Subscribe to Updates
Get the latest creative news from FooBar about art, design and business.
- 14 ವರ್ಷದ ಬಾಲಕಿ ತಾಯಿಯಾದ ಪ್ರಕರಣ; ಪೋಕ್ಸೋ ಕೇಸ್ ದಾಖಲು: ನಾಲ್ವರು ವೈದ್ಯರ ವಿರುದ್ಧವೂ FIR
- ಸರ್ಕಾರದ ಚಿತಾವಣೆಯಿಂದ ಬಿಡದಿ ಟೌನ್ ಶಿಪ್ ಗೆ ಸರ್ವೆ: ಹೆಚ್.ಡಿ. ಕುಮಾರಸ್ವಾಮಿ ಆರೋಪ
- ಬಿಡದಿ ಟೌನ್ ಶಿಪ್ ಜಟಾಪಟಿ: ಸರ್ವೆಗೆ ಬಂದ ಅಧಿಕಾರಿಗಳಿಗೆ ರೈತರಿಂದ ಪೊರಕೆ ಏಟು!
- ಸರಗೂರು: ವಿದ್ಯಾರ್ಥಿಗಳ ಭವಿಷ್ಯಕ್ಕೆ ಶಿಕ್ಷಣವೇ ಭದ್ರ ಬುನಾದಿ: ಶಂಭುಮೂರ್ತಿ
- ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ: ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್
- ಮನೆಗೆ ಮರು ಪೇಂಟಿಂಗ್ ಮಾಡಿಸುವಾಗ ಈ ತಪ್ಪುಗಳನ್ನು ಮರೆತೂ ಮಾಡಬೇಡಿ!
- ತುಮಕೂರು: ಎಸ್ ಐಆರ್ ಗೊಂದಲ, ಹೆಲ್ಪ್ ಲೈನ್ ಗೆ ಚಾಲನೆ ನೀಡಿದ ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ್ ಹಾಲಪ್ಪ
- ತುಮಕೂರು: ಮಕ್ಕಳ ಜನನ ಪ್ರಮಾಣಪತ್ರ ಲೋಪದೋಷ ನಿವಾರಣೆಗೆ ಸರ್ಕಾರಿ ಆದೇಶ
Author: admin
ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದ ಪರೇಡ್ ಗಾಗಿ ಕಳುಹಿಸಲಾಗಿದ್ದ ಕರ್ನಾಟಕದ ನಾಲ್ಕು ಟ್ಯಾಬ್ಲೋ ಪರಿಕಲ್ಪನೆಗಳನ್ನು ಆಯ್ಕೆ ಸಮಿತಿ ತಿರಸ್ಕರಿಸಿದ್ದು, ರಾಜ್ಯದ 7 ಕೋಟಿ ಕನ್ನಡಿಗರಿಗೆ ಕೇಂದ್ರ ಸರ್ಕಾರ ಅವಮಾನ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಟ್ವೀಟ್ (ಎಕ್ಸ್) ಮಾಡಿದ ಸಿದ್ದರಾಮಯ್ಯ, ಜನವರಿ 26ರಂದು ಹೊಸದಿಲ್ಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡುವ ಮೂಲಕ ಕೇಂದ್ರ ಸರ್ಕಾರವು ನಾಡಿನ ಏಳು ಕೋಟಿ ಕನ್ನಡಿಗರಿಗೆ ಅಪಮಾನ ಮಾಡಿದೆ. ಕಳೆದ ವರ್ಷ ಕೂಡ ಮೊದಲಿಗೆ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡಿ, ವಿವಾದದ ಸ್ವರೂಪ ಪಡೆದ ನಂತರ ಅನುಮತಿ ನೀಡಿತ್ತು, ಈ ಬಾರಿ ಮತ್ತೆ ಕನ್ನಡಿಗರನ್ನು ಅವಮಾನಿಸುವ ತನ್ನ ಚಾಳಿಯನ್ನು ಮುಂದುವರೆಸಿದೆ ಎಂದರು.
