Author: admin

ತುಮಕೂರು: ಲಾರಿ ಮತ್ತು ಸ್ಕೂಟರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ನಗರದ ಶಿರಾ ಗೇಟ್ ಬಳಿಯ ಎಸ್ ಮಾಲ್ ಬಳಿಯಲ್ಲಿ ನಡೆದಿದೆ. ತುಮಕೂರಿನ ಶಾಂತಿನಗರ ನಿವಾಸಿ ರಾಜಣ್ಣ(64) ಮೃತಪಟ್ಟ ದ್ವಿಚಕ್ರ ವಾಹನ ಸವಾರ ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನ ಲಾಲ್ ಬಾಗ್ ನಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಸೋಮವಾರ ಬೆಳಗ್ಗೆ  ಮಾರುಕಟ್ಟೆಗೆ ತೆರಳಿ ಮನೆಗೆ ವಾಪಸ್ ಆಗುತ್ತಿದ್ದ ನಡುವೆ ಅಪಘಾತ ಸಂಭವಿಸಿದೆ. ಅಪಘಾತದ ವೇಳೆ ರಸ್ತೆಗೆ ತಲೆ ಬಡಿದ ಪರಿಣಾಮ ತಲೆ ಛಿದ್ರಛಿದ್ರಗೊಂಡಿದೆ. ಘಟನಾ ಸ್ಥಳಕ್ಕೆ ತುಮಕೂರು ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Read More

ಸುಳ್ಳಿನ ಗ್ಯಾರಂಟಿಗಳ ಮೇಲೆ ಈ ಸರ್ಕಾರ ನಡೆಯುತ್ತಿದೆ. ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಜನ ತೊಳೆದು ಹಾಕಿದ್ದಾರೆ ಎಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದರು. ರಾಜ್ಯದ ಜನರಿಗೆ ಸರಿಯಾಗಿ ವಿದ್ಯುತ್ ಪೂರೈಕೆ ಮಾಡಲು ಆಗುತ್ತಿಲ್ಲ. ನಾವು ಒಂಭತ್ತೂವರೆ ಕೋಟಿ ಜನರಿಗೆ ಉಚಿತ ಗ್ಯಾಸ್ ಸಂಪರ್ಕ ನೀಡಿದ್ದೇವೆ. ಕಾಂಗ್ರೆಸ್ ನಾಯಕರು ಉಚಿತ ವಿದ್ಯುತ್ ಘೋಷಣೆ ಮಾಡಿದ್ದರು ಜೋಶಿ ವಾಗ್ದಾಳಿ ನಡೆಸಿದರು. ಸಂಸತ್ ಮೇಲಿನ ದಾಳಿಗೆ ನಿರುದ್ಯೋಗ ಸಮಸ್ಯೆ ಕಾರಣ ಎಂಬ ರಾಹುಲ್ ಗಾಂಧಿ ಹೇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ಅವರದ್ದು ಚೈಲೀಶ್ ಹೇಳಿಕೆ. ದೇಶದ ನಿರುದ್ಯೋಗ ಸಮಸ್ಯೆ ಕುರಿತು ಚರ್ಚೆ ಆಗಲಿ ಬೇಡ ಅನ್ನುವುದಿಲ್ಲ. ನಿರುದ್ಯೋಗ ಇದೆ ಅಂತ ಹೇಳಿ ಎಂಪಿಯನ್ನೇ ಕೊಲೆ ಮಾಡುತ್ತೇನೆ ಎಂದರೆ ಕರ್ನಾಟಕದಲ್ಲಿ ನಿರುದ್ಯೋಗ ಸಮಸ್ಯೆ ಇಲ್ಲವಾ ಎಂದರು. ಮೋದಿಯವರು ಪ್ರತಿ ಕ್ಯಾಬಿನೆಟ್ ನಲ್ಲಿ ನಿಮ್ಮ ವಿಭಾಗಕ್ಕೆ ಎಷ್ಟು ಹಣ…

