Subscribe to Updates
Get the latest creative news from FooBar about art, design and business.
- ಪ್ರಥಮ ಬಿ.ಸಿ.ಎ. ಪದವಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
- ಕುಣಿಗಲ್ ಪುರಸಭಾ ವ್ಯಾಪ್ತಿಯ ಸಾರ್ವಜನಿಕರಿಗೆ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
- ತುಮಕೂರು: ‘ಕರ್ನಾಟಕ ಪಬ್ಲಿಕ್ ಸ್ಕೂಲ್’ ಸಿನಿಮಾ ಮುಹೂರ್ತ ಸಮಾರಂಭ
- ತುಮಕೂರು: ಪಾದರಕ್ಷೆ ತಯಾರಿಕಾ ಸ್ಪರ್ಧೆಗೆ ಅರ್ಜಿ
- ಭೀಕರ ಅಪಘಾತ: ಶನಿಮಹಾತ್ಮ ದೇವಾಲಯ ವ್ಯವಸ್ಥಾಪಕ ಜಗನ್ನಾಥ್ ನಿಧನ
- ನೈರ್ಮಲ್ಯ ಕಾಪಾಡಿ, ಗರ್ಭಾಶಯದ ಕ್ಯಾನ್ಸರ್ ತಡೆಗಟ್ಟಿ: ಮಹಿಳೆಯರಿಗೆ ಕಾವೇರಿ ಎನ್. ಕರೆ
- ಪೌತಿ ಖಾತೆ, ಕಂದಾಯ ಗ್ರಾಮ ಹಕ್ಕುಪತ್ರ, ಪೋಡಿ ಮುಕ್ತ ಅಭಿಯಾನ: ರೈತರ ಅಲೆದಾಟ ತಪ್ಪಿಸಲು ಸರ್ಕಾರದ ಮಹತ್ವದ ಕ್ರಮ
- ತುಮಕೂರನ್ನು ಬೆಂಗಳೂರಿನ ಭಾಗವಾಗಿಸಿ: ಸಾಧನಾ ಸಮಾವೇಶದಲ್ಲಿ ಡಾ.ಜಿ.ಪರಮೇಶ್ವರ್ ಪ್ರಸ್ತಾಪ
Author: admin
ಬೆಂಗಳೂರು: ನಗರದಲ್ಲಿ ಮತ್ತೊಂದು ಹನಿಟ್ರ್ಯಾಪ್ ಪ್ರಕರಣ ಬೆಳಕಿಗೆ ಬಂದಿದೆ. ತನ್ನ ಪತ್ನಿಯನ್ನು ವಿಧವೆ ಎಂದು ಹೇಳಿ ನೋಡಿಕೊಳ್ಳುವಂತೆ ಉದ್ಯಮಿ ಜೊತೆ ಬಿಟ್ಟು ಹನಿಟ್ರ್ಯಾಪ್ ನಡೆಸಿದ ಪ್ರಕರಣ ಸಂಬಂಧ ದಂಪತಿ ಸಹಿತ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಖಲೀಮ್, ಸಭಾ, ಓಬೆದ್ ರಕೀಮ್, ಅತೀಕ್ ಬಂಧಿತ ಆರೋಪಿಗಳಾಗಿದ್ದು, ಈ ಪೈಕಿ ಖಲೀಮ್ ಮತ್ತು ಸಭಾ ದಂಪತಿಯಾಗಿದ್ದಾರೆ. ಈ ಗ್ಯಾಂಗ್ ಅತೀವುಲ್ಲಾ ಎಂಬ ಉದ್ಯಮಿಯನ್ನ ಟ್ರ್ಯಾಪ್ ಮಾಡಿ ಹನಿಟ್ರ್ಯಾಪ್ ಮಾಡಿತ್ತು. ಅತೀವುಲ್ಲಾಗೆ ಪತ್ನಿ ಸಭಾಳನ್ನ ವಿಧವೆ ಅಂತಾ ಪರಿಚಯ ಮಾಡಿಸಿಕೊಟ್ಟು ಆಕೆಯನ್ನು ನೋಡಿಕೊಳ್ಳುವಂತೆ ಹೇಳಿದ್ದ. ನಂತರ ಸಭಾ ಮತ್ತು ಅತೀವುಲ್ಲಾ ನಡುವೆ ದೈಹಿಕ ಸಂಪರ್ಕ ನಡೆದಿತ್ತು. ಕೆಲ ದಿನಗಳ ನಂತರ ಆರ್ ಆರ್ ನಗರದಲ್ಲಿ ರೂಮ್ ಬುಕ್ ಮಾಡಲು ಆಧಾರ್ ಕಾರ್ಡ್ ಜೊತೆ ಬಾ ಎಂದು ಅತೀವುಲ್ಲಾನನ್ನು ಕರೆದಿದ್ದಾಳೆ. ಅದರಂತೆ, ಆರ್ ಆರ್ ನಗರಕ್ಕೆ ಬಂದಿದ್ದ ಅತೀವುಲ್ಲಾ, ರೂಮ್ ಬುಕ್ ಮಾಡಿ ಒಳಗಡೆ ಹೋದ ಕೆಲ ಹೊತ್ತಲ್ಲೇ ಖಲೀಮ್, ರಕೀಬ್, ಅತೀಕ್ ಎಂಟ್ರಿ…
