Author: admin

ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸುವ ಕೇಂದ್ರದ ಆಗಸ್ಟ್ 5, 2019 ರ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಸೋಮವಾರ ಎತ್ತಿಹಿಡಿದಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್ನ ಐವರು ನ್ಯಾಯಾಧೀಶರ ಪೀಠವು ಸೋಮವಾರ ತೀರ್ಪು ಪ್ರಕಟಿಸಿತು. ಅವರು 370 ನೇ ವಿಧಿಯನ್ನು ರದ್ದುಗೊಳಿಸುವ ನಿರ್ಧಾರ ‘ದುರುದ್ದೇಶಪೂರಿತ’ ಎಂಬುದನ್ನು ಒಪ್ಪಲು ಸಾಧ್ಯವಿಲ್ಲ ಎಂದು ತಿಳಿಸಿದರು. ಹಿಂದಿನ ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ್ದ 370 ನೇ ವಿಧಿಯ ನಿಬಂಧನೆಗಳನ್ನು ಕೇಂದ್ರವು ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ 23 ಅರ್ಜಿಗಳ ಮೇಲೆ ಐವರು ನ್ಯಾಯಾಧೀಶರನ್ನೊಳಗೊಂಡ ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠವು ತನ್ನ ಮಹತ್ವದ ತೀರ್ಪನ್ನು ಇಂದು ಪ್ರಕಟಿಸಿತು. ರಾಷ್ಟ್ರಪತಿ ಆಳ್ವಿಕೆ ಸಮಯದಲ್ಲಿ ಕೇಂದ್ರದಿಂದ ಯಾವುದೇ ಬದಲಾಯಿಸಲಾಗದ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂಬ ಅರ್ಜಿದಾರರ ವಾದವನ್ನೂ ಈ ಸಂದರ್ಭದಲ್ಲಿ ಸಿಜೆಐ ತಿರಸ್ಕರಿಸಿದರು. ರಾಷ್ಟ್ರಪತಿ ಆಳ್ವಿಕೆ ಸಂದರ್ಭದಲ್ಲಿ ರಾಜ್ಯದ ಪರವಾಗಿ ಕೇಂದ್ರವು ತೆಗೆದುಕೊಳ್ಳುವ ಪ್ರತಿಯೊಂದು ನಿರ್ಧಾರವನ್ನು ಪ್ರಶ್ನಿಸಲು ಸಾಧ್ಯವಿಲ್ಲ ಎಂದು…

Read More

ನವದೆಹಲಿ: ನಾವು ದಿನದ 24 ಗಂಟೆಗಳ ಕಾಲ ಕೆಲಸ ಮಾಡಬೇಕು. ದೇಶಕ್ಕೆ ನಾಯಕತ್ವ ನೀಡುವ, ಎಲ್ಲಕ್ಕಿಂತ ರಾಷ್ಟ್ರೀಯ ಹಿತಾಸಕ್ತಿಗೆ ಆದ್ಯತೆ ನೀಡುವ ರೀತಿಯಲ್ಲಿ ಯುವ ಪೀಳಿಗೆಯನ್ನು ತಯಾರು ಮಾಡಬೇಕು ಎಂದು ಪ್ರಧಾನಿ ನರೇಂದ್ರ  ಮೋದಿ ಕರೆ ನೀಡಿದ್ದಾರೆ. ಭಾರತ್@2047: ಯುವ ಧ್ವನಿ ಉಪಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಪ್ರಧಾನಿ,  ಪ್ರಸಕ್ತ ಅವಧಿಯಲ್ಲಿ ಭಾರತ ಎತ್ತರಕ್ಕೆ ಏರಲಿದೆ ಎಂದು ಪ್ರಧಾನಿ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.  ಭಾರತದ ಯುವಜನತೆಯ ಶಕ್ತಿ ಬದಲಾವಣೆಯ ಪ್ರತಿನಿಧಿ ಹಾಗೂ ಬದಲಾವಣೆಯ ಫಲಾನುಭವಿ ಎರಡೂ ಆಗಿದೆ . ಯಾವುದೇ ರಾಷ್ಟ್ರದ ಜೀವಿತದಲ್ಲಿ, ಇತಿಹಾಸ ಅದರ ಅಭಿವೃದ್ಧಿ ಪಯಣದಲ್ಲಿ ಅತ್ಯುತ್ತಮ ಹೆಜ್ಜೆ ಇಡುವುದಕ್ಕೆ ಸಮಯವನ್ನು ಒದಗಿಸುತ್ತದೆ. ಭಾರತ ಈಗ ಅಮೃತಕಾಲದಲ್ಲಿದೆ ಹಾಗೂ ಈ ಅವಧಿ ಭಾರತಕ್ಕೆ ಅಭೂತಪೂರ್ವವಾದ ಜಿಗಿತಕ್ಕೆ ಸೂಕ್ತವಾಗಿದೆ. ಆದ್ದರಿಂದ ಅಮೃತಕಾಲದ ಪ್ರತಿಯೊಂದು ಕ್ಷಣವನ್ನೂ ಸದುಪಯೋಗಪಡಿಸಿಕೊಳ್ಳಬೇಕೆಂದು ಮೋದಿ ಕರೆ ನೀಡಿದ್ದಾರೆ.

