Author: admin

ಘಾಟ್‌ಕೋಪರ್ ಪ್ರದೇಶದಲ್ಲಿ ಇಬ್ಬರು ಡ್ರಗ್ ಪೆಡ್ಲರ್‌ ಗಳನ್ನು ಬಂಧಿಸಿದ್ದು, ಬುಧವಾರ 30 ಲಕ್ಷ ರೂಪಾಯಿ ಮೌಲ್ಯದ ಎಂಡಿ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. ಎಎನ್‌ ಸಿಯ ವರ್ಲಿ ಘಟಕವು ಡ್ರಗ್‌ಗಳನ್ನು ವಶಪಡಿಸಿಕೊಂಡಿದೆ ಎಂದು ತಿಳಿಸಲಾಗಿದೆ. ಘಾಟ್‌ಕೋಪರ್ ಪ್ರದೇಶದಲ್ಲಿ ಇಬ್ಬರು ಮಾದಕ ವ್ಯಸನಿಗಳನ್ನು ಬಂಧಿಸಿ 30 ಲಕ್ಷ ರೂಪಾಯಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. ಪೊಲೀಸರು ಇಬ್ಬರ ವಿರುದ್ಧವೂ ಎನ್‌ ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಅವರನ್ನು ಡಿಸೆಂಬರ್ 14ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಮುಂಬೈ ಕ್ರೈಂ ಬ್ರಾಂಚ್ ಪೊಲೀಸರು ತಿಳಿಸಿದ್ದಾರೆ.

Read More

ಅಲಹಾಬಾದ್: ಜ್ಞಾನವ್ಯಾಪಿ ಪ್ರಕರಣದಂತೆಯೇ ಹಿಂದೂ-ಮುಸ್ಲಿಂ ಸಮುದಾಯಗಳ ತಿಕ್ಕಾಟಕ್ಕೆ ಕಾರಣವಾಗಿರುವ ಮತ್ತೊಂದು ಪುಣ್ಯಕ್ಷೇತ್ರ ಕೃಷ್ಣ ಜನ್ಮಭೂಮಿ ಮಥುರಾದಲ್ಲಿರುವ ಶಾಹಿ ಈದ್ಗಾ ಸಂಕೀರ್ಣದ ಸಮೀಕ್ಷೆಗೆ ಅಲಹಾಬಾದ್ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಸಮೀಕ್ಷೆ ವಿಧಾನಗಳನ್ನು ಡಿಸೆಂಬರ್ 18 ರಂದು ನಿರ್ಧರಿಸಲಾಗುವುದು. ಶಾಹಿ ಈದ್ಗಾ ಮಸೀದಿಯ ವಾದವನ್ನು ನ್ಯಾಯಾಲಯ ತಿರಸ್ಕರಿಸಿದೆ. ನಮ್ಮ ಬೇಡಿಕೆಯು ಶಾಹಿ ಈದ್ಗಾ ಮಸೀದಿ ಸರ್ವೆಯಾಗಿತ್ತು. ಶಾಹಿ ಈದ್ಗಾ ಸಂಕೀರ್ಣದಲ್ಲಿ ಹಿಂದೂ ದೇವಾಲಯದ ಸಾಕಷ್ಟು ಚಿಹ್ನೆಗಳು ಇವೆ. ಮತ್ತು ನಿಜವಾದ ಸ್ಥಾನವನ್ನು ತಿಳಿಯಲು, ವಕೀಲ ಕಮಿಷನರ್ ಅಗತ್ಯವಿದೆ. ಇದು ನ್ಯಾಯಾಲಯದ ಮಹತ್ವದ ತೀರ್ಪು ಎಂದು ಹೇಳಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ದೇಗುಲದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಅವರು, “ತೀರ್ಪು ಬರುವುದು ಒಳ್ಳೆಯದು. ಸಮೀಕ್ಷೆ ಮುಖ್ಯವಾಗಿದೆ. ಸಮೀಕ್ಷೆಯು ಸತ್ಯಗಳನ್ನು ಸ್ಪಷ್ಟವಾಗಿ ತೋರಿಸುತ್ತದೆ…” ಎಂದು ಹೇಳಿದರು.

