Subscribe to Updates
Get the latest creative news from FooBar about art, design and business.
- ಪ್ರಥಮ ಬಿ.ಸಿ.ಎ. ಪದವಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
- ಕುಣಿಗಲ್ ಪುರಸಭಾ ವ್ಯಾಪ್ತಿಯ ಸಾರ್ವಜನಿಕರಿಗೆ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
- ತುಮಕೂರು: ‘ಕರ್ನಾಟಕ ಪಬ್ಲಿಕ್ ಸ್ಕೂಲ್’ ಸಿನಿಮಾ ಮುಹೂರ್ತ ಸಮಾರಂಭ
- ತುಮಕೂರು: ಪಾದರಕ್ಷೆ ತಯಾರಿಕಾ ಸ್ಪರ್ಧೆಗೆ ಅರ್ಜಿ
- ಭೀಕರ ಅಪಘಾತ: ಶನಿಮಹಾತ್ಮ ದೇವಾಲಯ ವ್ಯವಸ್ಥಾಪಕ ಜಗನ್ನಾಥ್ ನಿಧನ
- ನೈರ್ಮಲ್ಯ ಕಾಪಾಡಿ, ಗರ್ಭಾಶಯದ ಕ್ಯಾನ್ಸರ್ ತಡೆಗಟ್ಟಿ: ಮಹಿಳೆಯರಿಗೆ ಕಾವೇರಿ ಎನ್. ಕರೆ
- ಪೌತಿ ಖಾತೆ, ಕಂದಾಯ ಗ್ರಾಮ ಹಕ್ಕುಪತ್ರ, ಪೋಡಿ ಮುಕ್ತ ಅಭಿಯಾನ: ರೈತರ ಅಲೆದಾಟ ತಪ್ಪಿಸಲು ಸರ್ಕಾರದ ಮಹತ್ವದ ಕ್ರಮ
- ತುಮಕೂರನ್ನು ಬೆಂಗಳೂರಿನ ಭಾಗವಾಗಿಸಿ: ಸಾಧನಾ ಸಮಾವೇಶದಲ್ಲಿ ಡಾ.ಜಿ.ಪರಮೇಶ್ವರ್ ಪ್ರಸ್ತಾಪ
Author: admin
ದೆಹಲಿ: ಕರ್ನಾಟಕ ಸಿಎಂ ಸಿದ್ದರಾಮಯ್ಯ ಸಂಸತ್ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ. ರಾಜ್ಯದಲ್ಲಿನ ಬರ ಪರಿಸ್ಥಿತಿ ಕುರಿತು ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿ ಅವರ ಜೊತೆ ಚರ್ಚೆ ನಡೆಸಿದ್ದು ಶೀಘ್ರವೇ 18,177 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ. ಸಿಎಂಗೆ ಸಚಿವ ಕೃಷ್ಣಭೈರೇಗೌಡ ಅವರು ಸಾಥ್ ನೀಡಿದ್ದಾರೆ. ಇದರಲ್ಲಿ 4663.12 ಕೋಟಿ ರೂ. ಇನ್ಪುಟ್ ಸಬ್ಸಿಡಿ, 12,7577.86 ಕೋಟಿ ರೂ. ತುರ್ತು ಪರಿಹಾರ ನೀಡುವಂತೆ ಕೋರಿದ್ದಾರೆ. 566.78 ಕೋಟಿ ರೂ. ಕುಡಿಯುವ ನೀರಿಗಾಗಿ ಹಾಗೂ 363.68 ಕೋಟಿ ರೂ. ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಮನವಿ ಮಾಡಿದ್ದಾರೆ. ರಾಜ್ಯದಲ್ಲಿ 236 ರಲ್ಲಿ 223 ತಾಲ್ಲೂಕುಗಳು ಬರಪೀಡಿತವಾಗಿದ್ದು, ಅದರಲ್ಲಿ 196 ತಾಲ್ಲೂಕುಗಳಲ್ಲಿ ಬರದ ತೀವ್ರತೆ ಹೆಚ್ಚಾಗಿದೆ. ಇದರಿಂದಾಗಿ 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ನಷ್ಟ ಆಗಿದೆ. ಇದರಿಂದ ಹೆಚ್ಚಿನ ಸಂಖ್ಯೆಯ ಸಣ್ಣ ಮತ್ತು ಅತಿ ಸಣ್ಣ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ಸಿಎಂ…
