Author: admin

ಬಿಜೆಪಿ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಅವರಿಗೆ ಆದ ಅನುಭವ ನನಗೂ ಆಗಿದೆ. ನಾನೂ ಬಿಜೆಪಿಯಲ್ಲಿ ಇದ್ದು ಬಂದವನು ಎಂದು ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು ಗುರುವಾರ ಹೇಳಿದ್ದಾರೆ. ಇಂದು ಹುಬ್ಬಳ್ಳಿಯಲ್ಲಿ ಜಾತಿ ಕಾರಣಕ್ಕೆ ನಾಗ್ಪುರದ ಆರ್ ಎಸ್‌ಎಸ್ ಕಚೇರಿಯಲ್ಲಿರುವ ಹೆಡಗೇವಾರ್ ಸ್ಮಾರಕದೊಳಗೆ ಬಿಡಲಿಲ್ಲ ಎಂದು ಗೂಳಿಹಟ್ಟಿ ಶೇಖರ್ ಆರೋಪಿಸಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ ಆಪ್ ನಾಯಕ, ಜಾತಿ ಕಾರಣಕ್ಕೆ ಪ್ರವೇಶ ನಿರಾಕರಿಸಿದ್ದರೆ ಖಂಡನೀಯ ಎಂದರು. ಆರ್ ಎಸ್‌ಎಸ್ ಗರ್ಭಗುಡಿಗೆ ದಲಿತರಿಗೆ ಪ್ರವೇಶ ಇಲ್ಲ. ಇದಕ್ಕೆ ಗೂಳಿಹಟ್ಟಿ ಆಡಿಯೋ ಸಾಕ್ಷಿ. ಸಿಎಂ ಸಿದ್ದರಾಮಯ್ಯ ಈ ಹಿಂದೆ ನಾನು ಬಿಜೆಪಿಯಲ್ಲಿದ್ದಾಗ ಹಲವು ಸಭೆಗಳಿಗೆ ಆಹ್ವಾನವೇ ನೀಡುತ್ತಿರಲಿಲ್ಲ. ನಿಖರ ಕಾರಣ ಹೇಳದೆ ದೂರುವಿಡುತ್ತಿದ್ದರು. ಆದರೆ ಗೂಳಿಹಟ್ಟಿ ಶೇಖರ್ ಹೇಳಿಕೆ ನಂತರ ಮನವರಿಕೆಯಾಗುತ್ತಿದೆ ಎಂದು ಮುಖ್ಯಮಂತ್ರಿ ಚಂದ್ರು ಹೇಳಿದ್ದಾರೆ. ಇದೇ ವೇಳೆ, ವೈಜ್ಞಾನಿಕವಾಗಿ ಮೀಸಲಾತಿ ಸೌಲಭ್ಯ ದೊರೆಯಲು ದೇಶಾದ್ಯಂತ ಜಾತಿ ಗಣತಿ ನಡೆಸಬೇಕು ಎಂದು ಆಮ್ ಆದ್ಮಿ ಪಕ್ಷದ ಅಧ್ಯಕ್ಷರು ಆಗ್ರಹಿಸಿದರು.

