Author: admin

ಮಧ್ಯಪ್ರದೇಶದಲ್ಲಿ ಅಕ್ರಮವಾಗಿ ಮಾಂಸ ಮಾರಾಟ ಮಾಡುತ್ತಿದ್ದ ಹತ್ತು ಅಂಗಡಿಗಳನ್ನು ಬುಲ್ಡೋಜರ್‌ನಿಂದ ಒಡೆದು ಹಾಕಲಾಗಿದೆ. ಉಜ್ಜಯಿನಿಯಲ್ಲಿ ಈ ಕ್ರಮವು ಮುಖ್ಯಮಂತ್ರಿ ಮೋಹನ್ ಯಾದವ್ ಅವರ ನಿರ್ದೇಶನವನ್ನು ಅನುಸರಿಸಿ ಬಯಲು ಮಾಂಸ ಮಾರಾಟವನ್ನು ನಿಷೇಧಿಸಿದೆ. ಉಜ್ಜಯಿನಿಯಲ್ಲಿ ಅಂಗಡಿಗಳನ್ನು ಹಗಲಿನಲ್ಲಿ ಮುಚ್ಚಲಾಗುವುದು ಅಥವಾ ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ಅವರು ಹೇಳಿದರು. ಇನ್ನೂ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರ ಮನೆಗಳನ್ನು ಬುಲ್ಡೋಜರ್‌ ಗಳಿಂದ ನೆಲಸಮಗೊಳಿಸಲಾಗಿದೆ. ಫಾರೂಕ್ ರೈನ್, ಬಿಲಾಲ್, ಅಸ್ಲಂ ಎಂಬುವರ ಮನೆಗಳನ್ನು ನೆಲಸಮಗೊಳಿಸಲಾಗಿದೆ. ಭೋಪಾಲ್ ಮಧ್ಯ ಕ್ಷೇತ್ರದ ಚುನಾವಣಾ ಫಲಿತಾಂಶ ಪ್ರಕಟವಾದ ನಂತರ ಬಿಜೆಪಿ ಕಾರ್ಯಕರ್ತ ದೇವೇಂದ್ರ ಠಾಕೂರ್ ಮೇಲಿನ ಹಲ್ಲೆ ಪ್ರಕರಣದಲ್ಲಿ ರೈನ್ ಪ್ರಮುಖ ಆರೋಪಿಯಾಗಿದ್ದಾನೆ. ಅವನು ಮತ್ತು ಇತರ ಕೆಲವು ಜನರು ಠಾಕೂರ್ ಅವರನ್ನು ಹ್ಯಾಕ್ ಮಾಡಿದ್ದರು. ಈ ಪ್ರಕರಣದಲ್ಲಿ ನಾಲ್ವರು ಸೇರಿ ರೈನ್ ಅವರನ್ನು ಬಂಧಿಸಲಾಗಿದ್ದು, ಕೊಲೆ ಯತ್ನ ಪ್ರಕರಣ ದಾಖಲಿಸಲಾಗಿದೆ.