Read More

ಕೆಂಪೇಗೌಡರ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಹಿನ್ನೆಲೆಯಲ್ಲಿ ನಟ ಚೇತನ್ ಅಹಿಂಸಾ ವಿರುದ್ಧ ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಟ ಚೇತನ್ ಫೇಸ್ ಬುಕ್ ನಲ್ಲಿ ಕೆಂಪೇಗೌಡರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿ ಅಗೌರವ ತೋರಿದ್ದಾರೆ ಎಂದು ವಕೀಲ ಆರ್.ಎಲ್. ಎನ್ ಮೂರ್ತಿ ದೂರು ನೀಡಿದ್ದಾರೆ. ಕೆಂಪೇಗೌಡ ಊಳಿಗಮಾನ್ಯ ಜಾತಿ ಲಾಬಿಗಳ ಪ್ರಭಾವದಿಂದಾಗಿ ಈಗ ಪ್ರಮುಖ ಕರ್ನಾಟಕದ ಐಕಾನ್ ಆಗಿರುವ ಅತ್ಯಲ್ಪ ಐತಿಹಾಸಿಕ ವ್ಯಕ್ತಿ ಎಂದು ಪೋಸ್ಟ್ ಮಾಡಿದ್ದರು.

Read More

ಗಾಜಾದಲ್ಲಿ ರೋಗಿಗಳನ್ನು ಜೀವಂತ ಸಮಾಧಿ ಮಾಡುವ ಮೂಲಕ ಇಸ್ರೇಲಿ ಪಡೆಗಳ ಕ್ರೂರತೆ. ಕಮಲ್ ಅಡ್ವಾನ್ ಆಸ್ಪತ್ರೆಯ ಮೇಲೆ ಇಸ್ರೇಲ್ ಸೇನಾ ದಾಳಿಯ ಬಗ್ಗೆ ಪ್ಯಾಲೆಸ್ತೀನ್ ಆರೋಗ್ಯ ಸಚಿವಾಲಯ ತುರ್ತು ತನಿಖೆಗೆ ಆದೇಶಿಸಿದೆ. ಉತ್ತರ ಗಾಜಾದ ಕಮಲ್ ಅಡ್ವಾನ್ ಆಸ್ಪತ್ರೆಯ ಮೇಲೆ ದಾಳಿ ನಡೆದಿದೆ. ಅಕ್ಟೋಬರ್ 7 ರಂದು ಇಸ್ರೇಲಿ ಮಿಲಿಟರಿ ಆಕ್ರಮಣವು ಪ್ರಾರಂಭವಾದಾಗಿನಿಂದ ಗಾಜಾದಲ್ಲಿ ಇನ್ನೂ ಕಾರ್ಯನಿರ್ವಹಿಸುತ್ತಿರುವ 11 ಆಸ್ಪತ್ರೆಗಳಲ್ಲಿ ಕಮಲ್ ಅಡ್ವಾನ್ ಕೂಡ ಒಂದಾಗಿದೆ. ಸ್ಥಳಾಂತರಗೊಂಡ ಪ್ಯಾಲೆಸ್ಟೀನಿಯನ್ನರ ವಸತಿ ಟೆಂಟ್‌ ಗಳು ಸಹ ಆಸ್ಪತ್ರೆಯ ಬಳಿ ಕಾರ್ಯ ನಿರ್ವಹಿಸುತ್ತಿವೆ. ಇಸ್ರೇಲಿ ಪಡೆಗಳು ಬುಲ್ಡೋಜರ್ ಬಳಸಿ ಇವುಗಳನ್ನು ಕೆಡವಿದವು. ರೋಗಿಗಳನ್ನು ಜೀವಂತವಾಗಿ ನೆಲದಲ್ಲಿ ಹೂಳಲು ಸೇನೆಯು ಬುಲ್ಡೋಜರ್‌ ಗಳನ್ನು ಬಳಸಿದೆ ಎಂದು ಅಲ್ ಜಜೀರಾ ವರದಿ ಮಾಡಿದೆ. ಕಮಲ್ ಅಡ್ವಾನ್ ಆಸ್ಪತ್ರೆಯ ಮುಂಭಾಗದ ಅವಶೇಷಗಳಡಿಯಲ್ಲಿ ರೋಗಿಗಳು ಜೀವಂತ ಸಮಾಧಿಯಾಗಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಈ ರೀತಿ ಸುಮಾರು 20 ಮಂದಿ ಸಾವನ್ನಪ್ಪಿದ್ದಾರೆ. ಸದ್ಯ ಆಸ್ಪತ್ರೆಯ ಇನ್ ಕ್ಯುಬೇಟರ್ ನಲ್ಲಿ 12…