ಬೆಂಗಳೂರು: ಸಾರ್ವಜನಿಕ ಶಾಂತಿ ಕದಡುತ್ತಿರುವುದನ್ನು ಪ್ರಶ್ನಿಸಿದ ವ್ಯಕ್ತಿ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪದ ಮೇಲೆ ನಗರ ಠಾಣೆ ಪೊಲೀಸರು ಹಲ್ಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗುರುವಾರ ಮುಂಜಾನೆ 4 ಗಂಟೆಗೆ ನೆರೆಹೊರೆಯವರೊಂದಿಗೆ ಜಗಳವಾಡುತ್ತಿರುವುದನ್ನು ಕಂಡು ಗಿರಿನಗರ ನಿವಾಸಿ ಜಗದೀಶ್ ಅವರನ್ನು ಬಂಧಿಸಲಾಗಿದೆ. ಗಿರಿನಗರ ಪೊಲೀಸ್ ಸಹಾಯಕ ಸಬ್ ಇನ್ಸ್ಪೆಕ್ಟರ್ ದೇವರಾಜ್ ಅರಸ್ ಅವರು ಮತ್ತು ಪೊಲೀಸ್ ಪೇದೆ ಮೇಲೆಯೂ ಹಲ್ಲೆ ನಡೆಸಲಾಗಿದ್ದು, ನಂತರ ಎಫ್ ಐಆರ್ ದಾಖಲಿಸಿದ್ದಾರೆ. ಆರೋಪಿ ಮೇಲೆ ಹಲ್ಲೆ ಮತ್ತು ಕ್ರಿಮಿನಲ್ ಬೆದರಿಕೆ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ. ಎಫ್ ಐಆರ್ ಪ್ರಕಾರ, ಪಿಎಸ್ ಐ ದೇವರಾಜ್ ಅರಸ್ ರಾತ್ರಿ ಕರ್ತವ್ಯದಲ್ಲಿದ್ದರು ಮತ್ತು ಗುರುವಾರ ಬೆಳಗಿನ ಜಾವ 3:50 ರ ಸುಮಾರಿಗೆ ಮಹಿಳೆಯೊಬ್ಬರು ಪೊಲೀಸರಿಗೆ ಕರೆ ಮಾಡಿ ವ್ಯಕ್ತಿಯೊಬ್ಬರು ತನ್ನ ನೆರೆಹೊರೆಯವರ ಮೇಲೆ ಕೂಗಾಡುತ್ತಿದ್ದಾರೆ ಮತ್ತು ಅವರೊಂದಿಗೆ ಜಗಳವಾಡುತ್ತಿದ್ದಾರೆ ಎಂದು ಹೇಳಿದ್ದರು. ಘಟನಾ ಸ್ಥಳಕ್ಕೆ ದೇವರಾಜ್ ಅರಸ್ ಹಾಗೂ ಕಾನ್ ಸ್ಟೆಬಲ್ ಭೇಟಿ ನೀಡಿದಾಗ ಜಗದೀಶ್ ಲಂಚ ಪಡೆದು ತಮ್ಮ ಮೇಲೆ…
ದೆಹಲಿ: ಅಪ್ರಾಪ್ತ ಬಾಲಕನನ್ನು ಆರು ಮಂದಿ ಸ್ನೇಹಿತರು ಸೇರಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 17 ವರ್ಷದ ವಿವೇಕ್ ಮೃತ ದುರ್ದೈವಿಯಾಗಿದ್ದಾನೆ. ಸ್ನೇಹಿತರಲ್ಲಿ ಒಬ್ಬಾತ ಮದ್ಯಪಾನ ಮಾಡಲೆಂದು ಆತನನ್ನು ಆಹ್ವಾನಿಸಿದ್ದ ಬಳಿಕ ಆರು ಮಂದಿ ಸ್ನೇಹಿತರು ಸೇರಿ ಚಾಕುವಿನಿಂದ ಚುಚ್ಚಿ, ಕಲ್ಲು ಎತ್ತಿಹಾಕಿ ಹತ್ಯೆ ಮಾಡಲಾಗಿದೆ. ಸತ್ಪುಲಾ ಪಾರ್ಕ್ ಗೆ ಕರೆದೊಯ್ದು ಹತ್ಯೆ ಮಾಡಲಾಗಿದೆ. ಮೂವರು ಅಪ್ರಾಪ್ತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ವಿವೇಕ್ ವಿರುದ್ಧ ಹಗೆ ಸಾಧಿಸಲು ಈ ಸಂಚು ರೂಪಿಸಿದ್ದರು. ಬಾಲಕ ಮನೆಯಿಂದ ಹೊರ ಹೋಗುವಾಗ ತಂದೆಯನ್ನು ಭೇಟಿಯಾಗಲು ಹೋಗುವುದಾಗಿ ಸುಳ್ಳು ಹೇಳಿದ್ದ, ಹಿಂದಿರುಗದಿದ್ದಾಗ ಹಲವು ಬಾರಿ ಕರೆ ಮಾಡಿದ್ದಾರೆ ಆದರೆ ಮೊಬೈಲ್ ಸ್ವಿಚ್ಡ್ ಆಫ್ ಆಗಿತ್ತು ಎಂದು ಪೋಷಕರು ತಿಳಿಸಿದ್ದಾರೆ.
ನಾಗ್ಪುರ: ಕಟೋಲ್ ತಾಲೂಕಿನ ಸೋನ್ ಖಾಂಬ್ ನಲ್ಲಿ ಟ್ರಕ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಆರು ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಏಳು ಜನರು ನಾಗ್ಪುರದಿಂದ ಕಟೋಲ್ ಕಡೆಗೆ ಪ್ರಯಾಣಿಸುತ್ತಿದ್ದಾಗ ಟ್ರಕ್ ಕಾರಿಗೆ ಬಲವಾಗಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ವರದಿಗಳ ಪ್ರಕಾರ, ರಾತ್ರಿ 1.30 ರ ಸುಮಾರಿಗೆ ಅಪಘಾತ ಸಂಭವಿಸಿದೆ. ಸ್ಕಾರ್ಪಿಯೋದಲ್ಲಿದ್ದ ಒಂದೇ ಗ್ರಾಮದ 6 ಮಂದಿ ಸಾವನ್ನಪ್ಪಿದ್ದಾರೆ. ಮೃತರನ್ನು ಅಜಯ್ ದಶರತ್ ಚಿಖ್ಲೆ (45), ವಿಠ್ಠಲ್ ದಿಗಂಬರ್ ತೋಟೆ (45), ಸುಧಾಕರ ರಾಮಚಂದ್ರ ಮಾನಕರ್ (42), ರಮೇಶ್ ಓಂಕಾರ್ ಹೆಲೊಂಡೆ (48), ಮಯೂರ್ ಮೊರೇಶ್ವರ್ ಇಂಗ್ಲೆ (26) ಮತ್ತು ವೈಭವ್ ಸಾಹೇಬ್ರಾವ್ ಚಿಖ್ಲೆ (32) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ನಾಗ್ಪುರದ ಸರ್ಕಾರಿ ವೈದ್ಯಕೀಯ ಆಸ್ಪತ್ರೆಯಲ್ಲಿ ಟ್ರಾಮಾ ಸೆಂಟರ್ಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೇರಳದ ಮಂಚೇರಿಯಲ್ಲಿ ಶಬರಿಮಲೆ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಟೆಂಪೋ ಟ್ರಾವೆಲರ್ ಗೆ ಆಟೋ ರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ ಆಟೋ ರಿಕ್ಷಾ ಚಾಲಕ ಅಬ್ದುಲ್ ಮಜೀದ್ (50) ಮತ್ತು ಪ್ರಯಾಣಿಕರಾದ ಥೆಸ್ಲೀಮಾ (34) ಮುಹ್ಸಿನಾ (32) ಮತ್ತು ಅವರ ಮಕ್ಕಳಾದ ರೈಹಾ ಫಾತಿಮಾ (4) ಮತ್ತು ರಿನ್ಶಾ ಫಾತಿಮಾ (7) ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಕರ್ನಾಟಕದಿಂದ ಶಬರಿಮಲೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಟೆಂಪೋ ಟ್ರಾವೆಲರ್ ಗೆ ಆಟೋ ರಿಕ್ಷಾ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಐವರು ಶಬರಿಮಲೆ ಯಾತ್ರಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಿಡ್ನಿ ಆರೋಗ್ಯಕ್ಕಾಗಿ ಈ ಕ್ರಮಗಳನ್ನು ಅನುಸರಿಸಿ: ನಾವು ಸೇವಿಸುವ ಆಹಾರದಿಂದ ಕಿಡ್ನಿ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಪ್ರತಿದಿನ 13 ರಿಂದ 18 ಗ್ಲಾಸ್ ನೀರು ಕುಡಿಯಿರಿ. ಹೂಕೋಸು ಫೈಬರ್, ವಿಟಮಿನ್ ಸಿ ಮತ್ತು ಫೋಲೇಟ್ನಲ್ಲಿ ಸಮೃದ್ಧವಾಗಿದೆ. ಇದು ದೇಹದಿಂದ ವಿಷವನ್ನು ತೆಗೆದುಹಾಕುತ್ತದೆ ಮತ್ತು ಮೂತ್ರಪಿಂಡಗಳನ್ನು ರಕ್ಷಿಸುತ್ತದೆ. ಎಲೆಕೋಸು ಫೈಟೊಕೆಮಿಕಲ್ಸ್ ಮತ್ತು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದೆ. ಅವು ಮೂತ್ರಪಿಂಡ, ಹೃದ್ರೋಗ ಮತ್ತು ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತಾರೆ. ಕ್ಯಾನ್ಸೆರಿ ಜ್ಯೂಸ್ ಮೂತ್ರನಾಳದ ಸೋಂಕನ್ನು ಕಡಿಮೆ ಮಾಡುತ್ತದೆ. ನೆಲ್ಲಿಕಾಯಿಯಲ್ಲಿದೆ ಹಲವಾರು ಆರೋಗ್ಯ ಪ್ರಯೋಜನಗಳು: ಚಳಿಗಾಲದಲ್ಲಿ ನೆಲ್ಲಿಕಾಯಿ ಸೇವನೆ ತುಂಬಾನೇ ಒಳ್ಳೆಯದು. 100 ಗ್ರಾಂ ತಾಜಾ ಆಮ್ಲಾ ಹಣ್ಣು 20 ಕಿತ್ತಳೆಗೆ ಸಮನಾಗಿರುತ್ತದೆ. ಆಮ್ಲಾ ಹಣ್ಣಿನಲ್ಲಿರುವ ಆಂಟಿಆಕ್ಸಿಡೆಂಟ್ ಗಳು ಮತ್ತು ವಿಟಮಿನ್ ಗಳು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿವೆ. ಅದರಲ್ಲೂ ವಿಟಮಿನ್-ಸಿ ಹೆಚ್ಚಿರುವುದರಿಂದ ಯಾವುದೇ ಕಾಯಿಲೆಯಿಂದ ಸುಲಭವಾಗಿ ಚೇತರಿಸಿಕೊಳ್ಳಬಹುದು. ಇದರಲ್ಲಿರುವ ಪ್ಲೇವನಾಯ್ಡ್ ರಾಸಾಯನಿಕಗಳು ಜ್ಞಾಪಕಶಕ್ತಿಯನ್ನು ಹೆಚ್ಚಿಸಲು ಉಪಯುಕ್ತವಾಗಿದೆ ಎಂದು ತಜ್ಞರು ಬಹಿರಂಗಪಡಿಸಿದ್ದಾರೆ.