Read More

ಇಂದು ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವದ ಅತೀ ದೊಡ್ಡ ಕಚೇರಿ ಸೂರತ್ ನ ‘ಡೈಮಂಡ್ ಬೋರ್ಸ್’ ಅನ್ನು ಉದ್ಘಾಟಿಸಲಿದ್ದಾರೆ. ಮೋದಿ ಅವರು ಇಂದು ಗುಜರಾತ್‌ ನ ಸೂರತ್ ಮತ್ತು ಉತ್ತರ ಪ್ರದೇಶದ ವಾರಣಾಸಿಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಸೂರತ್ ವಿಮಾನ ನಿಲ್ದಾಣದಲ್ಲಿ ನೂತನ ಇಂಟಿಗ್ರೇಟೆಡ್ ಟರ್ಮಿನಲ್ ಕಟ್ಟಡವನ್ನು ಪ್ರಧಾನಿ ಉದ್ಘಾಟಿಸಲಿದ್ದಾರೆ. ಟರ್ಮಿನಲ್ ಕಟ್ಟಡವು 1200 ದೇಶೀಯ ಪ್ರಯಾಣಿಕರು ಮತ್ತು 600 ಅಂತರರಾಷ್ಟ್ರೀಯ ಪ್ರಯಾಣಿಕರನ್ನು ಪೀಕ್ ಅವರ್‌ ನಲ್ಲಿ ನಿರ್ವಹಿಸಲು ಸುಸಜ್ಜಿತವಾಗಿದೆ. ಪೀಕ್ ಅವರ್ ಸಾಮರ್ಥ್ಯವನ್ನು 3000 ಪ್ರಯಾಣಿಕರಿಗೆ ಮತ್ತಷ್ಟು ಹೆಚ್ಚಿಸುವ ಸಾಮರ್ಥ್ಯ ಹೊಂದಿದೆ. ಇದಾದ ಬಳಿಕ ಮೋದಿ ವಾರಣಾಸಿಗೆ ಪ್ರಯಾಣಿಸಲಿದ್ದು, ಮಧ್ಯಾಹ್ನ 3:30ಕ್ಕೆ ವಿಕ್ಷಿತ್ ಭಾರತ್ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ. ಸಂಜೆ 5:15 ರ ಸುಮಾರಿಗೆ ಅವರು ನಮೋ ಘಾಟ್‌ನಲ್ಲಿ ಕಾಶಿ ತಮಿಳು ಸಂಗಮಂ 2023 ಅನ್ನು ಉದ್ಘಾಟಿಸಲಿದ್ದಾರೆ.

Read More

ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಕ್ರಿಕೆಟ್ ಸರಣಿಯಲ್ಲಿ ಭಾರತ ತಂಡ ಇಂದು ಮೊದಲ ಪಂದ್ಯವನ್ನು ಆಡಲಿದೆ. ಮೊದಲ ಪಂದ್ಯ ಇಂದು ವಾಂಡರರ್ಸ್ ಕ್ರೀಡಾಂಗಣದಲ್ಲಿ ನಡೆಯಲಿದೆ. ವಿಶ್ವಕಪ್ ಕ್ರಿಕೆಟ್ ಫೈನಲ್ ನಂತರ ಟೀಂ ಇಂಡಿಯಾ ಆಡುತ್ತಿರುವ ಮೊದಲ ಏಕದಿನ ಪಂದ್ಯ ಇದಾಗಿದೆ. ಇನ್ನು ಕನ್ನಡಿಗ ಕೆ.ಎಲ್. ರಾಹುಲ್’ ಆಫ್ರಿಕಾ ವಿರುದ್ಧ ನಡೆಯಲಿರುವ ಸರಣಿಯಲ್ಲಿ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ಹೀಗಾಗಿ ರಾಹುಲ್ ಅವರಿಗೂ ಇದು ಮಹತ್ವದ ಸರಣಿಯಾಗಿದೆ. 2025ರಲ್ಲಿ ನಡೆಯಲಿರುವ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯಲ್ಲಿ ಆಡುವ ತಂಡ ಕಟ್ಟಲು ಈಗಿನಿಂದಲೇ ತಯಾರಿ ಮಾಡಲು ಈ ಸರಣಿ ಮುಖ್ಯ ಎಂದು ಹೇಳಲಾಗಿದೆ. ಈ ಸರಣಿಯಲ್ಲಿ ಭಾರತ ತಂಡ ಜಯಿಸಿದರೆ, ರಾಹುಲ್ ಮುಂದಿನ ದಿನಗಳಲ್ಲಿ ಟೀಂ ಇಂಡಿಯಾಗೆ ಪೂರ್ಣ ಪ್ರಮಾಣದ ನಾಯಕನಾಗುವ ಅವಕಾಶದ ಬಾಗಿಲು ತೆರೆಯಲಿದೆ.

