Subscribe to Updates
Get the latest creative news from FooBar about art, design and business.
- ಪ್ರಥಮ ಬಿ.ಸಿ.ಎ. ಪದವಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
- ಕುಣಿಗಲ್ ಪುರಸಭಾ ವ್ಯಾಪ್ತಿಯ ಸಾರ್ವಜನಿಕರಿಗೆ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
- ತುಮಕೂರು: ‘ಕರ್ನಾಟಕ ಪಬ್ಲಿಕ್ ಸ್ಕೂಲ್’ ಸಿನಿಮಾ ಮುಹೂರ್ತ ಸಮಾರಂಭ
- ತುಮಕೂರು: ಪಾದರಕ್ಷೆ ತಯಾರಿಕಾ ಸ್ಪರ್ಧೆಗೆ ಅರ್ಜಿ
- ಭೀಕರ ಅಪಘಾತ: ಶನಿಮಹಾತ್ಮ ದೇವಾಲಯ ವ್ಯವಸ್ಥಾಪಕ ಜಗನ್ನಾಥ್ ನಿಧನ
- ನೈರ್ಮಲ್ಯ ಕಾಪಾಡಿ, ಗರ್ಭಾಶಯದ ಕ್ಯಾನ್ಸರ್ ತಡೆಗಟ್ಟಿ: ಮಹಿಳೆಯರಿಗೆ ಕಾವೇರಿ ಎನ್. ಕರೆ
- ಪೌತಿ ಖಾತೆ, ಕಂದಾಯ ಗ್ರಾಮ ಹಕ್ಕುಪತ್ರ, ಪೋಡಿ ಮುಕ್ತ ಅಭಿಯಾನ: ರೈತರ ಅಲೆದಾಟ ತಪ್ಪಿಸಲು ಸರ್ಕಾರದ ಮಹತ್ವದ ಕ್ರಮ
- ತುಮಕೂರನ್ನು ಬೆಂಗಳೂರಿನ ಭಾಗವಾಗಿಸಿ: ಸಾಧನಾ ಸಮಾವೇಶದಲ್ಲಿ ಡಾ.ಜಿ.ಪರಮೇಶ್ವರ್ ಪ್ರಸ್ತಾಪ
Author: admin
ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದಲ್ಲಿ ಸಿಬಿಐನಿಂದ ಭಾರೀ ದಾಳಿ. ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ನಿವೃತ್ತ ಸಿಬ್ಬಂದಿಯ ಮನೆ ಮತ್ತು ಸಂಸ್ಥೆಗಳಲ್ಲಿ ಶೋಧ ನಡೆಸಲಾಗಿದೆ. ಕೋಲ್ಕತ್ತಾ ಸೇರಿದಂತೆ 13 ಸ್ಥಳಗಳಲ್ಲಿ ಕೇಂದ್ರ ತನಿಖಾ ತಂಡ ತಪಾಸಣೆ ನಡೆಸುತ್ತಿದೆ ಎಂದು ವರದಿಯಾಗಿದೆ. ಇಬ್ಬರು ಮಾಜಿ ಸಿಐಎಸ್ ಎಫ್ ಸಿಬ್ಬಂದಿಯ ಮನೆ ಮತ್ತು ಸಂಸ್ಥೆಗಳ ಮೇಲೆ ದಾಳಿ ನಡೆಯುತ್ತಿದೆ. ಇಬ್ಬರೂ ಸಿಬಿಐ ರಾಡಾರ್ ನಲ್ಲಿದ್ದರು. ಕಲ್ಲಿದ್ದಲು ಕಳ್ಳಸಾಗಣೆ ಪ್ರಕರಣದ ಪ್ರಮುಖ ಆರೋಪಿ ಲಾಲಾ ಅಲಿಯಾಸ್ ಅನೂಪ್ ಮಾಝಿ ಜತೆ ಇವರಿಗೆ ನಿಕಟ ಸಂಬಂಧವಿರುವುದು ಪತ್ತೆಯಾಗಿದೆ. ದಕ್ಷಿಣ ಕೋಲ್ಕತ್ತಾದ ಭವಾನಿಪುರ, ಪಶ್ಚಿಮ ಬುರ್ದ್ವಾನ್ ಜಿಲ್ಲೆಯ ದುರ್ಗಾಪುರ, ಕುಲ್ತಿ ಮತ್ತು ಮಾಲ್ಡಾ ಮುಂತಾದ ಸ್ಥಳಗಳಲ್ಲಿ ಏಕಕಾಲದಲ್ಲಿ ತಪಾಸಣೆ ನಡೆಸಲಾಗುತ್ತಿದೆ. ಕೇಂದ್ರ ಸಶಸ್ತ್ರ ಪೊಲೀಸ್ ಪಡೆಯೊಂದಿಗೆ ದಾಳಿ ನಡೆದಿದೆ. ಕಲ್ಲಿದ್ದಲು ಕಳ್ಳಸಾಗಣೆ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಈ ವರ್ಷದ ಆರಂಭದಲ್ಲಿ ಇಸಿಎಲ್ ನ ಮಾಜಿ ನಿರ್ದೇಶಕ ಮತ್ತು ಕೇಂದ್ರ ಸಿಐಎಸ್ ಎಫ್ ನ ಮಾಜಿ ಇನ್ಸ್ ಪೆಕ್ಟರ್…
ಅಲಹಾಬಾದ್ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಯೊಬ್ಬ ಬಾಂಬ್ ತಯಾರಿಕೆಯ ವೇಳೆ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾನೆ. ವಿಶ್ವವಿದ್ಯಾಲಯದ ಎಂಎ ವಿದ್ಯಾರ್ಥಿ ಪ್ರಭಾತ್ ಯಾದವ್ ಗಾಯಗೊಂಡಿದ್ದಾರೆ. ಹಾಸ್ಟೆಲ್ ಕೊಠಡಿಯಲ್ಲಿ ಬಾಂಬ್ ತಯಾರಿಸುವಾಗ ಬಾಂಬ್ ಸ್ಫೋಟಗೊಂಡಿದೆ. ವಿದ್ಯಾರ್ಥಿಯ ಬಲಗೈಗೆ ಗಂಭೀರ ಗಾಯವಾಗಿದೆ ಎಂದು ವರದಿಯಾಗಿದೆ. ಅವರನ್ನು ಎಸ್ ಆರ್ ಎನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಮತ್ತೊಬ್ಬ ವಿದ್ಯಾರ್ಥಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಾಂಬ್ ಏಕೆ ತಯಾರಿಸಲಾಗಿದೆ ಎಂದು ವಿದ್ಯಾರ್ಥಿ ತನಿಖೆ ನಡೆಸುತ್ತಿದ್ದಾನೆ. ಸದ್ಯದಲ್ಲೇ ಪ್ರಭಾತ್ ಯಾದವ್ ವಿರುದ್ಧ ಪ್ರಕರಣ ದಾಖಲಿಸಲಾಗುವುದು.
ಬೆಳಗಾವಿ: ಸಿರಿಧಾನ್ಯ ಬೆಳೆಯಲ್ಲಿ ಕರ್ನಾಟಕ , ದೇಶದಲ್ಲಿ 4ನೇ ಸ್ಥಾನದಲ್ಲಿದೆ. ಕರ್ನಾಟಕ ದೇಶದಲ್ಲಿಯೇ ಅತಿಹೆಚ್ಚು ಸಿರಿಧಾನ್ಯ ಬೆಳೆಯುವ ರಾಜ್ಯವಾಗಬೇಕೆಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಕೃಷಿ ಇಲಾಖೆ ವತಿಯಿಂದ ಆಯೋಜಿಸಿದ್ದ ಸಿರಿಧಾನ್ಯ ಮತ್ತು ಸಾವಯವ ಅಂತರ ರಾಷ್ಟ್ರೀಯ ದಿನ 2023 ಮತ್ತು ಮೇಳದ ಪೂರ್ವಭಾವಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಸಿರಿಧಾನ್ಯಗಳ ಬಳಕೆಯ ಲಾಭಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಇಂತಹ ಮೇಳಗಳು ಸಹಕಾರಿಯಾಗಿವೆ. ಸಾವಯವ ಕೃಷಿಯತ್ತ ಜನರು ಮುಖ ಮಾಡಿದ್ದು, ಸಾವಯವ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದೆ. ಇಂದು ವಿಶ್ವದಲ್ಲಿ ಸಿರಿಧಾನ್ಯವನ್ನು ಆಚರಿಸಲಾಗುತ್ತಿದೆ ಎಂದರು. ಜನರಲ್ಲಿ ಹಾಗೂ ರೈತರಲ್ಲಿ ಸಿರಿಧಾನ್ಯಗಳ ಬಗ್ಗೆ ಜಾಗೃತಿ ಮೂಡಿಸಲು ಹಾಗೂ ಇವುಗಳಿಗೆ ಮಾರುಕಟ್ಟೆ ಒದಗಿಸಬೇಕು. ಕಳೆದ 20 ವರ್ಷಗಳಿಂದ ಸಾವಯವ ಕೃಷಿ ಪದ್ಧತಿಗೆ ಒತ್ತು ನೀಡಲಾಗುತ್ತಿದೆ. ಅದಕ್ಕೆ ಕೃಷಿ ಇಲಾಖೆಯವರು ಪೂರಕ ಕ್ರಮಗಳನ್ನು ತೆಗೆದುಕೊಳ್ಳಲು ತಿಳಿಸಲಾಗಿದೆ ಎಂದರು.