ನೂತನ ಜಿಲ್ಲಾಧಿಕಾರಿಗಳಾಗಿ ಶುಭ ಕಲ್ಯಾಣ್ ಅಧಿಕಾರ ಸ್ವೀಕಾರ ತುಮಕೂರು ಜಿಲ್ಲೆಯಲ್ಲಿ ಹಲವು ವಿವಾದಗಳಿಗೆ ಕಾರಣವಾಗಿದ್ದ ಜಿಲ್ಲಾಧಿಕಾರಿ ಶ್ರೀನಿವಾಸ್ ಕೆ. ಅವರನ್ನು ವರ್ಗಾವಣೆ ಮಾಡಲಾಗಿದ್ದು, ಇದೀಗ ತುಮಕೂರು ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಶುಭ ಕಲ್ಯಾಣ್ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಕಳೆದ ಸುಮಾರು 6 ತಿಂಗಳ ಹಿಂದೆ ತುಮಕೂರು ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದ, ಶ್ರೀನಿವಾಸ್ ಕೆ. ಇವರು, ಈ ಹಿಂದೆ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಇನ್ನಿತರೆ ಭಾಗದಲ್ಲಿ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಬೆಂಗಳೂರು ನಗರದ ಜಿಲ್ಲಾಧಿಕಾರಿಯಾಗಿದ್ದ ಸಮಯದಲ್ಲಿ, ವಿಧಾನ ಸಭಾ ಚುನಾವಣೆಗೂ ಮುನ್ನ, ಮತದಾರರ ಮಾಹಿತಿ ಸಂಗ್ರಹಿಸಿದ ಸಂಸ್ಥೆಗೆ ನೆರವು ನೀಡಿದ ಆರೋಪದ ಮೇಲೆ ಚುನಾವಣಾ ಆಯೋಗದ ನಿರ್ದೇಶನದಂತೆ ಅಮಾನತು ಮಾಡಲಾಗಿತ್ತು. ತದ ನಂತರದಲ್ಲಿ, ತುಮಕೂರು ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಈ ಮಧ್ಯೆ ಕಳೆದ ದೀಪಾವಳಿ ಹಾಗೂ ಮಕ್ಕಳ ದಿನಾಚರಣೆ ಆಚರಿಸುವ ನೆಪದಲ್ಲಿ ನಗರದ ಹೊರವಲಯದ ಗೆದ್ದಲಹಳ್ಳಿ ರಸ್ತೆಯಲ್ಲಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಮೆಟ್ರಿಕ್ ನಂತರದ ಹಾಸ್ಟೆಲ್ ನಲ್ಲಿ ಅಪ್ರಾಪ್ತ ಹೆಣ್ಣು ಮಕ್ಕಳೊಂದಿಗೆ …
ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಪುತ್ರಿ ಐಶ್ವರ್ಯ ಡಿಕೆಎಸ್ ಹೆಗ್ಡೆ ಅವರ ಶಿಕ್ಷಣ ಸಂಸ್ಥೆಯ ವಿನೂತನ ಚರ್ಚಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ಕಾರ್ಯಕ್ರಮದ ಮೊದಲ ಸಂಚಿಕೆಯ ಅತಿಥಿಗಳಾಗಿ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ ಅವರು ತಮ್ಮ ಪ್ರೀತಿಯ ಸಾಕುನಾಯಿ ಗೋಪಿ ಮೂರ್ತಿ ಜತೆ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದು ಗಮನ ಸೆಳೆಯಿತು. ಸುಧಾಮೂರ್ತಿ ತಮ್ಮ ಜೀವನ, ಸಾಧನೆ ಮತ್ತು ತಮ್ಮ ಸಾಕುಪ್ರಾಣಿ ಜತೆಗಿನ ಒಡನಾಟ, ದಿನನಿತ್ಯದ ಕಾರ್ಯ ಚಟುವಟಿಕೆಗಳ ಕುರಿತು ಸಂವಾದ ನಡೆಸಿದರು. ಈ ಕಾರ್ಯಕ್ರಮದ ಮೂಲಕ ರಾಜರಾಜೇಶ್ವರಿ ನಗರದ ನ್ಯಾಷನಲ್ ಹಿಲ್ ವ್ಯೂ ಪಬ್ಲಿಕ್ ಸ್ಕೂಲ್ ಸೇರಿದಂತೆ ಅನೇಕ ಶಾಲೆಗಳ ವಿದ್ಯಾರ್ಥಿಗಳ ನಡುವೆ ಸಂಪರ್ಕ ಬೆಸೆದು, ಬಲಿಷ್ಠ ಸಮೂಹ ಕಟ್ಟುವ ಪ್ರಯತ್ನ ಇದಾಗಿದೆ.