ರಾಜ್ಯದಲ್ಲಿ ಸರಿಯಾಗಿ ಮಳೆಯಾಗದೇ ಭೀಕರ ಬರಗಾಲವಿದೆ. ಆದರೂ ಸಹ ರಾಜ್ಯ ಕಾಂಗ್ರೆಸ್ ಸರ್ಕಾರ ಜನರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಟೀಕಿಸಿದರು. ಮಾಧ್ಯಮಗಳ ಜೊತೆ ಮಾತನಾಡಿದ ಬಸವರಾಜ ಬೊಮ್ಮಾಯಿ, ಬರ, ಪ್ರವಾಹದಂತಹ ಸಂಕಷ್ಟ ಸಂದರ್ಭದಲ್ಲಿ ಜನರ ನೆರವಿಗೆ ಸರ್ಕಾರ ಧಾವಿಸಿ ಸಹಾಯ ಮಾಡಿದರೆ ಸರ್ಕಾರ ಜೀವಂತ ಇದ್ದಂತೆ. ಸಂಕಷ್ಟದಲ್ಲಿರುವ ರೈತರ ಕಡೆಗೆ ನೋಡದಿದ್ದರೆ ಅದು ಸತ್ತಂತೆ. ರಾಜ್ಯ ಸರ್ಕಾರ ಎನ್ಡಿಆರ್ ಎಫ್ ಮತ್ತು ಎಸ್ಡಿ ಆರ್ಎಫ್ ನಿಯಮದಲ್ಲಿ ಎಷ್ಟು ಹಣವಿದೆ ಎಂಬುದನ್ನು ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದರು. 18 ಸಾವಿರ ಕೋಟಿ ರೂ. ಬರಪರಿಹಾರಕ್ಕೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಿದೆ. ಆದರೆ ರೈತರಿಗೆ ತಲಾ 2000 ರೂ. ನೀಡುವುದಾಗಿ ಹೇಳಿ ತಿಂಗಳು ಕಳೆದರೂ ರಾಜ್ಯ ಸರ್ಕಾರ ಹಣ ಬಿಡುಗಡೆ ಮಾಡಿಲ್ಲ. ಆಧಾರ್ ಜೋಡಣೆಯ ಕಥೆ ಹೇಳುತ್ತಿದ್ದಾರೆ. ಫ್ರೂಟ್ಸ್ ತಂತ್ರಾಂಶದಲ್ಲಿ ರೈತರ ಸಂಪೂರ್ಣ ಮಾಹಿತಿ ಇದೆ. ನಮ್ಮ ಸರ್ಕಾರದ ಅವಧಿಯಲ್ಲಿ 14 ಲಕ್ಷ ರೈತರಿಗೆ ನೇರವಾಗಿ ಹಣ…
ಕರ್ನಾಟಕ ರಾಜ್ಯದ ಗ್ರಾಹಕರ ವ್ಯಾಜ್ಯ ಗಳ ಪರಿಹಾರ ಖಾಯಂ ಪೀಠವನ್ನು ಬೆಳಗಾವಿ ಯಲ್ಲಿ ಪ್ರಾರಂಭಿಸಬೇಕು ಎಂದು ಅಹಿಂದ ನ್ಯಾಯವಾದಿಗಳ ಸಂಘ ಬೆಳಗಾವಿ ಎನ್ ಆರ್ ಲಾತೂರ್ ಅವರ ನೇತೃತ್ವದಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಗಳ ಆವರಣದಲ್ಲಿ ಧರಣಿ ಸತ್ಯಾಗ್ರಹ ಮಾಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ನ್ಯಾಯವಾದಿ ಲಾತೂರವರು ಬೆಳಗಾವಿ ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯ ಗಳಪರಿಹಾರ ಖಾಯಂ ಪೀಠವನ್ನು ಬೆಳಗಾವಿಯಲ್ಲಿ ಪ್ರಾರಂಭಿಸಬೇಕು. ಕಳೆದ ನಾಲ್ಕು ವರ್ಷಗಳಿಂದ ಹೋರಾಟ ಮಾಡುತ್ತಿದ್ದೇವೆ ಮತ್ತು ಈಗಾಗಲೇ ಬೆಳಗಾವಿಯಲ್ಲಿ ಸ್ಥಾಪನೆ ಮಾಡಲಾಗಿದೆ ಆದರೆ ಇನ್ನೂ ಕಾರ್ಯ ಆರಂಭವಾಗಿರುವುದಿಲ್ಲ. ಅದಕ್ಕಾಗಿ ತಕ್ಷಣವೇ ಕರ್ನಾಟಕ ಸರ್ಕಾರ ರಾಜ್ಯ ಗ್ರಾಹಕರ ವ್ಯಾಜ್ಯಗಳನ್ನು ಪರಿಹಾರ ಆಯೋಗ ಪೀಠ ಪ್ರಾರಂಭ ಮಾಡಬೇಕು. ಬೆಳಗಾವಿ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಠೇವಣಿದಾರರು ಖಾಸಗಿ ಸಹಕಾರಿ ಸಂಸ್ಥೆಗಳು ಹಣ ಠೇವಣಿ ಮಾಡಿರುತ್ತಾರೆ. ಆದರೆ ಸಹಕಾರಿ ಹಾಗೂ ಸೌಹಾರ್ದದ ಸೊಸೈಟಿಗಳು ವಂಚನೆ ಮಾಡಿರುತ್ತಾರೆ. ಇಂತಹ ಪ್ರಕರಣಗಳಿಗೆ ನ್ಯಾಯ ಸಿಗಲು ವಿಳಂಬ ಹಾಗೂ ನ್ಯಾಯ ಪಡೆಯಲು ಬೆಂಗಳೂರಿಗೆ ಹೋಗಬೇಕಾಗುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಉತ್ತರ…
ಪ್ರತಾಪ್ ಸಿಂಹ ನ್ಯಾಷನಲ್ ಲೀಡರಾ? ಎಂಬ ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಟೀಕೆಗೆ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ. ಈ ಕುರಿತು ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಖಂಡಿತ ನಾನು ನ್ಯಾಷನಲ್ ಲೀಡರ್ ಅಲ್ಲ. ಸಾಮಾನ್ಯ ಕುಟುಂಬದ ಹಿನ್ನೆಲೆಯಲ್ಲಿ ಬಂದು ಬರವಣಿಗೆ ಮೂಲಕ ಹೆಸರು ಸಂಪಾದಿಸಿ ಈ ಸ್ಥಾನಕ್ಕೆ ಬಂದಿದ್ದೇನೆ. ಅಪ್ಪ ಸಿಎಂ ಆಗಿದ್ದರೆ ತನ್ನ ಖಾಸಗಿ ಲ್ಯಾಬ್ ಗೆ ಗುತ್ತಿಗೆ ಪಡೆದು ಕೊಳ್ಳುವಂತವರು ನ್ಯಾಷನಲ್ ಲೀಡರ್. ಅಪ್ಪನ ನೆಲೆ ಬಿಡಿಸಿ ಬದಾಮಿ ಕ್ಷೇತ್ರಕ್ಕೆ ಓಡಿಸುವವರು ನ್ಯಾಷನಲ್ ಲೀಡರ್. ತಾನು ಹೇಳಿದ ವರ್ಗಾವಣೆ ಲಿಸ್ಟ್ ಗೆ ಸಹಿ ಮಾಡಿ ಅಂತಾ ಸಿಎಂ ಮೇಲೆ ಒತ್ತಡ ತರುವವರು ನ್ಯಾಷನಲ್ ಲೀಡರ್. ಮೈಸೂರು ಭಾಗದ ನಿಜವಾದ ನ್ಯಾಷನಲ್ ಲೀಡರ್ ಯತೀಂದ್ರ ಸಿದ್ದರಾಮಯ್ಯ ಎಂದು ಟಾಂಗ್ ನೀಡಿದರು.
