Subscribe to Updates
Get the latest creative news from FooBar about art, design and business.
- ಪ್ರಥಮ ಬಿ.ಸಿ.ಎ. ಪದವಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
- ಕುಣಿಗಲ್ ಪುರಸಭಾ ವ್ಯಾಪ್ತಿಯ ಸಾರ್ವಜನಿಕರಿಗೆ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
- ತುಮಕೂರು: ‘ಕರ್ನಾಟಕ ಪಬ್ಲಿಕ್ ಸ್ಕೂಲ್’ ಸಿನಿಮಾ ಮುಹೂರ್ತ ಸಮಾರಂಭ
- ತುಮಕೂರು: ಪಾದರಕ್ಷೆ ತಯಾರಿಕಾ ಸ್ಪರ್ಧೆಗೆ ಅರ್ಜಿ
- ಭೀಕರ ಅಪಘಾತ: ಶನಿಮಹಾತ್ಮ ದೇವಾಲಯ ವ್ಯವಸ್ಥಾಪಕ ಜಗನ್ನಾಥ್ ನಿಧನ
- ನೈರ್ಮಲ್ಯ ಕಾಪಾಡಿ, ಗರ್ಭಾಶಯದ ಕ್ಯಾನ್ಸರ್ ತಡೆಗಟ್ಟಿ: ಮಹಿಳೆಯರಿಗೆ ಕಾವೇರಿ ಎನ್. ಕರೆ
- ಪೌತಿ ಖಾತೆ, ಕಂದಾಯ ಗ್ರಾಮ ಹಕ್ಕುಪತ್ರ, ಪೋಡಿ ಮುಕ್ತ ಅಭಿಯಾನ: ರೈತರ ಅಲೆದಾಟ ತಪ್ಪಿಸಲು ಸರ್ಕಾರದ ಮಹತ್ವದ ಕ್ರಮ
- ತುಮಕೂರನ್ನು ಬೆಂಗಳೂರಿನ ಭಾಗವಾಗಿಸಿ: ಸಾಧನಾ ಸಮಾವೇಶದಲ್ಲಿ ಡಾ.ಜಿ.ಪರಮೇಶ್ವರ್ ಪ್ರಸ್ತಾಪ
Author: admin
ಸಾಮಾಜಿಕ ಅಸಮಾನತೆಯಿರುವ ಕಾಲಮಾನದಲ್ಲಿ ಕ್ರಿಶ್ಚಿಯನ್ ಸಮುದಾಯದ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದಲ್ಲಿನ ಸೇವೆ ಶ್ಲಾಘನೀಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಉಡುಪಿ ಹಾಗೂ ಮಂಗಳೂರಿನಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಈ ಸಮುದಾಯ ಒಳ್ಳೆಯ ಬುನಾದಿಯನ್ನು ಹಾಕಿದೆ. ಭಾರತೀಯ ಸಮಾಜದಲ್ಲಿ ಬಹುಸಂಖ್ಯಾತ ಜನ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದರು. ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ಕ್ರಿಶ್ಚಿಯನ್ ಸಮುದಾಯ ಅತ್ಯುತ್ತಮ ಕೆಲಸ ಮಾಡುತ್ತಿದೆ ಎಂದರು. ಬೆಂಗಳೂರಿನ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಲೀನಿಯರ್ ಆಕ್ಸರಲೇಟರ್ ರೆಡಿಯೇಷನ್ ಥೆರಪಿ ಸೇವೆಯನ್ನು ಆರಂಭಿಸಲಾಯಿತು. