Author: admin

ಭಾರತದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ದಾವೂದ್ ಇಬ್ರಾಹಿಂಗೆ(65) ವಿಷಪ್ರಾಶಾನ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ದಾವೂದ್‌ ನನ್ನು ಪಾಕಿಸ್ತಾನದ ಕರಾಚಿಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸುದ್ದಿ ಹರಡಿದೆ. ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ. ಆದರೆ, ಕರಾಚಿಯ ಆಸ್ಪತ್ರೆಯೊಂದರಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದ್ದು, ಮಹಡಿಯೊಂದರಲ್ಲಿ ಇದ್ದ ರೋಗಿಗಳನ್ನು ಬೇರೆಡೆಗೆ ಶಿಫ್ಟ್ ಮಾಡಿ ಈತನಿಗೆ ಮಾತ್ರ ಚಿಕಿತ್ಸೆ ನೀಡಲಾಗುತ್ತಿದೆ. ನಿಕಟ ಕುಟುಂಬ ಸದಸ್ಯರಿಗೆ ಬಿಟ್ಟು ಬೇರೆ ಯಾರಿಗೂ ಅವಕಾಶ ನೀಡದಿರುವುದು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

Read More

ಇತ್ತೀಚೆಗೆ ಜಾಗತಿಕ ಸಿಹಿ ನೀರಿನ ಮೀನು ಪ್ರಭೇದಗಳ ಮೊದಲ ಸಮಗ್ರ ಮೌಲ್ಯಮಾಪನವನ್ನು ಬಹಿರಂಗಪಡಿಸಲಾಗಿದೆ. ಈ ವರದಿಯ ಪ್ರಕಾರ ಅಂದಾಜು ಮಾಡಿದ ಸಿಹಿ ನೀರಿನ ಮೀನುಗಳಲ್ಲಿ 25% ರಷ್ಟು ಅಳಿವಿನ ಅಪಾಯದಲ್ಲಿದೆ. ಹವಾಮಾನ ಬದಲಾವಣೆ, ಮಾಲಿನ್ಯ, ಅತಿಯಾದ ಮೀನುಗಾರಿಕೆ, ಮತ್ತು ಆಕ್ರಮಣಕಾರಿ ಪ್ರಭೇದಗಳಿಂದಾಗಿ ಸಿಹಿ ನೀರಿನ ಮೀನುಗಳು ಅಳಿವಿನ ಅಂಚಿಗೆ ತಲುಪಿರುವುದಕ್ಕೆ ಕಾರಣ ಎನ್ನಲಾಗಿದೆ. ಇದರ ಜೊತೆಗೆ ಮಧ್ಯ ದಕ್ಷಿಣ ಪೆಸಿಫಿಕ್ ಮತ್ತು ಪೂರ್ವ ಪೆಸಿಫಿಕ್ ಹಸಿರು ಆಮೆಗಳು ಕೂಡ ಅಳಿವಿನ ಅಂಚಿನಲ್ಲಿದೆ.