Read More

ಬೀಟ್ರೂಟ್ ದೈಹಿಕ ಮತ್ತು ಮೆದುಳಿನ ಕಾರ್ಯಕ್ಷಮತೆಯನ್ನು ಸುಧಾರಿಸುತ್ತದೆ ಮತ್ತು ಹೆಚ್ಚು ಚುರುಕಾದ ಚಲನೆಗೆ ಸಹಾಯ ಮಾಡುತ್ತದೆ. ಬೀಟ್ರೂಟ್ ಜ್ಯೂಸ್ ಕುಡಿಯುವುದರಿಂದ ಪ್ರಿಫ್ರಂಟಲ್ ಕಾರ್ಟೆಕ್ಸ್ನಲ್ಲಿ ರಕ್ತದ ಹರಿವು ಸುಧಾರಿಸುತ್ತದೆ, ಇದರಿಂದಾಗಿ ಮೆದುಳಿನ ಕಾರ್ಯಕ್ಷಮತೆ ಹೆಚ್ಚಾಗುತ್ತದೆ. ಬೀಟ್ರೂಟ್ ನೈಟ್ರೇಟ್ಗಳಿಂದ ತುಂಬಿದೆ. ಇದು ಅದರ ಮಾಂತ್ರಿಕ ಗುಣಲಕ್ಷಣಗಳ ಹಿಂದಿನ ದೊಡ್ಡ ರಹಸ್ಯವಾಗಿದೆ. ರಕ್ತದೊತ್ತಡವನ್ನು ಕಡಿಮೆ ಮಾಡುವುದು: ಬೀಟ್ರೂಟ್ ಅಧಿಕ ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ. ಫ್ರಾಂಟಿಯರ್ಸ್ ಇನ್ ನ್ಯೂಟ್ರಿಷನ್ನ ಅಧ್ಯಯನದ ಪ್ರಕಾರ, ಇದು ಅದರ ಶ್ರೀಮಂತ ನೈಟ್ರೇಟ್ ಅಂಶಕ್ಕೆ ಕಾರಣವಾಗಿದೆ, ಇದು ದೇಹದ ನೈಟ್ರಿಕ್ ಆಕ್ಸೈಡ್ ಉತ್ಪಾದನೆಯನ್ನು ಹೆಚ್ಚಿಸುತ್ತದೆ. ನೈಟ್ರಿಕ್ ಆಕ್ಸೈಡ್, ದೇಹದಲ್ಲಿ ಸ್ವಾಭಾವಿಕವಾಗಿ ಸಂಭವಿಸುವ ಅನಿಲ, ರಕ್ತನಾಳಗಳನ್ನು ವಿಸ್ತರಿಸಲು ಸಂಕೇತಿಸುತ್ತದೆ, ಹೆಚ್ಚಿದ ರಕ್ತದ ಹರಿವನ್ನು ಉತ್ತೇಜಿಸುತ್ತದೆ ಮತ್ತು ರಕ್ತದೊತ್ತಡದಲ್ಲಿ ನಂತರದ ಕಡಿತವನ್ನು ಉತ್ತೇಜಿಸುತ್ತದೆ. ಅಂತೆಯೇ, ಬೀಟ್ರೂಟ್ ಅನ್ನು ಒಬ್ಬರ ಆಹಾರದಲ್ಲಿ ಸೇರಿಸುವುದು ಕೆಲವು ಹೃದಯರಕ್ತನಾಳದ ಪರಿಸ್ಥಿತಿಗಳನ್ನು ತಡೆಗಟ್ಟಲು ಮತ್ತು ನಿರ್ವಹಿಸಲು ಪರಿಣಾಮಕಾರಿ ಪೂರಕವಾಗಿ ಕಾರ್ಯನಿರ್ವಹಿಸುತ್ತದೆ. ಹೃದಯ ಆರೋಗ್ಯ ಬೆಂಬಲ: ಹೃದಯ ಸಮಸ್ಯೆಗಳಿರುವ ವ್ಯಕ್ತಿಗಳಿಗೆ ಬೀಟ್ರೂಟ್ ಅಮೂಲ್ಯವಾದ…

