Author: admin

ಶಾಲೆಯಿಂದ ದೂರ ಉಳಿದ ಮಕ್ಕಳನ್ನು ಮರಳಿ ಶಾಲೆಗೆ ಸೆಳೆಯಲು & ವಿದ್ಯಾಭ್ಯಾಸಕ್ಕಾಗಿ ಅವರಿಗೆ ಅನುಕೂಲ ಕಲ್ಪಿಸುವ ಸಲುವಾಗಿ 2006-07ರಲ್ಲಿ ರಾಜ್ಯ ಸರ್ಕಾರವು ಉಚಿತ ಬೈಸಿಕಲ್ ಯೋಜನೆಯನ್ನು ತಂದಿತ್ತು. ಶಾಲೆಗೆ ಕಿಲೋ ಮೀಟರ್ ಗಟ್ಟಲೇ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿಗಳಿಗೆ ಇದು ಆಸರೆಯಾಗಿತ್ತು. ಆದರೆ, ಸದ್ಯ ಈ ಯೋಜನೆ ಸ್ಥಗಿತಗೊಂಡಿದ್ದು ಸರ್ಕಾರ ಈ ಬಗ್ಗೆ ಚಿಂತಿಸುತ್ತಿಲ್ಲ. ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ ಎಂದು ಪಾಲಕರು ಆರೋಪಿಸಿದ್ದಾರೆ. ಈ ನಡುವೆ ಈ ಯೋಜನೆಯನ್ನು ಆರಂಭಿಸುವುದಾಗಿ ಅಧಿವೇಶನದಲ್ಲಿ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

Read More

ಬೆಂಗಳೂರು: ತನ್ನ ಸೆಲ್ ಫೋನ್ ಒಡೆದ ಎಂಬ ಕಾರಣಕ್ಕೆ ಪತಿಯ ಮೇಲೆ ಸೇಡು ತೀರಿಸಿಕೊಳ್ಳಲು ಪತಿಯ ಮೊಬೈಲ್ ಸಂಖ್ಯೆಯಿಂದ ಬೆದರಿಕೆ ಸಂದೇಶ ಕಳುಹಿಸಿದ 32 ವರ್ಷದ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವಿದ್ಯಾರಾಣಿ (36) ಬಂಧಿತ ಮಹಿಳೆಯಾಗಿದ್ದು, ಆಕೆ ಬಿಹಾರದ ಮೂಲದವನ ಪರಿಚಯವಾಗಿ ಸ್ನೇಹ ಮೂಡಿತ್ತು. ಈ ವಿಚಾರವಾಗಿ ಗಂಡ-ಹೆಂಡತಿ ಜಗಳ ನಡೆದಾಗ ಪತಿ ಸಿಟ್ಟಿಗೆದ್ದು ಮೊಬೈಲ್ ಹೊಡೆದು ಹಾಕಿದ್ದ. ಇದಕ್ಕೆ ಪ್ರತಿಕಾರ ತೀರಿಸಿಕೊಳ್ಳಲು ಪತ್ನಿ ತನ್ನ ಸ್ನೇಹಿತನ ಜತೆಗೂಡಿ ಉಪಾಯ ಮಾಡಿದ್ದರು ಎನ್ನಲಾಗಿದೆ.

Read More

ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಆಸ್ಪತ್ರೆಯಲ್ಲಿ. ಕೆ. ಚಂದ್ರಶೇಖರ ರಾವ್ ಅವರು ಬಿದ್ದು ಸೊಂಟಕ್ಕೆ ಪೆಟ್ಟಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೈದರಾಬಾದ್ ‌ನ ಯಶೋದಾ ಆಸ್ಪತ್ರೆಗೆ ದಾಖಲಾಗಿರುವ ಕೆಸಿಆರ್ ಅವರ ಆರೋಗ್ಯ ಸುಧಾರಿಸಿದೆ. ವರದಿಗಳ ಪ್ರಕಾರ, ಕೆಸಿಆರ್ ತಮ್ಮ ಫಾರ್ಮ್‌ಹೌಸ್ ‌ನಲ್ಲಿ ಜಾರಿ ಬಿದ್ದರು. ಗುರುವಾರ ಮಧ್ಯರಾತ್ರಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೆಸಿಆರ್ ಅವರ ಆರೋಗ್ಯ ಸ್ಥಿತಿಯ ಮೇಲೆ ನಿಗಾ ಇರಿಸಲಾಗಿದೆ ಎಂದು ವೈದ್ಯರ ತಂಡ ಮಾಹಿತಿ ನೀಡಿದೆ.