Read More

ಬೆಂಗಳೂರು: ಆಸ್ತಿ ವಿವಾದದ ಹಿನ್ನೆಲೆಯಲ್ಲಿ ವೃದ್ಧ ದಂಪತಿಯನ್ನು ಪುತ್ರನೇ ಕೊಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸೂಲಿಬೆಲೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು 70 ವರ್ಷದ ರಾಮಕೃಷ್ಣಪ್ಪ ಮತ್ತು ಅವರ 65 ವರ್ಷದ ಪತ್ನಿ ಮುನಿರಾಮಕ್ಕ ಎಂದು ಗುರುತಿಸಲಾಗಿದೆ. ಆಸ್ತಿಯನ್ನು ತಮ್ಮ ಹೆಣ್ಣುಮಕ್ಕಳಿಗೂ ಹಂಚಲು ನಿರ್ಧರಿಸಿದ ನಂತರ ದಂಪತಿಯನ್ನು ಅವರ ಮಗ ನರಸಿಂಹನು ಕೊಂದಿದ್ದಾನೆ ಎಂದು ಶಂಕಿಸಲಾಗಿದೆ ಎಂದು ವರದಿ ಮಾಡಿದೆ. ರಾಮಕೃಷ್ಣಪ್ಪ ಮತ್ತು ಮುನಿರಾಮಕ್ಕ ಅವರಿಗೆ ನಾಲ್ವರು ಹೆಣ್ಣು ಮಕ್ಕಳು ಮತ್ತು ಒಬ್ಬ ಮಗ ಇದ್ದನು. 17 ವರ್ಷಗಳ ಹಿಂದೆ ಮಗ ಮದುವೆಯಾದ ಹಿನ್ನೆಲೆಯಲ್ಲಿ ಸೂಲಿಬೆಲೆಯ ಮನೆಯಲ್ಲಿ ಒಂಟಿಯಾಗಿ ವಾಸವಾಗಿದ್ದರು. ಭಾನುವಾರ ಸಂಜೆ ವೃದ್ಧ ದಂಪತಿಯನ್ನು ಕಡಿದು ಹತ್ಯೆ ಮಾಡಲಾಗಿತ್ತು. ಮನೆಗೆ ಹೊರಗಿನಿಂದ ಬೀಗ ಹಾಕಿ ದಂಪತಿಯನ್ನು ಕೊಲೆ ಮಾಡಿ ಶಂಕಿತ ಆರೋಪಿ ಮನೆ ಬಿಟ್ಟು ಪರಾರಿಯಾಗಿದ್ದಾನೆ ಎನ್ನಲಾಗಿದೆ. ದಂಪತಿಗೆ ಅವರ ಪುತ್ರಿಯೊಬ್ಬರು ಕರೆ ಮಾಡಿದಾಗ ಫೋನ್ ಸ್ವೀಕರಿಸದಿದ್ದಾಗ ಕೊಲೆ ನಡೆದಿರುವುದು ಬೆಳಕಿಗೆ ಬಂದಿದೆ. ದಂಪತಿಯ ಪುತ್ರಿಯೊಬ್ಬರು ನೀಡಿದ ದೂರಿನ…