Read More

ಕೆಲಸಕ್ಕೆ ಹೋಗುವ ಮುಟ್ಟಾದ ಹೆಣ್ಣು ಮಕ್ಕಳಿಗೆ ವೇತನ ಸಹಿತ ರಜೆ ಕೊಡಬೇಕು ಎಂಬ ಕಾಂಗ್ರೆಸ್ ನಾಯಕ ಶಶಿ ತರೂರ್ ಹೇಳಿಕೆಗೆ, ಕೇಂದ್ರ ಸಚಿವೆ ಸ್ಮೃತಿ ಇರಾನಿ ತಿರುಗೇಟು ನೀಡಿದ್ದಾರೆ. ಮುಟ್ಟು ಅನ್ನೋದು ಅಂಗವೈಕಲ್ಯವಲ್ಲ. ಹೆಣ್ಣು ಮಕ್ಕಳಿಗೆ ವೇತನ ಸಹಿತ ರಜೆಯ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸ್ಮೃತಿ ಇರಾನಿ, ಮಹಿಳೆಯರ ಕೆಲಸಕ್ಕೆ ಮುಟ್ಟು ಎಂದಿಗೂ ಅಡ್ಡಿಯಾಗುವುದಿಲ್ಲ. ಅದು ಮಹಿಳೆಯರ ಜೀವನದ ಒಂದು ಭಾಗ ಮತ್ತು ಸಹಜ ಕ್ರಿಯೆ. ಇದಕ್ಕೆಲ್ಲ ವೇತನ ಸಹಿತ ರಜೆಯ ಅಗತ್ಯವಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಅಲ್ಲದೇ, ವೇತನ ಸಹಿತ ಮುಟ್ಟಿನ ರಜೆ ನೀಡಬೇಕು ಎಂದು ಎಲ್ಲಿಂದಲೂ ಸರ್ಕಾರದ ಪರಿಗಣನೆಗೆ ಬಂದಿಲ್ಲ. ಮುಟ್ಟಿನ ನೈರ್ಮಲ್ಯದ ಬಗ್ಗೆ ಜಾಗೃತಿ ಮೂಡಿಸುವ ಯೋಜನೆಯ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಬೇಟಿ ಬಚಾವೋ, ಬೇಟಿ ಪಡಾವೋ ಯೋಜನೆಯಡಿ, ಮುಟ್ಟಿನ ನೈರ್ಮಲ್ಯದ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಸ್ಮೃತಿ ಇರಾನಿ ಹೇಳಿದ್ದಾರೆ.

Read More

ಆಂಧ್ರಪ್ರದೇಶ: ವಿಶಾಖಪಟ್ಟಣಂನ ಇಂಡಸ್ ಆಸ್ಪತ್ರೆಯ ಮೊದಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ನಂದಿಸಲು ಐದು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ. ವಿಶಾಖಪಟ್ಟಣಂನ ಇಂಡಸ್ ಆಸ್ಪತ್ರೆಯಲ್ಲಿ ಮಧ್ಯಾಹ್ನ 12 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಅಲ್ಲಿ ಸುಮಾರು 50-70 ರೋಗಿಗಳಿದ್ದರು. ಅವರೆಲ್ಲರನ್ನೂ ಸ್ಥಳಾಂತರಿಸಿದ್ದೇವೆ. ಅಲ್ಲಿ ಯಾರೂ ಇಲ್ಲ. ಯಾವುದೇ ಪ್ರಾಣ ಹಾನಿಯಾಗಿಲ್ಲ. ಬೆಂಕಿಗೆ ಕಾರಣ ಆಪರೇಷನ್ ಥಿಯೇಟರ್‌ ನಿಂದ ಬಂದಂತೆ ತೋರುತ್ತಿದೆ. ನಾವು ತನಿಖೆ ನಡೆಸಿ ಸತ್ಯವನ್ನು ಕಂಡುಕೊಳ್ಳುತ್ತೇವೆ” ಎಂದು ಪೊಲೀಸ್ ಕಮಿಷನರ್  ರವಿ ಶಂಕರ್ ಅಯ್ಯನಾರ್ ಹೇಳಿದ್ದಾರೆ. ಮೇಲ್ನೋಟಕ್ಕೆ ಶಾರ್ಟ್ ಸರ್ಕ್ಯೂಟ್ ಈ ದುರ್ಘಟನೆಗೆ ಕಾರಣ ಎಂದು ತಿಳಿದು ಬಂದಿದೆ.

