Author: admin

ಚಿಕ್ಕಬಳ್ಳಾಪುರ: ಹೆಂಡತಿ ಸಮಾಧಿಗೆ ಪೂಜೆ ಮಾಡಿ ಆಕೆಯ ಸಮಾಧಿ ಎದುರೇ ಗಂಡ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದ ಹೊರವಲಯದ ತೀಮಾಕಲಪಲ್ಲಿ ಸ್ಮಶಾನದಲ್ಲಿ ನಡೆದಿದೆ. ನಗರದ 16ನೇ ವಾರ್ಡ್ ನಿವಾಸಿ, ವೃತ್ತಿಯಲ್ಲಿ ಕಾರು ಚಾಲಕನಾಗಿದ್ದ ಗುರುಮೂರ್ತಿ ಅಲಿಯಾಸ್ ಲೆಗ್ ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ. ಕಳೆದ ವರ್ಷ ಡಿಸೆಂಬರ್ 20 ರಂದು ಪತ್ನಿ ಮೌನಿಕಾ, ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಗುರುಮೂರ್ತಿ ಕೂಡಾ ಹೆಂಡತಿ ಸಾವಿನ ನೋವಲ್ಲೇ ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಇಂದು ಬೆಳಗ್ಗೆ ವಾಕಿಂಗ್ ಹೋಗಿ ಬರುವುದಾಗಿ ಹೇಳಿ ಹೋಗಿರುವ ಗುರುಮೂರ್ತಿ, ಪತ್ನಿ ಸಮಾಧಿಗೆ ಪೂಜೆ ಸಲ್ಲಿಸಿ ತದನಂತರ ಅಲ್ಲೇ ಇದ್ದ ಮರಕ್ಕೆ ನೇಣಿಗೆ ಶರಣಾಗಿದ್ದಾರೆ. ಘಟನಾ ಸ್ಥಳಕ್ಕೆ ಬಾಗೇಪಲ್ಲಿ ಪೊಲೀಸರು ಭೇಟಿ ನೀಡಿ ಮೃತದೇಹವನ್ನು ಬಾಗೇಪಲ್ಲಿ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

Read More

ಹುಬ್ಬಳ್ಳಿ: ರಾಜ್ಯ ರಾಜಕಾರಣದಲ್ಲಿ ಅಚ್ಚರಿಯ ಬೆಳವಣಿಗೆ ನಡೆದಿದೆ. ಬಹುದಿನದ ಬಳಿಕ ಹಿಂದೂ ಫೈರ್‌ ಬ್ರ್ಯಾಂಡ್ ನಾಯಕರು ಒಟ್ಟಿಗೆ ಕಾಣಿಸಿಕೊಳ್ಳುವ ಮೂಲಕ ಅಚ್ಚರಿಯ ಜೊತೆಗೆ ತೀವ್ರ ಕುತೂಹಲ ಹುಟ್ಟಿಸಿದ್ದಾರೆ. ಸಂಸದ ಅನಂತ್ ಕುಮಾರ್ ಹೆಗ್ಡೆ  ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇಬ್ಬರೂ ಜೊತೆಗೂಡಿ ದೆಹಲಿಗೆ ಪಯಣ ಬೆಳೆಸಿದ್ದಾರೆ. ವಿಮಾನದಲ್ಲಿ ಇಬ್ಬರು ಹಿಂದೂ ಫೈರ್ ಬ್ರ್ಯಾಂಡ್ ‍ಗಳು ರಾಷ್ಟ್ರ ರಾಜಧಾನಿಗೆ ಹಾರಿದ್ದಾರೆ. ಈ ಇಬ್ಬರು ನಾಯಕರ ಜೊತೆಗೆ ಸಂಸದ ಸಂಗಣ್ಣ ಕರಡಿ ಕೂಡ ಅದೇ ವಿಮಾನದಲ್ಲಿ ದೆಹಲಿಗೆ ತೆರಳಿದ್ದಾರೆ. ಸದ್ಯ ಯತ್ನಾಳ್ ಹಾಗೂ ಅನಂತ್ ಕುಮಾರ್ ನಾಯಕರ ಭೇಟಿ ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಬಿ.ಎಸ್. ಯಡಿಯೂರಪ್ಪ‌ ಅವರ ಮಗ ಬಿ.ವೈ. ವಿಜಯೇಂದ್ರ  ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಿದ ಬಳಿಕ ಯತ್ನಾಳ್‍ಗೆ ಸ್ವಪಕ್ಷ ವಿರುದ್ಧ ಇದ್ದ ಕೋಪ ಮತ್ತಷ್ಟು ಹೆಚ್ಚಾಗಿದೆ. ಈ ಸಂಬಂಧ ಕೆಲ ದಿನಗಳ ಹಿಂದೆ ಸುವರ್ಣಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಅವರು, ದೆಹಲಿಗೆ ಹೋಗ್ತೀನಿ. ದೆಹಲಿಯಿಂದ ಕರೆ ಬರಬೇಕಿದೆ, ಬರುತ್ತೆ.…