Read More

ಸರ್ಕಾರದ ನಿಗಮ ಮಂಡಳಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ನೇಮಕಾತಿ ಪಟ್ಟಿಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರು ಪಕ್ಷದ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುಜೇವಾಲ ಅವರೊಂದಿಗೆ ಸಭೆ ನಡೆಸಲಿದ್ದಾರೆ. ಮೊದಲ ಕಂತಿನಲ್ಲಿ 25 ಶಾಸಕರು ಹಾಗೂ ನಾಲ್ವರು ವಿಧಾನ ಪರಿಷತ್ತಿನ ಸದಸ್ಯರಿಗೆ ಅಧಿಕಾರ ಭಾಗ್ಯ ಸಿಗುವ ಸಾಧ್ಯತೆಗಳಿವೆ. ನಿಗಮ, ಮಂಡಳಿಗಳಿಗೆ ಅಧ್ಯಕ್ಷರನ್ನಾಗಿ ನೇಮಿಸಬಹುದಾದ 25 ಶಾಸಕರು ಹಾಗೂ ನಾಲ್ವರು ವಿಧಾನ ಪರಿಷತ್ತಿನ ಸದಸ್ಯರ ಸಂಭವನೀಯ ಪಟ್ಟಿಯನ್ನು ಸಿದ್ಧಪಡಿಸಿ ಹೈಕಮಾಂಡ್‌ ಗೆ ಅನುಮೋದನೆಗೆ ಕಳುಹಿಸಿಕೊಟ್ಟಿದ್ದರು. ಈ ಸಂಬಂಧ ಮತ್ತೊಂದು ಸುತ್ತಿನ ಚರ್ಚೆ ನಡೆಯಲಿದೆ ಎನ್ನಲಾಗಿದೆ. ನೇಮಕ ವಿಳಂಬ ಹಿನ್ನೆಲೆಯಲ್ಲಿ ಶಾಸಕರಲ್ಲಿ ಅಸಮಾಧಾನ ಹೊಗೆಯಾಡುತ್ತಿರುವುದನ್ನು ಅರಿತ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್‌ ಹೈಕಮಾಂಡ್‌ ಜೊತೆ ಅಂತಿಮ ಸುತ್ತಿನ ಮಾತುಕತೆಗೆ ನಿರ್ಧರಿಸಿದ್ದು, ಮುಂದಿನ ವಾರ ದೆಹಲಿಗೆ ತೆರಳಲು ದಿನಾಂಕ ನಿಗದಿಪಡಿಸಿದ್ದಾರೆ ಎನ್ನಲಾಗಿದೆ.

Read More

ಹೊಸ ವರ್ಷದ ಹಿನ್ನೆಲೆಯಲ್ಲಿ ಮಾದಕ ಸರಬರಾಜು ದಂಧೆಯಲ್ಲಿ ತೊಡಗಿರುವವರ ಮೇಲೆ ನಿಗಾ ವಹಿಸುವಂತೆ ಸೂಚನೆ ನೀಡಲಾಗಿದೆ. ಮಾದಕ ಸರಬರಾಜು ದಂಧೆಯಲ್ಲಿ ತೊಡಗಿರುವವರ ಮೇಲೆ ವಿಶೇಷ ನಿಗಾ ವಹಿಸುವಂತೆ ಸಿಬ್ಬಂದಿಗೆ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಸೂಚನೆ ನೀಡಿದ್ದಾರೆ. ಪಾರ್ಟಿ ಪ್ರಿಯರ ನೆಚ್ಚಿನ ಸ್ಥಳಗಳಿಗೆ ಮಾದಕ ಪದಾರ್ಥಗಳು ಹೆಚ್ಚಾಗಿ ಸರಬರಾಜು ಆಗುವುದರಿಂದ ಆ ಸ್ಥಳಗಳಲ್ಲಿ ಹೆಚ್ಚಿನ ನಿಗಾ ವಹಿಸುವಂತೆ, ಇತ್ತೀಚಿಗೆ ಜೈಲಿನಿಂದ ಬಿಡುಗಡೆಯಾಗಿರುವ ಮಾದಕ ದಂಧೆಕೋರರ ಮೇಲೆ ಕಣ್ಣಿಡಲು ಸೂಚಿಸಲಾಗಿದೆ.