ಶಿವಮೊಗ್ಗ: ಪ್ರತಾಪ್ ಸಿಂಹ ಅವರಂತಹ ರಾಷ್ಟ್ರಭಕ್ತ ಹಾಗೂ ಹಿಂದುತ್ವವಾದಿಯನ್ನು ಖಂಡಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿಂದು ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸಂಸತ್ ಭವನದಲ್ಲಿ ಭಾರೀ ಭದ್ರತೆ ಇದ್ದರು ಸಹ ಕಿಡಿಗೇಡಿಗಳು ನುಗ್ಗಿ ಇಂತಹ ಕೃತ್ಯ ನಡೆಸಿದ್ದು ಬಹಳ ಆಘಾತಕಾರಿ ಮತ್ತು ಮನಸ್ಸಿಗೆ ನೋವನ್ನುಂಟು ಮಾಡುವ ಸಂಗತಿ ಎಂದು ಹೇಳಿದರು. ಸಂಸತ್ ನಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ವಿರುದ್ಧ ತನಿಖೆ ನಡೆಯಬೇಕು ಅಂತ ಕಾಂಗ್ರೆಸ್ ನಾಯಕರು ಆಗ್ರಹಿಸುತ್ತಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ ನಾಯಕರಿಗೆ ಮಾಡಲು ಬೇರೆ ಕೆಲಸವಿಲ್ಲ ಪ್ರತಾಪ್ ಸಿಂಹ ನಂತಹ ರಾಷ್ಟ್ರಭಕ್ತ ಹಾಗೂ ಹಿಂದುತ್ವವಾದಿಯನ್ನು ಶಂಕಿಸುವುದು, ಖಂಡಿಸುವುದು ಕೇವಲ ಕಾಂಗ್ರೆಸ್ ಅವರಿಂದ ಮಾತ್ರ ಸಾಧ್ಯ ಎಂದು ಹೇಳಿದರು.
ತಮಿಳು ಮಹಿಳೆಯೊಬ್ಬರಿಗೆ ಗೋವಾ ವಿಮಾನ ನಿಲ್ದಾಣದಲ್ಲಿ ಹಿಂದಿ ಗೊತ್ತಿಲ್ಲ ಎಂಬ ಕಾರಣವನ್ನು ಮುಂದಿಟ್ಟುಕೊಂಡು ಅವಮಾನ ಮಾಡಲಾಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಗುರುವಾರ ಆರೋಪಿಸಿದ್ದಾರೆ. ಹಿಂದಿ ಮಾತನಾಡಲು ಬರಲ್ಲ ಎಂದು ತಿಳಿದ ನಂತರ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ ಕಾನ್ ಸ್ಟೇಬಲ್ ಮಹಿಳೆಗೆ ಕಿರುಕುಳ ನೀಡಿದ್ದಾರೆ. ಹಿಂದಿಯಲ್ಲಿ ಮಾತನಾಡುವಂತೆ ಪೊಲೀಸ್ ಹೇಳಿದಾಗ ಆ ಭಾಷೆ ನನಗೆ ಗೊತ್ತಿಲ್ಲ ಎಂದು ಮಹಿಳೆ ಹೇಳಿದ್ದಾರೆ. ನಂತರ ಇದೇ ವಿಚಾರದಲ್ಲಿ ಆಕೆಗೆ ಬೆದರಿಕೆಯೊಡ್ಡಲಾಗಿದೆ ಎಂದು ಎಂದು ಅವರು ದೂರಿದ್ದಾರೆ. ಈ ಘಟನೆಯನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿರುವ ತಮಿಳುನಾಡು ಭಾರತದಲ್ಲಿದ್ದು, ದೇಶದ ಎಲ್ಲಾ ಜನರು ಹಿಂದಿ ಕಲಿಯಬೇಕು ಎಂದು ಸಿಐಎಸ್ಎಫ್ ವ್ಯಕ್ತಿ ಉಪನ್ಯಾಸ ನೀಡಿದ್ದಾರೆ. ಇದು ತೀವ್ರ ಖಂಡನೀಯ ಎಂದಿದ್ದಾರೆ.