Read More

ಗದಗ: ವಿದ್ಯೆ ಕಲಿಸುವ ಶಿಕ್ಷಕನ ಕ್ರೂರತನಕ್ಕೆ ವಿದ್ಯಾರ್ಥಿ ಶಿಕ್ಷೆ ಅನುಭವಿಸುತ್ತಿದ್ದಾನೆ. ಸಹಪಾಠಿಯೊಂದಿಗೆ ಮಾತನಾಡುವಾಗ ಏಕಾಏಕಿ ಬಂದ ಶಿಕ್ಷಕ, ಮೃಗೀಯವಾಗಿ ವಿದ್ಯಾರ್ಥಿಗೆ ಬಡಿಗೆಯಿಂದ ಹಲ್ಲೆ ಮಾಡಿ, ತಳ್ಳಿದ್ದಾನಂತೆ. ಆ ರಭಸಕ್ಕೆ ಬಿದ್ದ ವಿದ್ಯಾರ್ಥಿ ಕೈ ಎಲುಬು ಕಟ್ ಆಗಿದೆ. ಮಗನ ಸ್ಥಿತಿ ಕಂಡು ಹೆತ್ತಮ್ಮ ಕಣ್ಣೀರು ಹಾಕ್ತಾ ಇದ್ದಾರೆ. ನಮಗೆ ನ್ಯಾಯ ಕೊಡಿಸಿ ಎಂದು ಅಂಗಲಾಚುತ್ತಿದ್ದಾರೆ. 6 ನೇ ತರಗತಿ ವಿದ್ಯಾರ್ಥಿಯ ಕೈ ಮುರಿದ ಶಿಕ್ಷಕನ ಕುಕೃತ್ಯದ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಖಾಸಗಿ ಶಿಕ್ಷಣ ಸಂಸ್ಥೆಯ ಶಿಕ್ಷಕ ನಟರಾಜ್ ಎನ್ನುವಾತನಿಂದ ಈ ಕೃತ್ಯ ನಡೆದಿದೆ.  ಏನೂ ತಪ್ಪು ಮಾಡದೇ ಶಿಕ್ಷಕನ ಅಟ್ಟಹಾಸಕ್ಕೆ ಕೈ ಮುರಿದುಕೊಂಡು ವಿದ್ಯಾರ್ಥಿ ನೋವನ್ನು ಅನುಭವಿಸುತ್ತಿದ್ದಾನೆ. ಮಲ್ಲಯ್ಯ ಬಲಗೈ ಮುರಿದು ಹೋಗಿದೆ ಅಂತ ಹೆತ್ತವರರು ಆರೋಪಿಸಿದ್ದಾರೆ. ಘಟನೆ ಬಳಿಕ ಕೂಡಲೇ ವಿದ್ಯಾರ್ಥಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಎಲುಬು ಕಟ್ ಆಗಿರೋದರಿಂದ ವೈದ್ಯರ ಸಲಹೆಯಂತೆ ಆಪರೇಷನ್ ಕೂಡಾ ಮಾಡಿದ್ದಾರೆ. ಆಪರೇಷನ್ ಖರ್ಚು ವೆಚ್ಚ ನೀಡಿ ಶಿಕ್ಷಣ ಸಂಸ್ಥೆ ಕೈತೊಳೆದುಕೊಂಡಿದೆ ಎಂದು…

Read More

ಬೆಳಗಾವಿ:  ‘ನ್ಯುಮೋನಿಯಾ ತೊಲಗಿಸಿ ಆರೋಗ್ಯವಂತ ಬಾಲ್ಯ ಒದಗಿಸಿ’ ಶೀರ್ಷಿಕೆಯಡಿ ಬೆಳಗಾವಿಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಾಮಾಜಿಕ ಜಾಗೃತಿ ಅಭಿಯಾನ ಹಾಗೂ ತಾಯಂದಿರ ಹಾಲಿನ ಬ್ಯಾಂಕ್ʼ ಕಾರ್ಯಕ್ರಮಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಾಲುಣಿಸುವಿಕೆಯನ್ನು ಉತ್ತೇಜಿಸುವಲ್ಲಿ ಹಾಲಿನ ಬ್ಯಾಂಕುಗಳು ನಿರ್ಣಾಯಕ ಪಾತ್ರವನ್ನು ವಹಿಸುತ್ತವೆ. ಇದು ಮಕ್ಕಳ ಅಕಾಲಿಕ ಮರಣ, ಅನಾರೋಗ್ಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಹೇಳಿದರು. ಅಲ್ಲದೆ, ರಾಜ್ಯದ ಪ್ರತಿ ಕಂದಾಯ ವಿಭಾಗಕ್ಕೆ ಒಂದು ಎಂಬಂತೆ ನವಜಾತ ಶಿಶುಗಳ ಆ್ಯಂಬುಲೆನ್ಸ್ ಗಳನ್ನು ಪರಿಚಯಿಸಲಾಗುವುದು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರಾದ ರಂದೀಪ್ ಡಿ, ರಾಷ್ಟ್ರೀಯ ಆರೋಗ್ಯ ಅಭಿಯಾನ ನಿರ್ದೇಶಕರಾದ ಡಾ. ನವೀನ್ ಭಟ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Read More