Read More

ಸಂಸತ್ ಪ್ರವೇಶದ ಪಾಸ್ ನೀಡಿದ್ದ ಸಂಬಂಧ ಸಂಸದ ಪ್ರತಾಪ್ ಸಿಂಹ ಅವರ ಹೇಳಿಕೆಯನ್ನು ದೆಹಲಿ ಪೊಲೀಸ್ ವಿಶೇಷ ಘಟಕ ಪಡೆಯುವ ಸಾಧ್ಯತೆ ಇದೆ. ಪಾಸ್ ಗಾಗಿ ಮನೋರಂಜನ್ ಕಳೆದ ಮೂರು ತಿಂಗಳಿನಿಂದ ಪ್ರತಾಪ್ ಸಿಂಹ ಅವರ ಕಚೇರಿಗೆ ಭೇಟಿ ನೀಡಿ ಹಲವು ಬಾರಿ ಮನವಿ ಮಾಡಿದ್ದ. ಮೈಸೂರಿನ ನಿವಾಸಿ ಎಂದು ಹೇಳಿ ಪಾಸ್ ಪಡೆದುಕೊಂಡಿದ್ದ. ಈ ಹಿನ್ನೆಲೆಯಲ್ಲಿ ಪ್ರತಾಪ್ ಸಿಂಹ ಹೇಳಿಕೆ ಪಡೆಯಲು ವಿಶೇಷ ಸೆಲ್ ಚಿಂತನೆ ನಡೆಸಿದೆ ಎನ್ನಲಾಗಿದೆ. ಇನ್ನು ಪ್ರಕರಣದ ಆರನೇ ಆರೋಪಿ ಮಹೇಶ್ ಕುಮಾವತ್ ಅವರನ್ನು ಶನಿವಾರ ಬಂಧಿಸಲಾಗಿದ್ದು,  ನಂತರ ಆತನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ನ್ಯಾಯಾಲಯ ಆರೋಪಿಯನ್ನು ಏಳು ದಿನಗಳ ಕಾಲಪೊಲೀಸ್ ಕಸ್ಟಡಿಗೆ ನೀಡಿದೆ. ಈ ನಡುವೆ ಪ್ರತಾಪ್ ಸಿಂಹ ರಾಜೀನಾಮೆಗೆ ಒತ್ತಾಯಿಸಿ ಪ್ರತಿಪಕ್ಷಗಳು ಸಂಸತ್ತಿನ ಒಳಗೆ ಹಾಗೂ ಹೊರಗೆ ಪ್ರತಿಭಟನನೆಗಳನ್ನು ನಡೆಸುತ್ತಿದ್ದರೂ, ಪ್ರತಾಪ್ ಸಿಂಹ ಅವರು ಇದೂವರೆಗೆ ಯಾವುದೇ ಪ್ರತಿಕ್ರಿಯೆಗಳನ್ನು ನೀಡಿಲ್ಲ. ಆದರೆ, ಘಟನೆ ಬಗ್ಗೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿ…

Read More

ಸಂಸತ್ ಅಧಿವೇಶನದಲ್ಲಿ ಭದ್ರತಾ ಲೋಪ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಶಾಸಕ ಜಿಟಿ ದೇವೇಗೌಡ ಪ್ರತಿಕ್ರಿಯೆ ನೀಡಿದ್ದಾರೆ. ಸಂಸತ್ ಅಧಿವೇಶನದಲ್ಲಿ ಭದ್ರತಾ ಲೋಪ ಆಗಿರುವುದು ನಿಜ. ಭದ್ರತಾ ಲೋಪ ಎಸಗಿರುವ ಅಧಿಕಾರಿಗಳಿಗೆ ಶಿಕ್ಷೆ ಆಗಲಿ. ಸಂಸತ್ ಮೇಲೆ ದಾಳಿ ನಡೆಸಿದ ದುಷ್ಕರ್ಮಿಗಳಿಗೆ ಸಂಸದ ಪ್ರತಾಪ್ ಸಿಂಹ ಪಾಸ್ ನೀಡಿದ ವಿಚಾರಕ್ಕೆ ಪ್ರತಾಪ್ ಸಿಂಹ ರಾಜೀನಾಮೆ ಕೇಳೋದು ಯಾರಿಗೂ ಶೋಭೆ ತರಲ್ಲ ಎಂದಿದ್ದಾರೆ. ಸಂಸದ ಪ್ರತಾಪ್ ಸಿಂಹ ಪರ ಶಾಸಕ ಜಿಟಿ ದೇವೇಗೌಡ ಬ್ಯಾಟಿಂಗ್ ಮಾಡಿದ್ದು, ಶಾಸಕರು, ಸಂಸದರು ತಮ್ಮ ಕ್ಷೇತ್ರದ ಮತದಾರರಿಗೆ ಅಧಿವೇಶನ ನೋಡಲಿಕ್ಕೆ ಪಾಸ್ ಕೇಳುತ್ತಾರೆ. ಕ್ಷೇತ್ರದ ಮತದಾರರು ಪಾಸ್ ಕೇಳಿದಾಗ ನಾವು ಕೊಡಲೇಬೇಕು. ಪಾಸ್ ಕೇಳಿರುವ ವ್ಯಕ್ತಿ ನಮ್ಮ ಕ್ಷೇತ್ರದ ಮತದಾರರೇ ಎಂದು ಪರಿಶೀಲನೆ ಮಾಡುತ್ತೇವೆ. ಬಳಿಕ ಪಾಸ್ ನೀಡುತ್ತೇವೆ. ಸಂಸತ್ ನ ಭದ್ರತಾ ಸಿಬ್ಬಂದಿಗಳು ಪಾಸ್ ಪರಿಶೀಲನೆ ಮಾಡಬೇಕಿತ್ತು ಎಂದಿದ್ದಾರೆ. ಭದ್ರತಾ ಸಿಬ್ಬಂದಿಗಳ ವೈಫಲ್ಯದಿಂದ ಘಟನೆ ನಡೆದಿದೆ. ಇದಕ್ಕೆ ಪ್ರತಾಪ್ ಸಿಂಹ ರಾಜೀನಾಮೆ ಕೇಳೋದು ಸರಿಯಲ್ಲ ಎಂದು ಜಿಟಿ…