Read More

ರಾಷ್ಟ್ರೀಯ ಹೆದ್ದಾರಿಗೆ ಸಮಾನಾಂತರವಾಗಿ ನಕಲಿ ಟೋಲ್ ಪ್ಲಾಜಾ ನಿರ್ಮಿಸಿ ವಂಚನೆ. ಗುಜರಾತ್ ನಲ್ಲಿ ಈ ಘಟನೆ ನಡೆದಿದೆ. ನಕಲಿ ಟೋಲ್ ಪ್ಲಾಜಾ ಮೂಲಕ ವಂಚಕರು ಒಂದೂವರೆ ವರ್ಷದಲ್ಲಿ 75 ಕೋಟಿ ರೂಪಾಯಿ ವಸೂಲಿ ಮಾಡಿದ್ದಾರೆ. ವೈಟ್ ಹೌಸ್ ಟೈಲ್ಸ್ ಪ್ರೈವೇಟ್ ಲಿಮಿಟೆಡ್ ಎಂಬ ಹೆಂಚಿನ ಕಾರ್ಖಾನೆ ಸ್ಥಗಿತಗೊಂಡ ಜಾಗದಲ್ಲಿ ನಕಲಿ ಟೋಲ್ ಗೇಟ್ ನಿರ್ಮಿಸಲಾಗಿದೆ. ಅಹಮದಾಬಾದ್ – ಮಾಂಡವಿ ರಾಷ್ಟ್ರೀಯ ಹೆದ್ದಾರಿ NH8A ನಲ್ಲಿ ಮೋರ್ಬಿ ಜಿಲ್ಲೆಯ ವಂಕನೇರ್ ಪಟ್ಟಣದ ಬಳಿ ವಘಾಸಿಯಾದಲ್ಲಿ ನಕಲಿ ಟೋಲ್‌ ಗೇಟ್ ಕಾರ್ಯ ನಿರ್ವಹಿಸುತ್ತಿದೆ. ಮೋರ್ಬಿಯಿಂದ ವಾಂಕನೇರ್‌ ಗೆ ಬರುವ ವಾಹನಗಳಿಗೆ ಅರ್ಧದಷ್ಟು ಟೋಲ್ ವಿಧಿಸಿ ಅನುಮತಿಸುತ್ತಿದ್ದರು. 20-200 ದರದಲ್ಲಿ ನಕಲಿ ಟೋಲ್ ‌ಗಳ ಮೂಲಕ ವಾಹನಗಳನ್ನು ಹಾದು ಹೋಗಲು ಅನುಮತಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ವಾಹನಗಳು ಕೂಲಿಕಾರರ ನೆರವಿನಿಂದ ಟೋಲ್ ಗೆ ಆಕರ್ಷಿತವಾಗಿದ್ದು, ಘಟನೆಯಲ್ಲಿ ಐವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಘಾಸಿಯಾದಲ್ಲಿ ಅಧಿಕೃತ ಟೋಲ್ ಗೇಟ್ 110-600 ರೂ. ವೈಟ್ ಹೌಸ್ ಟೈಲ್ಸ್…

