Author: admin

ಕೇರಳದಲ್ಲಿ ಕೊರೊನಾ ರೂಪಾಂತರಿ ಜೆಎನ್.1 ಹೆಚ್ಚಳ ಕಂಡುಬಂದ ಹಿನ್ನೆಲೆ ಕೇಂದ್ರ ಸರ್ಕಾರ ಕೋವಿಡ್ ಗೈಡ್‌ ಲೈನ್ಸ್ ಬಿಡುಗಡೆ ಮಾಡಿದ್ದು, ಕಟ್ಟುನಿಟ್ಟಾಗಿ ಪಾಲಿಸುವಂತೆ ರಾಜ್ಯಗಳಿಗೆ ಸೂಚನೆ ನೀಡಲಾಗಿದೆ. ಮುಂಬರುವ ಹಬ್ಬಗಳ ಮೇಲೆ ನಿಗಾ ವಹಿಸಬೇಕು. ಪ್ರತಿ ಜಿಲ್ಲೆ ಮತ್ತು ನಗರಗಳಲ್ಲಿ ಆರ್ಟಿಪಿಸಿಆರ್, ರಾಪಿಡ್ ಆಂಟಿಜೆನ್ ಟೆಸ್ಟ್ ಮಾಡಲು ಸೂಚನೆ ನೀಡಲಾಗಿದೆ. ಕೊರೊನಾ ಹೊಸ ರೂಪಾಂತರ JN.1 ಸೋಂಕು ಜನರಲ್ಲಿ ಆತಂಕವನ್ನು ಸೃಷ್ಟಿಸಿದೆ. ನಿರಂತರವಾಗಿ ಹೆಚ್ಚುತ್ತಿರುವ ಕೊರೊನಾ ವೈರಸ್ ಬಗ್ಗೆ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಇಂದು ಸಭೆ ನಡೆಸಲಿದ್ದಾರೆ. ಈ ಸಭೆಯು ವಿಡಿಯೋ ಕಾನ್ಸರೆನ್ಸ್ ಮೂಲಕ ನಡೆಯಲಿದೆ. ಇದರಲ್ಲಿ ಆರೋಗ್ಯ ಸಚಿವರು ಮತ್ತು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಅಧಿಕಾರಿಗಳು ಸೇರಿದಂತೆ ಅನೇಕ ಜನರು ಭಾಗವಹಿಸಲಿದ್ದಾರೆ. ಭಾರತಕ್ಕೂ ಈ ಹೊಸ ರೂಪಾಂತರಿ ವೈರಸ್ ಕಾಲಿಟ್ಟಿರುವುದರಿಂದ ಮತ್ತೊಮ್ಮೆ ಆತಂಕ ಎದುರಾಗಿದೆ. ಇದು ಹಿಂದಿನ ಒಮಿಕ್ರಾನ್ ತಳಿಯದ್ದೇ ರೋಗಲಕ್ಷಣಗಳನ್ನು ಹೊಂದಿದೆ. ಜ್ವರ, ವಿಪರೀತ ಶೀತ, ಗಂಟಲು ನೋವು ಈ ಹೊಸ ರೂಪಾಂತರಿಯ ಪ್ರಮುಖ…

