Author: admin

ಸಿಎಂ ನೇತೃತ್ವದಲ್ಲಿ ನಿನ್ನೆ ಸಂಜೆ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ, ಸಚಿವರು ಹಾಗೂ ಶಾಸಕರಿಗೆ ಕಿವಿಮಾತು ಹೇಳಿದ್ದಾರೆ ಎನ್ನಲಾಗಿದೆ. ಬಿಜೆಪಿ-ಜೆಡಿಎಸ್ ಜಂಟಿಯಾಗಿ ಅಟ್ಯಾಕ್ ಮಾಡುತ್ತಿವೆ. ಕೇವಲ ಸಚಿವರು ಮಾತ್ರ ಸರ್ಕಾರವನ್ನ ಸಮರ್ಥಿಸಿಕೊಂಡರೆ ಸಾಲದು. ಶಾಸಕರು ಕೂಡ ಸಚಿವರಿಗೆ ಸಾಥ್ ನೀಡಬೇಕು. ಶಾಸಕರು ಕೂಡ ಗಟ್ಟಿಯಾಗಿ ಧ್ವನಿ ಎತ್ತಬೇಕು. ಯಾವುದೇ ಕಾರಣಕ್ಕೂ ಏನೋ ಮಾತನ್ನಾಡಲು ಹೋಗಿ ಇನ್ನೇನೋ ಗೊಂದಲ ಆಗುವಂತೆ ಮಾಡಬೇಡಿ. ಎಲ್ಲರೂ ಒಟ್ಟಾಗಿ ಹೋರಾಟ ಮಾಡಬೇಕು ಎಂದು ಹೇಳಿದ್ದಾರೆ ಎನ್ನಲಾಗಿದೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ಅನುದಾನದ ಪ್ರಸ್ತಾಪವನ್ನು ಸಿಎಂ ಸಿದ್ದರಾಮಯ್ಯ ಮಾಡಿದ್ದಾರೆ ಎಂಬ ಮಾಹಿತಿ ಹೊರ ಬಿದ್ದಿದೆ. ಒಂದೆರಡು ತಿಂಗಳಲ್ಲಿ ಕೈ ಶಾಸಕರಿಗೆ ತಲಾ 25 ಕೋಟಿ ಅನುದಾನವನ್ನು ಬಿಡುಗಡೆಗೊಳಿಸುವುದಾಗಿ ಸಿಎಂ ಭರವಸೆ ನೀಡಿದ್ದಾರೆ. ಡಿಸೆಂಬರ್ ಇಲ್ಲವೇ ಜನವರಿಯಲ್ಲಿ ಅನುದಾನ ನೀಡಲಾಗುವುದು. ಕ್ಷೇತ್ರಗಳ ಕೆಲಸ ಕಾರ್ಯಗಳಿಗೆ ಅನುದಾನ ಸಿಗಲಿದೆ. ಅನುದಾನ ಇಲ್ಲಾ ಅಂತಾ ಯಾರೂ ಅಸಮಾಧಾನ ವ್ಯಕ್ತಪಡಿಸುವುದು ಬೇಡ ಎಂದು ಸಿಎಂ ತಿಳಿಸಿದ್ದಾರೆ ಎನ್ನಲಾಗಿದೆ.