Read More

ಕೇರಳದ ಕಣ್ಣೂರಿನಲ್ಲಿ ಕೊರೋನಾಗೆ ವೃದ್ಧ ಬಲಿಯಾಗಿದ್ದಾರೆ. ದೇಶಾದ್ಯಂತ ಕೋವಿಡ್ ಹೆಚ್ಚಳದ ಆತಂಕ ಸೃಷ್ಠಿಸಿದೆ. ಕೇರಳದ ಕಣ್ಣೂರಿನಲ್ಲಿ ಕೋವಿಡ್ ಸೋಂಕಿನಿಂದಾಗಿ 80 ವರ್ಷದ ವೃದ್ಧ ಸಾವನ್ನಪ್ಪಿದ್ದಾರೆ. ಹೀಗಾಗಿ ಕಣ್ಣೂರಿನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಕೊರೋನಾ ಉಪ ತಳಿ ಜೆಎನ್.1 ಗೆ ವೃದ್ಧ ಬಲಿಯಾಗಿರುವ ವಿಷಯ ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ಕರ್ನಾಟಕದಲ್ಲೂ ಕೋವಿಡ್ ಆತಂಕ ಸೃಷ್ಠಿಯಾಗಿದೆ. ಕೇರಳದಲ್ಲಿ ದಿನೇ ದಿನೇ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ಹೀಗಾಗಿ ಅಲ್ಲಿನ ಸರಕಾರ ಹೆಚ್ಚಿನ ನಿಗಾ ವಹಿಸಿದೆ.

Read More

ಕುವೈತ್’ನ ಎಮಿರ್ ಶೇಖ್ ನವಾಫ್ ಅಲ್-ಅಹ್ಮದ್ ಅಲ್-ಜಾಬರ್ ಅಲ್-ಸಬಾಹ್ ಅವರಿಗೆ ಗೌರವ ಸೂಚಕವಾಗಿ ಕೇಂದ್ರ ಸರ್ಕಾರವು ಇಂದು ದೇಶಾದ್ಯಂತ ಒಂದು ದಿನದ ಶೋಕಾಚರಣೆ ಘೋಷಿಸಿದೆ. ಕುವೈತ್ ರಾಜ್ಯದ ಅಮೀರ್ ಶೇಖ್ ನವಾಫ್ ಅಲ್-ಅಹ್ಮದ್ ಅಲ್-ಜಾಬರ್ ಅಲ್-ಸಬಾಹ್ ಅವರು ನಿನ್ನೆ ನಿಧನರಾಗಿದ್ದರು. ಇಂದು ತ್ರಿವರ್ಣ ಧ್ವಜವನ್ನು ಭಾರತದಾದ್ಯಂತ ನಿಯಮಿತವಾಗಿ ಹಾರಿಸುವ ಎಲ್ಲಾ ಕಟ್ಟಡಗಳ ಮೇಲೆ ಅರ್ಧಮಟ್ಟದಲ್ಲಿ ಹಾರಿಸಲಾಗುವುದು. ಅಗಲಿದ ಗಣ್ಯರಿಗೆ ಗೌರವದ ಸಂಕೇತವಾಗಿ, ಕೇಂದ್ರ ಸರ್ಕಾರವು ಇಂದು ಭಾರತದಾದ್ಯಂತ ಒಂದು ದಿನದ ರಾಜ್ಯ ಶೋಕಾಚರಣೆ ನಡೆಸಲು ನಿರ್ಧರಿಸಿದೆ ಎಂದು ಗೃಹ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ. ಶೋಕಾಚರಣೆಯ ದಿನದಂದು ಯಾವುದೇ ಅಧಿಕೃತ ಮನರಂಜನೆ ಇರುವುದಿಲ್ಲ ಎಂದು ಗೃಹ ಸಚಿವಾಲಯ ತಿಳಿಸಿದೆ.