Read More

ಕಿವಿಯ ಮೇಣವನ್ನು ತೆಗೆದು ಹಾಕುವುದರ ವಿರುದ್ಧ ವೈದ್ಯರು ಎಚ್ಚರಿಸುತ್ತಾರೆ, ಶ್ರವಣ ನಷ್ಟಕ್ಕೆ ಕಾರಣವಾಗಬಹುದು ಎಂದು ಹೇಳುತ್ತಾರೆ. ಕಿವಿಯ ಮೇಣವನ್ನು ತೆಗೆದು ಹಾಕಲು ಹತ್ತಿ ಸ್ವ್ಯಾಬ್ ‌ಗಳು, ಇಯರ್ ಪಿಕ್ಸ್, ಪೆನ್ನುಗಳು ಅಥವಾ ಬೆರಳುಗಳನ್ನು ಬಳಸದಂತೆ ವೈದ್ಯಕೀಯ ತಜ್ಞರು ಎಚ್ಚರಿಸಿದ್ದಾರೆ ಏಕೆಂದರೆ ಇದು ಶ್ರವಣ ನಷ್ಟಕ್ಕೆ ಕಾರಣವಾಗಬಹುದು. ಅಸೋಸಿಯೇಷನ್ ಆಫ್ ಓಟೋಲರಿಂಗೋಲಜಿಸ್ಟ್ಸ್ (AOIENT ಶಸ್ತ್ರಚಿಕಿತ್ಸಕರು) ಆಯೋಜಿಸಿದ್ದ ನಾಲ್ಕನೇ ವಾಯ್ಸ್-ಕಾನ್ ಮತ್ತು ಏರ್‌ವೇ ಕಾನ್ಫರೆನ್ಸ್ ‌ನಲ್ಲಿ ತಜ್ಞರು ಹೇಳಿದರು, ನಗರದಲ್ಲಿ ಪ್ರತಿ ತಿಂಗಳು ನೂರಾರು ಪ್ರಕರಣಗಳು ವರದಿಯಾಗುತ್ತವೆ, ಅಲ್ಲಿ ವ್ಯಕ್ತಿಗಳು ಉದ್ದೇಶ ಪೂರ್ವಕವಾಗಿ ತಮ್ಮ ಕಿವಿಗಳಿಗೆ ಹಾನಿಯನ್ನುಂಟು ಮಾಡುತ್ತಾರೆ. ಅಸೋಸಿಯೇಶನ್ ಆಫ್ ಓಟೋಲರಿಂಗೋಲಜಿಸ್ಟ್ಸ್, ಲಕ್ನೋ ಅಧ್ಯಾಯದ ಅಧ್ಯಕ್ಷ ಡಾ. ರಾಕೇಶ್ ಶ್ರೀವಾಸ್ತವ ಮಾತನಾಡಿ, ಮಾನವನ ಕಿವಿಯು ಸ್ವಯಂ-ಶುಚಿಗೊಳಿಸುವ ಕಾರ್ಯ ವಿಧಾನವನ್ನು ಹೊಂದಿದೆ ಮತ್ತು ಯಾವುದೇ ದಿನನಿತ್ಯದ ನಿರ್ವಹಣೆ ಅಗತ್ಯವಿಲ್ಲ. “ಇಯರ್‌ ವಾಕ್ಸ್, ಅಥವಾ ಸೆರುಮೆನ್, ಧೂಳು ಮತ್ತು ಕೊಳಕು ವಿರುದ್ಧ ಕಿವಿಯೋಲೆಗಳು ಮತ್ತು ಒಳಗಿನ ಕಿವಿಗೆ ನೈಸರ್ಗಿಕ ರಕ್ಷಕವಾಗಿ ಕಾರ್ಯ ನಿರ್ವಹಿಸುತ್ತದೆ. ಅಸಮರ್ಪಕ ಶುಚಿಗೊಳಿಸುವಿಕೆಯು…

