Subscribe to Updates
Get the latest creative news from FooBar about art, design and business.
- ಇ–ಪೌತಿ ಖಾತಾ ಆಂದೋಲನ–2 : ರೈತರಿಂದ ಅರ್ಜಿಗಳ ಸ್ವೀಕಾರ — ಬಾಕಿ ಆರ್ ಆರ್ ಟಿ ಅರ್ಜಿಗಳ ಶೀಘ್ರ ವಿಲೇವಾರಿಗೆ ಸೂಚನೆ
- ನೀಟ್ ಮರು ಪರೀಕ್ಷೆ ; ಕಟ್ಟುನಿಟ್ಟಿನ ಸಿದ್ಧತೆಗೆ ಎಡಿಸಿ ಸೂಚನೆ
- ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹ
- ಜೂನ್ 19ರಂದು ತುಮಕೂರಿನಲ್ಲಿ ಪ್ರಧಾನ ಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ
- ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
- ಜು.18: ನ್ಯಾಯಾಲಯಗಳಲ್ಲಿ ವಿಶೇಷ ಲೋಕ ಅದಾಲತ್: ವಿವಿಧ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಸಹಕಾರಿ
- ಕೊರಟಗೆರೆ: ಆಟೋ ಡಿಕ್ಕಿಯಾಗಿ ಯುವಕ ಸಾವು
- ಸಮಾಜ ಕಲ್ಯಾಣ ಇಲಾಖೆ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಆರಂಭ
Author: admin
ನಂಜನಗೂಡು: ಭಾರತದ ಅಸ್ತಿತ್ವವಿರುವುದು ಆಧ್ಯಾತ್ಮಿಕತೆಯಲ್ಲಿ. ಆಧ್ಯಾತ್ಮಿಕತೆ ಇಲ್ಲದೆ ಭಾರತವಿಲ್ಲ. ಆದ್ದರಿಂದ ದೇಶದಲ್ಲಿ ಕಾವಿ ಬಟ್ಟೆ ಉಳಿದರೆ ಮಾತ್ರ ದೇಶ ಉಳಿಯಲು ಸಾಧ್ಯ ಎಂದು ಕೇಂದ್ರ ಕಾರ್ಮಿಕ ಮತ್ತು ಸಣ್ಣ ಉದ್ದಿಮೆಗಳ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅಭಿಪ್ರಾಯಪಟ್ಟಿದ್ದಾರೆ. ಶ್ರೀ ಕ್ಷೇತ್ರ ಸುತ್ತೂರಿನಲ್ಲಿ ನಡೆಯುತ್ತಿರುವ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ಭಜನಾ ಮೇಳ ಹಾಗೂ ದೇಶಿ ಆಟಗಳ ಸ್ಪರ್ಧೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಆಧ್ಯಾತ್ಮಿಕತೆಯೇ ಭಾರತದ ಅಡಿಪಾಯ: ನಮ್ಮ ಸಂಸ್ಕೃತಿ, ಧರ್ಮ, ಆಚಾರ ಮತ್ತು ವಿಚಾರಗಳು ನಮ್ಮ ದೇವಾಲಯಗಳಲ್ಲಿವೆ. ದೇಶದಲ್ಲಿ ಶಾಂತಿ ನೆಲೆಸಲು ಆಧ್ಯಾತ್ಮಿಕತೆಯಿಂದ ಮಾತ್ರ ಸಾಧ್ಯ ಎಂದು ಸಚಿವರು ಪ್ರತಿಪಾದಿಸಿದರು. ಮಠಗಳ ಕೊಡುಗೆ: ದೇಶದಲ್ಲಿ ಸಂಸ್ಕಾರ ಬೆಳೆಸುವಲ್ಲಿ ಮಠಮಾನ್ಯಗಳು ದೊಡ್ಡ ಪಾತ್ರ ವಹಿಸುತ್ತಿವೆ. ಪುಸ್ತಕದ ಶಿಕ್ಷಣದ ಜೊತೆಗೆ ಮೌಲ್ಯಯುತ ಶಿಕ್ಷಣವನ್ನು ನೀಡುವ ಮೂಲಕ ಮಠಗಳು ಸಮಾಜವನ್ನು ಮುನ್ನಡೆಸುತ್ತಿವೆ ಎಂದು ಅವರು ಶ್ಲಾಘಿಸಿದರು. ಮುಂದಿನ ಪೀಳಿಗೆಗೆ ಸಂಸ್ಕೃತಿ: ನಮ್ಮ ಪೂರ್ವಜರು ಹಾಕಿಕೊಟ್ಟ…
ನವದೆಹಲಿ: ಅಸ್ಸಾಂ ರಾಜ್ಯದ ಜನತೆ ಬದಲಾವಣೆ ಬಯಸುತ್ತಿದ್ದು, ಮುಂಬರುವ ಚುನಾವಣೆಯಲ್ಲಿ ಅಲ್ಲಿ ಕಾಂಗ್ರೆಸ್ ಪಕ್ಷ ಖಂಡಿತವಾಗಿ ಅಧಿಕಾರಕ್ಕೆ ಬರಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ನಡೆದ ಅಸ್ಸಾಂ ವಿಧಾನಸಭೆ ಚುನಾವಣೆ ಕುರಿತ ಮಹತ್ವದ ಸಭೆಯ ನಂತರ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. ಬದಲಾವಣೆಯ ಅಲೆ: ಅಸ್ಸಾಂನಲ್ಲಿ ಪ್ರಸ್ತುತ ಕಾಂಗ್ರೆಸ್ ಪರವಾದ ಅಲೆಯಿದೆ. ಅಲ್ಲಿನ ಜನರ ಅಭಿಲಾಷೆಯೂ ಬದಲಾವಣೆಯಾಗಿದ್ದು, ನಾವು ಒಗ್ಗಟ್ಟಾಗಿ ಕೆಲಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರುತ್ತೇವೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು. ಚುನಾವಣಾ ಅನುಭವ: ನಮಗೆ ಚುನಾವಣೆಗಳನ್ನು ನಿರ್ವಹಿಸಿದ ದಶಕಗಳ ಅನುಭವವಿದೆ. ಅಸ್ಸಾಂನಲ್ಲಿ ನಮ್ಮ ಕಾರ್ಯಕ್ರಮಗಳ ಬಗ್ಗೆ ಜನರಿಗೆ ಸ್ಪಷ್ಟ ಸಂದೇಶ ನೀಡುತ್ತೇವೆ. ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರ ನಾಯಕತ್ವದಲ್ಲಿ ಪಕ್ಷ ಮುನ್ನಡೆಯಲಿದೆ ಎಂದರು. ಯುವ ನಾಯಕತ್ವ: ಅಸ್ಸಾಂನಲ್ಲಿ ಪಕ್ಷದ ಜವಾಬ್ದಾರಿ ಹೊತ್ತಿರುವವರು ಯುವಕರಾಗಿದ್ದು, ಹಿರಿಯ ನಾಯಕರ ಬೆಂಬಲ ಅವರಿಗಿದೆ. ಒಗ್ಗಟ್ಟಿನಿಂದ ಹೋರಾಡುವುದೇ ನಮ್ಮ ಮುಖ್ಯ ಮಂತ್ರ…