ನವದೆಹಲಿ: ಡಿಸೆಂಬರ್ ಅಂತ್ಯದವರೆಗೆ ತಮಿಳುನಾಡಿಗೆ ಪ್ರತಿನಿತ್ಯ 3128 ಕ್ಯೂಸೆಕ್ ನೀರು ಹರಿಸುವಂತೆ ಮತ್ತು ಮುಂದಿನ ವರ್ಷ ಜನವರಿಯಲ್ಲಿ ನಿತ್ಯ 1030 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಕರ್ನಾಟಕಕ್ಕೆ ಆದೇಶ ನೀಡಿದೆ. ರಾಜ್ಯದಲ್ಲಿ ತೀವ್ರ ಮಳೆ ಕೊರತೆಯಿಂದ ಬರಗಾಲ ಆವರಿಸಿದೆ. ಮುಂದೆ ಬರುವ ಬೇಸಿಗೆಗೆ ಜಲಾಶಯಗಳಲ್ಲಿ ಕುಡಿಯುವ ನೀರಿನ ಕೊರತೆ ಎದುರಾಗುವ ಸಾಧ್ಯತೆಗಳಿವೆ. ಆದರೂ ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶಿಸಿದ್ದು, ರೈತರ ಆಕ್ರೋಶಕ್ಕೆ ಕಾರಣವಾಗಿದೆ.
ಚಿಕ್ಕಬಳ್ಳಾಪುರ: ಪ್ರೇಮಿಗಳು ಓಡಿ ಹೋಗಿ ಮದುವೆ ಮಾಡಿಕೊಂಡ ಕಾರಣ ಯುವತಿಯ ಕಡೆಯವರು ಯುವನ ತಂದೆ ತಾಯಿ ಮೇಲೆ ಮಾರಣಾಂತಿಕವಾಗಿ ಹೊಡೆದು ಗಾಯಗೊಳಿಸಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲೂಕಿನ ದಪ್ಪರ್ತಿ ಗ್ರಾಮದಲ್ಲಿ ಘಟನೆ ನಡೆದಿದೆ. ಯುವಕ, ಯುವತಿ ಅಕ್ಕ-ಪಕ್ಕದ ನಿವಾಸಿಗಳಾಗಿದ್ದು, ಕೆಲವು ವರ್ಷಗಳಿಂದ ಪರಸ್ಪರ ಪ್ರೀತಿಸಿ ಕೆಲವು ದಿನಗಳ ಹಿಂದೆ ಮನೆ ಬಿಟ್ಟು ಓಡಿ ಹೋಗಿ ಮದುವೆಯಾಗಿದ್ದರು. ಇವರ ಮದುವೆಗೆ ಯುವತಿಯ ಮನೆಯವರು ತೀವ್ರ ವಿರೋದ ವ್ಯಕ್ತಪಡಿಸಿದ ಕಾರಣ ಗ್ರಾಮಸ್ಥರು ನ್ಯಾಯ ಪಂಚಾಯತಿ ಮಾಡಿ ಯುವತಿಯನ್ನು ತಂದೆ ತಾಯಿ ಜೊತೆ ಮನೆಗೆ ಕಳುಹಿಸಿ ಕೊಟ್ಟಿದ್ದರು. ಆದ್ರೆ, ಇಬ್ಬರೂ ಮತ್ತೆ ಒಂದುಗೂಡಿ ಮನೆಯಿಂದ ಎಸ್ಕೇಪ್ ಆಗಿದ್ದರು. ಇದರಿಂದ ಕೋಪಗೊಂಡ ಯುವತಿಯ ಕಡೆಯವರು ಯುವಕನ ತಂದೆ ತಾಯಿ ಇದ್ದ ಮನೆಯ ಮೇಲೆ ದಾಳಿ ಮಾಡಿ ಹಲ್ಲೆ ಮಾಡಿದ್ದಾರೆ. ಘಟನೆಯಲ್ಲಿ ಯುವಕನ ತಂದೆ ತಾಯಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ.
ಬಂಗಾರ ಎಂದಾಕ್ಷಣ ಅನೇಕರಿಗೆ ಶ್ರೀಮಂತಿಕೆ, ಅಂತಸ್ತು ನೆನಪಾಗಬಹುದು. ಆದರೆ ಇದರಿಂದ ಆರೋಗ್ಯವೂ ವೃದ್ಧಿಯಾಗುತ್ತದೆ. ಚಿನ್ನದ ಉಂಗುರವನ್ನು ಧರಿಸುವುದರಿಂದ ಸೂರ್ಯನ ಶಕ್ತಿಯು ದೇಹಕ್ಕೆ ಹರಿಯಲು ಸಹಾಯ ಮಾಡುತ್ತದೆ. ಏಕಾಗ್ರತೆ ಹೆಚ್ಚುತ್ತದೆ. ಒತ್ತಡ ಮತ್ತು ಆತಂಕ ಕಡಿಮೆಯಾಗುತ್ತದೆ. ಚಿನ್ನದ ಉಂಗುರವನ್ನು ಧರಿಸಿದರೆ ಮಾನಸಿಕ ಧೈರ್ಯ ಮತ್ತು ಆಂತರಿಕ ಶಾಂತಿ ಹೆಚ್ಚುತ್ತದೆ ಎನ್ನುತ್ತಾರೆ ತಜ್ಞರು. ಇದಲ್ಲದೇ, ನಿಮ್ಮ ಜಾತಕದಲ್ಲಿ ಗುರು ದುರ್ಬಲನಾಗಿದ್ದರೆ ಯಶಸ್ಸು ಪಡೆಯಲು ನಿಮ್ಮ ಉಂಗುರದ ಬೆರಳಿಗೆ ಚಿನ್ನದ ಉಂಗುರವನ್ನು ಧರಿಸಬಹುದು.
ಆರೋಪಿ ಪತಿಯಾಗಿದ್ದರೂ ಅತ್ಯಾಚಾರ ಅಪರಾಧ, ಎಂದು ಗುಜರಾತ್ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಮಹಿಳೆಯ ಅನುಮತಿಯಿಲ್ಲದೆ ಆಕೆಯ ದೇಹವನ್ನು ಆಕೆಯ ಪತಿ ಸ್ಪರ್ಶಿಸುವುದು ಅತ್ಯಾಚಾರ ಎಂದು ನ್ಯಾಯಾಲಯವು ತೀರ್ಪು ನೀಡಿದೆ. ಎಲ್ಲಾ ವಿದೇಶಗಳಲ್ಲಿ ಇರುವ ವಿಧಾನವೇ ಭಾರತದಲ್ಲಿಯೂ ಅನ್ವಯಿಸುತ್ತದೆ ಎಂದು ಕೋರ್ಟ್ ಗಮನಿಸಿದೆ. ಪತಿ ಮತ್ತು ಸಂಬಂಧಿಕರು ತನ್ನ ವೈವಾಹಿಕ ಜೀವನದ ಖಾಸಗಿ ಕ್ಷಣಗಳನ್ನು ಕ್ಯಾಮರಾದಲ್ಲಿ ರೆಕಾರ್ಡ್ ಮಾಡುತ್ತಿರುವ ಬಗ್ಗೆ ರಾಜ್ ಕೋಟ್ ನ ಯುವತಿಯೊಬ್ಬರು ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ನಡೆಸುತ್ತಿದೆ. ತನ್ನ ಪತಿ ತನ್ನ ಮೊಬೈಲ್ ಫೋನ್ ನಲ್ಲಿ ತನ್ನ ಖಾಸಗಿ ಚಿತ್ರಗಳನ್ನು ತೆಗೆದುಕೊಂಡು, ಕುಟುಂಬ ವಾಟ್ಸಾಪ್ ಗುಂಪುಗಳು ಮತ್ತು ಅಶ್ಲೀಲ ವೆಬ್ ಸೈಟ್ ಗಳಲ್ಲಿ ಪ್ರಸಾರ ಮಾಡುತ್ತಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ. ಇದರ ಆಧಾರದ ಮೇಲೆ ನ್ಯಾಯಾಲಯವು ಬಲವಂತದ ದೈಹಿಕ ಸಂಬಂಧಕ್ಕೆ ಪತಿ ತಪ್ಪಿತಸ್ಥನೆಂದು ತೀರ್ಪು ನೀಡಿತು. ನ್ಯಾಯಾಲಯದ ಆದೇಶವು ಆಸ್ಟ್ರೇಲಿಯಾ, ನ್ಯೂಜಿಲೆಂಡ್, ಕೆನಡಾ ಮತ್ತು ಯುನೈಟೆಡ್ ಸ್ಟೇಟ್ಸ್ ನ ಕಾನೂನುಗಳನ್ನು ಉಲ್ಲೇಖಿಸುತ್ತದೆ. ಮಹಿಳೆಯ ಮೇಲೆ ಅತ್ಯಾಚಾರ ಎಸಗುವ ವ್ಯಕ್ತಿಯನ್ನು…
