Subscribe to Updates
Get the latest creative news from FooBar about art, design and business.
- ಪ್ರಥಮ ಬಿ.ಸಿ.ಎ. ಪದವಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
- ಕುಣಿಗಲ್ ಪುರಸಭಾ ವ್ಯಾಪ್ತಿಯ ಸಾರ್ವಜನಿಕರಿಗೆ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
- ತುಮಕೂರು: ‘ಕರ್ನಾಟಕ ಪಬ್ಲಿಕ್ ಸ್ಕೂಲ್’ ಸಿನಿಮಾ ಮುಹೂರ್ತ ಸಮಾರಂಭ
- ತುಮಕೂರು: ಪಾದರಕ್ಷೆ ತಯಾರಿಕಾ ಸ್ಪರ್ಧೆಗೆ ಅರ್ಜಿ
- ಭೀಕರ ಅಪಘಾತ: ಶನಿಮಹಾತ್ಮ ದೇವಾಲಯ ವ್ಯವಸ್ಥಾಪಕ ಜಗನ್ನಾಥ್ ನಿಧನ
- ನೈರ್ಮಲ್ಯ ಕಾಪಾಡಿ, ಗರ್ಭಾಶಯದ ಕ್ಯಾನ್ಸರ್ ತಡೆಗಟ್ಟಿ: ಮಹಿಳೆಯರಿಗೆ ಕಾವೇರಿ ಎನ್. ಕರೆ
- ಪೌತಿ ಖಾತೆ, ಕಂದಾಯ ಗ್ರಾಮ ಹಕ್ಕುಪತ್ರ, ಪೋಡಿ ಮುಕ್ತ ಅಭಿಯಾನ: ರೈತರ ಅಲೆದಾಟ ತಪ್ಪಿಸಲು ಸರ್ಕಾರದ ಮಹತ್ವದ ಕ್ರಮ
- ತುಮಕೂರನ್ನು ಬೆಂಗಳೂರಿನ ಭಾಗವಾಗಿಸಿ: ಸಾಧನಾ ಸಮಾವೇಶದಲ್ಲಿ ಡಾ.ಜಿ.ಪರಮೇಶ್ವರ್ ಪ್ರಸ್ತಾಪ
Author: admin
ಕಲಬುರಗಿ: ರಾಯಚೂರಿನಿಂದ ಕಲಬುರಗಿಗೆ ಆಗಮಿಸುತ್ತಿದ್ದಾಗ, ನಗರದ ಜಿಲ್ಲಾ ಕಾರಾಗೃಹದ ಬಳಿ ಕೆಕೆಆರ್ ಟಿಸಿ ಬಸ್ ಡಿಕ್ಕಿಯಾಗಿ ಆಟೋದಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತರಾದ ಘಟನೆ ನಡೆದಿದೆ. ತಿಪ್ಪಣ್ಣ ಇಜೇರಿ(30), ರಾಜೇದ್ರ ಇಜೇರಿ(20) ಅವರು ಮೃತ ದುರ್ದೈವಿಗಳಾಗಿದ್ದಾರೆ. ಈ ವೇಳೆ ರಾಣಪ್ಪ ಕಟ್ಟಿಮನಿ ಖಣದಾಳ ಎಂಬುವವರಿಗೆ ಗಂಭೀರ ಗಾಯವಾದರೆ, ಮತ್ತಿಬ್ಬರಿಗೆ ಸಣ್ಣಪುಟ್ಟ ಗಾಯವಾಗಿದೆ. ಮೂವರಿಗೂ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತಿದೆ. ಈ ಕುರಿತು ಕಲಬುರಗಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ನವದೆಹಲಿ: ಸಂಸತ್ತಿಗೆ ನುಗ್ಗಿ ಲೋಕಸಭೆ ಕಲಾಪದ ವೇಳೆ ಹೊಗೆ ಬಾಂಬ್ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ನಾಲ್ವರು ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ 7 ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿ ವಿಶೇಷ ನ್ಯಾಯಾಲಯ ಆದೇಶಿಸಿದೆ. ಬಂಧಿತ ಐವರು ಆರೋಪಿಗಳ ಪೈಕಿ ನಾಲ್ವರನ್ನು ಇಂದು ಪಟಿಯಾಲ ಹೌಸ್ ಕೋರ್ಟ್ ಗೆ ಹಾಜರುಪಡಿಸಿದ ದೆಹಲಿ ಪೊಲೀಸರು, ಆರೋಪಿಗಳನ್ನು 15 ದಿನ ತಮ್ಮ ಕಸ್ಟಡಿಗೆ ನೀಡುವಂತೆ ಕೋರಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ನಾಲ್ವರು ಆರೋಪಿಗಳನ್ನು ಏಳು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಆರೋಪಿಗಳಾದ ಮನೋರಂಜನ್ ಡಿ, ಸಾಗರ್ ಶರ್ಮಾ, ಅಮೋಲ್ ಶಿಂಧೆ ಮತ್ತು ನೀಲಂ ದೇವಿ ಅವರ ವಿಚಾರಣೆ ನಡೆಸಿದ ಎನ್ಐಎ ಪ್ರಕರಣಗಳ ವಿಶೇಷ ನ್ಯಾಯಾಧೀಶ ಹರ್ದೀಪ್ ಕೌರ್ ಅವರು, ಏಳು ದಿನ ಪೊಲೀಸ್ ವಶಕ್ಕೆ ನೀಡಿದ್ದಾರೆ. ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್ಗಳ ಜೊತೆಗೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ.
ಬೆಂಗಳೂರು: ದೇಶದ ಮೊದಲ ಉಪಪ್ರಧಾನಿ, ಆಧುನಿಕ ಭಾರತದ ನಿರ್ಮಾತೃ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪುಣ್ಯ ಸ್ಮರಣೆಯ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ ಸೇರಿ ಹಲವಾರು ಗಣ್ಯರು ಗೌರವ ನಮನ ಸಲ್ಲಿಸಿದ್ದಾರೆ. ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪುಣ್ಯ ತಿಥಿಯಂದು ಅವರಿಗೆ ಗೌರವ ನಮನಗಳು. ಅವರ ದೂರದೃಷ್ಟಿಯ ನಾಯಕತ್ವ, ರಾಷ್ಟ್ರದ ಏಕತೆಗಾಗಿ ಅವರ ಬದ್ಧತೆಯು ಆಧುನಿಕ ಭಾರತ ನಿರ್ಮಾಣಕ್ಕೆ ನಾಂದಿ ಹಾಡಿತು ಎಂದು ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಅವರ ಅನುಕರಣೀಯ ಕೆಲಸವು ನಮಗೆ ಶಕ್ತಿ. ನಾವು ಅವರ ಜೀವನದಿಂದ ಸ್ಫೂರ್ತಿಯನ್ನು ಪಡೆಯುವುದನ್ನು ಮುಂದುವರಿಸುತ್ತೇವೆ ಮತ್ತು ಅವರ ಸಮೃದ್ಧ ಭಾರತದ ಕನಸನ್ನು ನನಸಾಗಿಸಲು ಕೆಲಸ ಮಾಡುತ್ತೇವೆ ಎಂದು ಬರೆದುಕೊಂಡಿದ್ದಾರೆ.