ತುಮಕೂರು: ರಾಜ್ಯದ 2026–27ನೇ ಸಾಲಿನ ಆಯವ್ಯಯ ಮಂಡನೆಗೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿಯ ಬಜೆಟ್ ನಲ್ಲಿ ಹಣಕಾಸು ಹಂಚಿಕೆ ಅತ್ಯಂತ ಕಟ್ಟುನಿಟ್ಟಿನಿಂದ ಕೂಡಿರಲಿದೆ ಎಂಬ ಸುಳಿವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದಾರೆ. ಶುಕ್ರವಾರ ತುಮಕೂರಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಏಳು ದಿನಗಳ ರಾಜ್ಯಮಟ್ಟದ ‘ಕರ್ನಾಟಕ ಕ್ರೀಡಾಕೂಟ 2025–26’ ಅನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಅನುದಾನಕ್ಕೆ ಮಿತಿ: ಕಾರ್ಯಕ್ರಮದಲ್ಲಿ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ್ ಅವರು, ಜಿಲ್ಲೆಯಲ್ಲಿ ಹಾಕಿ ಕ್ರೀಡಾಂಗಣ ಮತ್ತು ಅಂತರರಾಷ್ಟ್ರೀಯ ಗುಣಮಟ್ಟದ ಈಜುಕೊಳ ನಿರ್ಮಾಣಕ್ಕಾಗಿ 25 ಕೋಟಿ ರೂ. ಅನುದಾನ ನೀಡುವಂತೆ ಸಿಎಂಗೆ ಮನವಿ ಮಾಡಿದರು. ಇದಕ್ಕೆ ತಕ್ಷಣವೇ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, “ಅಷ್ಟು ದೊಡ್ಡ ಮೊತ್ತವನ್ನು ನೀಡಲು ಸದ್ಯಕ್ಕೆ ಸಾಧ್ಯವಿಲ್ಲ. ಆದರೆ ಮಂಗಳೂರಿಗೆ ನೀಡಿದ ಮಾದರಿಯಲ್ಲಿ 6 ಕೋಟಿ ರೂ.ಗಳನ್ನು ಮಂಜೂರು ಮಾಡುತ್ತೇನೆ” ಎಂದು ತಿಳಿಸುವ ಮೂಲಕ ಸಂಪನ್ಮೂಲಗಳ ಹಂಚಿಕೆಯಲ್ಲಿ ಇತಿಮಿತಿ ಇರುವುದನ್ನು ಸ್ಪಷ್ಟಪಡಿಸಿದರು. ಕ್ರೀಡಾಪಟುಗಳಿಗೆ ಉತ್ತೇಜನ: ಬಜೆಟ್ ವಿಷಯದ ಜೊತೆಗೆ ಕ್ರೀಡಾಪಟುಗಳಿಗಾಗಿ ಸರ್ಕಾರ ಜಾರಿಗೆ ತಂದಿರುವ ಸೌಲಭ್ಯಗಳ…
ಬೆಂಗಳೂರು: ಸಿಲಿಕಾನ್ ಸಿಟಿಯ ರಸ್ತೆ ಗುಂಡಿಗಳ ಸಮಸ್ಯೆ ಮತ್ತೆ ಮುನ್ನೆಲೆಗೆ ಬಂದಿದೆ. ಪಣತ್ತೂರು–ದಿಣ್ಣೆ ರಸ್ತೆಯಲ್ಲಿರುವ ಬೃಹತ್ ಗುಂಡಿಯೊಂದು ಸಾಫ್ಟ್ವೇರ್ ಇಂಜಿನಿಯರ್ ಒಬ್ಬರ ಜೀವನವನ್ನೇ ಅಸ್ತವ್ಯಸ್ತಗೊಳಿಸಿದೆ. ಘಟನೆಯ ವಿವರ: ಹೊರ ವರ್ತುಲ ರಸ್ತೆಯ ಬಹುರಾಷ್ಟ್ರೀಯ ಐಟಿ ಕಂಪನಿಯ ಉದ್ಯೋಗಿಯಾದ ಶ್ರೀಧರ್ ಎಂಬುವವರು ಜನವರಿ 12ರ ಸೋಮವಾರ ಸಂಜೆ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದರು. ಪಣತ್ತೂರು-ದಿಣ್ಣೆ ರಸ್ತೆಯ ಸಿಡಿಪಿ ರಸ್ತೆ ಬಳಿ ಚಲಿಸುವಾಗ ದೊಡ್ಡ ಗುಂಡಿಯೊಂದಕ್ಕೆ ಸ್ಕೂಟರ್ ಬಿದ್ದಿದೆ. ಇದರಿಂದ ನಿಯಂತ್ರಣ ತಪ್ಪಿದ ವಾಹನ ರಸ್ತೆ ಬದಿಯ ಮಣ್ಣಿನ ರಾಶಿಗೆ ನುಗ್ಗಿದ್ದು, ಶ್ರೀಧರ್ ಅವರು ರಸ್ತೆಗೆ ಅಪ್ಪಳಿಸಿದ್ದಾರೆ. ಗಂಭೀರ ಗಾಯ: ಅಪಘಾತದ ತೀವ್ರತೆಗೆ ಶ್ರೀಧರ್ ಅವರ ಬಲ ಭುಜದ ಮೇಲ್ಭಾಗದ ಮೂಳೆ ಮುರಿದಿದೆ. ವೈದ್ಯರ ಪ್ರಕಾರ, ಶಸ್ತ್ರಚಿಕಿತ್ಸೆಗಾಗಿ ಕನಿಷ್ಠ 1.25 ರಿಂದ 1.5 ಲಕ್ಷ ರೂಪಾಯಿ ವೆಚ್ಚವಾಗಲಿದ್ದು, ಅವರು ಸಂಪೂರ್ಣ ಗುಣಮುಖರಾಗಲು ಕನಿಷ್ಠ ನಾಲ್ಕು ತಿಂಗಳು ಬೇಕಾಗಬಹುದು. “ಒಂದು ಗುಂಡಿಯಿಂದಾಗಿ ನನ್ನ ಇಡೀ ಕುಟುಂಬ ನಾಲ್ಕು ತಿಂಗಳು ಪರದಾಡುವಂತಾಗಿದೆ” ಎಂದು ಶ್ರೀಧರ್ ಸಾಮಾಜಿಕ ಜಾಲತಾಣದಲ್ಲಿ…
ಜೊಮ್ಯಾಟೋ ಡೆಲಿವರಿ ಏಜೆಂಟ್ ಮತ್ತು ಗ್ರಾಹಕನ ನಡುವಿನ ಕಿತ್ತಾಟದ ವಿಡಿಯೋವೊಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಏನಿದು ಘಟನೆ? ಅಂಕುರ್ ಠಾಕೂರ್ ಎಂಬ ಜೊಮ್ಯಾಟೋ ಡೆಲಿವರಿ ಬಾಯ್ ರಾತ್ರಿ ಸುಮಾರು 2:30 ಗಂಟೆಗೆ ಆರ್ಡರ್ ಒಂದನ್ನು ತಲುಪಿಸಲು ಹೋಗಿದ್ದರು. ಆ ಸಮಯದಲ್ಲಿ ಗ್ರಾಹಕರಿಗೆ ಕೆಳಗೆ ಬಂದು ಪಾರ್ಸೆಲ್ ಪಡೆದುಕೊಳ್ಳುವಂತೆ ವಿನಂತಿಸಿದ್ದಾರೆ. ಆದರೆ ಗ್ರಾಹಕರು ಕೆಳಗೆ ಬರಲು ನಿರಾಕರಿಸಿ, ಮನೆ ಬಾಗಿಲಿಗೇ ಬಂದು ನೀಡುವಂತೆ ಪಟ್ಟು ಹಿಡಿದಿದ್ದಾರೆ. ಡೆಲಿವರಿ ಬಾಯ್ ವಾದವೇನು? “ರಾತ್ರಿ 2:30 ಆಗಿದೆ, ನಾನು ಗಾಡಿಯನ್ನು ಕೆಳಗೆ ಬಿಟ್ಟು ಮೇಲೆ ಬಂದರೆ ಯಾರಾದರೂ ಬೈಕ್ ಕದಿಯುವ ಭಯವಿದೆ. ಅಷ್ಟೇ ಅಲ್ಲದೆ, ಇಷ್ಟು ಚಳಿಯಲ್ಲಿ ನಾವು ದೂರದ ಹಾದಿ ಕ್ರಮಿಸಿ ಬರುತ್ತೇವೆ, ಗ್ರಾಹಕರು ಸ್ವಲ್ಪ ಸಹಕರಿಸಬೇಕು” ಎಂಬುದು