Author: admin

ತುಮಕೂರಿನ ಜನ ಶಿಕ್ಷಣ ಸಂಸ್ಥೆಯಿಂದ ಜೂನ್ 2ರಿಂದ ವಿವಿಧ ಕೌಶಲ್ಯ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತ ಸರ್ಕಾರದ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯದ ನೆರವಿನೊಂದಿಗೆ ಕಾರ್ಯನಿರ್ವಹಿಸುತ್ತಿರುವ ಈ ಸಂಸ್ಥೆಯು, 2026–27ನೇ ಸಾಲಿನ ಶೈಕ್ಷಣಿಕ ವರ್ಷದ ಅಂಗವಾಗಿ ತನ್ನ ಆವರಣದಲ್ಲೇ ಈ ಕೆಳಗಿನ ಕೋರ್ಸ್‌ಗಳ ತರಬೇತಿಯನ್ನು ನೀಡಲಿದೆ: ಅಸಿಸ್ಟೆಂಟ್ ಡ್ರೆಸ್ ಮೇಕರ್: 80 ದಿನಗಳ ತರಬೇತಿ (ಬೆಳಗ್ಗೆ 10:00 ರಿಂದ ಮಧ್ಯಾಹ್ನ 1:30) ಬ್ಯೂಟಿ ಕೇರ್ ಅಸಿಸ್ಟೆಂಟ್: 80 ದಿನಗಳ ತರಬೇತಿ (ಬೆಳಗ್ಗೆ 10:30 ರಿಂದ ಮಧ್ಯಾಹ್ನ 1:30) ದರ್ಜಿ/ ಟೈಲರ್–ಅಡ್ವಾನ್ಸ್: 40 ದಿನಗಳ ತರಬೇತಿ (ಮಧ್ಯಾಹ್ನ 1:30 ರಿಂದ ಸಂಜೆ 4:30) ಈ ತರಬೇತಿಗಳು ದಿನಕ್ಕೆ ಒಟ್ಟು 3 ಗಂಟೆಗಳ ಕಾಲ ನಡೆಯಲಿದ್ದು, ಯಶಸ್ವಿಯಾಗಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಕೇಂದ್ರ ಸರ್ಕಾರದಿಂದ ಅಧಿಕೃತ ಪ್ರಮಾಣ ಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸುವ ವಿವರ: ಆಸಕ್ತರು ಸಂಸ್ಥೆಯ ಕಚೇರಿಯಲ್ಲಿ ಅರ್ಜಿಗಳನ್ನು ಪಡೆದು ಪ್ರವೇಶ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಗಳನ್ನು “ಜನ…