Read More

ಬೆಳಗಾವಿ: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮನೆಯಲ್ಲಿದ್ದ 2 ಲಕ್ಷ ರೂ. ನಗದು ಹಾಗೂ ಚಿನ್ನದ ಆಭರಣಗಳು ಅಗ್ನಿಗೆ ಆಹುತಿಯಾದ ಘಟನೆ ಮೂಡಲಗಿಯ ಹುಣಶ್ಯಾಳ ಪಿವೈ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಗಂಗಪ್ಪ ಹಣಮಂತ ಕುರುಬರ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದೆ. ಕುಟುಂಬದ ಸದಸ್ಯರು ಹೊಲಕ್ಕೆ ತೆರಳಿದ್ದ ವೇಳೆ ಸಿಲಿಂಡರ್ ಆಕಸ್ಮಿಕವಾಗಿ ಸ್ಫೋಟಗೊಂಡಿದೆ. ಸ್ಫೋಟದಿಂದಾಗಿ ಮನೆ ಹೊತ್ತಿಉರಿದಿದ್ದು, ಮನೆಯಲ್ಲಿದ್ದ ವಸ್ತುಗಳು ಸೇರಿದಂತೆ 2 ಲಕ್ಷ ರೂ. ಹಣ ಸೇರಿದಂತೆ ಚಿನ್ನದ ಆಭರಣಗಳು ಸುಟ್ಟು ಕರಕಲಾಗಿದೆ. ಸಿಲಿಂಡರ್ ಸ್ಫೋಟಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ವೇಳೆ ಮನೆಯಲ್ಲಿ ಯಾರೂ ಇಲ್ಲದಿದ್ದರಿಂದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಕುಲಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ಬಾಗಲಕೋಟೆ: ಕ್ರೀಡಾ ಕಾರ್ಯಾಗಾರಗಳನ್ನು ಹಮ್ಮಿಕೊಳ್ಳುವುದರಿಂದ ಯುವಕರಲ್ಲಿ ಕ್ರೀಡಾಸಕ್ತಿ ಹೆಚ್ಚಿಸುವುದರ ಜೊತೆಗೆ ದೈಹಿಕ ಶಿಕ್ಷಕರಿಗೆ ಪುನಶ್ಚೇತನ ನೀಡಲು ಸಹಕಾರಿಯಾಗುತ್ತವೆ ಎಂದು ನಿವೃತ್ತ ಪ್ರಾಚಾರ್ಯ ಡಾ. ಗುರುದತ್ತ ಜಿ.ಕೋರಿ ಹೇಳಿದರು. ನಗರದ ಬಿವಿವಿ ಸಂಘದ, ಬಸವೇಶ್ವರ ದೈಹಿಕ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ರಾಜ್ಯ ಮಟ್ಟದ ಖೋ-ಖೋ ಕ್ರೀಡೆಯ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಕ್ರೀಡೆಯು ವ್ಯಕ್ತಿತ್ವ ವಿಕಸನಕ್ಕೆ ಒಂದು ರಹದಾರಿಯಾಗಿದ್ದು ಯುವಜನತೆ ಇತ್ತ ವಾಲುವಂತೆ ಮಾಡುವುದು ದೈಹಿಕ ಶಿಕ್ಷಕರ ಕೈಯಲ್ಲಿದೆ. ಅವರು ನಾಲ್ಕು ಗೋಡೆಗಳ ಮಧ್ಯೆ ಉಪಾನ್ಯಾಸದಲ್ಲಿ ಕಾಲ ಕಳೆಯದೆ ಆಟದ ಮೈದಾನದತ್ತ ಹೆಜ್ಜೆ ಹಾಕಿ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡುವಂತೆ ಪ್ರೋತ್ಸಾಹ ನೀಡಬೇಕು ಎಂದರು. ಬದಲಾಗುತ್ತಿರುವ ಜಗತ್ತಿನಲ್ಲಿ ಕ್ರೀಡಾ ಹವ್ಯಾಸವು ಬದಲಾಗುತ್ತಿದ್ದು ಹೊಸ ಅಭಿರುಚಿಗಳೊಂದಿಗೆ ಕ್ರೀಡಾಸಕ್ತಿ ಬೆಳೆಸಿಕೊಂಡರೆ ಮಾತ್ರ ಸಾಧನೆ ಸಾಧ್ಯ. ಇಂತಹ ಕ್ರೀಡಾ ಕಾರ್ಯಾಗಾರಗಳನ್ನು ಹಮ್ಮಿಕೊಳ್ಳುವುದರಿಂದ ಕ್ರೀಡೆಗಳ ಪರಿಚಯದ ಜೊತೆಗೆ ಜನರಲ್ಲಿ ಜಾಗೃತಿಯನ್ನು ಮೂಡಿಸಲು ಸಾಧ್ಯವಾಗುತ್ತದೆ. ಸರಕಾರವು ಕೂಡ ಇಂತಹ ಕಾರ್ಯಾಗಾರಗಳನ್ನು ಜಿಲ್ಲಾ ಮತ್ತು ರಾಜ್ಯಮಟ್ಟದಲ್ಲಿ ನಡೆಸಬೇಕು ಎಂದರು.  ರಾಜ್ಯ ಖೋ-ಖೋ ಅಮೇಚೂರ…