Read More

ಬೆಂಗಳೂರು: ವಿಧಾನಸಭೆಯಲ್ಲಿ ಹೇಳಿದ ವೀಡಿಯೋವನ್ನು ತಪ್ಪು ಅರ್ಥ ಬರುವಂತೆ ಬೇಕಾದಷ್ಟು ಕಟ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಬಿಜೆಪಿ ನಾಯಕರಾದ ಸಿ.ಟಿ.ರವಿ ಹಾಗೂ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಕುರಿತ ಪೂರ್ತಿ ವಿಡಿಯೋವನ್ನು ಟ್ವಿಟ್ಟರ್‌ ನಲ್ಲಿ ಹಂಚಿಕೊಂಡಿರುವ ಅವರು,  ಸಿಟಿ ರವಿ ಮತ್ತು ಅವರ ಪಕ್ಷ ಇಂಥಾ ಅಗ್ಗದ ಚೇಷ್ಠೆಗಳನ್ನು ಮಾಡಿದ್ದರ ಫಲವೇ ಇಂದು ಜನ ಅವರನ್ನು ಮನೆಯಲ್ಲಿ‌ ಮತ್ತು ಪಕ್ಷವನ್ನು ವಿರೋಧ ಪಕ್ಷದ ಸ್ಥಾನದಲ್ಲಿ ಕೂರಿಸಿದ್ದಾರೆ.ಆದರೂ ನಿಮಗೆ ಬುದ್ದಿ ಬಂದಂತೆ ಕಾಣುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಲಿ ಶಾಸಕರಾಗಿರುವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಸದನದಲ್ಲಿ ಕೂತು ಅಭಿವೃದ್ಧಿ ಕಾರ್ಯಗಳ ಬಗೆಗಿನ ಚರ್ಚೆಯಲ್ಲಿ ಪಾಲ್ಗೊಳ್ಳಬೇಕಿತ್ತು, ಆದರೆ ಅವರ ಗಮನವೆಲ್ಲ ವಿರೋಧ ಪಕ್ಷದ ನಾಯಕನ ಕುರ್ಚಿಯ ಮೇಲೆ ಇದೆಯೆಂದು ಕಾಣುತ್ತೆ ಎಂದಿರುವ ಮುಖ್ಯಮಂತ್ರಿ, ನಿಮ್ಮ ಮಾನ ಮರ್ಯಾದೆ ಬಗ್ಗೆ ನಿಮಗೆ ಕನಿಷ್ಠ ಕಾಳಜಿ ಇದ್ದರೆ ಶೇರ್ ಮಾಡಿರುವ ವೀಡಿಯೋ ಡಿಲೀಟ್ ಮಾಡಿ…