Read More

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಬಹುತೇಕ ಸಿದ್ಧವಾಗಿದ್ದು, ಜನವರಿ 22 ರಂದು ಮಧ್ಯಾಹ್ನ 12 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಜನವರಿ 22 ರಂದು ಮಧ್ಯಾಹ್ನ 12 ಗಂಟೆಗೆ ಸಮಾರಂಭ ನಡೆಯಲಿದೆ. ಹೀಗಾಗಿ ಅಂದು ಯಾವ ಭಕ್ತರು ಅಯೋಧ್ಯೆಗೆ ಆಗಮಿಸಬಾರದು ಎಂದು ರಾಮಮಂದಿರ ಟ್ರಸ್ಟ್ ಕಾರ್ಯದರ್ಶಿ ಚಂಪತ್ ರಾಯ್ ತಿಳಿಸಿದ್ದಾರೆ. ಈ ಕುರಿತು ಭಕ್ತರಿಗೆ ನೀಡಿದ ಸಂದೇಶದಲ್ಲಿ ಅವರು, “ಜನವರಿ 22 ರಂದು ಅಯೋಧ್ಯೆಗೆ ಬರಬೇಡಿ. ನಿಮಗೆ ಹತ್ತಿರವಿರುವ ದೇವಸ್ಥಾನದಲ್ಲಿ ಸಂಭ್ರಮ ಆಚರಿಸಿ ಎಂದು ಮಾಹಿತಿ ನೀಡಿದ್ದಾರೆ. ಅಂದಹಾಗೆ ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಪಟ್ಟಣದಲ್ಲಿ ಜನದಟ್ಟಣೆಯನ್ನು ತಪ್ಪಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ.

Read More

ಸಾಕಾನೆ ದಾಳಿಗೆ ಆದಿವಾಸಿ ವ್ಯಕ್ತಿ ಬಲಿಯಾಗಿರುವ ಘಟನೆ ತಮಿಳುನಾಡಿನ ತೆಪ್ಪಕಾಡು ಆನೆ ಶಿಬಿರದಲ್ಲಿ ನಡೆದಿದೆ. ಇತ್ತೀಚಿಗೆ ರಾಷ್ಟ್ರಪತಿ ದ್ರೌಪದಿಮುರ್ಮು ಅವರು ಮತ್ತು ಪ್ರಧಾನಿ ಮೋದಿ ತೆಪ್ಪಕಾಡು ಆನೆ ಶಿಬಿರಕ್ಕೆ ಭೇಟಿ ನೀಡಿದ್ದರು. ಮಧುಮಲೈ ಹುಲಿ ಸಂರಕ್ಷಿತ ಪ್ರದೇಶದಲ್ಲಿರುವ ತೆಪ್ಪಕಾಡು‌ ಆನೆ ಶಿಬಿರ ಇದಾಗಿದ್ದು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಹೊಂದಿಕೊಂಡಿದೆ. ಇದೇ ಶಿಬಿರದಲ್ಲಿ ಈ ಘಟನೆ ನಡೆದಿದೆ. ವಿಲ್ಸನ್ ಎಂಬ ಸಾಕಾನೆ ಆದಿವಾಸಿ ವ್ಯಕ್ತಿ ಸಿ.ಕೆ.ಮಥನ್ ಎಂಬ ವ್ಯಕ್ತಿ ದಾಳಿ ಮಾಡಿದ್ದು ಸಿ.ಕೆ.ಮಥನ್ ಸಾವನ್ನಪ್ಪಿದ್ದಾರೆ.  ಆನೆ ಶಿಬಿರದಲ್ಲಿರುವ ಮಾವುತರ ಮನೆಗೆ ಸಂಬಂಧಿ ಮಥನ್ ಬಂದಿದ್ದರು. ಈ ವೇಳೆ ಏಕಾಏಕಿ ಆನೆ ದಾಳಿ ನಡೆಸಿದೆ.  ಸ್ಥಳಕ್ಕೆ ತಮಿಳುನಾಡಿನ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