Read More

ತುಮಕೂರು: ರಾಜ್ಯಾದ್ಯಂತ ಜೂನ್ 28 ರಿಂದ ನಡೆಯಲಿರುವ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಅಲೆಮಾರಿ ಜನ ಸಮುದಾಯವನ್ನೂ ಗಮನದಲ್ಲಿಟ್ಟುಕೊಂಡು ಪೂರ್ಣ ಪ್ರಮಾಣದಲ್ಲಿ ಲಸಿಕೆ ಕಾರ್ಯಕ್ರಮವನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಬುಧವಾರ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮ ಕುರಿತು ಗೂಗಲ್ ಮೀಟಿಂಗ್ ನಡೆಸಿದ ಅವರು, 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಪಲ್ಸ್ ಪೋಲಿಯೋ ಲಸಿಕೆ ಹಾಕಲು ಕ್ರಮವಹಿಸಬೇಕು. ವಿಶೇಷವಾಗಿ ಹೊರರಾಜ್ಯ ಹಾಗೂ ಇತರ ಭಾಗಗಳಿಂದ ಕಟ್ಟಡ ಕಾರ್ಮಿಕರು, ಇನ್ನಿತರ ಕಾರಣಗಳಿಗಾಗಿ ವಲಸೆ ಬಂದಿರುವ ಅಲೆಮಾರಿ ಜನರ ಮಕ್ಕಳಿಗೂ ಲಸಿಕೆ ಹಾಕಲು ಕ್ರಮವಹಿಸಬೇಕು ಎಂದು ಅವರು ಸೂಚಿಸಿದರು. ಆರೋಗ್ಯ ಇಲಾಖೆ ಅಧಿಕಾರಿಗಳು ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳ ಸಹಯೋಗದಲ್ಲಿ ಅಲೆಮಾರಿ ಸಮುದಾಯಗಳು ಬೀಡು ಬಿಟ್ಟಿರುವ ಜಾಗಗಳನ್ನು ಗುರುತಿಸಿ ಲಸಿಕೆ ಕಾರ್ಯಕ್ರಮ ಸಮಯದಲ್ಲಿ ಅವರನ್ನೂ ಒಳಗೊಳ್ಳುವಂತೆ ಮಾಡಬೇಕು. ಜಿಲ್ಲೆಯಲ್ಲಿ ಶೇ.100 ರಷ್ಟು ಲಸಿಕೆ ಕಾರ್ಯ ಪ್ರಗತಿ ಸಾಧಿಸಬೇಕು ಅಂತಾ ಅವರು ಸೂಚನೆ ನೀಡಿದರು.…

Read More

ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಕಳೆದ ಕೆಲವು ತಿಂಗಳುಗಳಿಂದ ತೀವ್ರ ಕುತೂಹಲ ಕೆರಳಿಸಿದ್ದ ನಾಯಕತ್ವ ಬದಲಾವಣೆಯ ಹೈಡ್ರಾಮಾ ಇದೀಗ ಕ್ಲೈಮ್ಯಾಕ್ಸ್ ಹಂತ ತಲುಪಿದೆ. ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗುವುದು ಬಹುತೇಕ ಖಚಿತವಾಗಿದೆ ಎಂದು ಕಾಂಗ್ರೆಸ್ ಉನ್ನತ ಮೂಲಗಳು ತಿಳಿಸಿವೆ. ಪಕ್ಷದ ಹೈಕಮಾಂಡ್ ಸೂಚನೆ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಥಾನ ತ್ಯಾಗಕ್ಕೆ ಒಪ್ಪಿಗೆ ಸೂಚಿಸಿದ್ದು, ಮೇ 29 ಅಥವಾ ಮೇ 31ರಂದು ಅಧಿಕಾರ ಹಸ್ತಾಂತರ ಪ್ರಕ್ರಿಯೆ ನಡೆಯುವ ಸಾಧ್ಯತೆ ದಟ್ಟವಾಗಿದೆ. ಮಂಗಳವಾರ ರಾತ್ರಿ ದೆಹಲಿಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಮಾಡುವ ಅಂತಿಮ ತೀರ್ಮಾನಕ್ಕೆ ಬಂದಿದೆ. ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಲು ಗ್ರೀನ್ ಸಿಗ್ನಲ್ ನೀಡಲಾಗಿದೆ. ಇದಕ್ಕೂ ಮುನ್ನ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜ್ಯ ನಾಯಕತ್ವ ವಹಿಸಿಕೊಳ್ಳುವಂತೆ ಮನವಿ ಮಾಡಲಾಗಿತ್ತಾದರೂ, ಅವರು ವಯಸ್ಸು ಮತ್ತು ಆರೋಗ್ಯದ ಕಾರಣ ನೀಡಿ ನಿರಾಕರಿಸಿದ್ದಾರೆ…