ಇನ್ನು ಮುಂದೆ ಇರಾನ್ ಗೆ ಹೋಗಲು ಭಾರತೀಯರಿಗೆ ವೀಸಾ ಅವಶ್ಯಕತೆ ಇಲ್ಲ. ಭಾರತೀಯ ನಾಗರಿಕರು ಸೇರಿದಂತೆ 32 ಇತರ ರಾಷ್ಟ್ರಗಳಿಗೆ ವೀಸಾ ಕಡ್ಡಾಯ ನೀತಿಯನ್ನು ಇರಾನ್ ಸರ್ಕಾರ ಮನ್ನಾ ಮಾಡಿದೆ. ಈ ಬಗ್ಗೆ ಸ್ವತಃ ಇರಾನ್ ನ ಸಾಂಸ್ಕೃತಿಕ ಪರಂಪರೆ, ಪ್ರವಾಸೋದ್ಯಮ ಮತ್ತು ಕರಕುಶಲ ಸಚಿವ ಎಜ್ಜತೊಲ್ಲಾಹ್ ಜರ್ಘಮಿ ಅವರು ಭಾರತದಿಂದ ಭೇಟಿ ನೀಡುವವರಿಗೆ ವೀಸಾ ಅವಶ್ಯಕತೆಗಳನ್ನು ಏಕಪಕ್ಷೀಯವಾಗಿ ರದ್ದುಗೊಳಿಸಲು ಇರಾನ್ ಕ್ಯಾಬಿನೆಟ್ ನಿರ್ಧರಿಸಿದೆ ಎಂದು ಹೇಳಿದ್ದಾರೆ. ಭಾರತವೂ ಸೇರಿದಂತೆ 33 ದೇಶಗಳಿಗೆ ವೀಸಾ ಅವಶ್ಯಕತೆಗಳನ್ನು ಮನ್ನಾ ಮಾಡಲು ಇರಾನ್ ಸರ್ಕಾರ ಬುಧವಾರ ನಿರ್ಧರಿಸಿದೆ ಎಂದು ಅವರು ಹೇಳಿದ್ದಾರೆ. ಬುಧವಾರ ನಡೆದ ಕ್ಯಾಬಿನೆಟ್ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಜರ್ಘಮಿ, ಪ್ರವಾಸೋದ್ಯಮ ಆಗಮನವನ್ನು ಹೆಚ್ಚಿಸುವ ಮತ್ತು ವಿಶ್ವದಾದ್ಯಂತದ ದೇಶಗಳಿಂದ ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸುವ ಗುರಿಯನ್ನು ಹೊಂದಲಾಗಿದ್ದು, ಇದೇ ಕಾರಣಕ್ಕೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದರು. ಇತ್ತೀಚೆಗೆ ಮಲೇಷ್ಯಾ, ಶ್ರೀಲಂಕಾ ಮತ್ತು ವಿಯೆಟ್ನಾಂ ಭಾರತದಿಂದ ಬರುವ ಸಂದರ್ಶಕರಿಗೆ ವೀಸಾ ಅವಶ್ಯಕತೆಗಳನ್ನು…
ಬೆಂಗಳೂರು: ತಾವು ಮಲಗುತ್ತಿದ್ದ ಜಾಗದಲ್ಲಿ ಮಲಗಿದ್ದ ಎಂಬ ಒಂದೇ ಕಾರಣಕ್ಕೆ ಅಪರಿಚಿತ ವ್ಯಕ್ತಿಯ ಮೇಲೆ ಕಾಲಿನಿಂದ ಒದ್ದು ಹತ್ಯೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಆರ್.ಟಿ.ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಸೈಯದ್ ಕಮ್ರಾನ್ ಮತ್ತು ವಿಶಾಲ್ ಅಹಿವದಾಸ್ ಎಂದು ಗುರುತಿಸಲಾಗಿದೆ. ಆರೋಪಿಗಳಿಬ್ಬರು ಕೌಟುಂಬಿಕ ಕಲಹದಿಂದ ಮನೆಯಿಂದ ಹೊರಬಂದಿದ್ದರು. ಮನೆಯಿಂದ ಹೊರಬಿದ್ದ ಬಳಿಕ ಇಬ್ಬರೂ ಆರ್.