Read More

ದೇಶದಾದ್ಯಂತ ಏಕರೂಪ ಚಾಲನಾ ಪರವಾನಗಿ ವಾಹನಗಳ ನೋಂದಣಿ ಪ್ರಮಾಣಪತ್ರ ಇರಬೇಕು ಎಂಬ ಕೇಂದ್ರ ಸರ್ಕಾರದ ಆದೇಶ ಫೆಬ್ರವರಿಯಲ್ಲಿ ಜಾರಿಗೆ ಬರಲಿದೆ. ಇನ್ನು ಮುಂದೆ ಡಿಎಲ್, ಆರ್‌ಸಿಗಳಲ್ಲಿ ಕ್ಯೂಆರ್ ಕೋಡ್ ಕೂಡ ಇರಲಿದೆ. ಒಂದು ದೇಶದಲ್ಲಿ ಒಂದೇ ಮಾದರಿಯ ಸ್ಮಾರ್ಟ್‌ ಕಾರ್ಡ್ ಇರಬೇಕು ಎಂದು ಕೇಂದ್ರ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಸಚಿವಾಲಯ 2019ರಲ್ಲಿ ಎಲ್ಲ ರಾಜ್ಯಗಳಿಗೆ ಸೂಚಿಸಿತ್ತು. ಛತ್ತೀಸ್ಗಡ, ಹಿಮಾಚಲ ಪ್ರದೇಶ, ತಮಿಳುನಾಡು ಸಹಿತ ಕೆಲವು ರಾಜ್ಯಗಳು ಇದನ್ನು ಜಾರಿಗೆ ತಂದಿದ್ದವು.  

Read More

ಬೆಂಗಳೂರು: ವಿದೇಶದಲ್ಲಿರುವ ಬೆಂಗಳೂರು ಮೂಲದ ವ್ಯಕ್ತಿಗೆ ಸೈಟ್ ಕೊಡಿಸುವ ನೆಪದಲ್ಲಿ ಲಕ್ಷಾಂತರ ರೂಪಾಯಿ ಪಡೆದು ವಂಚನೆ ಎಸಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ನಗರ ಪೊಲೀಸ್ ಆಯುಕ್ತರಿಗೆ ಹಣ ಕಳೆದುಕೊಂಡ ವ್ಯಕ್ತಿಯು ಭಾರತೀಯ ಟ್ವಿಟ್ ಮೂಲಕ ದೂರು ನೀಡಿದ್ದಾರೆ. ರಾಘವೇಂದ್ರ ಪ್ರಸಾದ್ ಎಂಬವರನ್ನು ಜೆಪಿ ನಗರದ ರಿಯಲ್ ಎಸ್ಟೇಟ್ ಕಂಪನಿ ಪರಿಚಯಿಸಿಕೊಂಡಿದೆ. ನಂತರ ಹೂಡಿಕೆ ಮಾಡಿಸಿಕೊಂಡು ಸೈಟ್ ಬುಕ್ ಮಾಡಿದ್ದಾರೆ. ಹಣ ಜಮೆಯಾದ ಬಳಿಕ ಬುಕ್ ಮಾಡಿದ್ದ ಸೈಟ್ ಬೇರೆಯವರಿಗೆ ಮಾರಾಟ ಮಾಡಲಾಗಿದೆ.

Read More

ಹಿಂದೂ ವಿವಾಹ ಕಾಯಿದೆಯಡಿ ಪರಸ್ಪರ ಸಮ್ಮತಿಯ ಮೇರೆಗೆ ದಂಪತಿ ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದರೂ ಕೂಡ ವಿಚಾರಣಾ ನ್ಯಾಯಾಲಯ ಅರ್ಜಿಯನ್ನು ನಿಯಮದಂತೆ 18 ತಿಂಗಳು ಕಾಯಬೇಕಾಗುತ್ತದೆ ಎಂದು ಹೈಕೋರ್ಟ್‌ ಆದೇಶಿಸಿದೆ. ದಂಪತಿ, ವಿಚ್ಚೇದನ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ವಿಚಾರಣಾ ನ್ಯಾಯಾಲಯದ ಆದೇಶ ರದ್ದು ಮಾಡಿರುವ ನ್ಯಾಯಮೂರ್ತಿ ಕೆ.ಎಸ್. ಮುದಗಲ್ ಮತ್ತು ನ್ಯಾಯಮೂರ್ತಿ ಕೆ. ವಿ. ಅರವಿಂದ್ ಅವರಿದ್ದ ವಿಭಾಗೀಯಪೀಠ ದಂಪತಿಗೆ ಬೆಂಗಳೂರು ಮಧ್ಯಸ್ಥಿಕೆ ಕೇಂದ್ರಕ್ಕೆ ತೆರಳುವಂತೆ ನಿರ್ದೇಶನ ನೀಡಿತು.