Read More

ಬೆಂಗಳೂರು ಗ್ರಾಮಾಂತರ: ಕುಡಿದ ಮತ್ತಿನಲ್ಲಿ ತಾಯಿಯ ಮೇಲೆ ಹಲ್ಲೆ ನಡೆಸಿದ್ದ ಮಗನನ್ನ ತಂದೆಯೇ ಚಾಕುವಿನಿಂದ ಚುಚ್ಚಿ ಹತ್ಯೆಗೈದಿರುವ ಘಟನೆ ನಡೆದಿದೆ. ಸುರೇಶ ಕೊಲೆಯಾದ ವ್ಯಕ್ತಿ. ನಾರಾಯಣಪುರದಲ್ಲಿ ತಂದೆ ತಾಯಿ ಹಾಗೂ ಎರಡನೇ ಪತ್ನಿ ಮತ್ತು ಮಕ್ಕಳ ಜೊತೆ ವಾಸವಿದ್ದ ಸುರೇಶ ಪೇಂಟಿಂಗ್ ಕೆಲಸ ಮಾಡುತ್ತಿದ್ದ. ನಿತ್ಯ ಕುಡಿದು ಬಂದು ಮನೆಯಲ್ಲಿ ಗಲಾಟೆ ಮಾಡುವುದು ಈತನ ಹವ್ಯಾಸವಾಗಿತ್ತು. ಅಂದೂ ಕೂಡ ಕುಡಿದು ಬಂದು ತಂದೆ ಹಾಗೂ ತಾಯಿ ಮೇಲೆ ಹಲ್ಲೆ ನಡೆಸಿದ್ದಾನೆ. ಈ ವೇಳೆ ಕೋಪದಲ್ಲಿ ಚಾಕುವಿನಿಂದ ಯಲ್ಲಪ್ಪ ಮಗನ ಕುತ್ತಿಗೆಗೆ ಚುಚ್ಚಿದ್ದಾನೆ. ರಕ್ತದ ಮಡುವಿನಲ್ಲಿ ಮನೆಯಿಂದ ಹೊರಗೆ ಓಡಿಬಂದ ಸುರೇಶ್ ‌ನನ್ನು ಹೆಂಡತಿ ಮತ್ತು ಗ್ರಾಮಸ್ಥರು ಆಸ್ಪತ್ರೆಗೆ ಸೇರಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಆನೇಕಲ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿಕೊಂಡು ಆರೋಪಿ ಯಲ್ಲಪ್ಪನನ್ನು ಬಂಧಿಸಲಾಗಿದೆ.

Read More

ತುಮಕೂರು: ತಮ್ಮದೇ ಕ್ಷೇತ್ರದಲ್ಲಿ ಸಾಧನೆಯ ಶಿಖರವೇರಲು ಆಸಕ್ತಿಯ ಜೊತೆ ಶ್ರದ್ಧೆಯೂ ಬಹಳ ಪ್ರಮುಖ ಪಾತ್ರ ವಹಿಸುತ್ತದೆ ಎಂದು ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಕಲಾ ಕುಂಚ ಪ್ರಶಸ್ತಿ ಪುರಸ್ಕೃತ ಎಂ.ಆರ್.ಬಾಳಿಕಾಯಿ ಸಲಹೆ ನೀಡಿದರು. ಸೋಮವಾರ ನಗರದ ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಲಲಿತಕಲೆಗಳಲ್ಲಿರುವ ಎಲ್ಲಾ ಕಲೆಗಳು ಶ್ರೇಷ್ಟವಾದವುಗಳೇ ಚಿತ್ರಕಲೆ ಹಾಗೂ ಶಿಲ್ಪಕಲೆಗೆ ತನ್ನದೇ ಅದ ಮೌಲ್ಯವಿದ್ದು, ಆಳುವ ಸರ್ಕಾರಗಳು ಈ ಕ್ಷೇತ್ರಗಳ ಬೆಳವಣಿಗೆಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದರು. ಚಿತ್ರಕಲಾ ಶಿಕ್ಷಣದಲ್ಲಿ ಅಭಿವೃದ್ಧಿ ಹೊಂದಲು ಪ್ರತಿದಿನ ರೇಖಾಚಿತ್ರಗಳ ರಚನೆ ಅತ್ಯಾವಶ್ಯಕ. ವಿದ್ಯಾರ್ಥಿಗಳು ಚಿತ್ರಕೃತಿಗಳನ್ನು ರಚಿಸುವುದರ ಜೊತೆಗೆ ಇತರೆ ಕಲಾವಿದರ ಚಿತ್ರಗಳನ್ನು ನೋಡುವ ದೃಷ್ಟಿಕೋನವನ್ನು ಬೆಳಸಿಕೊಳ್ಳಬೇಕು. ಚಿತ್ರ ಹಾಗೂ ಶಿಲ್ಪಕೃತಿಗಳ ಕುರಿತು ಚರ್ಚೆ ನಡೆಸಿ ವಿಷಯ ತಿಳಿದುಕೊಳ್ಳುವತ್ತ ಹೆಜ್ಜೆ ಹಾಕಬೇಕು ಎಂದು ಹೇಳಿದರು. ಹಿರಿಯ ಚಿತ್ರಕಲಾವಿದ ರಮೇಶ್ ಸಾಸನೂರು ಮಾತನಾಡಿ, ಕಲೆಗೆ ಮೂಲವಾಗಿರುವುದು ರೇಖೆ, ಚಿತ್ರಕಲೆಯೂ ಆರಂಭವಾಗುವುದೂ ಕೂಡ ರೇಖೆಗಳಿಂದಲೇ ಆದ್ದರಿಂದ ವಿದ್ಯಾರ್ಥಿಗಳು ಪ್ರತಿದಿನ ರೇಖಾ ಚಿತ್ರಗಳನ್ನು ರಚಿಸುವ ಕಾಯಕವನ್ನು ರೂಢಿ…

