Author: admin

ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾದಕ ದ್ರವ್ಯ ವಸ್ತುಗಳ ಅಕ್ರಮ ದಂಧೆಯನ್ನು ತಡೆಯಲು ವಿಶೇಷ ಪೊಲೀಸ್‌ ಆಯುಕ್ತಾಲಯವನ್ನು ಸ್ಥಾಪಿಸುವಂತೆ ಕೆಪಿಸಿಸಿ ವಕ್ತಾರ ರಮೇಶ್ ಬಾಬು ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು, ಮಾದಕ ವಸ್ತುಗಳ ಮಾರಾಟ ಇಡೀ ದೇಶದಲ್ಲಿ ವ್ಯಾಪಕವಾಗಿದ್ದು, ಸಾಮಾಜಿಕ ಪಿಡುಗು ಆಗುವುದರ ಜೊತೆಗೆ ಯುವ ಜನಾಂಗಕ್ಕೆ ಮಾರಕವಾಗಿ ವ್ಯಾಪಿಸಿರುತ್ತದೆ. ಮಾದಕ ವಸ್ತುಗಳ ಅಕ್ರಮ ದಂದೆಯು ದಿನೇ ದಿನೇ ಹೆಚ್ಚಾಗುತ್ತಿದೆ ಎಂದಿದ್ದಾರೆ. ಕಾನೂನು ಬಾಹಿರವಾಗಿ ವಿದೇಶಿ ಸಿಗರೇಟ್ ಮಾರಾಟ, ಅಕ್ರಮ ಸಿಲಿಂಡರ್‌ ರಿಫಿಲ್ಲಿಂಗ್ ಹಾಗೂ ಇಸ್ಪೀಟ್ ಅಡ್ಡೆಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, ಲಕ್ಷಾಂತರ ರೂ. ನಗದು ಹಾಗೂ ಸಿಗರೇಟ್, ಸಿಲಿಂಡರ್ ಗಳನ್ನು ವಶಕ್ಕೆ ಪಡೆದುಕೊಂಡಿದೆ. ವಿದೇಶಿ ಸಿಗರೇಟ್ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಉತ್ತರ ಭಾರತ ಮೂಲದ ಪರಸ್ಮಲ್(40) ಮತ್ತು ಮೊಂಟುಸಿಂಗ್(45) ಬಂಧಿತರು. ಆರೋಪಿಗಳಿಂದ 4 ಲಕ್ಷ ರೂ. ಮೌಲ್ಯದ ವಿದೇಶಿ ಸಿಗರೇಟ್‌ಗಳನ್ನು ಜಪ್ತಿ ಮಾಡಲಾಗಿದೆ.

Read More

ಬೆಂಗಳೂರು: ಒಬ್ಬನೇ ಒಬ್ಬ ಪ್ರಯಾಣಿಕನಿಗಾಗಿ ಬಿಎಂಟಿಸಿ ವಾಯು ವಜ್ರ ಬಸ್ ಸಂಚರಿಸಿದ ಬಗ್ಗೆ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಹರಿಹರನ್ ಎಸ್.ಎಸ್. ಎಂಬ ಪ್ರಯಾಣಿಕರೊಬ್ಬರು ತನ್ನ ಅನುಭವವನ್ನು ಹಂಚಿಕೊಂಡಿದ್ದಾರೆ. ಪ್ರಯಾಣಿಕನು ಬಸ್ ಚಾಲಕ ಮತ್ತು ನಿರ್ವಾಹಕರ ಸಹಕಾರಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ಬೆಂಗಳೂರಿನ ವಿಮಾನ ನಿಲ್ದಾಣದಿಂದ ಹಿಂತಿರುಗುತ್ತಿದ್ದಾಗ, ಈ ಇಬ್ಬರು ನನಗಾಗಿ ಸಮಯಕ್ಕೆ ಬಸ್ ಓಡಿಸಿದರು. ಅವರಿಂದ ನನಗೆ ಉತ್ತಮ ಭಾಂಧವ್ಯ ಸಿಕ್ಕಿತು ಎಂದು ಸೆಲ್ಪಿ ಹಂಚಿಕೊಂಡಿದ್ದಾರೆ.