Read More

ರಾಜ್ಯ ಸರ್ಕಾರದಲ್ಲಿ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ ಎಂಬ ಪ್ರತಿಪಕ್ಷಗಳ ಆರೋಪಕ್ಕೆ  ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಈ ಹಿಂದೆ ಇದ್ದ ಬಿಜೆಪಿ ಸರ್ಕಾರದ ಪೂರ್ಣ ಅವಧಿಯಲ್ಲಿ ಅಭಿವೃದ್ಧಿಗೆ ಖರ್ಚು ಮಾಡಿದ್ದ ಒಟ್ಟು 70,814 ಕೋಟಿ. ನಮ್ಮ ಸರ್ಕಾರ ಮೇ 20 ರಂದು  ಅಧಿಕಾರಕ್ಕೆ ಬಂತು. ಜುಲೈನಲ್ಲಿ ಬಜೆಟ್ ಮಂಡನೆಯಾಯಿತು. ಆಗಸ್ಟ್ ನಲ್ಲಿ ಅನುದಾನ ಬಿಡುಗಡೆಯಾಗಿದೆ. ಕೇವಲ 6 ತಿಂಗಳಲ್ಲಿ ನಮ್ಮ ಸರ್ಕಾರ 73,928 ಕೋಟಿ ಅಭಿವೃದ್ಧಿಗೆ ಖರ್ಚು ಮಾಡಲಾಗಿದೆ. ಅಲ್ಲಿಗೆ ಯಾರು ಹೆಚ್ಚು ಅನುದಾನ ಕೊಟ್ಟಿದ್ದಾರೆ ಹೇಳಿ?  ಎಂದು ಸಿಎಂ ಪ್ರಶ್ನಿಸಿದ್ದಾರೆ. ಸುಮ್ಮನೆ ಆರೋಪ ಮಾಡೋದಲ್ಲ. ನಮ್ಮ ಸರ್ಕಾರದಲ್ಲಿ ಅಭಿವೃದ್ಧಿ ಕೆಲಸಕ್ಕೆ ಸಾಕಷ್ಟು ಅನುದಾನ ಕೊಡುತ್ತಿದ್ದೇವೆ‌. ಇಲ್ಲ ಸಲ್ಲದ ಆರೋಪ ಮಾಡೋದು ಸರಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದಾರೆ. ಈಗಾಗಲೇ ಸರ್ಕಾರ ಪಂಚ ಗ್ಯಾರಂಟಿಗಳಲ್ಲಿ 4 ಗ್ಯಾರಂಟಿಗಳನ್ನ ಜಾರಿ ಮಾಡಿ ಉಳಿದ ಒಂದು ಯುವನಿಧಿ ಯೋಜನೆ ಮುಂದಿನ ಜನವರಿಯಲ್ಲಿ ಜಾರಿಯಾಗಲಿದೆ. ನಾವು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ ಎಂದು…