Read More

ಕೇರಳದ ದಂಪತಿಗಳು ಹಾಗೂ ಪುತ್ರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ  ಕರ್ನಾಟಕದ ಕೊಡಗು ಜಿಲ್ಲೆಯ ಮಡಿಕೇರಿ ಸಮೀಪದ ಕಗ್ಗೋಡ್ಲು ಗ್ರಾಮದ ರೆಸಾರ್ಟ್ ನಲ್ಲಿ ನಡೆದಿದೆ. ಮೃತರನ್ನು ವಿನೋದ್ ಬಾಬುಸೇನನ್(43) ಮತ್ತು ಜಿಬಿ ಅಬ್ರಹಾಂ (38) ಮತ್ತು 11 ವರ್ಷದ ಮಗಳು ಜೇನ್ ಮರಿಯಾ ಜಾಕೋಬ್ ಎಂದು ಗುರುತಿಸಲಾಗಿದೆ. ಪೊಲೀಸ್ ವರದಿಗಳ ಪ್ರಕಾರ ಮೃತ ಕುಟುಂಬವು ಹಣಕಾಸಿನ ಸಮಸ್ಯೆ ಎದುರಿಸುತ್ತಿದ್ದ ಹಿನ್ನಲೆಯಲ್ಲಿ  ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಶುಕ್ರವಾರ ಸಂಜೆ ರೆಸಾರ್ಟ್ ಗೆ ಮೃತರು ಆಗಮಿಸಿದ್ದು ನಂತರ ಕುಟುಂಬವು ನಿಗದಿ ಪಡಿಸಿದ ಸಮಯಕ್ಕೆ ಚೆಕ್-ಔಟ್ ಮಾಡದೆ ಇದ್ದಾಗ ಅನುಮಾನಗೊಂಡು ರೆಸಾರ್ಟ್ ಸಿಬ್ಬಂದಿಗಳು,  ದಂಪತಿಗಳು   ಉಳಿದುಕೊಂಡಿದ್ದ ಕೋಣೆಯ ಕಿಟಕಿಯ ಮೂಲಕ ಇಣುಕಿ ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ಬೆಳಕಿಗೆ ಬಂದಿದೆ. ವಿಷಯ  ತಿಳಿದ  ಪೋಲಿಸರು ಸ್ಧಳಕ್ಕಾಗಮಿಸಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ ಮೃತ ವ್ಯಕ್ತಿಗಳ ಸಂಬಂಧಿಕರಿಗೆ ಮಾಹಿತಿ ನೀಡಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲಿಸರು ಪ್ರಕರಣ ದಾಖಲಿಸಿ  ತನಿಖೆ ಆರಂಭಿಸಿದ್ದಾರೆ.

Read More

ಬಹುಜನ ಸಮಾಜ ಪಕ್ಷದ (ಬಿಎಸ್‌ ಪಿ) ಮುಖ್ಯಸ್ಥೆ ಮತ್ತು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ಉತ್ತರಾಧಿಕಾರಿಯನ್ನು ಘೋಷಿಸಿದರು. ಸೋದರಳಿಯ ಆಕಾಶ್ ಆನಂದ್ ಪಕ್ಷದ ನೂತನ ಅಧ್ಯಕ್ಷರಾಗಲಿದ್ದಾರೆ. ಭಾನುವಾರ ಲಕ್ನೋದಲ್ಲಿ ನಡೆದ ಪಕ್ಷದ ಸಭೆಯಲ್ಲಿ ಈ ಘೋಷಣೆ ಮಾಡಲಾಗಿದೆ. ಲೋಕಸಭೆ ಚುನಾವಣಾ ಚಟುವಟಿಕೆಗಳನ್ನು ಪರಿಶೀಲಿಸಲು ಕರೆದಿದ್ದ ಸಭೆಯಲ್ಲಿ ಮಾಯಾವತಿ ಈ ಘೋಷಣೆ ಮಾಡಿದ್ದಾರೆ. 28 ವರ್ಷದ ಆಕಾಶ್ ಮಾಯಾವತಿ ಅವರ ಕಿರಿಯ ಸಹೋದರ ಆನಂದ್ ಕುಮಾರ್ ಅವರ ಮಗ. ಪ್ರಸ್ತುತ ಪಕ್ಷದ ರಾಷ್ಟ್ರೀಯ ಸಂಯೋಜಕರಾಗಿದ್ದಾರೆ. 2019 ರಲ್ಲಿ ಮಾಯಾವತಿ ಅವರ ಸಹೋದರ ಪಕ್ಷದ ಉಪಾಧ್ಯಕ್ಷರಾಗಿ ನೇಮಕಗೊಂಡರು. ಬಿಎಸ್‌ ಪಿ ನಾಯಕ ಉದಯವೀರ್ ಸಿಂಗ್ ಸುದ್ದಿ ಸಂಸ್ಥೆ ಎಎನ್ ‌ಐಗೆ ಮಾತನಾಡಿ, ಪಕ್ಷ ದುರ್ಬಲವಾಗಿರುವ ಪ್ರದೇಶಗಳಲ್ಲಿ ಆಕಾಶ್ ಚುನಾವಣಾ ಸಿದ್ಧತೆ ನಡೆಸಲಿದ್ದಾರೆ. ಮಾಯಾವತಿ ಅವರೇ ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಪಕ್ಷವನ್ನು ಮುನ್ನಡೆಸಿದರೆ, ಆನಂದ್ ಅವರು ಇತರ ರಾಜ್ಯಗಳಲ್ಲಿ ಪಕ್ಷವನ್ನು ಮುನ್ನಡೆಸಲಿದ್ದಾರೆ ಎಂದು ಸಿಂಗ್ ಹೇಳಿದರು. 2019 ರ ಲೋಕಸಭೆ ಚುನಾವಣೆಯಲ್ಲಿ ಪಕ್ಷದ…

