Author: admin

ನೆಲ, ಜಲ, ಭಾಷೆ ವಿಷಯದಲ್ಲಿ ಯಾವಾತ್ತು ರಾಜಿಯಾಗುವುದಿಲ್ಲ ಎಂದು ನಟಿ ಪೂಜಾಗಾಂಧಿ ಹೇಳಿದರು. ಬಂದ್ ಹಿನ್ನೆಲೆಯಲ್ಲಿ ಬೆಂಗಳೂರಿನ ಫಿಲ್ಡ್ ಚೇಂಬರ್ ಮುಂದೆ ಆಯೋಜಿಸಿರುವ ಧರಣಿಯಲ್ಲಿ ಅವರು ಮಾತನಾಡಿದರು. ಕಾವೇರಿ ನಮ್ಮದು, ಕೆಆರ್ ಎಸ್ ನಿಂದ ಒಂದೂ ಹನಿಯನ್ನು ಬಿಡಬಾರದು. ನಮ್ಮ ರಾಜ್ಯದ ರೈತರ ಹಿತವೂ ನಮಗೆ ಮುಖ್ಯ ಎಂದು ಕಿಡಿಕಾರಿದರು. ಮೇಕೆದಾಟು ಯೋಜನೆ ನಮಗೆ ಎಷ್ಟು ಮುಖ್ಯವಾಗಿದೆ ಎನ್ನುವುದನ್ನು ಮನಗಾಣಬೇಕು ಎಂದು ಸಲಹೆ ನೀಡಿದರು. ಈ ವೇಳೆ ನಟಿ ಪೂಜಾ ಗಾಂಧಿ ಮಾತನಾಡಿ ಕನ್ನಡಿಗರು ಸ್ನೇಹ, ಸಹಬಾಳ್ವೆಯಿಂದ ಇದ್ದೇವೆ. ಈ ನಾಡಿಗೆ ಚೆನ್ನಾಗಿ ಮಳೆ ಬರಲಿ ಅಂತ ದೇವರಲ್ಲಿ ಬೇಡಿಕೊಳ್ಳುತ್ತೇನೆ. ಕನ್ನಡಿಗರು ತುಂಬಾ ತಾಳ್ಮೆ ಇರುವವರು. ನಮ್ಮ ತಾಳ್ಮೆಯನ್ನು ಪರೀಕ್ಷಿಸಬಾರದು. ಮೇಕೆದಾಟು ಎಷ್ಟು ಅವಶ್ಯಕ ಅನ್ನೋದನ್ನು ಯೋಚಿಸಬೇಕು. ಎಲ್ಲದಕ್ಕೂ ಒಂದು ಕೀಲಿಗೈ ಇರುತ್ತೆ. ಹಾಗೇ ಎಲ್ಲಾ ಸಮಸ್ಯೆಗೂ ಪರಿಹಾರ ಇರುತ್ತೆ. ನಾವು ಆ ಪರಿಹಾರ ಹುಡುಕಲು ಮುಂದಾಗಬೇಕು ಎಂದು ಹೇಳಿದರು.

Read More

ಬೆಂಗಳೂರು: ನಾವು ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಬಂದ್​ ಮಾಡದಂತೆ ಸಂಘಟನೆಗಳಿಗೆ ಮನವಿ ಮಾಡಿದ್ದೇವೆ. ಕಾನೂನಿನ ಪ್ರಕಾರ ಬಂದ್​ ಮಾಡಬಾರದು. ಸರ್ಕಾರದೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡಿದ್ದೇನೆ. ನಿಯಮ ಉಲ್ಲಂಘಿಸಿದರೇ  ಕಾನೂನು ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ಹೀಗಾಗಿ ಸಹಕರಿಸುತ್ತಾರೆ ಎಂಬ ವಿಶ್ವಾಸವಿದೆ. ಸುಖ ಸುಮ್ಮನೆ ಬಂಧಿಸುವುದಿಲ್ಲ. ಕಾನೂನು ವಿರುದ್ಧ ನಡೆದುಕೊಂಡರೆ ಬೇರೆ ವಿಧಿಯಿಲ್ಲ ಎಂದು ಡಾ.ಜಿ ಪರಮೇಶ್ವರ್​​ ಹೇಳಿದ್ದಾರೆ.