Read More

ಬೆಂಗಳೂರು: ಬೊಮ್ಮನಹಳ್ಳಿ ಸಮೀಪದ ಗಾರ್ವೇಬಾವಿ ಪಾಳ್ಯದ ಲಕ್ಷ್ಮೀ ಲೇಔಟ್ ‌ನ ಏಳನೇ ಕ್ರಾಸ್‌ ನ ಮನೆಯೊಂದರಲ್ಲಿ ಸಿಲಿಂಡರ್‌ ಗ್ಯಾಸ್‌ ಲಿಕೇಜ್‌ ನಿಂದಾಗಿ ಸ್ಫೋಟಗೊಂಡಿದೆ. ಪರಿಣಾಮ ಐವರು ಗಂಭೀರ ಗಾಯಗೊಂಡಿದ್ದು, ಒಬ್ಬನ ಸ್ಥಿತಿ ಚಿಂತಾಜನಕವಾಗಿದೆ. ಸುಬ್ರಮಣಿ ಎಂಬುವವರಿಗೆ ಸೇರಿದ ಬಿಲ್ಡಿಂಗ್ ‌ನಲ್ಲಿ ನೇಪಾಳ ಮೂಲದ ಸಂದೇಶ್ ಕುಟುಂಬ ವಾಸವಿದ್ದರು. ರಾತ್ರಿ ಸಿಲಿಂಡರ್ ಗ್ಯಾಸ್ ಲೀಕ್ ಆಗಿದೆ. ಆದರೆ ಇದನ್ನು ಗಮನಿಸದೆ ಬೆಳಗ್ಗೆ ಎಂದಿನಂತೆ ಅಡುಗೆ ಮನೆಯ ಲೈಟ್ ಆನ್ ಮಾಡುತ್ತಿದ್ದಂತೆ ಸ್ಫೋಟಗೊಂಡಿದೆ.

Read More

ಮೇಕೆದಾಟುಗೆ ಅನುಮತಿ ಕೊಡಿಸುವಂತೆ ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದರು. ಮೇಕೆದಾಟು ಕುಡಿಯುವ ನೀರಿನ ಯೋಜನೆಯಾಗಿದ್ದು, ರಾಜ್ಯದ ಗಡಿಯ ಒಳಗೆ ನಿರ್ಮಾಣ ಆಗುವಂತಹುದ್ದು. ತಮಿಳುನಾಡು ಸರ್ಕಾರ ರಾಜಕೀಯ ಕಾರಣಕ್ಕೆ ತಕರಾರು ಮಾಡುತ್ತಿದೆ. ಕುಡಿಯುವ ನೀರಿನ ಜೊತೆಗೆ 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ. ವಿದ್ಯುತ್ ಉತ್ಪಾದನೆಗೆ ಬಳಕೆಯಾದ ನೀರು ಕೂಡ ತಮಿಳುನಾಡಿಗೇ ಹೋಗುತ್ತದೆ. ಇದರಿಂದ ಅವರಿಗೇ ಹೆಚ್ಚಿನ ಅನುಕೂಲ ಎಂದು ಸಿದ್ದರಾಮಯ್ಯ ತಿಳಿಸಿದರು. ಕೇಂದ್ರ ಸರ್ಕಾರ ಪರಿಸರ ಅನುಮತಿ ಕೊಟ್ಟ ಕೂಡಲೇ ಮಹದಾಯಿ ಕೆಲಸ ಶುರು ಮಾಡಲಾಗುತ್ತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮಹದಾಯಿ ವಿಚಾರದಲ್ಲಿ ಈಗಾಗಲೇ ಗೆಜೆಟ್ ನೋಟಿಫಿಕೇಷನ್‌ ಕೂಡ ಆಗಿದೆ. ಯೋಜನೆಯ ಜಾರಿಗೆ ಬೇರೆ ಯಾವ ಅಡೆತಡೆ ಇಲ್ಲ. ಪರಿಸರ ತೀರುವಳಿ ಮಾತ್ರ ಬಾಕಿ ಇದೆ. ಇದನ್ನು ಕೇಂದ್ರ ಸರ್ಕಾರವೇ ಕೊಡಬೇಕಿದ್ದು, ಇದುವರೆಗೂ ಕೊಟ್ಟಿಲ್ಲ. ಟೆಂಡ‌ರ್ ಕರೆದು ಎಸ್ಟಿಮೇಟ್ ಕೂಡ ಆಗಿದೆ. ಕೇಂದ್ರ ಸರ್ಕಾರ ಪರಿಸರ ಅನುಮತಿ ಕೊಟ್ಟ ಕೂಡಲೇ ಕೆಲಸ ಶುರು ಮಾಡಬಹುದು ಎಂದು ಸಿಎಂ ಹೇಳಿದರು.

Read More

ದಕ್ಷಿಣ ತಮಿಳುನಾಡಿನಲ್ಲಿ ಪ್ರವಾಹದ ಸಂಕಷ್ಟ ಮುಂದುವರಿದಿದೆ. ತಿರುನಲ್ವೇಲಿ ಮತ್ತು ಟುಟಿಕೋರಿನ್ ಜಿಲ್ಲೆಗಳಲ್ಲಿ ಬಿಕ್ಕಟ್ಟು ತೀವ್ರವಾಗಿದೆ. ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಇಂದು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ಸ್ಟಾಲಿನ್ ನಿನ್ನೆ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದರು. ತಮಿಳುನಾಡಿನ ಪರಿಸ್ಥಿತಿ ಬಗ್ಗೆ ಪ್ರಧಾನಿಗೆ ಮನವರಿಕೆ ಮಾಡಿಕೊಡಲು ಸಾಧ್ಯವಾಯಿತು ಎಂದು ಸ್ಟಾಲಿನ್ ಮಾಹಿತಿ ನೀಡಿದರು. ಇಂದು ಬೆಳಗ್ಗೆ 10:30ಕ್ಕೆ ದೆಹಲಿಯಿಂದ ಚೆನ್ನೈ ತಲುಪಲಿರುವ ಮುಖ್ಯಮಂತ್ರಿಗಳು ತಿರುನಲ್ವೇಲಿ ಮತ್ತು ತೂತುಕುಡಿ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಶ್ರೀವೈಕುಂಡತ್ ರೈಲಿನಲ್ಲಿ ಜಲಾವೃತವಾಗಿ ಸಿಲುಕಿದ್ದ ಎಲ್ಲ ಪ್ರಯಾಣಿಕರನ್ನು ನಿನ್ನೆ ರಕ್ಷಿಸಲಾಗಿದೆ. ಭಾರೀ ಮಳೆಗೆ ನಾಲ್ಕು ಜಿಲ್ಲೆಗಳಲ್ಲಿ ಇದುವರೆಗೆ ಹತ್ತು ಮಂದಿ ಸಾವನ್ನಪ್ಪಿದ್ದಾರೆ.

Read More

ಜಾತಿ ಗಣತಿ ಕುರಿತು ಅಮಿತ್ ಶಾ ಹೇಳಿಕೆಯನ್ನು RSS ತಿರಸ್ಕರಿಸಿದೆ. ಜಾತಿ ಗಣತಿ ದೇಶದ ಸಮಗ್ರತೆಗೆ ಧಕ್ಕೆ ತರಲಿದೆ ಎಂದು ಆರ್ ‌ಎಸ್‌ ಎಸ್ ಹೇಳಿದೆ. ಜಾತಿ ಗಣತಿಯನ್ನು ವಿರೋಧಿಸುವುದಾಗಿ ಆರ್ ‌ಎಸ್‌ಎಸ್ ಹೇಳಿದೆ. ಜಾತಿ ಆಧಾರಿತ ಜನಗಣತಿ ದೇಶದಲ್ಲಿ ಸಾಮಾಜಿಕ ಅಸಮಾನತೆಗಳನ್ನು ಸೃಷ್ಟಿಸುತ್ತದೆ ಎಂದು ಆರ್‌ ಎಸ್ ‌ಎಸ್ ಮುಖಂಡರು ಹೇಳಿದ್ದಾರೆ. ಜಾತಿ ಗಣತಿಯಲ್ಲಿ ನಾವು ಯಾವುದೇ ಲಾಭವನ್ನು ಕಾಣುತ್ತಿಲ್ಲ ಆದರೆ ಹಲವಾರು ಸಮಸ್ಯೆಗಳಿವೆ ಎಂದು ಹಿರಿಯ ಆರ್‌ ಎಸ್‌ ಎಸ್ ಪ್ರಚಾರಕ ಶ್ರೀಧರ ಗಾಡ್ಗೆ ಹೇಳಿದರು. ಮಹಾರಾಷ್ಟ್ರ ರಾಜ್ಯ ವಿಧಾನಸಭೆ ಮತ್ತು ಪರಿಷತ್ತಿನ ಬಿಜೆಪಿ ಮತ್ತು ಶಿವಸೇನೆ (ಶಿಂಧೆ ಬಣ) ಶಾಸಕರು ನಾಗ್ಪುರದಲ್ಲಿರುವ ಆರ್ ‌ಎಸ್ ‌ಎಸ್ ಪ್ರಧಾನ ಕಚೇರಿಯನ್ನು ತಲುಪಿದಾಗ ಸಂಘಟನೆಯು ತನ್ನ ನಿಲುವನ್ನು ಸ್ಪಷ್ಟಪಡಿಸಿತು. ಬಿಜೆಪಿ ಮತ್ತು ಶಿವಸೇನೆ ನಾಯಕರು ಆರ್ ‌ಎಸ್‌ ಎಸ್ ಕೇಂದ್ರ ಕಚೇರಿಗೆ ಭೇಟಿ ನೀಡಿದಾಗ ಆರ್‌ ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮತ್ತು ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರು…