Read More

ಪುಣೆ: ಹೊಟೇಲ್ ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಮೊಟ್ಟೆ ಕದ್ದಿದ್ದಾರೆ ಎಂದು ಆರೋಪಿಸಿ ಆಕೆಯನ್ನು ವಿವಸ್ತ್ರಗೊಳಿಸಿದ ಘಟನೆ ನಡೆದಿದೆ. ಪುಣೆ ನಗರದ ಹೋಟೆಲ್ ಪಾರ್ಕ್ ಆರ್ನೇಟ್ನ ಅಡುಗೆಯವರು ಇದನ್ನು ಮಾಡಿದ್ದಾರೆ. ಆರೋಪಿಯ ಹೆಸರು ಮುಖೇಶ್ ಸಿಂಗ್ ಪುಂಡಿಲ್. ಆತನ ವಿರುದ್ಧ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಪುಣೆ ನಗರದ ಹೋಟೆಲ್ ಪಾರ್ಕ್ ಆರ್ನೇಟ್ ನ ಅಡುಗೆಯವರು ಮಾಡಿದ ಈ ಕೃತ್ಯಕ್ಕೆ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಪ್ರಕರಣದ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು ಯರವಾಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Read More

ಚಳಿಗಾಲದಲ್ಲಿ ತೂಕ ಇಳಿಸಲು ಈ ಟಿಪ್ಸ್ ಬಳಸಿ: ಶೀತಕಾಲದಲ್ಲಿ ಹೆಚ್ಚಿನ ಆಹಾರ ಸೇವನೆ ಮಾಡುತ್ತೇವೆ. ಅದರಲ್ಲೂ ಕರಿದ ತಿಂಡಿಗಳ ಸೇವನೆ ಬಯಕೆ ಹೆಚ್ಚಾಗುತ್ತದೆ. ಹಾಗಾಗಿ ಈ ಕೆಲ ಟಿಪ್ಸ್ ಫಾಲೋ ಮಾಡಿದ್ರೆ ತೂಕ ಇಳಿಕೆಗೆ ಸಹಾಯವಾಗುತ್ತದೆ. ವಾಕಿಂಗ್, ಜಾಗಿಂಗ್‌ಗೆ ಹೆಚ್ಚಿನ ಒತ್ತು ನೀಡಿ. ಹೊರ ಹೋಗಲು ಸಾಧ್ಯವಿಲ್ಲದಿದ್ದರೆ ಮನೆಯಲ್ಲಿಯೇ ವ್ಯಾಯಾಮ ಮಾಡಿ. ಸಕ್ಕರೆ, ಕೊಬ್ಬು, ಕರಿದ ಆಹಾರಗಳಿಂದ ದೂರವಿರಿ. ಸೊಪ್ಪು ತರಕಾರಿಗಳನ್ನು ಸೇವನೆ ಮಾಡಿ. ಇದರಿಂದ ತೂಕನಷ್ಟಕ್ಕೆ ಸಹಾಯವಾಗುತ್ತದೆ. ಬೆಳಿಗ್ಗೆ ರಾಗಿ ಅಂಬಲಿ ಕುಡಿಯುವುದರಿಂದ ಇದೆ ಇಷ್ಟೊಂದು ಲಾಭಗಳು..! ಬೆಳಗಿನ ಉಪಾಹಾರವಾಗಿ ರಾಗಿ ಅಂಬಲಿಯನ್ನು ಸೇವಿಸುವುದು ತುಂಬಾ ಪ್ರಯೋಜನಗಳಿವೆ. ರಾಗಿ ಅಂಬಲಿ ಕುಡಿದರೆ ದಿನವಿಡೀ ತುಂಬಾ ಉತ್ಸುಕರಾಗಿರುತ್ತೀರಿ. ಅದರಲ್ಲೂ ಬೆಳೆಯುವ ಮಕ್ಕಳಿಗೆ ಪ್ರತಿನಿತ್ಯ ರಾಗಿ ಅಂಬಲಿ ಕುಡಿಸಿದರೆ ಮೆದುಳು ಹೆಚ್ಚು ಕ್ರಿಯಾಶೀಲವಾಗುತ್ತದೆ. ದೇಹದ ಉಷ್ಣತೆಯಿಂದ ಬಳಲುತ್ತಿರುವವರಿಗೆ ರಾಗಿ ಅಂಬಲಿ ದಿವ್ಯೌವಷಧ ಎನ್ನುತ್ತಾರೆ ತಜ್ಞರು. ರಾಗಿ ಅಂಬಲಿಯಲ್ಲಿರುವ ಪ್ರೋಟೀನ್ ಗಳು ದೈಹಿಕ ಶಕ್ತಿಗೂ ಸಹಕಾರಿ. ಪ್ರತಿದಿನ ರಾಗಿ ಅಂಬಲಿಯನ್ನು ಆಹಾರದ ಭಾಗವಾಗಿ ಮಾಡಿಕೊಂಡರೆ…

Read More

ಪ್ರೋಟೀನ್ ಸಮೃದ್ಧವಾಗಿರುವ ಆಹಾರಗಳು: ಬಲವಾದ ರೋಗನಿರೋಧಕ ಶಕ್ತಿಗಾಗಿ ಪ್ರೋಟೀನ್ ಸಮೃದ್ಧವಾಗಿರುವ ಆಹಾರವನ್ನು ಸೇವಿಸಬೇಕು. ಮೊಟ್ಟೆಯ ಬಿಳಿಭಾಗದಲ್ಲಿರುವ ಪ್ರೋಟೀನ್ ‌ಗಳು ಸ್ನಾಯುವಿನ ಬಲವನ್ನು ಸುಧಾರಿಸುತ್ತದೆ. ದ್ವಿದಳ ಧಾನ್ಯಗಳಲ್ಲಿರುವ ಸಸ್ಯ-ಆಧಾರಿತ ಪ್ರೋಟೀನ್ ‌ಗಳು ಹೃದ್ರೋಗದ ಅಪಾಯವನ್ನು ಕಡಿಮೆ ಮಾಡುತ್ತದೆ. ಟೊಮೆಟೊದಲ್ಲಿ ಲೈಕೋಪೀನ್ ಮತ್ತು ವಿಟಮಿನ್-ಸಿ ಸಮೃದ್ಧವಾಗಿದೆ. ಇದು ಪ್ರಾಸ್ಟೇಟ್ ಕ್ಯಾನ್ಸರ್ ಅನ್ನು ತಡೆಯುತ್ತದೆ. ಮೀನಿನಲ್ಲಿರುವ ಪ್ರೊಟೀನ್ ಜೊತೆಗೆ ಕ್ಯಾಲ್ಸಿಯಂ, ಪೊಟ್ಯಾಶಿಯಂ, ಒಮೆಗಾ-3 ಕೊಬ್ಬಿನಾಮ್ಲಗಳು ನರಮಂಡಲದ ಕಾರ್ಯವನ್ನು ಸುಧಾರಿಸುತ್ತದೆ. ಊಟದ ನಂತರ ಸೋಡಾ, ಕೂಲ್ ಡ್ರಿಂಕ್ಸ್, ಜ್ಯೂಸ್ ಕುಡಿಯುತ್ತಿದ್ದೀರಾ?.. ಇವುಗಳನ್ನು ತಿಳಿದುಕೊಳ್ಳಿ.. ಅನೇಕ ಜನರು ಊಟದ ನಂತರ ಸೋಡಾ, ಕೂಲ್ ಡ್ರಿಂಕ್ಸ್ ಮತ್ತು ಜ್ಯೂಸ್ ಕುಡಿಯುತ್ತಾರೆ. ಇದರಿಂದ ಹೊಟ್ಟೆ ನಿರಾಳವಾಗಿದ್ದರೂ ನಂತರದಲ್ಲಿ ಕೆಲವು ಆರೋಗ್ಯ ಸಮಸ್ಯೆಗಳು ಎದುರಾಗುತ್ತವೆ ಎನ್ನುತ್ತಾರೆ ತಜ್ಞರು. ಊಟದ ನಂತರ ಸೋಡಾ ಕುಡಿಯುವುದರಿಂದ ಗ್ಯಾಸ್ ಹೆಚ್ಚಾಗುತ್ತದೆ. ಇದರಿಂದ ಹೊಟ್ಟೆನೋವು ಉಂಟಾಗುತ್ತದೆ. ಅಲ್ಲದೆ, ತಿಂದ ನಂತರ ಜ್ಯೂಸ್ ಕುಡಿದರೆ ಜೀರ್ಣಕ್ರಿಯೆ ಸಮಸ್ಯೆಗಳ ಜೊತೆಗೆ ತೂಕ ಹೆಚ್ಚಾಗುವ ಸಾಧ್ಯತೆ ಇದೆ. ಆದರೆ ತಿಂದ ಸ್ವಲ್ಪ ಸಮಯದ…