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಲೀನಿಯರ್ ಆಕ್ಸರಲೇಟರ್ ರೆಡಿಯೇಷನ್ ಥೆರಪಿ ಸೇವೆಯನ್ನು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಆರ್.ವಿ. ದೇಶಪಾಂಡೆ, ಬೈರತಿ ಸುರೇಶ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ತಿಪಟೂರು: ನಗರದ ಕಲ್ಪತರು ಕ್ರೀಡಾಂಗಣದಲ್ಲಿ ತಿಪಟೂರು ಸ್ಪೋರ್ಟ್ಸ್ ಕ್ಲಬ್ ಆಯೋಜನೆಯ ಕಣ್ಮನ ಸೆಳೆಯುವ ದೀಪಾಲಂಕಾರದಿಂದ, 25ಕ್ಕೂ ಹೆಚ್ಚು ರಾಜ್ಯಗಳು, ಸಾವಿರಕ್ಕೂ ಅಧಿಕ ಕ್ರೀಡಾಪಟುಗಳು ಆಗಮಿಸಿ ನಡೆಸಿಕೊಟ್ಟ 33 ನೇ ರಾಷ್ಟ್ರೀಯ ಸಬ್ ಜೂನಿಯರ್ ಖೋಖೋ ಪಂದ್ಯಾವಳಿಯಲ್ಲಿ ಬಾಲಕ ಬಾಲಕಿಯರ ವಿಭಾಗದಲ್ಲಿ ಮಹಾರಾಷ್ಟ್ರದ ಎರಡು ತಂಡಗಳು ಚಾಂಪಿಯನ್ ಗಳಾಗಿ ಹೊರಹೊಮ್ಮಿದವು. ಬಾಲಕಿಯರ ವಿಭಾಗದಲ್ಲಿ ಮಹಾರಾಷ್ಟ್ರ ತಂಡವು ಕರ್ನಾಟಕ ತಂಡವನ್ನು 16=14ಅಂಕಗಳೊಂದಿಗೆ ಮಣಿಸಿ ಪ್ರಥಮ ಸ್ಥಾನಗಳಿಸಿತು. ಕರ್ನಾಟಕ ದ್ವಿತೀಯ ಸ್ಥಾನ ಪಡೆದಿದ್ದು. ಕೊಲ್ಲಾಪುರ ತೃತೀಯ ಸ್ಥಾನ ರಾಜಸ್ಥಾನ ನಾಲ್ಕನೇ ಸ್ಥಾನಗಳಿಸಿತು. ಹತ್ತು ಸಾವಿರ ನಗದು,ಆಕರ್ಷಕ ಟ್ರೋಫಿಯನ್ನು ನೀಡಲಾಯಿತು. ಬಾಲಕರ ವಿಭಾಗದಲ್ಲಿ ಮಹಾರಾಷ್ಟ್ರ ತಂಡವು 34=20 ಕರ್ನಾಟಕ ತಂಡವನ್ನು ಮಣಿಸಿ. ಪ್ರಥಮ ಸ್ಥಾನ ಪಡೆಯಿತು. ದ್ವಿತೀಯ ಸ್ಥಾನ ಕರ್ನಾಟಕ, ತೃತೀಯ ಸ್ಥಾನವನ್ನು ತೆಲಂಗಾಣ ಪಡೆದು ನಾಲ್ಕನೇ ಸ್ಥಾನವನ್ನು ಡೆಲ್ಲಿ ಅಲಂಕರಿಸಿತು, ಪ್ರಥಮ ಸ್ಥಾನ ಪಡೆದ ತಂಡಕ್ಕೆ ಹತ್ತು ಸಾವಿರ ನಗದು ಬಹುಮಾನ ಆಕರ್ಷಕ ಟ್ರೋಫಿ ನೀಡಲಾಯಿತು. ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ಕ್ರೀಡಾಪಟುಗಳಿಗೆ ಟ್ರಾಲಿ…