Read More

ತುಮಕೂರು ಜಿಲ್ಲೆಯ ಜಿಲ್ಲಾಧಿಕಾರಿ ಶ್ರೀನಿವಾಸ್ ಕೆ. ತಹಶೀಲ್ದಾರ್ ಸಿದ್ದೇಶ್, ಜಂಟಿ ನಿರ್ದೇಶಕ ಕೃಷ್ಣಪ್ಪ ಸೇರಿದಂತೆ ಇತರ ಅಧಿಕಾರಿಗಳು ದೀಪಾವಳಿ ನೆಪದಲ್ಲಿ  ಪರಿಶಿಷ್ಟ ಜಾತಿ, ಪಂಗಡಗಳ ಮಹಿಳಾ ಹಾಸ್ಟೆಲ್ ಗೆ ನಿಯಮ ಬಾಹಿರವಾಗಿ ಅತಿಕ್ರಮ ಪ್ರವೇಶಿಸಿ ವಿದ್ಯಾರ್ಥಿನಿಯರ ಮೈ ಕೈ ಮುಟ್ಟುವುದರ ಮೂಲಕ ಅಸಹ್ಯ ಸಾಹಿತ್ಯದ ಸಿನಿಮಾ ಹಾಡುಗಳು ಅಸಭ್ಯವಾಗಿ ನೃತ್ಯ ಮಾಡಿರುವ  ಬಗ್ಗೆ  ಪೊಲೀಸ್ ಉಪನಿರೀಕ್ಷಕರಿಗೆ ಸಾಮಾಜಿಕ ಹೋರಾಟಗಾರ ಹಂದ್ರಾಳ್ ನಾಗಭೂಷಣ್ ಅವರು ದೂರು ನೀಡಿದ್ದಾರೆ. ಜಿಲ್ಲಾಧಿಕಾರಿ ಶ್ರೀನಿವಾಸ್ ಕೆ., ತಹಶೀಲ್ದಾರ್ ಸಿದ್ದೇಶ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಕೃಷ್ಣಪ್ಪ ಸೇರಿದಂತೆ ಜಿಲ್ಲೆಯ ಇತರ ಅಧಿಕಾರಿಗಳು ದೀಪಾವಳಿ  ಹಬ್ಬದ ನೆಪದಲ್ಲಿ ರಾತ್ರಿ ವೇಳೆ ಸರ್ಕಾರದ ವ್ಯಾಪ್ತಿಗೆ ಒಳಪಡುವ ತುಮಕೂರು ನಗರದ ಗೆದ್ದಲಹಳ್ಳಿ ರಸ್ತೆಯಲ್ಲಿರುವ ಪರಿಶಿಷ್ಟ ಜಾರಿ, ಪರಿಶಿಷ್ಟ ವರ್ಗಗಳ ಅಪ್ರಾಪ್ತ ವಿದ್ಯಾರ್ಥಿನಿಯರ ಹಾಸ್ಟೆಲ್ ಗೆ ತೆರಳಿ ಇಲ್ಲಿನ ವಿದ್ಯಾರ್ಥಿನಿಯರೊಂದಿಗೆ ಮೈಕೈ ಮುಟ್ಟಿ, ಕೈಕೈ ಹಿಡಿದು ಅಶ್ಲೀಲವಾದ ಹಾಡುಗಳಿಗೆ ಡಾನ್ಸ್ ಮಾಡಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.…