Read More

ದೊಡ್ಡಬಳ್ಳಾಪುರ ತಾಲ್ಲೂಕು ಘಾಟಿ ಸುಬ್ರಮಣ್ಯಸ್ವಾಮಿ ಕ್ಷೇತ್ರದಲ್ಲಿ ಇದೇ 25ರಿಂದ 10 ದಿನಗಳವರೆಗೆ ಅಂತರರಾಜ್ಯ ಮಟ್ಟದ ದನಗಳ ಜಾತ್ರೆ ನಡೆಯಲಿದೆ ಎಂದು ನವ ಕರ್ನಾಟಕ ಯುವ ಶಕ್ತಿ ವೇದಿಕೆ ತಿಳಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇದಿಕೆ ಅಧ್ಯಕ್ಷ ಅಂಬರೀಶ್, ‘ದನಗಳ ಜಾತ್ರೆಯಲ್ಲಿ ವಿವಿಧ ತಳಿಗಳ ಜಾನುವಾರು ಪ್ರದರ್ಶನ ಹಾಗೂ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ಜಾತ್ರೆಗೆ ಉಚಿತ ಪ್ರವೇಶವಿದ್ದು, 3 ಲಕ್ಷಕ್ಕೂ ಹೆಚ್ಚು ಜಾನುವಾರುಗಳು ಭಾಗವಹಿಸುವ ನಿರೀಕ್ಷೆ ಇದೆ’ ಎಂದು ಮಾಹಿತಿ ನೀಡಿದರು.