Read More

ಬಿಗ್‌ ಬಾಸ್ ಮನೆಯಲ್ಲಿ ಈ ವಾರ ರಕ್ಕಸ ಹಾಗೂ ಗಂಧರ್ವರು ಎಂಬ ಟಾಸ್ಕ್ ನಡೆಯುತ್ತಿದೆ. ನಿನ್ನೆ ಹಾಗೂ ಮೊನ್ನೆ ಟೆಲಿಕಾಸ್ಟ್ ಆದ ಎಪಿಸೋಡ್‌ ನಲ್ಲಿ ಸಂಗೀತಾ ಅಂಡ್ ಟೀಂ ರಾಕ್ಷಸರಾಗಿ ಕಾಣಿಸಿಕೊಂಡಿದ್ದರು. ವರ್ತೂರ್ ಸಂತೋಷ್ ಅಂಡ್ ಟೀಂ ಗಂಧರ್ವರಾಗಿ ಇದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಯ ಪ್ರಕಾರ ಈ ಟಾಸ್ಕ್ ಆಡುವಾಗ ತೊಂದರೆಯಾಗಿ ಬಿಗ್‌ ಬಾಸ್ ಮನೆಯಿಂದ ಸಂಗೀತಾ ಹಾಗೂ ಡೋನ್ ಪ್ರತಾಪ್ ಆಸ್ಪತ್ರೆಗೆ ದಾಖಲಾಗಿದ್ದಾರಂತೆ. ನಿಜಕ್ಕೂ ಇವರಿಗೆ ಏನಾದರೂ ಆಗಿದೆಯಾ ಎಂಬುದನ್ನು ತಿಳಿಯಲು ಇಂದಿನ ಎಪಿಸೋಡ್‌ ವರೆಗೂ ಕಾದು ನೋಡಬೇಕಿದೆ.

Read More

ಸರ್ಕಾರಿ ಹಾಗೂ ಸರ್ಕಾರಿ ಅನುದಾನಿತ ಶಾಲೆ-ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 19.29 ಲಕ್ಷ ಹೆಣ್ಣು ಮಕ್ಕಳಿಗೆ ‘ಶುಚಿ ಯೋಜನೆ’ ಅಡಿ 2024ರ ಜನವರಿಯಿಂದ ಉಚಿತ ಸ್ಯಾನಿಟರಿ ನ್ಯಾಪ್‌ ಕಿನ್‌ಗಳನ್ನು ವಿತರಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಕೊರೊನಾ ಸೇರಿ ವಿವಿಧ ಕಾರಣಗಳಿಂದ 2019-20ರಿಂದ ಸ್ಯಾನಿಟರಿ ನ್ಯಾಪ್‌ ಕಿನ್ ವಿತರಣೆ ಸ್ಥಗಿತಗೊಂಡಿದ್ದು, ಆ ಯೋಜನೆಗೆ ಇದೀಗ ಮರು ಚಾಲನೆ ನೀಡಲಾಗುತ್ತಿದೆ. ಜನವರಿಯಿಂದ ಈ ಪ್ರಕ್ರಿಯೆ ಆರಂಭವಾಗಲಿದೆ ಎಂದಿದ್ದಾರೆ. 10 ವರ್ಷದಿಂದ 18 ವರ್ಷದ ಒಳಗಿನ ಸುಮಾರು 19 ಲಕ್ಷ ವಿದ್ಯಾರ್ಥಿನಿಯರಿಗೆ ಸ್ಯಾನಿಟರಿ ಪ್ಯಾಡ್ ಗಳನ್ನು  ವಿತರಿಸಲು ಯೋಜಿಸಲಾಗಿದೆ. ಸರ್ಕಾರಿ ಶಾಲೆ ಹಾಗೂ ಹಾಸ್ಟೆಲ್ ಮಕ್ಕಳಿಗೂ ನ್ಯಾಪ್‌ ಕಿನ್‌ ಗಳನ್ನು ವಿತರಿಸಲಾಗುವುದು.  ಪ್ರಾಯೋಗಿಕವಾಗಿ ಮೆನ್‌ ಸ್ಟ್ರುವಲ್ ಮುಟ್ಟಿನ ಕಪ್ ‌ಗಳನ್ನು ದಕ್ಷಿಣ ಕನ್ನಡ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಕೈಗೆತ್ತಿಕೊಳ್ಳಲಾಗಿದೆ.