Read More

ಅಕ್ಟೋಬರ್ 1, 2025 ರಿಂದ ದೇಶದಲ್ಲಿ ತಯಾರಾಗುವ ಎಲ್ಲಾ ಟ್ರಕ್‌ ಗಳಿಗೆ ಚಾಲಕರ ಕ್ಯಾಬಿನ್‌ ನಲ್ಲಿ ಎಸಿಯನ್ನು ಕಡ್ಡಾಯಗೊಳಿಸುವ ಅಧಿಸೂಚನೆಯನ್ನು ಕೇಂದ್ರ ಸರ್ಕಾರ ಹೊರಡಿಸಿದೆ. ಹೊಸ ಅಧಿಸೂಚನೆಯು 3.5 ಟನ್‌ ಗಳಿಂದ 12 ಟನ್ ‌ಗಳಷ್ಟು ತೂಕದ N2 ವರ್ಗದ ಟ್ರಕ್ ‌ಗಳು ಮತ್ತು 12 ಟನ್‌ ಗಿಂತ ಹೆಚ್ಚು ತೂಕದ N3 ಟ್ರಕ್ ‌ಗಳಿಗೆ ಅನ್ವಯಿಸುತ್ತದೆ. ಹವಾಮಾನ ಬದಲಾವಣೆಯಿಂದ ಉಂಟಾಗುವ ದೈಹಿಕ ಅಸ್ವಸ್ಥತೆ ಮತ್ತು ಆಯಾಸವನ್ನು ಕಡಿಮೆ ಮಾಡುವ ಮೂಲಕ ಚಾಲಕರ ಎಚ್ಚರಿಕೆಯನ್ನು ಹೆಚ್ಚಿಸಬಹುದು ಮತ್ತು ಇದರಿಂದ ಹೆದ್ದಾರಿಗಳಲ್ಲಿ ಅಪಘಾತಗಳ ಅಪಾಯವನ್ನು ಸ್ವಲ್ಪಮಟ್ಟಿಗೆ ಕಡಿಮೆ ಮಾಡಬಹುದು ಎಂಬುದು ಹೊಸ ಅಧಿಸೂಚನೆಯ ಮೌಲ್ಯಮಾಪನ. ಕ್ಯಾಬಿನ್‌ ನಲ್ಲಿ ಅಳವಡಿಸಲಾಗಿರುವ ಹವಾನಿಯಂತ್ರಣ ವ್ಯವಸ್ಥೆಯು ನಿಯಮಗಳಿಗೆ ಅನುಗುಣವಾಗಿರುವುದನ್ನು ಖಚಿತಪಡಿಸಿಕೊಳ್ಳಲು ತಪಾಸಣೆ ನಡೆಸಲಾಗುವುದು ಎಂದು ಕೇಂದ್ರ ತಿಳಿಸಿದೆ. ಹೊಸ ಅಧಿಸೂಚನೆಯು ದೂರದ ಟ್ರಕ್ ‌ಗಳ ಚಾಲಕರಿಗೆ ಆರಾಮದಾಯಕ ಕೆಲಸದ ಪರಿಸ್ಥಿತಿಗಳನ್ನು ಖಾತ್ರಿಪಡಿಸುವ ಭಾಗವಾಗಿದೆ.