Read More

ಬೆಂಗಳೂರು: ದೇಶದಲ್ಲೇ ಅತೀ ಉದ್ದದ ಮೆಟ್ರೋ ಸುರಂಗ ಮಾರ್ಗ ವಾದ ಬೆಂಗಳೂರಿನ ಗುಲಾಬಿ ಮಾರ್ಗದ ಕಾರ್ಯಗಳು ತ್ವರಿತ ಗತಿಯಲ್ಲಿ ಸಾಗುತ್ತಿದ್ದು, ಸುರಂಗ ಕಾಮಗಾರಿ ಈಗಾಗಲೇ ಶೇ. 90ರಷ್ಟು ಕೆಲಸ ಪೂರ್ಣಗೊಂಡಿದೆ. ಸುರಂಗ ಮಾರ್ಗದ 21 ಕಿಲೋ ಮೀಟರ್‌ ಗಳಲ್ಲಿ 19 ಕಿಲೋ ಮೀಟರ್ ಸುರಂಗ ಮಾರ್ಗ ಪೂರ್ಣಗೊಂಡಿದೆ. ನಮ್ಮ ಮೆಟ್ರೋ, ಗುಲಾಬಿ ಮಾರ್ಗವು ಬನ್ನೇರುಘಟ್ಟ ರಸ್ತೆಯಲ್ಲಿರುವ ಕಾಳೇನ ಅಗ್ರಹಾರದಿಂದ ಉತ್ತರ ಭಾಗದ ನಾಗವಾರಕ್ಕೆ ಸಂಪರ್ಕಿಸುವ ಅತ್ಯಂತ ದೊಡ್ಡ ಹಾಗೂ ಕಾಮಗಾರಿಯಲ್ಲಿ ಅತ್ಯಂತ ಸವಾಲಾಗಿರುವ ಮಾರ್ಗವಾಗಿದೆ.

Read More

ಅಮೆರಿಕದಲ್ಲಿ ಕುತೂಹಲಕಾರಿ ಘಟನೆಯೊಂದು ನಡೆದಿದೆ. ಹೃದಯಾಘಾತದಿಂದ ಸಾವನ್ನಪ್ಪಿದ ಮಹಿಳೆ ಲಾರೆನ್ ಕೆನಡೆ 24 ನಿಮಿಷಗಳ ನಂತರ ಮತ್ತೆ ಬದುಕಿ ಬಂದಿದ್ದಾರೆ. ಸಾವಿನ ನಂತರ ಅಪಾರವಾದ ಶಾಂತಿಯನ್ನು ಪಡೆದೆ ಎಂದು ಮಹಿಳೆ ಹೇಳಿಕೊಂಡಿದ್ದಾಳೆ. ಮಹಿಳೆಗೆ ಹೃದಯಾಘಾತವಾದ ಬಳಿಕ ಆಕೆಯ ಪತಿ 911 ಗೆ ಕರೆ ಮಾಡಿ ಸಿಪಿಆರ್ ನೀಡಿದರು. ಬಳಿಕ ಅಲ್ಲಿಗೆ ಬಂದ ವೈದ್ಯರು ಮಹಿಳೆ ಸತ್ತಿದ್ದಾರೆ ಎಂದು ಘೋಷಿಸಿದರು. ಆದರೆ ಮಹಿಳೆ 24 ನಿಮಿಷಗಳ ನಂತರ ಮತ್ತೆ ಉಸಿರಾಟ ಆರಂಭಿಸಿರುವುದು ಅಚ್ಚರಿ ಮೂಡಿಸಿದೆ.

Read More

ಬೆಂಗಳೂರು: ಚರ್ಚ್ ಸ್ಪೋಟ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಪರಾಧಿಗೆ, ಕರ್ನಾಟಕ ಹೈಕೋರ್ಟ್ ಎರಡು ವಾರಗಳ ಜಾಮೀನು ಮಂಜೂರು ಮಾಡಿದೆ. ಅಖಿಲ್ ಜುಲೈ 2000 ದಲ್ಲಿ ಬೆಂಗಳೂರಿನಲ್ಲಿ ನಡೆದ ಚರ್ಚ್ ಸ್ಪೋಟ ಪ್ರಕರಣದ ಅಪರಾಧಿಗಳಲ್ಲಿ ಒಬ್ಬರಾಗಿದ್ದಾರೆ. ಕರ್ನಾಟಕ, ಆಂಧ್ರಪ್ರದೇಶ ಮತ್ತು ಗೋವಾದಲ್ಲಿ ಉಂಟಾದ ಸ್ಪೋಟಗಳಲ್ಲಿ ದೀನದ‌ರ್ ಅಂಜುಮನ್ ಪಂಥಕ್ಕೆ ಸೇರಿದ 24 ಆರೋಪಿಗಳು ತಪ್ಪಿತಸ್ಥರೆಂದು ಸಾಬೀತಾಗಿದೆ. ಜೀವಾವಧಿ ಶಿಕ್ಷೆಗೆ ಗುರಿಯಾದ 13 ಮಂದಿಯಲ್ಲಿ ಅಖಿಲ್ ಕೂಡ ಒಬ್ಬ.