ಅಂಕುರ್ ಅವರ ವಾದವಾಗಿತ್ತು. ಆದರೆ ಗ್ರಾಹಕರು, “ನಾವು ಹಣ ಪಾವತಿಸಿರುವುದು ಮನೆ ಬಾಗಿಲಿಗೆ ತಲುಪಿಸಲು, ಅಲ್ಲಿಗೇ ಬನ್ನಿ ಇಲ್ಲದಿದ್ದರೆ ಆರ್ಡರ್ ಕ್ಯಾನ್ಸಲ್ ಮಾಡಿ” ಎಂದು ಗದರಿಸಿದ್ದಾರೆ ಎನ್ನಲಾಗಿದೆ. ಮುಂದೇನಾಯ್ತು? ಗ್ರಾಹಕರ…
ಗುಬ್ಬಿ: ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಹರದಗೆರೆ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆಯೊಂದು ಬಿದ್ದಿದ್ದರೂ, ಅದನ್ನು ಸ್ಥಳಾಂತರಿಸಲು ಅಧಿಕಾರಿಗಳು ಬಾರದಿರುವುದು ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಘಟನೆಯ ಹಿನ್ನೆಲೆ: ಹರದಗೆರೆ ಗ್ರಾಮದ ಸುತ್ತಮುತ್ತ ಕಳೆದ ಕೆಲವು ದಿನಗಳಿಂದ ಚಿರತೆ ಹಾವಳಿ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ಗ್ರಾಮಸ್ಥರ ಮನವಿಯ ಮೇರೆಗೆ ಅರಣ್ಯ ಇಲಾಖೆಯು ಹರದಗೆರೆಯ ಬೋವಿ ಕಾಲೋನಿಯ ಗೋವಿಂದಪ್ಪ ಎಂಬುವವರ ಜಮೀನಿನಲ್ಲಿ ಚಿರತೆ ಸೆರೆಗಾಗಿ ಬೋನು ಅಳವಡಿಸಿತ್ತು. ನಿನ್ನೆ ರಾತ್ರಿ ಈ ಬೋನಿಗೆ ಚಿರತೆಯು ಯಶಸ್ವಿಯಾಗಿ ಲಾಕ್ ಆಗಿದೆ. ಅಧಿಕಾರಿಗಳ ನಡೆಗೆ ಆಕ್ರೋಶ: ಚಿರತೆ ಬೋನಿಗೆ ಬಿದ್ದ ವಿಷಯ ತಿಳಿದರೂ ಗುಬ್ಬಿ ವಲಯ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿಲ್ಲ ಎಂಬ ಆರೋಪ ಕೇಳಿಬಂದಿದೆ. ಚಿರತೆ ಸೆರೆಯಾಗಿ ಒಂದು ದಿನ ಕಳೆದರೂ ಅದನ್ನು ಕಾಡಿಗೆ ಬಿಡುವ ಅಥವಾ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವ ಗೋಜಿಗೆ ಅಧಿಕಾರಿಗಳು ಹೋಗಿಲ್ಲ. ಸಾರ್ವಜನಿಕರು ಫೋನ್ ಮೂಲಕ ಸಂಪರ್ಕಿಸಲು ಪ್ರಯತ್ನಿಸಿದರೂ ಅಧಿಕಾರಿಗಳು ಲಭ್ಯವಾಗುತ್ತಿಲ್ಲ. ಸೆರೆಯಾದ ಚಿರತೆಯನ್ನು…