Read More

ಮುಂದಿನ ಲೋಕಸಭಾ ಚುನಾವಣೆಗೆ ಈಗಿನಿಂದಲೇ ತಯಾರಿ ನಡೆಸುತ್ತಿದ್ದು ಈ ಮಧ್ಯೆ  ನವದೆಹಲಿಯಲ್ಲಿ ಇಂಡಿಯಾ ಮೈತ್ರಿಕೂಟ ನಾಯಕರ ಸಭೆ ನಡೆಯಿತು. ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಅಭ್ಯರ್ಥಿಯಾಗಲಿ ಎಂದು ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನವದೆಹಲಿಯ ಖಾಸಗಿ ಹೋಟೆಲ್ ನಲ್ಲಿ ಇಂಡಿಯಾ ಮೈತ್ರಿಕೂಟದ ಸಭೆ ನಡೆದಿದ್ದು,  ಮೈತ್ರಿಕೂಟ ಸ್ಥಾಪನೆಯಾದ ಬಳಿಕ 4ನೇ ಬಾರಿಗೆ ನಡೆದ ಸಭೆ ಇದಾಗಿದೆ. ಇನ್ನು ಮಮತಾ ಬ್ಯಾನರ್ಜಿ ಅವರ ಅಭಿಪ್ರಾಯಕ್ಕೆ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಸಹ ಸಹಮತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಆದರೆ ಈ ಕುರಿತು ಪ್ರತಿಕ್ರಿಯಿಸಿರುವ ಮಲ್ಲಿಕಾರ್ಜುನ ಖರ್ಗೆ, ಮೊದಲು ನಾವು ಗೆಲ್ಲೋಣ ನಂತರ ಪ್ರಧಾನಿ ಅಭ್ಯರ್ಥಿ ಬಗ್ಗೆ ತೀರ್ಮಾನಿಸೋಣ ಎಂದು ತಿಳಿಸಿದ್ದಾರೆ. ಕಳೆದ ಲೋಕಸಭಾ ಚುನಾವಣೆ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿಯಾಗಿದ್ದರು.