Read More

ಕೊರಟಗೆರೆ: ಹೊಳವನಹಳ್ಳಿ ಗ್ರಾಮ ಪಂಚಾಯತ್‌ ಅಭಿವೃದ್ಧಿಗಾಗಿ ತುಮಕೂರು ಕೃಷಿ ಉತ್ಪನ್ನ ಉಪ ಮಾರುಕಟ್ಟೆ ನಿರ್ಮಾಣ ಮಾಡಿಕೊಟ್ಟ ಅಂಗಡಿ ಮಳಿಗೆಗಳಿಗೆ  ಮೂಲ ಸೌಕರ್ಯ ಇಲ್ಲದೆ ಸೊರಗುತ್ತಿದೆ. 2016 ರಲ್ಲಿ ಎಪಿಎಂಸಿ ಮಾರುಕಟ್ಟೆ ಸಮಿತಿ ವತಿಯಿಂದ 2ಕೋಟಿ 15 ಲಕ್ಷದಲ್ಲಿ 70ಕ್ಕೂ ಅಧಿಕ ಅಂಗಡಿ ಮಳಿಗೆಗಳನ್ನ ನಿರ್ಮಾಣ ಮಾಡಿಕೊಟ್ಟರೂ ಗ್ರಾ.ಪಂ.ನಿಂದ ಮೂಲ ಸೌಕರ್ಯ ನೀಡುವಲ್ಲಿ ವಿಫಲರಾಗಿದ್ದಾರೆ. ಅಂಗಡಿ ಮಳಿಗೆಗಳನ್ನ ಮರು ಟೆಂಡರ್ ಮಾಡದ ಪರಿಣಾಮ ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದೆ. ಕೊವಿಡ್‌ ಸಂದರ್ಭದಲ್ಲಿ ನಿಂತ  ಶುಕ್ರವಾರ ವಾರದ ಸಂತೆ ಇಲ್ಲಿಯವರೆಗೂ ಹಾರಜು ಪ್ರಕ್ರಿಯೆ ಮಾಡದೆ ಮೀನಾಮೇಷ ಎಣಿಸುತ್ತಿದ್ದಾರೆ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಎಪಿಎಂಸಿ ಮಾರುಕಟ್ಟೆಯಲ್ಲಿರುವ ಅಂಗಡಿ ಮಳಿಗೆಗಳು ಹಾಗೂ ವಾರದ ಸಂತೆಯನ್ನ ಪ್ರಾರಂಭಿಸುವಂತೆ ಸಾರ್ವಜನಿಕರ ಒತ್ತಾಯಿಸಿದ್ದಾರೆ. ವರದಿ: ಮಂಜುಸ್ವಾಮಿ ಎಂ.ಎನ್.,  ಕೊರಟಗೆರೆ

Read More

ಬೆಳಗಾವಿ ತಾಲೂಕಿನ ಹೊಸ ಹೊಂಟುಮುರಿ ಎಲ್ಲಿ ನಡೆದ ಘಟನೆ ಕುರಿತು ಬಿಜೆಪಿ ಕೇಂದ್ರ ಸಂಸದೀಯ ಮಹಿಳಾ ನಿಯೋಗ ಬೆಳಗಾವಿ ತಾಲೂಕಿನ ಹೊಂಟ್ಮುರಿಯಲ್ಲಿ ನಡೆದ ಘಟನೆಯ ಕುರಿತು ಸತ್ಯಶೋಧನೆಗಾಗಿ ಸಂಸದರಾದ ಅಫ್ರಜಿತಾ ಸಾರಂಗಿ, ಸುನಿತಾ ದಂಗ್ಗಲ, ಲಾಕೆಟ್ ಚಟರ್ಜಿ ರಂಜಿತಾ ಕೋಲಿ, ಆಶಾ ಲಾಕ್ರ ,ನೇತೃತ್ವದ ನಿಯೋಗ ಬೆಳಗಾವಿಗೆ ಆಗಮಿಸಿದ್ದು ಸಂತ್ರಸ್ತ ಮಹಿಳೆಯನ್ನು ಬೀಮ್ಸ ಆಸ್ಪತ್ರೆಯಲ್ಲಿ ನಿಯೋಗ. ಭೇಟಿಯಾಗಿದೆ. ನಿಯೋಗದ ಸದಸ್ಯರ ಅಫ್ರಜಿತಾ ಸಾರಂಗಿ ಹಾಗೂ ಲಾಕೆಟ್ ಚಟರ್ಜಿ ಸುದ್ದಿಗಾರರೊಂದಿಗೆ ಮಾತನಾಡಿ,  ಇದೊಂದು ಅಮಾನವೀಯ ಘಟನೆ ಈ ಘಟನೆಯನ್ನು ನಾವು ಖಂಡಿಸುತ್ತೇವೆ ಕಾಂಗ್ರೆಸ್ ಸರ್ಕಾರದ ಕಾನೂನು ಸುವ್ಯವಸ್ಥೆ ಸಂಪೂರ್ಣ ವಿಫಲವಾಗಿರುವುದು ಇದೊಂದು ಉದಾಹರಣೆವಾಗಿದೆ ಎಂದು ದೂರಿದರು. ಬೆಳಗಾವಿಯಲ್ಲಿ ಸರ್ಕಾರದ ಅಧಿವೇಶನ ನಡೆಯುತ್ತಿರುವಾಗ ಇಂಥದೊಂದು ಘಟನೆ ನಡೆದಿರುವುದು ಅಮಾನವೀಯ ಕೃತ್ಯವಾಗಿದೆ. ಇದಕ್ಕೆ ಸೂಕ್ತವಾದ ಕ್ರಮ ಕೈಗೊಳ್ಳಬೇಕೆಂದು ಸರ್ಕಾರವನ್ನು ನಾವು ಒತ್ತಾಯಿಸುತ್ತೇವೆ . ಸಿದ್ದರಾಮಯ್ಯ ಸರ್ಕಾರ ಮಹಿಳೆಯರ ರಕ್ಷಣೆ ಮಾಡುವುದರಲ್ಲಿ ವಿಫಲವಾಗಿದೆ ಎಂದು ಇದೇ ವೇಳೆ ಟೀಕಿಸಿದರು. ಇನ್ನೂ ಇಂಥದೊಂದು ಘಟನೆ ಮಣಿಪುರ್, ಉತ್ತರ ಪ್ರದೇಶ…