ಲಕ್ಷದ್ವೀಪದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಿಸುವ ಯೋಜನೆ. ಮಿನಿಕಾಯ್ ದ್ವೀಪದಲ್ಲಿ ವಿಮಾನ ನಿಲ್ದಾಣ ನಿರ್ಮಿಸುವ ಪ್ರಸ್ತಾವನೆ. ವಿಮಾನ ನಿಲ್ದಾಣವು ಮಿಲಿಟರಿ ಮತ್ತು ಸಾರ್ವಜನಿಕ ಬಳಕೆಗಾಗಿ. ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯ ನಂತರ ಭಾರತದಲ್ಲಿ ಲಕ್ಷದ್ವೀಪ ಪ್ರವಾಸಕ್ಕೆ ಕರೆ ನೀಡುವ ಪ್ರಚಾರ ನಡೆಯುತ್ತಿದೆ. ಅತ್ಯಾಧುನಿಕ ವಿಮಾನ ನಿಲ್ದಾಣವು ಮಾರ್ಚ್ 31, 2026 ರೊಳಗೆ ಕಾರ್ಯನಿರ್ವಹಿಸಲಿದೆ ಎಂದು ವರದಿಯಾಗಿದೆ. ದ್ವೀಪ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಭಾಗವಾಗಿ ಲಕ್ಷದ್ವೀಪದತ್ತ ಕೇಂದ್ರ ಗಮನಹರಿಸಿದೆ. ಶೀಘ್ರವಾಗಿ ಯೋಜನೆ ಸಾಕಾರಗೊಳ್ಳುವ ಗುರಿ ಹೊಂದಲಾಗಿದೆ. ಬಾಲಿವುಡ್, ಕ್ರಿಕೆಟ್ ತಾರೆಯರು ಮಾತ್ರವಲ್ಲದೆ ಪ್ರಮುಖ ರಾಜಕಾರಣಿಗಳು ಕೂಡ ಪ್ರಚಾರದ ಭಾಗವಾಗಿದ್ದಾರೆ. ಬಂಗಾರಂ ವಿಮಾನ ನಿಲ್ದಾಣಗಳು ಕಾರ್ಯನಿರ್ವಹಿಸುತ್ತಿದ್ದರೂ ಕೊಚ್ಚಿ ನೆಡುಂಬಶ್ಶೇರಿ ವಿಮಾನ ನಿಲ್ದಾಣದಿಂದ ಮಾತ್ರ ಇಲ್ಲಿ ಸೇವೆ ಇದೆ.
ಇನ್ ಸ್ಟಾಗ್ರಾಮ್ ರೀಲ್ ಮಾಡಲು ಬಿಡದ ಪತಿಯನ್ನು ಮಹಿಳೆ ಕೊಂದಿದ್ದಾಳೆ. ಬಿಹಾರದಲ್ಲಿ ಘಟನೆ ನಡೆದಿದೆ. ಮಹಿಳೆ ತನ್ನ ಪ್ರಿಯಕರ ಮತ್ತು ಇಬ್ಬರು ಸಹೋದರಿಯರ ಸಹಾಯದಿಂದ ಪತಿಯನ್ನು ಕೊಂದಿದ್ದಾಳೆ. ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೇಗುಸರಾಯ್ ನ ಫಾಫೌಟ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸಮಸ್ತಿಪುರ್ ಜಿಲ್ಲೆಯ ನರ್ಹಾನ್ ಗ್ರಾಮದ ಮಹೇಶ್ವರ್ ಕುಮಾರ್ ರೈ (25) ಎಂಬಾತನನ್ನು ಆತನ ಪತ್ನಿ ರಾಣಿ ಕೊಲೆ ಮಾಡಿದ್ದಾಳೆ. ಮಹೇಶ್ವರ್ ಕೋಲ್ಕತ್ತಾದಲ್ಲಿ ಕಾರ್ಮಿಕ. ಕೆಲ ದಿನಗಳ ಹಿಂದೆ ಬಿಹಾರ ತಲುಪಿದ್ದರು. ಮಹೇಶ್ವರ್ ಹಿಂತಿರುಗಿದಾಗ, ರಾಣಿ ಫಾಫೌಟ್ ನಲ್ಲಿರುವ ತನ್ನ ತಾಯಿಯ ಮನೆಯಲ್ಲಿದ್ದಳು. ಅವರೂ ಇಲ್ಲಿಗೆ ಬಂದರು. ಸೋಷಿಯಲ್ ಮೀಡಿಯಾದಲ್ಲಿ ಸಕ್ರಿಯವಾಗಿದ್ದ ರಾಣಿಗೆ ರೀಲ್ ಮಾಡದಂತೆ ಮಹೇಶ್ವರ್ ಕೂಡ ನಿಷೇಧ ಹೇರಿದ್ದರು. ಈ ಬಗ್ಗೆ ಆಗಾಗ್ಗೆ ಜಗಳವಾಡುತ್ತಿರುತ್ತಾರೆ. ಇದ್ಯಾವುದನ್ನೂ ಲೆಕ್ಕಿಸದೆ ರಾಣಿಗೆ ರೀಲುಗಳನ್ನು ತಯಾರಿಸುವುದು ವಾಡಿಕೆಯಾಗಿತ್ತು. ಅತ್ತೆ ಮನೆಯಲ್ಲೂ ರೀಲ್ ವಿಚಾರವಾಗಿ ಇಬ್ಬರ ನಡುವೆ ಜಗಳ ನಡೆದಿದೆ. ಆಗ ರಾಣಿ ಕುಟುಂಬಸ್ಥರೂ ಮಧ್ಯ ಪ್ರವೇಶಿಸಿದರು. ಇದರೊಂದಿಗೆ ಯುವಕನನ್ನು ಕೊಲ್ಲಲು ಯುವತಿ…
ಮಧುಮೇಹ ಚಿಕಿತ್ಸೆಯಲ್ಲಿ ಆಧುನಿಕ ಮತ್ತು ನವೀನ ಕೊಡುಗೆಗಾಗಿ ಡಾ. ಜ್ಯೋತಿದೇವ್ ಕೇಶವದೇವ್ ಅವರಿಗೆ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ವಿಶ್ವ-ಭಾರತ ಮಧುಮೇಹ ಪ್ರತಿಷ್ಠಾನ ಮತ್ತು ಇಂಡಿಯನ್ ಅಕಾಡೆಮಿ ಆಫ್ ಡಯಾಬಿಟಿಸ್ ಜಂಟಿಯಾಗಿ ಮುಂಬೈನಲ್ಲಿ ನಡೆದ ಮಧುಮೇಹ ಕುರಿತ 23ನೇ ಅಂತಾರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಡಾ. ಜ್ಯೋತಿದೇವ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಡಾ. ಶ್ರೀಕುಮಾರನ್ ನಾಯರ್ (ಮೇಯೊ ಕ್ಲಿನಿಕ್, ಅಮೇರಿಕಾ), ಡಾ. ಶಶಾಂಕ್ ಜೋಶಿ, ಡಾ. ಬನ್ಶಿ ಸಾಬು, ಶ್ರೀ. ರಾಮನ್ ಕಪೂರ್ ಮತ್ತು ಶ್ರೀ. ಸೈರಸ್ ಐಬರ ಪ್ರಶಸ್ತಿ ಪ್ರದಾನ ಮಾಡಿದರು. ಮಧುಮೇಹ ಚಿಕಿತ್ಸೆಯಲ್ಲಿ ಆಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಂಡು ರೋಗಿಗಳಿಗೆ ಉತ್ತಮ ಗುಣಮಟ್ಟದ ಜೀವನ ನಡೆಸಲು ಸಾಧ್ಯ. ಡಾ. ಜ್ಯೋತಿದೇವ್ ಅವರಿಗೆ ಸಂಶೋಧನ ಪ್ರಕಟಣೆಗಳಿಗಾಗಿ ಪ್ರಶಸ್ತಿಯನ್ನು ನೀಡಲಾಯಿತು, ಅದು ಕಾರ್ಯಸಾಧ್ಯತೆಯನ್ನು ಪ್ರದರ್ಶಿಸುತ್ತದೆ ಮತ್ತು ಮಧುಮೇಹ ರೋಗಿಗಳಲ್ಲಿ ಅಸಾಮರ್ಥ್ಯವಿಲ್ಲದೆ ವೃದ್ಧಾಪ್ಯದಲ್ಲಿ ದೀರ್ಘಾಯುಷ್ಯವನ್ನು ಹೆಚ್ಚಿಸುತ್ತದೆ. ಮಧುಮೇಹದ ರೋಗ ನಿರ್ಣಯದ ನಂತರ ಹತ್ತು ಹದಿನೈದು ವರ್ಷಗಳ ನಂತರ ಹೃದ್ರೋಗ, ಮೂತ್ರಪಿಂಡದ ಕಾಯಿಲೆ, ಪಾದದ ಹುಣ್ಣು…
‘ಜಬ್ ವೀ ಮೇಟ್’ ಸಿನಿಮಾ ಖ್ಯಾತಿಯ ಸಿಂಗರ್ ಉಸ್ತಾದ್ ರಶೀದ್ ಖಾನ್(55) ಅವರು ಇಂದು ಕ್ಯಾನ್ಸರ್ ನಿಂದ ನಿಧನರಾಗಿದ್ದಾರೆ. ಕೊಲ್ಕತ್ತಾದ ಟಾಟಾ ಮೆಮೊರಿಯಲ್ ಆಸ್ಪತ್ರೆಯಲ್ಲಿ ಸಂಗೀತ ಮಾಂತ್ರಿಕ ಉಸ್ತಾದ್ ಇಹಲೋಕ ತ್ಯಜಿಸಿದ್ದಾರೆ. ಬಾಲಿವುಡ್ ನ ಸಾಕಷ್ಟು ಹಾಡುಗಳಿಗೆ ಧ್ವನಿಯಾಗಿದ್ದ ಉಸ್ತಾದ್ ರಶೀದ್ ಖಾನ್ ಅವರು ಕೆಲ ಸಮಯದಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಅದಕ್ಕಾಗಿ ಸೂಕ್ತ ಚಿಕಿತ್ಸೆ ಕೂಡ ಪಡೆಯುತ್ತಿದ್ದರು. ದೀರ್ಘಕಾಲದಿಂದ ವೆಂಟಿಲೇಟರ್ ನಲ್ಲಿ ಇದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಉಸ್ತಾದ್ ನಿಧನರಾಗಿದ್ದಾರೆ. ಗಾಯಕ ಉಸ್ತಾದ್ ರಶೀದ್ ಖಾನ್ ನಿಧನದ ಬಗ್ಗೆ ವೆಸ್ಟ್ ಬೆಂಗಾಲ್ ಸಿಎಂ ಮಮತಾ ಬ್ಯಾನರ್ಜಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಸಂತಾಪ ಸೂಚಿಸಿದ್ದಾರೆ. ಇಡೀ ದೇಶಕ್ಕೆ ಮತ್ತು ಮ್ಯೂಸಿಕ್ ಬಂಧುಗಳಿಗೆ ಅವರ ನಿಧನದಿಂದ ನಷ್ಟವಾಗಿದೆ. ರಶೀದ್ ಇನ್ನಿಲ್ಲ ಎಂದು ನಂಬಲು ಸಾಧ್ಯವಾಗುತ್ತಿಲ್ಲ ಎಂದು ಬರೆದು ಕೊಂಡಿದ್ದಾರೆ.