ಲೋಕಸಭೆಯಲ್ಲಿ ಭದ್ರತಾ ಲೋಪದ ಮೇಲೆ ಕ್ರಮ ಏಳು ಭದ್ರತಾ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಲೋಕಸಭೆ ಸೆಕ್ರೆಟರಿಯೇಟ್‌ ನಿಂದ ಕ್ರಮ ತೆಗೆದುಕೊಳ್ಳಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿಗೆ ಭೇಟಿ ನೀಡಿ ಭದ್ರತಾ ವಿಷಯಗಳನ್ನು ಪರಿಶೀಲಿಸಿದರು. ಕೇಂದ್ರ ಸಚಿವರ ಜತೆಯೂ ಚರ್ಚೆ ನಡೆಸಿದರು. ಬಂಧಿತ ಆರೋಪಿಗಳ ವಿರುದ್ಧ ದೆಹಲಿ ಪೊಲೀಸರು ಯುಎಪಿಎ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ದೆಹಲಿ ಪೊಲೀಸರು ಆರೋಪಿಗಳ ವಿರುದ್ಧ ಕ್ರಿಮಿನಲ್ ಪಿತೂರಿ, ಅತಿಕ್ರಮ ಪ್ರವೇಶ, ಯುಎಪಿಎ ಸೆಕ್ಷನ್ 16 ಮತ್ತು 18 ರ ಆರೋಪ ಹೊರಿಸಿದ್ದಾರೆ. ಸಾಗರ್ ಶರ್ಮಾ, ಅಮೋಲ್ ಧನರಾಜ್ ಶಿಂಧೆ, ನೀಲಂ, ಮನೋರಂಜನ್ ಡಿ ಮತ್ತು ಲಲಿತ್ ಝಾ ಬಂಧಿತರು. ಮೈಸೂರಿನ ಇಂಜಿನಿಯರಿಂಗ್ ಪದವೀಧರ ಡಿ. ಲೋಕಸಭೆಯಲ್ಲಿ ಮನೋರಂಜನ್ ಮತ್ತು ಸಾಗರ್ ಶರ್ಮಾ ಬಣ್ಣ ಎರಚಿದರು. ದಾಳಿಯ ಹಿಂದೆ ಆರು ಜನರ ಕೈವಾಡವಿದ್ದು, ಒಬ್ಬರು ತಲೆಮರೆಸಿಕೊಂಡಿದ್ದಾರೆ. ಹೊಗೆ ಸ್ಪ್ರೇ ದಾಳಿಯ ಹಿಂದೆ ಲಲಿತ್ ಝಾ ಕೈವಾಡವಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳಲ್ಲಿ ಒಬ್ಬರು ಮೈಸೂರು ಬಿಜೆಪಿ ಸಂಸದ ಪ್ರತಾಪ್…

Read More

ಬೆಳಗಾವಿ: ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು  ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಪ್ರಕರಣ ಅಧಿವೇಶನದಲ್ಲೂ ಸದ್ದು ಮಾಡಿದೆ. ಮತ್ತೊಂದೆಡೆ ಮಾತನಾಡಿಸಲು ಯುವತಿ ಮನೆಗೆ ಹೋಗಿದ್ದ ಗ್ರಾ.ಪಂ. ಸದಸ್ಯೆ, ಯುವತಿಯ ತಾಯಿಯ ಸಹೋದರಿ ಎಂಬ ಕಾರಣಕ್ಕೆ ಪ್ರಕರಣದಲ್ಲಿ ಭಾಗಿಯಾಗದಿದ್ದರೂ ಬಂಧಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಕಾಕತಿ ಪೊಲೀಸರ ವಿರುದ್ಧ ಗ್ರಾ.ಪಂ. ಸದಸ್ಯೆ ಸಂಗೀತಾ ಪತಿ ಆಕ್ರೋಶ ಹೊರ ಹಾಕಿದ್ದಾರೆ. ಯುವತಿಯ ತಾಯಿ ಪಾರ್ವತಿ ಹಾಗೂ ಗ್ರಾ.ಪಂ ಸದಸ್ಯೆ ಸಂಗೀತಾ ಇಬ್ಬರು ಸಹೋದರಿಯರು. ಅಕ್ಕನ ಮಗಳು ಓಡಿ ಹೋದ ಸುದ್ದಿ ಕೇಳಿ ಘಟನೆ ನಡೆದ ದಿನ ಬೆಳಗ್ಗೆ 7ಕ್ಕೆ ಯುವತಿ ಮನೆಗೆ ಸಂಗೀತಾ ಹೋಗಿದ್ದರು. ಇದೇ ವೇಳೆ ಮನೆಗೆ ಬಂದ ಪೊಲೀಸರು ನೀವು ದೂರು ಕೊಡಿ ಬನ್ನಿ, ಅಂತಾ ಕರೆದುಕೊಂಡು ಹೋಗಿ ಕಾಕತಿ ಠಾಣೆಗೆ ಹೋದ ಬಳಿಕ ಸಂಗೀತಾರನ್ನು ಬಂಧಿಸಿದ್ದಾರೆ ಎಂದು ಪೊಲೀಸರ ವಿರುದ್ಧ ಪತಿ ಸದಾಶಿವ ಮತ್ತು ಸಹೋದರ ಕಾಡಪ್ಪ ಆಕ್ರೋಶ ಹೊರ ಹಾಕಿದ್ದಾರೆ. ಬೆಳಗಾವಿ ತಾಲೂಕಿನ ವಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿದ ಪ್ರಕರಣ…