Read More

ಚೆನ್ನೈ ವಿಮಾನ ನಿಲ್ದಾಣದಲ್ಲಿ ಭಾರೀ ಮಾದಕ ದ್ರವ್ಯ ದಂಧೆ. 12 ಕೋಟಿ ಮೌಲ್ಯದ ಕೊಕೇನ್ ಅನ್ನು ಕಸ್ಟಮ್ ವಶಪಡಿಸಿಕೊಂಡಿದೆ. ನೈಜೀರಿಯನ್‌ ನಿಂದ 1,201 ಗ್ರಾಂ ಕೊಕೇನ್ ಪತ್ತೆಯಾಗಿದೆ. ಇಥಿಯೋಪಿಯಾದ ರಾಜಧಾನಿ ಅಡಿಸ್ ಅಬಾಬಾದಿಂದ ಡಿಸೆಂಬರ್ 12 ರಂದು ಚೆನ್ನೈಗೆ ಆಗಮಿಸಿದ ಪ್ರಯಾಣಿಕರಿಂದ ಕೊಕೇನ್ ವಶಪಡಿಸಿಕೊಳ್ಳಲಾಗಿದೆ. ಔಷಧಗಳನ್ನು ಕ್ಯಾಪ್ಸೂಲ್‌ ಗಳಲ್ಲಿ ಕಳ್ಳಸಾಗಣೆ ಮಾಡುವ ಪ್ರಯತ್ನ ನಡೆದಿದೆ. 12 ಕೋಟಿ ಮೌಲ್ಯದ 1,201 ಗ್ರಾಂ ಕೊಕೇನ್ ವಶಪಡಿಸಿಕೊಳ್ಳಲಾಗಿದೆ ಎಂದು ಕಸ್ಟಮ್ಸ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಘಟನೆ ಕುರಿತು ಏರ್ ಕಸ್ಟಮ್ಸ್ ಅಧಿಕಾರಿಗಳು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Read More

ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಬಸ್ಸಿನಲ್ಲಿ ದಲಿತ ಮಹಿಳೆಯ ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ ಆಘಾತಕಾರಿ ಘಟನೆ  ನಡೆದಿದೆ. ಉತ್ತರ ಪ್ರದೇಶದಿಂದ ರಾಜಸ್ಥಾನಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ನಲ್ಲಿ 20 ವರ್ಷದ ಯುವತಿಯೊಬ್ಬಳಿಗೆ ಕಿರುಕುಳ ನೀಡಲಾಗಿತ್ತು. ಘಟನೆಯಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಸ್ ಚಾಲಕ ಮತ್ತು ಕಂಡಕ್ಟರ್‌ ನನ್ನು ಬಂಧಿಸಲಾಗಿದೆ. ಡಿಸೆಂಬರ್ 9ರ ರಾತ್ರಿ ಈ ಘಟನೆ ನಡೆದಿದೆ. ಕಾನ್ಪುರದಿಂದ ಜೈಪುರಕ್ಕೆ ಖಾಸಗಿ ಬಸ್‌ ನಲ್ಲಿ ಯುವತಿ ಪ್ರಯಾಣಿಸುತ್ತಿದ್ದಳು. 20 ವರ್ಷದ ಮಹಿಳೆಯನ್ನು ಚಾಲಕನ ಕ್ಯಾಬಿನ್‌ ಗೆ ಕರೆದೊಯ್ದು ನಂತರ ಚಿತ್ರಹಿಂಸೆ ನೀಡಲಾಯಿತು. ಬಸ್ಸಿನೊಳಗೆ ಜೋರಾಗಿ ಸಂಗೀತ ನುಡಿಸಿದ ನಂತರ ಚಾಲಕ ಆರಿಫ್ ಯುವತಿ ಮೊದಲು ಕಿರುಕುಳ ನೀಡಿದ್ದಾನೆ. ನಂತರ ಕಂಡಕ್ಟರ್ ಲಲಿತ್ ಕೂಡ ಯುವತಿಗೆ ಕಿರುಕುಳ ನೀಡಿದ್ದಾನೆ. ಅಷ್ಟರಲ್ಲಿ ಬಾಲಕಿಯ ಕಿರುಚಾಟ ಕೇಳಿದ ಪ್ರಯಾಣಿಕರು ಕ್ಯಾಬಿನ್ ತೆರೆದು ನೋಡಿದಾಗ ಚಿತ್ರಹಿಂಸೆಯ ವಿಷಯ ತಿಳಿಯಿತು. ಬಸ್ ನಿಲ್ಲಿಸಿದ ನಂತರ ಪ್ರಯಾಣಿಕರು ಚಾಲಕನನ್ನು ಹಿಡಿದು ಅಮಾನುಷವಾಗಿ ಥಳಿಸಿದ್ದಾರೆ. ನಂತರ ಕಾನೋಟಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು…