Read More

ಚಿಕ್ಕಬಳ್ಳಾಪುರ: ನೈಋತ್ಯ ರೈಲ್ವೆಯು ಚಿಕ್ಕಬಳ್ಳಾಪುರ ತಾಲೂಕಿನಲ್ಲಿರುವ ಪ್ರಸಿದ್ಧ ಪ್ರವಾಸಿ ತಾಣ ನಂದಿಬೆಟ್ಟಕ್ಕೆ ಡಿಸೆಂಬರ್ 11ರಿಂದ ಎಲೆಕ್ಟ್ರಿಕ್ ರೈಲು ಆರಂಭಿಸಲು ನಿರ್ಧರಿಸಿದೆ. ದೇವನಹಳ್ಳಿಯಿಂದ ಚಿಕ್ಕಬಳ್ಳಾಪುರಕ್ಕೆ ವಿಮಾನ ನಿಲ್ದಾಣ ಮಾರ್ಗದಲ್ಲಿ MEMU ರೈಲುಗಳ ಕಾರ್ಯಾಚರಣೆಯನ್ನು ವಿಸ್ತರಿಸಲು ನೈಋತ್ಯ ರೈಲ್ವೆ ತೀರ್ಮಾನಿಸಿದೆ. ಯಲಹಂಕ-ಚಿಕ್ಕಬಳ್ಳಾಪುರ ಮಾರ್ಗದ ವಿದ್ಯುದ್ದೀಕರಣವು ಮಾರ್ಚ್ 2022 ರಲ್ಲಿ ಪೂರ್ಣಗೊಂಡಿದೆ. ಆದರೆ, ವಿವಿಧ ಕಾರಣಗಳಿಂದ ವಿದ್ಯುತ್ ರೈಲುಗಳ ಅಳವಡಿಕೆ ವಿಳಂಬವಾಗಿದೆ. ಪ್ರಸ್ತುತ, ನಂದಿ ನಿಲ್ದಾಣದಲ್ಲಿ ಬೆಂಗಳೂರು-ಕೋಲಾರ-ಕಂಟೋನ್ಮೆಂಟ್ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು-ಕೋಲಾರ-KSR ಬೆಂಗಳೂರು ನಡುವೆ ಡೇಮೊ ರೈಲು ಸಂಚರಿಸುತ್ತಿವೆ. ನೈರುತ್ಯ ರೈಲ್ವೆ ಚಿಕ್ಕಬಳ್ಳಾಪುರಕ್ಕೆ ಸೇವೆಗಳನ್ನು ವಿಸ್ತರಿಸುವುದರಿಂದ ವಿದ್ಯಾರ್ಥಿಗಳು, ರೈತರು ಮತ್ತು 112 ಅಡಿ ಎತ್ತರದ ಆದಿಯೋಗಿ ಪ್ರತಿಮೆಯನ್ನು ನೋಡಲು ಬಯಸುವ ಪ್ರವಾಸಿಗರಿಗೆ ಅನುಕೂಲವಾಗುತ್ತದೆ ಎಂಬುದನ್ನು ಗಮನಿಸಿದೆ. ಆದರೆ ಈ ರೈಲುಗಳು ಬೆಟ್ಟಹಲಸೂರು, ದೊಡ್ಡಜಾಲ, ಚನ್ನಸಂದ್ರದಂತಹ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರುವುದಿಲ್ಲ ಎಂದು ತಿಳಿಸಿದ್ದಾರೆ. ನಂದಿ ನಿಲುಗಡೆ ಕಾಮಗಾರಿ ಎರಡು ತಿಂಗಳೊಳಗೆ ಪೂರ್ಣಗೊಳ್ಳಲಿದೆ. ಅದಾದ ನಂತರ, ನಂದಿ ಬೆಟ್ಟದಲ್ಲಿ ಸೂರ್ಯೋದಯವನ್ನು ವೀಕ್ಷಿಸಲು ಅನುಕೂಲವಾಗುವಂತೆ ಪ್ರವಾಸಿಗರಿಗೆ ಬೆಳಗ್ಗೆಯಿಂದಲೇ…