Read More

ಜಮೀನು ವರ್ಗಾವಣೆ ವಿವಾದದ ಹಿನ್ನೆಲೆಯಲ್ಲಿ ಮಗ ತನ್ನ ತಾಯಿಯ ತಲೆ ಕಡಿದು ಹತ್ಯೆ ಮಾಡಿದ್ದಾನೆ. 65 ವರ್ಷದ ಮಹಿಳೆಯನ್ನು ಕೃಷಿಗೆ ಬಳಸುವ ಚೂಪಾದ ಬ್ಲೇಡ್‌ ನಿಂದ ಶಿರಚ್ಛೇದ ಮಾಡಲಾಗಿದೆ. ಉತ್ತರ ಪ್ರದೇಶದ ಸೀತಾಪುರದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ಶನಿವಾರ ಮೆಜಾಪುರ ಗ್ರಾಮದಲ್ಲಿ ಈ ದಾರುಣ ಹತ್ಯೆ ನಡೆದಿದೆ. ತಾಯಿ ಕಮಲಾದೇವಿ (65) ತನ್ನ ಮಗ ದಿನೇಶ್ ಪಾಸಿ (35) ಹೆಸರಿಗೆ ಜಮೀನು ಡೀಡ್ ಮಾಡದ ಹಿನ್ನೆಲೆಯಲ್ಲಿ ವಿವಾದವು ಕೊಲೆಗೆ ಕಾರಣವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಮಲಾದೇವಿ ಅವರ ಮನೆಯ ಹೊರಭಾಗದಲ್ಲಿ ಪತ್ತೆಯಾದ ತಲೆಯಿಲ್ಲದ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ದಿನೇಶ್ ಪಾಸಿ ಮಾದಕ ವ್ಯಸನಿಯಾಗಿದ್ದು, ಕೊಲೆ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದಾನೆ ಎಂದು ಸೀತಾಪುರ ಎಸ್ಪಿ ಚಕ್ರೇಶ್ ಮಿಶ್ರಾ ತಿಳಿಸಿದ್ದಾರೆ. ಆರೋಪಿಗಳ ಪತ್ತೆಗೆ ಪ್ರಯತ್ನ ಮುಂದುವರಿದಿದೆ ಎಂದು ಎಸ್ಪಿ ತಿಳಿಸಿದ್ದಾರೆ.