Read More

ನಾಪತ್ತೆಯಾಗಿದ್ದ ವೃದ್ಧೆಯ ಶವ ಮನೆಯ ಬೆಡ್ ರೂಂನಲ್ಲಿ ಪ್ಲಾಸ್ಟಿಕ್ ಹಾಳೆಯಲ್ಲಿ ಸುತ್ತಿದ ಸ್ಥಿತಿಯಲ್ಲಿ ಹಾಸಿಗೆಯ ಕೆಳಗೆ ಪತ್ತೆಯಾಗಿದೆ. ದೆಹಲಿಯ ನಂದ್ ನಗರಿಯಿಂದ ಡಿಸೆಂಬರ್ 10 ರಂದು ನಾಪತ್ತೆಯಾಗಿದ್ದ 60 ವರ್ಷದ ಮಹಿಳೆಯ ಶವ ಪತ್ತೆಯಾಗಿದೆ. ನೆಲ ಮಹಡಿಯ ಕೊಠಡಿಯಿಂದ ದುರ್ವಾಸನೆ ಬಂದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆಶಾದೇವಿ (60) ಮೃತರು. ಮಗ ಮಹಾವೀರ್ ಸಿಂಗ್ (33) 13 ರಂದು ನಂದ ನಗರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಡಿಸೆಂಬರ್ 10 ರಿಂದ ತನ್ನ ತಾಯಿ ಕಾಣೆಯಾಗಿದ್ದಾರೆ ಎಂದು ವರದಿ ಮಾಡಿದ್ದಾರೆ. ಮಗನ ದೂರಿನ ಪ್ರಕಾರ, ಬಾಡಿಗೆದಾರರಿಂದ ಬಾಡಿಗೆ ವಸೂಲಿ ಮಾಡಲು ನಂದನಗರಿಗೆ ಹೋಗಿದ್ದು, ನಂತರ ನಾಪತ್ತೆಯಾಗಿದ್ದಾರೆ. ಶುಕ್ರವಾರ ಸಂಜೆ ವೇಳೆಗೆ ದೆಹಲಿಯ ಹರ್ಷ್ ವಿಹಾರ್‌ನಲ್ಲಿರುವ ಆಶಾದೇವಿ ಅವರ ಕುಟುಂಬದ ಮನೆಯ ನೆಲ ಮಹಡಿಯಿಂದ ದುರ್ವಾಸನೆ ಬರಲಾರಂಭಿಸಿತು. ನೆಲಮಹಡಿಯ ಬೆಡ್ ರೂಂ ಪರಿಶೀಲಿಸಿದಾಗ ಬೆಡ್ ಬಾಕ್ಸ್ ನೊಳಗೆ ಪ್ಲಾಸ್ಟಿಕ್ ನಲ್ಲಿ ಸುತ್ತಿ ಆಶಾದೇವಿ ಶವ ಪತ್ತೆಯಾಗಿದೆ. ನಂತರ ಪೊಲೀಸರಿಗೆ ಮಾಹಿತಿ…

Read More