Read More

ಬೆಂಗಳೂರು: ರಾಷ್ಟ್ರದ ಭವಿಷ್ಯ ಯುವಸಮೂಹದ ಕೈಯಲ್ಲಿದ್ದು, ಎಲ್ಲರೂ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಬೇಕು. ಪ್ರತಿ ಚುನಾವಣೆಯಲ್ಲಿಯೂ ತಪ್ಪದೆ ಮತದಾನ ಮಾಡಬೇಕು’ ಎಂದು ಜಿಲ್ಲಾ ಚುನಾವಣಾಧಿಕಾರಿ ತುಷಾ‌ರ್ ಗಿರಿನಾಥ್ ಹೇಳಿದರು. ವಿಜಯನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಯುವ ಮತದಾರರ ನೋಂದಣಿ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಪ್ರಜಾಪ್ರಭುತ್ವ ಉಳಿಸಲು ನೀವೆಲ್ಲರೂ ನಿಮ್ಮ ಶಕ್ತಿ ಉಪಯೋಗಿಸಬೇಕು. ಬದಲಾವಣೆ ತರುವ ಶಕ್ತಿ ಯುವಸಮೂಹದಲ್ಲಿದೆ ಎಂದರು.

Read More

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ತಡರಾತ್ರಿ ವೇಳೆ ಹೋಟೆಲ್ ಸೇವೆಗೆ ಅವಕಾಶವಿಲ್ಲ. ನಿಮ್ಮ ಹೋಟೆಲ್ ಮುಚ್ಚಿ ಎಂದು ಹೇಳಿದ ಪೊಲೀಸ್ ಸಬ್ ಇನ್ಸ್‌ಪೆಕ್ಟ‌ರ್ (ಪಿಎಸ್‌ಐ) ಮೇಲೆಯೇ ಹೋಟೆಲ್ ಮಾಲೀಕ 50 ಸಾವಿರ ರೂ. ಲಂಚ ಕೇಳಿದ್ದಾಗಿ ದೂರು ಕೊಡುವುದಾಗಿ ಬೆದರಿಕೆ ಹಾಕಿದ್ದಾನೆ. ಇದರಿಂದ ಕೋಪಗೊಂಡ ಪಿಎಸ್ ಐ ದೂರು ದಾಖಲಿಸಿಕೊಂಡು ಹೋಟೆಲ್ ಮಾಲೀಕನನ್ನು ಜೈಲಿಗಟ್ಟಿದ್ದಾರೆ. ಅನ್ನಪೂರ್ಣೇಶ್ವರಿ ನಗರದ ಪಿಎಸ್ ‌ಐ ಪ್ರತಿಮಾ ಅವರೊಂದಿಗೆ ಹೋಟೆಲ್ ಮಾಲೀಕ ಅನುಚಿತವಾಗಿ ನಡೆದು ಕೊಂಡಿದ್ದಾರೆ.