ಟಿ. ನಗರ ಹೆಬ್ಬಾಳ ಸೇರಿದಂತೆ ವಿವಿಧೆಡೆ ಸುತ್ತಾಡಿ ಬೆಳಿಗ್ಗೆ ಸಿಕ್ಕ ಕೆಲಸ ಮಾಡಿಕೊಂಡು ಬಂದ ಹಣದಲ್ಲಿ ಮದ್ಯ ಸೇವಿಸಿ ಆರ್.ಟಿ. ನಗರದ ಕೃಷ್ಣಪ್ಪ ಕಾಂಪ್ಲೆಕ್ಸ್ ನ ನೆಲಮಹಡಿಯಲ್ಲಿ ಮಲಗಿಕೊಂಡು ಜೀವನ ಮಾಡುತ್ತಿದ್ದರು ಎನ್ನಲಾಗಿದೆ. ಡಿ.11ರಂದು ರಾತ್ರಿ ಇಬ್ಬರು ಮದ್ಯ ಸೇವಿಸಿಕೊಂಡು ಮಲಗಲು ನೆಲಮಹಡಿಗೆ ಬಂದಾಗ ಅಷ್ಟರಲ್ಲಾಗಲೇ ಆ ಜಾಗದಲ್ಲಿ ಅಪರಿಚಿತ ವ್ಯಕ್ತಿ ಮಲಗಿರುವುದು ಕಂಡು ಬಂದಿದೆ. ಈ ವೇಳೆ ಇಬ್ಬರೂ ಆರೋಪಿಗಳು ಆ ಅಪರಿಚಿತನ ಜೊತೆ ಜಗಳಕ್ಕೆ ಹೋಗಿ ಸಿಟ್ಟಿನಲ್ಲಿ ವ್ಯಕ್ತಿಯ ಎದೆ ಹಾಗೂ ಮುಖದ ಮೇಲೆ ಮನಸೋಇಚ್ಛೆ ಒದ್ದು ಹತ್ಯೆ ಮಾಡಿ, ಪರಾರಿಯಾಗಿದ್ದಾರೆ. ಮಾರನೇ ದಿನ…
ಆಸ್ಟ್ರೇಲಿಯಾದ ಸ್ಟಾರ್ ಓಪನರ್ ಡೇವಿಡ್ ವಾರ್ನರ್ ಹೊಸ ದಾಖಲೆ ಬರೆದಿದ್ದಾರೆ. ವಾರ್ನರ್ ಟೆಸ್ಟ್ ನಲ್ಲಿ ಆಸೀಸ್ ಪರ ಐದನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡರು. ಅವರು ಇದುವರೆಗೆ 110 ಟೆಸ್ಟ್ ಗಳಲ್ಲಿ 8,651 ರನ್ ಗಳಿಸಿದ್ದಾರೆ. ಈ ಮೂಲಕ ಮಾಜಿ ನಾಯಕ ಮೈಕಲ್ ಕ್ಲಾರ್ಕ್ (8,643) ಅವರನ್ನು ಹಿಂದಿಕ್ಕಿದ್ದಾರೆ. ಭರ್ಜರಿ ಶತಕ ಸಿಡಿಸುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ನನ್ನ ಆಟ ಇನ್ನೂ ಇದೆ ಎಂಬ ಸಂದೇಶವನ್ನು 37 ವರ್ಷದ ಕ್ರಿಕೆಟಿಗ ರವಾನಿಸಿದ್ದಾರೆ. ಆದರೆ ಈ ಸರಣಿ ವಾರ್ನರ್ ಪಾಲಿಗೆ ಕೊನೆಯ ಟೆಸ್ಟ್ ಸರಣಿ ಎಂದು ಕೆಲವು ವರದಿಗಳಾಗಿವೆ. ಅಭಿಮಾನಿಗಳು ಸಹ ಹೀಗೆಯೇ ತಿಳಿದಿದ್ದಾರೆ. 37 ವರ್ಷದ ಡೇವಿಡ್, ತಮ್ಮ ನಿವೃತ್ತಿ ಮಾತುಕತೆಯಿಂದ ದೂರವಿರಲು ಬಯಸಿದ್ದಾರೆ. ಅದಕ್ಕೆ ಈ ಆಟವೇ ಸಾಕ್ಷಿ.