Read More

ಬೆಳಗಾವಿ: ರೈತರಿಗೆ ಸಹಾಯ ಮಾಡಲು ಕರ್ನಾಟಕ ಸರ್ಕಾರವು ನಂದಿನಿ ಹಾಲಿನ ಬೆಲೆಯನ್ನು ಹೆಚ್ಚಿಸಲು ಚಿಂತನೆ ನಡೆಸುತ್ತಿದೆ. ಕಳೆದ ಆಗಸ್ಟ್ ನಲ್ಲಿ ಪ್ರತಿ ಲೀಟರ್‌ಗೆ 3 ರೂ. ಹೆಚ್ಚಿಸಲಾಗಿತ್ತು. ಅದಾದ ಬಳಿಕ ಇದೀಗ ಮತ್ತೆ ನಂದಿನಿ ಹಾಲಿನ ಬೆಲೆ ಏರಿಕೆ ಮಾಡಲು ಕೆಎಂಎಫ್ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಅವರು ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಎರಡನೇ ಬಾರಿ ನಂದಿನಿ ಹಾಲಿನ ದರ ಏರಿಕೆ ಸಾಧ್ಯತೆ ಕುರಿತು ವಿಧಾನ ಪರಿಷತ್ತಿಗೆ ಮಾಹಿತಿ ನೀಡಿದ್ದಾರೆ. ಪ್ರಶ್ನೆಗಳಿಗೆ ಉತ್ತರಿಸಿದ ಸಚಿವ ವೆಂಕಟೇಶ್, ‘ಗೋವಿನ ಮೇವಿನ ಬೆಲೆ ಏರಿಕೆಯಾಗಿರುವ ಈ ಸಂದಿಗ್ಧ ಪರಿಸ್ಥಿತಿಯಲ್ಲಿ ಹಾಲು ಉತ್ಪಾದಕರಿಗೆ ಸರ್ಕಾರದ ಬೆಂಬಲ ಅಗತ್ಯ ಎಂಬುದು ನಮಗೆ ತಿಳಿದಿದೆ’ ಎಂದರು. ನಂದಿನಿ ಬ್ರಾಂಡ್ ‌ನಲ್ಲಿ ಮಾರಾಟವಾಗುವ ಕರ್ನಾಟಕ ಹಾಲು ಮಹಾಮಂಡಳ ಹಾಲಿನ ಚಿಲ್ಲರೆ ಮಾರಾಟ ಬೆಲೆ ಏರಿಕೆಗೆ ವಿರೋಧ ಪಕ್ಷಗಳು ಸೇರಿದಂತೆ ಎಲ್ಲರಿಂದ ಬೆಂಬಲ ದೊರೆತರೆ ಮಾತ್ರ ಸರ್ಕಾರವು ಮುಂದುವರಿಯುತ್ತದೆ ಎಂದು ಸಚಿವರು ಒತ್ತಿ ಹೇಳಿದರು. ರೈತರಿಗೆ ಸಹಾಯವಾಗುವುದಾದರೆ…