Read More

ಮಧುಗಿರಿ: ಮೂರು ಜನ ಹುಡುಗರ ತಂಡ ನಕಲಿ ನೋಟು ಚಲಾಯಿಸಿ ಮೊಬೈಲ್ ಖರೀದಿಸಲು  ಪ್ರಯತ್ನಿಸಿ  ಅಂಗಡಿ ಮಾಲೀಕನ ಸಮಯಪ್ರಜ್ಞೆಯಿಂದ ಸಿಕ್ಕಿಬಿದ್ದಿರುವ ಘಟನೆ ಮಧುಗಿರಿ  ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಧುಗಿರಿ ಪಟ್ಟಣದ ವಿ ಆರ್ ಎಸ್ ಟಿ ರಸ್ತೆಯಲ್ಲಿರುವ ಬಯಲುಬಸವೇಶ್ವರ ಮೊಬೈಲ್ ಅಂಗಡಿಯಲ್ಲಿ ಸೋಮವಾರ ಸಂಜೆ 6:30 ರಲ್ಲಿ ಮೂರು ಜನ ಹುಡುಗರ ತಂಡ ಮೊಬೈಲ್ ಅಂಗಡಿಗೆ ತೆರಳಿ ಕಡಿಮೆ ಬೆಲೆಯ ಫೋನ್ ತೋರಿಸಲು ತಿಳಿಸಿದ್ದು, ಅಂಗಡಿಯವರು ಫೋನ್ ತೋರಿಸಿದಾಗ ಹುಡುಗರು ಹತ್ತುವರೆ ಸಾವಿರದ ಫೋನ್ ಇರಲಿ ಎಂದು ತಿಳಿಸಿ 500 ರೂಪಾಯಿ ಮುಖಬೆಲೆಯ 21 ನೋಟುಗಳನ್ನು ಅಂಗಡಿ ಮಾಲೀಕರಿಗೆ ನೀಡಿದ್ದಾರೆ. ನೋಟುಗಳನ್ನು ಸ್ವೀಕರಿಸಿದ ಅಂಗಡಿ ಮಾಲೀಕನಿಗೆ ನೋಟುಗಳ ಸ್ಪರ್ಶತೆಯಿಂದ ನೋಟುಗಳ ಮೇಲೆ ಅನುಮಾನ ಬಂದು ಹುಡುಗರಿಗೆ ಇದು ಕೋಟ ನೋಟು ನಿಮ್ಮ ಹತ್ತಿರ ಹೇಗೆ ಬಂತು ಎಂದು  ಪ್ರಶ್ನಿಸಿದಾಗ, ಹುಡುಗರು ಗಾಬರಿಯಾಗಿ ಅಂಗಡಿಯಿಂದ ಓಡಿ ಹೋಗಿದ್ದು , ಮುಂಜಾಗ್ರತೆ ಕ್ರಮವಾಗಿ ಮೊಬೈಲ್ ಅಂಗಡಿ ಮಾಲೀಕರಾದ ನವೀನ್ ನಕಲಿ ನೋಟುಗಳನ್ನು ಮಧುಗಿರಿ…

Read More

ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ತಾಲ್ಲೂಕಿನ ನೆಮ್ಮಾರು ಸಮೀಪ ರಾಷ್ಟ್ರೀಯ ಹೆದ್ದಾರಿ ರಸ್ತೆ ಅಗಲೀಕರಣ ವೇಳೆ ಮಣ್ಣು ಕುಸಿದಿದ್ದು, ಓರ್ವ ಕಾರ್ಮಿಕ ಸಾವನ್ನಪ್ಪಿದ್ದಾನೆ. ಮಣ್ಣಿನಡಿ ಸಿಲುಕಿ ಅಸ್ಸಾಂ ಮೂಲದ ಮಜಿಬುರ್(30) ಎನ್ನುವಾತ ಮೃತಪಟ್ಟ ದುರ್ದೈವಿ. ನೆಮ್ಮಾರು ಸಮೀಪದ ತನಿಕೋಡು ಚೆಕ್ ಪೋಸ್ಟ್ ಬಳಿ ರಸ್ತೆ ಅಗಲೀಕರಣ ವೇಳೆ ಜಿಸಿಬಿಯಿಂದ ಮಣ್ಣು ತೆಗೆಯುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಮಣ್ಣಿನಲ್ಲಿ ಒಟ್ಟು ಮೂವರು ಕಾರ್ಮಿಕರು ಸಿಲುಕಿಕೊಂಡಿದ್ದು, ಈ ಪೈಕಿ ಓರ್ವ  ಕಾರ್ಮಿಕ  ಮೃತಪಟ್ಟರೆ ಇನ್ನುಳಿದ ಇಬ್ಬರನ್ನು ರಕ್ಷಣೆ ಮಾಡಲಾಗಿದೆ.