Read More

ಬೆಂಗಳೂರು: ಕರ್ನಾಟಕ ಬಂದ್​​​ ಗೆ ನಮ್ಮ ಸಂಪೂರ್ಣ ಬೆಂಬಲ ಇದೆ. ಜೆಡಿಎಸ್ ಪಕ್ಷದಿಂದ ನೈತಿಕ ಬೆಂಬಲ ಘೋಷಣೆ ಮಾಡಿದ್ದೇವೆ. ಈಗಿನ ಪರಿಸ್ಥಿತಿಯಲ್ಲಿ ಕಾವೇರಿ ನೀರಿಗಾಗಿ ಹೋರಾಟ ಮಾಡೋದು ಅನಿವಾರ್ಯ. ಸರ್ಕಾರದ ನಡವಳಿಕೆಯನ್ನು ನೋಡಿದರೆ ಒಲೈಕೆ ರಾಜಕಾರಣ ಮಾಡುತ್ತಿದ್ದಾರೆ. ಕಾವೇರಿ ವಿಚಾರದಲ್ಲಿ ಯಾರು ರಾಜಕೀಯ ಮಾಡಬಾರದು ತಮಿಳುನಾಡಿನಲ್ಲಿ ಈಗಾಗಲೇ ಸಾಕಷ್ಟು ಮಳೆಯಾಗಿದೆ. ಮತ್ತಷ್ಟು ಮಳೆಯಾಗುವ ಸಾಧ್ಯತೆ ಇದೆ ಆದರೂ ನೀರಿಗಾಗಿ ಖ್ಯಾತೆ ನಡೆಯುತ್ತಿದೆ. ಸರ್ಕಾರ ಯಾವುದೇ ರೀತಿ ರಾಜ್ಯದ ಜನರ ಪರವಾಗಿ ನಿಲುವು ತೆಗೆದುಕೊಳ್ಳುತ್ತಿಲ್ಲ. ಹೀಗಾಗಿ ಹೋರಾಟ ಅನಿವಾರ್ಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್​​ ಡಿ ಕುಮಾರಸ್ವಾಮಿ ಹೇಳಿದರು. ಕಾವೇರಿಗಾಗಿ ಬಂದ್​ ಹೋರಾಟಕ್ಕೆ ಇಡೀ ಕರುನಾಡು ಮಿಡಿದಿದೆ. ಇಂದಿನ ಬಂದ್​ ಗೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಾಡು, ನುಡಿ, ನೆಲ, ಜಲದ ಪ್ರಶ್ನೆ ಬಂದಾಗ ಎಲ್ಲರೂ ಒಂದಾಗಬೇಕು. ಕನ್ನಡ ಕುಟುಂಬದಲ್ಲಿ ಹಾಸುಹೊಕ್ಕಾಗಿರುವ ಈ ಸಾಮರಸ್ಯ ಹಾಗೂ ಐಕ್ಯತೆ ನೆರೆ ರಾಜ್ಯಗಳಿಗೆ ಎಚ್ಚರಿಕೆ ಗಂಟೆ ಆಗಬೇಕು. ಕಾಂಗ್ರೆಸ್ ಸರ್ಕಾರ ಕನ್ನಡ ಭಾವನೆಗಳನ್ನು ದಮನ…