Read More

ಬೆಂಗಳೂರು: ರಾಕೇಶ್ ಹಾಗೂ ಅವನ ಪ್ರೇಯಸಿ ಸುಮಾರು 5 – 6 ವರ್ಷಗಳಿಂದ ಪ್ರೀತಿಸುತ್ತಿದ್ದರು. ಹುಡುಗಿ ಮನೆಯಲ್ಲಿ ಇವರ ಪ್ರೀತಿ ಒಪ್ಪಿಗೆ ನೀಡದ ಕಾರಣ, ರಾಕೇಶ್  ತನ್ನ ಗೆಳತಿ ತನ್ನ ಪ್ರೀತಿಯನ್ನು ನಿರಾಕರಿಸಿದಳೆಂದು ಬೇಸತ್ತ ಯುವಕನೋರ್ವ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಮೃತಪಟ್ಟ ಘಟನೆ ಬೆಂಗಳೂರಿನ ಕೆಂಗೇರಿಯ ಕೊಡಿಗೆ ಪಾಳ್ಯದಲ್ಲಿ ಘಟನೆ ನಡೆದಿದೆ. ರಾಕೇಶ್ ಎಂಬಾತನೇ ಮೃತನಾಗಿದ್ದು, ಯುವತಿಯ ಮನೆ ಮುಂದೆ ಆತ್ಮಹತ್ಯೆಗೆ ಈತ ಯತ್ನಿಸಿದ್ದಾನೆ. ಕೂಡಲೇ ರಾಕೇಶ್ ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ದೇಹದ ಬಹುತೇಕ ಭಾಗ ಸುಟ್ಟು ಹೋದ ಹಿನ್ನೆಲೆಯಲ್ಲಿ ರಾಕೇಶ್ ಮೃತಪಟ್ಟಿದ್ದಾನೆ. ಈ ಸಂಬಂಧ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ರಾಕೇಶ್ ನ ಕುಟುಂಬದವರು ಇದು ಆತ್ಮಹತ್ಯೆ ಅಲ್ಲ ಕೊಲೆ ಎಂದು ಹೇಳುತ್ತಿದ್ದಾರೆ. ಹುಡುಗಿಯ ಚಿಕ್ಕಪ್ಪ ರಾಕೇಶ್ ಅನ್ನು ಹುಡುಗಿಯ ಮುಖಾಂತರ ಕರೆಸಿಕೊಂಡು ಈ ರೀತಿ ಘಟನೆ ಸಂಭವಿಸಿದೆ ಎಂದು ರಾಕೇಶ್ ಕುಟುಂಬ ಸಂಶಯ ವ್ಯಕ್ತ ಪಡಿಸಿ ಆರೋಪ ಮಾಡಿದ್ದಾರೆ. ಇದು ಆತ್ಮಹತ್ಯೆಯೋ ಕೊಲೆಯೋ ಪೋಲೀಸರ…

Read More

ಕೇರಳ: ಕೇರಳದಲ್ಲಿ ಭಯಾನಕ ಘಟನೆಯೊಂದು ನಡೆದಿದೆ. ತಿರುವನಂತಪುರಂ ಮೆಡಿಕಲ್‌ ಕಾಲೇಜಿನಲ್ಲಿ ಪಿಜಿ ವಿದ್ಯಾರ್ಥಿನಿಯಾಗಿದ್ದ ಶಹಾನಾ ಮಂಗಳವಾರ ಬೆಳಗ್ಗೆ ಸಂಸ್ಥೆಯ ಬಳಿಯ ಬಾಡಿಗೆ ಅಪಾರ್ಟಮೆಂಟ್‌ ನಲ್ಲಿ ಶವವಾಗಿ ಪತ್ತೆಯಾಗಿದ್ದಳು. ವರನ ಮನೆಯವರು ವರದಕ್ಷಿಣೆಯಾಗಿ 150 ಚಿನ್ನದ ನಾಣ್ಯಗಳು, 15 ಎಕರೆ ಭೂಮಿ ಮತ್ತು ಬಿಎಂಡಬ್ಲ್ಯು ಕಾರಿಗೆ ಬೇಡಿಕೆ ಇಟ್ಟಿದ್ದರು. ವರದಕ್ಷಿಣೆ ನೀಡದ ಕಾರಣ ಮದುವೆ ರದ್ದುಪಡಿಸಿದ ಕಾರಣಕ್ಕೆ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಸಹನಾ ಕುಟುಂಬ ಆರೋಪಿಸಿದೆ. ಪೊಲೀಸರು ಪ್ರಿಯಕರನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಡಾ. ಶಿವಮೂರ್ತಿ ಮುರುಘಾ ಶರಣರ ಕೈಗೆ ಮತ್ತೆ ಮುರುಘಾಮಠದ ಅಧಿಕಾರ ದೊರೆತಿದೆ. 2022ರ ಸೆ.1ರಂದು ಪೋಕ್ಸೋ ಕೇಸ್ ನಲ್ಲಿ ಮುರುಘಾ ಶ್ರೀ ಬಂಧನವಾದ ಬಳಿಕ ರಾಜ್ಯ ಸರ್ಕಾರವೇ ಮಠಕ್ಕೆ ಆಡಳಿತಾಧಿಕಾರಿಯನ್ನ ನೇಮಿಸಿತ್ತು. ನವೆಂಬ‌ರ್ 16ರಂದು ಜಾಮೀನಿನ ಮೇಲೆ ಮುರುಘಾಶ್ರೀ ಬಿಡುಗಡೆಯಾದ ಹಿನ್ನಲೆ ಮಠದ ಅಧಿಕಾರ ಹಿಂದಿರುಗಿಸುವಂತೆ ಮುರುಘಾಶ್ರೀ ಕೋರ್ಟ್ ಮೊರೆ ಹೋಗಿದ್ದರು. ಅದರಂತೆ ಚಿತ್ರದುರ್ಗ ಪಿಡಿಜೆಯಿಂದ ಮುರುಘಾಶ್ರೀಗೆ ಅಧಿಕಾರ ಹಸ್ತಾಂತರಿಸಿ ಎಂದು ಹೈಕೋರ್ಟ್ ಆದೇಶಿಸಿದೆ.