ದೇವರಿಗೆ ಬಲಿ ಕೊಟ್ಟ ಕೋಣದ ಮಾಂಸ ತಿನ್ನದಿದ್ದರೆ ಗ್ರಾಮದಿಂದಲೇ ದಲಿತರನ್ನು ಬಹಿಷ್ಕಾರ ಮಾಡುವ ಅನಿಷ್ಟ ಪದ್ಧತಿಯನ್ನು ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ದೇವಿಕೇರಾ ಜಾತ್ರೆಯಲ್ಲಿ ಅನುಸರಿಸಲಾಗುತ್ತಿದೆ. ಜಾತ್ರೆಯಲ್ಲಿ ಬಲಿ ಕೊಟ್ಟ ಕೋಣದ ಮಾಂಸವನ್ನು ದಲಿತರು ತಿನ್ನಲೇಬೇಕು. ಇಲ್ಲದಿದ್ದರೆ ಗ್ರಾಮದೊಳಗೆ ಪ್ರವೇಶವಿಲ್ಲ. ಈ ಅನಿಷ್ಟ ಪದ್ಧತಿ ತಡೆಯುವಂತೆ ರಾಜ್ಯ ದಲಿತ ಸಂಘರ್ಷ ಸಮಿತಿಯ (ಕ್ರಾಂತಿಕಾರಿ ಬಣ) ರಾಜ್ಯ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ಅವರು ಜಿಲ್ಲಾಧಿಕಾರಿ, ಎಸ್ ಪಿಗೆ ದೂರು ನೀಡಿದ್ದಾರೆ.
ಕೇಂದ್ರ ಸರ್ಕಾರದ ಅಧೀನದಲ್ಲಿರುವ ನ್ಯಾಷನಲ್ ಕ್ರೈಮ್ ಬ್ಯುರೋ ವರದಿ ಪ್ರಕಾರ, ಕಳೆದ ವರ್ಷ ಬಿಜೆಪಿ ಅಧಿಕಾರದಲ್ಲಿದ್ದಾಗ ಕರ್ನಾಟಕದಲ್ಲಿ ಮಹಿಳೆಯರ ಮೇಲೆ ನಡೆದ 17,813 ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಅದರ ಹಿಂದಿನ ವರ್ಷ 2021ರಲ್ಲಿ 14, 468 ಮಹಿಳಾ ದೌರ್ಜನ್ಯ ಪ್ರಕರಣಗಳು ದಾಖಲಾಗಿತ್ತು. ಆಗ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಏನು ಮಾಡುತ್ತಿದ್ದರು? ವನವಾಸದಲ್ಲಿದ್ದರಾ? ಎಂದು ಪ್ರಶ್ನಿಸಿದರು. ಬೆಳಗಾವಿ ಮಹಿಳೆಯೊಬ್ಬರ ಮೇಲೆ ನಡೆದ ದೌರ್ಜನ್ಯದಲ್ಲೂ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು. ಭಾರತೀಯ ಜನತಾ ಪಕ್ಷದ ಆಡಳಿತಾವಧಿಯಲ್ಲಿ ರಾಜ್ಯದಲ್ಲಿ ಮಹಿಳೆಯರ ಮೇಲೆ ಸಾಲುಸಾಲು ದೌರ್ಜನ್ಯದ ಪ್ರಕರಣಗಳು ನಡೆಯುತ್ತಿದ್ದಾಗ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ. ನಡ್ಡಾ ಅವರು ಕಣ್ಣು ಮುಚ್ಚಿ ಕೂತಿದ್ದರು. ಆದರೆ ಬೆಳಗಾವಿಯಲ್ಲಿ ಮಹಿಳೆ ಮೇಲೆ ನಡೆದ ದೌರ್ಜನ್ಯ ಮಾತ್ರ ಅವರ ಕಣ್ಣಿಗೆ ಕಂಡಿದ್ದು, ಅದರಲ್ಲೂ ರಾಜಕೀಯ ಬೇಳೆ ಬೇಯಿಸಲು ಮುಂದಾಗಿದ್ದಾರೆ ಎಂದರು.