Read More

ವರ ನಟ ಡಾ.ರಾಜಕುಮಾರ ಅವರು ಕಾವೇರಿ ವಿಚಾರ ಬಂದಾಗ ಎಲ್ಲರನ್ನು ಎಬ್ಬಿಸಿ ಜಾಗೃತರಾಗಿಸುತ್ತಿದ್ದರು ಎಂದು ಹಿರಿಯ ನಟ ಶ್ರೀನಾಥ್ ಹೇಳಿದರು. ಬಂದ್ ಹಿನ್ನೆಲೆಯಲ್ಲಿ ಬೆಂಗಳೂರಿನ ಫಿಲ್ಡ್ ಚೇಂಬರ್ ಮುಂದೆ ಆಯೋಜಿಸಿರುವ ಧರಣಿಯಲ್ಲಿ ಅವರು ಮಾತನಾಡಿದರು. ಕಾವೇರಿ ವಿಚಾರದಲ್ಲಿ ಸರ್ಕಾರ ಎಚ್ಚರಿಕೆಯ ಹೆಜ್ಜೆ ಇಡಬೇಕು. ಆದರೆ ಇಲ್ಲಿ ಆ ಕೆಲಸವಾಗುತ್ತಿಲ್ಲ. ಇದರಿಂದ ರೈತರು ತೊಂದರೆಗೆ ಒಳಗಾಗುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Read More

ರಾಜ್ಯ ಬಂದ್ ಹಿನ್ನೆಲೆಯಲ್ಲಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್, ಬೆಂಗಳೂರಿನ ಡಾಲರ್ಸ್‌ ಕಾಲೋನಿಯಲ್ಲಿ ಕಪ್ಪು ಬುರ್ಖ ಧರಿಸಿ, ಖಾಲಿ ಕೊಡವನ್ನು ತಲೆ ಮೇಲೆ ಇಟ್ಟುಕೊಂಡು ವಿನೂತನವಾಗಿ ಪ್ರತಿಭಟನೆ ಮಾಡುವ ಮೂಲಕ ಖಂಡಿಸಿದರು. ನಾವು ಕಾವೇರಿ ನೀರು ಬಿಡಬೇಡಿ ಎಂದು ಬಂದ್ ಮಾಡುತ್ತಿದ್ದೇವೆ. ಆದರೆ ರಾಜ್ಯಸರ್ಕಾರ ನಮ್ಮನ್ನು ಬಂದ್ ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ನೀರು ಬಿಡಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

Read More

ಉತ್ತರ ಪ್ರದೇಶದಲ್ಲಿ ಗರ್ಭಿಣಿ ಮಹಿಳೆಯನ್ನು ಆಕೆಯ ತಾಯಿ ಮತ್ತು ಸಹೋದರ ಸಜೀವ ದಹನ ಮಾಡಿದ್ದಾರೆ. 23ರ ಹರೆಯದ ಅವಿವಾಹಿತ ಮಹಿಳೆಯೊಬ್ಬಳು ಮುಜುಗರದ ಭಯದಿಂದ ಗರ್ಭಿಣಿ ಎಂಬ ಆರೋಪ ಕೇಳಿ ಬಂದಿತ್ತು. ಮಹಿಳೆಯ ತಾಯಿ ಮತ್ತು ಸಹೋದರನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಹಾಪುರದ ನಾವಡ ಖುರ್ದ್ ಗ್ರಾಮದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ಪೊಲೀಸರ ಪ್ರಕಾರ ಬಾಲಕಿ ಅದೇ ಗ್ರಾಮದ ಯುವಕನೊಂದಿಗೆ ಅನ್ಯೋನ್ಯವಾಗಿದ್ದಳು. ಆತನಿಂದ ಯುವತಿ ಗರ್ಭಿಣಿಯಾದಳು. ಕಳೆದ ದಿನ ಮಹಿಳೆ ಗರ್ಭಿಣಿಯಾಗಿದ್ದಾಳೆಂದು ಮನೆಯವರಿಗೆ ತಿಳಿಯಿತು. ನಂತರ ಮಹಿಳೆಯನ್ನು ಬರ್ಬರವಾಗಿ ಥಳಿಸಲು ಮುಂದಾದರು. ಗುರುವಾರದಂದು ಆಕೆಯ ತಾಯಿ ಮತ್ತು ಸಹೋದರ ಬಾಲಕಿಯನ್ನು ಸಮೀಪದ ಕಾಡಿಗೆ ಕರೆದೊಯ್ದು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ತೀವ್ರ ಸುಟ್ಟಗಾಯಗಳೊಂದಿಗೆ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶೇ.70ಕ್ಕೂ ಹೆಚ್ಚು ದೇಹ ಸುಟ್ಟಿದೆ. ಬಾಲಕಿಯ ತಾಯಿ ಮತ್ತು ಸಹೋದರನ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಾಗಿದ್ದು, ಘಟನೆಯ ತನಿಖೆ ಪ್ರಗತಿಯಲ್ಲಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಹಾಪುರ್) ರಾಜ್‌ ಕುಮಾರ್ ಅಗರ್ವಾಲ್…

Read More

ಮನೆಕೆಲಸಕ್ಕೆ ತಡವಾಗಿ ಬಂದಿದ್ದಕ್ಕೆ 13 ವರ್ಷದ ಬಾಲಕನನ್ನು ಅಮಾನುಷವಾಗಿ ಥಳಿಸಲಾಗಿದೆ. ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಪ್ರಕರಣದಲ್ಲಿ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಪಾಲ್ಘರ್ ಜಿಲ್ಲೆಯ ಖಮ್ಲೋಲಿ ಗ್ರಾಮದಲ್ಲಿ ಸೋಮವಾರ ಈ ಘಟನೆ ನಡೆದಿದೆ. ಸೆ.25ರಂದು ಬೆಳಗ್ಗೆ ಗ್ರಾಮದ ಗಣೇಶ ದೇವಸ್ಥಾನಕ್ಕೆ ಹುಡುಗ ದರ್ಶನಕ್ಕೆ ತೆರಳಿದ್ದ ಅವನು ತನ್ನ ಮಾಲೀಕರ ಮನೆಗೆ ಹಿಂದಿರುಗುವಾಗ ಕೆಲವು ಮಕ್ಕಳು ಆಟವಾಡುವುದನ್ನು ನೋಡಿ ಅವರೊಂದಿಗೆ ಸೇರಿಕೊಂಡರು. ಇದರಿಂದಾಗಿ ಹುಡುಗ ಕೆಲಸಕ್ಕೆ ಬರಲು ತಡವಾಗಿತ್ತು. ಕೆಲಸಕ್ಕೆ ತಡವಾಗಿ ಬಂದಿದ್ದಕ್ಕೆ ಆರೋಪಿ ರಾಜೇಂದ್ರ ಸೀತಾರಾಮ್ ಪಾಟೀಲ್ 13 ವರ್ಷದ ಬಾಲಕನಿಗೆ ಅಮಾನುಷವಾಗಿ ಥಳಿಸಿದ್ದಾನೆ. ಪಾಟೀಲ್ ಅಪ್ರಾಪ್ತ ಮಗುವನ್ನು ಮನೆಯ ಜಾನುವಾರುಗಳನ್ನು ಸಾಕಲು ಹಾಗೂ ಇತರೆ ಹೊರಗಿನ ಕೆಲಸಗಳಿಗೆ ಬಳಸಿಕೊಂಡಿದ್ದರು. ಬಾಲಕ ಆರೋಪಿಯ ಮನೆಯಲ್ಲಿ ವಾಸವಾಗಿದ್ದು, ಮಾಸಿಕ 1,100 ರೂ. ಬಾಲಕನ ತಾಯಿ ವರ್ಷಗಳ ಹಿಂದೆ ಮೃತಪಟ್ಟಿದ್ದು, ತಂದೆ ಕ್ಷಯರೋಗದಿಂದ ಬಳಲುತ್ತಿದ್ದಾರೆ.