Read More

ಬೆಂಗಳೂರು: ವಾಚ್ ತಯಾರಿಕ ಕಂಪನಿಯ ಮ್ಯಾನೇಜರ್, ಸೂಪರ್ವೈಸರ್‌ ಕಿರುಕುಳದಿಂದ ಬೇಸತ್ತ ಕಾರ್ಮಿಕರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ನಗರದ ಟಿ. ದಾಸರಹಳ್ಳಿಯಲ್ಲಿ ನಡೆದಿದೆ. ದಾಸರಹಳ್ಳಿಯಲ್ಲಿ ನೆಲೆಸಿರುವ ಅಂಧ್ರಪ್ರದೇಶದ ಗುಡಿಬಂಡೆ ನಿವಾಸಿ ಗೋವಿಂದ (24) ಆತ್ಮಹತ್ಯೆ ಮಾಡಿಕೊಂಡ ಕಾರ್ಮಿಕ. ಕಳೆದ ಆರು ವರ್ಷಗಳಿಂದ ಪೀಣ್ಯ ಬಳಿಯ ಕೆಡಿಡಿಎಲ್ ವಾಚ್ ತಯಾರಿಕ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಗೋವಿಂದ ಅವರು ರಾತ್ರಿ ಅಪಾರ್ಟೆಂಟ್ ‌ನಲ್ಲಿ ಮೇಂಟೆನೆಂಸ್ ಕೆಲಸ ಮಾಡಿಕೊಂಡು ತಂಗಿದ್ದರು.

Read More

ಇಲ್ಲೊಬ್ಬ ಯುವತಿ 100ಕ್ಕೂ ಹೆಚ್ಚು ಮಕ್ಕಳನ್ನು ಪಡೆಯುವ ಆಸೆ ಹೊಂದಿದ್ದಾಳೆ. ರಷ್ಯಾ ನಿವಾಸಿಯಾಗಿರುವ ಕ್ರಿಸ್ಟಿನಾ ಜಾರ್ಜಿಯಾದಲ್ಲಿ ತನ್ನ ಕುಟುಂಬದ ಜೊತೆ ವಾಸವಾಗಿದ್ದಾಳೆ. ಆಕೆ ಪತಿ ಕೋಟ್ಯಾಧಿಪತಿ. ಪ್ರಸ್ತುತ ದಂಪತಿಗೆ 22 ಮಕ್ಕಳಿದ್ದಾರೆ. 26 ವರ್ಷದ ಹುಡುಗಿ 22 ಮಕ್ಕಳನ್ನು ಹೊಂದಲು ಹೇಗೆ ಸಾಧ್ಯ ಎನ್ನುವ ಪ್ರಶ್ನೆ ನಿಮ್ಮ ಮನಸ್ಸಿನಲ್ಲಿ ಮೂಡಬಹುದು. ಆದರೆ, ಮಾಹಿತಿಯ ಪ್ರಕಾರ ಆಕೆಯ ಹಿರಿಯ ಮಗಳು 8 ವರ್ಷದ ವಿಕ್ಟೋರಿಯಾ ಮಾತ್ರ ಅವಳ ಹೊಟ್ಟೆಯಿಂದಲೇ ಜನಿನಿಸಿರುವ ಮಗು. ಉಳಿದ 21 ಮಕ್ಕಳು ಬಾಡಿಗೆ ತಾಯ್ತನದ ಮೂಲಕ ಜನಿಸಿವೆ. ಈಗಾಗಲೇ ಆಕೆ ಬಾಡಿಗೆ ತಾಯ್ತನಕ್ಕಾಗಿ ಸುಮಾರು 1.4 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದ್ದಾಳೆ.