Read More

ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯಲ್ಲಿ ಅಳವಡಿಸಲಾಗಿರುವ ಬಾಗಿಲುಗಳಿಗೆ ಚಿನ್ನದ ಲೇಪನ ಮಾಡಲಾಗುವುದು ಎಂದು ರಾಮಮಂದಿರ ಟ್ರಸ್ಟ್ ಹೇಳಿದೆ. ಬಾಗಿಲು ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು, ಜನವರಿ ಮೊದಲ ವಾರದೊಳಗೆ ಚಿನ್ನದ ಲೇಪನ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೆಳಗಿನ ಪದರಕ್ಕೆ ತಾಮ್ರದ ಪದರವನ್ನು ಜೋಡಿಸಲಾಗಿದೆ ಮತ್ತು ಅದರ ಮೇಲೆ ಚಿನ್ನದ ಲೇಪಿತವಾಗಿದೆ. ದೇವಸ್ಥಾನಕ್ಕೆ ಭಕ್ತರು ನೀಡಿದ ಚಿನ್ನವನ್ನು ಬಾಗಿಲಿಗೆ ಬಳಸಲಾಗುತ್ತದೆ ಎಂದು ಟ್ರಸ್ಟ್ ಸದಸ್ಯ ಅನಿಲ್ ಮಿಶ್ರಾ ಹೇಳಿದರು.ಗಾಜಿಯಾಬಾದ್ ಮೂಲದ ಆಭರಣಕಾರರು ಚಿನ್ನದ ಫಲಕಗಳನ್ನು ಅಳವಡಿಸುವ ಜವಾಬ್ದಾರಿಯನ್ನು ಹೊಂದಿದ್ದಾರೆ. ಪ್ರತಿ ಬಾಗಿಲು 500 ಕೆಜಿ ತೂಕ, ಎಂಟೂವರೆ ಅಡಿ ಎತ್ತರ, 12 ಅಡಿ ಅಗಲ ಮತ್ತು ನಾಲ್ಕು ಇಂಚು ದಪ್ಪ. ಇದನ್ನು ಸುಮಾರು ಎಂಟು ಜನ ಮಾತ್ರ ಎತ್ತಬಹುದು. ಬಾಗಿಲುಗಳಲ್ಲಿ ಆನೆಗಳು, ಕಮಲಗಳು, ನವಿಲುಗಳು, ಮಹಿಳೆಯರು ಇತ್ಯಾದಿಗಳ ಸುಂದರವಾದ ಆಕೃತಿಗಳಿವೆ. ದೇಗುಲವು 46 ಬಾಗಿಲುಗಳನ್ನು ಹೊಂದಿದೆ. ನೆಲ ಅಂತಸ್ತಿನ 18 ಬಾಗಿಲುಗಳನ್ನು ಚಿನ್ನದಿಂದ ಮುಚ್ಚಲಾಗುತ್ತದೆ. ಮಹಾರಾಷ್ಟ್ರದ ಚಂದ್ರಾಪುರದಿಂದ ವಿಶೇಷವಾಗಿ ತರಲಾದ ತೇಗದ ಮರದಿಂದ…

Read More

ನಾಪತ್ತೆಯಾಗಿದ್ದ ದೇವಸ್ಥಾನದ ಅರ್ಚಕನ ಮೃತದೇಹ ಬಿಹಾರದಲ್ಲಿ ಪತ್ತೆ. ಕಣ್ಣುಗಳನ್ನು ಕಿತ್ತು ಜನನಾಂಗಗಳನ್ನು ಛಿದ್ರಗೊಳಿಸಲಾಗಿದೆ. ಘಟನೆ ಬಳಿಕ ಸ್ಥಳೀಯರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ. ಬಿಹಾರದ ಗೋಪಾಲಗಂಜ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಡಣಾಪುರ ಗ್ರಾಮದ ಶಿವ ದೇವಸ್ಥಾನದಲ್ಲಿ ಅರ್ಚಕರಾಗಿದ್ದ ಮನೋಜ್ ಕುಮಾರ್ ಕಳೆದ ಆರು ದಿನಗಳಿಂದ ನಾಪತ್ತೆಯಾಗಿದ್ದರು. ಪೊಲೀಸರ ಪ್ರಕಾರ, ಮನೋಜ್ ತನ್ನ ಮನೆಯಿಂದ ದೇವಸ್ಥಾನಕ್ಕೆ  ಹೋದಾಗ ನಾಪತ್ತೆಯಾಗಿದ್ದಾನೆ. ಪೊಲೀಸರು ತನಿಖೆ ಆರಂಭಿಸಿದರೂ ಪತ್ತೆಯಾಗಿರಲಿಲ್ಲ. ಅವರ ಸಹೋದರ ಅಶೋಕ್ ಕುಮಾರ್ ಶಾ ಬಿಜೆಪಿಯ ಮಾಜಿ ವಿಭಾಗದ ಅಧ್ಯಕ್ಷರಾಗಿದ್ದಾರೆ. ಶನಿವಾರ ಗ್ರಾಮದ ಪೊದೆಯಲ್ಲಿ ಮನೋಜ್ ಶವ ಪತ್ತೆಯಾಗಿತ್ತು. ದೇಹದ ಮೇಲೆ ಗುಂಡಿನ ಗಾಯಗಳಿವೆ. ನಂತರ ಮಾಹಿತಿ ತಿಳಿದ ಸ್ಥಳೀಯರು ಪೊಲೀಸರ ನಿರ್ಲಕ್ಷ್ಯಕ್ಕೆ ಕಾರಣ ಎಂದು ಆರೋಪಿಸಿ ಆಕ್ರೋಶ ವ್ಯಕ್ತಪಡಿಸಿದರು. ಘರ್ಷಣೆ ವೇಳೆ ಸ್ಥಳೀಯರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದು, ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಪೊಲೀಸ್ ವಾಹನಕ್ಕೆ ಬೆಂಕಿ ಹಚ್ಚಿದ್ದಾರೆ. ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿ…

Read More