Read More

ಐಪಿಎಲ್ ನನ್ನ ಇಡೀ ವೃತ್ತಿ ಜೀವನದಲ್ಲಿ ಮಹತ್ತರ ಪಾತ್ರ ವಹಿಸಿದ ಟೂರ್ನಿ ಎಂದು ಆರ್‌ ಸಿಬಿ ಆಟಗಾರ ಗ್ಲೆನ್ ಮ್ಯಾಕ್ಸ್‌ ವೆಲ್ ಹೇಳಿದ್ದಾರೆ. ಐಪಿಎಲ್‌ ನಿಂದಾಗಿ ನಾನು ಅನೇಕ ಶ್ರೇಷ್ಠ ಆಟಗಾರರು ಮತ್ತು ತರಬೇತುದಾರರೊಂದಿಗೆ ಆಡಲು ಸಾಧ್ಯವಾಯಿತು. ನಾನು ವಿರಾಟ್ ಕೊಹ್ಲಿ, ಎಬಿ ಡಿವಿಲಿಯರ್ಸ್ ಅವರಂತಹ ಆಟಗಾರರೊಂದಿಗೆ ಆಡುವ ಅವಕಾಶ ಸಿಕ್ಕಿತು. ಆಸ್ಟ್ರೇಲಿಯಾದ ಹೆಚ್ಚು ಆಟಗಾರರು ಐಪಿಎಲ್ ‌ನಲ್ಲಿ ಭಾಗವಾಗಬೇಕೆಂದು ಬಯಸುತ್ತಾರೆ. ಏಕೆಂದರೆ ಅವರು ಸಾಕಷ್ಟು ಅನುಭವವನ್ನು ಪಡೆಯುತ್ತಾರೆ ಎಂದು ಮ್ಯಾಕ್ಸಿ ಹೇಳಿದ್ದಾರೆ. ನಾನು ಕೊನೆಯವರೆಗೂ ಆಡಲು ಬಯಸುವ ಏಕೈಕ ಪಂದ್ಯಾವಳಿ ಐಪಿಎಲ್ ಎಂದು ಆರ್‌ ಸಿಬಿ ಆಟಗಾರ ಗ್ಲೆನ್ ಮ್ಯಾಕ್ಸ್‌ ವೆಲ್ ಹೇಳಿದ್ದಾರೆ. ಯಾವಾಗ ನನಗೆ ನಡೆಯಲು ಆಗುವುದಿಲ್ಲ ಅನಿಸುತ್ತದೆಯೊ ಅಲ್ಲಿಯವರೆಗೆ ನಾನು ಐಪಿಎಲ್ ಆಡುತ್ತಲೇ ಇರುತ್ತೇನೆ. ಐಪಿಎಲ್ ನನ್ನ ಇಡೀ ವೃತ್ತಿ ಜೀವನದಲ್ಲಿ ಮಹತ್ತರ ಪಾತ್ರ ವಹಿಸಿದ ಟೂರ್ನಿಯಾಗಿದೆ.

Read More

ಬೆಂಗಳೂರು: ‘ಲಿಂಗತ್ವ ಹಾಗೂ ಲೈಂಗಿಕ ಅಲ್ಪಸಂಖ್ಯಾತರ ಕಲ್ಯಾಣ ಮಂಡಳಿ’ ರಚಿಸುವಂತೆ ಕರ್ನಾಟಕ ರಾಜ್ಯ ಲಿಂಗತ್ವ ಹಾಗೂ ಲೈಂಗಿಕ ಅಲ್ಪಸಂಖ್ಯಾತರ ಒಕ್ಕೂಟ ಆಗ್ರಹಿಸಿದೆ. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಸಂಚಾಲಕರಾದ ಪ್ರಕಾಶರಾಜ್, ಸಮೀರ್ ಬಾಗಲಕೋಟೆ, ಅಬೀದಾ ಬೇಗಂ, ‘ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬರುವುದಕ್ಕಿಂತ ಮುಂಚೆ ಲಿಂಗತ್ವ ಹಾಗೂ ಲೈಂಗಿಕ ಅಲ್ಪಸಂಖ್ಯಾತರ ಕಲ್ಯಾಣ ಮಂಡಳಿ’ ಸ್ಥಾಪಿಸುವ ಭರವಸೆ ನೀಡಿತ್ತು. ಆದರೆ ಈ ಬಗ್ಗೆ ಮಾತನಾಡುತ್ತಿಲ್ಲ ಎಂದರು.