Read More

ತುಮಕೂರು: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸಾರ್ವಜನಿಕರಲ್ಲಿ ಪರಿಸರ ಜಾಗೃತಿ ಮೂಡಿಸಲು ಹಾಗೂ ಹವಾಮಾನ ಕ್ರಮಗಳಲ್ಲಿ ಅವರ ಸಕ್ರಿಯ ಪಾಲ್ಗೊಳ್ಳುವಿಕೆಯನ್ನು ಉತ್ತೇಜಿಸಲು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ (KSPCB) ತುಮಕೂರು ಪ್ರಾದೇಶಿಕ ಕಚೇರಿಯು ವಿಶೇಷ ‘ರೀಲ್ಸ್ ಸ್ಪರ್ಧೆ’ಯನ್ನು ಹಮ್ಮಿಕೊಂಡಿದೆ. ಈ ಬಾರಿಯ ಸ್ಪರ್ಧೆಯನ್ನು “ಪ್ರಕೃತಿಯಿಂದ ಪ್ರೇರಿತ, ಹವಾಮಾನಕ್ಕಾಗಿ: ನಮ್ಮ ಭವಿಷ್ಯಕ್ಕಾಗಿ” ಎಂಬ ಧೇಯವಾಕ್ಯದಡಿ ಆಯೋಜಿಸಲಾಗಿದೆ. ಪರಿಸರ ಸಂರಕ್ಷಣೆ, ಸುಸ್ಥಿರ ಜೀವನಶೈಲಿ ಅಳವಡಿಸಿಕೊಳ್ಳುವುದು, ಹವಾಮಾನ ಬದಲಾವಣೆ ತಡೆಗಟ್ಟುವುದು ಹಾಗೂ ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆಯ ಕುರಿತು ಜನಸಾಮಾನ್ಯರಲ್ಲಿ ಅರಿವು ಮೂಡಿಸುವುದು ಈ ವಿಶಿಷ್ಟ ಸ್ಪರ್ಧೆಯ ಪ್ರಮುಖ ಉದ್ದೇಶವಾಗಿದೆ. ಭಾಗವಹಿಸುವುದು ಹೇಗೆ? ಸ್ಪರ್ಧೆಯಲ್ಲಿ ಆಸಕ್ತಿ ಇರುವ ಸಾರ್ವಜನಿಕರು ಪರಿಸರ ಜಾಗೃತಿಯ ಸಂದೇಶ ಸಾರುವ ರೀಲ್ಸ್‌ಗಳನ್ನು ತಯಾರಿಸಿ, ಅವುಗಳ ಲಿಂಕ್ ಅನ್ನು ಮಂಡಳಿಯ ಅಧಿಕೃತ ಇ-ಮೇಲ್ ವಿಳಾಸವಾದ tumkur@kspcb.gov.in ಗೆ ಕಳುಹಿಸಿಕೊಡಬೇಕಾಗಿ ಪ್ರಾದೇಶಿಕ ಕಚೇರಿಯ ಪ್ರಕಟಣೆ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…

Read More

ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್‌ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಗಂಗಾಧರ್ ತಿಳಿಸಿದ್ದಾರೆ. ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳು: ಚಿಕ್ಕನಾಯಕನಹಳ್ಳಿ, ಹೊಯ್ಸಳಕಟ್ಟೆ, ತಿಮ್ಮನಹಳ್ಳಿ ಹಾಗೂ ದೊಡ್ಡರಾಂಪುರ ವಸತಿ ನಿಲಯಗಳಲ್ಲಿ ತಲಾ 50 ಸ್ಥಾನಗಳು, ಹುಳಿಯಾರು ಮತ್ತು ಕಂದಿಕೆರೆ ವಿದ್ಯಾರ್ಥಿ ನಿಲಯಗಳಲ್ಲಿ ತಲಾ 45 ಸ್ಥಾನಗಳು ಹಾಗೂ ಚಿಕ್ಕನಾಯಕನಹಳ್ಳಿಯ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ 50 ಸ್ಥಾನಗಳು ಲಭ್ಯವಿವೆ. ಹುಳಿಯಾರಿನ ಕನಕದಾಸ ಸಾರ್ವಜನಿಕ ಖಾಸಗಿ ಅನುದಾನಿತ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ 50 ಸ್ಥಾನಗಳು ಹಾಗೂ ಕುಪ್ಪೂರು ತಮ್ಮಡಿಹಳ್ಳಿ ಶ್ರೀ ಮಲ್ಲಿಕಾರ್ಜುನ ಸ್ವಾಮಿ ಅನಾಥಾಲಯದಲ್ಲಿ 45 ಸ್ಥಾನಗಳು ಲಭ್ಯವಿವೆ. ಚಿಕ್ಕನಾಯಕನಹಳ್ಳಿಯ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ 250 ಸ್ಥಾನಗಳು, ಹುಳಿಯಾರಿನ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ 125 ಸ್ಥಾನಗಳು ಹಾಗೂ ಚಿಕ್ಕನಾಯಕನಹಳ್ಳಿಯ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ 100…