Read More

ಚಿರತೆ ದಾಳಿಗೆ 17 ಕುರಿ ಹಾಗೂ 14 ಮೇಕೆ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಮಲ್ಲೇಶ್ವರ ಗ್ರಾಮದಲ್ಲಿ ನಡೆದಿದೆ. ಚಂದ್ರು, ಬಸವರಾಜು, ಮಂಜು ಮತ್ತು ಲಕ್ಷ್ಮಣ್ ಎಂಬುವರಿಗೆ ಸೇರಿದ ಕುರಿಗಳು ಸುಶೀಲಮ್ಮ ಎಂಬುವವರ ತೋಟದ ಮನೆಯಲ್ಲಿದ್ದವು. ಈ ವೇಳೆ ಚಿರತೆ ದಾಳಿ ಮಾಡಿದ್ದು, ಅಂದಾಜು 4 ಲಕ್ಷ ರೂ. ಮೌಲ್ಯದ ಕುರಿಗಳ ಸಾವನ್ನಪ್ಪಿವೆ. ಬಳಿಕ ಪಶು ವೈದ್ಯ ಉಮೇಶ್ ಅವರು ಕುರಿಗಳ ಮರಣೋತ್ತರ ಪರೀಕ್ಷೆ ನಡೆಸಿದ್ದು, ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಜನಪ್ರಿಯ ಹಿಂದಿ ಚಲನಚಿತ್ರ ಹಿನ್ನೆಲೆ ಗಾಯಕ ಅನುಪ್ ಘೋಷಾಲ್(78) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರನ್ನು ಇತ್ತೀಚೆಗೆ ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಪಡೆಯುತ್ತಿದ್ದ ಅವರು ಶುಕ್ರವಾರ ಹೃದಯಾಘಾತದಿಂದ ಕೊನೆಯುಸಿರೆಳೆದರು. ಬಂಗಾಳಿ ಹಾಡುಗಳ ಜೊತೆಗೆ, ‘ಮಾಸೂಮ್’ ಚಿತ್ರದ’ ತುಜೈ ನರಾಜ್ ನಹಿ ಜಿಂದಗಿ’ ನಂತಹ ಸಾಂಪ್ರದಾಯಿಕ ಹಾಡುಗಳಿಗೆ ಅವರು ಹೆಸರುವಾಸಿಯಾಗಿದ್ದರು. ಕೇವಲ ಹಾಡುಗಾರಿಕೆಯಲ್ಲಿ ಮಾತ್ರವಲ್ಲದೇ, 2011ರಲ್ಲಿ ಟಿಎಂಸಿಯಿಂದ ಶಾಸಕರಾಗಿಯೂ  ಗೆಲುವು ಸಾಧಿಸಿದ್ದರು.

Read More

1993ರ ಪಾಲಾರ್ ಬಾಂಬ್ ಸ್ಫೋಟದ ಪ್ರಮುಖ ಅಪರಾಧಿ, ವೀರಪ್ಪನ್ ಸಹಚರ ಜ್ಞಾನಪ್ರಕಾಶ್(69) ನಿಧನರಾಗಿದ್ದಾರೆ. 29 ವರ್ಷಗಳ ಕಾಲ ಬೆಳಗಾವಿ ಹಾಗೂ ಮೈಸೂರು ಜೈಲಿನಲ್ಲಿದ್ದ ಜ್ಞಾನಪ್ರಕಾಶ್‌, ಜಾಮೀನಿನ ಮೇಲೆ ಮೈಸೂರು ಜೈಲಿನಿಂದ 2022ರ ಡಿಸೆಂಬರ್ 20 ರಂದು ಬಿಡುಗಡೆಯಾಗಿದ್ದರು. ಮೃತ ಜ್ಞಾನಪ್ರಕಾಶ್‌ ಶ್ವಾಸಕೋಶ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಹೀಗಾಗಿ, ಮಾನವೀಯತೆ ಆಧಾರದ ಮೇಲೆ ಸುಪ್ರೀಂಕೋರ್ಟ್ ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಜ್ಞಾನಪ್ರಕಾಶ್  ಅವರು ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ಮಾರ್ಟಳ್ಳಿ ಸಮೀಪ ಸಂದನಪಾಳ್ಯದಲ್ಲಿ ವಾಸವಿದ್ದರು.

Read More