Read More

ನವದೆಹಲಿ: ಯತ್ನಾಳ್‌ ಎಲ್ಲೆಲ್ಲಿ ಭಾಷಣ ಮಾಡಿದ್ದಾರೆ ಅಲ್ಲಿ ಯಾರು ಗೆದ್ದಿಲ್ಲ. ದೀಪ ಆರುವಾಗ ಜೋರಾಗಿ ಉರಿಯುತ್ತೆ, ಈಗ ಜೋರಾಗಿ ಉರಿಯುತ್ತಿದೆ ಅಷ್ಟೇ ಎಂದು ಮಾಜಿ ಸಚಿವ ಮುರುಗೇಶ್‌ ನಿರಾಣಿ ಹೇಳಿದ್ದಾರೆ. ಬಿಜಾಪುರದಲ್ಲಿ ಎಷ್ಟು ಜನರನ್ನು ಯತ್ನಾಳ್‌ ಗೆಲ್ಲಿಸಿದ್ದಾರೆ? ಶಕ್ತಿ ಇದ್ದರೇ ಬಿಜಾಪುರದಲ್ಲಿ 2-3 ಸ್ಥಾನ ಗೆಲ್ಲಿಸಬೇಕಿತ್ತು. ಇವರ ನಾಯಕತ್ವ ಎಂತದ್ದು ಎನ್ನುವುದು ಗೊತ್ತಿದೆ. ಅವರು ಯಾಕೆ ಹೀಗೆ ಮಾತನಾಡುತ್ತಿದ್ದಾರೆ ಗೊತ್ತಿಲ್ಲ ಎಂದರು. ರಾವಣ ಶಿವಭಕ್ತ. ಸೀತೆಯನ್ನು ಅಪಹರಣ ಮಾಡಿದ ಮೇಲೆ ಅವನತಿ ಆಯ್ತು. ಪಾಪದ ಕೊಡ ತುಂಬಿದ ಮೇಲೆ ಎಲ್ಲವೂ ಮುಗಿಯಿತು. ಇವರದ್ದು ಪಾಪದ ಕೊಡ ತುಂಬಲು ಬಂದಿದೆ. ಇನ್ನು ಬಹಳ ದಿನ ನಡೆಯುವುದಿಲ್ಲ ಎಂದು ಹೇಳಿದರು. ರಾವಣ ನನ್ನನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದಿದ್ದ. ಆದರೆ ಆತನ ಕಥೆ ಏನಾಯಿತು? ನಾನೇ ಎಲ್ಲ ಅಂದವರಿಗೆ ಏನಾಗಿದೆ? ಇವರ ಕಥೆಯೂ ಹಾಗೇ ಆಗುತ್ತದೆ. ನಾಲ್ಕು ಜನರು ಚಪ್ಪಾಳೆ ಹೊಡೆದರೆ ನಾಯಕ ಅಲ್ಲ. ಲಕ್ಷಾಂತರ ಜನರನ್ನು ಸೇರಿಸಿ ಎಂದಾದರೂ ಕಾರ್ಯಕ್ರಮ ಮಾಡಿದ್ದಾರಾ?. ಸಮಾಜಕ್ಕೆ…

Read More