Read More

ತುಮಕೂರು: ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ ಸ್ವಯಂ ಉದ್ಯೋಗ ಕಂಡುಕೊಳ್ಳಲು ನೆರವಾಗುವ ನಿಟ್ಟಿನಲ್ಲಿ ತುಮಕೂರಿನ ರುಡ್‌ಸೆಟ್ (RUDSET) ಸಂಸ್ಥೆಯು ಸುವರ್ಣಾವಕಾಶವೊಂದನ್ನು ಕಲ್ಪಿಸಿದೆ. ಸಂಸ್ಥೆಯ ವತಿಯಿಂದ ಜೂನ್ 16 ರಿಂದ ಆರಂಭವಾಗಲಿರುವ 38 ದಿನಗಳ ಉಚಿತ ಕಂಪ್ಯೂಟರ್ ಟ್ಯಾಲಿ (Computer Tally) ತರಬೇತಿಗಾಗಿ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ತರಬೇತಿಯ ಪ್ರಮುಖ ವಿವರಗಳು: 38 ದಿನಗಳು (ಜೂನ್ 16 ರಿಂದ ಪ್ರಾರಂಭ) ಇದು ಸಂಪೂರ್ಣ ಉಚಿತ ವಸತಿಯುತ ತರಬೇತಿಯಾಗಿದ್ದು, ಅಭ್ಯರ್ಥಿಗಳಿಗೆ ಉಚಿತ ಊಟ ಮತ್ತು ವಸತಿಯ ವ್ಯವಸ್ಥೆಯನ್ನು ಕಲ್ಪಿಸಲಾಗುವುದು. ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಮಾನ್ಯತೆ ಪಡೆದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ವಯೋಮಿತಿ: ಅಭ್ಯರ್ಥಿಗಳು 18 ರಿಂದ 50 ವರ್ಷ ವಯೋಮಾನದವರಾಗಿರಬೇಕು. ಭಾಷಾ ಜ್ಞಾನ: ಕನ್ನಡ ಭಾಷೆಯನ್ನು ಓದಲು ಮತ್ತು ಬರೆಯಲು ಕಡ್ಡಾಯವಾಗಿ ಬರಬೇಕು. ಅಗತ್ಯ ದಾಖಲೆಗಳು: ಗ್ರಾಮೀಣ ಭಾಗದ ಬಿಪಿಎಲ್ (BPL) ಕಾರ್ಡ್ ಹಾಗೂ ಆಧಾರ್ ಕಾರ್ಡ್ ಹೊಂದಿರಬೇಕು. ಗ್ರಾಮೀಣ ಭಾಗದ ಆಸಕ್ತ ಹಾಗೂ…