ತುಮಕೂರು: ತುಮಕೂರು ನಗರದ ಗೆದ್ದಲಹಳ್ಳಿ ರಸ್ತೆಯಲ್ಲಿರುವ ಪರಿಶಿಷ್ಟ ಜಾತಿ,ಪರಿಶಿಷ್ಟ ವರ್ಗಗಳ ಮೆಟ್ರಿಕ್ ನಂತರದ ಅಪ್ರಾಪ್ತ ಬಾಲಕಿಯರ ಹಾಸ್ಟೆಲ್ ನಲ್ಲಿ ತಡರಾತ್ರಿ ದೀಪಾವಳಿ/ಮಕ್ಕಳ ದಿನಾಚರಣೆ ಆಚರಿಸುವ ನೆಪದಲ್ಲಿ, ಅಪ್ರಾಪ್ತ ಹೆಣ್ಣು ಮಕ್ಕಳೊಂದಿಗೆ ಕೈ ಕೈ ಹಿಡಿದು ಅಶ್ಲೀಲ ಸಿನಿಮಾ ಹಾಡುಗಳಿಗೆ ನೃತ್ಯ ಮಾಡಿದ್ದ ತುಮಕೂರಿನ ಹಿಂದಿನ ಜಿಲ್ಲಾಧಿಕಾರಿ ಶ್ರೀನಿವಾಸ್ ಕೆ, ತುಮಕೂರು ತಹಸಿಲ್ದಾರ್ ಸಿದ್ದೇಶ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಕೃಷ್ಣಪ್ಪ, ಸಹಾಯಕ ನಿರ್ದೇಶಕ ದಿನೇಶ್ ಹಾಗೂ ಇತರರ ವಿರುದ್ದ ಪೊಲೀಸ್ ಇಲಾಖೆಗೆ ನೈಜ ಹೋರಾಟಗಾರರ ವೇದಿಕೆ ದೂರು ನೀಡಿದ್ದು ಪೊಲೀಸ್ ಇಲಾಖೆಯು ಆರೋಪಿತರನ್ನು ರಕ್ಷಿಸುವ ಸಲುವಾಗಿ ಪ್ರಥಮ ವರ್ತಮಾನ ವರದಿ ದಾಖಲಿಸದೆ ಸದರಿ ಅಧಿಕಾರಿಗಳಿಗೆ ರಕ್ಷಣೆಗೆ ನಿಂತಿದೆ ಎಂದು ನೈಜ ಹೋರಾಟಗಾರರ ವೇದಿಕೆ ಆಕ್ರೋಶ ವ್ಯಕ್ತಪಡಿಸಿದೆ. ಅಧಿಕಾರಿಗಳ ಮೇಲೆ ದೂರು ನೀಡಿದ ಹೋರಾಟಗಾರರ ವಿರುದ್ದವೇ ಎಫ್.ಐ.ಆರ್ ದಾಖಲಿಸಿರುವುದು ಹೋರಾಟಗಾರರನ್ನು ಕುಗ್ಗಿಸುವ ಕೆಲಸವನ್ನು ಮಾಡುವಂತಾಗಿರುತ್ತದೆ. ಆದ್ದರಿಂದ, ನೈಜ ಹೋರಾಟಗಾರರ ವೇದಿಕೆಯು ದಿನಾಂಕ:15-12-2023 ರಂದು ತುಮಕೂರು ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿಯ ಸದಸ್ಯ…
ಹಾಸನ: ಜಮೀನು ಬಳಿ ಫಸಲಿಗೆ ನೀರು ಹಾಯಿಸುತ್ತಿದ್ದ ಹೊಳೆನರಸೀಪುರ ತಾಲ್ಲೋಕಿನ ಹಾರಗೌಡನಹಳ್ಳಿ ಗ್ರಾಮದ ರೈತರಾದ ರಾಜೇಗೌಡ (63) ಎಂಬುವವರ ಮೇಲೆ ಏಕಾಏಕಿ ಕಾಡುಹಂದಿ ದಾಳಿ ಮಾಡಿದೆ. ದಾಳಿ ಮಾಡಿದೆ ಪರಿಣಾಮ ರೈತ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ರೈತ ರಾಜೇಗೌಡರಿಗೆ ಸಹಾಯ ಮಾಡಲು ಹೋದ ಇಬ್ಬರು ಮಹಿಳೆಯರಿಗೂ ಕಾಡು ಹಂದಿ ಗಾಯ ಮಾಡಿದೆ. ಗಾಯಾಳುಗಳನ್ನು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಮಾಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ನಗರದ ಹಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ರೈತನ ಹತ್ಯೆ ಮಾಡಿದ ಕಾಡು ಹಂದಿ ವಿರುದ್ಧ ಸಿಟ್ಟಿಗೆದ್ದು ಸ್ಥಳೀಯ ರೈತರು ಕಾಡುಹಂದಿಯನ್ನು ಅಟ್ಟಾಡಿಸಿ ಹೊಡೆದು ಸಾಯಿಸಿದ್ದಾರೆ.. ಸುದ್ದಿ ತಿಳಿದ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವರದಿ: ಮಂಜು ಶ್ರವಣೂರು
ಬೆಂಗಳೂರು: ಹೆಂಡತಿ ಅಕ್ರಮ ಸಂಬಂಧ ಹೊಂದಿರುವುದಾಗಿ ಶಂಕಿಸಿ ಡೆತ್ ನೋಟ್ ಬರೆದಿಟ್ಟು ವ್ಯಕ್ತಿಯೊಬ್ಬ ರೈಲಿನಡಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ವರ್ಷ ಪತ್ನಿಯೊಂದಿಗೆ ವೈಮನಸ್ಸು ಮೂಡಿತ್ತು. ತನ್ನ ಪತ್ನಿ ಪರ ಪುರುಷನ ಜೊತೆ ಅಕ್ರಮ ಸಂಬಂಧ ಹೊಂದಿರುವ ಬಗ್ಗೆ ರಮೇಶ್ ಅನುಮಾನ ವ್ಯಕ್ತಪಡಿಸಿದ್ದರು. ಇದೇ ವಿಚಾರಕ್ಕಾಗಿ ಇಬ್ಬರ ನಡುವೆ ಗಲಾಟೆಯಾಗುತ್ತಿತ್ತು. ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರು ಕಂಟ್ರೋನೆಂಟ್ ರೈಲ್ವೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ತನ್ನ ಗರ್ಭದಲ್ಲಿ ಬೆಳೆಯುತ್ತಿದ್ದ ಭ್ರೂಣವನ್ನು ಹತ್ಯೆ ಮಾಡಿದ್ದಾನೆ ಎಂದು ಆರೋಪಿಸಿ ಯುವತಿ ತನ್ನ ಪ್ರಿಯಕರನ ವಿರುದ್ಧ ಬೆಂಗಳೂರು ಪೊಲೀಸರಿಗೆ ದೂರು ನೀಡಿದ್ದಾಳೆ. ಫೇಸ್ ಬುಕ್ ಮೂಲಕ ಹಾಸನ ಪೊಲೀಸರು ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತರು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಟ್ಯಾಗ್ ಮಾಡಿ ಯುವತಿ ದೂರು ನೀಡಿದ್ದಾಳೆ. ಬಾಲಕೃಷ್ಣ ಸುನೀಲ್ ಎಂಬಾತ ತನ್ನನ್ನು ಪ್ರೀತಿಸಿ, ನನ್ನನ್ನು ತಾಯಿಯನ್ನಾಗಿ ಮಾಡಿ ಭ್ರೂಣ ಹತ್ಯೆಯನ್ನೂ ಮಾಡಿಸಿದ್ದಾನೆ ಎಂದು ಆರೋಪಿಸಿದ್ದಾಳೆ.
ಬೆಳಗಾವಿ: ಗೀತೆಯ ಸಂದೇಶವನ್ನು ಸಮಸ್ತ ಜನತೆಗೆ ತಲುಪಿಸುತ್ತಿರುವ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಕಾರ್ಯ ಶ್ಲಾಘನೀಯ ಎಂದು ರಾಜ್ಯಸಭೆಯ ಮಾಜಿ ಸದಸ್ಯ, ಕೆಎಲ್ ಇ ಸಂಸ್ಥೆಯ ಕಾರ್ಯಾಧ್ಯಕ್ಷ ಹಾಗೂ ಭಗವದ್ಗೀತೆ ಅಭಿಯಾನ ಸಮಿತಿಯ ಗೌರವಾಧ್ಯಕ್ಷ ಡಾ. ಪ್ರಭಾಕರ ಕೋರೆ ಹೇಳಿದ್ದಾರೆ. ಸೋಮವಾರ ಇಲ್ಲಿಯ ಗುರುದೇವ ರಾನಡೆ ಮಂದಿರದಲ್ಲಿ, ಭಗವದ್ಗೀತೆ ಅಭಿಯಾನ ಸಮಿತಿ, ಜನಕಲ್ಯಾಣ ಟ್ರಸ್ಟ್ ಹಾಗೂ ಎಸಿಪಿಆರ್ ಸಹಯೋಗದಲ್ಲಿ ನಡೆದ ಗೀತಾ ಸಮನ್ವಯ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ನಿಸ್ವಾರ್ಥದಿಂದ ಮೂಲ ಧರ್ಮವನ್ನು ಎತ್ತಿ ಹಿಡಿಯುವ ಕೆಲಸ ಅತ್ಯಂತ ಸ್ತುತ್ಯಾರ್ಹ. ಬೆಳಗಾವಿಯಲ್ಲಿ ಭಗವದ್ಗೀತೆ ಅಭಿಯಾನ ನಡೆಸುತ್ತಿರುವುದು ಬಹಳ ದೊಡ್ಡ ಕೆಲಸ ಎಂದ ಕೋರೆ, ಡಿ.23ರಂದು ನಡೆಯಲಿರುವ ಮಹಾ ಸಮರ್ಪಣೆ ಕಾರ್ಯಕ್ರಮದಲ್ಲಿ ಬಹಳ ದೊಡ್ಡ ಸಂಖ್ಯೆಯಲ್ಲಿ ಜನತೆ ಭಾಗವಹಿಸಲಿದ್ದಾರೆ ಎಂದರು. ಸಾನ್ನಿಧ್ಯ ವಹಿಸಿದ್ದ ಸ್ವರ್ಣವಲ್ಲಿಯ ಶ್ರೀಮದ್ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ, ಭಗವದ್ಗೀತೆಯ ತತ್ವದ ಅಡಿಯಲ್ಲಿ ಎಲ್ಲ ಸಿದ್ಧಾಂತಗಳನ್ನು ಒಂದೇ ಕಡೆ ತರುವ ಪ್ರಯತ್ನದ ಭಾಗವಾಗಿ ಗೀತಾ ಸಮನ್ವಯ ನಡೆಸಲಾಗುತ್ತಿದೆ ಎಂದರು. ಎಲ್ಲದಕ್ಕೂ ಅದರದ್ದೇ ಆದ…
ಬೆಳಗಾವಿ: ತಾಲೂಕಿನ ಹೊಸವಂಟಮುರಿ ಗ್ರಾಮದಲ್ಲಿ ನಡೆದ ಘಟನೆ ಮತ್ತೆ ರಾಜ್ಯದಲ್ಲಿ ಇಂಥ ಪ್ರಕರಣಗಳು ಮರುಕಳಿಸಬಾರದು ಎಂದು ಜಾಗೃತ ಮಹಿಳಾ ಒಕ್ಕೂಟ ಹಾಗೂ ವಿವಿಧ ಸಂಘಟನೆಗಳು ಜಿಲ್ಲಾಧಿಕಾರಿಗಳ ಮುಖಾಂತರ ಜಿಲ್ಲಾ ಉಸ್ತುವಾರಿ ಮಂತ್ರಿಗಳಾದ ಸತೀಶ್ ಜಾರಕಿಹೊಳಿ ಹಾಗೂ ಮಹಿಳಾ ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಸಂಘಟನೆಯ ಸದಸ್ಯರ ಸುದ್ದಿಗಾರರೊಂದಿಗೆ ಮಾತನಾಡಿ, ಮಹಿಳೆಯರನ್ನು ಬೆತ್ತಲೆಗೊಳಿಸಿ ಮರಕ್ಕೆ ಕಟ್ಟಿ ಹಾಕಿ ಹೊಡೆಯುವ ದೌರ್ಜನ್ಯ ಎಸಗಿರುವ ಪ್ರಕರಣ ತುಂಬಾ ಖಂಡನೀಯವಾಗಿದೆ. ಇಂಥದೊಂದು ಪ್ರಕರಣ ಮಾನವ ಕುಲವೇ ತಲೆತಗ್ಗಿಸುವಂತೆ ಆಗಿದೆ. ಮಣಿಪುರದಲ್ಲಿ ನಡೆದಿರುವ ಘಟನೆ ಈ ದೇಶದಲ್ಲಿ ಚರ್ಚೆ ಗೀಡಾಗಿತ್ತು. ಅಂತಹದೇ ಘಟನೆ ಚರ್ಚೆ ಈಗ ಕರ್ನಾಟಕದಲ್ಲಿ ನಡೆದಿರುವುದು ದುರ್ದೈವದ ಸಂಗತಿ ಹೆಣ್ಣು ಅಂದರೆ ಭೋಗದ ವಸ್ತು ಅಲ್ಲ. ಆಟಿಕೆಯು ಅಲ್ಲ ಮನಬಂದಂತೆ ನಡೆಸಿಕೊಳ್ಳುವ, ಶಿಕ್ಷಿಸುವ ಪ್ರಾಣಿಯೂ ಅಲ್ಲ ಎಂಬ ಮನಸ್ಥಿತಿಯುಳ್ಳ ಸ್ವಸ್ಥ ಸಮಾಜವನ್ನು ಕಟ್ಟುವ ಜವಾಬ್ದಾರಿ ಈ ಬಗ್ಗೆ ಚಿಂತಿಸುವವರೆಲ್ಲರೂ ಮೇಲೆ ಇದೆ. ಮಹಿಳೆ ಮೇಲೆ ನಡೆಯುವ ಬಹುತೇಕ…
ಮಡಿಕೇರಿ: ರಾಜ್ಯದಲ್ಲಿ ಕೊರೊನಾ ರೂಪಾಂತರಿ ಬಗ್ಗೆ ಯಾರೂ ಕೂಡ ಆತಂಕ ಪಡಬೇಕಿಲ್ಲ. ಆದರೆ 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ ಮಾಡಲಾಗುತ್ತದೆ. ಇಂದಿನಿಂದಲೇ ರಾಜ್ಯ ಸರ್ಕಾರ ಆದೇಶ ಹೊರಡಿಸಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಮಾತಾನಾಡಿದ ಅವರು, ಮೊನ್ನೆ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಿದ್ದೇವೆ. ರವಿ ಅವರ ನೇತೃತ್ವದಲ್ಲಿ ನಿನ್ನೆಯೂ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಯಾವ ಕ್ರಮ ತೆಗೆದುಕೊಳ್ಳಬೇಕು ಚರ್ಚೆ ನಡೆಸಿದ್ದಾರೆ. ಅಲ್ಲದೇ ಕೇಂದ್ರ ಸರ್ಕಾರದ ಜೊತೆಗೂ ಚರ್ಚೆ ಮಾಡಿದ್ದಾರೆ. ಕೆಲವು ಸಲಹೆ ಮಾರ್ಗಸೂಚಿ ಪಡೆದಿದ್ದೇವೆ. 