ತಮಿಳುನಾಡಿನ ದಕ್ಷಿಣ ಜಿಲ್ಲೆಗಳು ಪ್ರವಾಹ ಭೀತಿಯಲ್ಲಿವೆ. ಇಂದು ಮಧ್ಯಾಹ್ನದವರೆಗೆ ತಿರುನಲ್ವೇಲಿ, ತೂತುಕುಡಿ, ಕನ್ಯಾಕುಮಾರಿ ಮತ್ತು ತೆಂಕಶಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಥೇಣಿ ಮತ್ತು ವಿರುದುನಗರ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಮತ್ತು ಆರು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ತೂತುಕುಡಿ ಮತ್ತು ತಿರುನಲ್ವೇಲಿ ಜಿಲ್ಲೆಗಳಲ್ಲಿ ಇಂದು ಸಾರ್ವಜನಿಕ ರಜೆ. ಕನ್ಯಾಕುಮಾರಿಯಲ್ಲಿ ಶಾಲೆಗಳಿಗೆ ಮಾತ್ರ ರಜೆ ಘೋಷಿಸಲಾಗಿದೆ. ಮಳೆ ಕೊಂಚ ತಗ್ಗಿದ್ದರೂ ನಾಲ್ಕೂ ಜಿಲ್ಲೆಗಳಲ್ಲಿ ಜಲಾವೃತ ತೀವ್ರವಾಗಿದೆ. ನಿನ್ನೆ ವಾಯುಪಡೆಯ ಹೆಲಿಕಾಪ್ಟರ್ ಕೂಡ ರಕ್ಷಣಾ ಕಾರ್ಯಾಚರಣೆಗೆ ಬಂದಿತ್ತು. ನಿನ್ನೆ 42 ಜನರನ್ನು ಹೆಲಿಲಿಫ್ಟ್ ಮಾಡಲಾಗಿದೆ. ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಸಚಿವ ಉದಯನಿಧಿ ಸ್ಟಾಲಿನ್ ಸೇರಿದಂತೆ ಇನ್ನೂ ನಾಲ್ವರು ಸಚಿವರನ್ನು ಪ್ರವಾಹ ಪರಿಹಾರ ಕಾರ್ಯಕ್ಕೆ ನಿಯೋಜಿಸಿದ್ದಾರೆ. ಹಳಿಗಳಿಗೆ ನೀರು ನುಗ್ಗಿದ ಕಾರಣ ಇಂದು ರೈಲನ್ನು ರದ್ದುಗೊಳಿಸಲಾಗಿದೆ. ಕೊಯಮತ್ತೂರು-ನಾಗರ್ಕೋಯಿಲ್ ಎಕ್ಸ್ಪ್ರೆಸ್ ಅನ್ನು ರದ್ದುಗೊಳಿಸಲಾಗಿದೆ. 16 ಸೇವೆಗಳನ್ನು ಭಾಗಶಃ ರದ್ದುಗೊಳಿಸಲಾಗಿದೆ. 3 ರೈಲುಗಳ ಮಾರ್ಗ ಬದಲಿಸಲಾಗಿದೆ. ಕೇರಳದಲ್ಲಿ ಸಾಧಾರಣ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ…