Read More

ಜೂನಿಯ‌ರ್ ಮೆಹಮೂದ್ ಎಂದೇ ಖ್ಯಾತರಾಗಿದ್ದ ನಟ ನಯೀಮ್ ಸಯ್ಯದ್(67) ಮುಂಬೈನಲ್ಲಿ ಕೊನೆಯುಸಿರೆಳೆದಿದ್ದಾರೆ. ಹೊಟ್ಟೆಯ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು, ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದು, ತಡರಾತ್ರಿ 2 ಗಂಟೆಗೆ ಮೃತಪಟ್ಟಿದ್ದಾರೆ. ಇಂದು ಮಧ್ಯಾಹ್ನ ಸಾಂತಾಕ್ರೂಜ್ ಸಮಾಧಿ ಮೈದಾನದಲ್ಲಿ ನಯೀಮ್ ಸಯ್ಯದ್ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಅವರ ಕುಟುಂಬ ಸ್ನೇಹಿತರು ತಿಳಿಸಿದ್ದಾರೆ. ತಮ್ಮ ನಟನೆಯಿಂದಲೇ ಇವರು ಲಕ್ಷಾಂತರ ಅಭಿಮಾನಿಗಳನ್ನು ಹೊಂದಿದ್ದರು.

Read More

ರಾಜ್ಯ ಸರಕಾರಕ್ಕೆ ಬರಗಾಲದ ಸಂದರ್ಭದಲ್ಲಿ ರೈತರಿಗೆ ಪರಿಹಾರ ಕೊಡಬೇಕು ಎನ್ನುವುದು ಪ್ರಾಮಾಣಿಕ‌ ಕಳಕಳಿ ಇಲ್ಲ. ಆದರೆ ಅಲ್ಪ ಸಂಖ್ಯಾತರಿಗೆ 10 ಸಾವಿರ ರೂ.‌ ಕೋಟಿ ನೀಡುವುದಾಗಿ ಸಿಎಂ ಘೋಷಣೆ ಮಾಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರಿಗೆ ಪರಿಹಾರ ಕೊಡಲು ಸರಕಾರದ ಖಜಾನೆಯಲ್ಲಿ ಹಣ ಇಲ್ಲದಿದ್ದರೂ ಅಲ್ಪಸಂಖ್ಯಾತರಿಗೆ ಹಣ ಕೊಡುತ್ತೇವೆ ಎಂದು ಸಿಎಂ ಹೇಳುತ್ತಾರೆ. ರಾಜ್ಯ ಸರಕಾರದ ಆದ್ಯತೆ ಸಂಕಷ್ಟದಲ್ಲಿರುವ ರೈತರಲ್ಲ. ಇವರ ಸಮಸ್ಯೆಗಳಿಗೆ ರಾಜ್ಯ ಸರಕಾರ ಸ್ಪಂದನೆ ಮಾಡುತ್ತಿಲ್ಲ. ಅಲ್ಪಸಂಖ್ಯಾತರ ಒಲೈಕೆ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು. ಅಧಿವೇಶನ ಸಂದರ್ಭದಲ್ಲಿಯೂ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ವಿಚಾರಕ್ಕೆ ಉತ್ತರಿಸಿದ ಅವರು, ಕಾಂಗ್ರೆಸ್ ಸರಕಾರಕ್ಕೆ ರೈತರ ಬಗ್ಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಈ ಕುರಿತು ಸದನದಲ್ಲಿ ಈ ಬಗ್ಗೆ ಪ್ರಶ್ನೆ ಮಾಡುತ್ತೇನೆ ಎಂದರು. ಪೃಥ್ವಿ ಸಿಂಗ್ ಮೇಲೆ ಹಲ್ಲೆ ವಿಚಾರಕ್ಕೆ ಉತ್ತರಿಸಿ, ಬಿಜೆಪಿಯ ದಲಿತ ಮುಖಂಡನ ಮೇಲೆ ಮಾರಣಾಂತಿಕವಾಗಿ ಹಲ್ಲೆ ಆಗಿದೆ. ಪೊಲೀಸ್ ಅಧಿಕಾರಿಗಳು…

Read More