ನವದೆಹಲಿ: ಕರ್ಮಚಾರಿ ಭವಿಷ್ಯ ನಿಧಿ ಸಂಘಟನೆ (EPFO) ಡಿಸೆಂಬರ್–2025 ವೇತನ ತಿಂಗಳ ಇಲೆಕ್ಟ್ರಾನಿಕ್ ಚಾಲನ್—ಕಮ್–ರಿಟರ್ನ್ (ECR) ಸಲ್ಲಿಕೆಗೆ ಕೊನೆಯ ದಿನಾಂಕವನ್ನು ವಿಸ್ತರಿಸಿದೆ. ತಾಂತ್ರಿಕ ಹಾಗೂ ಕಾರ್ಯಾಚರಣಾತ್ಮಕ ಅಡಚಣೆಗಳ ಹಿನ್ನೆಲೆಯಲ್ಲಿ ಉದ್ಯೋಗದಾತರು ಹಾಗೂ ವಿವಿಧ ಹಿತಾಸಕ್ತಿದಾರರಿಂದ ಬಂದ ಮನವಿಗಳನ್ನು ಪರಿಗಣಿಸಿ, ECR ಸಲ್ಲಿಕೆಯ ಅಂತಿಮ ದಿನಾಂಕವನ್ನು ಜನವರಿ 20, 2026ರವರೆಗೆ ಮುಂದೂಡಲಾಗಿದೆ. ಈ ವಿಸ್ತರಣೆಯಿಂದ ಉದ್ಯೋಗದಾತರಿಗೆ ಹೆಚ್ಚುವರಿ ಐದು ದಿನಗಳ ಕಾಲಾವಕಾಶ ದೊರೆಯಲಿದೆ. ವಿಸ್ತರಿತ ಅವಧಿಯೊಳಗೆ ECR ಸಲ್ಲಿಸಿ ಪಾವತಿ ಮಾಡಿದಲ್ಲಿ ಯಾವುದೇ ಬಡ್ಡಿ ಅಥವಾ ದಂಡ ವಿಧಿಸಲಾಗುವುದಿಲ್ಲ ಎಂದು EPFO ಸ್ಪಷ್ಟಪಡಿಸಿದೆ. ಇದು ಉದ್ಯೋಗದಾತರ ಅನುಕೂಲಕ್ಕಾಗಿ ನೀಡಿರುವ ವಿಶೇಷ ಕ್ರಮವಾಗಿದ್ದು, ನಿಯಮಿತವಾಗಿ ರಿಟರ್ನ್ ಸಲ್ಲಿಸಲು ಅವಕಾಶ ಕಲ್ಪಿಸುವ ಉದ್ದೇಶ ಹೊಂದಿದೆ. ಕೇಂದ್ರ ಭವಿಷ್ಯ ನಿಧಿ ಆಯುಕ್ತರ (CPFC) ಅನುಮೋದನೆಯೊಂದಿಗೆ ಈ ಆದೇಶವನ್ನು ಹೊರಡಿಸಲಾಗಿದ್ದು, ಹೆಚ್ಚುವರಿ ಕೇಂದ್ರ ಭವಿಷ್ಯ ನಿಧಿ ಆಯುಕ್ತರು (ಅನುಸರಣೆ) ಪಿ.ಬಿ.ವರ್ಮಾ ಅವರು ಈ ಬಗ್ಗೆ ಅಧಿಕೃತವಾಗಿ ತಿಳಿಸಿದ್ದಾರೆ. EPFO, ಉದ್ಯೋಗದಾತರು ವಿಸ್ತರಿಸಲಾದ ಅವಧಿಯನ್ನು ಸದುಪಯೋಗಪಡಿಸಿಕೊಂಡು ಸಮಯಕ್ಕೆ ಸರಿಯಾಗಿ EPF…
ಬೀದರ್: ರಾಜ್ಯ ರಾಜಕಾರಣದ ಧೀಮಂತ ನಾಯಕ, ಮಾಜಿ ಸಚಿವ ಮತ್ತು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಮಾಜಿ ಅಧ್ಯಕ್ಷರಾಗಿದ್ದ ಡಾ. ಭೀಮಣ್ಣ ಖಂಡ್ರೆ (102) ಅವರು ವಯೋಸಹಜ ಅನಾರೋಗ್ಯದಿಂದ ಶುಕ್ರವಾರ ರಾತ್ರಿ ಬೀದರ್ ನ ತಮ್ಮ ಸ್ವಗೃಹದಲ್ಲಿ ನಿಧನರಾದರು. 1927ರಲ್ಲಿ ಜನಿಸಿದ ಭೀಮಣ್ಣ ಖಂಡ್ರೆ ಅವರು ಸ್ವಾತಂತ್ರ್ಯ ಹೋರಾಟ ಮತ್ತು ಕರ್ನಾಟಕ ಏಕೀಕರಣ ಚಳವಳಿಯಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು. ಭಾಲ್ಕಿ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಇವರು, ಎಂ. ವೀರಪ್ಪ ಮೊಯಿಲಿ ಅವರ ಸಚಿವ ಸಂಪುಟದಲ್ಲಿ ಸಾರಿಗೆ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಎರಡು ಬಾರಿ ವಿಧಾನ ಪರಿಷತ್ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದ ಇವರು, ಶಿಸ್ತುಬದ್ಧ ಆಡಳಿತಕ್ಕೆ ಹೆಸರಾಗಿದ್ದರು. ಅವರು ಪುತ್ರ, ಪ್ರಸ್ತುತ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೇರಿದಂತೆ ಅಪಾರ ಬಂಧು-ಬಳಗ ಮತ್ತು ಅಭಿಮಾನಿಗಳನ್ನು ಅಗಲಿದ್ದಾರೆ. ಭೀಮಣ್ಣ ಖಂಡ್ರೆ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ನಾಡಿನ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ. “ಶರಣ ಚಿಂತನೆಯ ನೆರಳಿನಂತೆ ಬಾಳಿದ ಧೀಮಂತ ನಾಯಕನ…
ತುಮಕೂರು: ಜಿಲ್ಲೆಯ ಕ್ರೀಡಾಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡಲಾಗುವುದು. ತುಮಕೂರಿನ ಯುವಜನತೆ ಇದರ ಸದುಪಯೋಗ ಪಡೆದು ವಿಶ್ವಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಲಿ ಎಂದು ಹಾರೈಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ತುಮಕೂರಿನಲ್ಲಿ ಆಯೋಜಿಸಿದ್ದ “ಕರ್ನಾಟಕ ಕ್ರೀಡಾಕೂಟ -2025 – 2026″ರ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಕ್ರೀಡೆಯಿಂದ ಜೀವನದಲ್ಲಿ ಶಿಸ್ತು, ಸಂಯಮ, ಸಮಯಪ್ರಜ್ಞೆ ಬೆಳೆಸಿಕೊಳ್ಳಲು ಸಹಕಾರಿಯಾಗುತ್ತದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕ್ರೀಡಾಕೂಟ ನಡೆಯುತ್ತಿದ್ದು, ಇದರ ರೂವಾರಿಯಾಗಿರುವ ಗೃಹ ಸಚಿವ ಜಿ.ಪರಮೇಶ್ವರ್ ಅವರಿಗೆ ಅಭಿನಂದನೆಗಳು ಎಂದರು. ನಾನು ವಿದ್ಯಾರ್ಥಿದೆಸೆಯಲ್ಲಿ ಕಬಡ್ಡಿ ಪಟುವಾಗಿದ್ದೆ, ಅದರೊಂದಿಗೆ ಫುಟ್ ಬಾಲ್, ಕ್ರಿಕೆಟ್ ಕ್ರೀಡೆಯಲ್ಲಿಯೂ ಆಸಕ್ತಿ ಹೊಂದಿದ್ದೆ. ಅದರಿಂದ ಈಗಾಗಲೂ ಆಗಾಗ್ಗೆ ಏಕದಿನ ಕ್ರಿಕೆಟ್, ಟಿ.