Read More

ಕಲಬುರಗಿ: ಅಪ್ರಾಪ್ತ ಬಾಲಕಿಯ ಮೇಲೆ ಇಬ್ಬರು ಅಪ್ರಾಪ್ತ ಬಾಲಕರು ಅತ್ಯಾಚಾರ ಎಸಗಿರುವ ಘಟನೆ ಕಲಬುರಗಿ ಜಿಲ್ಲೆಯ ಕಾಳಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 14 ಮತ್ತು 16 ವರ್ಷದ ಇಬ್ಬರು ಬಾಲಕರು 10 ವರ್ಷದ ಬಾಲಕಿಗೆ ಚಾಕು ತೋರಿಸಿ ಬೆದರಿಸಿ ಅತ್ಯಾಚಾರ ಎಸಗಿದ್ದಾರೆ. ಅಲ್ಲದೇ ಅತ್ಯಾಚಾರ ಮಾಡಿ ಪರಸ್ಪರ ಮೊಬೈಲ್ ನಲ್ಲಿ ವಿಡಿಯೋ ಮಾಡಿಕೊಂಡಿದ್ದಾರೆ. ಬಾಲಕಿಯ ಹೆತ್ತವರು ಹೊಟ್ಟೆಪಾಡಿಗಾಗಿ ಮುಂಬೈನಲ್ಲಿ ಕೆಲಸಕ್ಕೆ ತೆರಳಿದ್ದಾರೆ. ಈ ಹಿನ್ನಲೆಯಲ್ಲಿ ಅತ್ಯಾಚಾರಕ್ಕೊಳಗಾದ ಬಾಲಕಿ ಸಂಬಂಧಿಕರ ಮನೆಯಲ್ಲಿದ್ದು ಶಿಕ್ಷಣ ಕಲಿಯುತ್ತಿದ್ದಾಳೆ. ಸದ್ಯ ಈ ಬಗ್ಗೆ ಕಾಳಗಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಅಡಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು: ಅಗ್ನಿವೀರ್ ಯೋಜನೆ ಹೆಸರಲ್ಲಿ ಸೇನೆಗೆ ಸೇರುವ ಆಸೆಯಲ್ಲಿ ದೇಶದ ವಿವಿಧ ಪ್ರದೇಶದಲ್ಲಿ ನೇಮಕಾತಿಗಳು ನಡೆದಿದೆ. ಸೇನೆ ನೇಮಕಾತಿಗಾಗಿ ಒಂದಷ್ಟು ರ್ಯಾಲಿ ಹಾಗೂ ನೇಮಕಾತಿ ಪ್ರಕ್ರಿಯೆಗಳು ನಡೆದಿವೆ. ಇದರ ನಡುವೆ ದೇಶದ ವಿವಿಧ ಪ್ರದೇಶದಲ್ಲಿ ಸೇನಾ ರ್ಯಾಲಿ ನಡೆದ ಸ್ಥಳದಲ್ಲೇ ಸೇನೆಗೆ ಸೇರಲು ಆಸೆ ಪಡುವವರನ್ನು ವಂಚಿಸಲಾಗಿದೆ. ಕಳೆದ ಫೆಬ್ರವರಿಯಲ್ಲಿ ಒಂದಷ್ಟು ಜನರು ಬೆಂಗಳೂರಿನ ಅಶೋಕ ನಗರದಲ್ಲಿರುವ ಭಾರತೀಯ ಸೇನೆಯ ಕಚೇರಿಗೆ ಆಗಮಿಸಿ ತಮಗೆ ಅಪಾಯಿಂಟ್ಮೆಂಟ್ ಆಗಿದೆ ಎಂದು ಲೆಟರ್ ಸಹಿತ ಬಂದ ಘಟನೆ ನಡೆದಿದೆ.

Read More