳಿಸುವ ಮೂಲಕ ಸಿಖ್ ಸಮುದಾಯದ ಬಹುಕಾಲದ ಬೇಡಿಕೆಯನ್ನು ಈಡೇರಿಸುವ ನಿಟ್ಟಿನಲ್ಲಿ ಜಮ್ಮು ಮತ್ತು ಕಾಶ್ಮೀರ ಆಡಳಿತ ಮಹತ್ವದ ಹೆಜ್ಜೆ ಇಟ್ಟಿದೆ. ಈ ಕಾಯಿದೆಯು ಸಿಖ್ ವಿವಾಹ ಆಚರಣೆಗಳಿಗೆ ಶಾಸನಬದ್ದ ಮಾನ್ಯತೆಯನ್ನು ಒದಗಿಸುತ್ತದೆ. ಸಿಖ್ ದಂಪತಿಗಳು ಹಿಂದೂ ವಿವಾಹ ಕಾಯಿದೆಯ ಬದಲಿಗೆ ನಿರ್ದಿಷ್ಟ ನಿಯಮಗಳ ಅಡಿಯಲ್ಲಿ ತಮ್ಮ ವಿವಾಹಗಳನ್ನು ನೋಂದಾಯಿಸಲು ಈ ಕಾಯಿದೆ ಅವಕಾಶ ನೀಡುತ್ತದೆ. ಆಯಾ ಪ್ರಾದೇಶಿಕ ಅಧಿಕಾರ ವ್ಯಾಪ್ತಿಯಲ್ಲಿರುವ ತಹಸೀಲ್ದಾರ್ ಗಳು ಅಂತಹ ವಿವಾಹಗಳಿಗೆ ರಿಜಿಸ್ಟ್ರಾರ್ ಗಳಾಗಿ ಕಾರ್ಯನಿರ್ವಹಿಸುತ್ತಾರೆ.
ಬೆಂಗಳೂರು: ಮನೆಗಳ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಮೂವರನ್ನು ಶೇಷಾದ್ರಿಪುರಂ ಠಾಣೆ ಪೊಲೀಸರು ಬಂಧಿಸಿ 25 ಲಕ್ಷ ರೂ. ಮೌಲ್ಯದ 20 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಮಂಡ್ಯದ ಅವಿನಾಶ್, ಹಾಸನದ ಶಶಿ ಕುಮಾರ್, ರಾಹುಲ್ ಬಂಧಿತ ಆರೋಪಿಗಳು. ಪೊಲೀಸರು ಗಸ್ತಿನಲ್ಲಿದ್ದಾಗ ನಂಬರ್ ಪ್ಲೇಟ್ ಇಲ್ಲದ ಬಜಾಜ್ ಪಲ್ಸರ್ ಬೈಕ್ ನಿಲ್ಲಿಸಿಕೊಂಡು ಅನುಮಾನಸ್ಪದವಾಗಿ ವರ್ತಿಸುತ್ತಿದ್ದರು. ಇದನ್ನು ಗಮನಿಸಿದ ಪೊಲೀಸರು ವಿಚಾರಣೆಗೊಳಪಡಿಸಿದಾಗ ಸತ್ಯಾಂಶ ಬಯಲಾಗಿದೆ.
ಮಧ್ಯಪ್ರದೇಶದಲ್ಲಿ ಅಚ್ಚರಿಯ ಘಟನೆಯೊಂದು ಜರುಗಿದ್ದು, ಕುಲದೇವತೆ ಎಂದು ನೂರಾರು ವರ್ಷಗಳಿಂದ ಡೈನೋಸಾರ್ ಮೊಟ್ಟೆ ಪೂಜಿಸಿದ್ದಾರೆ. ವಾಸ್ತವವಾಗಿ ರೈತ ಕುಟುಂಬವು ಕೆಲವು ಕಲ್ಲಿನ ಚೆಂಡುಗಳನ್ನು ಪೂಜಿಸುತ್ತಿತ್ತು. ಆದರೆ ಅವರಿಗೆ ಈ ಬಗ್ಗೆ ತಿಳಿಸಿದಿರಲೇ ಇಲ್ಲ. ಕೊನೆಗೆ ಇವುಗಳ ಬಗ್ಗೆ ಅನುಮಾನಗೊಂಡ ಕೆಲವರು ವಿಜ್ಞಾನಿಗಳಿಗೆ ಮಾಹಿತಿ ನೀಡಿದ್ದು, ಅವುಗಳನ್ನು ಪರೀಕ್ಷಿಸಿದಾಗ ಲಕ್ಷಾಂತರ ವರ್ಷಗಳಷ್ಟು ಹಳೆಯದಾದ ಡೈನೋಸಾರ್ ಮೊಟ್ಟೆ ಎಂದು ತಿಳಿದು ಬಂದಿದೆ. ಇದನ್ನು ಕೇಳಿ ಮನೆಯವರು ಬೆಚ್ಚಿಬಿದ್ದಿದ್ದು, ಆ ಮೊಟ್ಟೆಗಳನ್ನು ಕುಟುಂಬವು ಹಲವು ವರ್ಷಗಳಿಂದ ಸುರಕ್ಷಿತವಾಗಿಟ್ಟಿದ್ದೇ ವಿಶೇಷ ಎಂದು ಸಂಶೋಧಕರು ತಿಳಿಸಿದ್ದಾರೆ.