Read More

ಕೋಲ್ಕತ್ತಾದಲ್ಲಿ ಯುವತಿಯೊಬ್ಬಳ ಮೇಲೆ ದೌರ್ಜನ್ಯ ನಡೆದಿದೆ. ಟಾಲಿವುಡ್ ಚಿತ್ರರಂಗದಲ್ಲಿ ಅವಕಾಶ ಕೊಡಿಸುವುದಾಗಿ ಯುವತಿಯನ್ನು ಆಕೆಯ ಸ್ನೇಹಿತರು ಕಾರಿನಲ್ಲಿ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಯುವತಿ ಕೆಲವು ವರ್ಷಗಳ ಹಿಂದೆ ಕೋಲ್ಕತ್ತಾದ ಬೆಹಾಲಾ ಮೂಲದ ಯುವಕನೊಬ್ಬನನ್ನು ಭೇಟಿಯಾಗಿದ್ದಳು. ಆತ ತಾನು ಬಂಗಾಳಿ ಚಲನಚಿತ್ರೋದ್ಯಮದ ಪ್ರಮುಖ ವ್ಯಕ್ತಿ ಎಂದು ಪರಿಚಯಿಸಿಕೊಂಡಿದ್ದ. ಘಟನೆ ಕುರಿತು ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

Read More

ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನದ ಎರಡನೇ ದಿನದ ಕಲಾಪ ಗಲಾಟೆ, ಗದ್ದಲಕ್ಕೆ ಸಾಕ್ಷಿಯಾಗಿದೆ. ಬ್ರ್ಯಾಂಡ್ ಬೆಂಗಳೂರು ಗಲಾಟೆಯೊಂದಿಗೆ ಆರಂಭವಾದ ಕಲಾಪ ಕದನ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧದ ಕೇಸ್ವರೆಗೂ ತಲುಪಿತ್ತು. ಹಲವು ಬಾರಿ ಸದನದ ಬಾವಿಗಿಳಿದ ವಿಪಕ್ಷ ನಾಯಕರು ಸರ್ಕಾರದ ವಿರುದ್ಧ ಹೋರಾಟ ಮಾಡಿದರು. ವಿಧಾನಸಭಾ ಅಧಿವೇಶನದ ಎರಡನೇ ದಿನ ಬ್ರ್ಯಾಂಡ್ ಬೆಂಗಳೂರು ಬಗ್ಗೆ ಬಿಸಿಬಿಸಿ ಚರ್ಚೆಯಾಗಿದೆ. ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆ ಬಗ್ಗೆ ಶಾಂತಿನಗರ ಶಾಸಕ ಹ್ಯಾರಿಸ್ ಪ್ರಸ್ತಾಪ ಮಾಡಿದ್ರು. ಈ ವೇಳೆ ಮಧ್ಯಪ್ರವೇಶಿಸಿದ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್, ಬ್ರ್ಯಾಂಡ್ ಸಿಟಿ ಈಗ ಬಾಂಬ್ ಸಿಟಿ ಆಗಿದೆ ಎಂದು ಕಿಚಾಯಿಸಿದ್ದಾರೆ. ಈ ಹೇಳಿಕೆಯಿಂದ ಸದನದಲ್ಲಿ ಆಡಳಿತ, ವಿಪಕ್ಷ ಸದಸ್ಯರ ನಡುವೆ ವಾಗ್ವಾದ ನಡೆಯಿತು. ಇತ್ತ ಪ್ರಶ್ನೋತ್ತರ ವೇಳೆಯಲ್ಲಿ ಬ್ರಾಂಡ್ ಬೆಂಗಳೂರು ಕುರಿತ ಪ್ರಶ್ನೆ ಸಂದರ್ಭ ಆಡಳಿತ ಮತ್ತು ವಿಪಕ್ಷ ಸದಸ್ಯರ ನಡುವೆ ತೀವ್ರ ಮಾತಿನ ಚಕಮಕಿ ನಡೆಯಿತು. ಡಿಸಿಎಂ ಡಿ.ಕೆ. ಶಿವಕುಮಾರ್ ಪರವಾಗಿ ಸಚಿವ…

Read More