Read More

ಉತ್ತರ ಪ್ರದೇಶದಲ್ಲಿ ಸಂಭವಿಸಿದ ಅಪಘಾತದಲ್ಲಿ ಕಾರೊಂದು ಹೊತ್ತಿ ಉರಿದ ಪರಿಣಾಮ ಎಂಟು ಮಂದಿ ಸಜೀವ ದಹನವಾಗಿದ್ದಾರೆ. ಮೃತರಲ್ಲಿ ಮಗುವೂ ಸೇರಿದೆ ಬರೇಲಿ-ನೈನಿತಾಲ್ ಹೆದ್ದಾರಿಯಲ್ಲಿ ಕಾರು ಟ್ರಕ್‌ಗೆ ಡಿಕ್ಕಿ ಹೊಡೆದು ಕಾರು ಹೊತ್ತಿ ಉರಿದಿದೆ. ಉತ್ತರ ಪ್ರದೇಶ ಬರೇಲಿ-ನೈನಿತಾಲ್ ಹೆದ್ದಾರಿಯಲ್ಲಿ ನಿನ್ನೆ ರಾತ್ರಿ ಈ ಘಟನೆ ನಡೆದಿದೆ. ಮದುವೆ ಸಮಾರಂಭದಲ್ಲಿ ಪಾಲ್ಗೊಂಡು ವಾಪಸ್ಸಾಗುತ್ತಿದ್ದಾಗ 8 ಜನರಿದ್ದ ಮಾರುತಿ ಎರ್ಟಿಕಾ ಕಾರು ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರಿನ ಟಯರ್ ಸ್ಫೋಟಗೊಂಡಿದ್ದು, ನಿಯಂತ್ರಣ ತಪ್ಪಿದ ಕಾರು ವಿರುದ್ಧ ದಿಕ್ಕಿನಲ್ಲಿದ್ದ ರಸ್ತೆಯಲ್ಲಿ ತಲೆಕೆಳಗಾಗಿ ಪಲ್ಟಿಯಾಗಿದೆ. ತಕ್ಷಣ ಕಾರಿಗೆ ಬೆಂಕಿ ಹೊತ್ತಿಕೊಂಡಿತು. ಸ್ಥಳಕ್ಕೆ ದೌಡಾಯಿಸಿದ ಜನರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ ಎಂದು ಬರೇಲಿ ಎಸ್ ‌ಎಸ್‌ ಪಿ ಗುಳೆ ಸುಶೀಲ್ ಚಂದ್ರಭಾನ್ ತಿಳಿಸಿದ್ದಾರೆ. ಅಗ್ನಿಶಾಮಕ ಪಡೆ ಬೆಂಕಿಯನ್ನು ನಂದಿಸಿದರೂ ಯಾರನ್ನೂ ಉಳಿಸಲಾಗಲಿಲ್ಲ.ಕಾರು ಸೆಂಟ್ರಲ್ ಲಾಕ್ ಆಗಿದ್ದರಿಂದ ಪ್ರಯಾಣಿಕರು ಬೇಗನೆ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಮುಂದಿನ ಕ್ರಮ ಪ್ರಗತಿಯಲ್ಲಿದೆ ಎಂದು ಪೊಲೀಸರು…

Read More

ಹರಿಯಾಣದ ಗುರುಗ್ರಾಮ್ ‌ನಲ್ಲಿ 13 ವರ್ಷದ ಕೆಲಸದಾಕೆಯನ್ನು ಅಮಾನುಷವಾಗಿ ಹಲ್ಲೆ ನಡೆಸಲಾಗಿದೆ. ಮನೆಯ ಮಾಲೀಕರು ನಾಯಿ ಕಚ್ಚಲು ಅವಕಾಶ ಮಾಡಿಕೊಟ್ಟು ಬಾಲಕಿಯನ್ನು ಬೆತ್ತಲೆಯಾಗಿ ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ಬಾಯಿಗೆ ಟೇಪ್ ಹಾಕಿಕೊಂಡು ಕೊಠಡಿಗೆ ಬೀಗ ಹಾಕಿದ್ದಾರೆ ಎಂಬುದು ದೂರು ನೀಡಿದ್ದಾರೆ. ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹುಡುಗಿಗೆ 48 ಗಂಟೆಗಳಲ್ಲಿ ಒಮ್ಮೆ ಮಾತ್ರ ಆಹಾರವನ್ನು ನೀಡಲಾಯಿತು. ಆ್ಯಸಿಡ್‌ ನಿಂದ ಕೈ ಸುಟ್ಟು, ಬಾಯಿಗೆ ಟೇಪ್‌ ಅಂಟಿಸಿ ಕೊಠಡಿಗೆ ಬೀಗ ಹಾಕಿದ್ದರು. ಹೊರಗಡೆ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. 13 ವರ್ಷದ ಬಾಲಕಿಯನ್ನು ಮಗುವಿನ ತಾಯಿ ಶನಿವಾರ ಕೊಠಡಿಯಿಂದ ರಕ್ಷಿಸಿದ್ದಾರೆ. ಬಡತನದಿಂದ ಮಗಳನ್ನು ಕೆಲಸಕ್ಕೆ ಕಳುಹಿಸಲಾಗಿದೆ ಎಂದು ತಾಯಿ ಹೇಳಿದ್ದಾರೆ.

Read More