8 ಬಾರಿ ಮೈಸೂರು ದಸರಾ ಅಂಬಾರಿ ಹೊತ್ತು  ಯಶಸ್ವಿಯಾಗಿದ್ದ ಅರ್ಜುನ ಆನೆ   ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಮೃತಪಟ್ಟು 11 ದಿನಗಳು ಕಳೆದಿದ್ದು, ಈ ನಡುವೆ ಅರ್ಜುನನ್ನ ನೆನೆದು ಮಾವುತ ವಿನು ಕಣ್ಣೀರು ಹಾಕಿದ್ದಾರೆ. 11 ದಿನದ ಅರಾಧನೆ ಕಾರ್ಯ ಹಿನ್ನೆಲೆ ವಿನು ಕುಟುಂಬ ಸಮೇತವಾಗಿ ಅರ್ಜುನ ಆನೆ ಸಮಾಧಿ ಬಳಿ ಆಗಮಿಸಿ  ಪೂಜೆ ಸಲ್ಲಿಕೆ ಮಾಡಿದರು.  ಅರ್ಜುನನಿಗೆ ಪ್ರಿಯವಾದ ಕಬ್ಬು, ಬೆಲ್ಲ, ಹುಲ್ಲು, ಭತ್ತ, ಅನ್ನದ ಮುದ್ದೆ ಎಡೆ ಇಟ್ಟು, ತಿಂಡಿ ತಿನಿಸು ಹಣ್ಣು ಹಂಪಲು ಇಟ್ಟು ಪೂಜೆ ಸಲ್ಲಿಸಿದರು. ತನ್ನ ಪ್ರೀತಿಯ ಆನೆ ಕಳೆದುಕೊಂಡು ಕಂಗೆಟ್ಟಿರುವ ಮಾವುತನ ಕುಟುಂಬ ಸಮಾಧಿ ಬಳಿ ರೋದಿಸುತ್ತಾ ಕುಳಿತ ದೃಶ್ಯ ಕಂಡು ಬಂದಿತು.. ಈ ವೇಳೆ ಎದ್ದೇಳು ಅರ್ಜುನ ಎಂದು ಮಾವುತ ವಿನು ಬಿಕ್ಕಿ ಬಿಕ್ಕಿ ಅತ್ತಿದ್ದು ಅಪ್ಪ‌ ನನ್ನ ಸ್ವಾಮಿಯನ್ನು ಎಬ್ಬಿಸು. ಎಂತಹ ಧೈರ್ಯವಂತ ನೀನು, ಯಾವ ಆನೆಗೂ ಬಗ್ಗುತ್ತಿರಲಿಲ್ಲ ಎಲ್ಲಾ ಮೋಸ ಮಾಡಿದ್ರು ಎಂದು  ಮಾವುತ ವಿನು ರೋಧಿಸಿದರು.

Read More

ಮಹಾರಾಷ್ಟ್ರ: ಅತಿರೇಕಕ್ಕೇರಿದ ಜಗಳದಿಂದಾಗಿ  ವ್ಯಕ್ತಿಯೊಬ್ಬ ತನ್ನ ಗೆಳತಿಯ ಕಾಲಿನ ಮೇಲೆಯೇ ಕಾರು ಹತ್ತಿಸಿರುವ ಘಟನೆ ನಡೆದಿದೆ. ಆತ ಮಹಾರಾಷ್ಟ್ರ ಹಿರಿಯ ಅಧಿಕಾರಿಯೊಬ್ಬರ ಮಗನಾಗಿದ್ದು, ಥಾಣೆಯ ಹೋಟೆಲ್ ಬಳಿ ಗೆಳತಿ ಕಾಲಿನ ಮೇಲೆ ಕಾರು ಹತ್ತಿಸಿದ್ದಾನೆ. ಡಿಸೆಂಬರ್ 11 ರಂದು ಘಟನೆ ನಡೆದಿದ್ದು, ಆರೋಪಿ ಅಶ್ವಜಿತ್ ಗಾಯಕ್ವಾಡ್ ಮತ್ತು ಇತರ ಇಬ್ಬರ ವಿರುದ್ಧ ಪೊಲೀಸರು ಭಾರತೀಯ ದಂಡ ಸಂಹಿತೆ ಸೆಕ್ಷನ್ 323 (ಸ್ವಯಂಪ್ರೇರಿತವಾಗಿ ಗಾಯಗೊಳಿಸುವುದು), 279 (ಉದ್ದೇಶಪೂರಿತ ಚಾಲನೆ), 504 (ಉಲ್ಲಂಘನೆಯನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸೋಮವಾರ ಘೋಡ್ ಬಂದರ್ ರಸ್ತೆಯ ಹೋಟೆಲ್ ಬಳಿ ಈ ಘಟನೆ ನಡೆದಿದ್ದು, ಅಲ್ಲಿ ಯುವತಿ ಅಶ್ವಜಿತ್ ಗಾಯಕ್ವಾಡ್ ಅವರನ್ನು ಭೇಟಿಯಾಗಲು ಹೋಗಿದ್ದರು. ಇಬ್ಬರ ನಡುವೆ ವಾಗ್ವಾದ ನಡೆಯಿತು. ನಂತರ, ಸಂತ್ರಸ್ತೆ ಕಾರಿನಿಂದ ವಸ್ತುಗಳನ್ನು ತೆಗೆದುಕೊಂಡು ಹೊರಡಲು ಸಿದ್ಧಳಾದಾಗ ಆಕೆಯ ಕಾಲಿನ ಮೇಲೆ ಕಾರು ಹತ್ತಿಸಿದ್ದಾನೆ. ಘಟನೆ ಬಳಿಕ ಯುವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೋಸ್ಟ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.…