Read More

ಇಸ್ರೇಲ್ ಸೇನೆಯು ಗಾಜಾದಲ್ಲಿ ಹಮಾಸ್‌ ನ ಅತಿದೊಡ್ಡ ಸುರಂಗವನ್ನು ಕಂಡು ಹಿಡಿದಿದೆ ಎಂದು ಹೇಳಿಕೊಂಡಿದೆ. ಸೇನೆಯು ಸುರಂಗದ ಚಿತ್ರಗಳನ್ನೂ ಬಿಡುಗಡೆ ಮಾಡಿದೆ. ಈ ಸುರಂಗವು ಲಕ್ಷಾಂತರ ಡಾಲರ್ ‌ಗಳನ್ನು ವೆಚ್ಚ ಮಾಡಿತ್ತು ಮತ್ತು ನಿರ್ಮಿಸಲು ವರ್ಷಗಳನ್ನು ತೆಗೆದುಕೊಂಡಿತ್ತು ಎಂದು ಮಿಲಿಟರಿ ಹೇಳುತ್ತದೆ. ಕದನ ವಿರಾಮಕ್ಕಾಗಿ ಅಂತರಾಷ್ಟ್ರೀಯ ಒತ್ತಡದ ನಡುವೆಯೂ ಹೋರಾಟ ಮುಂದುವರಿದಂತೆ ಇಸ್ರೇಲ್ ಹೊಸ ಸುರಂಗವನ್ನು ಕಂಡು ಹಿಡಿದಿದೆ. ಗಾಜಾದಲ್ಲಿನ ಸುರಂಗವು ಇಲ್ಲಿಯವರೆಗೆ ಹಮಾಸ್‌ ಗೆ ಸೇರಿದ ಅತಿದೊಡ್ಡ ಸುರಂಗವಾಗಿದೆ. ಇದು ಎರೆಸ್ ಗಡಿಯ ಸಮೀಪದಲ್ಲಿದೆ. ಈ ಸುರಂಗವು ಸಣ್ಣ ವಾಹನಗಳಿಗೆ ಸಾಕಷ್ಟು ದೊಡ್ಡದಾಗಿದೆ. ಸುರಂಗವು ಹಳಿಗಳು, ವಿದ್ಯುತ್ ಮತ್ತು ಒಳಚರಂಡಿಯನ್ನು ಒಳಗೊಂಡಿದೆ. ನಾಲ್ಕು ಕಿಲೋಮೀಟರ್‌ ಗಿಂತಲೂ ಹೆಚ್ಚು ವಿಸ್ತಾರವಾಗಿರುವ ಸುರಂಗದ ಪ್ರವೇಶದ್ವಾರವು ಎರೆಸ್ ಕ್ರಾಸ್‌ ನಿಂದ ಕೇವಲ 400 ಮೀಟರ್ ದೂರದಲ್ಲಿದೆ. ಸುರಂಗ ವ್ಯವಸ್ಥೆಯು ಹಮಾಸ್ ನಾಯಕ ಯಾಹ್ಯಾ ಸಿನ್ವಾರ್ ಅವರ ಸಹೋದರ ಮತ್ತು ಹಮಾಸ್‌ ನ ಖಾನ್ ಯೂನಿಸ್ ಬೆಟಾಲಿಯನ್ ಕಮಾಂಡರ್ ಮೊಹಮ್ಮದ್ ಸಿನ್ವಾರ್ ನೇತೃತ್ವದ ಯೋಜನೆಯಾಗಿದೆ ಎಂದು…

Read More

ತಮಿಳುನಾಡಿನ ದಕ್ಷಿಣ ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರಿದಿದೆ. ಕನ್ಯಾಕುಮಾರಿ, ತಿರುನಲ್ವೇಲಿ, ತೆಂಕಶಿ ಮತ್ತು ತೂತುಕುಡಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಳಗ್ಗೆ ಎಂಟೂವರೆವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ನಾಲ್ಕು ಜಿಲ್ಲೆಗಳ ಎಲ್ಲಾ ಶಿಕ್ಷಣ ಸಂಸ್ಥೆಗಳು ಮತ್ತು ರಾಮನಾಥಪುರಂ, ವಿರುದುನಗರ ಮತ್ತು ಥೇಣಿ ಜಿಲ್ಲೆಗಳ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ. ನಾಗಪಟ್ಟಣಂ, ತಿರುವರೂರು, ತಂಜಾವೂರು, ಪುತ್ತುಕೋಟ, ರಾಮನಾಥಪುರಂ, ವಿರುಧುನಗರ ಮತ್ತು ಶಿವಗಂಗಾ ಜಿಲ್ಲೆಗಳಲ್ಲೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ತಿರುನಲ್ವೇಲಿ ನಗರದ ವಿವಿಧೆಡೆ ನೀರಿನ ಹೊಂಡಗಳು ನಿರ್ಮಾಣವಾಗಿವೆ. ತಾಮರಭರಣಿ, ಪಾಪನಾಶಂ ನದಿಗಳು ಉಕ್ಕಿ ಹರಿಯುತ್ತಿವೆ. ಅಣೆಕಟ್ಟೆಗಳಲ್ಲಿ ಹರಿವು ಹೆಚ್ಚಾದ ಕಾರಣ ನೀರು ಬಿಡಲಾಗುತ್ತಿದೆ. ನದಿ ದಡದಲ್ಲಿರುವ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ ನೀಡಲಾಗಿದೆ. ತೂತುಕುಡಿ, ತೆಂಕಶಿ, ಕನ್ಯಾಕುಮಾರಿ ಜಿಲ್ಲೆಗಳಲ್ಲೂ ಇದೇ ಸ್ಥಿತಿ ಇದೆ. ಶಾಲೆಗಳು ಮತ್ತು ಮದುವೆ ಮಂಟಪಗಳಲ್ಲಿ ಪರಿಹಾರ ಶಿಬಿರಗಳನ್ನು ತೆರೆಯಲಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸಿಬ್ಬಂದಿ ಸೇವೆಗಾಗಿ ಎಲ್ಲಾ ನಾಲ್ಕು ಜಿಲ್ಲೆಗಳಿಗೆ ತಲುಪಿದ್ದಾರೆ.