Read More

ಧಾರವಾಡ: ಧಾರವಾಡ ಜಿಲ್ಲೆಯ 63566 ಜನ ರೈತರಿಗೆ 50.298 ಕೋಟಿ ರೂ ಗಳ ಮಧ್ಯಂತರ ವಿಮೆ ಮಂಜೂರಾಗಿದೆ ಎಂದು ಜಿಲ್ಲಾಧಿಕಾರಿ ಗರುದತ್ತ ಹೆಗಡೆ ತಿಳಿಸಿದ್ದಾರೆ. 2023 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆ ಧಾರವಾಡ ಜಿಲ್ಲೆಯಲ್ಲಿ ಅನುಷ್ಟಾನಗೊಳಿಸಲಾಗಿತ್ತು. ಭತ್ತ, ಮೆಕ್ಕೆಜೋಳ, ಹತ್ತಿ, ಈರುಳ್ಳಿ, ಕೆಂಪು ಮೆಣಸಿನಕಾಯಿ ಮತ್ತು ಆಲೂಗಡ್ಡೆ ಬೆಳೆಗಳಡಿ ನೊಂದಾಯಿಸಿಕೊಂಡ ರೈತರಿಗೆ ಮಧ್ಯಂತರ ವಿಮೆ ಜಮಾವಣೆ ಪ್ರಾರಂಭವಾಗಿದೆ. ಅಳ್ನಾವರ ತಾಲ್ಲೂಕಿನ 3052 ಜನ ರೈತರಿಗೆ 1.82 ಕೋಟಿ ರೂ ಗಳ, ಅಣ್ಣಿಗೇರಿ ತಾಲ್ಲೂಕಿನ 6044 ಜನ ರೈತರಿಗೆ 6.45 ಕೋಟಿ ರೂ.ಗಳ, ಧಾರವಾಡ 9978 ಜನ ರೈತರಿಗೆ 6.575 ಕೋಟಿ ರೂ.ಗಳ, ಹುಬ್ಬಳ್ಳಿ ತಾಲ್ಲೂಕಿನ 9472 ಜನ ರೈತರಿಗೆ 9.12 ಕೋಟಿ ರೂ ಗಳ, ಹುಬ್ಬಳ್ಳಿ ನಗರ ತಾಲ್ಲೂಕಿನ 301 ಜನ ರೈತರಿಗೆ 0.365 ಕೋಟಿ ರೂ ಗಳ, ಕಲಘಟಗಿ ತಾಲ್ಲೂಕಿನ 15248 ಜನ ರೈತರಿಗೆ 9.731 ಕೋಟಿ…

Read More

ಬೆಂಗಳೂರು: ಮುಸ್ಲಿಮರಿಗೆ ಅನುದಾನ ನೀಡುವುದರಲ್ಲಿ ತಪ್ಪೇನಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಹೇಳಿದ್ದಾರೆ. ಈ ಮೂಲಕ, ಹುಬ್ಬಳ್ಳಿಯಲ್ಲಿ ನಡೆದ ಮುಸ್ಲಿಂ ಧಾರ್ಮಿಕ ಮುಖಂಡರ ಸಮಾವೇಶದಲ್ಲಿ ತಾವಾಡಿದ್ದ ಮಾತುಗಳನ್ನು ಸಮರ್ಥಿಸಿಕೊಂಡಿದ್ದಾರೆ. ಮುಸ್ಲಿಮರಿಗೆ ದೇಶದ ಸಂಪತ್ತನ್ನು ಹಂಚಬೇಕು ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದರು. ಇದಕ್ಕೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ತಮ್ಮ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ? ಮುಸ್ಲಿಮರು ಸೇರಿದಂತೆ ಎಲ್ಲರನ್ನೂ ರಕ್ಷಿಸುತ್ತೇವೆ ಎಂದು ಹೇಳಿದ್ದೇನೆ. ಇದು ಓಲೈಕೆಯೇ, ತುಷ್ಟೀಕರಣವೇ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

Read More

ಭಾರತ ದೇಶದ ಸಂವಿಧಾನವು ಶೋಷಿತರ, ದಿನ ದಲಿತರ, ತುಳಿತಕ್ಕೆ ಒಳಗಾದವರ ಪರವಾಗಿ ಇರುವಂತಹ ಪವಿತ್ರ ಗ್ರಂಥ. ಅದನ್ನು ನೀಡಿದವರು ಅಂಬೇಡ್ಕ‌ರ್ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಕೆ. ಮೋಹನ್ ಹೇಳಿದರು. ಕೆ.ಆರ್. ಪುರ ಸಮೀಪದ ಹೊರಮಾವು ಜಯಂತಿನಗರದಲ್ಲಿ ಡಾ.ಬಿ.ಆ‌ರ್. ಅಂಬೇಡ್ಕ‌ರ್ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಅಂಬೇಡ್ಕ‌ರ್ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು. ಕಾಂಗ್ರೆಸ್ ಮುಖಂಡ ಅಗರ ಪ್ರಕಾಶ್, ಬ್ಲಾಕ್ ಅಧ್ಯಕ್ಷ ಸಿ. ವೆಂಕಟೇಶ್, ಮುಖಂಡರಾದ ಅಗರ ಪ್ರಕಾಶ್ ಇದ್ದರು.

Read More