ಬೆಳಗಾವಿ: ಸರ್ಕಾರಿ ಜಮೀನು ಒತ್ತುವರಿ ಗುರುತಿಸಲು ರಾಜ್ಯ ಸರ್ಕಾರ ತಂತ್ರಜ್ಞಾನ ಬಳಸಲಿದ್ದು, ಜಿಪಿಎಸ್ ಬಳಸಿ ಜಮೀನುಗಳ ಮಾಲೀಕತ್ವವನ್ನು ಗುರುತಿಸಲು ಸಹಾಯ ಮಾಡುವ ಮೊಬೈಲ್ ಆ್ಯಪ್ ‘Beat’ ಅಭಿವೃದ್ಧಿಗೆ ರಾಜ್ಯ ಸರ್ಕಾರ ಮುಂದಾಗಿದೆ. ವಿಧಾನ ಪರಿಷತ್ ನಲ್ಲಿ ಬುಧವಾರ ಕೇಳಿದ ಪ್ರಶ್ನೆಗೆ ಈ ಬಗ್ಗೆ ಉತ್ತರಿಸಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಒಟ್ಟು 63,32,486 ಎಕರೆ ಸರ್ಕಾರಿ ಭೂಮಿಯಲ್ಲಿ 14,72,493 ಎಕರೆ ಒತ್ತುವರಿಯಾಗಿದೆ. ಅತಿಕ್ರಮಿತ ಭೂಮಿಯಲ್ಲಿ 10,82,752 ಎಕರೆಯನ್ನು ಅಕ್ರಮ-ಸಕ್ರಮ ಯೋಜನೆಯಡಿ ಪರಿಗಣಿಸಲಾಗುತ್ತಿದೆ. ಇನ್ನುಳಿದ 3,89,741 ಎಕರೆಯಲ್ಲಿ 2,73,778 ಎಕರೆ ಒತ್ತುವರಿ ತೆರವು ಮಾಡಲಾಗಿದ್ದು, 1,15,963 ಎಕರೆ ಒತ್ತುವರಿ ತೆರವು ಪ್ರಕ್ರಿಯೆ ನಡೆಯುತ್ತಿದೆ ಎಂದು ತಿಳಿಸಿದರು. ಮುಂದಿನ ತಿಂಗಳಿನಿಂದ ಗ್ರಾಮ ಲೆಕ್ಕಿಗರು ಭೂಮಿ ಪ್ರಮಾಣೀಕರಣಕ್ಕೆ ಆ್ಯಪ್ ಬಳಸಲಿದ್ದಾರೆ. ಅತಿಕ್ರಮಣ ಕಂಡುಬಂದಲ್ಲಿ ತಹಶೀಲ್ದಾರ್ ಗೆ ಆನ್ ಲೈನ್ ನಲ್ಲಿ ವರದಿ ಕಳುಹಿಸಲಾಗುತ್ತದೆ. ಪ್ರಕ್ರಿಯೆಯನ್ನು ನಿಖರವಾಗಿ ಮಾಡಲು ಮೊಬೈಲ್ ಅಪ್ಲಿಕೇಶನ್ ಅನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ರಾಜ್ಯದಲ್ಲಿ ಘೋಷಣೆಯಾಗಿರುವ ಹೊಸ ತಾಲ್ಲೂಕು ಕೇಂದ್ರ ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸಲು ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿಂದು ಪ್ರಶ್ನೋತ್ತರ ವೇಳೆಯಲ್ಲಿ ಮಾಹಿತಿ ನೀಡಿದ ಸಚಿವರು, ಹೊಸದಾಗಿ ಘೋಷಣೆಯಾದ ತಾಲ್ಲೂಕು ಕೇಂದ್ರಗಳ ಬಹಳಷ್ಟು ಆಸ್ಪತ್ರೆಗಳು ತಾಲ್ಲೂಕು ಆಸ್ಪತ್ರೆಗಳಾಗಿ ಮೇಲ್ದರ್ಜೆಗೆ ಏರಿಯಾಗಿಲ್ಲ. ಇದರೊಂದಿಗೆ ರಾಜ್ಯದಲ್ಲಿ 160 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸಹ ಸಮುದಾಯ ಆರೋಗ್ಯ ಕೇಂದ್ರಗಳಾಗಿ ಮೇಲ್ದರ್ಜೆಗೆ ಏರುವ ಅರ್ಹತೆ ಹೊಂದಿವೆ ಎಂದು ತಿಳಿಸಿದರು. ಶಾಸಕರ ಬೇಡಿಕೆಗಳಿಗೆ ಸ್ಪಂದಿಸಿ ಹಣಕಾಸಿನ ಲಭ್ಯತೆ ನೋಡಿಕೊಂಡು ಮೇಲ್ದರ್ಜೆಗೆ ಏರಿಸುವ ಕಾರ್ಯವನ್ನು ಹಂತ ಹಂತವಾಗಿ ಮಾಡಲಾಗುವುದು ಎಂದು ಅವರು ಹೇಳಿದರು.