Read More

ಛತ್ತೀಸ್ ‌ಗಢದ ಎಡಪಂಥೀಯ ಉಗ್ರಗಾಮಿ ಪೀಡಿತ ಸುಕ್ಮಾ ಜಿಲ್ಲೆಯಲ್ಲಿ ಎನ್‌ ಕೌಂಟರ್. ನಕ್ಸಲರೊಂದಿಗಿನ ಎನ್‌ ಕೌಂಟರ್ ‌ನಲ್ಲಿ ಸಿಆರ್‌ ಪಿಎಫ್ ಅಧಿಕಾರಿಯೊಬ್ಬರು ಹುತಾತ್ಮರಾಗಿದ್ದರು. ಒಬ್ಬ ಕಾನ್‌ ಸ್ಟೆಬಲ್ ಗಾಯಗೊಂಡಿದ್ದಾರೆ. ನಾಲ್ವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಜಾಗರಗುಂದ ಪ್ರದೇಶದಲ್ಲಿ ಬೆಳಗ್ಗೆ ಈ ಘಟನೆ ನಡೆದಿದೆ. ಸಿಆರ್‌ ಪಿಎಫ್‌ ನ 165ನೇ ಬೆಟಾಲಿಯನ್ ನ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಗಾಗಿ ಬೇದ್ರೆ ಶಿಬಿರದಿಂದ ಉರ್ಸಂಕಲ್ ಗ್ರಾಮಕ್ಕೆ ತೆರಳಿತ್ತು. ಈ ಪ್ರದೇಶದಲ್ಲಿ ಶೋಧ ನಡೆಸುತ್ತಿದ್ದ ವೇಳೆ ಸಿಆರ್‌ ಪಿಎಫ್ ತಂಡ ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ. ಗುಂಡಿನ ದಾಳಿಯಲ್ಲಿ ಸಬ್ ಇನ್ಸ್ ಪೆಕ್ಟರ್ ಸುಧಾಕರ್ ರೆಡ್ಡಿ ಹುತಾತ್ಮರಾಗಿದ್ದು, ಕಾನ್ ಸ್ಟೇಬಲ್ ರಾಮು ಗಾಯಗೊಂಡಿದ್ದಾರೆ. ಪ್ರಾಥಮಿಕ ಚಿಕಿತ್ಸೆಗಾಗಿ ರಾಮು ಅವರನ್ನು ಹೆಲಿಕಾಪ್ಟರ್ ಮೂಲಕ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯಲ್ಲಿ ನಾಲ್ವರು ಆರೋಪಿಗಳನ್ನು ಸಮೀಪದ ಪ್ರದೇಶದಿಂದ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಿಆರ್‌ ಪಿಎಫ್ ನ ಕೋಬ್ರಾ ಘಟಕ ಮತ್ತು ಸ್ಥಳೀಯ ಪೊಲೀಸರು ಈ ಪ್ರದೇಶದಲ್ಲಿ ಜಂಟಿ ಶೋಧ…

Read More