Read More

ಮಧುಗಿರಿ : ಕಟ್ಟಡ ಕಾರ್ಮಿಕರು, ಅಸಂಘಟಿತ ಕಾರ್ಮಿಕರು ಕಾರ್ಮಿಕ ಇಲಾಖೆಯ ವತಿಯಿಂದ ನೀಡಲಾಗುತ್ತಿರುವ ಸ್ಮಾರ್ಟ್ ಕಾರ್ಡ್ ಗಳಿಂದ ದೊರೆಯುವ ಸೌಲಭ್ಯಗಳನ್ನು ಪಡೆದುಕೊಳ್ಳ ಬೇಕೆಂದು ನವ ನಿರ್ಮಾಣ ಕಟ್ಟಡ ಕಟ್ಟುವವರ ಮತ್ತು ಇತರೆ ನಿರ್ಮಾಣ ಕೂಲಿ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ  ಹೆಚ್.ಸಿ. ಶಾಮಣ್ಣರೆಡ್ಡಿ ತಿಳಿಸಿದರು. ಪಟ್ಟಣದ ಪಾವಗಡ ರಸ್ತೆಯ ಸಮೀಪವಿರುವ ಡಾ.ಬಿ.ಆರ್ ಅಂಬೇಡ್ಕರ್ ಕಂಚಿನ ಪ್ರತಿಮೆಯ ಬಳಿ ವಿಶ್ವ ಕಾರ್ಮಿಕರ ದಿನಾಚರಣೆಯ ಅಂಗವಾಗಿ 130 ಜನರಿಗೆ ಸ್ಮಾರ್ಟ್ ಕಾರ್ಡ್‌ಗಳ ವಿತರಣೆ ಹಾಗೂ ಲೇಬರ್ ಕಾರ್ಡ್ ಹೊಂದಿರುವ 24 ಕಟ್ಟಡ ಕಾರ್ಮಿಕರಿಗೆ ಸೇಫ್ಟಿ ಕಿಟ್ ಗಳನ್ನ ವಿತರಿಸಿ ಮಾತನಾಡಿ ಸರ್ಕಾರವು ಕಾರ್ಮಿಕರಿಗಾಗಿ ಹಲವಾರು ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿ ಮಾಡಿದ್ದೂ ಅವುಗಳನ್ನು ಸದುಪಯೋಗ ಪಡಿಸಿಕೊಳ್ಳಲು ಸ್ಮಾರ್ಟ್ ಕಾರ್ಡ್ ಗಳ ಅವಶ್ಯಕತೆ ಹೆಚ್ಚಿದ್ದೂ ಫಲಾನುಭವಿಗಳು ಕಡ್ಡಾಯವಾಗಿ ತಮ್ಮ ಹೆಸರುಗಳನ್ನು ನೊಂದಾಯಿಸ ಬೇಕು. ಜೊತೆಯಲ್ಲಿ ಕಾರ್ಮಿಕರು ರಾಜಕೀಯ ಕ್ಷೇತ್ರದಲ್ಲೂ ಗುರುತಿಸಿಕೊಳ್ಳಬೇಕಾಗಿದ್ದು ಕಾರ್ಮಿಕರು ಒಗ್ಗಟ್ಟಿನಿಂದ ಇರುವುದರ ಜೊತೆಯಲ್ಲಿ ಅವರ ಐಕ್ಯತೆಯು ಚಿರಾಯುವಾಗಿರಬೇಕು ಎಂದರು. ಶ್ರೀಕಾಂತ್ ಮಾತನಾಡಿ, ಕಾರ್ಮಿಕ ಇಲಾಖೆಯು ಕಾರ್ಮಿಕರ…