ಮೈಸೂರು: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಹುಣಸೂರು ವನ್ಯಜೀವಿ ವ್ಯಾಪ್ತಿಯ ಕೃಷಿ ಭೂಮಿಯಲ್ಲಿ ವಿದ್ಯುತ್ ಸ್ಪರ್ಶಿಸಿ ಆನೆಯೊಂದು ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ. ಹುಣಸೂರು ವ್ಯಾಪ್ತಿಯ ಕುಗ್ರಾಮವೊಂದರ ಬಳಿಯ ಕೃಷಿ ಭೂಮಿಯ ಬೇಲಿಗೆ ಅಳವಡಿಸಿದ್ದ ಹೈಟೆನ್ಷನ್ ತಂತಿ ತಗುಲಿ ಆನೆ ಮೃತಪಟ್ಟಿದೆ ಎಂದು ಅರಣ್ಯಾಧಿಕಾರಿಗಳು ಹೇಳಿದ್ದಾರೆ, ಗುರುವಾರ ಬೆಳಗ್ಗೆ ಆನೆಯ ಶವ ಪತ್ತೆಯಾಗಿದೆ. ವಿಚಾರ ತಿಳಿದ ಕೂಡಲೇ ನಮ್ಮ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದರು. ಪ್ರಾಥಮಿಕ ತನಿಖೆಯ ಪ್ರಕಾರ ಆನೆ ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ ಎಂದು ತಿಳಿಸಿದ್ದಾರೆ.
ತುಮಕೂರು: ಕರ್ನಾಟಕ ರಾಜ್ಯ ಗೃಹ ಸಚಿವರ ತವರು ಜಿಲ್ಲೆ ಹಾಗೂ ಸಹಕಾರ ಸಚಿವ ರಾಜಣ್ಣನವರ ಕ್ಷೇತ್ರಗಳಲ್ಲಿ ಇರುವ ಆಸ್ಪತ್ರೆಗಳಲ್ಲಿ ಹೆರಿಗೆ ಮಾಡಿಸಲು ಮತ್ತು ಇತರೆ ವೈದ್ಯಕೀಯ ಸೇವೆಗೆ ದೀನ ದುರ್ಬಲರು ಬಡವರು ಲಂಚ ನೀಡದೆ ಇದ್ದರೆ ಸೇವೆಯೇ ಇಲ್ಲ ಎಂಬಂತಾಗಿದೆ. ಗುರುವಾರ ಬೆಂಗಳೂರಿನ ಆರೋಗ್ಯ ಸೌಧದಿಂದ ಮಧುಗಿರಿ ತಾಲೂಕ್ ಮತ್ತು ಕೊರಟಗೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಗೆ ಒಳ ಪಡುವ ಪುರವರ ಹೋಬಳಿ ಬ್ಯಾಲ್ಯ ಆಸ್ಪತ್ರೆಗಳಿಗೆ ಮುಖ್ಯ ಜಾಗೃತಾ ಅಧಿಕಾರಿ ಕುಪ್ಪೆ ಶ್ರೀನಿವಾಸ್ ಅವರು ಭೇಟಿ ನೀಡುವ ಮುನ್ಸೂಚನೆ ತಿಳಿದ ತುಮಕೂರು ಘಟಕದ ನೈಜ ಹೋರಾಟಗಾರರ ವೇದಿಕೆಯ ಸದಸ್ಯರಾದ ಹಂದ್ರಾಳ್ ನಾಗಭೂಷಣ್, ಮಧುಗಿರಿ ಮಹೇಶ್, ಸತೀಶ್ ಟಿ.