–20 ಕ್ರಿಕೆಟ್ ನೋಡುತ್ತೇನೆ. ಕೆಲಸದೊತ್ತಡದ ನಡುವೆಯೂ ಅಂತರರಾಷ್ಟ್ರೀಯ ಫುಟ್ಬಾಲ್ ಪಂದ್ಯಗಳನ್ನು ವೀಕ್ಷಿಸುವುದನ್ನು ತಪ್ಪಿಸುವುದಿಲ್ಲ ಎಂದರು. ಕ್ರೀಡೆಯಲ್ಲಿ ಸೋಲು — ಗೆಲುವು ಮುಖ್ಯವಲ್ಲ, ಕ್ರೀಡಾಸ್ಪೂರ್ತಿ ಮುಖ್ಯ. ಪ್ರತಿ ಕ್ರೀಡಾಪಟುವು ಇದನ್ನು ಪಾಲಿಸಬೇಕು. ಕ್ರೀಡಾಪಟುಗಳಿಗೆ ಉತ್ತಮ ಭವಿಷ್ಯವಿದ್ದು, ಕಠಿಣ ಶ್ರಮ ಅತ್ಯಗತ್ಯ. ಪರಿಶ್ರಮದಿಂದ ಗುರಿ ಸಾಧಿಸಲು ಉತ್ತಮ ತರಬೇತಿ…
ಸರಗೂರು: ಹಳೆ ವೈಷಮ್ಯಕ್ಕೆ ಯುವಕನೊರ್ವನನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಸರಗೂರು ಪೊಲೀಸ್ ಠಾಣೆ ವ್ಯಾಪ್ತಿಯ ಮೊಳೆಯೂರು ಗ್ರಾಮದಲ್ಲಿ ಬುಧವಾರ ತಡರಾತ್ರಿ ನಡೆದಿದೆ. ಗ್ರಾಮದ ರಮೇಶ್ ಆಲಿಯಾಸ್ ಕರಿಯಪ್ಪ(33) ಕೊಲೆಯಾದವ. ಈತನನ್ನು ಸ್ನೇಹಿತ ಅನುರಾಜ್ ಬಿನ್ ಪುಟ್ಟರಾಜು ಎಂಬಾತ ಚಾಕುವಿನಿಂದ ಹೊಟ್ಟೆಯ ಭಾಗಕ್ಕೆ ಜೋರಾಗಿ ಚುಚ್ಚಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಅನುರಾಜ್ ನನ್ನು 24 ಗಂಟೆಯೊಳಗೆ ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಲ್ಲಿ ಸರಗೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಘಟನೆ ವಿವರ: ಮೊಳೆಯೂರು ಗ್ರಾಮದ ರಮೇಶ್, ಅನುರಾಜ್ ನಡುವೆ ಹಾಗಾಗ್ಗೆ ಹಳೆ ವೈಷಮ್ಯಕ್ಕೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಬುಧವಾರ ತಡರಾತ್ರಿ ಸಮೀಪದ ರಾಗಿ ಜಮೀನಿನಲ್ಲಿ ಕಾಡುಪ್ರಾಣಿಗಳ ಹಾವಳಿ ತಡೆಗೆ ಕಾವಲು ಕಾಯುವ ಸಲುವಾಗಿ ಮರದಲ್ಲಿ ಹಟ್ಟಣೆ ಕಟ್ಟಿಕೊಂಡು ಕಾಯುವಾಗ ರಮೇಶ್ ಎಂಬಾತ ಅನುರಾಜ್ ಗೆ ಪೋನ್ ಕರೆ ಮಾಡಿದ್ದು, ಈ ನಡುವೆ ಮತ್ತೆ ಜೋರಾಗಿ ಮಾತುಕತೆ ನಡೆದಿದೆ ಎನ್ನಲಾಗಿದೆ. ಈ ವೇಳೆ ಅನುರಾಜ್ ಹಟ್ಟಣೆಯಲ್ಲಿ ಮಲಗಿರುವಾಗ ರಮೇಶ್…