60 ವರ್ಷ ಮೇಲ್ಪಟ್ಟವರು ಮತ್ತು ಹೃದಯ, ಕಿಡ್ನಿ ಸಂಬಂಧಿತ ಇತರ ಕಾಯಿಲೆಗಳಿಂದ ಬಳಲುತ್ತಿರುವವರು ಹಾಗೂ ಜ್ವರ, ಕಫ, ಶೀತ ಇರುವಂತಹವರು ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳಬೇಕು ಎಂದು ಮನವಿ ಮಾಡಿದ್ದೇವೆ ಎಂದರು. ಈಗಾಗಲೇ ಆಸ್ಪತ್ರೆ ಹಾಗೂ ಆರೋಗ್ಯ ಕೇಂದ್ರಗಳಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ಸಜ್ಜು ಆಗುವಂತೆಯೂ ಸೂಚನೆ ನೀಡಲಾಗಿದೆ. ಹಾಗೆಯೇ ಗಡಿ ಜಿಲ್ಲೆಗಳಾದ ಕೊಡಗು, ಮಂಗಳೂರು, ಚಾಮರಾಜನಗರದ…
ಹುಬ್ಬಳ್ಳಿ: ನನ್ನ ತಂಟೆಗೆ ಬಂದವರಿಗೆ ತಕ್ಕ ಉತ್ತರ ಕೊಟ್ಟಿದ್ದೇನೆ. ಮುಂದೆಯೂ ಬಂದವರಿಗೆ ಸುಮ್ಮನೆ ಬಿಡಲ್ಲ ಅಂತ ವಿರೋಧಿಗಳಿಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಾರ್ನಿಂಗ್ ಮಾಡಿದ್ದಾರೆ. ನಗರದ ಸವಾಯಿಗಂಧರ್ವ ಹಾಲ್ ನಲ್ಲಿ ನಡೆದ ತಮ್ಮ 68ನೇ ಹುಟ್ಟು ಹಬ್ಬ ಕಾರ್ಯಕ್ರಮದಲ್ಲಿ ಮಾತನಾಡಿದ ಶೆಟ್ಟರ್, ಕಳೆದ ವರ್ಷವೂ ಇದೇ ವೇದಿಕೆಯಲ್ಲಿ ಇದೇ ಮಾತು ಹೇಳಿದ್ದರು. ಈಗ ಅದೇ ಮಾತು ಪುನರುಚ್ಚರಣೆ ಮಾಡಿದ್ದಾರೆ. ನನ್ನ ತಂಟೆಗೆ ಬಂದವರಿಗೆ ತಕ್ಕ ಉತ್ತರ ನೀಡಿದ್ದೇನೆ. ನಾನು ವಿಧಾನಸಭೆ ಚುನಾವಣೆಯಲ್ಲಿ ಸೋತಿರಬಹುದು. ಆದರೆ 6 ಬಾರಿ ನನ್ನನ್ನು ಜನ ಗೆಲ್ಲಿಸಿದ್ದನ್ನು ಮರೆಯಲ್ಲ ಎಂದಿದ್ದಾರೆ. ನಾನು ಸೋತರೂ ಉತ್ತರ ಕರ್ನಾಟಕದಲ್ಲಿ ಹೆಚ್ಚಿನ ಸೀಟು ಗೆಲ್ಲಿಸಿದ್ದೇನೆ. ನನ್ನ ಉಸಾಬರಿಗೆ ಬಂದವರಿಗೆ ತಕ್ಕ ಉತ್ತರ ಕೊಟ್ಟಿದ್ದೇನೆ. ಮುಂದೆಯೂ ನನ್ನ ಉಸಾಬರಿಗೆ ಬಂದವರಿಗೆ ಸುಮ್ಮನೆ ಬಿಡಲ್ಲ ಎಂದು ಶೆಟ್ಟರ್ ಎಚ್ಚರಿಕೆ ನೀಡಿದ್ದಾರೆ.