Read More

ಕೊರಟಗೆರೆ: ಮುಂಗಾರು ಮಳೆ ಆರಂಭವಾಗುತ್ತಿರುವ ಹಿನ್ನೆಲೆ ರೈತರಿಗೆ ರಸಗೊಬ್ಬರ ಹಾಗೂ ಬಿತ್ತನೆ ಬೀಜದ ಕೊರತೆ ಉಂಟಾಗದಂತೆ ತಹಶೀಲ್ದಾರ್ ಮಂಜುನಾಥ್ ಪಟ್ಟಣದ ವಿವಿಧ ರಸಗೊಬ್ಬರ ಅಂಗಡಿಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪರಿಶೀಲನೆ ವೇಳೆ ಪ್ರತಿ ಅಂಗಡಿಗಳಲ್ಲೂ ರಸಗೊಬ್ಬರ ಹಾಗೂ ಬಿತ್ತನೆ ಬೀಜದ ಸ್ಟಾಕ್ ಇದೆಯೇ ಎಂಬುದನ್ನು ಅಧಿಕಾರಿಗಳು ಪರಿಶೀಲಿಸಿದರು. ರೈತರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಅಗತ್ಯ ಪ್ರಮಾಣದಲ್ಲಿ ಗೊಬ್ಬರ ಹಾಗೂ ಬಿತ್ತನೆ ಬೀಜವನ್ನು ಸಂಗ್ರಹಿಸಿಡುವಂತೆ ಅಂಗಡಿ ಮಾಲೀಕರಿಗೆ ಸೂಚನೆ ನೀಡಲಾಯಿತು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ತಹಶೀಲ್ದಾರ್ ಮಂಜುನಾಥ್, “ಯಾವುದೇ ರಸಗೊಬ್ಬರ ಅಂಗಡಿಗಳಲ್ಲಿ ಅಧಿಕ ಬೆಲೆಗೆ ಮಾರಾಟ ಮಾಡುತ್ತಿರುವುದು ಕಂಡು ಬಂದರೆ ತಕ್ಷಣ ನಮ್ಮ ಗಮನಕ್ಕೆ ತರಬೇಕು. ರೈತರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಮಳೆ ಬಿದ್ದ ನಂತರವೂ ಅಗತ್ಯ ಪ್ರಮಾಣದ ರಸಗೊಬ್ಬರ ಹಾಗೂ ಬಿತ್ತನೆ ಬೀಜ ಲಭ್ಯವಿರುತ್ತದೆ” ಎಂದು ತಿಳಿಸಿದರು. ರೈತರಿಗೆ ಅಗತ್ಯ ವಸ್ತುಗಳು ಸಮರ್ಪಕವಾಗಿ ಲಭ್ಯವಾಗುವಂತೆ ಸರ್ಕಾರ ಕ್ರಮ ಕೈಗೊಂಡಿದ್ದು, ಕೊರತೆ ಉಂಟಾಗದಂತೆ ಅಧಿಕಾರಿಗಳು ನಿರಂತರವಾಗಿ…

Read More

ಕೊರಟಗೆರೆ: ಪಟ್ಟಣದ ಮಯೂರ ಬೇಕರಿಯಲ್ಲಿ ಕಳಪೆ ಗುಣಮಟ್ಟದ ಆಹಾರ ಪದಾರ್ಥಗಳ ಮಾರಾಟ ನಡೆಯುತ್ತಿದೆ ಎಂಬ ಸಾರ್ವಜನಿಕರ ದೂರಿನ ಮೇರೆಗೆ ತಹಶೀಲ್ದಾರ್ ಮಂಜುನಾಥ್ ಹಾಗೂ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಉಮೇಶ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪರಿಶೀಲನೆ ವೇಳೆ ಬೇಕರಿ ಒಳಗೆ ಗೃಹ ಬಳಕೆ ಸಿಲಿಂಡರ್ ಬಳಸುತ್ತಿರುವುದು ಪತ್ತೆಯಾಗಿದ್ದು, ಅವಧಿ ನಮೂದಿಸದ ಚಾಕಲೇಟ್‌ ಗಳು ಹಾಗೂ ವಿವಿಧ ರೀತಿಯ ಫುಡ್ ಕಲರ್‌ ಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ. ಅಲ್ಲದೆ ಕೇಕ್ ಹಾಗೂ ಇತರೆ ತಿನಿಸುಗಳಲ್ಲಿ ಮಿತಿಮೀರಿದ ಆಹಾರ ಬಣ್ಣ ಬಳಕೆ ಮಾಡಲಾಗುತ್ತಿದೆ ಎಂಬ ಆರೋಪವೂ ಕೇಳಿ ಬಂದಿದೆ. ಈ ಹಿಂದೆಯೂ ಹಳಸಿದ ಆಹಾರ ಪದಾರ್ಥಗಳನ್ನು ಗ್ರಾಹಕರಿಗೆ ಮಾರಾಟ ಮಾಡಲಾಗುತ್ತಿದೆ ಎಂಬ ಕುರಿತು ಸ್ಥಳೀಯ ಮಾಧ್ಯಮಗಳಲ್ಲಿ ವರದಿಗಳು ಪ್ರಸಾರವಾಗಿದ್ದವು. ಆ ವೇಳೆ ಆಹಾರ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ನೋಟಿಸ್ ಜಾರಿ ಮಾಡಿ ಎಚ್ಚರಿಕೆ ನೀಡಿದ್ದರು. ಆದರೂ ಪದೇ ಪದೇ ನಿಯಮ ಉಲ್ಲಂಘನೆ ಮಾಡಲಾಗುತ್ತಿದೆ ಎಂಬ ಆರೋಪ ಸಾರ್ವಜನಿಕರಿಂದ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ…

Read More

ಬೀದರ್: ಇಲ್ಲಿನ ಹೊರವಲಯದಲ್ಲಿರುವ ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ (KVAFSU) ನಕಲಿ ಬಿಲ್ ಸೃಷ್ಟಿಸಿ ಬರೋಬ್ಬರಿ ₹45 ಕೋಟಿಗೂ ಅಧಿಕ ಹಣದ ಹಗರಣ ಎಸಗಿರುವ ಆರೋಪದ ಮೇಲೆ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಹಾಗೂ ನಿವೃತ್ತ ಕಂಟ್ರೋಲರ್ ಸೇರಿದಂತೆ ಒಟ್ಟು ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳು: ಎಚ್. ಡಿ. ನಾರಾಯಣಸ್ವಾಮಿ (ವಿಶ್ರಾಂತ ಕುಲಪತಿ) ಕೆ. ಎಲ್. ಸುರೇಶ್ (ನಿವೃತ್ತ ಪ್ರಭಾರ ಹಣಕಾಸು ನಿಯಂತ್ರಣಾಧಿಕಾರಿ) ಮೃತ್ಯುಂಜಯ ಹಿರೇಮಠ (ವಿಶ್ವವಿದ್ಯಾಲಯದ ಎಫ್‌ಡಿಎ) ಬೊಪ್ಪಣ್ಣ (ಬೆಂಗಳೂರು ಎಂಟರ್‌ಪ್ರೈಸಸ್ ಮಾಲೀಕರು) ಮಂಜುನಾಥ (ಬೆಂಗಳೂರು ಎಂಟರ್‌ಪ್ರೈಸಸ್ ಮಾಲೀಕರು) ರಾಮಗೊಂಡ ಕಳೆದ 2017–18ರ ಅವಧಿಯಲ್ಲಿ ವಿಶ್ವವಿದ್ಯಾಲಯದಲ್ಲಿ ₹45 ಕೋಟಿಗೂ ಅಧಿಕ ಮೊತ್ತದ ನಕಲಿ ಬಿಲ್‌ಗಳನ್ನು ಸೃಷ್ಟಿಸಿ, ನಿಯಮಬಾಹಿರವಾಗಿ ಅಕ್ರಮ ಎಸಗಲಾಗಿತ್ತು. ಈ ಅವಧಿಯಲ್ಲಿ ಎಚ್. ಡಿ. ನಾರಾಯಣಸ್ವಾಮಿ ಅವರು ಕುಲಪತಿಯಾಗಿ ಹಾಗೂ ಕೆ.ಎಲ್.ಸುರೇಶ್ ಅವರು ಕಂಟ್ರೋಲರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ವಿಶ್ವವಿದ್ಯಾಲಯದ ಎಫ್‌ ಡಿಎ…

Read More