ಭಾರತಕ್ಕೆ ಆಗಮಿಸಿದ ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರಿಗೆ ಆತ್ಮೀಯ ಸ್ವಾಗತ ದೊರೆಯಿತು. ಅಹಮದಾಬಾದ್ ನಲ್ಲಿ ಯುಎಇ ಅಧ್ಯಕ್ಷರನ್ನು ಪ್ರಧಾನಿ ನರೇಂದ್ರ ಮೋದಿ ಬರಮಾಡಿಕೊಂಡರು. ವೈಬ್ರೆಂಟ್ ಗುಜರಾತ್ ಶೃಂಗಸಭೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ವೈಬ್ರೆಂಟ್ ಗುಜರಾತ್ ಇಂಟರ್ನ್ಯಾಷನಲ್ ಶೃಂಗಸಭೆಯ 10 ನೇ ಆವೃತ್ತಿಯಲ್ಲಿ ಭಾಗವಹಿಸಲು ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ. ಅಹಮದಾಬಾದ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಯುಎಇ ಅಧ್ಯಕ್ಷರನ್ನು ಪ್ರಧಾನಿ ನರೇಂದ್ರ ಮೋದಿ ಸ್ವಾಗತಿಸಿದರು. ವಿದೇಶಾಂಗ ಸಚಿವ ಎಸ್ ಜೈಶಂಕರ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತಿತರರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಗಾರ್ಡ್ ಆಫ್ ಆನರ್ ಸ್ವೀಕರಿಸಿದ ನಂತರ, ಯುಎಇ ಅಧ್ಯಕ್ಷರು ಸಹ ಪ್ರಧಾನಿಯೊಂದಿಗೆ ರೋಡ್ ಶೋನಲ್ಲಿ ಭಾಗವಹಿಸಿದರು. ವೈಬ್ರೆಂಟ್ ಗುಜರಾತ್ ಶೃಂಗಸಭೆಯಲ್ಲಿ ಯುಎಇ ವಾಣಿಜ್ಯ ಖಾತೆ ರಾಜ್ಯ ಸಚಿವ ಥಾನಿ ಬಿನ್ ಅಹ್ಮದ್ ಅಲ್ ಸೆಯುದಿ ಮತ್ತು ಗಲ್ಫ್ ರಾಷ್ಟ್ರದ ಸಂಪೂರ್ಣ…
ಬೆಳಗಾವಿ: ಅನಾರೋಗ್ಯದಿಂದ ಮೃತರಾದ ಗೋಕಾಕ್ ತಾಲೂಕಿನ ಡುಮ್ಮಉರಬಿನಹಟ್ಟಿಯ ವೀರಯೋಧ ಮಹಾಂತೇಶ ಬ. ಹುಬ್ಬಳ್ಳಿ (31) ಅವರ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಂಬನಿ ಮಿಡಿದಿದ್ದಾರೆ. ಮಹಾಂತೇಶ ಅವರು ಅನಾರೋಗ್ಯದಿಂದ ದೆಹಲಿಯ ಆಸ್ಪತ್ರೆಯಲ್ಲಿ 2 ದಿನಗಳ ಹಿಂದೆ ನಿಧನರಾಗಿದ್ದಾರೆ. ಇಂದು ಯೋಧನ ಪಾರ್ಥಿವ ಶರೀರ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿಗೆ ಆಗಮಿಸಿದ್ದ ಕುಟುಂಬಸ್ಥರನ್ನು ಭೇಟಿ ಮಾಡಿ ಧೈರ್ಯ ತುಂಬಿದ ಸಚಿವರು, ಯೋಧನ ಆತ್ಮಕ್ಕೆ ಶಾಂತಿ ಕೋರಿದರು. ಮದ್ರಾಸ್ ಇಂಜಿನಿಯರಿಂಗ್ ಗ್ರುಪ್ (MEG) ನ ಪಂಜಾಬ್ ಯುನಿಟ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಯೋಧ ಮಹಾಂತೇಶ ಚಿಕ್ಕ ವಯಸ್ಸಿನಲ್ಲಿಯೇ ಮೃತರಾಗಿರುವುದು ದುರ್ದೈವದ ಸಂಗತಿ, ಅವರ ನಿಧನದ ಸುದ್ದಿ ಅತೀವ ನೋವುಂಟು ಮಾಡಿದೆ ಎಂದು ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.