Read More

ಮಣಿಪುರದಲ್ಲಿ ಮತ್ತೆ ಸಂಘರ್ಷ. ಪ್ರತಿಭಟನಾಕಾರರು ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರ ನಿವಾಸಕ್ಕೆ ನುಗ್ಗಲು ಯತ್ನಿಸಿದರು. ಇಬ್ಬರು ಮಕ್ಕಳ ಸಾವಿಗೆ ಮೈಥೇಯ್ ಸಮುದಾಯದವರು ಭಾರೀ ಪ್ರತಿಭಟನೆ ನಡೆಸಿದರು. ಇದರ ಭಾಗವಾಗಿ ಇಂಫಾಲ್ ಪೂರ್ವ ಜಿಲ್ಲೆಯ ಮುಖ್ಯಮಂತ್ರಿಗಳ ಖಾಸಗಿ ನಿವಾಸಕ್ಕೆ ಮೆರವಣಿಗೆ ನಡೆಸಲಾಯಿತು. ಸುಮಾರು 400 ಮೈಥೇಯ್ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಪ್ರತಿಭಟನೆ ವೇಳೆ ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದಾಗ ಘರ್ಷಣೆ ಉಂಟಾಗಿದೆ. ಪ್ರತಿಭಟನಾಕಾರರ ಮೇಲೆ ಪೊಲೀಸರು ಮತ್ತು ಅರೆಸೇನಾ ಪಡೆಗಳ ನಡುವೆ ಘರ್ಷಣೆ ನಡೆಯಿತು. ಪ್ರತಿಭಟನಾಕಾರರನ್ನು ಚದುರಿಸಲು ಅಶ್ರುವಾಯು ಮತ್ತು ಲಾಠಿಚಾರ್ಜ್ ನಡೆಸಲಾಯಿತು. ಸ್ಥಳದಲ್ಲಿ ಗುಂಡಿನ ದಾಳಿ ನಡೆದಿರುವ ಬಗ್ಗೆ ದೃಢೀಕರಿಸದ ವರದಿಗಳಿವೆ. ಪ್ರಸ್ತುತ ಸಂಘರ್ಷವನ್ನು ನಿಭಾಯಿಸಲು ಸಾಧ್ಯವಾಗುತ್ತಿಲ್ಲ. ಮಕ್ಕಳ ಸಾವಿನ ಹಿಂದೆ ಕುಕಿ ಪಂಗಡದ ಕೈವಾಡವಿದ್ದು, ಮಯ್ತೇಯ್ ಮಕ್ಕಳಿಗೆ ನ್ಯಾಯ ಕೊಡಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು. ಘಟನಾ ಸ್ಥಳದಲ್ಲಿ ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗುವುದು. ಮುಖ್ಯಮಂತ್ರಿಗಳು ಸುರಕ್ಷಿತವಾಗಿದ್ದು, ಭದ್ರತಾ ಕ್ರಮಗಳನ್ನು ಬಲಪಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ.