ರೈತರೊಬ್ಬರ ಬಳಿ ಲಂಚ ಸ್ವೀಕರಿಸುವಾಗ ಸರ್ವೇಯರ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಮಹಾಂತೇಶ್ ಕವಳಿಕಟ್ಟಿ ಲೋಕಾಯುಕ್ತದ ಬಲೆಗೆ ಬಿದ್ದ ಸರ್ವೇಯರ್. ಬಾಗಲಕೋಟೆ ಬೀಳಗಿ ತಾಲ್ಲೂಕಿನ ಸುನಗ ಗ್ರಾಮದಲ್ಲಿರುವ ಜಮೀನಿನ ನಕ್ಷೆ ನೀಡಲು ರೈತ ಅಣ್ಣೇಶಿ ಲಮಾಣಿ ಎಂಬುವವರಿಂದ ಮಹಾಂತೇಶ್ ಕವಳಿಕಟ್ಟಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮೊದಲು 25 ಸಾವಿರ ರೂ. ಲಂಚ ಪಡೆದು ಕೆಲಸ ಮಾಡಿಕೊಟ್ಟಿರಲಿಲ್ಲ. ನಂತರ ಮತ್ತಷ್ಟು ಲಂಚಕ್ಕೆ ಬೇಡಿಕೆ ಇಟ್ಟು ಎಡಿಎಲ್ ಆರ್ ಕಚೇರಿಯಲ್ಲೇ 15 ಸಾವಿರ ರೂ. ಲಂಚ ಸ್ವೀಕರಿಸುವಾಗ ಸರ್ವೇಯರ್ ಮಹಾಂತೇಶ್ ಲೋಕಾಯಕ್ತ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಡಿವೈಎಸ್ ಪಿ ಪುಷ್ಪಲತಾ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.
ತುರುವೇಕೆರೆ: ಬಿಜೆಪಿಯ ಕೆಲವು ತಪ್ಪುಗಳಿಂದ ರಾಜ್ಯದಲ್ಲಿ ಪಕ್ಷಕ್ಕೆ ಈ ಸ್ಥಿತಿ ಬಂದಿದೆ. ಅಧಿಕಾರವನ್ನು ಕಳೆದುಕೊಂಡಿದೆ. ಬಿಜೆಪಿ ಜೆಡಿಎಸ್ ಮೈತ್ರಿ ಅನೈತಿಕವಾದದ್ದು ಎಂದು ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅಭಿಪ್ರಾಯಪಟ್ಟರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕೆಯೊಂದಿಗೆ ಹಿರಿಯೂರಿನ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಮಾತನಾಡಿ, ತುರುವೇಕೆರೆಗೆ ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿರುವ ಡಿ.ಟಿ. ಶ್ರೀನಿವಾಸ್ ರವರ ಪರವಾಗಿ ಮತಯಾಚಿಸಲು ಆಗಮಿಸಿದ್ದೇನೆ. ಇಲ್ಲಿ ಬೆಮೆಲ್ ಕಾಂತರಾಜು ರವರರಲ್ಲಿ ಮಾತನಾಡಿದ್ದೇನೆ. ಅವರು ಸಂಪೂರ್ಣ ಬೆಂಬಲ ಇದೆಯೆಂದು ತಿಳಿಸಿದ್ದಾರೆ. ಮಧ್ಯಾಹ್ನದ ವೇಳೆಗೆ ಆಗಮಿಸಲಿದ್ದಾರೆ. ನಾವುಗಳು ತಾಲ್ಲೂಕಿನ ಎಲ್ಲ ಶಾಲೆಗಳಿಗೆ ಭೇಟಿ ಕೊಟ್ಟು ಮತಯಾಚನೆಯನ್ನು ಮಾಡಲಿದ್ದೇವೆ. ಕ್ಷೇತ್ರದ ಎಲ್ಲ ಕಾಂಗ್ರೆಸ್ ನಾಯಕರುಗಳು ನಮ್ಮ ಜೊತೆಗಿದ್ದಾರೆ. ಹಿಂದೆ ಶ್ರೀನಿವಾಸ್ ರವರು ಆಗ್ನೇಯ ಪದವೀಧರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ದಿಸಿ ಎರಡನೆಯ ಸ್ಥಾನ ಪಡೆದಿದ್ದರು. ಈಗ ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಅವರ ಪರವಾಗಿ ಮತ ಯಾಚನೆ ಮಾಡುತಿದ್ದೇನೆ ಎಲ್ಲಾ ಶಿಕ್ಷಕರುಗಳು ಬೆಂಬಲಿಸುವಂತೆ ಮನವಿ ಮಾಡಿದರು. ಇನ್ನು ಎರಡು…
ಗೂಗಲ್ ತನ್ನ ಪ್ಲೇ ಸ್ಟೋರ್ ನಿಂದ 2,500 ಮೋಸದ ಸಾಲದ ಆ್ಯಪ್ ಗಳನ್ನು ತೆಗೆದು ಹಾಕಿದೆ. ಈ ಕ್ರಮಗಳನ್ನು ಏಪ್ರಿಲ್ 2021 ಮತ್ತು ಜುಲೈ 2022 ರ ನಡುವೆ ತೆಗೆದು ಕೊಳ್ಳಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. ಕೇಂದ್ರವು ಕಾಲಕಾಲಕ್ಕೆ ರಿಸರ್ವ್ ಬ್ಯಾಂಕ್ ಮತ್ತು ಇತರ ನಿಯಂತ್ರಣ ಸಂಸ್ಥೆಗಳೊಂದಿಗೆ ಚರ್ಚೆ ನಡೆಸುತ್ತಿದೆ ಎಂದು ಅವರು ಹೇಳಿದರು. ಕಾನೂನಿಗೆ ವಿರುದ್ಧವಾಗಿರುವ ಸಾಲದ ಆ್ಯಪ್ ಗಳ ವಿವರಗಳನ್ನು ರಿಸರ್ವ್ ಬ್ಯಾಂಕ್ ನೀಡಿದೆ ಎಂದು ಅವರು ಹೇಳಿದರು.
ನೂರರ ಗಡಿ ತಲುಪಿದ್ದ ಈರುಳ್ಳಿ ದರ ಭಾರಿ ಇಳಿಕೆ ಕಂಡಿದೆ. ತಿಂಗಳ ಹಿಂದೆ 80 ರೂ. ವರೆಗೆ ಇದ್ದ ಈರುಳ್ಳಿ ಬೆಲೆ ಈಗ 35 ರೂ.ಗೆ ಇಳಿಕೆಯಾಗಿದ್ದು, ಗ್ರಾಹಕರು ನಿಟ್ಟಿಸಿರುಬಿಟ್ಟಿದ್ದಾರೆ. ಆದರೆ, ಬೆಲೆ ಇಳಿಕೆಯಾಗಿರುವುದು ರೈತರಿಗೆ ಆತಂಕ ತಂದಿದೆ. ಈರುಳ್ಳಿಗೆ ಸರ್ಕಾರ ರಫ್ತು ನಿರ್ಬಂಧ ಹೇರಿದೆ. ಇದರ ನಡುವೆಯೇ ಮಾರುಕಟ್ಟೆಗೆ ಉತ್ತರ ಕರ್ನಾಟಕದ ಜಿಲ್ಲೆಗಳಿಂದ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ ಬರುತ್ತಿರುವ ಕಾರಣ ಬೆಲೆ ಕುಸಿತ ಆಗಿದೆ. ಶೀಘ್ರದಲ್ಲೇ ಹಿಂಗಾರು ಹಂಗಾಮಿನ ಬೆಳೆ ಕೂಡ ಮಾರುಕಟ್ಟೆಗೆ ಬರಲಿದೆ. ಹೀಗಾಗಿ, ಮತ್ತೆ ಬೆಲೆ ಏರಿಕೆಯಾಗುವ ಸಾಧ್ಯತೆ ತೀರಾ ಕಡಿಮೆ.