ಪಿ. ಅರಳಾಪುರ ರಮೇಶ್, ಅವರು ಮಧುಗಿರಿ ಮತ್ತು ಕೊರಟಗೆರೆ ವಿಧಾನಸಭಾ ವ್ಯಾಪ್ತಿಯ ವ್ಯಾಪ್ತಿಯ ಬ್ಯಾಲ್ಯ ಆಸ್ಪತ್ರೆಗಳಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಮುಖ್ಯ ಜಾಗೃತ ದಳದ ಅಧಿಕಾರಿಗೆ ಲಂಚದ ಹಣ ಸಮೇತ ವಾಸ್ತವ ಸ್ಥಿತಿಗಳನ್ನು ಕಣ್ಣೆದುರೇ ಬಿಚ್ಚಿಟ್ಟರು. ಬ್ಯಾಲ್ಯ ಪ್ರಾಥಮಿಕ ಆಸ್ಪತ್ರೆಯ ವ್ಯಾಪ್ತಿಯ ವಡ್ಡರಹಟ್ಟಿ ಕಾವೇರಿ…
ಬೆಳಗಾವಿ: ಅರಣ್ಯ ಭೂಮಿ ಗಡಿ ಗುರುತಿಸಿ ನಿಖರ ನಕ್ಷೆ ಮಾಡಲು ಅರಣ್ಯ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ಜಂಟಿ ಸರ್ವೆ ಕೈಗೊಳ್ಳಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ವಿಧಾನಸಭೆಯಲ್ಲಿಂದು ಹೇಳಿದರು. ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಸಚಿವರು, ಕರ್ನಾಟಕ ಅರಣ್ಯ ನಿಯಮದ ಪ್ರಕಾರ ಜಿಲ್ಲಾ ಅರಣ್ಯ ಅಥವಾ ರಕ್ಷಿತ ಅರಣ್ಯಕ್ಕೆ ಹೊಂದಿಕೊಂಡತೆ ಹಾಗೂ 100 ಮೀಟರ್ ವ್ಯಾಪ್ತಿಯಲ್ಲಿನ ಭೂಮಿ ಮಂಜೂರಾತಿ ಪೂರ್ವದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಸಮ್ಮತಿ ಪಡೆಯುವುದು ಕಡ್ಡಾಯವಾಗಿದೆ. ಅಧಿಸೂಚಿತ ಹಾಗೂ ಡೀಮ್ಡ್ ಅರಣ್ಯ ಅರಣ್ಯ ಪ್ರದೇಶಗಳಿಗೆ ಸರ್ವೆ ನಂಬರ್ ಅನ್ವಯ ವಿವರವಾದ ಮಾಹಿತಿ ಇಲ್ಲದಂತಹ ಸಂದರ್ಭದಲ್ಲಿ ನಿರಾಕ್ಷೇಪಣ ಪತ್ರ ನೀಡಲು ಕಂದಾಯ ಇಲಾಖೆಯೊಂದಿಗೆ ಜಂಟಿ ಮೋಜಣಿ ಮಾಡಲಾಗುವುದು ಎಂದರು. ಆನೆಗಳ ನಿಯಂತ್ರಣಕ್ಕೆ ಕ್ರಮ: ರಾಜ್ಯದಲ್ಲಿ 6995 ಆನೆಗಳು ಇವೆ. ಒಟ್ಟು 7 ಆನೆ ಕಾರ್ಯಪಡೆಗಳು ಕಾರ್ಯಾಚರಣೆ ನಡೆಸುತ್ತಿವೆ. ಶೃಂಗೇರಿ ವಿಧಾನಸಭಾ ಕ್ಷೇತ್ರಕ್ಕೆ ಓಳಪಡುವ ಆಲ್ಡಾರಾ ಶಾಖೆಯ ಅರಣ್ಯ ಗಡಿ ಪ್ರದೇಶದಲ್ಲಿ ರೈಲ್ವೇ ಬ್ಯಾರಿಕೇಡ್…