Read More

ಬೆಂಗಳೂರು: ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದಂತೆ ಇಂದು ಕರ್ನಾಟಕ ಬಂದ್. ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಬಂದ್. ಕನ್ನಡ-ರೈತ ಸಂಘಟನೆಗಳ ಒಕ್ಕೂಟ ‘ಕನ್ನಡ ಒಕ್ಕೂಟ’ ನೇತೃತ್ವದಲ್ಲಿ ಬಂದ್ ನಡೆಯುತ್ತಿದೆ. ರೈತ ಸಂಘಟನೆಗಳು, ಕನ್ನಡಪರ ಸಂಘಟನೆಗಳು ಸೇರಿದಂತೆ ಎಲ್ಲ ಪ್ರಮುಖ ಸಂಘಟನೆಗಳು ಬಂದ್‌ಗೆ ಬೆಂಬಲ ವ್ಯಕ್ತಪಡಿಸಿವೆ. ಬಿಜೆಪಿ ಮತ್ತು ಜೆಡಿಎಸ್ ಎರಡೂ ಪಕ್ಷಗಳು ಬಂದ್ ಪರವಾಗಿ ನಿಂತಿವೆ. ಹಿಂಸಾಚಾರದ ಭೀತಿಯ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಗುರುವಾರ ಮಧ್ಯರಾತ್ರಿ 12 ರಿಂದ ಶುಕ್ರವಾರ ಮಧ್ಯರಾತ್ರಿ 12 ರವರೆಗೆ ಕರ್ಫ್ಯೂ ಘೋಷಿಸಲಾಗಿದೆ. ಮೈಸೂರು ಮತ್ತು ಮಂಡ್ಯ ಭಾಗದಲ್ಲಿ ಬಂದ್‌ ತೀವ್ರಗೊಳ್ಳುವ ನಿರೀಕ್ಷೆ ಇದೆ. ಬೆಳಗ್ಗೆ 11 ಗಂಟೆಗೆ ರಾಜ್ಯದ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ವಾಹನಗಳನ್ನು ನಿರ್ಬಂಧಿಸಲಾಗುವುದು ಎಂದು ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಪ್ರಕಟಿಸಿದೆ. ಕೇರಳದಿಂದ ಮೈಸೂರು ಮಾರ್ಗವಾಗಿ ಬರುವ ವಾಹನಗಳಿಗೆ ತೊಂದರೆಯಾಗಬಹುದು. ಆನ್‌ ಲೈನ್ ಆಟೋ-ಟ್ಯಾಕ್ಸಿ ಸೇರಿದಂತೆ ಯಾವುದೇ ಸೇವೆಗಳಿಲ್ಲ. ಬೆಂಗಳೂರಿನಲ್ಲಿ ಹೋಟೆಲ್ ‌ಗಳು ತೆರೆಯುವುದಿಲ್ಲ ಎಂದು ಹೋಟೆಲ್ ಮಾಲೀಕರ ಸಂಘ ತಿಳಿಸಿದೆ. ಚಿತ್ರಮಂದಿರಗಳು…

Read More

ಬೆಂಗಳೂರು: ಮಹಾತ್ಮ ಗಾಂಧಿ ಅವರ 154ನೇ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ಬಿಬಿಎಂಪಿ ನಗರದಲ್ಲಿ ‘1ನೇ ತಾರೀಖು, ಒಂದು ಗಂಟೆ- ಸ್ವಚ್ಛತೆಗಾಗಿ ಶ್ರಮದಾನ’ (ಭಾನುವಾರ) ಕಾರ್ಯಕ್ರಮ ಆಯೋಜಿಸಿದೆ. ಸ್ವಚ್ಛ ಸರ್ವೇಕ್ಷಣ್-2023′ ಅನುಸರಣೆಗಾಗಿ ಬಿಬಿಎಂಪಿಯ ಪ್ರತಿ ವಾರ್ಡ್‌ನಲ್ಲಿ ಕನಿಷ್ಠ ಎರಡು ಸ್ಥಳಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಲಾಗುತ್ತದೆ. ಎನ್‌ ಜಿಒ, ಎಸ್ ‌ಎ ಜಿ, ಎನ್ ಎಸ್ಎಸ್ ಅಥವಾ ಎನ್‌ ಸಿಸಿ ಕೆಡೆಟ್ ‌ಗಳು, ಆರ್‌ ಡಬ್ಲ್ಯುಎ, ಸ್ವಯಂ ಸೇವಕರು, ಸಾರ್ವಜನಿಕರು ಈ ಅಭಿಯಾನದಲ್ಲಿ ಭಾಗವಹಿಸಲಿದ್ದಾರೆ.

Read More