ಟೊಮ್ಯಾಟೊವನ್ನು ರೆಫ್ರಿಜರೇಟರ್ ನಲ್ಲಿ ಇಡಬಹುದೇ? ಇಲ್ಲಿದೆ ಕುತೂಹಲಕಾರಿ ಮಾಹಿತಿ: ಟೊಮೆಟೊಗಳನ್ನು ಫ್ರಿಜ್ ನಲ್ಲಿ ಇರಿಸಿದಾಗ, ರೆಫ್ರಿಜರೇಟರ್ ನ ಶೀತದಿಂದಾಗಿ ಲೈಕೋಪೀನ್ ರಚನೆಯು ಬದಲಾಗುತ್ತದೆ. ಇದನ್ನು ಸೇವಿಸಿದರೆ ಕರುಳು ಉಬ್ಬುವುದು, ವಾಕರಿಕೆ, ವಾಂತಿ ಮತ್ತು ಭೇದಿ ಮುಂತಾದ ಲಕ್ಷಣಗಳನ್ನು ಉಂಟುಮಾಡುತ್ತದೆ. ಇದು ಯಕೃತ್ತು ಮತ್ತು ಮೂತ್ರಪಿಂಡಗಳನ್ನು ಸಹ ಹಾನಿಗೊಳಿಸುತ್ತದೆ. ಹಾಗಾಗಿ ಟೊಮೇಟೊವನ್ನು ಫ್ರಿಡ್ಜ್ ನಲ್ಲಿ ದೀರ್ಘಕಾಲ ಇಟ್ಟ ನಂತರ ಬಳಸಬಾರದು. ಫ್ರಿಡ್ಜ್ ನಲ್ಲಿ ಟೊಮೆಟೊಗಳನ್ನು ಇಡುವುದರಿಂದ ಅವುಗಳ ರುಚಿ ಮತ್ತು ವಾಸನೆ ಎರಡೂ ಬದಲಾಗುತ್ತದೆ. ಅವರು ತಿನ್ನಲು ಅಪಾಯಕಾರಿ. ಕರಿಬೇವು ಸೊಪ್ಪಿನ ಪ್ರಯೋಜನಗಳೇನು ಗೊತ್ತಾ?: ಭಾರತೀಯ ಪಾಕ ಪದ್ಧತಿಯಲ್ಲಿ ಕರಿಬೇವಿನ ಸೊಪ್ಪಿಗೆ ಹೆಚ್ಚಿನ ಮಹತ್ವವಿದೆ. ದಕ್ಷಿಣ ಭಾರತದಲ್ಲಿ ಇದನ್ನು ಹೆಚ್ಚಾಗಿ ಬಳಸುತ್ತಾರೆ. ಕರಿಬೇವಿನ ಎಲೆಗಳು ಕಾರ್ಬಜೋಲ್ ಆಲ್ಕಲಾಯ್ಡ್ ಗಳನ್ನು ಹೊಂದಿರುತ್ತವೆ. ಇವು ಸ್ವತಂತ್ರ ರಾಡಿಕಲ್ ವಿರುದ್ಧ ಹೋರಾಡಲು ಸಹಾಯ ಮಾಡುತ್ತವೆ. ದೇಹದ ಜೀವಕೋಶಗಳಿಗೆ ಪೌಷ್ಟಿಕಾಂಶವನ್ನು ಒದಗಿಸುವುದರ ಜೊತೆಗೆ, ಇದು ಟೈಪ್ -2 ಮಧುಮೇಹವನ್ನು ತಡೆಯುತ್ತದೆ. ಅದೇ ಸಮಯದಲ್ಲಿ ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು…
ಹೊಸ ನಾಯಕತ್ವ, ನಟ ವಿಜಯಕಾಂತ್ ಅವರ ಪಕ್ಷಕ್ಕೆ ವಿಜಯಕಾಂತ್ ಅವರ ಪತ್ನಿ ಹಾಗೂ ಪಕ್ಷದ ಖಜಾಂಚಿ ಪ್ರೇಮಲತಾ ವಿಜಯಕಾಂತ್ ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ವಿಜಯಕಾಂತ್ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ. ಇಂದು ನಡೆದ ಸಾಮಾನ್ಯ ಸಭೆ ಹಾಗೂ ಕಾರ್ಯಕಾರಿಣಿ ಸಭೆಯ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ. ವಿಜಯಕಾಂತ್ ಅವರ ಆರೋಗ್ಯ ಸಮಸ್ಯೆಯಿಂದ ನಾಯಕತ್ವ ಬದಲಾವಣೆಯಾಗಿದೆ. ಕಳೆದ ಕೆಲವು ವರ್ಷಗಳಿಂದ ಆರೋಗ್ಯ ಸಮಸ್ಯೆಯಿಂದ ವಿಜಯಕಾಂತ್ ಅವರು ಪಕ್ಷದ ಕಾರ್ಯಗಳಲ್ಲಿ ಸರಿಯಾಗಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ. ಉಸಿರಾಟದ ಕಾಯಿಲೆಯಿಂದ ತೀವ್ರ ಅಸ್ವಸ್ಥರಾಗಿದ್ದ ವಿಜಯಕಾಂತ್ ಕಳೆದ ದಿನ ಆಸ್ಪತ್ರೆಯಿಂದ ನಿರ್ಗಮಿಸಿದ್ದರು. ಆ ಬಳಿಕ ಪಕ್ಷದಲ್ಲಿ ನಾಯಕತ್ವ ಬದಲಾವಣೆಯಾಗಿದೆ. ಪಕ್ಷದ ಅಧ್ಯಕ್ಷರಾಗಿ ವಿಜಯಕಾಂತ್ ಮುಂದುವರಿಯಲಿದ್ದಾರೆ. ಇಂದು ಚೆನ್ನೈನಲ್ಲಿ ನಡೆದ ಸಭೆಯಲ್ಲಿ ವಿಜಯಕಾಂತ್ ಕೂಡ ಭಾಗವಹಿಸಿದ್ದರು. ಸೆಪ್ಟೆಂಬರ್ 14, 2005 ರಂದು ಪಕ್ಷ ಸ್ಥಾಪನೆಯಾದಾಗಿನಿಂದ ವಿಜಯಕಾಂತ್ ಪಕ್ಷದ ಅಧ್ಯಕ್ಷ ಮತ್ತು ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ಆದರೆ ಅವರ ಆರೋಗ್ಯ ಸಮಸ್ಯೆಗಳು ಡಿಎಂಡಿಕೆ ನಾಯಕತ್ವದಲ್ಲಿ ಬದಲಾವಣೆಗೆ ಕಾರಣವಾಯಿತು. ಮುಂದಿನ ದಿನಗಳಲ್ಲಿ ಲೋಕಸಭೆ ಚುನಾವಣೆ ಸೇರಿದಂತೆ…
ದುಬೈನಲ್ಲಿ ನಡೆದ ಕಾರ್ಯಕ್ರಮವೊಂದರ ನಂತರ ನಟಿ ಪೂಜಾ ಹೆಗ್ಡೆಗೆ ಕೊಲೆ ಬೆದರಿಕೆ ಹಾಕಲಾಗಿದೆ ಎಂಬ ಸುದ್ದಿ ಅಂತರ್ಜಾಲದಲ್ಲಿ ವೈರಲ್ ಆದ ನಂತರ ಅವರ ಅಭಿಮಾನಿಗಳು ಬೇಸರಗೊಂಡಿದ್ದಾರೆ. ಪೂಜಾ ಅವರು ಕ್ಲಬ್ ನ ಉದ್ಘಾಟನೆಗೆ ದುಬೈಗೆ ಹೋಗಿದ್ದ ವೇಳೆ ಅಲ್ಲಿ ವಾಗ್ವಾದ ಉಂಟಾಗಿದ್ದು ಆಕೆಗೆ ಜೀವ ಬೆದರಿಕೆ ಹಾಕಲಾಗಿದೆ ಎಂಬ ವರದಿ ಕೇಳಿ ಬಂದಿತ್ತು. ಆದರೆ, ಈ ಸುದ್ದಿಯಲ್ಲಿ ಯಾವುದೇ ಸತ್ಯಾಂಶವಿಲ್ಲ, ಇದು ಸುಳ್ಳು ಸುದ್ದಿ ಎಂದು ನಟಿಯ ತಂಡದವರು ಹೇಳಿದ್ದಾರೆ. ನಟಿಯು ಇನ್ನೂ ಈ ಬಗ್ಗೆ ಅಧಿಕೃತ ಹೇಳಿಕೆ ನೀಡಿಲ್ಲ. ಟಾಲಿವುಡ್ ನಟಿ ಪೂಜಾ ಹೆಗ್ಡೆ ಇತ್ತೀಚೆಗೆ ದುಬೈನಲ್ಲಿ ಜಗಳ ಮಾಡಿಕೊಂಡಿದ್ದು, ಈ ಹಿನ್ನೆಲೆ ಕೆಲವರು ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಬಾಲಿವುಡ್ ಸಾಮಾಜಿಕ ಮಾಧ್ಯಮಗಳು ವರದಿ ಮಾಡಿವೆ. ಇದಕ್ಕೆ ಪೂಜಾ ಹೆಗ್ಡೆ ತಂಡ ಪ್ರತಿಕ್ರಿಯಿಸಿದೆ. ಇದು ಸಂಪೂರ್ಣ ಆಧಾರ ರಹಿತ ಸುದ್ದಿಯಾಗಿದ್ದು, ಸಾಕ್ಷಿ ಇಲ್ಲದೆ ಬರೆಯುವುದಾದರೂ ಹೇಗೆ ಎಂದು ಪೂಜಾ ಹೆಗ್ಡೆ ತಂಡ ಪ್ರಶ್ನಿಸಿದೆ. ಇಂತಹ ಸುಳ್ಳು ಸುದ್ದಿಗಳನ್ನು ಜನರು…
ಸಂಸತ್ತಿನಲ್ಲಿ ಭದ್ರತಾ ಲೋಪವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಒಪ್ಪಿಕೊಂಡಿದ್ದಾರೆ. ಸಂಸತ್ತಿನ ಭದ್ರತೆ ಸ್ಪೀಕರ್ ಅಧಿಕಾರ ವ್ಯಾಪ್ತಿಯಲ್ಲಿದೆ ಎಂದರು. ಸ್ಪೀಕರ್ ಕೋರಿಕೆ ಮೇರೆಗೆ ಉನ್ನತ ಮಟ್ಟದ ತನಿಖಾ ತಂಡ ರಚಿಸಲಾಗಿತ್ತು. ನಿನ್ನೆಯ ಘಟನೆಯಲ್ಲಿ ಪ್ರತಿಪಕ್ಷಗಳು ರಾಜಕೀಯ ಮಾಡುತ್ತಿವೆ ಎಂದು ಅಮಿತ್ ಶಾ ಆರೋಪಿಸಿದ್ದಾರೆ. ಆಜ್ ತಕ್ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಗೃಹ ಸಚಿವರ ಪ್ರತಿಕ್ರಿಯೆ. ಭದ್ರತಾ ಲೋಪದ ಬಗ್ಗೆ ಪ್ರತಿಕ್ರಿಯಿಸುವಂತೆ ಗೃಹ ಸಚಿವಾಲಯವನ್ನು ಒತ್ತಾಯಿಸುತ್ತಿರುವಾಗಲೇ ಅಮಿತ್ ಶಾ ಸಂಸತ್ತಿನ ಹೊರಗೆ ಗಮನಾರ್ಹ ಪ್ರತಿಕ್ರಿಯೆ ನೀಡಿದ್ದಾರೆ. ಸಂಸತ್ತಿನಲ್ಲಿ ಭದ್ರತಾ ಲೋಪ ಗಂಭೀರವಾಗಿದೆ ಎಂದು ಅಮಿತ್ ಶಾ ಗಮನ ಸೆಳೆದಿದ್ದಾರೆ. ಸಂಸತ್ತಿನ ಭದ್ರತೆಯನ್ನು ಹೆಚ್ಚಿಸಲಾಗುವುದು ಮತ್ತು ಈ ಬಗ್ಗೆ ಸಮಗ್ರ ತನಿಖೆ ನಡೆಸಲಾಗುವುದು ಎಂದು ಸಚಿವರು ಭರವಸೆ ನೀಡಿದರು. ತನಿಖಾಧಿಕಾರಿಗಳು ತನಿಖಾ ವರದಿಯನ್ನು ಸಭಾಧ್ಯಕ್ಷರ ಮುಂದೆ ಸಲ್ಲಿಸಲಿದ್ದಾರೆ ಎಂದು ಸ್ಪಷ್ಟಪಡಿಸಿದರು. ನಿನ್ನೆ ಮಧ್ಯಾಹ್ನ ಇಬ್ಬರು ಜನರು ಕಲರ್ ಸ್ಪ್ರೇಯೊಂದಿಗೆ ಸಂಸತ್ತಿಗೆ ಬಂದು ಆತಂಕ ಸೃಷ್ಟಿಸಿದ್ದರು.ಸಂಸತ್ ದಾಳಿಯ 22ನೇ ವಾರ್ಷಿಕೋತ್ಸವದಂದು ಭಾರೀ ಭದ್ರತಾ…