Read More

ಆತ ಮದುವೆಯಾಗಿ ಪತ್ನಿಗೆ ವಿಚ್ಛೇದನ ಕೊಟ್ಟಿದ್ದ. ಈ ನಡುವೆ ಮೂರು ವರ್ಷದ ಹಿಂದೆ ಮತ್ತೊಬ್ಬಳ ಜೊತೆ ಮದುವೆಯಾಗಿದ್ದನು. ಅವಳಿಗೂ ಪತಿಯಿಂದ ವಿಚ್ಛೇದನವಾಗಿತ್ತು. ಇಬ್ಬರೂ ಜೀವನದಲ್ಲಿ  ವಿಚ್ಛೇದನವಾದ ನಂತರ  ಎರಡನೆಯ ಕೌಟುಂಬಿಕ ಜೀವನ  ಆರಂಭಿಸಿದ್ದರು. ಈ ನಡುವೆ ಪತಿರಾಯ ಎರಡನೇ ಪತ್ನಿಗೂ ಮೋಸ ಮಾಡಿ ಮತ್ತೊಬ್ಬಳ ಜೊತೆ ಅನೈತಿಕ ಸಂಬಂಧ ಬೆಳೆಸಿದ್ದ. ಆ ಅನೈತಿಕ ಸಂಬಂಧ ಪ್ರಶ್ನೆ ಮಾಡಿದ ಎರಡನೇ ಪತ್ನಿ ಈಗ ಜೀವ ಕಳೆದುಕೊಂಡಿದ್ದಾಳೆ. ಪತಿಯು ಎರಡನೇ ಪತ್ನಿ ರಮ್ಯಾಗೂ ವಂಚನೆ ಮಾಡಿ ಬೆಂಗಳೂರಿನಲ್ಲಿ ಸಂಬಂಧಿ ಮಹಿಳೆಯ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ ಸುದ್ದಿಯು ಪತ್ನಿ ರಮ್ಯಾಗೆ ಗೊತ್ತಾಗಿದೆ. ಬೆಂಗಳೂರಿನಲ್ಲಿ ಪತಿಯು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ. ಈ ಘಟನೆ ಬಳಿಕ ಪತಿ ಮತ್ತು ಪತ್ನಿ ನಡುವೆ ಅನೈತಿಕ ಸಂಬಂಧ ವಿಚಾರವಾಗಿ ಪದೇ ಪದೇ ಜಗಳ ಶುರುವಾಗಿತ್ತು. ಮೊನ್ನೆ  ರಾತ್ರಿ ಪತಿ-ಪತ್ನಿ ನಡುವೆ ಇದೇ ವಿಚಾರಕ್ಕಾಗಿ ಗಲಾಟೆ ಶುರುವಾಗಿ, ಪತಿಯು ಅಡುಗೆ ಮನೆಯಲ್ಲಿದ್ದ ಚಾಕು ತೆಗೆದುಕೊಂಡು ಪತ್ನಿಯ ಕತ್ತು ಸೀಳಿ ಕೊಲೆ…

Read More